ಅಯೋಧ್ಯೆ, ಜುಲೈ 31: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳವು (Ram Temple Donation Theft) ಆರೋಪವನ್ನು ಖಂಡಿಸಿ ವಿರೋಧ ಪಕ್ಷಗಳ ನಾಯಕರು ಇಂದು ಸಂಸತ್ತಿನ ಹೊರಗೆ ಸಾಂಕೇತಿಕ ಪ್ರತಿಭಟನೆ ನಡೆಸಿದ್ದರಿಂದ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ತೀವ್ರ ರಾಜಕೀಯ ಹೈಡ್ರಾಮಾ ಮುಂದುವರಿಯಿತು. ಸಂಸತ್ತಿನ ಒಳಗೆ ಈ ವಿಷಯದ ಕುರಿತು ಚರ್ಚೆಗೆ ಒತ್ತಾಯಿಸಿ ಪುರ್ನಿಯಾ ಸಂಸದ ಪಪ್ಪು ಯಾದವ್ ಕೇಸರಿ ಬಟ್ಟೆ ಧರಿಸಿ, ಸನ್ಯಾಸಿಯ ವೇಷದಲ್ಲಿ ಕಾಣಿಕೆ ಹುಂಡಿಯನ್ನು ಹಿಡಿದು ಪ್ರತಿಭಟನೆಯ ನೇತೃತ್ವ ವಹಿಸಿದರು. ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಈ ಹುಂಡಿಗೆ ಸಾಂಕೇತಿಕವಾಗಿ ಕಾಣಿಕೆ ಹಾಕುವ ಮೂಲಕ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಈ ಸಾಂಕೇತಿಕ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದೆ.
ಜುಲೈ 20ರಂದು ಜಂತರ್ ಮಂತರ್ನಲ್ಲಿ ನಡೆದ ಸಂಸತ್ ಚಲೋ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿರೋಧ ಪಕ್ಷಗಳು ತಮ್ಮ ಪ್ರತಿಭಟನಾ ಅಭಿಯಾನವನ್ನು ಮುಂದುವರಿಸಿರುವ ಬೆನ್ನಲ್ಲೇ ಈ ಸಾಂಕೇತಿಕ ಪ್ರತಿಭಟನೆ ನಡೆದಿದೆ. ಸತತ ಎರಡನೇ ದಿನವೂ ವಿರೋಧ ಪಕ್ಷದ ಸಂಸದರು ಸಂಸತ್ತಿನ ಆವರಣದೊಳಗೆ ಅಮಿತ್ ಶಾ ಅವರ ಗೈರುಹಾಜರಿಯನ್ನು ಪ್ರಶ್ನಿಸುವ ಬ್ಯಾನರ್ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ