ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ ‘ರಾಷ್ಟ್ರಭಾಷೆ’ಯ ಚರ್ಚೆ! – Kannada News | Sanjay Bangar Sparks ‘Rashtrabhasha’ Debate on KL Rahul

ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್​ಗೆ ತಮಿಳಿನಲ್ಲಿ ಸಲಹೆಗಳನ್ನು ನೀಡುತ್ತಿದ್ದರು. ಸುಂದರ್​ಗೆ ಚೆಂಡನ್ನು ಹೇಗೆ ಎಸೆಯಬೇಕೆಂದು ತಮಿಳಿನಲ್ಲಿ ಹೇಳುತ್ತಿರುವ ಕೆಎಲ್ ರಾಹುಲ್ ಧ್ವನಿ ಸ್ಟಂಪ್ ಮೈಕ್​ನಲ್ಲಿ ಸೆರೆಯಾಗಿದೆ.

ಅತ್ತ ಕೆಎಲ್ ರಾಹುಲ್​ಗೆ ತಮಿಳು ಬರುತ್ತಿದ್ದು, ಇತ್ತ ತಮಿಳುನಾಡು ಮೂಲದ ಕ್ರಿಕೆಟಿಗನೊಂದಿಗೆ ತಮಿಳಿನಲ್ಲೇ ಸಂಬೋಧಿಸುತ್ತಿದ್ದರು. ಇದನ್ನು ಕೇಳಿದ ಕಾಮೆಂಟೇಟರ್ ವರುಣ್ ಆರೋನ್, ಸುಂದರ್​ ಜೊತೆ ಕೆಎಲ್ ರಾಹುಲ್ ತಮಿಳಿನಲ್ಲಿ ಮಾತನಾಡಬೇಕಾಗುತ್ತದೆ. ಇದರಿಂದ ಅವರಿಗೆ ಬೇಗ ಅರ್ಥವಾಗುತ್ತಿದೆ ಎಂದರು.

ಅಲ್ಲದೆ ಸಹ ಕಾಮೆಂಟೇಟರ್ ಆಗಿದ್ದ ಸಂಜಯ್ ಬಂಗಾರ್​ಗೆ ಕೆಎಲ್ ರಾಹುಲ್ ಸುಂದರ್​​ ಜೊತೆ ತಮಿಳಿನಲ್ಲಿ ಮಾತನಾಡುತ್ತಿರುವುದರಿಂದ ಹೆಚ್ಚು ಸಹಕಾರಿಯಾಗುತ್ತಿದೆಯಲ್ಲವೇ ಎಂದು ಪ್ರಶ್ನಿಸಿದರು.

ಈ ವೇಳೆ ಸಂಜಯ್ ಬಂಗಾರ್, ನಾನು ರಾಷ್ಟ್ರ ಭಾಷೆಯನ್ನು ನಂಬುತ್ತೇನೆ ಎನ್ನುವ ಮೂಲಕ ಹೊಸ ಚರ್ಚೆಯನ್ನು ಹುಟ್ಟುಹಾಕಿದರು. ಅಂದರೆ ಇಲ್ಲಿ ಸಂಜಯ್ ಬಂಗಾರ್ ಈಗಲೂ ಹಿಂದಿ ರಾಷ್ಟ್ರ ಭಾಷೆ ಎಂಬ ಗುಂಗಿನಲ್ಲಿರುವುದು ಸ್ಪಷ್ಟ.

ಆದರೆ ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ ಎಂಬ ಸಾಮಾನ್ಯ ಅರಿವು ಸಂಜಯ್ ಬಂಗಾರ್​ಗೆ ಇದ್ದಂತಿಲ್ಲ. 2010 ರಲ್ಲಿ ಗುಜರಾತ್ ಹೈಕೋರ್ಟ್, ಹಿಂದಿ ರಾಷ್ಟ್ರೀಯ ಭಾಷೆ ಎಂದು ಹೇಳಲು ಯಾವುದೇ ಅಧಿಕೃತ ದಾಖಲೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಇದಾಗ್ಯೂ ಲೈವ್ ಕಾಮೆಂಟ್ರಿಯಲ್ಲಿ ರಾಷ್ಟ್ರಭಾಷೆ ಮೇಲೆ ನಂಬಿಕೆಯಿದೆ ಎನ್ನುವ ಮೂಲಕ ಸಂಜಯ್ ಬಂಗಾರ್ ತಮ್ಮ ಅಜ್ಞಾನವನ್ನು ತೆರೆದಿಟ್ಟಿದ್ದಾರೆ.

 

 

Source link

Leave a Reply

Your email address will not be published. Required fields are marked *