ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಾಟ ಅಂತ್ಯವಾಗಿದೆ. ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ಮೊದಲ ದಿನ ಕೇವಲ2 ವಿಕೆಟ್ಗಳನ್ನು ಕಳೆದುಕೊಂಡಿದ್ದ ಟೀಂ ಇಂಡಿಯಾ ಎರಡನೇ ದಿನದಾಟದ ಕೆಲವೇ ಗಂಟೆಗಳಲ್ಲಿ 7 ವಿಕೆಟ್ಗಳನ್ನು ಕಳೆದುಕೊಂಡಿತು. ಹೀಗಾಗಿ ಎರಡನೇ ದಿನದಾಟದ ಅಂತ್ಯದ ವೇಳೆಗೆ ಭಾರತ 9 ವಿಕೆಟ್ ಕಳೆದುಕೊಂಡು 460 ರನ್ ಕಲೆಹಾಕಿದೆ. ತಂಡದ ಪರ ಕುಲ್ದೀಪ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ ಕ್ರೀಸ್ನಲ್ಲಿದ್ದಾರೆ. ಮಳೆಯಿಂದಾಗಿ ಎರಡನೇ ದಿನದ ಆಟ ಸಮಯಕ್ಕೆ ಸರಿಯಾಗಿ ಆರಂಭವಾಗಲಿಲ್ಲ. ಎರಡನೇ ದಿನದ ಮೊದಲ ಸೆಷನ್ ಮಳೆಯಿಂದ ರದ್ದಾಯಿತು. ಹೀಗಾಗಿ ಎರಡನೇ ದಿನದ ಆಟವನ್ನು ಪೂರ್ಣ 4 ಗಂಟೆಗಳ ಕಾಲವೂ ಆಡಲು ಸಾಧ್ಯವಾಗಲಿಲ್ಲ.