ನವದೆಹಲಿ, ಆಗಸ್ಟ್ 12: ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ದೇಶಕ್ಕೆ ಯುವಜನತೆಯ ಅಗತ್ಯವಿದೆ ಎಂದು ಇತ್ತೀಚೆಗಷ್ಟೇ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು (ಆಗಸ್ಟ್ 12) ಅಂತಾರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆ ಯಂಗ್ ಜನರೇಷನ್ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ನಮ್ಮ ಯುವ ಸ್ನೇಹಿತರು ದೇಶದ ಭವಿಷ್ಯ ಮಾತ್ರವಲ್ಲ, ವರ್ತಮಾನದ ಅತ್ಯಂತ ದೊಡ್ಡ ಶಕ್ತಿಯೂ ಆಗಿದ್ದಾರೆ. ತಮ್ಮ ಸಂವೇದನಾಶೀಲತೆ, ಸೇವಾ ಮನೋಭಾವ ಮತ್ತು ಸಾಮರ್ಥ್ಯದ ಮೂಲಕ ಅವರು ವಿಶ್ವದಾದ್ಯಂತ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಮೋದಿ ಪೋಸ್ಟ್ನಲ್ಲಿ ಏನಿದೆ?
हमारे युवा साथी देश का भविष्य ही नहीं, वर्तमान की सबसे बड़ी शक्ति भी हैं। उन्होंने अपनी संवेदनशीलता, सेवाभाव और सामर्थ्य से दुनियाभर में अलग पहचान बनाई है।
चक्षुषा मनसा वाचा कर्मणा च चतुर्विधम्।
प्रसादयति यो लोकं तं लोकोऽनुप्रसीदति।। pic.twitter.com/KdortN0NpC
— Narendra Modi (@narendramodi) August 12, 2026
ಚಕ್ಷುಷಾ ಮನಸಾ ವಾಚಾ ಕರ್ಮಣಾ ಚ ಚತುರ್ವಿಧಮ್, ಪ್ರಸಾದಯತಿ ಯೋ ಲೋಕಂ ತಂ ಲೋಕೋಽನುಪ್ರಸೀದತಿ ಎಂಬ ಸಾಲುಗಳಿರುವ ಶ್ಲೋಕವನ್ನು ಮೋದಿ ಹಂಚಿಕೊಂಡಿದ್ದಾರೆ. ದೃಷ್ಟಿ, ಮನಸ್ಸು, ಮಾತು ಮತ್ತು ಕಾರ್ಯ ಈ ನಾಲ್ಕು ಮಾರ್ಗಗಳ ಮೂಲಕ ಜನರ ಮನ ಗೆಲ್ಲುವ ವ್ಯಕ್ತಿಗೆ ಪ್ರತಿಯಾಗಿ ಸಮಾಜವು ವಿಶ್ವಾಸ, ಗೌರವ ಮತ್ತು ಸದ್ಭಾವನೆಯನ್ನು ನೀಡುತ್ತದೆ ಎಂಬುದು ಇದರ ಅರ್ಥವಾಗಿದೆ.
ಇದನ್ನೂ ಓದಿ: ನರೇಂದ್ರ, ನರೇಂದ್ರ, ನರೇಂದ್ರ..; ಈ ಹೆಸರು ನನಗೆ ಸ್ವಲ್ಪನೂ ಇಷ್ಟವಿಲ್ಲ ಎಂದ ಪಾಕ್ ಬಾಕ್ಸರ್
ಗುರಿ ಸಾಧಿಸಲು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸ ಅತ್ಯಗತ್ಯ. ಯುವಕರು ತಾವು ಮಾಡುವ ಸಣ್ಣ ಕೆಲಸಗಳು ಸಹ ನಾಳೆ ದೇಶದ ಭವಿಷ್ಯವನ್ನು ನಿರ್ಣಯಿಸುತ್ತವೆ. ದೇಶದ ಯುವಶಕ್ತಿ ಇಂದು ಕೇವಲ ಕನಸು ಕಾಣುತ್ತಿಲ್ಲ, ಬದಲಿಗೆ ದೇಶವನ್ನು ಆರ್ಥಿಕ ಹಾಗೂ ತಾಂತ್ರಿಕವಾಗಿ ಸ್ವಾವಲಂಬನೆಯತ್ತ ಕೊಂಡೊಯ್ಯುವ ಮೂಲಕ ಸ್ವತಃ ನಿರ್ಮಿಸುತ್ತಿದ್ದಾರೆ. ಹೊಸ ತಂತ್ರಜ್ಞಾನ, ನಾವೀನ್ಯತೆ (Innovation) ಮತ್ತು ದೇಶದ ಆರ್ಥಿಕ ಸ್ವಾವಲಂಬನೆಯಲ್ಲಿ ಯುವಕರ ಪಾತ್ರ ನಿರ್ಣಾಯಕ ಎಂದು ಕೂಡ ಈ ಹಿಂದೆ ಪ್ರಧಾನಿ ಮೋದಿ ಹೇಳಿದ್ದರು ಎಂಬುದಿಲ್ಲಿ ಗಮನಾರ್ಹ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 10:15 am, Wed, 12 August 26