Breaking News Today Live Updates in Kannada: ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ ಮುಂಗಾರು ಅಧಿವೇಶನದ 3ನೇ ದಿನದ ಕಲಾಪ ಇಂದು ಬೆಳಗ್ಗೆ 11 ಗಂಟೆಗೆ ಆರಂಭಗೊಳ್ಳಲಿದೆ. ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದಿರುವ ಬಿಜೆಪಿ-ಜೆಡಿಎಸ್ ವಿಪಕ್ಷಗಳು, ಸದನದ ಒಳಗೆ ಹಾಗೂ ಹೊರಗೆ ತೀವ್ರ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಇದರೊಂದಿಗೆ ಪಿಂಚಣಿ ಸ್ಥಗಿತ, ಬಿಡದಿ ಟೌನ್ಶಿಪ್ ಹಾಗೂ ಆರ್ಎಸ್ಎಸ್ ಕುರಿತ ಮಸೂದೆಗಳ ವಿರುದ್ಧವೂ ಕಲಾಪದಲ್ಲಿ ಭಾರಿ ಸಂಘರ್ಷ ಏರ್ಪಡುವ ಸಾಧ್ಯತೆಯಿದೆ. ಮತ್ತೊಂದೆಡೆ, ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯ ತಾರಾಪೀಠದ ನಾಲ್ಕು ಅಂತಸ್ತಿನ ಖಾಸಗಿ ಹೋಟೆಲ್ನಲ್ಲಿ ಇಂದು ಮುಂಜಾನೆ 5 ಗಂಟೆಗೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಿದ್ರೆಯಲ್ಲಿದ್ದ ಕನಿಷ್ಠ ಏಳು ಮಂದಿ ಸಜೀವ ದಹನಗೊಂಡಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.