ಬೆಂಗಳೂರು, ಆಗಸ್ಟ್ 04: ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಐವರು ಮಹಿಳಾ ಶಾಸಕರ ಪೈಕಿ 2-3 ಜನರಿಗಾದರೂ ಸಚಿವ ಸ್ಥಾನ ಸಿಗಬೇಕಿತ್ತು. ತಮ್ನ ಪ್ರಕಾರ ಕನಿಷ್ಠ ಒಬ್ಬರನ್ನಾದರೂ ಮಂತ್ರಿ ಮಾಡಬೇಕಿತ್ತು ಎಂದವರು ತಿಳಿಸಿದ್ದಾರೆ. ಇದೇ ವೇಳೆ, ಯಾವಾಗಲೂ ಕರ್ನಾಟಕ, ಕಾವೇರಿ ಮತ್ತು ರೈತರ ಪರವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಕಾವೇರಿ ನೀರು ವಿವಾದದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಹೋರಾಟದ ಭಾಗವಾಗಿ ಎಂ.ಬಿ. ಪಾಟೀಲ್ ಅವರೊಂದಿಗೆ ಇದ್ದುದನ್ನು ಕೂಡ ನೆನಪಿಸಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.