Headlines

ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ – Kannada News | Alur Elephant Operation: Wild elephant’s Playful Start Before Rogue Capture

ಹಾಸನ, ಜನವರಿ 16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೊಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಶೋಭಾ ಎಂಬ ಮಹಿಳೆ ಬಲಿಯಾದ ಘಟನೆಗೆ ಸಂಬಂಧಿಸಿ, ಹಂತಕ ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಹಾಗೂ ಸುಗ್ರೀವ ಎಂಬ ಐದು ಸಾಕಾನೆಗಳು ಆಲೂರು ತಾಲ್ಲೂಕಿನ ಬೈರಾಪುರ ತಾತ್ಕಾಲಿಕ ಆನೆ ಶಿಬಿರಕ್ಕೆ ಆಗಮಿಸಿವೆ. ಕಾರ್ಯಾಚರಣೆ ಆರಂಭಕ್ಕೂ ಮುನ್ನ ಸಾಕಾನೆಗಳ ತುಂಟಾಟ ಎಲ್ಲರ ಗಮನ ಸೆಳೆದಿದ್ದು, ಧನಂಜಯ ಹಾಗೂ ಅಯ್ಯಪ್ಪ ಆನೆಗಳು ಪರಸ್ಪರ ಮುಖಾಮುಖಿಯಾಗಿ ಕೋರೆ ಮರ್ದಿಸಿ ಹುಡುಗಾಟ ನಡೆಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Leave a Reply

Your email address will not be published. Required fields are marked *