Headlines

ರಸ್ತೆಗಿಳಿದ ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ! – Kannada News | Chikkaballapur District Witnesses Bundh as S.N. Subbareddy Supporters Protest Ministerial Snub

ಚಿಕ್ಕಬಳ್ಳಾಪುರ, ಆಗಸ್ಟ್ 05: ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ .ಮೂರು ಬಾರಿ ಶಾಸಕರಾಗಿದ್ದರೂ ಸಹ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಪ್ರತಿಭಟನಾಕಾರರು ಕೆಎಸ್ಆರ್‌ಟಿಸಿ ಬಸ್‌ಗಳನ್ನು ತಡೆದು ರಸ್ತೆ ಮಧ್ಯೆ ನಿಲ್ಲಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನ್ಯಾಯ ಸಿಗುವವರೆಗೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *