All posts by nagaraj11081993

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is better today

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ!

ಬೆಂಗಳೂರು, ಜನವರಿ 27: ಕಳೆದ ವರ್ಷದಿಂದಲೂ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಅಪಯಕಾರಿ ಹಂತದಲ್ಲೇ ಇತ್ತು. ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ.

ಬೆಂಗಳೂರಿನ ಏರ್ ಕ್ವಾಲಿಟಿ 129 ಇದ್ದು, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಂದಿನ ಮಟ್ಟಿಗೆ ವಾಯು ಗುಣಮಟ್ಟ ಚೇತರಿಸಿಕೊಂಡಿದೆ. ಆದರೂ ಇಂದಿಗೂ ಗಾಳಿಯು ಕಲುಷಿತವಾಗಿಯೇ ಇದ್ದು, ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –129
  • ಮಂಗಳೂರು-158
  • ಮೈಸೂರು –98
  • ಬೆಳಗಾವಿ – 118
  • ಕಲಬುರ್ಗಿ-141
  • ಶಿವಮೊಗ್ಗ – 130
  • ಬಳ್ಳಾರಿ – 153
  • ಹುಬ್ಬಳ್ಳಿ- 114
  • ಉಡುಪಿ –162
  • ವಿಜಯಪುರ –88

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕಮಲ್-ರಜನಿ ಚಿತ್ರದಿಂದ ಲೋಕೇಶ್ ಹೊರ ಹೋಗಿದ್ದೇಕೆ? – Kannada News | Lokesh Kanagaraj Reveals Why He Left Kamal Haasan and Rajinikanth Film Project

ಕಮಲ್ ಹಾಸನ್ ಹಾಗೂ ರಜನಿಕಾಂತ್ ಚಿತ್ರಕ್ಕೆ ಲೋಕೇಶ್ ಕನಗರಾಜ್ (Lokesh Kanagaraj) ನಿರ್ದೇಶನ ಮಾಡಬೇಕಿತ್ತು. ಆದರೆ, ಅವರು ಹೊರ ನಡೆದರು. ನಂತರ ಸುಂದರ್ ಸಿ ಬಂದರು. ಆದರೆ ಇಬ್ಬರೂ ಚಿತ್ರದಿಂದ ಹೊರಗುಳಿದರು. ಲೋಕೇಶ್ ಏಕೆ ಇಷ್ಟು ದೊಡ್ಡ ಅವಕಾಶವನ್ನು ಬಿಟ್ಟುಕೊಟ್ಟರು? ಇತ್ತೀಚೆಗೆ ಲೋಕೇಶ್ ಕನಕರಾಜ್ ಈ ಬಗ್ಗೆ ಮಾತನಾಡಿದ್ದಾರೆ.

ರಜನಿಕಾಂತ್ ಅವರ 173 ನೇ ಚಿತ್ರವಾಗಲಿರುವ ಈ ಕ್ರೇಜಿ ಪ್ರಾಜೆಕ್ಟ್ ಅನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆ ರಾಜ್‌ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ. ಆರಂಭದಲ್ಲಿ ಲೋಕೇಶ್ ಕನಕರಾಜ್ ಅವರಿಗೆ ಈ ಚಿತ್ರವನ್ನು ನಿರ್ದೇಶಿಸುವ ಅವಕಾಶ ನೀಡಲಾಯಿತು. ಲೋಕೇಶ್ ಈ ಕಥೆಯ ಮೇಲೆ ಸುಮಾರು ಒಂದೂವರೆ ತಿಂಗಳು ಶ್ರಮಿಸಿದರು. ಇಬ್ಬರು ದಂತಕಥೆಗಳ ಇಮೇಜ್‌ಗೆ ಸೂಕ್ತವಾದ ಶಕ್ತಿಶಾಲಿ ಸ್ಕ್ರಿಪ್ಟ್ ಅನ್ನು ಸಿದ್ಧಪಡಿಸಿ ಅವರಿಗೆ ಹೇಳಿದರು. ಕಥೆಯನ್ನು ಕೇಳಿದ ನಂತರ, ರಜನಿ ಮತ್ತು ಕಮಲ್ ಇಬ್ಬರೂ ತುಂಬಾ ಉತ್ಸುಕರಾಗಿದ್ದರು.

ಲೋಕೇಶ್ ಕನಕರಾಜ್ ಹೈ-ವೋಲ್ಟೇಜ್ ಆಕ್ಷನ್ ಚಿತ್ರಗಳನ್ನು ನಿರ್ದೇಶನ ಮಾಡುವ ನಿರ್ದೇಶಕ. ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಸತತವಾಗಿ ಆಕ್ಷನ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ರಜನಿಕಾಂತ್ ‘ಜೈಲರ್ 2’ ರವರೆಗೆ ಆಕ್ಷನ್ ಚಿತ್ರಗಳಲ್ಲಿ ನಿರತರಾಗಿದ್ದರೆ. ‘ನಾವು ಮತ್ತೆ ಆಕ್ಷನ್ ಚಿತ್ರ ಮಾಡಬೇಕೇ? ಈ ಬಾರಿ ಹಾಸ್ಯದ ಚಿತ್ರ ಮಾಡೋಣ’ ಎಂದು ಅವರಿಬ್ಬರೂ ಕೇಳಿದ್ದರು. ಆದರೆ ಲೋಕೇಶ್ ಅವರ ಶೈಲಿ ಆಕ್ಷನ್ ಚಿತ್ರಗಳಾಗಿರುವುದರಿಂದ, ಈ ರೀತಿಯ ಚಿತ್ರಗಳನ್ನು ಮಾಡುವುದಿಲ್ಲ ಎಂದರು. ಹೀಗಾಗಿ, ಅವರು ಸಿನಿಮಾದಿಂದ ಹೊರನಡೆದರು ಎಂದು ಅವರು ರಿವೀಲ್ ಮಾಡಿದ್ದಾರೆ.

ಇದನ್ನೂ ಓದಿ: ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ರಚಿತಾ ರಾಮ್?

ಲೋಕೇಶ್ ಕನಕರಾಜ್ ಆಕ್ಷನ್ ಬಯಸಿದರೆ, ರಜನಿ-ಕಮಲ್ ಮನರಂಜನೆಯನ್ನು ಆರಿಸಿಕೊಂಡಿದ್ದಾರೆ. ಈ ಕಾರಣದಿಂದ ಸಿನಿಮಾ ಮಾಡುವ ಅವಕಾಶ ಲೋಕೇಶ್​​​ಗೆ ಕೈ ತಪ್ಪಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುದೀಪ್​​ಗೆ ನಾನೇ ಫೇವರಿಟ್; ಹೆಮ್ಮೆಯಿಂದ ಹೇಳಿಕೊಂಡ ಸತೀಶ್ – Kannada News | BBK 12: Dog Satish Claims Sudeep’s Favorite Status; His Viral Finale Statements Explained

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿ ಡಾಗ್ ಸತೀಶ್ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರು ಮೂರನೇ ವಾರವೇ ಹೊರ ಹೋದರು ಎಲ್ಲಾ ರೀತಿಯಲ್ಲೂ ಚರ್ಚೆಯಲ್ಲಿರುವ ಪ್ರಯತ್ನಮಾಡುತ್ತಿದ್ದಾರೆ. ಈಗ ಸತೀಶ್ ಅವರು ಫಿನಾಲೆ ದಿನ ಸುದೀಪ್ ಅವರು 12 ಬಾರಿ ಮಾತನಾಡಿಸಿದ್ದಾಗಿ ಹೇಳಿದ್ದಾರೆ. ಯಾವ ಸ್ಪರ್ಧಿಯನ್ನೂ ಅವರು ಇಷ್ಟು ಮಾತನಾಡಿಸಿಲ್ಲ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಈ ಮೂಲಕ ಸುದೀಪ್​ ಅವರಿಗೆ ನಾನೇ ಫೇವರಿಟ್ ಸ್ಪರ್ಧಿ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಸತೀಶ್ ಅವರ ಕ್ಯಾರೆಕ್ಟರ್ ತುಂಬಾನೇ ವಿಚಿತ್ರ. ಅವರು ಯಾವುದೇ ವಿಷಯ ಸಿಕ್ಕರೂ ಅದರಿಂದ ಮೈಲೇಜ್ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಾರೆ. ಈಗ ಅವರು ಬಿಗ್ ಬಾಸ್ ಫಿನಾಲೆ ಬಗ್ಗೆ ಮಾತನಾಡಿದ್ದಾರೆ. ‘ಫಿನಾಲೆ ದಿನ ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ನನ್ನನ್ನು 18 ಬಾರಿ ಮಾತನಾಡಿಸಿದರು. ಉಳಿದ ಸ್ಪರ್ಧಿಗಳನ್ನು ಒಮ್ಮೆಯೂ ಮಾತನಾಡಿಸಿಲ್ಲ’ ಎಂದು ಹೇಳಿದ್ದಾರೆ.

ಸತೀಶ್ ಅವರು ಪಾರ್ಟಿ ಆಯೋಜನೆ ಮಾಡುತ್ತಿದ್ದಾರಂತೆ. ಗಿಲ್ಲಿಯನ್ನು ಈ ಪಾರ್ಟಿಗೆ ಅವರು ಕರೆಯೋದಿಲ್ಲವಂತೆ. ‘ನಾನು ಎಲ್ಲರಿಗೂ ಗೆಟ್ ಟುಗೆದರ್ ರೀತಿ ಪಾರ್ಟಿ ಆಯೋಜನೆ ಮಾಡುತ್ತಿದ್ದೇನೆ. ಗಿಲ್ಲಿನ ಇದಕ್ಕೆ ಕರೆಯಲ್ಲ. ಉಳಿದ ಸ್ಪರ್ಧಿಗಳು ಬರುತ್ತಾ ಬಿಡ್ತಾರೋ ಅವರಿಗೆ ಬಿಟ್ಟಿದ್ದು’ ಎಂದು ಸತೀಶ್ ಹೇಳಿದ್ದಾರೆ.

ಇದನ್ನೂ ಓದಿ: ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೇ ಇಟ್ಟುಕೊಂಡು ಬಡಾಯಿಕೊಚ್ಚಿಕೊಂಡ ಸತೀಶ್

‘ನಿಮಗೆ ಶೇಕ್​ಹ್ಯಾಂಡ್ ಮಾಡೋ ವಿಡಿಯೋ ಹಾಕಿದ್ರೆ ಲಕ್ಷ ಲಕ್ಷ ವೀವ್ಸ್ ಬರುತ್ತದೆ’ ಎಂದು ಸುದೀಪ್ ಹೇಳಿದ್ದರು. ಇದನ್ನು ಸುದೀಪ್ ಹೇಳಿದ್ದು ವ್ಯಂಗದ ರೀತಿಯಲ್ಲಿ. ಆದರೆ, ಇದನ್ನು ಸತೀಶ್ ಪಾಸಿಟಿವ್ ಆಗಿ ತೆಗೆದುಕೊಂಡಿದ್ದಾರೆ. ‘ಸುದೀಪ್ ನನ್ನ ಬಗ್ಗೆ ಹೀಗೆ ಹೇಳಿದ್ದಾರೆ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತುಂಗಭದ್ರಾ ಡ್ಯಾಂ ಕ್ರೆಸ್ಟ್​ ಗೇಟ್​ ಅಳವಡಿಕೆಗೆ ನೀಡಿದ್ದ 10 ಕೋಟಿ ರೂ. ವಾಪಸ್ ಪಡೆಯಿತಾ ಸರ್ಕಾರ? ಬಿಜೆಪಿ ಗಂಭೀರ ಆರೋಪ – Kannada News | Did Karnataka Government Withdraw Rs 10 Crore for Tungabhadra Dam Crest Gates? BJP Makes Serious Allegations

ತುಂಗಭದ್ರಾ ಡ್ಯಾಂ ಕ್ರೆಸ್ಟ್​ ಗೇಟ್​ ಅಳವಡಿಕೆ ಕಾಮಗಾರಿ

ಕೊಪ್ಪಳ, ಜನವರಿ 27: ತುಂಗಭದ್ರಾ ಜಲಾಶಯ (Tungabhadra Dam) 4 ಜಿಲ್ಲೆಯ ಜನರ ದಾಹ ನೀಗಿಸುವ, ಅನ್ನದಾತರ ಬದುಕನ್ನು ಹಸಿರಾಗಿಸುವ ಒಡಲು. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ಟಿಬಿ ಡ್ಯಾಮ್​ ಗೇಟ್ ಅಳವಡಿಕೆಯ ವಿಚಾರ ಮತ್ತೊಮ್ಮೆ ಸದ್ದು ಮಾಡಿದೆ. ಮಳೆಗಾಲದಲ್ಲಿ ಜಲಾಶಯದ 19ನೇ ಕ್ರೆಸ್ಟ್​ ಗೇಟ್ ಕೊಚ್ಚಿ ಹೋಗಿತ್ತು. ಅಲ್ಲದೇ, ಜಲಾಶಯದ 6 ಗೇಟ್​ಗಳಿಗೆ ಹಾನಿಯಾಗಿವೆ ಎಂಬುದು ತಿಳಿದುಬಂದಿತ್ತು. ಹೀಗಾಗಿ ರಾಜ್ಯ ಸರ್ಕಾರ 54 ಕೋಟಿ ರೂ. ವೆಚ್ಚದಲ್ಲಿ 33 ಕ್ರೆಸ್ಟ್ ಗೇಟ್​ಗಳ ಬದಲಾವಣೆಗೆ ಆದೇಶ ನೀಡಿತ್ತು. ಗುಜರಾತ್ ಮೂಲದ ಕಂಪನಿಗೆ ಗೇಟ್ ಅಳವಡಿಕೆಗೆ ಟೆಂಡರ್ ನೀಡಲಾಗಿದ್ದು ಡಿಸೆಂಬರ್​​​ನಲ್ಲಿ ಕಾಮಗಾರಿ ಆರಂಭವಾಗಿದೆ.

ಗೇಟ್ 18ಕ್ಕೆ ಮಾತ್ರ ಕ್ರೆಸ್ಟ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಇನ್ನೂ 32 ಕ್ರೆಸ್ಟ್ ಗೇಟ್ ಅಳವಡಿಕೆ ಬಾಕಿ ಇದೆ. ಗೇಟ್ ಕಾಮಗಾರಿಗೆ ನೀಡಿದ್ದ 10 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಇದನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದೆ.

ಆಂಧ್ರ, ತೆಲಂಗಾಣದಿಂದಲೂ ಹಣ

ರಾಜ್ಯ ಸರ್ಕಾರ ಟಿಬಿ ಜಲಾಶಯದ ಕ್ರೆಸ್ಟ್ ಗೇಟ್ ಅಳವಡಿಕೆ ಕಾಮಗಾರಿಗೆ 10 ಕೋಟಿ ರೂ. ನೀಡಿತ್ತು. ಇನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರ 25 ಕೋಟಿ ರೂ. ನೀಡಿವೆ ಎನ್ನಲಾಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ 10 ಕೋಟಿ ರೂ. ವಾಪಸ್ ಪಡೆದಿದೆ ಎಂಬ ಆರೋಪವಿದೆ. ಅಧಿಕಾರಿಗಳು, ಎಲ್ಲವೂ ಟಿಬಿ ಬೋರ್ಡ್​​ಗೆ ಗೊತ್ತಿದೆ ಎನ್ನುತ್ತಿದ್ದಾರೆ.

ಏತನ್ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿ ಆರೋಪವನ್ನು
ತಳ್ಳಿಹಾಕಿದ್ದು ನಾವು ಹಣ ವಾಪಸ್ ಪಡೆದಿಲ್ಲ. ಆದರೆ ಖಜಾನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಆಗಿದ್ದರೂ ಹಣ ಕೊಡಲೇಬೇಕು. ಫೆಬ್ರವರಿ ಅಂತ್ಯಕ್ಕೆ 6 ಕ್ರೆಸ್ಟ್ ಗೇಟ್​​ ಫಿಕ್ಸ್ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ?

ಈಗಾಗಲೇ 2ನೇ ಬೆಳೆಗೆ ಟಿಬಿ ಡ್ಯಾಮ್​ನಿಂದ ರೈತರಿಗೆ ನೀರು ಕೊಟ್ಟಿಲ್ಲ. ಹಣ ನೀಡದಿದ್ದರೆ ಕಾಮಗಾರಿ ವಿಳಂಬ ಆಗಲಿದೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ಹಣ ವಾಪಸ್ ಪಡೆದಿರುವ ಆರೋಪದಿಂದ ಇದೀಗ ರಾಜಕೀಯ ಕದನ ಏರ್ಪಟ್ಟಿದ್ದು, ಇದು ಇನ್ಯಾವ ಹಂತಕ್ಕೆ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೀ ಕನ್ನಡದಲ್ಲಿ ಆರಂಭ ಆಗ್ತಿದೆ ಎರಡು ಹೊಸ ಧಾರಾವಾಹಿ; ಮುಗಿಯೋ ಸೀರಿಯಲ್​​ಗಳು ಯಾವವು? – Kannada News | Zee Kannada: New Serials Krishna Rukku, Jagaddhatri. Amrutha Dhare, Puttakkana Makkalu Ending?

ಜೀ ಕನ್ನಡ ವಾಹಿನಿಯು ಹೊಸ ಹೊಸ ಧಾರಾವಾಹಿಗಳು ಹಾಗೂ ಶೋಗಳನ್ನು ಪ್ರೇಕ್ಷಕರ ಎದುರು ಇಡುತ್ತಲೇ ಬರುತ್ತಿದೆ. ಈಗ ಜೀ ಕನ್ನಡದಲ್ಲಿ ಸಾಕಷ್ಟು ಉತ್ತಮ ಧಾರಾವಾಹಿಗಳು ಪ್ರಸಾರ ಕಾಣುತ್ತಿದ್ದು, ಟಿಆರ್​​ಪಿಯಲ್ಲಿ ಮೊದಲ ಸ್ಥಾನವನ್ನು ಗಳಿಸಿಕೊಳ್ಳುತ್ತಿವೆ. ಹೀಗಿರುವಾಗಲೇ ಎರಡು ಹೊಸ ಧಾರಾವಾಹಿಗಳು ಪ್ರಸಾರ ಕಾಣಲು ರೆಡಿ ಆಗಿವೆ. ಆ ಧಾರಾವಾಹಿಗಳು ಯಾವವು? ಮುಗಿಯುವ ಧಾರಾವಾಹಿಗಳು ಯಾವವು ಎಂಬುದನ್ನು ಇಲ್ಲಿ ನೋಡೋಣ.

ಜೀ ಕನ್ನಡ ವಾಹಿನಿಯು ಎರಡು ಹೊಸ ಧಾರಾವಾಹಿಗಳ ಪ್ರೋಮೋನ ಹಂಚಿಕೊಂಡಿದೆ. ‘ಕೃಷ್ಣ ರುಕ್ಕು’ ಎಂಬುದು ಧಾರಾವಾಹಿಯ ಹೆಸರು. ಇದರಲ್ಲಿ ಯಾರು ನಟಿಸುತ್ತಿದ್ದಾರೆ ಎಂಬಿತ್ಯಾದಿ ಮಾಹಿತಿ ರಿವೀಲ್ ಆಗಿಲ್ಲ. ಜಗದ್ಧಾತ್ರಿ ಹೆಸರಿನ ಧಾರಾವಾಹಿ ಕೂಡ ಬರುತ್ತಿದೆ. ಈ ಧಾರಾವಾಹಿ ಪ್ರೋಮೋಗೆ ‘ಇವಳು ಮನೆ ಬೆಳಗೋ ದೀಪವೂ ಹೌದು, ಅಧರ್ಮಕ್ಕೆ ಅಂತ್ಯ ಹಾಡೋ ಜ್ವಾಲೆಯೂ ಹೌದು’ ಎಂಬ ಕ್ಯಾಪ್ಶನ್ ನೀಡಲಾಗಿದೆ. ಈ ಧಾರಾವಾಹಿಯಲ್ಲಿ ಮಹಿಳೆ ಪಾತ್ರ ಪ್ರಾಮುಖ್ಯತೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಇದು ಹೊಸ ರೀತಿಯ ಪ್ರಯೋಗ ಇದ್ದರೂ ಇರಬಹುದು ಎನ್ನಲಾಗುತ್ತಿದೆ.

ಇನ್ನು, ಎರಡು ಧಾರಾವಾಹಿಗಳು ಪೂರ್ಣಗೊಳ್ಳುತ್ತಿವೆ ಎಂದಾಗ ಎರಡು ಹೊಸ ಧಾರಾವಾಹಿಗಳು ಪೂರ್ಣಗೊಳ್ಳಬಹುದು. ಅವು ಯಾವವವು ಎಂಬ ಪ್ರಶ್ನೆ ಮೂಡಿದೆ. ಈಗಾಗಲೇ ‘ಅಮೃತಧಾರೆ’ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪೋ ರೀತಿ ಕಾಣುತ್ತಿದೆ. ಗೌತಮ್ ಹಾಗೂ ಭೂಮಿಕಾ ಒಂದಾಗಿ ಆಗಿದೆ. ಇನ್ನು, ಜಯದೇವ್ ಹಾಗೂ ತಂಡಕ್ಕೆ ಪಾಠ ಕಲಿಸಿದರೆ ಮುಗಿಯಿತು. ಹೀಗಾಗಿ, ಧಾರಾವಾಹಿ ಪೂರ್ಣಗೊಳ್ಳುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮುರಿದು ಬಿತ್ತು ‘ರಾಧಾ ರಮಣ’ ಧಾರಾವಾಹಿ ನಟಿ ಅನುಷಾ ಹೆಗಡೆ ದಾಂಪತ್ಯ

‘ಪುಟ್ಟಕ್ಕನ್ನ ಮಕ್ಕಳು’ ಧಾರಾವಾಹಿ ಕೂಡ ಪ್ರಸಾರ ಆರಂಭಿಸಿ ಹಲವು ವರ್ಷಗಳು ಕಳೆದಿವೆ. ಸಾವಿರಾರು ಎಪಿಸೋಡ್ ಪ್ರಸಾರಕಂಡಿದೆ. ಈ ಕಾರಣದಿಂದ ಈ ಧಾರಾವಾಹಿ ಕೂಡ ಪೂರ್ಣಗೊಂಡರೂ ಅಚ್ಚರಿ ಏನಿಲ್ಲ ಬಿಡಿ. ಹೀಗಾಗಿ. ಇದೆರಡು ಧಾರಾವಾಹಿಗಳು ಕೊನೆಗೊಳ್ಳಬಹುದು ಎಂಬುದು ಅನೇಕರ ಊಹೆ. ಈ ಬಗ್ಗೆ ವಾಹಿನಿ ಕಡೆಯಿಂದ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:50 am, Tue, 27 January 26

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಶೀತದ ವಾತಾವರಣ, ಒಣ ಹವೆ – Kannada News | Bengaluru temperature: Dry weather all over the karnataka, Misty weather in Bengaluru

ರಾಜ್ಯದೆಲ್ಲೆಡೆ ಶೀತದ ವಾತಾವರಣ, ಒಣ ಹವೆ

ಬೆಂಗಳೂರು, ಜನವರಿ 27: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಿನ್ನೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸತತ ಸೋಲು… RCBಗೆ ನೇರವಾಗಿ ಫೈನಲ್​ಗೇರಲು ಇರೋದು ಇದೊಂದೇ ದಾರಿ

Source link

Horoscope Today 27 January: ಇಂದು ಈ ರಾಶಿಯವರ ಕೆಲಸ ಕಾರ್ಯಗಳಲ್ಲಿ ಸಿದ್ಧಿ – Kannada News | Daily Horoscope for January 27th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 27 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಮಂಗಳವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ನವಮಿ ಜೊತೆಗೆ ರೇವತಿ ನಕ್ಷತ್ರ ಮತ್ತು ಬಾಲವ ಕರಣ ಹೊಂದಿದ್ದು, ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿ ರಾಶಿಯವರು ಎದುರಿಸಬಹುದಾದ ಸವಾಲುಗಳು ಮತ್ತು ಪಡೆಯಬಹುದಾದ ಅವಕಾಶಗಳನ್ನು ವಿವರಿಸಲಾಗಿದೆ.

 

 

 

 

Source link

Daily Devotional: ಯಾವ ಸಮಸ್ಯೆಗೆ ಯಾವ ಪೂಜೆ ಮಾಡಬೇಕು ಗೊತ್ತಾ? – Kannada News | Daily Devotional: Worshipping God according to your problems

ಬೆಂಗಳೂರು, ಜನವರಿ 27: ಮಾನವನ ಜೀವನದಲ್ಲಿ ಯಾವ ರೀತಿ ಸಮಸ್ಯೆ ಬಂದರೆ ಯಾವ ರೀತಿ ದೇವರನ್ನು ಪೂಜಿಸಬೇಕೆಂದು ಡಾ.ಬಸವರಾಜ್ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಸೂರ್ಯ, ಚಂದ್ರ ಸೇರಿದಂತೆ ಎಲ್ಲಾ ಗ್ರಹಗಳ ದೋಷವಿದ್ದಲ್ಲಿ, ಆ ಗ್ರಹಕ್ಕೆ ಸಂಬಂಧಿಸಿದ ದಿನದಂದು ಭಕ್ತಿಪೂರ್ವಕವಾಗಿ ನಿರ್ದಿಷ್ಟ ನಿಯಮವನ್ನು ಅನುಸರಿಸಿ ಸ್ನಾನ ಮಾಡುವುದರಿಂದಲೇ ದೋಷ ಪರಿಹಾರವಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ದೇವಸ್ಥಾನಕ್ಕೆ ಹೋಗುವುದು, ದಾನ-ಧರ್ಮ ಮಾದುವುದು, ವೃತಗಳನ್ನು ಮಾಡುವುದರ ಜೊತೆಗೆ ಕೆಲವೊಂದು ಹೋಮ ಹವನ, ಉಪಾಯಗಳ ಮೂಲಕವೂ ಸಂಕಷ್ಟಗಳು ಬಗೆರಿಯುತ್ತವೆ ಎಂದು ಗುರೂಜಿ ಹೇಳಿದ್ದಾರೆ.

 

Source link

400 ಕೋಟಿ ಮಾಲೀಕ ಗುಜರಾತ್ ರಾಜಕಾರಣಿಯಾ? ದೇಶದ ಅತಿದೊಡ್ಡ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್! – Kannada News | Rs 400 Crore Robbery Case Takes stunning Twist: Is a Gujarat Politician the Real Owner? Debate sparked in Karnataka

ಬೆಳಗಾವಿ, ಜನವರಿ 27: ಗೋವಾದಿಂದ ಬೆಳಗಾವಿ (Belagavi) ಚೋರ್ಲಾ ಮಾರ್ಗವಾಗಿ ಎರಡು ಕಂಟೇನರ್‌ಗಳಲ್ಲಿ ಸಾಗಿಸಲಾಗುತ್ತಿದ್ದ 400 ಕೋಟಿ ರೂ. ಹಣವನ್ನು ಕಳೆದ ಅಕ್ಟೋಬರ್​​​ನಲ್ಲಿ ಹೈಜಾಕ್ (400 crore robbery case) ಮಾಡಲಾಗಿತ್ತು ಎಂಬ ಪ್ರಕರಣ ಸಂಬಂಧ ಇದೀಗ ಮತ್ತೊಂದು ಮಾಹಿತಿ ಹೊರಬಿದ್ದಿದೆ. 2 ಸಾವಿರ ರೂಪಾಯಿ ಮೌಲ್ಯದ ಸುಮಾರು 400 ಕೋಟಿ ರೂಪಾಯಿ ಹಳೇ ನೋಟುಗಳನ್ನು ತುಂಬಿದ್ದ ಟ್ರಕ್ ದರೋಡೆ ಮಾಡಲಾಗಿತ್ತು ಎಂಬ ಆರೋಪವಿದೆ. ಇದೀಗ ಈ ಹಣದ ಹಿಂದೆ ಗುಜರಾತ್ ರಾಜಕಾರಣಿ ಹೆಸರು ಕೇಳಬಂದಿದ್ದು, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

ದರೋಡೆಯಾದ ಹಣ ಮಹಾರಾಷ್ಟ್ರ ಪಾಲಿಕೆ ಚುನಾವಣೆಗೆ ಬಳಕೆ ಆಗಿದೆ. ನೋಟು ಬದಲಾವಣೆ ದಂಧೆ ನಡೆದಿದೆ, ಹಣ ಇವರದ್ದೇ ಇರಬೇಕು, ಅವರದ್ದೇ ಇರಬೇಕು ಎಂದು ಪರಸ್ಪರ ಕೆಸರೆರಚಾಟ ತಾರಕಕ್ಕೇರಿದೆ.

ಕಾಂಗ್ರೆಸ್​​​ನವರೇ ಹಣ ಕಳುಹಿಸಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದು, ಅವರ ಮಾತಿಗೆ ಮಾತಿಗೆ ಮಾಜಿ ಸಿಎಂ ಸದಾನಂದಗೌಡ ಧ್ವನಿಗೂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಣ ಸಂಗ್ರಹ ಮಾಡುತ್ತದೆ, ಬೇರೆ ಬೇರೆ ಕಡೆ ಕಳಿಸಿಕೊಡುತ್ತದೆ ಎಂದಿದ್ದಾರೆ. ಈ ಮಾತಿಗೆ ಗರಂ ಆದ, ಸಚಿವ ಭೈರತಿ ಸುರೇಶ್, ನೋಟ್ ಮೇಲೆ ಕಾಂಗ್ರೆಸ್ ಎಂದು ಬರೆದಿದೆಯಾ ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದೆಡೆ, ಹಣ ಸಾಗಾಟಕ್ಕೆ ಸಂಬಂಧಿಸಿದ ಮೂರೂ ರಾಜ್ಯಗಳಲ್ಲೂ ಬಿಜೆಪಿಯೇ ಅಧಿಕಾರದಲ್ಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಧಾನಿ ಮೋದಿಗೆ ಕಲಬುರಗಿಯಲ್ಲಿ ರೊಟ್ಟಿ ಮಾಡುವವರ ಬಗ್ಗೆ ಗೊತ್ತಾಗುತ್ತದೆ. ದರೋಡೆ ಬಗ್ಗೆ ಯಾಕೆ ಗೊತ್ತಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿಯ ಗಡಿಭಾಗದಲ್ಲೇ ನಾಪತ್ತೆಯಾದ 400 ಕೋಟಿ ರೂ. ಬಗ್ಗೆ ಜಿಲ್ಲೆಯ ಸಚಿವರು ಪ್ರಶ್ನೆ ಎತ್ತಿದ್ದಾರೆ. ಮಹಾರಾಷ್ಟ್ರ ಪೊಲೀಸರೇ ನಮ್ಮ ಪೊಲೀಸರಿಗೆ ಸಹಕಾರ ಕೊಡುತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.

400 ಕೋಟಿ ರೂ. ಹಣ ಗುಜರಾತ್ ರಾಜಕಾಣಿಗೆ ಸೇರಿದ್ದಾ?

ದರೋಡೆಯಾಗಿತ್ತು ಎನ್ನಲಾದ 400 ಕೋಟಿ ರೂ. ಹಣಕ್ಕೆ ಸಂಬಂಧಿಸಿದಂತೆ ಜಯೇಶ್ ಎಂಬಾತನ ಜೊತೆ ಮಹಾರಾಷ್ಟ್ರದ ಉದ್ಯಮಿ ಕಿಶೋರ್ ಮಾತನಾಡಿದ್ದಾನೆ ಎನ್ನಲಾದ ಆಡಿಯೋವೊಂದು ಸೋಮವಾರ ಬಹಿರಂಗವಾಗಿದೆ. ಅದರಲ್ಲ, ನನ್ನ ಮತ್ತು ವಿರಾಟ್‌ಗೆ ಪರಿಚಯವಿದ್ದ ವ್ಯಕ್ತಿ ಮಧ್ಯಸ್ಥಿಕೆ ವಹಿಸಿದ್ದಾರೆ. ಈ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿ ಗುಜರಾತ್‌ನ ದೊಡ್ಡ ರಾಜಕಾರಣ ಎಂದು ಹೇಳಲಾಗಿದೆ. ಹೀಗಾಗಿ ದರೋಡೆಯಾಗಿರುವ ಹಣ ಗುಜರಾತ್ ರಾಜಕಾಣಿಗೆ ಸೇರಿದ್ದಾ ಎಂಬ ಪ್ರಶ್ನೆ ಮೂಡಿದೆ. ಇದುವೇ ರಾಜಕೀಯ ಜಟಾಪಟಿಗೂ ಕಾರಣವಾಗಿದೆ.

ಆಡಿಯೋದಿಂದ ಹುಟ್ಟಿವೆ ಹಲವು ಪ್ರಶ್ನೆ

ಆಡಿಯೋ ಪ್ರಕಾರ ಕಿಶೋರ್ ಹಣ ಕಳುಹಿಸುತ್ತಿದ್ದ ಎನ್ನಬಹುದು. ಆದರೆ, ಗೋವಾದಲ್ಲಿ ಹಣ ಕೊಟ್ಟಿದ್ಯಾರು? ಆ ದುಡ್ಡು ಕಿಶೋರ್‌ನದ್ದೇನಾ? ಗುಜರಾತ್‌ ರಾಜಕಾರಣಿಗೆ ಹೋಗಿತ್ತಾ? ಅಥವಾ ಗುಜರಾತ್ ರಾಜಕಾರಣಿಯೇ ನೋಟು ಬದಲಾವಣೆಗೆ ಕೊಟ್ಟಿದ್ದರಾ ಎಂಬುದು ನಿಗೂಢವಾಗಿದೆ. ಗುಜರಾತ್ ರಾಜಕಾರಣಿ ಕೂಡಾ ಬೇರೆ ಹಣದ ವ್ಯವಸ್ಥೆ ಮಾಡಿ, ಈ ಬಗ್ಗೆ ಕಾಳಜಿ ವಹಿಸಿದ್ದಾರೆ ಎಂಬುದೂ ಆಡಿಯೋದಲ್ಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪ್ರಕರಣಲ್ಲಿ ಗೊಂದಲವಿದೆ. ನಮ್ಮ ಪೊಲೀಸರು ಮಹಾರಾಷ್ಟ್ರ ಪೊಲೀಸರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಮೊದಲಿಗೆ ಕಿಡ್ನಾಪ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು 400 ಕೋಟಿ ರೂ. ಮೂಲ ಬೆನ್ನತ್ತಿದ್ದಾರೆ.

ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​?

ಒಟ್ಟಿನಲ್ಲಿ, 400 ಕೋಟಿ ರೂ. ದರೋಡೆ ಪ್ರಕರಣದ ಬಗ್ಗೆ ಕರ್ನಾಟಕದಲ್ಲಿ ಎಫ್​ಐಆರ್ ದಾಖಲಾಗಿಲ್ಲ. ಆದರೂ ಮಹಾರಾಷ್ಟ್ರ, ಗೋವಾ ಪೊಲೀಸರ ಜೊತೆಗೆ ತನಿಖೆಗೆ ಇಳಿದಿದ್ದಾರೆ. ಈ ನಡುವೆ ರಾಜಕೀಯ ನಾಯಕರ ನಡುವೆ ವಾಕ್ಸಮರವೂ ಮುಂದುವರಿದಿದೆ. ಗುಜರಾತಿನ ರಾಜಕಾರಣಿ ಯಾರು ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link