Headlines

ಮಾಣಿಕ ಪ್ರಭು ದೇವಸ್ಥಾನಕ್ಕೆ ಮೂಗು ಮುಚ್ಚಿಕೊಂಡು ಬರ್ತಿದ್ದ ಭಕ್ತರು: ಫ್ಯಾಕ್ಟರಿ ಮುಚ್ಚಲು ಈಶ್ವರ ಖಂಡ್ರೆ ಸೂಚನೆ – Kannada News | TV9 Impact: Minister Eshwar Khandre Orders To Close Chemical Factory Polluting Water In Bidar

ಬೆಂಗಳೂರು, (ಆಗಸ್ಟ್ 10): ಬೀದರ್ (Bidar) ಜಿಲ್ಲೆಯ ಹುಮನಾಬಾದ್ (Humnabad) ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು (Factory) ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಸಿದ್ಧ ಮಾಣಿಕ ಪ್ರಭು ದೇವಸ್ಥಾನಕ್ಕೆ ಬರೋ ಭಕ್ತರು ಮೂಗು ಮುಚ್ಚಿಕೊಂಡು ‌ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನೆಲ್ಲಾ ಅರಿತ ಸಚಿವ ಈಶ್ವರ್ ಖಂಡ್ರೆ, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮೆ.6H ಇಂಡಸ್ಟ್ರೀಸ್, ಮೆ.ಸತ್ಯದೀಪ್ತ ಕೆ. ಇಂಡಸ್ಟ್ರೀ ಮತ್ತು ಮೆ.ಹಿಮಾಲಯ ಕೈಗಾರಿಕೆಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಚ್ಚುವ ಆದೇಶ (ಕ್ಲೋಷರ್ ಆರ್ಡರ್) ಹೊರಡಿಸಿ, ಅನುಸರಣಾ ವರದಿಯನ್ನು 24 ಗಂಟೆಯೊಳಗಾಗಿ ಈ ಕಚೇರಿಗೆ ಸಲ್ಲಿಸಲು ಸೂಚಿಸಿದ್ದಾರೆ. ಹುಮ್ನಾಬಾದ್ ನ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಿಂದ ಗುರುಗಂಗಾ ಹಳ್ಳಕ್ಕೆ ಕೆಮಿಕಲ್ ಬಿಡಲಾಗುತ್ತಿತ್ತು. ಪ್ರತಿದಿನವೂ ಸಾವಿರಾರು ಲೀಟರ್ ಕೆಮಿಕಲ್ ಕಾರ್ಖಾನೆ ತ್ಯಾಜ್ಯ ಹಳ್ಳಕ್ಕೆ ಸೇರುತ್ತಿತ್ತು. ಇದರಿಂದ ಜಲಚರಗಳು ಪ್ರಾಣಿಗಳು ಮಾರಣಹೋಮಕ್ಕೆ ಕಾರಣವಾಗಿತ್ತು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *