Headlines

nagaraj11081993

ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಕಠಿಣ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ – Kannada News | Priyank Kharge Orders Strict Crackdown on Illegal Sand Mining, Issues Stern Directive

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ (karnataka) ಅಕ್ರಮ ಮರಳು ಗಣಿಗಾರಿಕೆ ಹಾಗೂ ಅಕ್ರಮ ಮರಳು ಸಾಗಣೆಗೆ ಸಂಪೂರ್ಣ ಬ್ರೇಕ್ ಹಾಕಲು ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ರಾಜ್ಯಾದ್ಯಂತ ‘ಝೀರೋ ಟಾಲರೆನ್ಸ್’ ನೀತಿ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಖಡಕ್​​ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿ ಈ ಕುರಿತಾಗಿ ಗೃಹ ಇಲಾಖೆಯಿಂದ ಮಾಧ್ಯಮ…

Read More

ನೀವು ಖರೀದಿಸುವ ಕೇಸರಿ ಅಸಲಿಯೋ, ನಕಲಿಯೋ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಬಳಸಿ – Kannada News | How to test whether saffron is real or fake?

ಕೇಸರಿ (saffron) ವಿಶ್ವದ ಅತ್ಯಂತ ದುಬಾರಿ ಮಸಾಲೆ ಪದಾರ್ಥವಾಗಿದ್ದು, ಇದನ್ನು  ವಿವಿಧ ಭಕ್ಷ್ಯಗಳಿಂದ ಹಿಡಿದು ಆಯುರ್ವೇದ ಮತ್ತು ಸೌಂದರ್ಯವರ್ಧಕಗಳಲ್ಲೂ ವ್ಯಾಪಕವಾಗಿ  ಬಳಸಲಾಗುತ್ತದೆ. ಇದರಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳು ಕೂಡ ಇದ್ದು, ಇದಕ್ಕಾಗಿ ಹೆಚ್ಚಿನವರು ಕೇಸರಿ ಸೇವನೆ ಮಾಡುತ್ತಾರೆ. ಇದರ ಹೆಚ್ಚಿನ ಬೆಲೆಯ ಕಾರಣದಿಂದಾಗಿ ಮಾರುಕಟ್ಟೆಯಲ್ಲಿ ನಕಲಿ ಕೇಸರಿಯ ಹಾವಳಿ ಹೆಚ್ಚಾಗಿದೆ. ಈ ನಕಲಿ ಕೇಸರಿ ಆರೋಗ್ಯದ ಮೇಲೂ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ನೀವು ಖರೀದಿಸುವಂತಹ ಕೇಸರಿ ಅಸಲಿಯೋ ಅಥವಾ ನಕಲಿಯೋ ಎಂಬುದನ್ನು ತಿಳಿಯುವುದು ತುಂಬಾನೇ ಮುಖ್ಯ. ಇದನ್ನು…

Read More

ಭಾರತದ ಇತಿಹಾಸದಲ್ಲೇ ಹೀಗಾಗಿರಲಿಲ್ಲ; ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ – Kannada News | Never happened in history Mallikarjun Kharge slams NDA Government for Lathi Charge on student protesters

ನವದೆಹಲಿ, ಜುಲೈ 27: ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ಸಮಯದಲ್ಲಿ ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸರ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಇಂದು ಗಲಾಟೆ ನಡೆಸಿದವು. ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದರು. ಭಾರತದ ಇತಿಹಾಸದಲ್ಲಿ ಈ ಹಿಂದೆ ಎಂದೂ ಈ ರೀತಿ ಆಗಿರಲಿಲ್ಲ ಎಂದು ಖರ್ಗೆ ಆಕ್ರೋಶ…

Read More

ಪ್ರೆಗ್ನೆನ್ಸಿಯಲ್ಲಿ ವಾಕಿಂಗ್ ಮಾಡುವುದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆಯೇ? – Kannada News | Daily Walking During Pregnancy: 5 Amazing Benefits for Mother and Baby

ಗರ್ಭಾವಸ್ಥೆ (Pregnancy) ಮಹಿಳೆಯ ಜೀವನದ ಅತ್ಯಂತ ಮಹತ್ವದ ಹಂತಗಳಲ್ಲಿ ಒಂದಾಗಿದೆ. ಈ ಅವಧಿಯಲ್ಲಿ ದೇಹದಲ್ಲಿ ಹಾರ್ಮೋನ್‌ಗಳ ಬದಲಾವಣೆ, ತೂಕ ಹೆಚ್ಚಳ ಮತ್ತು ಹಲವು ದೈಹಿಕ ಬದಲಾವಣೆಗಳಾಗುತ್ತವೆ. ಆದ್ದರಿಂದ ಸಮತೋಲಿತ ಆಹಾರದ ಜೊತೆಗೆ ನಿಯಮಿತವಾದ ಸೌಮ್ಯ ದೈಹಿಕ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ಆದರೆ ಕೆಲವು ಗರ್ಭಿಣಿಯರು ತಾವು ಹೆಚ್ಚು ವಿಶ್ರಾಂತಿ ತೆಗೆದುಕೊಳ್ಳಬೇಕೇ ಅಥವಾ ಯಾವ ರೀತಿಯ ವ್ಯಾಯಾಮ ಮಾಡಬೇಕು ಎಂಬುದರ ಬಗ್ಗೆ ಯೋಚಿಸುತ್ತಾರೆ. ಆದರೆ ಗರ್ಭಧಾರಣೆ ಸಾಮಾನ್ಯವಾಗಿದ್ದರೆ ಮತ್ತು ವೈದ್ಯರು ಯಾವುದೇ ನಿರ್ಬಂಧ ವಿಧಿಸದಿದ್ದರೆ, ಪ್ರತಿದಿನ ಸ್ವಲ್ಪ ಸಮಯ…

Read More

ಪ್ರಧಾನಿ ಮೋದಿ- ಶರದ್ ಪವಾರ್ ಭೇಟಿ; ಎನ್‌ಡಿಎ ಸೇರಲು ಒಪ್ಪಿತಾ ಎನ್‌ಸಿಪಿ? – Kannada News | PM Modi Sharad Pawar Meeting Has the NCP Agreed to Join NDA Maharashtra Politics

ನವದೆಹಲಿ, ಜುಲೈ 27: ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ (CJP) ಪ್ರತಿಭಟನೆ ತೀವ್ರಗೊಂಡಿದ್ದ ವೇಳೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಸಂಸದೆ ಸುಪ್ರಿಯಾ ಸುಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿದ್ದರು. ರೈತರ ಬೇಡಿಕೆಗಳು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನಿಯವರನ್ನು ಭೇಟಿಯಾಗಿದ್ದಾಗಿ ಶರದ್ ಪವಾರ್ (Sharad Pawar) ನಂತರ ತಿಳಿಸಿದ್ದರು. ಆದರೆ, ಇವರಿಬ್ಬರ ಭೇಟಿಯ ವೇಳೆ ಏನು ಮಾತುಕತೆ ನಡೆಯಿತು ಎಂಬುದು ಇನ್ನೂ ಬಯಲಾಗಿಲ್ಲ. ಎನ್‌ಸಿಪಿ (ಎಸ್‌ಪಿ) ಪಕ್ಷವು…

Read More

ಮೆಟ್ರೋ ರೈಲ್ವೆ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ – Kannada News | Man Dies After Jumping Onto Tracks on Namma Metro Yellow Line; Services Halted

ಬೆಂಗಳೂರು, ಜುಲೈ 27: ನಮ್ಮ ಮೆಟ್ರೋದ (Namma Metro) ಆರ್‌ವಿ ರಸ್ತೆ-ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದ ಹುಸ್ಕೂರು ಮೆಟ್ರೋ ನಿಲ್ದಾಣದಲ್ಲಿ ಇಂದು ಸಂಜೆ 5:50ರ ಸುಮಾರಿಗೆ 35 ವರ್ಷದ ವ್ಯಕ್ತಿಯೊಬ್ಬರು ರೈಲು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವ್ಯಕ್ತಿ ಹಳಿಗೆ ಜಿಗಿಯುತ್ತಿದ್ದಂತೆ ಸ್ಥಳದಲ್ಲಿದ್ದ ಮೆಟ್ರೋ ಸಿಬ್ಬಂದಿ ತಕ್ಷಣ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ರೈಲಿನ ಅಡಿಯಲ್ಲಿ ಸಿಲುಕಿಕೊಂಡಿದ್ದರಿಂದ ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಬಿಎಂಆರ್‌ಸಿಎಲ್ (BMRCL) ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ನಡೆದಿದ್ದೇನು?…

Read More

ಪೇಟಿಎಂನಲ್ಲೇ ಸಲ್ಲಿಸಿ ಐಟಿಆರ್; ಕೇವಲ 11 ರೂಗೆ ಜಂಜಾಟವಿಲ್ಲದೆ ಸರಳವಾಗಿ, ಸುಲಭವಾಗಿ ಐಟಿ ರಿಟರ್ನ್ಸ್ ಸಲ್ಲಿಸಿ – Kannada News | Paytm partners with ClearTax offers ITR filing in its App

ನವದೆಹಲಿ, ಜುಲೈ 27: ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವ ಧಾವಂತದಲ್ಲಿರುವವರಿಗೆ ಖುಷಿ ಸುದ್ದಿ. ಪೇಟಿಎಂ (Paytm) ತನ್ನ ಪ್ಲಾಟ್​ಫಾರ್ಮ್​ನಲ್ಲೇ ಐಟಿ ರಿಟರ್ನ್ಸ್ ಸಲ್ಲಿಸುವ ಸೇವೆ ಆರಂಭಿಸಿದೆ. ಬಹಳ ಕಡಿಮೆ ಬೆಲೆಗೆ, ಮತ್ತು ಬಹಳ ಸರಳವಾಗಿ ತೆರಿಗೆದಾರರು ಐಟಿಆರ್ ಭರ್ತಿ ಮಾಡಿ ಸಲ್ಲಿಸಬಹುದು. ಟ್ಯಾಕ್ಸ್ ಕನ್ಸಲ್ಟಿಂಗ್ ಸಂಸ್ಥೆಯಾದ ಕ್ಲಿಯರ್ ಟ್ಯಾಕ್ಸ್ (ClearTax) ಜೊತೆ ಪೇಟಿಎಂ ಹೊಂದಾಣಿಕೆ ಮಾಡಿಕೊಂಡು ಈ ಸೇವೆ ನಡೆಸುತ್ತಿದೆ. ಇದಕ್ಕೆ ಶುಲ್ಕ ಕೇವಲ 11 ರೂ ಎನ್ನಲಾಗಿದೆ. ಮಾರುಕಟ್ಟೆಯಲ್ಲಿ ಸಿಎ (CA) ಅಥವಾ ಇತರೆ…

Read More

ಟೀಂ ಇಂಡಿಯಾದಲ್ಲಿ ಒಬ್ಬರಿಗೊಂದು ನ್ಯಾಯ; ಬಿಸಿಸಿಐ ವಿರುದ್ಧ ಮಾಜಿ ಕ್ರಿಕೆಟಿಗ ಗರಂ – Kannada News | BCCI Double Standards? Vihari Criticizes Abhishek Sharma’s Continued Selection

ಟಿ20 ವಿಶ್ವಕಪ್​ನಿಂದಲೂ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) ಅವರ ಪ್ರದರ್ಶನ ಅಷ್ಟು ಉತ್ತಮವಾಗಿಲ್ಲ. ಒಂದೆರಡು ಪಂದ್ಯಗಳಲ್ಲಿ ಅರ್ಧಶತಕಗಳನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯಗಳಲ್ಲಿ ಒಂದಂಕಿ ದಾಟುವುದು ಕಷ್ಟಕರವಾಗಿತ್ತು. ಮೊದಲಿಗೆ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದ ಅಭಿಷೇಕ್, ಆ ನಂತರ ಜಿಂಬಾಬ್ವೆ ವಿರುದ್ಧವೂ ಅವರ ಪ್ರದರ್ಶನ ತೀರ ಕಳಪೆಯಾಗಿತ್ತು. ಆಡಿದ ಮೂರು ಪಂದ್ಯಗಳಲ್ಲಿ ಕ್ರಮವಾಗಿ 01, 08 ಮತ್ತು 02 ರನ್ ಗಳಿಸಿದರು. ಇದೀಗ…

Read More

ಮೈಕ್ರೋವೇವ್‌ನಲ್ಲಿ ಆಹಾರ ಬಿಸಿ ಮಾಡುವ ಮುನ್ನ ಈ ವಿಷಯಗಳನ್ನು ತಿಳಿದಿಟ್ಟುಕೊಳ್ಳಿ! – Kannada News | Microwave Safety Tips: How to Heat Food the Right Way

ಇಂದಿನ ವೇಗದ ಜೀವನಶೈಲಿಯಲ್ಲಿ ಉಳಿದ ಆಹಾರವನ್ನು ಕೆಲವೇ ನಿಮಿಷಗಳಲ್ಲಿ ಬಿಸಿ ಮಾಡಲು ಅಥವಾ ತ್ವರಿತವಾಗಿ ಅಡುಗೆ ಮಾಡಲು ಮೈಕ್ರೋವೇವ್ ಓವನ್ (Microwave) ಅನಿವಾರ್ಯ ಸಾಧನವಾಗಿದೆ. ಆದರೆ ಮೈಕ್ರೋವೇವ್ ಬಳಕೆಯ ಬಗ್ಗೆ ಹಲವು ವರ್ಷಗಳಿಂದ ಅನೇಕ ಗೊಂದಲಗಳು ಹರಿದಾಡುತ್ತಿವೆ. “ಮೈಕ್ರೋವೇವ್‌ನ ರೇಡಿಯೇಷನ್‌ನಿಂದ ಕ್ಯಾನ್ಸರ್ ಬರುತ್ತದೆ”, “ಆಹಾರದಲ್ಲಿನ ಎಲ್ಲಾ ಪೋಷಕಾಂಶಗಳು ನಾಶವಾಗುತ್ತವೆ” ಎಂಬಂತಹ ನಂಬಿಕೆಗಳು ಸಾಮಾನ್ಯವಾಗಿವೆ. ಆದರೆ ವೈಜ್ಞಾನಿಕ ಅಧ್ಯಯನಗಳು ಈ ಹೇಳಿಕೆಗಳಿಗೆ ಸಂಪೂರ್ಣ ಬೆಂಬಲ ನೀಡುವುದಿಲ್ಲ. ಸರಿಯಾದ ವಿಧಾನದಲ್ಲಿ ಮೈಕ್ರೋವೇವ್ ಬಳಸಿದರೆ ಅದು ಸುರಕ್ಷಿತವಾಗಿದ್ದು, ಕೆಲವು ಸಂದರ್ಭಗಳಲ್ಲಿ ಪೋಷಕಾಂಶಗಳನ್ನು…

Read More

ರಾಮಮಂದಿರ ಹಗರಣದ ತನಿಖೆಯ ಎಸ್​ಐಟಿಗೆ ಚಾರ್ಟರ್ಡ್ ಅಕೌಂಟೆಂಟ್ ನೇಮಿಸಿ; ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ – Kannada News | Appoint Chartered Accountant To Ram Temple Donation Theft Case SIT Supreme Court To UP Government

ನವದೆಹಲಿ, ಜುಲೈ 27: ಅಯೋಧ್ಯೆಯ ರಾಮಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣದ (Ram Temple Donation Theft Case) ತನಿಖೆ ನಡೆಸುತ್ತಿರುವ ‘ವಿಶೇಷ ತನಿಖಾ ತಂಡ’ದ (SIT) ನೇತೃತ್ವವನ್ನು ಐಪಿಎಸ್ ಅಧಿಕಾರಿ ಎಸ್. ಕಿರಣ್ ವಹಿಸಲಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಹೇಳಿಕೆಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಆ ತನಿಖಾ ತಂಡಕ್ಕೆ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರನ್ನು ನೇಮಿಸುವಂತೆ ಹಾಗೂ 2 ವಾರಗಳಲ್ಲಿ ವರದಿ ಸಲ್ಲಿಸುವಂತೆ…

Read More