ಬೆಂಗಳೂರು, ಆಗಸ್ಟ್ 06: ಇಂದಿನಿಂದ ಆಗಸ್ಟ್ 17ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ನಡೆಯಲಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ಬಾರಿ ಗಂಗರ ವೈಭವ ಸಾರುವ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಾರ್ಕ್ರಮದಲ್ಲಿ ಸಿಎಂಗೆ ಜೆಡಿಎಸ್ ಎಂಎಲ್ಸಿ ಶರವಣ ಸಾಥ್ ನೀಡಿದ್ದಾರೆ. ಫಲಪುಷ್ಪ ಉದ್ಘಾಟನೆ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಾಡಿನ ಎಲ್ಲ ಜನತೆಗೆ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಫಲಪುಷ್ಪ ಪ್ರದರ್ಶನ ನೋಡಬೇಕು. ವಿಶೇಷವಾಗಿ ಹೆಣ್ಣುಮಕ್ಕಳು, ಮಕ್ಕಳು ಎಲ್ಲರೂ ಬರಬೇಕು. ಈ ಅವಕಾಶ ಕಳೆದುಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.