
ತಮಿಳುನಾಡು ಸಿಎಂ ವಿಜಯ್ (Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕಳೆದ ವಾರ ಕರ್ನಾಟಕ ಸೇರಿ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಒಂದು ವಾರದ ಬಳಿಕವೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ‘ಜನ ನಾಯಗನ್’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಆದರೆ ಇದರ ನಡುವೆ ಕಾವೇರಿ ವಿವಾದ ಉಲ್ಬಣಗೊಂಡಿದ್ದು, ಕನ್ನಡಪರ ಸಂಘಟನೆಗಳು ‘ಜನ ನಾಯಗನ್’ ಸಿನಿಮಾ ಪ್ರದರ್ಶಿಸುತ್ತಿದ್ದ ಚಿತ್ರಮಂದಿರಗಳಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಇಂದು (ಜುಲೈ 31) ಊರ್ವಶಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ‘ಜನ ನಾಯಗನ್’ ಸಿನಿಮಾ ಪ್ರದರ್ಶನ ಸ್ಥಗಿತಗೊಳಿಸಲಾಗಿದ್ದು, ವಿಜಯ್ ಅವರ ಕಟೌಟ್, ಬ್ಯಾನರ್ಗಳನ್ನು ಸಹ ತೆಗೆದು ಹಾಕಲಾಗಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ