All posts by nagaraj11081993

ದುಬಾರಿ ಸಂಭಾವನೆ, ‘ಕೈದಿ 2’ಗೆ ಫುಲ್ ಸ್ಟಾಪ್? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ನಿರ್ದೇಶಕ – Kannada News | Lokesh Kanagaraj Clears Kaithi 2 Rumors, Confirms LCU Future and Allu Arjun Film Plans

ನಿರ್ದೇಶಕ ಲೋಕೇಶ್ ಕನಗರಾಜ್ ಅವರು ದಕ್ಷಿಣದ ಖ್ಯಾತ ನಿರ್ದೇಶಕರಲ್ಲಿ ಒಬ್ಬರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಬಂದ ಅವರ ನಿರ್ದೇಶನದ ‘ಕೂಲಿ’ ಸೋಲು ಕಂಡಿತು. ಈಗ ಲೋಕೇಶ್ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಬಗ್ಗೆ ಕೇಳಿ ಬಂದ ವದಂತಿಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಲೋಕೇಶ್ ಕನಗರಾಜ್ ಅವರು ‘ಕೈದಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ರಿಲೀಸ್ ಆಗಿದ್ದು 2019ರಲ್ಲಿ. ಈ ಚಿತ್ರಕ್ಕೆ ಸೀಕ್ವೆಲ್ ತರೋದಾಗಿ ಘೋಷಣೆ ಮಾಡಿದ್ದರು. ಆದರೆ, ಸೀಕ್ವೆಲ್ ಬಗ್ಗೆ ಅವರ ಕಡೆಯಿಂದ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಅವರು 75 ಕೋಟಿ ರೂಪಾಯಿ ಸಂಭಾವನೆಗೆ ಬೇಡಿಕೆ ಇಟ್ಟಿರುವುದೇ ಸಿನಿಮಾ ನಿಲ್ಲಲು ಕಾರಣ ಎಂದೆಲ್ಲ ವದಂತಿಗಳು ಹಬ್ಬಿದ್ದವು. ಇದಕ್ಕೆ ಅವರು ಖಡಕ್ ಉತ್ತರ ನೀಡಿದ್ದಾರೆ. ಟೀಕಿಸಿದವರಿಗೆ ಅವರು ತಿರುಗೇಟು ಕೊಟ್ಟಿದ್ದಾರೆ.

‘ನಾನು ದೊಡ್ಡ ಸಂಭಾವನೆ ಕೇಳಿದ್ದಕ್ಕೆ ಕೈದಿ ಸೀಕ್ವೆಲ್ ನಿಂತಿದೆ ಎಂದೆಲ್ಲ ವದಂತಿ ಹಬ್ಬಿಸಲಾಗುತ್ತಿದೆ. ಲೋಕೇಶ್ ಕನಗರಾಜ್ ಸಿನಿಮ್ಯಾಟಿಕ್ ಯೂನಿವರ್ಸ್ ನಿಂತಿದೆ ಎಂದು ಹೇಳುತ್ತಿದ್ದಾರೆ. ಈ ವಿಷಯದಲ್ಲಿ ಸ್ಪಷ್ಟನೆ ನೀಡಲು ಬಯಸುತ್ತೇನೆ’ ಎಂದಿದ್ದಾರೆ ಲೋಕೇಶ್.

‘ಅಲ್ಲು ಅರ್ಜುನ್ ಸಿನಿಮಾ ಬಳಿಕ ನಾನು ಕೈದಿ 2 ಮಾಡುತ್ತೇನೆ. ಆ ಬಳಿಕ ವಿಕ್ರಮ್ 2 ಮಾಡುತ್ತೇನೆ. ನಂತರ ರೊಲೆಕ್ಸ್ ಬರಲಿದೆ. ಇದು ನನ್ನ ಕಮಿಟ್​​ಮೆಂಟ್. ಇದನ್ನು ಮಾಡದೇ ಚಿತ್ರರಂಗ ತೊರೆಯಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ

2027ರ ವೇಳೆಗೆ ‘ಕೈದಿ 2’ ಸಿನಿಮಾ ಸೆಟ್ಟೇರೋ ಸಾಧ್ಯತೆ ಇದೆ. ಈ ಚಿತ್ರಕ್ಕೆ ಕಾರ್ತಿ ಹೀರೋ. ಅವರಿಗೆ ಇತ್ತೀಚೆಗೆ ‘ಕೈದಿ 2’ ಬಗ್ಗೆ ಕೇಳಲಾಯಿತು. ಈ ವೇಳೆ ‘ನಿರ್ದೇಶಕರನ್ನು ಕೇಳಿ’ ಎಂದಿದ್ದರು. ಅವರಿಗೆ ನಿರ್ದೇಶಕರ ಬಗ್ಗೆ ಅಸಮಾಧಾನ ಸ್ಪಷ್ಟವಾಗಿ ಕಾಣಿಸುತ್ತಿತ್ತು. ಈಗ ಲೋಕೇಶ್ ಅವರ ಸ್ಪಷ್ಟನೆಯಿಂದ ಒಂದಷ್ಟು ಮಂದಿಗೆ ಖುಷಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉಪೇಂದ್ರ, ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾ ಜನವರಿ 30ಕ್ಕೆ ರಿಲೀಸ್ – Kannada News | Upendra Ramya starrer Raktha Kashmira releasing on 30 January

ಒಂದಷ್ಟು ವರ್ಷಗಳ ಹಿಂದೆಯೇ ‘ರಕ್ತ ಕಾಶ್ಮೀರ’ ಸಿನಿಮಾದ ಶೂಟಿಂಗ್ ನಡೆದಿತ್ತು. ಉಪೇಂದ್ರ (Upendra) ಹಾಗೂ ರಮ್ಯಾ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು. ಆದರೆ ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದು ತಡವಾಗಿತ್ತು. ಜನವರಿ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು (SV Rajendra Singh Babu) ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಎಂಡಿಎಂ ಪ್ರೊಡಕ್ಷನ್ಸ್’ ಮೂಲಕ ‘ರಕ್ತ ಕಾಶ್ಮೀರ’ (Raktha Kashmira) ಸಿನಿಮಾ ನಿರ್ಮಾಣ ಆಗಿದೆ. ಮುಖೇಶ್ ರಿಶಿ, ದೊಡ್ಡಣ್ಣ, ಓಂ ಪ್ರಕಾಶ್ ರಾವ್, ತೆಲುಗು ನಟಿ ಅನಿಲ, ಕುರಿ ಪ್ರತಾಪ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.

ಮಾರ್ಸ್ ಸುರೇಶ್ ಅವರು ‘ರಕ್ತ ಕಾಶ್ಮೀರ’ ಸಿನಿಮಾವನ್ನು ರಾಜ್ಯಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದೇಶಭಕ್ತಿ ಕಥಾಹಂದರ ಇದೆ. ಗಣರಾಜ್ಯೋತ್ಸವದ ವಾರದಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ‌‌‌.

ಪಾಕ್ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲದೇ, ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ ನಡೆಸಿ ಸಾವಿರಾರು ಜನರನ್ನು ಹತ್ಯೆ ಮಾಡಿರುತ್ತಾರೆ. ಇದರಿಂದ ನೊಂದ ಚಿತ್ರದ ನಾಯಕ ಮತ್ತು ನಾಯಕಿ ಬೆಂಗಳೂರಿನಿಂದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಗಿ ಅಲ್ಲಿರುವ ಉಗ್ರರನ್ನು ಮಟ್ಟಹಾಕುವ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ.

‘ರಕ್ತ ಕಾಶ್ಮೀರ’ ಚಿತ್ರಕ್ಕೆ ಕಾಶ್ಮೀರದಲ್ಲೇ ಒಂದು ತಿಂಗಳಿಗೂ ಹೆಚ್ಚು ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಸಾಕಷ್ಟು ಮಕ್ಕಳು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ದೇಶಪ್ರೇಮ ಸಾರುವ ಈ ಚಿತ್ರವು ಕುಟುಂಬ ಸಮೇತ ನೋಡುವಂತಿದೆ ಎಂದು ಚಿತ್ರತಂಡ ಹೇಳಿದೆ. ಈ ಸಿನಿಮಾದ ಮತ್ತೊಂದು ವಿಶೇಷ ಏನೆಂದರೆ, ಹದಿನೆಂಟು ನಿಮಿಷಗಳ ಒಂದು ಹಾಡು ಇದರಲ್ಲಿದೆ!

ಇದನ್ನೂ ಓದಿ:  35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ

18 ನಿಮಿಷಗಳ ವಿಶೇಷ ಹಾಡಿನಲ್ಲಿ ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್​ಕುಮಾರ್, ಶ್ರೀನಾಥ್, ದರ್ಶನ್, ಪುನೀತ್ ರಾಜ್​ಕುಮಾರ್, ಜಗ್ಗೇಶ್, ರಮೇಶ್ ಅರವಿಂದ್, ಉಪೇಂದ್ರ, ಜೈ ಜಗದೀಶ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ. ಇದು ಈವರೆಗೂ ಯಾರೂ ಮಾಡಿರದ ದಾಖಲೆ‌ ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ. ಗುರುಕಿರಣ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Leopard Enters At A House At Naduru Village In Udupi, Panic Grips Residents

ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ ಸೆರೆಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಗ್ಯಾಸ್‌ನಲ್ಲಿಟ್ಟ ಹಾಲು ಉಕ್ಕಿ ಚೆಲ್ಲಬಾರದಂದರೆ ಈ ಸಿಂಪಲ್‌ ಸಲಹೆ ಪಾಲಿಸಿದರೆ ಸಾಕು – Kannada News | Follow this tip to prevent milk from spilling on the stove

ಗ್ಯಾಸ್‌ನಲ್ಲಿ ಹಾಲಿಟ್ಟು ಎಷ್ಟೇ ಹೊತ್ತು ನಿಂತಿದ್ದರೂ ಹಾಲು (milk) ಕುದಿಯೋದೇ ಇಲ್ಲ. ಅದೇ ಒಂದು ಕ್ಷಣಕ್ಕೆ ಅತ್ತಿಂದ ಇತ್ತ ಹೋಗಿ ಬಂದರೆ ಸಾಕು ಹಾಲು ಉಕ್ಕಿ ಚೆಲ್ಲಿರುತ್ತದೆ. ಈ ಒಂದು ಸಣ್ಣ ತಪ್ಪಿನಿಂದಾಗಿ ಹಾಲು ವ್ಯರ್ಥವಾಗುವುದಲ್ಲದೆ ಗ್ಯಾಸ್‌ ಸ್ಟೌವ್‌ ಕೊಳಕಾಗುತ್ತದೆ, ಇನ್ನೂ ಉಕ್ಕಿ ಬಂದ ಹಾಲನ್ನು ಹಾಗೆಯೇ ಬಿಟ್ಟರೆ, ಒಣಗಿ ಹೋಗುತ್ತದೆ, ನಂತರ ಇದನ್ನು ಸ್ವಚ್ಛಗೊಳಿಸಲು ಕಷ್ಟವಾಗುತ್ತದೆ. ಆದ್ದರಿಂದ ಹಲವು ಮಂದಿ ಹಾಲು ಬಿಸಿ ಮಾಡುವಾಗ ಸ್ಟೌವ್‌ ಬಿಟ್ಟು ಕದಲುವುದಿಲ್ಲ. ಹೀಗಿರುವಾಗ ಈ ಕೆಲವೊಂದು ಸರಳ ತಂತ್ರಗಳನ್ನು ಅಳವಡಿಸಿಕೊಂಡರೆ ಹಾಲು ಕುದಿಯಲು ಬಿಟ್ಟು ಸ್ವಲ್ಪ ಹೊತ್ತು ಅತ್ತ ಕಡೆ ಹೋಗಿ ಬಂದರೂ ಹಾಲು ಉಕ್ಕಿ ಚೆಲ್ಲುವುದಿಲ್ಲ. ಆ ಸರಳ ಸಲಹೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಗ್ಯಾಸ್‌ನಲ್ಲಿಟ್ಟ ಹಾಲು ಉಕ್ಕಿ ಚೆಲ್ಲದಿರಲು ಈ ಸಲಹೆಯನ್ನು ಪಾಲಿಸಿ:

  • ಹಾಲು ಕುದಿಯಲು ಪ್ರಾರಂಭಿಸಿದ ನಂತರ, ಹಾಲಿನ ಪಾತ್ರೆಯ ಮೇಲೆ ಅಡ್ಡಲಾಗಿ ಒಂದು ಚಮಚವನ್ನು ಇರಿಸಿ. ಹಾಲು ಕುದಿಯಲು ಪ್ರಾರಂಭಿಸಿ ನೊರೆ ಏರಿದಾಗ, ಅದು ಚಮಚದ ಸ್ಪರ್ಶಿಸುತ್ತದೆ. ಇದರಿಂದ ಹಾಲು ಉಕ್ಕಿ ಹೋಗುವುದನ್ನು ತಡೆಯಬಹುದು. ಇದು ಅತ್ಯಂತ ಹಳೆಯ ಮತ್ತು ಅತ್ಯಂತ ಪರಿಣಾಮಕಾರಿ ಪರಿಹಾರಗಳಲ್ಲಿ ಒಂದಾಗಿದೆ.
  • ಗ್ಯಾಸ್‌ನಲ್ಲಿಟ್ಟ ಹಾಲು ಚೆಲ್ಲುವುದನ್ನು ತಡೆಯಲು ಹಾಲು ಕುದಿಸುವ ಮೊದಲು, ಪಾತ್ರೆಯ ಮೇಲಿನ ಭಾಗದ ಒಳ ಅಂಚುಗಳಿಗೆ ಸ್ವಲ್ಪ ತುಪ್ಪ ಅಥವಾ ಬೆಣ್ಣೆಯನ್ನು ಹಚ್ಚಿ. ಹೀಗೆ ಮಾಡಿದಾಗ ಹಾಲಿನ ನೊರೆ ಆ ಪ್ರದೇಶವನ್ನು ಮೀರಿ ಉಕ್ಕಿ ಹೋಗುವುದಿಲ್ಲ.
  • ಹೆಚ್ಚಿನ ಶಾಖವು ಹಾಲು ವೇಗವಾಗಿ ಕುದಿಯಲು ಕಾರಣವಾಗುತ್ತದೆ, ಇದು ನೊರೆ ರಚನೆಯನ್ನು ವೇಗಗೊಳಿಸುತ್ತದೆ. ಇದನ್ನು ತಡೆಗಟ್ಟಲು, ಯಾವಾಗಲೂ ಹಾಲು ಕಡಿಮೆ ಶಾಖದ ಮೇಲೆ ಕುದಿಸಿ. ಮಧ್ಯಮ ಅಥವಾ ಕಡಿಮೆ ಉರಿಯಲ್ಲಿ ಕುದಿಸುವುದರಿಂದ ಹಾಲು ನಿಧಾನವಾಗಿ ಬಿಸಿಯಾಗುತ್ತದೆ ಮತ್ತು ನೊರೆ ರಚನೆಯನ್ನು ನಿಯಂತ್ರಿಸುತ್ತದೆ.
  • ಹಾಲು ಕುದಿಸುವಾಗ, ಪಾತ್ರೆಗೆ ಸ್ವಲ್ಪ ನೀರು ಸೇರಿಸಿ. ಹಾಲು ಸುರಿಯುವ ಮೊದಲು ಒಂದು ಅಥವಾ ಎರಡು ಚಮಚ ನೀರನ್ನು ಮಾತ್ರ ಸೇರಿಸಿ. ಇದರಿಂದ ಹಾಲು ಪಾತ್ರೆಯೊಂದಿಗೆ ನೇರ ಸಂಪರ್ಕಕ್ಕೆ ಬರುವುದಿಲ್ಲ ಮತ್ತು ಇದು ಹಾಲು ಉಕ್ಕಿ ಹೋಗುವುದನ್ನು ತಡೆಯುತ್ತದೆ
  • ಇದಲ್ಲದೆ ಹಾಲು ಕುದಿಯಲು ಪ್ರಾರಂಭಿಸಿದರೆ, ತಕ್ಷಣ ಹಾಲಿನ ಮೇಲೆ ಸ್ವಲ್ಪ ನೀರು ಸಿಂಪಡಿಸಿ. ಇದು ಹಾಲಿನ ನೊರೆಯನ್ನು ಸ್ಥಿರಗೊಳಿಸುತ್ತದೆ ಮತ್ತು ಅದು ಕುದಿಯುವುದನ್ನು ಮತ್ತು ಪಾತ್ರೆಯಿಂದ ಹೊರಗೆ ಚೆಲ್ಲಿ ಹೋಗುವುದನ್ನು ತಡೆಯುತ್ತದೆ.
  • ನೀವು ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುದಿಸಬೇಕಾದರೆ, ಯಾವಾಗಲೂ ದೊಡ್ಡ ಪಾತ್ರೆಯನ್ನು ಬಳಸಿ. ಸಣ್ಣ ಪಾತ್ರೆಗಳು ಬೇಗನೆ ನೊರೆಯಿಂದ ಮುಚ್ಚಿಹೋಗಬಹುದು, ಇದರಿಂದಾಗಿ ಹಾಲು ಚೆಲ್ಲುತ್ತದೆ. ದೊಡ್ಡ ಪಾತ್ರೆಯು ಹೆಚ್ಚಿನ ಸ್ಥಳವನ್ನು ಹೊಂದಿದ್ದು, ಇದು ಹಾಲು ಕುದಿಯುವ ಸಮಯದಲ್ಲಿ ನೊರೆ ಹೆಚ್ಚು ಸುಲಭವಾಗಿ ಹರಡಲು ಅನುವು ಮಾಡಿಕೊಡುತ್ತದೆ ಮತ್ತು ಹಾಲು ಚೆಲ್ಲಿ ಹೋಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
  • ಅನೇಕ ಜನರು ಹಾಲು ಕುದಿಸುವಾಗ ಪಾತ್ರೆಯನ್ನು ಮುಚ್ಚುತ್ತಾರೆ, ಇದು ಒಳಗೆ ಶಾಖವನ್ನು ಹಿಡಿದಿಟ್ಟುಕೊಳ್ಳುತ್ತದೆ ಮತ್ತು ತ್ವರಿತವಾಗಿ ನೊರೆ ರೂಪುಗೊಳ್ಳಲು ಅನುವು ಮಾಡಿಕೊಡುತ್ತದೆ. ಇದು ಹಾಲು ಚೆಲ್ಲಿ ಹೋಗಲು ಚೆಲ್ಲಲು ಕಾರಣವಾಗಬಹುದು. ಆದ್ದರಿಂದ, ಹಾಲು ಕುದಿಸುವಾಗ ಪಾತ್ರೆಯನ್ನು ಮುಚ್ಚಬೇಡಿ, ಬದಲಿಗೆ ಅಡ್ಡಲಾಗಿ ಚಮಚವನ್ನು ಇರಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬುದ್ಧಿವಂತಿಕೆಯಿಂದ ಹೊರ ತೆಗೆದ ಆನೆ – Kannada News | Elephant struggles to extract a watermelon stuck in a hole

ಬದುಕಿನಲ್ಲಿ ಏನೇ ಸಮಸ್ಯೆಗಳು ಬರಲಿ, ಅದಕ್ಕೆ ಪರಿಹಾರ ಕಂಡು ಕೊಳ್ಳುವುದು ಬಹಳ ಮುಖ್ಯ. ಪ್ರಾಣಿಗಳ ಕೆಲ ವಿಡಿಯೋಗಳು ಇದಕ್ಕೆ ಉದಾಹರಣೆಯಂತಿರುತ್ತವೆ. ಈ ವಿಡಿಯೋ ನೋಡಿದ ಮೇಲೆ ನಿಮಗೆ ಮಾತು ಸತ್ಯ ಎನಿಸದೇ ಇರದು. ಆನೆಯೊಂದು (elephant) ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬಹಳ ಬುದ್ಧಿವಂತಿಕೆಯನ್ನು ತೆಗೆಯುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಆನೆಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ.

ಲೆಕ್ ಚೈಲರ್ಟ್ (lek chailert) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಆನೆಯೊಂದು ರಂಧ್ರದಲ್ಲಿ ಸಿಲುಕಿ ಕೊಂಡಿರುವ ಕಲ್ಲಂಗಡಿ ಹಣ್ಣನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿರುವ ದೃಶ್ಯವನ್ನು ಕಾಣಬಹುದು. ಸೊಂಡಿಲನ್ನು ಬಳಸಿ ಕಲ್ಲಂಗಡಿ ಹಣ್ಣನ್ನು ತೆಗೆಯಲು ಪ್ರಯತ್ನಿಸಿದ್ದು ಕೊನೆಗೆ ಈ ಪ್ರಯತ್ನದಲ್ಲಿ ಗೆದ್ದಿದೆ. ಹೊರತೆಗೆದ ಕಲ್ಲಂಗಡಿ ಹಣ್ಣನ್ನು ಬಾಯಿ ಚಪ್ಪರಿಸಿಕೊಂಡು ತಿಂದ ಆನೆಯನ್ನು ನೀವಿಲ್ಲಿ ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸೈಕಲ್ ಏರಿ ಹೊರಟ ಮಾಲೀಕನನ್ನು ತಡೆದು ನಿಲ್ಲಿಸಿದ ಗಜರಾಜ

ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಬಹಳ ಬುದ್ಧಿವಂತ ಆನೆ ಎಂದಿದ್ದಾರೆ. ಮತ್ತೊಬ್ಬರು, ಸೃಷ್ಟಿಯಲ್ಲಿ ಅತ್ಯಂತ ಬುದ್ಧಿವಂತ ಪ್ರಾಣಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಅತಂತ್ಯ ಶಕ್ತಿಶಾಲಿ ಸೊಂಡಿಲು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ? – Kannada News | A Prestigious Man in Mangaluru Gives Shelter to Rajeev Gowda, Accused of Abusing a Woman Officer

ಮಂಗಳೂರು, ಜನವರಿ 26: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ತಲೆಮರೆಸಿಕೊಂಡಿದ್ದು, ಪೊಲೀಸರ ಕೈಗೆ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ. ಖಾಕಿ ತನಿಖೆ ವೇಳೆ ಆರೋಪಿ ಮಂಗಳೂರಿನಲ್ಲಿದ್ದ ಎನ್ನುವ ಮಾಹಿತಿ ಸಿಕ್ಕಿತ್ತಾದರೂ ಅದಾಗಲೇ ಆತ ಅಲ್ಲಿಂದಲೂ ಎಸ್ಕೇಪ್​​ ಆಗಿದ್ದ. ಕೇರಳ ಅಥವಾ ಗೋವಾಗೆ ರಾಜೀವ್​​ ಗೌಡ ಎಸ್ಕೇಪ್​​ ಅಗಿರಬಹುದು ಎನ್ನಲಾಗಿದ್ದು, ಈ ನಡುವೆ ಆರೋಪಿಗೆ ಆಶ್ರಯ ಕೊಟ್ಟಿದ್ದು ಓರ್ವ ಪ್ರತಿಷ್ಠಿತ ವ್ಯಕ್ತಿ ಎಂಬ ವಿಚಾರ ಗೊತ್ತಾಗಿದೆ. ರಾಜೀವ್​​ ಗೌಡ ಪಕ್ಕದ ರಾಜ್ಯಕ್ಕೆ ಎಸ್ಕೇಪ್​​ ಆಗಲು ಕೂಡ ಅವರೇ ನೆರವಾಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಉಡುಪಿ ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ – Kannada News | Kodibengre Boat Tragedy: Udupi Tourist Boat Overturns, 4 passengers criticle

ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ

ಉಡುಪಿ, ಜನವರಿ 26: ಜಿಲ್ಲೆಯ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದಿದ್ದು (Boat Overturn) , ನಾಲ್ವರು ಪ್ರವಾಸಿಗರ ಸ್ಥಿತಿ ಗಂಭೀರವಾಗಿದೆ. ಈ ಅಪಘಾತದಲ್ಲಿ ಹಲವರು ಅಸ್ವಸ್ಥಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೈಸೂರಿನಿಂದ ಬಂದಿದ್ದ ಬಿಪಿಓ ಉದ್ಯೋಗಿಗಳು

ಮೈಸೂರಿನ ಸರಸ್ವತಿಪುರಂನಿಂದ ಪ್ರವಾಸಕ್ಕೆ ಆಗಮಿಸಿದ್ದ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳ 28 ಮಂದಿಯ ತಂಡವು ಎರಡು ಪ್ರವಾಸಿ ಬೋಟ್‌ಗಳಲ್ಲಿ ವಿಹಾರಕ್ಕೆ ತೆರಳಿತ್ತು. ಒಂದೊಂದು ಬೋಟ್‌ನಲ್ಲಿ 14 ಮಂದಿ ಇದ್ದು, ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಸಮುದ್ರದ ಭಾರೀ ಅಲೆಗಳಿಗೆ ಸಿಲುಕಿದ ಒಂದು ಬೋಟ್ ಅಚಾನಕ್ಕಾಗಿ ಮಗುಚಿ ಬಿದ್ದಿದೆ. ಅಪಘಾತದ ವೇಳೆ ಪ್ರವಾಸಿಗರು ಸಮುದ್ರದಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ, ಎಲ್ಲರನ್ನು ಸುರಕ್ಷಿತವಾಗಿ ಸಮುದ್ರದಿಂದ ಹೊರತೆಗೆದಿದ್ದಾರೆ.

ಲೈಫ್ ಜಾಕೆಟ್ ಇಲ್ಲದೆ ಬೋಟ್ ರೈಡ್?

ನೀರಿನಲ್ಲಿ ಮುಳುಗಿದವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಏಟಾಗಿರುವುದಾಗಿ ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕೆಲವರು ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಅಪಘಾತಕ್ಕೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಾರಣವಾಗಿದೆಯೇ ಎಂಬ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುಹಾನ್ ಮತ್ತು ಸೂಫಿಯಾನ ಮಾಲೀಕತ್ವದ ಟೂರಿಸ್ಟ್ ಬೋಟ್‌ಗಳು ಈ ಪ್ರವಾಸಕ್ಕೆ ಬಳಸಲಾಗಿದ್ದವು. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 2:29 pm, Mon, 26 January 26

Source link

ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಸ್ಫೋಟಕ ಮಾಹಿತಿ ಬಯಲಿಗೆ – Kannada News | Rs 400 crore Robbery In Karnataka Border: Likely money belong gujarat politician

ಬೆಳಗಾವಿ, (ಜನವರಿ 26): ಕರ್ನಾಟಕ ಗಡಿ (Karnataka Border) ಭಾಗದ ಛೋರ್ಲಾ ಘಾಟ್‌ನಲ್ಲಿ ನಡೆದಿದ್ದ ಬರೋಬ್ಬರಿ 400 ಕೋಟಿ ರೂಪಾಯಿ ದರೋಡೆ ಪ್ರಕರಣ ( Rs 400 crore Robbery Case) ದೇಶಾದ್ಯಂತ ಸಂಚಲನ ಮೂಡಿಸಿದೆ. ಆರಂಭದಲ್ಲಿ ಕೇವಲ ದರೋಡೆ ಎಂದು ಬಿಂಬಿತವಾಗಿದ್ದ ಈ ಪ್ರಕರಣದ ಆಳಕ್ಕೆ ಇಳಿದ ಮಹಾರಾಷ್ಟ್ರ ಎಸ್‌ಐಟಿ (SIT) ಅಧಿಕಾರಿಗಳಿಗೆ ಈಗ ರಾಜಕೀಯ ನಂಟು ಮತ್ತು ಬೃಹತ್ ಮನಿ ಲಾಂಡರಿಂಗ್ ಜಾಲದ ವಾಸನೆ ಬಡಿದಿದೆ. 400 ಕೋಟಿ ರೂಪಾಯಿ ಹಣ ಗುಜರಾತ್‌ನ ಅತ್ಯಂತ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ್ದು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಹೊರಬಿದ್ದಿದೆ. ನಿಷೇಧಿತ 2000 ರೂಪಾಯಿ ಮುಖಬೆಲೆಯ ನೋಟುಗಳ ಕಂತೆಗಳನ್ನು ಗೋವಾದಿಂದ ಸಾಗಿಸಲಾಗುತ್ತಿತ್ತು. ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಸಾಳ್ವೆ ಅಲಿಯಾಸ್ ಶೇಟ್ ಈ ವ್ಯವಹಾರದ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸದ್ಯ ಇಬ್ಬರ ಆಡಿಯೋ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಭಿಷೇಕ್ ವಿಶ್ವ ದಾಖಲೆ… ಇಂತಹದೊಂದು ಇನಿಂಗ್ಸ್ ಯಾರೂ ಸಹ ಆಡಿಲ್ಲ! – Kannada News | Abhishek Sharma Hits highest individual T20I score without a single dot ball

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಒಂದು ಡಾಟ್ ಬಾಲ್ ಇಲ್ಲದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಒಂದೇ ಒಂದು ಎಸೆತವನ್ನೂ ಬಿಟ್ಟಿರಲಿಲ್ಲ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಒಟ್ಟು 20 ಎಸೆತಗಳನ್ನು ಎದುರಿಸಿದ್ದರು. ಈ ಇಪ್ಪತ್ತು ಎಸೆತಗಳಲ್ಲೂ ರನ್​ಗಳಿಸುವ ಮೂಲಕ ಇದೀಗ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಇಂತಹದೊಂದು ಇನಿಂಗ್ಸ್ ಆಡಿದ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಒಟ್ಟು 20 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ ಮೊದಲ 14 ಎಸೆತಗಳಲ್ಲಿ ಕ್ರಮವಾಗಿ 6,1,4,2,4,6,4,2,6,1,4,1,4,6,1,4,6,4,1,1 ರನ್ ಕಲೆಹಾಕಿದ್ದರು. ಈ ಮೂಲಕ ಕೇವಲ ಹದಿನಾಲ್ಕು ಬಾಲ್​ಗಳಲ್ಲಿ ಅರ್ಧಶತಕ ಪೂರೈಸಿ ದಾಖಲೆ ನಿರ್ಮಿಸಿದ್ದರು.

ಅರ್ಧಶತಕದ ಬಳಿಕ 6 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 1,4,6,4,1,1 ರನ್​ ಕಲೆಹಾಕಿದ್ದಾರೆ. ಈ ಮೂಲಕ 20 ಎಸೆತಗಳಲ್ಲಿ ಅಜೇಯ 68 ರನ್ ಸಿಡಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಒಂದು ಡಾಟ್ ಬಾಲ್ ಆಡದೇ ಗರಿಷ್ಠ ವೈಯುಕ್ತಿ ಸ್ಕೋರ್​ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಅಭಿಷೇಕ್ ಶರ್ಮಾ ಪಾಲಾಯಿತು.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 340 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಅಜೇಯ 68 ರನ್ ಗಳಿಸಿದ್ದರು. ಈ ಮೂಲಕ 300 ಕ್ಕಿಂತ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಇನಿಂಗ್ಸ್​ 50+ ಸ್ಕೋರ್​ಗಳಿಸಿ ಅಜೇಯರಾಗಿ ಉಳಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಅಭಿಷೇಕ್ ಶರ್ಮಾ ಸ್ಥಾನ ಪಡೆದಿದ್ದಾರೆ. ಒಟ್ಟಿನಲ್ಲಿ ಟಿ20 ಕ್ರಿಕೆಟ್​ನಲ್ಲಿ ತನ್ನ ಆರ್ಭಟ ಮುಂದುವರೆಸಿರುವ ಅಭಿಷೇಕ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದು, ಮುಂಬರುವ ಟಿ20 ವಿಶ್ವಕಪ್​ನಲ್ಲೂ ಯುವ ದಾಂಡಿಗನ ಕಡೆಯಿಂದ ಭರ್ಜರಿ ರೆಕಾರ್ಡ್​ಗಳನ್ನು ನಿರೀಕ್ಷಿಸಬಹುದು.

Published On – 2:09 pm, Mon, 26 January 26

Source link

ಇದು ದ್ವಿಚಕ್ರ ವಾಹನ ಸವಾರರು ಓದಲೇ ಬೇಕಾದ ಸ್ಟೋರಿ: ಬೆಚ್ಚಿ ಬೀಳಿಸುವಂತಿದೆ ನಿಮ್ಹಾನ್ಸ್​​ ವರದಿ! – Kannada News | Road Safety: NIMHANS Reveals Fatal Brain Injuries in Bike Accidents

ಬೆಂಗಳೂರು, ಜನವರಿ 26: ನಗರಗಳಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಲ್ಲಿ ಅಪಘಾತಗಳು ಮಾಮೂಲು ಎಂಬಂತಾಗಿದೆ. ಈ ಪೈಕಿ ಬೈಕ್​​ ಅಪಘಾತಗಳ ಸಂದರ್ಭ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರುವವರ ಬಗ್ಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅಧ್ಯಯನವೊಂದು ನಡೆಸಿದ್ದು, ಈ ಅಂಕಿ ಅಂಶಗಳು ಬೆಚ್ಚಿಬೀಳಿಸುವಂತಿವೆ. ಸರಿಯಾಗಿ ಹೆಲ್ಮೆಟ್​​ ಧರಿಸದೇ ಇರುವುದು, ಅಥವಾ ಹೆಲ್ಮೆಟ್​​ ಇಲ್ಲದೆ ದ್ವಿಚಕ್ರ ಚಾಲನೆ ವೇಳೆ ನಡೆಯುವ ಅಪಘಾತಗಳು ಮೆದುಳಿನ ಗಾಯಕ್ಕೆ ಕಾರಣವಾಗುತ್ತಿವೆ. 2025ರಲ್ಲಿ ಚಿಕಿತ್ಸೆ ಪಡೆದ 1,500 ಮೆದುಳಿನ ಗಾಯ ಪ್ರಕರಣಗಳ ಸಮಗ್ರ ಅಧ್ಯಯನ ನಡೆಸಿರುವ ನಿಮ್ಹಾನ್ಸ್​​ನ ನರಶಸ್ತ್ರಚಿಕಿತ್ಸೆಯ ಪ್ರಾಧ್ಯಾಪಕರೊಬ್ಬರು ಅಚ್ಚರಿಯ ವಿಷಯವನ್ನು ತೆರೆದಿಟ್ಟಿದ್ದಾರೆ.

ಗೋಲ್ಡನ್​​ ಅವರ್​​ನಲ್ಲಿ ಸಿಗ್ತಿಲ್ಲ ಚಿಕಿತ್ಸೆ

ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆದ ಮೆದುಳಿನ ಗಾಯ ಪ್ರಕರಣಗಳಲ್ಲಿ ರಸ್ತೆ ಅಪಘಾತಗಳೇ ಶೇ.65ರಷ್ಟಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಡೆದ ಅಪಘಾತಗಳನ್ನು ಈ ಸಂಖ್ಯೆ ಒಳಗೊಂಡಿದೆ. ಈ ಪೈಕಿ ಶೇ.80ರಷ್ಟು ಕೇಸ್​​ಗಳು ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದವು. ಹತ್ತು ಮಂದಿಯಲ್ಲಿ ಎಂಟು ಮಂದಿ ರೋಗಿಗಳು ಪುರುಷರಾಗಿದ್ದು, ಬಹುತೇಕರು ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೇರಿದವರು ಎನ್ನುವುದಿಲ್ಲಿ ಗಮನಾರ್ಹ. ಇನ್ನು ಆತಂಕಕಾರಿ ಸಂಗತಿಯೆಂದರೆ, ಅಪಘಾತದ ಬಳಿಕ ಗಾಯಾಳುಗಳಿಗೆ ವೈದ್ಯಕೀಯ ನೆರವು ಸಿಗುವುದು ಕೂಡ ವಿಳಂಬವಾಗುತ್ತಿದೆ. ಗಾಯಗೊಂಡವರು ಯಾವುದೇ ರೀತಿಯ ಚಿಕಿತ್ಸೆಗೆ ಪಡೆಯಲು ಐದು ಕಿಲೋಮೀಟರ್ ಸರಾಸರಿ ಪ್ರಯಾಣ ಮಾಡಬೇಕಾಗುತ್ತದೆ. ಇದು ಗಾಯದ ನಂತರದ ಅತ್ಯಂತ ಮಹತ್ವದ ‘ಗೋಲ್ಡನ್ ಅವರ್’ ಕಳೆದುಕೊಳ್ಳುವಷ್ಟು ಸಮಯವಾಗಿದೆ. ಕೇವಲ ಹತ್ತು ಮಂದಿಯಲ್ಲಿ ನಾಲ್ಕು ಮಂದಿ ಮಾತ್ರ ಆಂಬ್ಯುಲೆನ್ಸ್ ಮೂಲಕ ಚಿಕಿತ್ಸೆ ಕೇಂದ್ರವನ್ನು ತಲುಪುತ್ತಾರೆ. ಉಳಿದವರು ಖಾಸಗಿ ಅಥವಾ ಬಾಡಿಗೆ ವಾಹನಗಳಲ್ಲಿ ಪ್ರಯಾಣಿಸಬೇಕಾದ ಸ್ಥಿತಿ ಇದೆ.

ಇದನ್ನೂ ಓದಿ: ಔಷಧಿಗಳ ಬಳಕೆಗೆ ಹೊಸ ರೂಲ್ಸ್‌; ನಕಲಿ​​ ಹಾವಳಿಗೆ ಬೀಳುತ್ತಾ ಬ್ರೇಕ್​​​?

ಚಿಕಿತ್ಸೆಗಾಗಿ ಆಸ್ಪತ್ರೆಗಳನ್ನು ಅಲೆಯಬೇಕು!

ಇನ್ನು ಗಾಯಾಳುಗಳನ್ನು ಕರೆದೊಯ್ಯುವ ಮೊದಲ ಆಸ್ಪತ್ರೆಯಲ್ಲಿಯೇ ಅಗತ್ಯ ಚಿಕಿತ್ಸೆ ಸಿಗುವ ಸಾಧ್ಯತೆಯೂ ಬಹಳ ವಿರಳವಾಗಿದೆ. ಅನೇಕ ಆಸ್ಪತ್ರೆಗಳಲ್ಲಿ ಟ್ರಾಮಾ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಸೌಲಭ್ಯಗಳಿಲ್ಲ. ಇಲ್ಲವೇ ರಸ್ತೆ ಅಪಘಾತ ಪ್ರಕರಣಗಳನ್ನು ದಾಖಲಿಸಲು ಹಿಂಜರಿಯುತ್ತಾರೆ. ಹೀಗಾಗಿ ನಿಮ್ಹಾನ್ಸ್‌ನಂತಹ ವಿಶೇಷ ಆಸ್ಪತ್ರೆಗಳಿಗೆ ತಲುಪುವ ಮೊದಲು ಬಹುತೇಕ ರೋಗಿಗಳು ಎರಡು ಅಥವಾ ಅದಕ್ಕಿಂತ ಹೆಚ್ಚು ಆಸ್ಪತ್ರೆಗಳಿಗೆ ಅಲೆದಾಡಿರುತ್ತಾರೆ. ನಿಮ್ಹಾನ್ಸ್​​ಗೆ ಬರುವ ಶೇ.20ರಷ್ಟು ರೋಗಿಗಳಿಗೆ ಶಸ್ತ್ರಚಿಕಿತ್ಸೆ ಅಗತ್ಯವಾಗುತ್ತದೆ. ನಿಮ್ಹಾನ್ಸ್‌ಗೆ ತಲುಪುವ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ಜೀವ ಉಳಿಸಿಕೊಳ್ಳುತ್ತಾರೆ. ಆದರೆ ಬದುಕುಳಿದವರಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಮೂರು ತಿಂಗಳ ನಂತರವೂ ಕೆಲಸಕ್ಕೆ ಮರಳಲು ಅಸಮರ್ಥರಾಗುತ್ತಾರೆ ಎಂದು ಅಧ್ಯಯನ ತಿಳಿಸಿದೆ.

ಏನು ಮಾಡಬಹುದು?

ಅಪಘಾತದ ವೇಳೆ ಮೆದುಳು ಗಾಯದಿಂದ ಬಚಾವ್​ ಆಗಲು ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಬಳಕೆ ಏಕೈಕ ಆಯ್ಕೆಯಾಗಿದೆ. ಅಂಕಿ-ಅಂಶದ ಪ್ರಕಾರ ಅಪಘಾತಕ್ಕೊಳಗಾದ ದ್ವಿಚಕ್ರ ವಾಹನ ಸವಾರರಲ್ಲಿ ಕೇವಲ ಶೇ.23ರಷ್ಟು ಜನ ಮಾತ್ರ ಸರಿಯಾದ ಹೆಲ್ಮೆಟ್ ಧರಿಸಿದ್ದರೆ, ಶೇ.33ರಷ್ಟು ಮಧಿ ಧರಿಸಿದ್ದಿದ್ದು ಹಾಫ್ ಹೆಲ್ಮೆಟ್. ಇನ್ನು ತಜ್ಞರ ಪ್ರಕಾರ ಅಪಘಾತಗಳು ನಡೆದಾಗ ತಕ್ಷಣದ ಕ್ಷಣಗಳು ಅತ್ಯಂತ ನಿರ್ಣಾಯಕ ಪಾತ್ರ ನಿರ್ವಹಿಸುತ್ತವೆ. ಹೆಚ್ಚಾಗಿ ಅಪಘಾತ ನಡೆಯುವ ಸ್ಥಳಗಳಲ್ಲಿ ತರಬೇತಿ ಪಡೆದ ಸಿಬ್ಬಂದಿಯೊಂದಿಗೆ ಕ್ರಿಟಿಕಲ್ ಕೇರ್ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸುವುದು ಅತ್ಯಂತ ಅಗತ್ಯವಾಗಿದೆ. ಆಸ್ಪತ್ರೆ ವ್ಯವಸ್ಥೆಯಲ್ಲಿಯೂ ಹೆಚ್ಚಿನ ಸುಧಾರಣೆ ಆಗಬೇಕಿದೆ. ಅತ್ಯಂತ ಮುಖ್ಯವಾಗಿ, ಸರ್ಕಾರವು ಲ ಆಸ್ಪತ್ರೆಗಳಿಗೆ ಟ್ರಾಮಾ ಪ್ರಕರಣಗಳನ್ನು ಕಡ್ಡಾಯವಾಗಿ ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಮತ್ತು ನಿರ್ಣಾಯಕ ಅವಧಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಹೀಗಾದಾಗ ಅಪಘಾತಗಳ ಸಂದರ್ಭ ನೆರವಿಗೆ ಬರಲು ಸಾರ್ವಜನಿಕರಿಗೂ ಪ್ರೇರಣೆ ನೀಡಿದಂತಾಗುತ್ತದೆ ಎಂದು ಅಧ್ಯಯನ ಹೇಳಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:03 pm, Mon, 26 January 26

Source link