ಕೊಪ್ಪಳ, ಆಗಸ್ಟ್ 09: ಜಿಲ್ಲೆಯ ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಸಾರಿಗೆ ಬಸ್ನ ಟೈರ್ ಏಕಾಏಕಿ ಸ್ಫೋಟವಾಗಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ ನುಗ್ಗಿದ ಘಟನೆ ನಡೆದಿದೆ. ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಪ್ಪಳದಿಂದ ಕಕೇಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಚಾಲಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.