All posts by nagaraj11081993

ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ – Kannada News | NGT Orders Action: Kollur Souparnika River Pollution from Temple Area Commercial Waste

ಕೊಳಚೆ ನೀರಿನಿಂದ ಅಶುದ್ಧವಾಗಿರುವ ಸೌಪರ್ಣಿಕಾ

ಉಡುಪಿ, ಜನವರಿ 20: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ (Kolluru Mukambika Temple) ಸುತ್ತಮುತ್ತಲ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡಗಳಿಂದ ಹರಿಯುತ್ತಿರುವ ಮಲಿನ ನೀರಿನಿಂದ ಸೌಪರ್ಣಿಕಾ ನದಿ ತೀವ್ರವಾಗಿ ಮಾಲಿನ್ಯಗೊಳ್ಳುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ  ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮಹತ್ವದ ಆದೇಶ ನೀಡಿದೆ. ಫೆಬ್ರವರಿ 9, 2026ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿರುವ ನ್ಯಾಯಮಂಡಳಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ಅಧ್ಯಕ್ಷರಿಗೆ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

ಕೊಳಚೆ ನೀರಿನಿಂದ ಅಶುದ್ಧವಾಗಿರುವ ಸೌಪರ್ಣಿಕಾ

ನ್ಯಾಯಾಂಗ ಸದಸ್ಯರಾದ ನ್ಯಾಯಮೂರ್ತಿ ಪುಷ್ಪಾ ಸತ್ಯನಾರಾಯಣ ಮತ್ತು ತಜ್ಞ ಸದಸ್ಯ ಡಾ. NGT ಪ್ರಶಾಂತ್ ಗರ್ಗವ ಅವರು ಸಾಮಾಜಿಕ ಕಾರ್ಯಕರ್ತ ಹರೀಶ್ ತೋಳಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ಆದೇಶ ಹೊರಡಿಸಿದ್ದಾರೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಸುತ್ತಮುತ್ತಲಿನ ವಾಣಿಜ್ಯ ಸಂಸ್ಥೆಗಳು- ಲಾಡ್ಜ್‌ಗಳು ಮತ್ತು ಹೋಟೆಲ್‌ಗಳಿಂದ ಕೊಳಚೆನೀರು ಮತ್ತು ಕಲ್ಮಶಯುಕ್ತ ನೀರನ್ನು ಹೊರಹಾಕಲಾಗುತ್ತಿದೆ ಹೀಗಾಗಿ ನದಿ ಹಲವು ವರ್ಷಗಳಿಂದ ಕಲುಷಿತವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಕೊಲ್ಲೂರಿನಲ್ಲಿ 2015 ರಲ್ಲಿ 19.97 ಕೋಟಿ ರೂ.ಗಳಿಗೆ ಭೂಗತ ಒಳಚರಂಡಿ ಯೋಜನೆ (UGSS) ಕಾಮಗಾರಿಯನ್ನು ಪ್ರಾರಂಭಿಸಲಾಯಿತು ಮತ್ತು 2020ರಲ್ಲಿ ಪೂರ್ಣಗೊಂಡಿದ್ದರೂ, ನೀರಿನ ಮಾಲಿನ್ಯ ನಿಂತಿಲ್ಲ. ಎರಡು ವರ್ಷಗಳ ಸೂಚನೆಯ ನಂತರ, ನವೆಂಬರ್ 25, 2025 ರಂದು ಉಡುಪಿ ಜಿಲ್ಲಾಧಿಕಾರಿಯವರ ವರದಿಯನ್ನು ಸಲ್ಲಿಸಲಾಗಿದ್ದರೂ, ಅದು ಸಮಗ್ರವಾಗಿಲ್ಲ ಎಂದು NGTಗೆ ತಿಳಿದುಬಂದಿದೆ.

ಪ್ರತ್ಯೇಕ ವರದಿ ಸಲ್ಲಿಸುವಂತೆ ಡಿಸಿಗೆ ಆದೇಶ

ಜಿಲ್ಲಾಧಿಕಾರಿ ಸಲ್ಲಿಸಿದ ವರದಿಯಲ್ಲಿ ಉತ್ಪಾದಿಸುವ ತ್ಯಾಜ್ಯದ ಪ್ರಮಾಣ, ಅಸ್ತಿತ್ವದಲ್ಲಿರುವ UGSS ನ ಸಾಗಿಸುವ ಸಾಮರ್ಥ್ಯ, ಸಾಮರ್ಥ್ಯವನ್ನು ಎಷ್ಟರ ಮಟ್ಟಿಗೆ ಹೆಚ್ಚಿಸಬೇಕು, ಅಂದಾಜು ವೆಚ್ಚದ ಕುರಿತು ಸ್ಪಷ್ಟ ವಿವರಗಳಿಲ್ಲವೆಂದು ನ್ಯಾಯಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿಯಮ ಉಲ್ಲಂಘನೆ ಮಾಡಿದವರ ವಿವರ ಹಾಗೂ ಕೈಗೊಂಡ ಕ್ರಮಗಳ ಕುರಿತು ಪ್ರತ್ಯೇಕ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಹರೀಶ್ ತೋಳಾರ್ ಮಾತನಾಡಿ, ಸೌಪರ್ಣಿಕಾ ನದಿಗೆ ಕೊಳಚೆ ನೀರನ್ನು ಬಿಡುವುದರಿಂದ ನೀರು ಕಲುಷಿತವಾಗಿದೆ ಮತ್ತು ಭಕ್ತರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.ಕೊಲ್ಲೂರಿನಲ್ಲಿ ಯುಜಿಎಸ್ಎಸ್ ಜಾರಿಗೆ ಬಂದಿದ್ದರೂ, ವಾಣಿಜ್ಯ ಸಂಸ್ಥೆಗಳು ನದಿಯನ್ನು ಕಲುಷಿತಗೊಳಿಸುತ್ತಲೇ ಇವೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ – Kannada News | Minister Eshwar Khandre elected unopposed as all india veerashaiva lingayat Mahasabha President

ಬೆಂಗಳೂರು, (ಜನವರಿ 20): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ (all india veerashaiva lingayat Mahasabha) ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಆಯ್ಕೆಯಾಗಿದ್ದಾರೆ. ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಘಟಾನುಘಟಿ ನಾಯಕರ ಹೆಸರು ಕೇಳಿಬಂದಿದ್ದವು. ಆದ್ರೆ, ಅಂತಿಮವಾಗಇಂದು (ಜನವರಿ 20) ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಈಶ್ವರ್ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧ್ಯಕ್ಷ ಎನ್ನಿಸಿಕೊಂಡಿದ್ದಾರೆ.

ಈ ಹಿಂದೆ ಈಶ್ವರ್ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ಕೂಡ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಗೆ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿದ್ದರು. ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಈಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಕೂಡ ಕೇಳಿ ಬಂದಿತ್ತು. ಲಿಂಗಾಯತ ಪಂಚಪೀಠದ ಪೀಠಾಧಿಪತಿಗಳೊಬ್ಬರು ಯಡಿಯೂರಪ್ಪ ಅವರು ವೀರಶೈವ ಮಹಾಸಭಾದ ಅಧ್ಯಕ್ಷರಾದರೇ, ಸಂತೋಷ ಎಂದು ಸಹ ಬಹಿರಂಗವಾಗಿಯೇ ಹೇಳಿದ್ದರು. ಆದ್ರೆ, ಈಗ ಕೊನೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಭಾಲ್ಕಿ ಕ್ಷೇತ್ರದ ಶಾಸಕ, ರಾಜ್ಯದ ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನೂತನ ಅಧ್ಯಕ್ಷರ ಮೊದಲ ಪ್ರತಿಕ್ರಿಯೆ

ಇವತ್ತು ರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆದಿದ್ದು, 52 ಸದಸ್ಯರು ಭಾಗವಹಿಸಿದ್ದಾರೆ.ತೆರವಾದ ರಾಷ್ಟ್ರೀಯ ಅಧ್ಯಕ್ಷರ ಹುದ್ದೆಗೆ ನನ್ನನ್ನು ಆಯ್ಕೆ ಮಾಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆಯಾಗಿದ್ದು 1904 ರಲ್ಲಿ. ಸಾಮಾನ್ಯ ಸಣ್ಣ ಸಂಸ್ಥೆಗಳಂತಲ್ಲ ಇದು. ಅಖಂಡ ವೀರಶೈವ ಲಿಂಗಾಯತರೆಲ್ಲ‌ ಪ್ರಾತಿನಿಧಿಕ ಸಂಸ್ಥೆ ಅಖಿಲ ಭಾರತ ವೀರಶೈವ ಮಹಾಸಭಾ. ಇಲ್ಲಿಯವರೆಗೆ ಒಟ್ಟು 23 ಮಂದಿ ಅಧ್ಯಕ್ಷರಾಗಿದ್ದಾರೆ. ಈಗ ನನಗೆ ಜವಾಬ್ದಾರಿ ಕೊಟ್ಟಿದ್ದು ನನ್ನ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದರು.

ಬೆಂಗಳೂರಿನ ಸದಾಶಿವ ನಗರದ ಅಖಿಲ ಭಾರತ ವೀರಶೈವ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಭೆಯಲ್ಲಿ ಸಚಿವ ಶರಣಬಸಪ್ಪ ದರ್ಶನಪುರ್, ಪ್ರಭಾಕರ್ ಕೋರೆ, ವೀರಣ್ಣ ಚರಂತಿಮಠ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಾರ್ಯಕಾರಿ ಮಂಡಳಿ ಸದಸ್ಯರು ಭಾಗವಹಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:08 pm, Tue, 20 January 26

Source link

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಶವ ಹೊರತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ; ಕಾರಣ ಇಲ್ಲಿದೆ – Kannada News | Second Post Mortem in Rishal D’Souza Suicide Case Over Assault Allegations

ಉತ್ತರ ಕನ್ನಡ, ಜನವರಿ 20: JDS ನಾಯಕಿಯ ಪುತ್ರನ ಕಿರುಕುಳದಿಂದ ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಮಗಳಿಗೆ ಕಿರುಕುಳ ಮಾತ್ರ ನೀಡಿಲ್ಲ, ಆಕೆಯ ಮೇಲೆ ಅತ್ಯಾಚಾರ ಕೂಡ ನಡೆಸಲಾಗಿದೆ. ವಿಷಯವನ್ನು ಮನೆಯಲ್ಲಿ ಹೇಳಲಾಗದೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಜೊತೆಗೆ ಮತ್ತೊಮ್ಮೆ ಪೋಸ್ಟ್​ಮಾರ್ಟಮ್​ ಮಾಡಲು ಆಗ್ರಹಿಸಿದ್ದರು. ಹೀಗಾಗಿ ಯುವತಿ ಶವ ಹೊರತೆಗೆದು ಮಗದೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಕಾರವಾರ ತಾಲೂಕಿನ ಕದ್ರಾ ಗ್ರಾಮದ ಸೇಂಟ್ ಆಂಥೋನಿ ಸ್ಮಶಾನದಲ್ಲಿ ಹೂಳಲಾಗಿದ್ದ ಯುವತಿಯ ಶವ ಹೊರತೆಗೆದು ಸ್ಯಾಂಪಲ್​​ ಕಲೆಕ್ಟ್​​ ಮಾಡಲಾಗಿದ್ದು, ಈ ವೇಳೆ ಯುವತಿಯ ಪೋಷಕರು ಮತ್ತು ಕ್ರಿಶ್ಚಿಯನ್ ಫಾದರ್ ಮಾತ್ರ ಅಧಿಕಾರಿಗಳ ಜೊತೆ ಉಪಸ್ಥಿತರಿದ್ದರು. JDS ನಾಯಕಿ ಚೈತ್ರಾ ಕೊಠಾರ್‌ಕರ್ ಪುತ್ರ ಚಿರಾಗ್​​ ಕಿರುಕುಳ ತಾಳಲಾರದೇ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಳು. ಪ್ರೀತಿಸುವಂತೆ ಯುವತಿಗೆ ಕಾಟ ನೀಡಿದ್ದಲ್ಲದೇ ಅತ್ಯಾಚಾರ ಮಾಡಿರುವ ಕುರಿತು ಕುಟುಂಬ ದೂರು ನೀಡಿತ್ತು.

ಇದನ್ನೂ ಓದಿ: ಪ್ರೀತಿಸುವಂತೆ ಕಾಟ; ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ

ಡಿಸಿ ಕಚೇರಿ ಎದುರು ಪ್ರತಿಭಟನೆ

ಇನ್ನು ಪ್ರಕರಣ ಸಂಬಂಧ ಆರೋಪಿ ಚಿರಾಗ್​​ ಕೊಠಾರ್‌ಕರ್ ಬಂಧನಕ್ಕೆ ಆಗ್ರಹಿಸಿ ಕಾರವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ಕೂಡ ನಡೆದಿದೆ. ಕ್ರಿಶ್ಚಿಯನ್ ಮುಖಂಡರು, ಕದ್ರಾ ಗ್ರಾಮಸ್ಥರು ಸೇರಿದಂತೆ 200ಕ್ಕೂ ಹೆಚ್ಚು ಜನ ಈ ವೇಳೆ ಭಾಗಿಯಾಗಿದ್ದು, ಆರೋಪಿ ಬಂಧನ ವಿಳಂಬ ಆಗ್ತಿರೋದಕ್ಕೆ ಕಿಡಿ ಕಾರಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ನೀಡಲು ವ್ಯತ್ಯಯ ಆಗಿದ್ದೇಕೆ? ಯುವತಿಯ ದೇಹದ ಮೇಲಿನ ಗಾಯ ಲವ್ ಬೈಟ್ ಅಂತ ವರದಿ ಕೊಟ್ಟ ವೈದ್ಯ ಯಾರು? ಮೃತ ಯುವತಿಯ ಖಾಸಗಿ ಭಾಗದ ಮೇಲಿನ ಗಾಯ ಲವ್ ಬೈಟ್ ಅಂತ ವರದಿ ಕೊಟ್ಟಿದ್ಯಾಕೆ? ಪಿಎಸ್​​ಐ ಸುನೀಲ್​​ರನ್ನು ಈ ಪ್ರಕರಣದಲ್ಲಿ ಅಮಾನತು ಮಾಡಿದ್ಯಾಕೆ‌? ಹಾಗಾದ್ರೆ ಅವರ ಮೇಲಿನ ಅಧಿಕಾರಿಗಳ ಮೇಲೆ ಯಾಕೆ ಕ್ರಮ ಇಲ್ಲ? ಎಂಬಿತ್ಯಾದಿ ಪ್ರಶ್ನೆಗಳು ಈ ವೇಳೆ ವ್ಯಕ್ತವಾಗಿವೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರೋ ಶಾಸಕ ಸತೀಶ್​​ ಸೈಲ್​​, ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಲವ್ ಬೈಟ್ ಅಂತಾ ವರದಿ ಬಂದಿದ್ದು ನೋವು ತಂದಿದೆ. ಆರೋಪಿಯ ಬಂಧನ ವ್ಯತ್ಯಯ ಆಗಿದಕ್ಕೆ PSI ಅಮಾನತು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ CPI ಮತ್ತು DySP ಅಮಾನತು ಮಾಡಲಾಗುವುದೆಂದು ಪೊಲೀಸ್​​ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಈಗಾಗಲೇ ಉನ್ನತ ಅಧಿಕಾರಿಗಳಿಗೆ SP ವರದಿ ಕಳಿಸಿದ್ದಾರೆ. ಆರೋಪಿಯನ್ನ ಆದಷ್ಟು ಬೇಗ ಬಂಧಿಸುವಂತೆ ನಾನೂ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:34 pm, Tue, 20 January 26

Source link

ವಿದ್ಯಾರ್ಥಿನಿಯನ್ನ ಬೆನ್ನಟ್ಟಿ ಬಂದ ಆಸಾಮಿ: ಆಗಂತುಕನಿಂದ ಬಾಲಕಿ ಗ್ರೇಟ್ ಎಸ್ಕೇಪ್ – Kannada News | Hassan Shocker: Unknown Man Follows Student, Harassment Sparks Outrage

ಬಾಲಕಿಯನ್ನ ಹಿಂಬಾಲಿಸಿಕೊಂಡು ಬಂದ ವ್ಯಕ್ತಿ

ಹಾಸನ, ಜನವರಿ 20: ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಗಾಂಜಾ ನಶೆ, ಎಣ್ಣೆ ಮತ್ತಲ್ಲಿ ದುರ್ವರ್ತನೆ ತೋರುತ್ತಿರುವ ಕಿಡಿಗೇಡಿಗಳ ಅಟ್ಟಹಾಸ ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿವೆ. ಸೋಮವಾರದಂದು ಎರಡು ಮನೆ ಹಾಗೂ ಬೈಕ್​ಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದವರನ್ನು ಬಂಧಿಸಲು ಪೊಲೀಸರು ಮುಂದಾದ ಬೆನ್ನಲ್ಲೇ ಮತ್ತೊಂದು ಭಯಾನಕ ಘಟನೆ ಹಾಸನದ (Hassan) ಜನತೆಯನ್ನ ಬೆಚ್ಚಿ ಬೀಳೀಸಿದೆ. ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕಿಯನ್ನ (Girl) ಓರ್ವ ಕಿಡಿಗೇಡಿ ಹಿಂಬಾಲಿಸಿ ಕೊಂಡು ಬಂದು ಆತಂಕ ಸೃಷ್ಟಿಸಿದ್ದಾನೆ. ಅಷ್ಟರಲ್ಲಿ ಬಾಲಕಿ ಓಡಿ ಮನೆ ಒಳಗೆ ಸೇರಿಕೊಂಡು ಅಮ್ಮಾ ಎಂದು ಕಿರುಚುತ್ತಿದ್ದಂತೆ ಆಸಾಮಿ ಪರಾರಿಯಾಗಿದ್ದಾನೆ. ಸದ್ಯ ಘಟನೆಯ ವಿಡಿಯೋ ವೈರಲ್​​ ಆಗಿದೆ.

ನಡೆದದ್ದೇನು?

ಜನವರಿ 17ರಂದು ಹಾಸನದ ಪೆನ್ಷನ್ ಮೊಹಲ್ಲಾ ಠಾಣಾ ವ್ಯಾಪ್ತಿಯ 80 ಅಡಿ ರಸ್ತೆ ಪ್ರದೇಶದ ಮನೆಯೊಂದರ ಬಳಿ ನಡೆದಿರುವ ಘಟನೆಯೊಂದು ಹೆಣ್ಣು ಮಕ್ಕಳಿರುವ ಪೋಷಕರು ಬೆಚ್ಚಿಬೀಳುವಂತೆ ಮಾಡಿದೆ. ಶನಿವಾರದಂದು ಕ್ಲಾಸ್ ಮುಗಿಸಿ ಬಸ್​ನಲ್ಲಿ ಮನೆಯತ್ತ ಬಂದ 9ನೇ ತರಗತಿ ಬಾಲಕಿ ಇನ್ನೇನು ಮನೆ ತಲುಪಬೇಕು ಎನ್ನುವಷ್ಟರಲ್ಲಿ ವ್ಯಕ್ತಿಯೊಬ್ಬ ಹಿಂಬಾಲಿಸುತ್ತಿರುವುದು ಗೊತ್ತಾಗಿದೆ. ಸುತ್ತಮುತ್ತ ಯಾರು ಇಲ್ಲದ ಕಾರಣ ಆತಂಕದಿಂದ ಇನ್ನೇನು ಮನೆ ಬಂತಲ್ಲಾ ಎಂದು ಗೇಟ್ ತೆಗೆದು ಒಳ ಸೇರಿಕೊಂಡ್ರು ಹಿಂಬಾಲಿಸುವುದು ಬಿಡದ ವ್ಯಕ್ತಿ ಗೇಟ್​ನಿಂದ ಇಣುಕಿದ್ದಾನೆ. ಗಾಬರಿಗೊಂಡ ಬಾಲಕಿ ಅಮ್ಮಾ ಅಮ್ಮಾ ಬಾಗಿಲು ತೆಗೆಯಮ್ಮಾ ಎಂದು ಕೂಗಾಡಿದ್ದಾಳೆ.

ಇದನ್ನೂ ಓದಿ: ಹಾಸನದಲ್ಲೊಂದು ಆಘಾತಕಾರಿ ಘಟನೆ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಬಂದ ಆಗಂತುಕ

ಮನೆಯೊಳಗೆ ಯಾರೋ ಇದಾರೆ, ಅವರು ಹೊರ ಬಂದ್ರೆ ಸಿಕ್ಕಿ ಬೀಳ್ತಿನಿ ಎಂದು ಬೆಚ್ಚಿದ ವ್ಯಕ್ತಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಘಟನೆಯ ಸಂಪೂರ್ಣ ಚಿತ್ರಣ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಬಾಲಕಿಯ ಚೀರಾಟ ಅಪರಿಚಿತನ ಎದೆ ನಡುಗಿಸಿದೆ. ಒಂಟಿಯಾಗಿ ಓಡಾಡುವ ಮಕ್ಕಳಿಗೆ ಸುರಕ್ಷತೆ ಇಲ್ಲ. ಪಕ್ಕದಲ್ಲಿ ಬಾರ್ ಇದೆ, ಅಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಸೂಕ್ತ ಭದ್ರತೆ ನೀಡುವಂತೆ ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ.

ಶಾಲಾ ಬಸ್​ನಲ್ಲಿ ಮನೆಗೆ ಬಂದ ಬಾಲಕಿ

ಒಂದೂವರೆ ವರ್ಷದ ಹಿಂದೆ ಹೊಸ ಮನೆ ಕಟ್ಟಿ ಅಲ್ಲೇ ವಾಸವಾಗಿರುವ ಕುಟುಂಬ, ಸುರಕ್ಷತೆ ಕಾರಣದಿಂದ ಮನೆಯ ಸುತ್ತಲು ಸಿಸಿ ಕ್ಯಾಮೆರಾ ಅಳವಡಿಸಿಕೊಂಡಿದ್ದಾರೆ. ಶಾಲೆಯಿಂದ ಮನೆಯತ್ತ ಹೊರಟಿದ್ದ ಬಾಲಕಿ ಶಾಲಾ ಬಸ್​ನಲ್ಲಿ ಬಂದಿದ್ದಾರೆ. ಆದರೆ ಶಾಲೆ ಇಡೀ ದಿನ ಇರಬಹುದು ಎಂದು ಭಾವಿಸಿದ್ದ ಕುಟುಂಬ ಶಾಲೆಯಿಂದ ಮೆಸೇಜ್ ನೋಡಿ ಆಕೆಯನ್ನ ಕರೆತರಲು ಅಮ್ಮ ಹಾಗೂ ಅಜ್ಜಿ ಆಟೋ ಏರಿ ಶಾಲೆಯತ್ತ ಹೋಗಿದ್ದಾರೆ. ಆದರೆ ಪೋಷಕರು ಅತ್ತ ಹೊರಟ ವೇಳೆ ಬಾಲಕಿ ಇತ್ತ ಶಾಲಾ ಬಸ್​ನಲ್ಲಿ ಮನೆಗೆ ಮರಳಿದ್ದಾಳೆ.

ತಲೆಗೆ ಕೆಂಪು ಟೋಪಿ ಹಾಕಿರುವ ವ್ಯಕ್ತಿಯೋರ್ವ, ಒಂಟಿಯಾಗಿ ಬರುತ್ತಿದ್ದ ಬಾಲಕಿಯನ್ನ ಬೆನ್ನಟ್ಟಿದ್ದಾನೆ.  ಇವನ ವರ್ತನೆ ನೋಡಿದರೆ ನಿಜಕ್ಕೂ ಬೆಚ್ಚಿಬೀಳಿಸುತ್ತದೆ. ಒಂದೇ ವೇಳೆ ಬಾಲಕಿ ಹೆದರಿದ್ದರೆ ಗತಿ ಏನೆಂದು ಆತಂಕ ವ್ಯಕ್ತಪಡಿಸಿರುವ ಕುಟುಂಬ ಸದಸ್ಯರು, ನಾವು ಮನೆಯೊಳಗೆ ಇದ್ದೇವೆ ಎಂದು ಆತ ಹೆದರಿ ಹೊಗಿದ್ದಾನೆ. ನಮ್ಮ ಮಗಳು ಒಳಗೆ ಬಂದು ಗೇಟ್ ಲಾಕ್ ಮಾಡಿ ಮನೆಯ ಮುಖ್ಯದ್ವಾರದ ಬಳಿ ಇರುವ ಇನ್ನೊಂದು ಕಬ್ಬಿಣದ ಬಾಗಿಲಿನೊಳಗೆ ಸೇರಿಕೊಂಡು ರಕ್ಷಣೆಗಾಗಿ ಪರದಾಡಿದ್ದಾಳೆ.

ಇದನ್ನೂ ಓದಿ: ಧಾರವಾಡದಲ್ಲಿ ಕಿಡ್ನ್ಯಾಪ್‌ ಆಗಿದ್ದ ಮಕ್ಕಳಿಬ್ಬರು ಪಕ್ಕದ ಜಿಲ್ಲೆಯಲ್ಲಿ ಪತ್ತೆ: ಪರಿಚಿತ ವ್ಯಕ್ತಿಯಿಂದಲೇ ಅಪಹರಣ

ವ್ಯಕ್ತಿಯ ನೀಚತನದಿಂದ ಆಘಾತಗೊಂಡ ಬಾಲಕಿಗೆ ದಿಢೀರ್ ಜ್ವರ ಬಂದು ಎರಡು ದಿನ ನರಳಾಡಿದ್ದಾಳೆ. ಇನ್ನು ಘಟನೆ ಬಗ್ಗೆ ಮನೆಯವರು ಕೂಡಲೇ ಪೆನ್ಚನ್ ಮೊಹಲ್ಲಾ ಪೊಲೀಸರಿಗೆ ತಿಳಿಸಿದ್ದು, ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ಈ ಭಾಗದಲ್ಲಿ ಗಾಂಜಾ ಮತ್ತಿನಲ್ಲಿ ಓಡಾಡುವವರ ಹಾವಳಿ ಹೆಚ್ಚಾಗಿದೆ, ಒಂಟಿ ಮಹಿಳೆಯರು ಓಡಾಡುವಂತಿಲ್ಲ. ಪುಂಡಾಟ ಮೆರೆಯುತ್ತಾರೆ, ಇದಕ್ಕೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಲಾಗಿದೆ.

ಒಟ್ಟಿನಲ್ಲಿ ಹಾಸನದ ಜನರೇ ಹೇಳುವಂತೆ ನಗರದಲ್ಲಿ ಮಾದಕ ವಸ್ತುಗಳ ಹಾವಳಿ ಹೆಚ್ಚಾಗಿದೆ, ಅಮಲೇರಿಸಿಕೊಂಡು ಬೇಕಾಬಿಟ್ಟಿಯಾಗಿ ಓಡಾಡುತ್ತಾ ಭೀತಿ ಹುಟ್ಟಿಸುವ ಪುಂಡರ ಹಾವಳಿಯೂ ಮಿತಿ ಮೀರುತ್ತಿದೆ. ಮಕ್ಕಳು ಶಾಲೆಗೆ ಬಸ್​ನಲ್ಲಿ ಹೋಗಿ ವಾಪಸ್ ಆಗುತ್ತಾರೆ ಎಂದು ನೆಮ್ಮದಿಯಿಂದ ಇರುತ್ತಿದ್ದ ಪೋಷಕರಿಗೆ ಈ ಘಟನೆ ಎದೆ ನಡುಗುವಂತೆ ಮಾಡಿದೆ. ಸದ್ಯ ಜನರ ಆತಂಕಕ್ಕೆ ಕಾರಣವಾಗುತ್ತಿರುವ ಇಂತಹ ಪುಂಡರ ಹೆಡೆಮುರಿ ಕಟ್ಟುವ ಕೆಲಸ ಪೊಲೀಸರು ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೋರ್ಟ್​​ ಆವರಣದಲ್ಲಿ ಗಣಪತಿ ದೇಗುಲಕ್ಕೆ ವಿರೋಧ: ಚಿಕ್ಕಮಗಳೂರಿನಲ್ಲೊಂದು ಹೊಸ ವಿವಾದ – Kannada News | Dalit organizations Opposes To Build Ganapathi temple In Chikkamagaluru Court Ground

ಚಿಕ್ಕಮಗಳೂರು, (ಜನವರಿ 20): ನಗರದ ಹೊರವಲಯದ ಹೌಸಿಂಗ್ ಬೋರ್ಡ್ ಬಳಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯದ (Chikkamagaluru District Court) ಕಟ್ಟಡ ಕಾಮಗಾರಿ ನಡೆಯುತ್ತಿದೆ. ಸಂಪೂರ್ಣ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಆದ್ರೆ,ಈ ನೂತನ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಆವರಣದೊಳಗೆ ಗಣಪತಿ ದೇವಾಲಯ (Ganapathi temple) ನಿರ್ಮಾಣಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ. ದಲಿತ ಸಂಘಟನೆಗಳ ಒಕ್ಕೂಟ ( Dalit organizations) ಕೋರ್ಟ್​​ನ ಆವರಣದಲ್ಲಿ ಗಣಪತಿ ದೇಗುಲ ನಿರ್ಮಾಣಕ್ಕೆ ವಿರೋಧ ಮಾಡಿದ್ದು, ಈ ಸಂಬಂಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಮಟ್ಟಿಲೇರಿವೆ. ಇದರ ಬೆನ್ನಲ್ಲೇ ವಕೀಲರು ಹಾಗೂ ಸಂಘಟನೆ ಸದಸ್ಯರ ನಡುವೆ ಪರ ವಿರೋಧದ ಚರ್ಚೆ ತಾರಕಕ್ಕೇರಿದೆ.

ದಲಿತ ಸಂಘಟನೆಗಳ ವಿರೋಧ ಏಕೆ?

ದಲಿತ ಸಂಘಟನೆಗಳ ಒಕ್ಕೂಟವು ನ್ಯಾಯಾಲಯ ಸರ್ವಧರ್ಮಕ್ಕೆ ಸೇರಿದ್ದು, ಸರ್ವಧರ್ಮ ಸಮಾನತೆಯ ಸರ್ವ ಜಾತಿಗಳಿಗೂ ಸಂವಿಧಾನಿಕ ಸಮಾನತೆಯನ್ನ ಪ್ರತಿಪಾದಿಸುವ ನ್ಯಾಯಾಲಯದ ಮುಂದೆ ಒಂದು ಧರ್ಮದ ದೇವಾಲಯ ನಿರ್ಮಾಣದಿಂದ ಧಾರ್ಮಿಕ ಭಾವನೆಯನ್ನ ಏರಿಕೆ ಮಾಡಿದಂತೆ. ಸರ್ವಧರ್ಮ ಸಮಾನತೆಗೆ ಧಕ್ಕೆ ತಂದಂತೆ. ಆದ್ದರಿಂದ ಗಣಪತಿ ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಪಟ್ಟು ಹಿಡಿದಿವೆ.

ಇದನ್ನೂ ನೋಡಿ: ಹಾಸನದಲ್ಲೊಂದು ಆಘಾತಕಾರಿ ಘಟನೆ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಬಂದ ಆಗಂತುಕ

ಚಿಕ್ಕಮಗಳೂರು ಜಿಲ್ಲಾ ವಕೀಲರ ಸಂಘ ಆಕ್ರೋಶ

ಇನ್ನೂ ಕೋರ್ಟ್ ಆವರಣದಲ್ಲಿ ಇನ್ನೂ ನಿರ್ಮಾಣವಾಗದ ಗಣಪತಿ ದೇವಾಲಯಕ್ಕೆ ದಲಿತ‌ ಸಂಘಟನೆಗಳು ಆಕ್ರೋಶ ವಿರೋಧಿಸಿದ ಬೆನ್ನಲ್ಲೇ ಜಿಲ್ಲಾಡಳಿತವು, ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘಕ್ಕೆ ಜಾಗವನ್ನ ನೀಡಿದೆ. ವಕೀಲರ ಸಂಘಕ್ಕೆ ನೀಡಿರುವ ಜಾಗದಲ್ಲಿ ಗಣಪತಿ ದೇವಾಲಯ ನಿರ್ಮಾಣಕ್ಕೆ ಚಿಕ್ಕಮಗಳೂರು ವಕೀಲರ ಸಂಘ ನಿರ್ಧಾರ ಮಾಡಿದೆ. ನಾವು ನಮಗೆ ನೀಡಿರುವ ಜಾಗದಲ್ಲಿ ನಾವು ಹಣ ಹಾಕಿ ದೇವಾಲಯ ಮಾಡಿದ್ರೆ ತಪ್ಪಾ ಎಂದು ಪ್ರಶ್ನೆ ಮಾಡಿದ್ದಾರೆ.

ಹೊಸ ಕೋರ್ಟ್ ಆವರಣದಲ್ಲಿ ಗಣಪತಿ ದೇವಾಲಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವವರ ವಿರುದ್ಧ ಚಿಕ್ಕಮಗಳೂರು ಜಿಲ್ಲಾ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು,  ರಾಜ್ಯದ ಬಹುತೇಕ ನ್ಯಾಯಾಲಯಗಳು ಗಣಪತಿ ದೇವಸ್ಥಾನವಿದೆ. ಹಾಗೆಯೇ ಚಿಕ್ಕಮಗಳೂರಿನ ಕೋರ್ಟ್ ನಲ್ಲಿಯೂ ಗಣಪತಿ ದೇವಸ್ಥಾನ ಇದೆ.ಚಿಕ್ಕಮಗಳೂರು ಕೋರ್ಟಿನ ಆವರಣದಲ್ಲಿರುವ ಗಣಪತಿಗೆ ಅದರದ್ದೇ ಆದ ಇತಿಹಾಸವಿದೆ. ಹೊಯ್ಸಳರ ಕಾಲದಲ್ಲಿ ಕೆತ್ತನೆ ಮಾಡಿದ ಗಣಪತಿ ವಿಗ್ರಹವಿದು. ಬೇರೆ ದೇಶಕ್ಕೆ ಕೊಂಡೊಯ್ಯುವ ಸಂದರ್ಭದಲ್ಲಿ ಮದ್ರಾಸ್ ಹಾರ್ಬರ್ ವಿಗ್ರಹ ಸಿಕ್ಕಿತ್ತು ಎಂದಿದ್ದಾರೆ.

ಗಣಪತಿ ವಿಗ್ರಹದ ಇತಿಹಾಸ ಬಿಚ್ಚಿಟ್ಟ ವಕೀಲರು

ಇನ್ನು ದಲಿತ ಸಂಘಟನೆ ವಿರೋಧ ವ್ಯಕ್ತಪಡಿಸುತ್ತಿರುವ ಗಣಪತಿ ವಿಗ್ರಹಕ್ಕೆ ಇತಿಹಾಸವಿದ್ದು, ಅದನ್ನು ವಕೀಲರ ಸಂಘ ಅಧ್ಯಕ್ಷ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹೊಯ್ಸಳರ ಕಾಲದಲ್ಲಿ ಕೆತ್ತನೆ ಮಾಡಿದ ಗಣಪತಿ ವಿಗ್ರಹ 1960ರ ದಶಕದಲ್ಲಿ ಕಳವಾಗಿತ್ತು. ಈ ಪ್ರಕರಣ 1970ರಲ್ಲಿ ನಮ್ಮ ನ್ಯಾಯಾಲಯಕ್ಕೆ ಬಂದಿತ್ತು. ಬಳಿಕ ಗಣಪತಿ ಕಳುವಾದ ಸಂಬಂಧಪಟ್ಟ ಕೇಸ್ ಇಲ್ಲೇ ಅಂತ್ಯವಾಗಿತ್ತು. ಇನ್ನು ಕೇಸ್ ಮುಕ್ತಾಯವಾದ ವಸ್ತುಗಳನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ಇದನ್ನ ಇಲ್ಲಿಯೇ ಉಳಿಸಿಕೊಳ್ಳಲಾಗಿತ್ತು.1972 ರಲ್ಲಿ ಅಂದಿನ ನ್ಯಾಯಾಧೀಶರು ವಕೀಲರು ನ್ಯಾಯಾಲಯದ ಸಿಬ್ಬಂದಿ ಸೇರಿ ಇದನ್ನ ಇಲ್ಲಿ ಪ್ರತಿಷ್ಠಾಪನೆ ಮಾಡಿದ್ದರು. ಇದೀಗ ಹೊಸ ಕೋರ್ಟ್ ಕಟ್ಟಡವಾಗಿದೆ. ಈ ಗಣಪತಿಯನ್ನ ಇಲ್ಲಿ ಅನಾಥವಾಗಿ ಬಿಟ್ಟು ಹೋಗಲ್ಲ. ಹೊಸದಾಗಿ ಕಟ್ಟಡ ನಿರ್ಮಾಣವಾಗಿದೆ. ಅದರ ಪಕ್ಕದಲ್ಲಿಯೇ ವಕೀಲರಿಗಾಗಿ ಜಾಗವನ್ನು ಮೀಸಲಿಡಲಾಗಿದೆ ಆ ಜಾಗದಲ್ಲಿ ಗಣಪತಿ ದೇವಸ್ಥಾನ ಕಟ್ಟಿದರೆ ತಪ್ಪೇನು ಎನ್ನುವುದು ವಕೀಲರ ವಾದ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೇಳಿದ್ದಿಷ್ಟು

ಇದೆ ವಿಚಾರಕ್ಕೆ ಎರಡು ಬಾರಿ ವಕೀಲರ ಸಂಘದಲ್ಲಿ ಸಭೆ ನಡೆಸಲಾಗಿದ್ದು, ಎರಡು ಸಭೆಯಲ್ಲಿಯೂ ಒಮ್ಮತದ ನಿರ್ಧಾರ ಮಾಡಲಾಗಿದೆ. ನಮ್ಮ ಹಣದಿಂದ,ಸಿಬ್ಬಂದಿ ಹಣದಿಂದ ದೇವಸ್ಥಾನ ಕಟ್ಟುತ್ತಿದ್ದೇವೆ.
ನಾವು ಕಟ್ಟಲು ಹೊರಟಿರುವುದು ನ್ಯಾಯಾಲಯದ ಒಳಗೂ ಅಲ್ಲ ಹೊರಗೂ ಅಲ್ಲ. ನಮಗೆ ನಮ್ಮ ವಕೀಲರ ಭವನಕ್ಕೆ ನೀಡಿರುವ ಜಾಗದಲ್ಲಿ ವಕೀಲರು ಧರ್ಮಾತೀತವಾಗಿ ಗಣಪತಿ ದೇವಸ್ಥಾನ ಕಟ್ಟಲು ಒಪ್ಪಿದ್ದಾರೆ.
ಗಣಪತಿ ಎಲ್ಲಾ ಧರ್ಮದವರಿಗೂ ಸೇರಿದವನು. ನಾವಿನ್ನು ದೇವಾಲಯವನ್ನ ಕಟ್ಟಿಯೇ ಇಲ್ಲ. ಆಗಲೇ ವಿವಾದ ‌ಮಾಡುತ್ತಿರುವುದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಬಹುತೇಕ ಕೋರ್ಟ್ ನಲ್ಲಿ‌ ಗಣಪತಿ ದೇವಾಲಯಗಳಿದೆ. ಆದ್ರೆ ಕಾಫಿನಾಡಿನಲ್ಲಿ ನಿರ್ಮಾಣವಾಗಿರುವ ನೂತನ ‌ಕೋರ್ಟ್ ನಲ್ಲಿ‌ ಗಣಪತಿ ದೇವಾಲಯ ‌ನಿರ್ಮಾಣಕ್ಕೂ ಮುನ್ನವೇ ವಿವಾದ ಸೃಷ್ಟಿಯಾಗಿದೆ. ಗಣಪತಿ ದೇವಾಲಯ ನಿರ್ಮಾಣ ವಿವಾದ ಇನ್ಯಾವ ಹೊಸ ಸ್ವರೂಪ ಪಡೆಯುತ್ತೋ ಗೊತ್ತಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೋಮಲ್‌ ಹೊಸ ಸಿನಿಮಾ ‘ತೆನಾಲಿ DA LLB’; ಮೊದಲ ಬಾರಿ ಲಾಯರ್ ಪಾತ್ರ – Kannada News | Komal Kumar starrer Tenali DA LLB movie poster released

ಕಾಮಿಡಿ ಸಿನಿಮಾಗಳಿಂದ ಹೆಸರಾದ ನಟ ಕೋಮಲ್ ಕುಮಾರ್ (Komal Kumar) ಅವರು ಹೊಸ ಕಥೆ ಮೂಲಕ ಅಭಿಮಾನಿಗಳನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ. ಕಳೆದ ವರ್ಷ ಅವರು ನಟಿಸಿದ ‘ಕೋಣ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ‘ತೆನಾಲಿ DA LLB’ ಸಿನಿಮಾದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ಚ್ಯೂಸಿ ಆಗಿರುವ ಕೋಮಲ್‌ ಅವರು ಬಂದ ಸಿನಿಮಾಗಳನ್ನೆಲ್ಲ ಒಪ್ಪಿಕೊಳ್ಳಲ್ಲ. ಸಾಕಷ್ಟು ಕಥೆಗಳನ್ನು ಕೇಳಿ ವಿಭಿನ್ನ ಎನಿಸುವ ಕಥೆಗೆ ಮಾತ್ರ ಸಹಿ ಮಾಡುತ್ತಿದ್ದಾರೆ. ಈಗ ಅವರಿಗೆ ‘ತೆನಾಲಿ ಡಿಎ ಎಲ್​ಎಲ್​ಬಿ’ (Tenali DA LLB) ಸಿನಿಮಾದ ಕಥೆ ಇಷ್ಟ ಆಗಿದೆ.

ಶೀರ್ಷಿಕೆಯೇ ಸೂಚಿಸುವಂತೆ ‘ತೆನಾಲಿ DA LLB’ ಸಿನಿಮಾದಲ್ಲಿ ಕೋಮಲ್ ಕುಮಾರ್ ಅವರು ಲಾಯರ್ ಪಾತ್ರ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಪೋಸ್ಟರ್​​ನಲ್ಲಿ ಕೋಮಲ್ ಅವರ ಪಾತ್ರದ ಗೆಟಪ್ ಕಾಣಿಸಿದೆ. ಕಪ್ಪು ಕೋಟು ಧರಿಸಿ, ಲಾಯರ್ ಗೆಟಪ್​​ನಲ್ಲಿ ಕೋಮಲ್ ಅವರು ಪೋಸ್ ನೀಡಿದ್ದಾರೆ.

‘ತೆನಾಲಿ ಡಿಎ ಎಲ್‌ಎಲ್‌ಬಿ’ ಸಿನಿಮಾವನ್ನು ಸಿದ್ದ್ರುವ್‌ ಸಿದ್ದು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ವಿಜಯ್ ರಾಘವೇಂದ್ರ ಅಭಿನಯದ ‘ಮರೀಚಿ’ ಸಿನಿಮಾಗೆ ಸಿದ್ದ್ರುವ್‌ ಸಿದ್ದು ಆ್ಯಕ್ಷನ್-ಕಟ್ ಹೇಳಿದ್ದರು. ವಿಮರ್ಶೆಯ ದೃಷ್ಟಿಯಿಂದ ಆ ಸಿನಿಮಾ ಗಮನ ಸೆಳೆದಿತ್ತು. ‘ಮರೀಚಿ’ ಬಳಿಕ ಸಿದ್ದ್ರುವ್‌ ಸಿದ್ದು ಅವರು ಕೋಮಲ್‌ ಅವರಿಗಾಗಿ ವಿಭಿನ್ನವಾದ ಕಥೆ ಬರೆದುಕೊಂಡಿದ್ದಾರೆ. ಇದು ಈಗಿನ ಕಾಲಘಟ್ಟಕ್ಕೆ ಸರಿಹೊಂದುವ ಕಥೆ ಎಂದು ಚಿತ್ರತಂಡ ಹೇಳಿದೆ.

ಸದ್ಯಕ್ಕೆ ಪೋಸ್ಟರ್‌ ಬಿಡುಗಡೆ ಮಾಡಿರೋ ‘ತೆನಾಲಿ ಡಿಎ ಎಲ್‌ಎಲ್‌ಬಿ’ ಚಿತ್ರತಂಡ ಮೇ ತಿಂಗಳಲ್ಲಿ ಶೂಟಿಂಗ್ ಆರಂಭಿಸಲಿದೆ. ವಿಶೇಷ ಏನೆಂದರೆ, ಇದೇ ಮೊದಲ ಬಾರಿಗೆ ಲಾಯರ್‌ ಆಗಿ ನಟನೆ ಮಾಡುತ್ತಿರುವ ಕೋಮಲ್‌ ಕುಮಾರ್ ಅವರು ನಿಜ ಜೀವನದಲ್ಲಿಯೂ ಎಲ್​ಎಲ್​ಬಿ ಓದಿದ್ದಾರೆ. ಈಗ ತೆರೆ ಮೇಲೆ ಲಾಯರ್‌ ಆಗಿ ಮಿಂಚಲು ಅವರು ರೆಡಿಯಾಗಿದ್ದಾರೆ.

ಇದನ್ನೂ ಓದಿ: ತುಳು ಕಲಿಯಲು ಪ್ರಯತ್ನಿಸುತ್ತಿರುವ ನಟ ಕೋಮಲ್

ಸಿದ್ದ್ರುವ್‌ ಸಿದ್ದು ಅವರು ‘ತೆನಾಲಿ ಡಿಎ ಎಲ್‌ಎಲ್‌ಬಿ’ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆಯನ್ನೂ ಬರೆದಿದ್ದಾರೆ. ಸಿದ್ದ್ರುವ್‌ ಸಿದ್ದು, ಸಂತೋಷ್‌ ಮಾಯಪ್ಪ, ರೇಣುಕಾ ಪ್ರಸಾದ್‌, ಪ್ರದೀಪ್‌ ಕುಮಾರ್‌ ಮಹಾಲಿಂಗಯ್ಯ ಅವರು ಬಂಡವಾಳ ಹೂಡುತ್ತಿದ್ದಾರೆ. ರಿತ್ವಿಕ್‌ ಮುರಳಿಧರ್ ಅವರ ಸಂಗೀತ ನಿರ್ದೇಶನ, ಉದಯ್‌ ಲೀಲಾ ಅವರ ಛಾಯಾಗ್ರಹಣ ಈ ಸಿನಿಮಾಗೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ – Kannada News | Kavya talks about why she participated in Bigg Boss show

ಬಿಗ್​​ಬಾಸ್ (Bigg Boss) ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೊರಂಜನಾ ಕ್ಷೇತ್ರದಿಂದ ಬಿಗ್​​ಬಾಸ್​​ಗೆ ಬರುವ ಅನೇಕರಿಗೆ ಏನಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದವರು. ಬಿಗ್​​ಬಾಸ್​​ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯಾ ಬಿಗ್​​ಬಾಸ್​ಗೆ ಬರಲು ಕಾರಣ ಏನಿತ್ತು? ಇಲ್ಲಿದೆ ಮಾಹಿತಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್: ಯೂಟ್ಯೂಬ್ ಹಣದಿಂದಲೇ ಮುಂಬೈನಲ್ಲಿ ಮನೆ ಖರೀದಿಸಿದ ರಕ್ಷಿತಾ ಶೆಟ್ಟಿ – Kannada News | BBK 12 Rakshita Shetty purchased home in Mumbai by her YouTube earnings

ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಮೂಲಕ ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಾಯಿತು. ಈ ಶೋನಲ್ಲಿ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ರಕ್ಷಿತಾ ಶೆಟ್ಟಿ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಬಿಗ್ ಬಾಸ್ ಶೋಗೆ ಬರುವುದಕ್ಕೂ ಮುನ್ನವೇ ಮುಂಬೈನಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಮನೆ ಖರೀದಿ ಮಾಡಿದ್ದರು. ಅದು ಹೇಗೆ ಸಾಧ್ಯವಾಯ್ತು ಎಂಬುದನ್ನು ಅವರು ಟಿವಿ9 ಸಂದರ್ಶನದಲ್ಲಿ ವಿವರಿಸಿದ್ದಾರೆ.

‘ಯೂಟ್ಯೂಬ್ ಹಣ ತಕ್ಷಣಕ್ಕೆ ಬರಲ್ಲ. ಸಾವಿರ ವೀವ್ಸ್ ಬಂದರೆ ಅದರಿಂದ 70 ರೂಪಾಯಿ ಬರುತ್ತದೆ. ಹೆಚ್ಚು ವೀವ್ಸ್ ಬಂದರೆ ಹಣ ಆಗುತ್ತದೆ. ಎಲ್ಲ ವಿಡಿಯೋ ಓಡುತ್ತೆ ಅಂತ ಹೇಳೋಕೆ ಆಗಲ್ಲ. ಮನೆ ತೆಗೆದುಕೊಂಡಿದ್ದು ನನಗೆ ದೊಡ್ಡ ರಿಸ್ಕ್. ಯಾಕೆಂದರೆ, ಯೂಟ್ಯೂಬ್ ಹಣ ಸತತವಾಗಿ ಬರುತ್ತೆ ಅಂತ ಹೇಳೋಕೆ ಆಗಲ್ಲ. ಈ ತಿಂಗಳು ನಾನು ಒಂದು ಲಕ್ಷ ದುಡಿದರೆ, ಇನ್ನೊಂದು ದಿನಗಳು ಬರೀ 5 ಸಾವಿರ ಆಗಬಹುದು’ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ.

‘ಅದರಿಂದ ಸ್ವಲ್ಪ ಸ್ವಲ್ಪ ಹಣ ಉಳಿತಾಯ ಮಾಡಿ ನಾನು ಮನೆಗೆ ಡೌನ್​ ಪೇಮೆಂಟ್ ಮಾಡಿದ್ದೇನೆ. ಇಎಂಐ ಕಟ್ಟುತ್ತಿದ್ದೇನೆ. ನಮ್ಮಂತಹ ಕೆಳ ಮಧ್ಯಮ ವರ್ಗದ ಕುಟುಂಬದವರಿಗೆ ಉಳಿತಾಯ ಮಾಡೋದು ಕಷ್ಟ. ನಾನು ಹೆಚ್ಚು ಖರ್ಚು ಮಾಡಲ್ಲ. ಆದರೆ ತಿನ್ನಲು ಖರ್ಚು ಮಾಡುತ್ತೇನೆ. ಮನೆಯವರಿಗಾಗಿ ಖರ್ಚು ಮಾಡುತ್ತೇನೆ. ಅದರಲ್ಲಿ ನನಗೆ ನೆಮ್ಮದಿ ಸಿಗುತ್ತದೆ’ ಎಂದಿದ್ದಾರೆ ರಕ್ಷಿತಾ ಶೆಟ್ಟಿ.

‘ಹೀಗೆ ಹಣ ಉಳಿತಾಯ ಮಾಡಿ, ನಾನು ಮನೆ ಖರೀದಿಸಲು ಡೌನ್ ಪೇಮೆಂಟ್ ಮಾಡಿದ್ದು ಯೂಟ್ಯೂಬ್​​ನಿಂದಲೇ. 15 ಲಕ್ಷ ರೂಪಾಯಿ ಡೌನ್ ಪೇಮೆಂಟ್ ಅಂದುಕೊಂಡು ಹೋಗುತ್ತೇನೆ. ಇನ್ನುಳಿದ ಖರ್ಚು ಸೇರಿ 35 ಲಕ್ಷ ರೂಪಾಯಿಗೆ ಏರಿಕೆ ಆಗುತ್ತದೆ. ಆ ಸಂದರ್ಭದಲ್ಲಿ ಕೈಯಲ್ಲಿ ದುಡ್ಡು ಇರಬೇಕಾಗುತ್ತದೆ. ಅದು ಸುಲಭ ಅಲ್ಲ. ಈಗ ಸಾಲ ತೀರಿಸುತ್ತಾ ಇದ್ದೇನೆ’ ಎಂದು ರಕ್ಷಿತಾ ಶೆಟ್ಟಿ ಅವರು ಹೇಳಿದ್ದಾರೆ.

ಇದನ್ನೂ ಓದಿ: 25 ಲಕ್ಷ ರೂಪಾಯಿ ಹಣವನ್ನು ಏನ್​​ ಮಾಡ್ತೀರಾ? ಇದನ್ನು ಖರೀದಿಸುವುದು ನನ್ನ ಆಸೆ ಎಂದ ರಕ್ಷಿತಾ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಬಂದ ಬಳಿಕ ರಕ್ಷಿತಾ ಶೆಟ್ಟಿ ಅವರ ಜನಪ್ರಿಯತೆ ಜಾಸ್ತಿ ಆಗಿದೆ. ಇದು ಅವರ ಮೊದಲ ರಿಯಾಲಿಟಿ ಶೋ. ಮೊದಲನೇ ಪ್ರಯತ್ನದಲ್ಲೇ ಅವರು ಫಿನಾಲೆ ತನಕ ಬಂದು ರನ್ನರ್ ಅಪ್ ಆದರು. ತುಳುನಾಡಿನಲ್ಲಿ ರಕ್ಷಿತಾ ಶೆಟ್ಟಿ ಅವರಿಗೆ ತುಂಬ ಬೆಂಬಲ ಸಿಕ್ಕಿತು. ಗಿಲ್ಲಿ ನಟ ಅವರು ಈ ಶೋ ವಿನ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿದು ವಾವ್ಹ್​​​​​ ವಂಡರ್‌ಫುಲ್‌ ಎಂದ ಜಪಾನಿನ ವ್ಯಕ್ತಿ! – Kannada News | Japanese Creator’s Viral Bangalore Food Journey: Rameswaram Cafe’s 200 South Indian Meal

ಬೆಂಗಳೂರು, ಜ.20: ಬೆಂಗಳೂರಿನ ಬಗ್ಗೆ ಕೆಲವರು ದೂರುತ್ತಾರೆ, ಇನ್ನು ಕೆಲವರು ಮೆಚ್ಚಿಕೊಳ್ಳುತ್ತಾರೆ.  ಸಿಲಿಕಾನ್​​​​​ ಸಿಟಿಯಲ್ಲಿ ಎಲ್ಲವೂ ಸಿಗುತ್ತದೆ. ಎಲ್ಲದಕ್ಕೂ ಅವಕಾಶ ಇದೆ. ಅದಕ್ಕೆ ಅನೇಕರಿಗೆ ಇಷ್ಟು, ಇನ್ನು ಕೆಲವೊಮ್ಮೆ ಕೊಲೆ, ದರೋಡೆ, ಅತ್ಯಾಚಾರ, ಕೆಲವೊಂದು ಬೆಚ್ಚಿ ಬೀಳಿಸುವ ಘಟನೆಗಳು, ಜತೆಗೆ ಹೆಚ್ಚಿನ ಜನರಿಗೆ ತೊಂದರೆ ಆಗಿರುವುದು ಇಲ್ಲಿನ ಟ್ರಾಪಿಕ್, ಈ ಕಾರಣಗಳಿಂದ ಬೆಂಗಳೂರು ಅಪಾಯ ಎಂದು ಕೆಲವರಿಗೆ ಅನ್ನಿಸುತ್ತದೆ. ಉಳಿದಂತೆ ಬೆಂಗಳೂರಿನಲ್ಲಿ ಎಲ್ಲವೂ ಉತ್ತಮವಾಗಿದೆ. ಅದರಲ್ಲೂ ಆಹಾರ ವಿಚಾರದಲ್ಲಿ (Bangalore food)  ಒಂದು ಕೈ ಹೆಚ್ಚು, ಇಲ್ಲಿ ಎಲ್ಲ ಊರಿನ, ಎಲ್ಲ ಬಗೆಯ ಆಹಾರಗಳು ಸಿಗುತ್ತದೆ. ಇದೀಗ ಜಪಾನ್​​​​​ನ ವ್ಯಕ್ತಿಗೆ ಆಹಾರದಿಂದ ಬೆಂಗಳೂರು ತುಂಬಾ ಇಷ್ಟವಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಜಪಾನಿನ ಕಂಟೆಂಟ್ ಕ್ರಿಯೇಟರ್ ಒಬ್ಬರು ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಇವರು ತಮಗೆ ಇಷ್ಟವಾದ ಆಹಾರವನ್ನು ಖರೀದಿಸುವ ಬದಲು, ತಪ್ಪಿ ದಕ್ಷಿಣ ಭಾರತದ ಆಹಾರವನ್ನು ಆರ್ಡರ್​​ ಮಾಡಿದ್ದಾರೆ. ಇದೀಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಶೋ ಟೇಕಿ ಎಂಬ ಕಂಟೆಂಟ್ ಕ್ರಿಯೇಟರ್ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಸಸ್ಯಾಹಾರಿ ಉಪಾಹಾರ ಗೃಹಕ್ಕೆ ನಾನು ಮೊದಲ ಬಾರಿಗೆ ಭೇಟಿ ನೀಡಿದ್ದೇನೆ. ಇಲ್ಲಿ ನಾನು ನನಗೆ ಇಷ್ಟವಾದ ಆಹಾರ ಆರ್ಡರ್​ ಮಾಡುವ ಬದಲು, ಹೊಸದಾಗಿ ಏನಿದೆ ಎಂದು ಅಲ್ಲಿನ ಸಿಬ್ಬಂದಿಯನ್ನು ಕೇಳಿದ್ದೇನೆ. ಅದಕ್ಕೆ ಅವರು ಕರ್ನಾಟಕ ಶೈಲಿಯ ಮುದ್ದೆ ಊಟ ಕೊಟ್ಟಿದ್ದಾರೆ. ವರ್ಣರಂಜಿತ, ಸಾಂಪ್ರದಾಯಿಕ ಖಾದ್ಯಗಳಾದ, ಸಾದಾ ಅನ್ನ, ರಾಗಿ ಮುದ್ದೆ, ಮಸಾಲೆ ವಡೆ, ಪರಿಮಳಯುಕ್ತ ಸಾಂಬಾರ್, ಮೆಣಸಿನಕಾಯಿ ರಸಂ, ಕೋಸಂಬರಿ, ಉಪ್ಪಿನಕಾಯಿ, ಮೊಸರು ಮತ್ತು ಮೆಣಸಿನಕಾಯಿ ನೀಡಿದರು. ಕೊನೆಗೆ ಒಂದು ಕಪ್ ಫಿಲ್ಟರ್ ಕಾಫಿ ಕುಡಿದು ಊಟದ ಗಮ್ಮತ್​​​ ಮುಗಿಸಿದ್ದೇನೆ ಎಂದು ಹೇಳಿದ್ದಾರೆ. ಊಟ ಎಲ್ಲ ಮುಗಿಸಿದ ನಂತರ ಬಿಲ್​ ನೋಡಿ ಅಚ್ಚರಿಗೊಂಡಿದ್ದಾರೆ. ಕೇವಲ 200 ರೂ. ಆಗಿದೆ ಎಂದು ಹೇಳಿದ್ದಾರೆ. ಪ್ರಾಮಾಣಿಕವಾಗಿ ಹೇಳುವುದಾದರೆ, ನಾನು ಸಸ್ಯಾಹಾರಿ ಆಹಾರವನ್ನು ಕಡಿಮೆ ಸೇವನೆ ಮಾಡುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್​​ ಶಾಕ್: ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್

ಇಲ್ಲಿದೆ ನೋಡಿ ವೈರಲ್​ ಪೋಸ್ಟ್​:

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನೀವು ಸಾಂಪ್ರದಾಯಿಕ ತಿಂಡಿ ಕೇಳಿದ್ದೀರಿ, ಅದಕ್ಕೆ ಈ ಆಹಾರವನ್ನು ನೀಡಿದ್ದಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು ತುಂಬಾ ಯೋಗ್ಯ ಸ್ಥಳದಲ್ಲಿ ಊಟ ಮಾಡಿದ್ದೀರಾ ಎಂದು ಕಮೆಂಟ್​ ಮಾಡಿದ್ದಾರೆ. ಇಲ್ಲಿ ಎಲ್ಲರೂ ಅಕ್ಷರಶಃ ಇಂಗ್ಲಿಷ್ ಮಾತನಾಡುತ್ತಾರೆ. ಅವರಿಗೆ ಏನು ಬೇಕಾದರೂ ಕೇಳಿ ನಿರಾಳರಾಗಿರಿ. ಅವರು ಕೇಳಲು ಮತ್ತು ಸಹಾಯ ಮಾಡಲು ಸಿದ್ಧ ಎಂದು ಮತ್ತೊಬ್ಬರು ಹೇಳಿದ್ದಾರೆ. ನೀವು ಇನ್ನೊಮ್ಮೆ ಮೇಘನಾ ಬಿರಿಯಾನಿ ಪ್ರಯತ್ನಿಸಿ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು? – Kannada News | What is future plans of Bigg Boss Kannada runner up Rakshita Shetty

ರಕ್ಷಿತಾ ಶೆಟ್ಟಿ (Rakshita Shetty) ಬಿಗ್​​ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಮೊದಲ ದಿನವೇ ಶೋನಿಂದ ಹೊರ ಹಾಕಲ್ಪಟ್ಟ ರಕ್ಷಿತಾ ಶೆಟ್ಟಿ ಮತ್ತೆ ರೀ ಎಂಟ್ರಿ ಆಗಿ ಕೊನೆಯ ದಿನದ ವರೆಗೆ ಇದ್ದಿದ್ದು ಸಾಮಾನ್ಯ ಸಾಧನೆಯಲ್ಲ. ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್ ಮುಂದುವರೆಸುತ್ತಾರಾ? ಮನೊರಂಜನಾ ಕ್ಷೇತ್ರಕ್ಕೆ ಕಾಲಿಡುತ್ತಾರಾ? ರಕ್ಷಿತಾ ಮುಂದಿರುವ ಆಯ್ಕೆಗಳು ಏನೇನು? ಅವರೇ ಹೇಳಿದ್ದಾರೆ ಕೇಳಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

Source link