ಸಂಗಾರೆಡ್ಡಿ, ಆ.11: ನೆರೆಯ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು 9 ಜನರು ದುರ್ಮರಣಕ್ಕೀಡಾಗಿದ್ದಾರೆ. ಮೊಗದಂಪಲ್ಲಿ ಮಂಡಲದ ಸತ್ವಾರ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇ-ಆಟೋಗೆ (e-Auto) ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕ ಮೂಲದ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೊಗದಂಪಲ್ಲಿ ಮಂಡಲದ ಸತ್ವಾರ್ ಬಳಿ ಈ ಭೀಕರ ದುರಂತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಬೀದರ್ ಮೂಲದ ರಾಜಗಿರಿ ಗ್ರಾಮದ ಕೂಲಿ ಕಾರ್ಮಿಕರು ಎಂದು ಪೊಲೀಸರು ಗುರುತಿಸಿದ್ದಾರೆ. ಅಪಘಾತ ಸಂಭವಿಸಿದ ಸಮಯದಲ್ಲಿ ಇ-ಆಟೋದಲ್ಲಿ ಒಟ್ಟು 14 ಜನ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
Published On – 9:31 pm, Tue, 11 August 26