Headlines

ನಮಗೇ ಕುಡಿಯೋಕೆ ನೀರಿಲ್ಲ: ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ – Kannada News | Mandya People Warns to Karnataka Government For don’t release Cauvery water to Tamil Nadu

ಮಂಡ್ಯ, (ಜುಲೈ 28): ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕಾವೇರಿ ನದಿಯ ಕೆಆರ್‌ಎಸ್ ಜಲಾಶಯದಲ್ಲಿ ನೀರಿಲ್ಲದೇ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳ ಜನರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಮಳೆಯಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಇಂದು (ಜುಲೈ 28) ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್​ ನೀರು ಹರಿಸುವಂತೆ ಆದೇಶಿಸಿದ್ದು, ಇದು ಕನ್ನಡಗರ ಆಕ್ರೋಕ್ಕೆ ಕಾರಣವಾಗಿದೆ. ಅದರಲ್ಲೂ ಮುಖ್ಯವಾಗಿ ಮಂಡ್ಯ ಜನತೆ ಆಕ್ರೋಶದ ಕಟ್ಟೆ ಹೊಡೆದಿದ್ದು, ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿಗೆ ಹರಿಯುವ ನೀರಿನ ಪೈಪ್ ಹೊಡೆದು ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *