ದೆಹಲಿ, ಜು.27: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
