All posts by nagaraj11081993

ಧಾರಾವಾಹಿ ಶೂಟಿಂಗ್ ವೇಳೆ ಸಮುದ್ರದಲ್ಲಿ ಮುಳುಗಿ ನಟನ ಸಾವು

ಧಾರಾವಾಹಿ ಶೂಟಿಂಗ್ ವೇಳೆ ಸಮುದ್ರದಲ್ಲಿ ಮುಳುಗಿ ನಟನ ಸಾವು

ಸಿನಿಮಾ ಶೂಟಿಂಗ್ ವೇಳೆ ಸಂಭವಿಸುವ ಅವಘಡಗಳು ಕೆಲ ಕಲಾವಿದರ ಬದುಕನ್ನೇ ಬದಲಿಸಿಬಿಡುತ್ತವೆ. ಈಗ ಧಾರಾವಾಹಿ (Serial) ಶೂಟಿಂಗ್ ವೇಳೆ ಸಂಭವಿಸಿದ ಅವಘಡ ಎಲ್ಲರಿಗೂ ಶಾಕ್ ತರಿಸಿದೆ. ಬೆಂಗಾಲಿ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಅವರು ಭಾನುವಾರ (ಮಾರ್ಚ್ 29) ನಿಧನ ಹೊಂದಿದ್ದಾರೆ. ಸಮುದ್ರದಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇದು ಬೆಂಗಾಲಿ ಚಿತ್ರರಂಗಕ್ಕೆ ಹಾಗೂ ಅಲ್ಲಿನ ಕಿರುತೆರೆ ಲೋಕಕ್ಕೆ ಶಾಕಿಂಗ್ ಎನಿಸಿದೆ. ರಾಹುಲ್ ಅವರಿಗೆ 43 ವರ್ಷ ವಯಸ್ಸಾಗಿತ್ತು.

‘ಭೋಲೆ ಬಾಬಾ ಪರ್ ಕರೆಗಾ’ ಹೆಸರಿನ ಧಾರಾವಾಹಿ ಶೂಟಿಂಗ್ ಪಶ್ಚಿಮ ಬಂಗಾಳದ ದಿಘಾದಲ್ಲಿ ನಡೆಯುತ್ತಿತ್ತು. ಮಧ್ಯಾಹ್ನದ ವೇಳೆ ಶೂಟ್ ಪೂರ್ಣಗೊಂಡಿದೆ. ಪ್ಯಾಕಪ್ ಆದ ಬಳಿಕ ರಾಹುಲ್ ಒಂಟಿಯಾಗಿ ತಲ್ಸಾರಿ ಸಮುದ್ರದ ಕಡೆ ತೆರಳಿದ್ದಾರೆ. ಆ ಬಳಿಕ ಅವರು ಕಾಣೆಯಾದರು. ಈ ಬಗ್ಗೆ ಚರ್ಚೆ ನಡೆಯಿತು. ಅವರ ಹುಡುಕಾಟ ಆರಂಭ ಆಯಿತು.

ರಾಹುಲ್ ಸಮುದ್ರದಲ್ಲಿ ಕಾಣಿಸಿದರು. ಅವರನ್ನು ಎತ್ತಲು ಅಲ್ಲಿದ್ದವರು ಪ್ರಯತ್ನಿಸಿದರು. ನಂತರ ಅವರನ್ನು ಹೊರಕ್ಕೆ ತಂದು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಸಂಜೆ ವೇಳೆ ಅವರು ನಿಧನ ಹೊಂದಿದ್ದಾಗಿ ವೈದ್ಯರು ಘೋಷಿಸಿದರು. ನೀರಿನಲ್ಲಿ ಮುಳುಗಿದ್ದರಿಂದಲೇ ನಿಧನ ಹೊಂದಿದ್ದಾಗಿ ಪ್ರಾಥಮಿಕ ವರದಿಗಳು ಹೇಳಿವೆ.

ಇದನ್ನೂ ಓದಿ: ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ

ಈ ವಿಷಯವಾಗಿ ರಾಹುಲ್ ಪತ್ನಿ ಪ್ರಿಯಾಂಕಾ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಕಷ್ಟದ ಸಂದರ್ಭದಲ್ಲಿ ಖಾಸಗಿತನಕ್ಕೆ ಗೌರವ ಕೊಡಿ ಎಂದು ಅವರು ಬೇಡಿಕೊಂಡಿದ್ದಾರೆ. 2008ರಲ್ಲಿ ಸೀರಿಯಲ್ ಸೆಟ್ ಅಲ್ಲಿ ಇಬ್ಬರೂ ಭೇಟಿ ಆದರು. ನಿಜ ಜೀವನದಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತು. 2010ರಲ್ಲಿ ಇವರು ಮದುವೆ ಆದರು. 2017ರಲ್ಲಿ ಇವರು ಬೇರೆ ಆದರು. 2018ರಲ್ಲಿ ಡಿವೋರ್ಸ್​​ಗೆ ಅರ್ಜಿ ಸಲ್ಲಿಸಿದರು. ಅಚ್ಚರಿ ಎಂದರೆ 2023ರಲ್ಲಿ ಇಬ್ಬರೂ ಮತ್ತೆ ಒಂದಾದರು. ಈ ದಂಪತಿಗೆ ಸೊಹೊಜ್ ಹೆಸರಿನ ಮಗ ಇದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರಿ ಗಾತ್ರದ ಹಾವನ್ನು ನುಂಗುತ್ತಿದ್ದ ಮತ್ತೊಂದು ಹಾವು! ಉರಗ ರಕ್ಷಕರಿಂದ ರಕ್ಷಣೆ, ಮೈಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ

ಕೋಲಾರ, ಮಾರ್ಚ್​ 30: ಕೋಲಾರ ಜಿಲ್ಲೆಯ ದೊಡ್ಡಹಸಾಳ ಗ್ರಾಮದ ಬಳಿ ಹಾವೊಂದು ಮತ್ತೊಂದು ಭಾರಿ ಗಾತ್ರದ ಹಾವನ್ನೇ ನುಂಗಲು ಯತ್ನಿಸಿದ ಅಪರೂಪದ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಉರಗ ರಕ್ಷಕ ನಾಗರಾಜ್, ಅತ್ಯಂತ ಜಾಣ್ಮೆಯಿಂದ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದು ಹಾವಿನ ಬಾಯಿಗೆ ಆಹಾರವಾಗುತ್ತಿದ್ದ ಹಾವನ್ನು ಸುರಕ್ಷಿತವಾಗಿ ಬಿಡಿಸುವಲ್ಲಿ ನಾಗರಾಜ್ ಯಶಸ್ವಿಯಾಗಿದ್ದಾರೆ. ಉರಗ ರಕ್ಷಕನ ಈ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Finn Allen: ತುಂಬಾ ವರ್ಷಗಳಿಂದ ಕಾಯುತ್ತಿದ್ದೆ, ಕೊನೆಗೂ ಚಾನ್ಸ್ ಸಿಕ್ತು!

ನ್ಯೂಝಿಲೆಂಡ್​ನ ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen) ಐಪಿಎಲ್​ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುವ ಮೂಲಕ ಅಲೆನ್ ತಮ್ಮ ಬಹುಕಾಲದ ಕನಸನ್ನು ಈಡೇರಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಫಿನ್ ಅಲೆನ್, “ಈ ಕ್ಷಣಕ್ಕಾಗಿ ನಾನು ಬಹಳ ವರ್ಷಗಳಿಂದ ಕಾಯುತ್ತಿದ್ದೆ. ಕೊನೆಗೂ ವಿಶ್ವದ ಅತಿದೊಡ್ಡ ಟಿ20 ಟೂರ್ನಮೆಂಟ್‌ನಲ್ಲಿ ಆಡಲು ಅವಕಾಶ ಸಿಕ್ಕಿದೆ, ಇದು ನಿಜಕ್ಕೂ ಸಂತಸದ ಕ್ಷಣ” ಎಂದಿದ್ದಾರೆ.

ಅಂದಹಾಗೆ ಫಿನ್ ಅಲೆನ್ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದು 2021 ರಲ್ಲಿ. 5 ವರ್ಷಗಳ ಹಿಂದೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ಪಡೆದರೂ ಅವರಿಗೆ ಕಣಕ್ಕಿಳಿಯಲು ಚಾನ್ಸ್ ಸಿಕ್ಕಿರಲಿಲ್ಲ ಎಂಬುದೇ ಅಚ್ಚರಿ.

2021ರ ಐಪಿಎಲ್​ ಸೀಸನ್​ನಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜೋಶ್ ಫಿಲಿಪೆ ಗಾಯಗೊಂಡಿದ್ದರು. ಅವರ ಬದಲಿಗೆ ಫಿನ್ ಅಲೆನ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

ಹೀಗೆ ಬದಲಿ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದ ಫಿನ್ ಅಲೆನ್ ಮೂರು ವರ್ಷಗಳ ಕಾಲ ಬೆಂಚ್ ಕಾದಿದ್ದರು ಎಂದರೆ ನಂಬಲೇಬೇಕು. ಅಂದರೆ ಅಲೆನ್​ಗೆ ಒಂದೇ ಒಂದು ಪಂದ್ಯವಾಡಲು ಆರ್​ಸಿಬಿ ಅವಕಾಶ ನೀಡಿರಲಿಲ್ಲ. ಇದಾಗ್ಯೂ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಫ್ರಾಂಚೈಸಿ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುತ್ತಿದ್ದರು.

ಆ 3 ವರ್ಷಗಳ ನಡುವೆ ಫಿನ್ ಅಲೆನ್ ನ್ಯೂಝಿಲೆಂಡ್ ರಾಷ್ಟ್ರೀಯ ತಂಡದ ಪರ ಪದಾರ್ಪಣೆ ಮಾಡಿದ್ದರು. ವಿವಿಧ ಲೀಗ್​ಗಳಲ್ಲೂ ಅಬ್ಬರಿಸಿದ್ದರು. ಅಲ್ಲದೆ ಕಿವೀಸ್ ತಂಡದ ಆರಂಭಿಕನಾಗಿ ಸ್ಪೋಟಕ ಇನಿಂಗ್ಸ್ ಕೂಡ ಆಡಿದ್ದರು. ಇದಾಗ್ಯೂ ಐಪಿಎಲ್​ಗೆ ಬಂದರೆ ಬೆಂಚ್ ಕಾಯುವುದೇ ಬಂತು.

ಕುತೂಹಲಕಾರಿ ವಿಷಯ ಎಂದರೆ ಈ ಮೂರು ಸೀಸನ್​ಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 45 ಪಂದ್ಯಗಳನ್ನಾಡಿತ್ತು. ಅಂದರೆ ಫಿನ್ ಅಲೆನ್ ಬರೋಬ್ಬರಿ 45 ಪಂದ್ಯಗಳಲ್ಲಿ ಬೆಂಚ್ ಕಾದಿದ್ದರು. ಆದರೆ 2024 ರಲ್ಲಿ ಫಿನ್ ಅಲೆನ್ ಆರ್​ಸಿಬಿ ತಂಡದಿಂದ ಹೊರಬರುವ ಮೂಲಕ ಈ ಕಾಯುವಿಕೆಗೆ ಬ್ರೇಕ್ ಹಾಕಿದ್ದರು.

ಇದನ್ನೂ ಓದಿ: ಮೊದಲ ಗೆಲುವನ್ನು 11 ಮಂದಿಗೆ ಅರ್ಪಿಸಿದ RCB

ಇದೀಗ ಅಲೆನ್ ಕೊಲ್ಕತ್ತಾ ನೈಟ್ ರೈಡರ್ಡ್ ತಂಡಕ್ಕೆ ಆಯ್ಕೆಯಾದ ಮೊದಲ ವರ್ಷವೇ ಪಾದಾರ್ಪಣೆ ಮಾಡಲು ಅವಕಾಶ ಸಿಕ್ಕಿದೆ. ಅಲ್ಲದೆ ಚೊಚ್ಚಲ ಪಂದ್ಯದಲ್ಲೇ 17 ಎಸೆತಗಳಲ್ಲಿ 37 ರನ್ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ.

 

Source link

Video: ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ, ನಿಯಂತ್ರಣ ತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದ ಬೈಕ್ ಸವಾರ

ನವದೆಹಲಿ, ಮಾರ್ಚ್​ 30: ಮಕ್ಕಳನ್ನು ಎಷ್ಟೇ ಮುದ್ದಿನಿಂದ ಬೆಳೆಸಿದರೂ ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಕೂಡ ಕಲಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ. ಬಾಲಕನೊಬ್ಬ ಕಾರಿನಿಂದ ವಾಟರ್ ಬಲೂನ್ ಎಸೆದ ಪರಿಣಾಮ ಅದು ಬೈಕ್ ಸವಾರನಿಗೆ ತಾಕಿ, ಅವರು ಆಯತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋವನ್ನು ಮೊದಲು ದಿವ್ಯಾ ಟಂಡನ್ ಅವರು ಶೇರ್ ಮಾಡಿದ್ದರು.

ಬಾಲಕ ಮಾಡಿದ ಒಂದು ತಪ್ಪಿನಿಂದ ಜೀವವೇ ಹೋಗುವ ಸಾಧ್ಯತೆ ಇತ್ತು. ಮಾರ್ಚ್ 27 ರಂದು ನಡೆದ ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಬಾಲಕಿಯ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಲವರು ಒತ್ತಾಯಿಸಿದ್ದಾರೆ.ಅಪರಾಧ ಎಸಗಿದ ವಾಹನದ ಮೇಲೆ ಅಪಾಯಕಾರಿ ಚಾಲನೆ ಮತ್ತು ಕಾನೂನು ಉಲ್ಲಂಘನೆಗಾಗಿ ಮೋಟಾರ್‌ಸೈಕಲ್ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!

ಬೆಂಗಳೂರು, ಮಾರ್ಚ್​ 30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2026) ಉದ್ಘಾಟನಾ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳ ಸಾಗರವೇ ಹರಿದುಬಂದಿದ್ದು, ನಮ್ಮ ಮೆಟ್ರೋ (Namma Metro) ಕೂಡ ಸಾಕ್ಷಿಯಾಗಿದೆ. ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾಮಾನ್ಯ ದಿನಗಳಿಗಿಂತ ದ್ವಿಗುಣ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿದ್ದಾರೆ ಎಂದು ಬಿಎಂಆರ್​ಸಿಎಲ್ ಮೂಲಗಳು ತಿಳಿಸಿವೆ.

ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ ಸುಮಾರು 22,000 ಜನರು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಿಂದ ಸುರಕ್ಷಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿ ಸಂಚಾರ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ಬಿಎಂಆರ್‌ಸಿಎಲ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಿತ್ತು. ಮೆಜೆಸ್ಟಿಕ್ ಕಡೆಗೆ 13 ಹಾಗೂ ವೈಟ್‌ಫೀಲ್ಡ್ ಕಡೆಗೆ 9 ರೈಲುಗಳು ಸೇರಿದಂತೆ ಒಟ್ಟು 39 ರೌಂಡ್ ಟ್ರಿಪ್‌ಗಳನ್ನು ಕಾರ್ಯಾಚರಣೆ ಮಾಡಲಾಗಿದೆ.

ಹೆಚ್ಚುವರಿ ರೈಲುಗಳ ಸಂಚಾರ

ಪರ್ಪಲ್ ಲೈನ್‌ನಲ್ಲಿ 18, ಗ್ರೀನ್ ಲೈನ್‌ನಲ್ಲಿ 15 ಮತ್ತು ಯಲ್ಲೋ ಲೈನ್‌ನಲ್ಲಿ 6 ಹೆಚ್ಚುವರಿ ಸಂಚಾರಗಳನ್ನು ನಡೆಸುವ ಮೂಲಕ ಪ್ರಯಾಣಿಕರ ದಟ್ಟಣೆಯನ್ನು ಯಶಸ್ವಿಯಾಗಿ ನಿಭಾಯಿಸಲಾಗಿದೆ. ಪ್ರತಿ ಮೂರು ನಿಮಿಷಕ್ಕೊಮ್ಮೆ ರೈಲು ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮುಂದಿನ ಪಂದ್ಯಗಳಿಗೂ ಇನ್ನಷ್ಟು ಸೌಲಭ್ಯಗಳನ್ನು ಹೆಚ್ಚಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

ಇದನ್ನೂ ಓದಿ: ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ದಿನಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ಮೆಟ್ರೋರೈಲು ಸಂಚಾರದ ಅವಧಿಯನ್ನು ತಡರಾತ್ರಿ ವರೆಗೆ ವಿಸ್ತರಿಸುತ್ತಿದೆ. ಸಾಮಾನ್ಯವಾಗಿ ರಾತ್ರಿ 11 ಗಂಟೆಗೆ ಕೊನೆಗೊಳ್ಳುತ್ತಿದ್ದ ರೈಲು ಸಂಚಾರವನ್ನು ಪಂದ್ಯ ಮುಗಿದ ನಂತರ ಸಾವಿರಾರು ಅಭಿಮಾನಿಗಳು ಏಕಕಾಲಕ್ಕೆ ನಿಲ್ದಾಣಕ್ಕೆ ಬರುವ ಹಿನ್ನೆಲೆಯಲ್ಲಿ ವಿಸ್ತರಿಸಲಾಗುತ್ತಿದೆ. ಐಪಿಎಲ್ ಉದ್ಘಾಟನಾ ಪಂದ್ಯದ ದಿನ ರಾತ್ರಿ 2 ಗಂಟೆ ವರೆಗೆ ಮೆಟ್ರೋ ಸಂಚಾರ ವಿಸ್ತರಣೆ ಮಾಡಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊದಲ ಗೆಲುವನ್ನು 11 ಮಂದಿಗೆ ಅರ್ಪಿಸಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಗೆಲುವಿನ ಖಾತೆ ತೆರೆದಿದೆ. “ಈ ಗೆಲುವನ್ನು ನಾವು ಕಳೆದುಕೊಂಡ ಆ 11 ಅಭಿಮಾನಿಗಳಿಗೆ ಅರ್ಪಿಸುತ್ತೇವೆ”  ಎಂದಿದ್ದಾರೆ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್.

2026ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದ ನಂತರ, ಭಾವುಕರಾದ ರಜತ್ ಪಾಟೀದಾರ್, ನಮ್ಮ ಈ ಗೆಲುವನ್ನು ನಮ್ಮನ್ನು ಅಗಲಿದ 11 ಮಂದಿ ಅಭಿಮಾನಿಗಳಿಗೆ ಅರ್ಪಿಸಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ (ಜೂನ್ 2025) ಆರ್‌ಸಿಬಿ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು.

ಈ ಅಭಿಮಾನಿಗಳ ನೆನಪಿಗಾಗಿ ಆರ್​ಸಿಬಿ – ಎಸ್​ಆರ್​ಹೆಚ್ ನಡುವಣ ಪಂದ್ಯದ ಆರಂಭಕ್ಕೂ ಮುನ್ನ ಒಂದು ನಿಮಿಷ ಮೌನ ಆಚರಿಸಲಾಯಿತು. ಅಲ್ಲದೆ, ಕ್ರೀಡಾಂಗಣದ ನಾರ್ತ್ ಸ್ಟ್ಯಾಂಡ್‌ನಲ್ಲಿ 11 ಆಸನಗಳನ್ನು ಖಾಲಿ ಬಿಟ್ಟು, ಅವುಗಳಿಗೆ ಮೃತಪಟ್ಟ ಅಭಿಮಾನಿಗಳ ಹೆಸರಿರುವ ಬಿಳಿ ಜೆರ್ಸಿಗಳನ್ನು ಹಾಕಲಾಗಿತ್ತು.

ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಗೆಲುವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗಲಿದ 11 ಅಭಿಮಾನಿಗಳಿಗೆ ಅರ್ಪಿಸಿದ್ದಾರೆ.

RCBಯ 11 ಅಭಿಮಾನಿಗಳು:

ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳ ಹೆಸರು ಈ ಕೆಳಗಿನಂತಿದೆ…
ಹೆಸರು ಊರು / ಜಿಲ್ಲೆ
ಪೂರ್ಣಚಂದ್ರ ಮಂಡ್ಯ
ದಿವ್ಯಾಂಶಿ ಬೆಂಗಳೂರು (ಕೆ.ಆರ್. ಪುರಂ)
ಶಿವಲಿಂಗು ಮೈಸೂರು
ಮನೋಜ್ ಕುಮಾರ್ ತುಮಕೂರು
ಭೂಮಿಕಾ ಹಾಸನ
ಚಿನ್ನಯ್ಯ ಬಳ್ಳಾರಿ
ಚಿನ್ಮಯಿ ಶಿವಮೊಗ್ಗ
ಪ್ರಜ್ವಲ್ ಜಿ ಬೆಂಗಳೂರು (ವಿಜಯನಗರ)
ಸಹನಾ ಚಿತ್ರದುರ್ಗ
ಅಕ್ಷತಾ ಪೈ ಮಂಗಳೂರು (ದಕ್ಷಿಣ ಕನ್ನಡ)
ಕಾಮಾಕ್ಷಿ ದೇವಿ ದಾವಣಗೆರೆ
ಇನ್ನು ಈ ಕಾಲ್ತುಳಿತದಲ್ಲಿ ಮೃತಪಟ್ಟ ಪ್ರತಿಯೊಬ್ಬ ಅಭಿಮಾನಿಯ ಕುಟುಂಬಕ್ಕೆ ಆರ್‌ಸಿಬಿ ಮ್ಯಾನೇಜ್‌ಮೆಂಟ್  ₹25 ಲಕ್ಷ ಆರ್ಥಿಕ ನೆರವನ್ನು ಘೋಷಿಸಿದೆ.
ಹಾಗೆಯೇ ಅಭಿಮಾನಿಗಳ ಸುರಕ್ಷತೆ, ಸಮುದಾಯ ಕಲ್ಯಾಣ ಮತ್ತು ತುರ್ತು ಸಂದರ್ಭಗಳಲ್ಲಿ ಸಹಾಯ ಮಾಡಲು ‘ಆರ್‌ಸಿಬಿ ಕೇರ್ಸ್’ (RCB CARES) ಎಂಬ ವಿಶೇಷ ಫೌಂಡೇಶನ್ ಸ್ಥಾಪಿಸಿದೆ.
ಇನ್ನು ಕಾಲ್ತುಳಿತದಲ್ಲಿ ಗಾಯಗೊಂಡ 50ಕ್ಕೂ ಹೆಚ್ಚು ಅಭಿಮಾನಿಗಳ ವೈದ್ಯಕೀಯ ವೆಚ್ಚ ಮತ್ತು ಚಿಕಿತ್ಸೆಗೂ ಈ ನಿಧಿಯ ಮೂಲಕ ಬೆಂಬಲ ನೀಡುವುದಾಗಿ ತಿಳಿಸಿತ್ತು.

Source link

ಗಿಲ್ಲಿ ಬಳಿ ಲವ್​ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು?

ಗಿಲ್ಲಿ ನಟ ಅವರು ಗೌರಿ ಕಲ್ಯಾಣ ಧಾರಾವಾಹಿಯ ಸೀರಿಯಲ್ ಸಂತೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರ ಬಳಿ ಅಭಿಮಾನಿಗಳು ಲವ್ ಟಿಪ್ಸ್ ಕೇಳಿದ್ದಾರೆ. ಇದಕ್ಕೆ ಗಿಲ್ಲಿ ನಟ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ನೀನು ನನ್ನ ಬಳಿ ಕೇಳಿದ್ದು ತಪ್ಪು’ ಎಂದು ನೇರವಾಗಿ ಹೇಳಿದ್ದಾರೆ. ಆ ಸಂದರ್ಭದ ಫನ್ ಟಾಕ್ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್; ಗಂಡು ಮಗುವಿಗೆ ಜನ್ಮ ನೀಡಿದ ನಟಿ

ನಟಿ ಸೋನಂ ಕಪೂರ್ ಹಾಗೂ ಉದ್ಯಮಿ ಆನಂದ್ ಅಹೂಜಾ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಸೋನಂ ಎರಡನೇ ಬಾರಿಗೆ ತಾಯಿ ಆಗಿದ್ದಾರೆ. ಅವರಿಗೆ ಗಂಡು ಮಗು ಜನಿಸಿದೆ. ಮಾರ್​ಚ್​ 29ರಂದು ಮಗು ಜನಿಸಿದೆ. ಈ ಬಗ್ಗೆ ಇನ್​​ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೋನಂ ಕಪೂರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಸೋನಂ ಕುಟುಂಬ ಮತ್ತಷ್ಟು ವಿಸ್ತೃತವಾಗಿದೆ.

ಸೋನಂ ಕಪೂರ್ ಅವರು ಇನ್​​ಸ್ಟಾಗ್ರಾಮ್ ಅಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಮ್ಮ ಕುಟುಂಬ ಹಿರಿದಾಗಿದೆ. ಅವನ ಆಗಮನದಿಂದ ನಮ್ಮ ಹೃದಯದಲ್ಲಿ ಸಂತಸ ಹೆಚ್ಚಿದೆ. ವಾಯು ತನ್ನ ಚಿಕ್ಕ ಸಹೋದರನನ್ನು ಸ್ವಾಗತಿಸಲು ಖುಷಿಯಾಗಿದ್ದಾನೆ. ನಮ್ಮ ಮನೆಯ ಸಂತೋಷ ಹೆಚ್ಚಿದೆ. ಈಗ ಕುಟುಂಬ ನಾಲ್ಕು ಜನರಿಗೆ ಬಡ್ತಿ ಪಡೆದಿದೆ. ಹೊಸ ಅಧ್ಯಾಯವನ್ನು ಪ್ರಾರಂಭಿಸಲು ನಾವು ಕೃತಜ್ಞರಾಗಿರುತ್ತೇವೆ. ಪ್ರೀತಿಯಿಂದ, ಸೋನಮ್, ಆನಂದ್ ಮತ್ತು ವಾಯು’ ಎಂದು ಅವರು ಬರೆದುಕೊಂಡಿದ್ದಾರೆ.

ಸೋನಂ ಕಪೂರ್ ಅವರಿಗೆ ಅನೇಕ ಸೆಲೆಬ್ರಿಟಿಗಳು ಶುಭಾಶಯ ಕೋರಿದ್ದಾರೆ. ‘ಸೋನಾ ಹಾಗೂ ಆನಂದ್​​ಗೆ ಅಭಿನಂದನೆ’ ಎಂದು ಕರೀನಾ ಕಪೂರ್ ಕಮೆಂಟ್ ಮಾಡಿದ್ದಾರೆ. ಹುಮಾ ಖುರೇಷಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರ್ಟ್ ಎಮೋಜಿ ಹಾಕಿದ್ದಾರೆ.

ಇದನ್ನೂ ಓದಿ: ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್

2025ರ ನವೆಂಬರ್ ಅಲ್ಲಿ ಸೋನಂ ಕಪೂರ್ ಅವರು ಪ್ರೆಗ್ನೆನ್ಸಿ ಬಗ್ಗೆ ಘೋಷಣೆ ಮಾಡಿದ್ದರು. ‘ತಾಯಿ’ ಎಂದು ಅವರು ಕ್ಯಾಪ್ಶನ್ ನೀಡಿದ್ದರು. 2018ರಲ್ಲಿ ಆನಂದ್ ಜೊತೆ ಸೋನಂ ಕಪೂರ್ ವಿವಾಹ ನಡೆಯಿತು. 2022ರಲ್ಲಿ ಗಂಡು ಮಗು ಜನಿಸಿತು. ಇದಕ್ಕೆ ‘ವಾಯು’ ಎಂದು ಹೆಸರು ಇಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರೋಹಿತ್ ಶರ್ಮಾರ ‘ದುರಾದೃಷ್ಟ’ಕ್ಕೆ ಬ್ರೇಕ್ ಹಾಕಿದ ಹಾರ್ದಿಕ್ ಪಾಂಡ್ಯ

IPL 2026: ಬರೋಬ್ಬರಿ 13 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್​ನಲ್ಲಿ ಮೊದಲ ಮ್ಯಾಚ್ ಗೆದ್ದಿದೆ. ಅಂದರೆ ಕಳೆದ ಹದಿಮೂರು ವರ್ಷಗಳಲ್ಲಿ ಮುಂಬೈ ಪಡೆ ತನ್ನ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿರಲಿಲ್ಲ. ಇಂತಹದೊಂದು ಅನ್​ಲಕ್ಕಿ ಓಪನಿಂಗ್​​ಗೆ ನಾಂದಿಯಾಡಿದ್ದು ಮಾಜಿ ನಾಯಕ ರೋಹಿತ್ ಶರ್ಮಾ ಎಂಬುದು ವಿಶೇಷ.

ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಬಾರಿ ಮೊದಲ ಮ್ಯಾಚ್​ ಗೆದ್ದಿದ್ದು 2012 ರಲ್ಲಿ. ಅದು ಸಹ ಹರ್ಭಜನ್ ಸಿಂಗ್ ನಾಯಕತ್ವದಲ್ಲಿ. ಇದಾದ ಬಳಿಕ 2013 ರಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದರು. ಇತ್ತ ಹಿಟ್​ಮ್ಯಾನ್ ನಾಯಕನಾದ ಬಳಿಕ ಮುಂಬೈ ಇಂಡಿಯನ್ಸ್ ತಂಡವು ಒಮ್ಮೆಯೂ ಮೊದಲ ಮ್ಯಾಚ್​ನಲ್ಲಿ ಗೆಲುವು ದಾಖಲಿಸಿರಲಿಲ್ಲ ಎಂಬುದು ವಿಶೇಷ.

ಇನ್ನು ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾದರೂ ಮುಂಬೈ ಇಂಡಿಯನ್ಸ್ ತಂಡ ಎರಡು ಸೀಸನ್​ಗಳಲ್ಲಿ ಮೊದಲ ಮ್ಯಾಚ್​ನಲ್ಲಿ ಮುಗ್ಗರಿಸಿದ್ದರು. ಆದರೆ ಮೂರನೇ ಸೀಸನ್​ನಲ್ಲಿ ರೋಹಿತ್ ಶರ್ಮಾ ಶುರು ಮಾಡಿದ್ದ ದುರಾದೃಷ್ಟಕ್ಕೆ ಬ್ರೇಕ್ ಹಾಕುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿತು.

ಈ ಬೃಹತ್ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ 224 ರನ್ ಬಾರಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ. ಈ ಮೂಲಕ 2012ರ ಬಳಿಕ ಮುಂಬೈ ಇಂಡಿಯನ್ಸ್​ ತಂಡವು ಐಪಿಎಲ್​ನ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ ಬೀರಿದೆ.

ಸೋತರೂ ಕಪ್ ಗೆದ್ದಿದ್ದ ಮುಂಬೈ ಪಡೆ:

ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೊದಲ ಪಂದ್ಯದಲ್ಲಿ ಸೋತರೂ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವುದು ವಿಶೇಷ. ಅಂದರೆ ಮೊದಲ ಮ್ಯಾಚ್​ನಲ್ಲಿ ಮುಗ್ಗರಿಸಿದರೂ ಮುಂಬೈ ಪಡೆ ಪ್ರಚಂಡ ಪ್ರದರ್ಶನ ನೀಡುತ್ತಾ ಬಂದಿದೆ.

ಇದನ್ನೂ ಓದಿ: VIDEO: ಟಾಸ್ ಫಿಕ್ಸಿಂಗ್..? ಮುಂಬೈ ಇಂಡಿಯನ್ಸ್ ವಿರುದ್ಧ ಗಂಭೀರ ಆರೋಪ

ಈ ಮೂಲಕ 2013, 2015, 2017, 2019 ಮತ್ತು 2020 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಮ್ಯಾಚ್​ನಲ್ಲೇ ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ. ಈ ಶುಭಾರಂಭದೊಂದಿಗೆ ಮುಂಬೈ ಪಡೆ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

 

Source link

Bengaluru Air Quality: ಉಡುಪಿ, ಮಂಗಳೂರಿನ ವಾಯುಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 30: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ  (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಬೆಂಗಳೂರಿನ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. 150ಕ್ಕಿಂತ ಜಾಸ್ತಿಯಿದ್ದ AQI ಕಡುಮೆಯಾಗಿದ್ದರೂ, ಇನ್ನೂ ಗುಣಮಟ್ಟ ಅನಾರೋಗ್ಯಕರವಾಗಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 152ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –152
  • ಮಂಗಳೂರು-126
  • ಮೈಸೂರು –152
  • ಬೆಳಗಾವಿ – 130
  • ಕಲಬುರ್ಗಿ-126
  • ಶಿವಮೊಗ್ಗ – 122
  • ಬಳ್ಳಾರಿ – 146
  • ಹುಬ್ಬಳ್ಳಿ- 118
  • ಉಡುಪಿ –134
  • ವಿಜಯಪುರ –90

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link