Headlines

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ – Kannada News | Heavy Rain Warning Karnataka: IMD Predicts Intense Monsoon for Aug 6; Coastal Areas on High Alert

ಬೆಂಗಳೂರು, ಆ.6: ನೈಋತ್ಯ ಮಾನ್ಸೂನ್ (ಮಳೆಗಾಲ) ರಾಜ್ಯಾದ್ಯಂತ ಚುರುಕಾಗಿದ್ದು, ಇಂದು (ಆಗಸ್ಟ್ 6) ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ರಭಸ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು (Heavy Rain Alert), ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಕಾವೇರಿ ಹಾಗೂ ತುಂಗಾ ನದಿ ಕೊಳ್ಳದ ಪ್ರದೇಶಗಳಲ್ಲಿ ಜಲಾನಯನ ಭಾಗದಲ್ಲಿ ಮಳೆ ಹೆಚ್ಚಾಗಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ

ಬೆಂಗಳೂರು ನಗರ/ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ (ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಕಲಬುರಗಿ) ಗಾಳಿ ಸಹಿತ ಸಾಧಾರಣ ಮಳೆಯಾಗಲಿದ್ದು, ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *