Headlines

‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು ಗರಂ

‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು ಗರಂ

ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ತಿಕ್ಕಾಟ ನಡೆಯುತ್ತಿದೆ. ಸದ್ಯಕ್ಕೆ ಮಳೆ ಆಗಿರುವುದರಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಆದರೆ ಪ್ರತಿ ಬಾರಿ ನೀರಿನ ಸಲುವಾಗಿ ರೈತರು ಪ್ರತಿಭಟನೆ ಮಾಡಿದಾಗ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಸೂಕ್ತವಾಗಿ ಬೆಂಬಲ ನೀಡುವುದಿಲ್ಲ ಎಂಬ ಮಾತಿದೆ. ಈ ಬಗ್ಗೆ ಸಾರಾ ಗೋವಿಂದು (Sa Ra Govindu) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಬೆಂಬಲ ನೀಡುತ್ತೇವೆ ಎಂದು ವಾಣಿಜ್ಯ ಮಂಡಳಿ ಈಗಾಗಲೇ ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ. ಅದು ಎಲ್ಲರ ಧ್ವನಿ. ನೈತಿಕತೆ ಇದ್ದರೆ ಎಲ್ಲ ಸ್ಟಾರ್ ನಟರು ಬರಬೇಕು. ಅವರಿಗೆ ಆಹ್ವಾನ ನೀಡೋಕೆ ಆಗಲ್ಲ. ಒಂದು ವೇಳೆ ಯಾರಾದರೂ ಹೋರಾಟಕ್ಕೆ ಬಾರದೇ ಇದ್ದರೆ ಅಂಥವರ ಸಿನಿಮಾ ನಿಷೇಧ ಮಾಡಿ. ಏನಾಗುತ್ತೆ ನೋಡೋಣ. ಆಗ ಅವರಿಗೆ ಬುದ್ಧಿ ಬರುತ್ತದೆ’ ಎಂದು ಸಾರಾ ಗೋವಿಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *