All posts by nagaraj11081993

ಸಲ್ಮಾನ್ ಖಾನ್ ಅನ್ನು ಟೀಕಿಸಿದ ನಿರ್ದೇಶಕನಿಗೆ ಎದುರಾಯ್ತು ಸಂಕಷ್ಟ

ಸಲ್ಮಾನ್ ಖಾನ್ ಅನ್ನು ಟೀಕಿಸಿದ ನಿರ್ದೇಶಕನಿಗೆ ಎದುರಾಯ್ತು ಸಂಕಷ್ಟ

ಚಿತ್ರರಂಗದಲ್ಲಿ ಗೆಲ್ಲುತ್ತಿದ್ದವರಿಗೆ ಮಾತ್ರವೇ ಗೌರವ. ಕೆಳಗೆ ಬಿದ್ದರೆ ಸಾಕು ಆಳಿಗೊಂದು ಕಲ್ಲು ಒಗೆಯುತ್ತಾರೆ. ‘ಗಜಿನಿ’, ‘ತುಪಾಕಿ’, ‘ಕತ್ತಿ’, ‘ಸ್ಟಾಲಿನ್’ ಇನ್ನೂ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಖ್ಯಾತ ತಮಿಳು ನಿರ್ದೇಶಕ ಎಆರ್ ಮುರುಗದಾಸ್ ಅವರಿಗೆ ಇತ್ತೀಚೆಗೆ ಸಮಯ ಸರಿ ಇದ್ದಂತಿಲ್ಲ. ಹಿಂದಿಯಲ್ಲಿ ಸಲ್ಮಾನ್ ಖಾನ್ ಜೊತೆಗೆ ಮಾಡಿದ ಸಿನಿಮಾ ಇನ್ನಿಲ್ಲದಂತೆ ಸೋತಿತು. ಸಿನಿಮಾ ಸೋತಿದ್ದಕ್ಕೆ ಸಲ್ಮಾನ್ ಖಾನ್ ಬೇಜವಾಬ್ದಾರಿತನ ಕಾರಣ ಎಂದು ಮುರುಗದಾಸ್ ದೂರಿದ್ದರು. ಬಳಿಕ ಅವರು ತಮಿಳಿನಲ್ಲಿ ನಿರ್ದೇಶಿಸಿದ ‘ಮದರಾಸಿ’ ಸಿನಿಮಾ ಸಹ ತೋಪಾಯ್ತು. ಇದೀಗ ಅದರ ಬೆನ್ನಲ್ಲೆ ಮುರುಗದಾಸ್ ವಿರುದ್ಧ ದೂರು ದಾಖಲಾಗಿದೆ. ಅದೂ ಅವರದ್ದೇ ಸಿನಿಮಾಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕರಿಂದ.

ಮುರುಗದಾಸ್ ನಿರ್ದೇಶಿಸಿದ್ದ ‘ಮದರಾಸಿ’ ಸಿನಿಮಾದ ನಿರ್ಮಾಪಕರು ಇದೀಗ ಮುರುಗದಾಸ್ ವಿರುದ್ಧ ಬಜೆಟ್​​ಗೆ ಸಂಬಂಧಿಸಿದಂತೆ ಕೇಸು ದಾಖಲಿಸಿದ್ದಾರೆ. ‘ಮದರಾಸಿ’ ಸಿನಿಮಾವನ್ನು ಶ್ರೀ ಲಕ್ಷ್ಮಿ ಫಿಲಮ್ಸ್ ನಿರ್ಮಾಣ ಮಾಡಿತ್ತು. ಶ್ರೀಲಕ್ಷ್ಮಿ ಪ್ರಸಾದ್ ಸಿನಿಮಾದ ನಿರ್ಮಾಪಕರು. ಇದೀಗ ಅವರೇ ಮುರುಗದಾಸ್ ವಿರುದ್ಧ ಕೇಸು ದಾಖಲಿಸಿದ್ದಾರೆ. ‘ಮದರಾಸಿ’ ಸಿನಿಮಾದ ಬಜೆಟ್​ ಅನ್ನು ಮುರುಗದಾಸ್ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಸಲ್ಮಾನ್ ಖಾನ್ ವಿರುದ್ಧ ಬೇಜವಾಬ್ದಾರಿಯ ಆರೋಪ ಮಾಡಿದ್ದ ಮುರುಗದಾಸ್ ವಿರುದ್ಧ ಈಗ ಬೇಜವಬ್ದಾರಿ ಆರೋಪ ಬಂದಿದೆ.

ಇದನ್ನೂ ಓದಿ:ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್

ಮುರುಗದಾಸ್ ಅವರು ಮೊದಲು ಸಿನಿಮಾಕ್ಕೆ 115 ಕೋಟಿ ಬಜೆಟ್ ನಿಗದಿ ಪಡಿಸಿದ್ದರಂತೆ. ಆದರೆ ಮುರುಗದಾಸ್ ಅವರ ಬೇಜವಾಬ್ದಾರಿತನ ಮತ್ತು ಸೂಕ್ತ ಪ್ಲಾನಿಂಗ್ ಇಲ್ಲದ ಕಾರಣದಿಂದಾಗಿ ಸಿನಿಮಾದ ಬಜೆಟ್ 170 ಕೋಟಿ ರೂಪಾಯಿಗಳಾಯ್ತು ಎಂದು ನಿರ್ಮಾಣ ಸಂಸ್ಥೆ ಆರೋಪಿಸಿದೆ. ಮುರುಗದಾಸ್ ಅವರು ಸರಿಯಾಗಿ ಪ್ಲಾನಿಂಗ್ ಮಾಡಲಿಲ್ಲ, ಹಾಗೂ ಒಂದೇ ಸಮಯದಲ್ಲಿ ಎರಡೆರಡು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರಿಂದ ಬಜೆಟ್ ಹೆಚ್ಚಾಯ್ತು. ಆಗಿರುವ ನಷ್ಟದಲ್ಲಿ 10 ಕೋಟಿ ಹಣವನ್ನು ಮುರುಗದಾಸ್ ಮರಳಿ ಕೊಡಬೇಕು ಎಂದು ನಿರ್ಮಾಪಕರು ಒತ್ತಾಯಿಸಿದ್ದಾರೆ.

ಅನಿರೀಕ್ಷಿತ ಆರ್ಥಿಕ ಹೊರೆಯಿಂದ ಬೇಸತ್ತ ನಿರ್ಮಾಪಕರು ನಿರ್ದೇಶಕರು ಮತ್ತು ನಿರ್ಮಾಪಕರ ಮಂಡಳಿಯನ್ನು ಸಂಪರ್ಕಿಸಿ ಮುರುಗದಾಸ್ ವಿರುದ್ಧ ದೂರು ನೀಡಿದ್ದು, 10 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಕೋರಿದ್ದರು. ಅದರಂತೆ ಈ ಬಗ್ಗೆ ಮಾತುಕತೆ ನಡೆದಿದ್ದು, ಒಂದು ಒಪ್ಪಂದಕ್ಕೆ ಬರಲಾಗಿದೆ. ಇದರನ್ವಯ ಮುರುಗದಾಸ್ ಅವರು ‘ರಮಣ 2’ (ತೆಲುಗು ಆವೃತ್ತಿ) ಚಿತ್ರಕ್ಕೆ ಯಾವುದೇ ಸಂಭಾವನೆ ಪಡೆಯದೆ ಕಥೆಯನ್ನು ಬರೆದುಕೊಡಲು ಒಪ್ಪಿಕೊಂಡಿದ್ದಾರೆ. ಈ ಮೂಲಕ ನಿರ್ಮಾಪಕರಿಗೆ ಉಂಟಾದ ಆರ್ಥಿಕ ನಷ್ಟವನ್ನು ಸರಿಹೂಗಿಸಲು ನಿರ್ಧರಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿ ಗ್ಯಾಸ್​​ ಸಿಲಿಂಡರ್​​ ಬೆನ್ನಲ್ಲೇ ರಸಗೊಬ್ಬರ ಅಭಾವ ಆತಂಕ: ಸೂಕ್ತ ಕ್ರಮಕ್ಕೆ ಆಗ್ರಹ

ಹುಬ್ಬಳ್ಳಿ, ಮಾರ್ಚ್​ 29: ಇರಾನ್​​ ಇಸ್ರೇಲ್, ಅಮೆರಿಕಾ ನಡುವೆ ನಡೆಯುತ್ತಿರುವ ಯುದ್ದದಿಂದಾಗಿ (War) ನಮ್ಮ ದೇಶದ ಮೇಲೆ ಅನೇಕ ರೀತಿಯ ಪರಿಣಾಮಗಳಾಗುತ್ತಿವೆ. ಈಗಾಗಲೇ ಸಿಲಿಂಡರ್ ಅಭಾವ ಉಂಟಾಗಿದ್ದು, ಆಮದು, ರಫ್ತು ವ್ಯವಹಾರ ಕಡಿಮೆಯಾಗಿರೋದರಿಂದ ಅನೇಕ ವಸ್ತುಗಳ ಬೆಲೆ ಕೂಡ ಹೆಚ್ಚಾಗುತ್ತಿವೆ. ಇದರ ಜೊತೆಗೆ ಇದೀಗ ರಸಗೊಬ್ಬರಕ್ಕೂ ಅಭಾವ (Fertilizer Shortage) ಉಂಟಾಗುವ ಆತಂಕ ಎದುರಾಗಿದೆ. ಈ ಬಾರಿ ಮುಂಗಾರು ಬಿತ್ತನೆಗೆ ರಸಗೊಬ್ಬರ ಸಿಗುತ್ತೋ, ಇಲ್ವೋ ಅನ್ನೋ ಆತಂಕ ರೈತರನ್ನು ಕಾಡುತ್ತಿದೆ.

ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ ನಡೆಸುತ್ತಿರುವ ಯುದ್ದ, ಸದ್ಯಕ್ಕೆ ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಜಾಗತಿಕ ಮಟ್ಟದ ಎಲ್ಲಾ ದೇಶಗಳ ಮೇಲೆ ಅನೇಕ ವ್ಯತಿರಿಕ್ತ ಪರಿಣಾಮಗಳಾಗುತ್ತಿದ್ದು, ಅದಕ್ಕೆ ಭಾರತ ಕೂಡ ಹೊರತಾಗಿಲ್ಲ. ಈಗಾಗಲೇ ದೇಶದಲ್ಲಿ ಎಲ್​ಪಿಜಿ ಸಿಲಿಂಡರ್ ಅಭಾವ ಕಾಡುತ್ತಿದೆ. ಅನೇಕ ವಸ್ತುಗಳ ಬೆಲೆ ಕೂಡ ಹೆಚ್ಚಾಗಿವೆ. ಇನ್ನು ಈ ಯುದ್ಧ ರೈತರ ಮೇಲೆ ಕೂಡ ಅನೇಕ ದುಷ್ಪರಿಣಾಮ ಬೀರಿದೆ.

ಇದನ್ನೂ ಓದಿ: ಚಿಯಾ ಬೆಳೆಗಾರರಿಗೆ ತಟ್ಟಿದ ಯುದ್ಧದ ಬಿಸಿ: ಸರ್ರನೆ ಕುಸಿದ ದರ; ಬೀದರ್​​ ರೈತರು ಕಂಗಾಲು

ರಫ್ತು ಮಾಡಲಾಗದಿರುವುದರಿಂದ ಟೊಮ್ಯಾಟೋ, ಈರುಳ್ಳಿ ಸೇರಿದಂತೆ ಅನೇಕ ತರಕಾರಿ, ಆಹಾರ ಪದಾರ್ಥಗಳಿಗೆ ಸೂಕ್ತ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಇದರ ಜೊತೆಗೆ ಇದೀಗ ಗೊಬ್ಬರ ಅಭಾವದ ಆತಂಕ ರೈತರನ್ನು ಕಾಡುತ್ತಿದೆ. ರೈತರು ಹೆಚ್ಚಾಗಿ ಬಳಸುವುದು ಯೂರಿಯಾ, ಡಿಎಪಿ ಗೊಬ್ಬರ. ಆದರೆ ಈ ಗೊಬ್ಬರಗಳನ್ನು ಸಿದ್ಧ ಮಾಡಲು ಬೇಕಾಗುವ ಅನೇಕ ಕಚ್ಚಾವಸ್ತುಗಳು ಬರುವುದು ಗಲ್ಫ್​ ಸೇರಿದಂತೆ ಅನೇಕ ವಿದೇಶಗಳಿಂದ. ಇದೀಗ ಯುದ್ದದಿಂದಾಗಿ ಕಚ್ಚಾವಸ್ತುಗಳಿಗೆ ತೊಂದರೆಯಾಗಿದ್ದು, ರಸಗೊಬ್ಬರ ತಯಾರಿಕೆಗೆ ಸಮಸ್ಯೆಯಾಗ್ತಿದೆಯಂತೆ. ಇದು ರೈತರ ಆತಂಕವನ್ನು ಹೆಚ್ಚಿಸುತ್ತಿದೆ.

ರಸಗೊಬ್ಬರ ಅಂಗಡಿ ಮಾಲೀಕರು ಹೇಳುವುದೇನು?

ಈಗಾಗಲೇ ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಬೇಸಿಗೆಯ ಮಳೆ ಸುರಿದಿದೆ. ರೈತರು ಕೆಲವೇ ದಿನಗಳಲ್ಲಿ ಭೂಮಿ ಹದಮಾಡುವ ಕೆಲಸ ಆರಂಭಿಸಲಿದ್ದು, ಮೇ ಮೊದಲ ವಾರದಲ್ಲಿಯೇ ಬಿತ್ತನೆ ಆರಂಭಿಸಲಿದ್ದಾರೆ. ಈ ಸಮಯದಲ್ಲಿ ರೈತರಿಗೆ ಹೆಚ್ಚಿನ ಗೊಬ್ಬರದ ಅವಶ್ಯಕತೆ ಇದೆ. ಆದರೆ ಇದೇ ಪರಿಸ್ಥಿತಿ ಮುಂದುವರಿದರೆ ಮೇ, ಜೂನ್ ತಿಂಗಳಲ್ಲಿ ದೇಶದಲ್ಲಿ ರಸಗೊಬ್ಬರ ಅಭಾವ ಕಾಡಲಿದೆ ಎಂಬುವುದು ರಸಗೊಬ್ಬರ ಅಂಗಡಿ ಮಾಲೀಕರಾದ ಲಿಂಬಯ್ಯಸ್ವಾಮಿ ಮಾತು.

ಪರ್ಯಾಯ ಗೊಬ್ಬರಗಳ ಬಳಕೆಗೆ ಉತ್ತೇಜನ

ಧಾರವಾಡ ಜಿಲ್ಲೆಯೊಂದಕ್ಕೆ ವಾರ್ಷಿಕ 57 ಸಾವಿರ ಟನ್ ರಸಗೊಬ್ಬರ ಅವಶ್ಯಕತೆ ಇದೆ. ಸದ್ಯ ರಸಗೊಬ್ಬರ ಇದೆ ಅಂತ ಅಂಗಡಿ ಮಾಲೀಕರು ಹೇಳುತ್ತಿದ್ದರು ಕೂಡ, ಬಹುತೇಕ ಕಡೆ ಯೂರಿಯಾ, ಡಿಎಪಿ ಗೊಬ್ಬರ ಸಿಗುತ್ತಿಲ್ಲ. ಬಿತ್ತನೆ ಆರಂಭವಾದ ಮೇಲೆ ರಸಗೊಬ್ಬರ ಸಿಗದಿದ್ದರೆ ರೈತರ ಆಕ್ರೋಶ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ಅಂಗಡಿ ಮಾಲೀಕರ ಜೊತೆ ಸಭೆ ಕೂಡ ಮಾಡಿದ್ದಾರಂತೆ. ಕೇಂದ್ರ ರಸಗೊಬ್ಬರ ಇಲಾಖೆ ಕೂಡ ಈ ಬಗ್ಗೆ ಸಭೆ ಮಾಡಿದೆ. ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆ ಬಗ್ಗೆ ಚರ್ಚಿಸಿದ್ದು, ರೈತರು, ಯೂರಿಯಾ, ಡಿಎಪಿ ಬದಲಾಗಿ ಪರ್ಯಾಯ ಗೊಬ್ಬರಗಳ ಬಳಕೆಗೆ ಉತ್ತೇಜಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಇಂಧನ ಕೊರತೆ ವದಂತಿ: ಕೊಪ್ಪಳದಲ್ಲಿ ಪೆಟ್ರೋಲ್​​ ತುಂಬಿಸಲು ಬ್ಯಾರಲ್​​ ತಂದ ಜನ!

ಕೆಲವೇ ದಿನಗಳಲ್ಲಿ ಬಿತ್ತನೆ ಆರಂಭವಾಗಲಿದ್ದು, ಕೇಂದ್ರ ಸರ್ಕಾರ ಇನ್ನಷ್ಟು ಕ್ರಮಗಳನ್ನು ಕೈಗೊಂಡು, ಆಗುವ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕೆಲಸ ಮಾಡಬೇಕಿದೆ. ಬಿತ್ತನೆ ಸಮಯದಲ್ಲಿ ಗೊಬ್ಬರದ ಅಭಾವವಾದರೆ ರೈತರಿಗೆ ದೊಡ್ಡ ಮಟ್ಟದಲ್ಲಿ ತೊಂದರೆಯಾಗಲಿದ್ದು, ಈ ನಿಟ್ಟಿನಲ್ಲಿ ಈಗಿನಿಂದಲೇ ರಾಜ್ಯ ಮತ್ತು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

MI vs KKR Playing XI: ಟಾಸ್ ಗೆದ್ದ ಮುಂಬೈ; ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು

ಐಪಿಎಲ್ 19 ನೇ ಸೀಸನ್‌ನ (IPL 2026) ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (Mumbai Indians vs Kolkata Knight Riders) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದು, ಅಜಿಂಕ್ಯ ರಹಾನೆ ಕೆಕೆಆರ್ ತಂಡದ ನಾಯಕರಾಗಿದ್ದಾರೆ. ಈ ಪಂದ್ಯ ಮುಂಬೈನ ತವರು ಮೈದಾನದಲ್ಲಿ ನಡೆಯುತ್ತಿದೆ. ಆದ್ದರಿಂದ, ಮುಂಬೈ ಗೆಲುವಿನೊಂದಿಗೆ ಲೀಗ್ ಆರಂಭಿಸಲು ನೋಡುತ್ತಿದ್ದರೆ, ಇತ್ತ ಕೆಕೆಆರ್ ಕೂಡ ಗೆಲುವಿನ ಮೇಲೆ ಗುರಿ ಇಟ್ಟಿದೆ.

ಟಾಸ್ ಗೆದ್ದ ಮುಂಬೈ

ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ. ಅದರಂತೆ ಮುಂಬೈ ತಂಡದ ಪ್ಲೇಯಿಂಗ್ 11 ನಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿಲ್ಲ. ಹಾಗಂತ ಅವರು ಪಂದ್ಯದಿಂದ ಹೊರಬಿದ್ದಿಲ್ಲ. ಬದಲಿಗೆ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಲಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ಕಳೆದ ಆವೃತ್ತಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ, ಈ ಪಂದ್ಯದಲ್ಲಿ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆದಿದ್ದಾರೆ.

ಹೆಡ್ ಟು ಹೆಡ್ ದಾಖಲೆ

ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇದುವರೆಗೆ 35 ಪಂದ್ಯಗಳನ್ನು ಆಡಿವೆ. ಈ ಪೈಕಿ ಮುಂಬೈ ಇಂಡಿಯನ್ಸ್ 24 ಪಂದ್ಯಗಳನ್ನು ಗೆದ್ದಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ 11 ಪಂದ್ಯಗಳನ್ನು ಗೆದ್ದಿದೆ. ಆದಾಗ್ಯೂ, 2012 ರಿಂದ ಮುಂಬೈ ಇಂಡಿಯನ್ಸ್ ತಮ್ಮ ಮೊದಲ ಪಂದ್ಯವನ್ನು ಗೆದ್ದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ತನ್ನ ಸೋಲಿನ ಇತಿಹಾಸವನ್ನು ಬದಲಿಸಲು ಮುಂಬೈ ಎದುರು ನೋಡುತ್ತಿದೆ. ಹಾಗೆಯೇ ಇದು ವಾಂಖೆಡೆ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ 13 ನೇ ಪಂದ್ಯ ಆಗಿದೆ. ಮುಂಬೈ ಇದುವರೆಗೆ 12 ಪಂದ್ಯಗಳಲ್ಲಿ 10 ರಲ್ಲಿ ಗೆದ್ದಿದ್ದರೆ, ಕೋಲ್ಕತ್ತಾ ಕೇವಲ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದೆ.

MI vs KKR IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್ 11

ಕೆಕೆಆರ್: ಫಿನ್ ಅಲೆನ್, ಅಜಿಂಕ್ಯ ರಹಾನೆ (ನಾಯಕ), ಕ್ಯಾಮೆರಾನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರಿಂಕು ಸಿಂಗ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಬ್ಲೆಸಿಂಗ್ ಮುಜರಬಾನಿ.

ಮುಂಬೈ ಇಂಡಿಯನ್ಸ್:  ರಿಯಾನ್ ರಿಕಲ್ಟನ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶೆರ್ಫಾನೆ ರುದರ್‌ಫೋರ್ಡ್, ನಮನ್ ಧೀರ್, ಶಾರ್ದೂಲ್ ಠಾಕೂರ್, ಮಯಾಂಕ್ ಮಾರ್ಕಾಂಡೆ, ಅಲ್ಲಾ ಗಜನ್‌ಫರ್, ಟ್ರೆಂಟ್ ಬೌಲ್ಟ್ ಮತ್ತು ಜಸ್ಪ್ರೀತ್ ಬುಮ್ರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೋಸೆ ಹುಡುಕುತ್ತಾ ಬೆಂಗಳೂರಿಗೆ ಬಂದ ಟಾಲಿವುಡ್ ಸ್ಟಾರ್ ವೆಂಕಿ

ಬೆಂಗಳೂರನ್ನು (Bengaluru) ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೆಲ್ಲ ಕರೆಯಲಾಗುತ್ತದೆ. ಇಲ್ಲಿನ ಉದ್ಯಾನಗಳು ಬಹಳ ಜನಪ್ರಿಯ. ಆದರೆ ಅದರಷ್ಟೆ ಜನಪ್ರಿಯ ಬೆಂಗಳೂರಿನ ದೋಸೆಗಳು. ಬೆಂಗಳೂರಿನ ತರ-ತರಹದ ದೋಸೆಗಳನ್ನು ಸವಿಯಲು ನಾನಾ ಕಡೆಗಳಿಂದ ಜನ ಬರುತ್ತಾರೆ. ವಿದೇಶಗಳಿಂದಲೂ ಸಹ ಫುಡ್ ವ್ಲಾಗರ್​​ಗಳು ಬೆಂಗಳೂರಿಗೆ ಬರುವುದು ಇಲ್ಲಿನ ದೋಸೆಗಳನ್ನು ಎಕ್ಸ್​​ಪ್ಲೋರ್ ಮಾಡಲೆಂದೇ. ಶತಮಾನಕ್ಕೂ ಹಳೆಯ ಕೆಲ ದೋಸೆ ಹೋಟೆಲ್​​ಗಳು ಬೆಂಗಳೂರಿನಲ್ಲಿವೆ. ಅರ್ಧ ಶತಮಾನ ದಾಟಿದ ಹಲವು ಹೋಟೆಲ್​​ಗಳಿವೆ. ಇದೀಗ ಟಾಲಿವುಡ್​​ನ ಸ್ಟಾರ್ ನಟರೊಬ್ಬರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ.

ವಿಕ್ಟರಿ ವೆಂಕಟೇಶ್ ಎಂದೇ ಖ್ಯಾತರಾಗಿರುವ ಟಾಲಿವುಡ್​ನ ಸ್ಟಾರ್ ನಟ ದಗ್ಗುಬಾಟಿ ವೆಂಕಟೇಶ್ ಅವರು ಇತ್ತೀಚೆಗಷ್ಟೆ ಬೆಂಗಳೂರಿಗೆ ಬಂದಿದ್ದರು, ಅದೂ ಬೆಂಗಳೂರಿನ ಬೆಸ್ಟ್ ದೋಸೆ ಸವಿಯಲು. ವೆಂಕಟೇಶ್ ಅವರು ಭೇಟಿ ನೀಡಿದ್ದು ಬೆಂಗಳೂರಿನ ಹೆಮ್ಮೆಯ ವಿದ್ಯಾರ್ಥಿ ಭವನ್ ಹೋಟೆಲಿಗೆ. ಗಾಂಧಿ ಬಜಾರಿನ ಈ ನೂರು ವರ್ಷಕ್ಕೂ ಹಳೆಯ ಹೋಟೆಲ್​​ಗೆ ಭೇಟಿ ನೀಡಿದ ವೆಂಕಟೇಶ್ ಅವರು ಹೋಟೆಲ್​​ನ ಹಲವು ಖಾದ್ಯಗಳನ್ನು ಸವಿದಿದ್ದಾರೆ.

ಮೊದಲಿಗೆ ಮೃದುವಾದ ಇಡ್ಲಿ ಮತ್ತು ಗರಿ-ಗರಿಯಾದ ವಡೆಯೊಂದಿಗೆ ಉಪಹಾರ ಆರಂಭಿಸಿದ ವೆಂಕಟೇಶ್. ಆ ಬಳಿಕ ಚೌ-ಚೌ ಬಾತು ಸವಿದಿದ್ದಾರೆ. ಬಳಿಕ ವಿದ್ಯಾರ್ಥಿ ಭವನದ ಬಲು ಫೇಮಸ್ ಮಸಾಲೆ ದೋಸೆ ಸವಿದು, ರುಚಿಗೆ ಮಾರು ಹೋಗಿದ್ದಾರೆ. ಒಂದು ಒಳ್ಳೆಯ ಫಿಲ್ಟರ್ ಕಾಫಿ ಜೊತೆಗೆ ಅಂತ್ಯ ಮಾಡಿದ್ದಾರೆ. ರುವಿಗೆ ಫಿದಾ ಆದ ವೆಂಕಟೇಶ್ ಅವರು ವಿದ್ಯಾರ್ಥಿ ಭವನ ಸಿಬ್ಬಂದಿ ಜೊತೆಗೆ ಹಾಗೂ ಮಾಲೀಕರ ಜೊತೆಗೆ ಮಾತನಾಡಿ, ಅವರೊಟ್ಟಿಗೆ ಚಿತ್ರಗಳನ್ನು ಸಹ ತೆಗೆಸಿಕೊಂಡಿದ್ದಾರೆ.

ಇದನ್ನೂ ಓದಿ:IPL 2026: ‘ಐಪಿಎಲ್​ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್​ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್

ವಿಶೇಷವೆಂದರೆ ವೆಂಕಟೇಶ್ ಅವರ ಈ ಹಿಂದಿನ ಸಿನಿಮಾ ‘ಮನ ಶಂಕರ ವರ ಪ್ರಸಾದ್’ನಲ್ಲಿ ವೆಂಕಟೇಶ್ ಅವರು ಕರ್ನಾಟಕದ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾನಲ್ಲಿ ಕನ್ನಡದಲ್ಲೇ ಮಾತನಾಡಿದ್ದರು ಸಹ. ಆ ಸಿನಿಮಾ ಮಾತ್ರವಲ್ಲ, ಈ ಹಿಂದೆ ಇನ್ನೂ ಕೆಲವು ಸಿನಿಮಾಗಳಲ್ಲಿ ವೆಂಕಟೇಶ್ ಅವರು ಕನ್ನಡಿಗನಾಗಿ ನಟಿಸಿದ್ದಿದೆ. ತೆಲುಗು ಸಿನಿಮಾಗಳಲ್ಲಿ ಕನ್ನಡದಲ್ಲಿ ಮಾತನಾಡಿದ್ದೂ ಸಹ ಇದೆ.

ವೆಂಕಟೇಶ್ ಅವರ ಪುತ್ರಿ ಆಶ್ರಿತಾ ದಗ್ಗುಬಾಟಿ ಸ್ವತಃ ಬೇಕರ್ ಮತ್ತು ಫುಡ್ ವ್ಲಾಗರ್ ಸಹ ಆಗಿದ್ದಾರೆ. ಭಿನ್ನ-ಭಿನ್ನ ರೀತಿಯ ಖಾದ್ಯಗಳನ್ನು ಎಕ್ಸ್​​ಪ್ಲೋರ್ ಮಾಡುತ್ತಿರುತ್ತಾರೆ. ತಮ್ಮ ಮನೆಯಲ್ಲಿ ಮಾಡುವ ಅಡುಗೆ ಸೇರಿದಂತೆ ಹಲವು ಭಿನ್ನ ರೀತಿಯ ತಿಂಡಿ-ತಿನಿಸುಗಳ ವ್ಲಾಗಿಂಗ್ ಸಹ ಅವರು ಮಾಡಿದ್ದಾರೆ. ವೆಂಕೇಶ್ ಅವರ ಅಣ್ಣನ ಮಗ, ಖ್ಯಾತ ನಟ ರಾಣಾ ದಗ್ಗುಬಾಟಿ ಸಹ ಒಮ್ಮೆ ಹೇಳಿದಂತೆ ದಗ್ಗುಬಾಟಿ ಕುಟುಂಬದ ಎಲ್ಲರೂ ಆಹಾರ ಪ್ರಿಯರಂತೆ. ಅಂತೆಯೇ ವೆಂಕಟೇಶ್ ಸಹ, ಹಾಗಾಗಿ ಅವರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪರ್ಷಿಯನ್ ಶಾರ್ಕ್​ಗಳಿಗೆ ಆಹಾರವಾಗುತ್ತಾರೆ ಅಮೆರಿಕನ್ ಸೈನಿಕರು: ಇರಾನ್ ಎಚ್ಚರಿಕೆ

ಟೆಹರಾನ್, ಮಾರ್ಚ್ 29: ಇರಾನ್​ನ ಕೆಲ ಪ್ರದೇಶಗಳ ಮೇಲೆ ಭೂದಾಳಿ ಮಾಡಿ ಆಕ್ರಮಿಸಿಕೊಳ್ಳಲು (Ground Invasion) ಅಮೆರಿಕ ಹೊರಟಿದೆ ಎನ್ನುವ ಗುಸುಗುಸು ಸುದ್ದಿಗಳ ಬೆನ್ನಲ್ಲೇ ಇರಾನ್ ಕಟ್ಟರ್ ಎಚ್ಚರಿಕೆಯ ಸಂದೇಶ ರವಾನಿಸಿದೆ. ಇರಾನ್ ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ಅಮೆರಿಕ ಯತ್ನಿಸಿದ್ದೇ ಆದಲ್ಲಿ ಪರ್ಷಿಯನ್ ಗಲ್ಫ್​ನಲ್ಲಿರುವ ಶಾರ್ಕ್ ಮೀನುಗಳಿಗೆ ಆ ಸೈನಿಕರು ಒಳ್ಳೆಯ ಆಹಾರವಾಗಲಿದ್ದಾರೆ ಎಂದು ಇರಾನ್ ಸೇನೆ ಹೇಳಿದೆ.

ಇರಾನ್ ಸೇನೆಯ ಮುಖ್ಯ ಕಚೇರಿಯ ವಕ್ತಾರ ಹಾಗೂ ಬ್ರಿಗೇಡಿಯರ್ ಜನರಲ್ ಇಬ್ರಾಹಿಂ ಝುಲ್​ಫಕಾರಿ ಅವರು ವಿಡಿಯೋ ಸಂದೇಶ ನೀಡುತ್ತಾ ಈ ಎಚ್ಚರಿಕೆಯ ಮೆಸೇಜ್ ಅನ್ನು ಅಮೆರಿಕಕ್ಕೆ ರವಾನಿಸಿದ್ದಾರೆ. ಹಾಗೆಯೇ, ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್​ನ ಕೈಗೊಂಬೆಯಾಗಿದ್ದಾರೆ ಎಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ, ಖಾರ್ಗ್​ ದ್ವೀಪದ ಮೇಲೆ ದಾಳಿ ಮಾಡುತ್ತಾ ಅಮೆರಿಕ, 3,500 ಸೈನಿಕರನ್ನು ನಿಯೋಜಿಸಿರುವುದೇಕೆ?

‘ಎಪ್​ಸ್ಟೀನ್ ಕೇಸ್​ನಲ್ಲಿ (Epstien case) ಸಿಕ್ಕಿಕೊಂಡಿರುವ ಡೊನಾಲ್ಡ್ ಟ್ರಂಪ್ ಭಯೋತ್ಪಾದಕ ಸಂಘಟನೆಯಾದ ಮೊಸ್ಸಾದ್​ನಿಂದ ಒತ್ತಡದಲ್ಲಿರುವುದರಲ್ಲಿ ಯಾವ ಅನುಮಾನವೂ ಇಲ್ಲ. ಇರಾನ್ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ ಪ್ರಧಾನಿಗೆ ಟ್ರಂಪ್ ಒಂದು ದಾಳವಾಗಿ ಪರಿಣಮಿಸಿದ್ದಾರೆ’ ಎಂದು ಇರಾನ್ ಸೇನಾಧಿಕಾರಿ ಹೇಳಿದ್ದಾರೆ.

ಇರಾನ್ ಮೇಲೆ ಅಮೆರಿಕದ ಸೇನೆ ಗ್ರೌಂಡ್ ಇನ್ವೇಶನ್ ಅಥವಾ ಭೂ ದಾಳಿ ಮಾಡಬಹುದು ಎನ್ನುವ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ಜೊಲ್ಫಕಾರಿ, ‘ಈ ದಾಳಿಯಾಗಲಿ ಎಂದು ಕಾಯುತ್ತಿದ್ದೇವೆ. ಪರ್ಷಿಯನ್ ಕೊಲ್ಲಿಯಲ್ಲಿರುವ ಶಾರ್ಕ್​ಗಳಿಗೆ ಅಮೆರಿಕದ ಕಮಾಂಡರ್​ಗಳು ಮತ್ತು ಸೈನಿಕರು ಒಳ್ಳೆಯ ಆಹಾರವಾಗುತ್ತಾರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಅಮೆರಿಕದ ಎಫ್-18 ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ವರದಿಗಳ ಪ್ರಕಾರ, ಇರಾನ್​ನ ಖರ್ಗ್ ದ್ವೀಪ ಮೊದಲಾದ ಕೆಲ ಪ್ರದೇಶಗಳನ್ನು ವಶಪಡಿಕೊಳ್ಳಲು ಅಮೆರಿಕವು ಗ್ರೌಂಡ್ ಆಪರೇಶನ್​ಗೆ ಸಜ್ಜಾಗಿದೆ. ಅದಕ್ಕಾಗಿ ಸೈನಿಕರನ್ನು ಸಜ್ಜುಗೊಳಿಸುತ್ತಿದೆ ಎಂದು ಹೇಳಲಾಗುತ್ತಿದೆ. ಖರ್ಗ್ ದ್ವೀಪವು ಇರಾನ್​ನ ತೈಲ ಪೂರೈಕೆಯ ಪ್ರವೇಶ ದ್ವಾರವಾಗಿದೆ. ಇರಾನ್​ನ ಹೆಚ್ಚಿನ ರಫ್ತು ಇಲ್ಲಿಂದಲೇ ಆಗುವುದು. ಇದನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಇರಾನ್ ನಿಯಂತ್ರಣಕ್ಕೆ ಬಂದೀತು ಎಂಬುದು ಅಮೆರಿಕದ ಲೆಕ್ಕಾಚಾರ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಚಿಯಾ ಬೆಳೆಗಾರರಿಗೆ ತಟ್ಟಿದ ಯುದ್ಧದ ಬಿಸಿ: ಸರ್ರನೆ ಕುಸಿದ ದರ; ಬೀದರ್​​ ರೈತರು ಕಂಗಾಲು

ಬೀದರ್​, ಮಾರ್ಚ್​ 29: ಗಲ್ಫ್​​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಯಾ (Chia) ಬೆಳೆಗಾರರಿಗೆ ತಟ್ಟಿದೆ. ಚಿಯಾ ಬೀಜದ ದರ ಅರ್ಧದಷ್ಟು ಇಳಿಕೆಯಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧ ಮುಂದುವರೆದ ಹಿನ್ನಲೆ ರಫ್ತು ಮಾಡಲಾಗದೇ ಸಮಸ್ಯೆ ಉಂಟಾಗಿದ್ದು, ಚಿಯಾ ದರದಲ್ಲಿ (Rate) ಭಾರೀ ‌ಕುಸಿತವಾಗಿದೆ. ಸದ್ಯ ಇದು ರೈತರನ್ನ ಕಂಗಾಲು ಮಾಡಿದೆ.

ಒಂದೇ ತಿಂಗಳಲ್ಲಿ 10 ಸಾವಿರ ರೂ. ಇಳಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಚಿಯಾ ಬೆಳೆಗಾರರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಚಿಯಾ ಬೆಳೆಗಾರರು ಗಂಭೀರ ಸಂಕಷ್ಟ ಎದುರಿಸುತ್ತಿದ್ದಾರೆ. ತಿಂಗಳ ಹಿಂದೆ ಪ್ರತಿ ಕ್ವಿಂಟಾಲ್‌ಗೆ 22 ಸಾವಿರ ರೂ.ಕ್ಕೆ ಮಾರಾಟವಾಗುತ್ತಿದ್ದ ಚಿಯಾ ಬೀಜ ಇದೀಗ 12 ಸಾವಿರ ರೂ.ಕ್ಕೆ ಭಾರೀ ಕುಸಿತ ಕಂಡಿದೆ. ಅಂದರೆ ಒಂದೇ ತಿಂಗಳಲ್ಲಿ 10 ಸಾವಿರ ರೂ. ರವರೆಗೆ ಇಳಿಕೆಯಾಗಿದ್ದು, ರೈತರಿಗೆ ದೊಡ್ಡ ನಷ್ಟ ಉಂಟಾಗಿದೆ.

ಇದನ್ನೂ ಓದಿ: ಕಬ್ಬಿಗೆ ಗುಡ್‌ ಬೈ ಹೇಳಿ ಬಹುಬೇಡಿಕೆ ಬೆಳೆಯತ್ತ ಮುಖಮಾಡಿದ ಗಡಿ ಜಿಲ್ಲೆಯ ರೈತರು: ಕೈತುಂಬಾ ಲಾಭ

ಚಿಯಾ ಬೀಜವನ್ನು ಹೆಚ್ಚಿನ ಪ್ರಮಾಣದಲ್ಲಿ ಗಲ್ಫ್​ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಆದರೆ ಯುದ್ಧದ ಪರಿಣಾಮ ರಫ್ತು ವ್ಯವಹಾರದಲ್ಲಿ ಅಡಚಣೆ ಉಂಟಾಗಿ, ಬೇಡಿಕೆ ಕಡಿಮೆಯಾಗಿದೆ. ಇದರ ಪರಿಣಾಮವೇ ಮಾರುಕಟ್ಟೆಯಲ್ಲಿ ಚಿಯಾ ಬೆಲೆ ಕುಸಿತಕ್ಕೆ ಕಾರಣ. ಉತ್ಪಾದನಾ ವೆಚ್ಚ ಹೆಚ್ಚಿರುವ ಈ ಬೆಳೆಯಲ್ಲಿ ಇಂತಹ ದರ ಕುಸಿತದಿಂದ ರೈತರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರದಿಂದ ತಕ್ಷಣ ನೆರವು ಮತ್ತು ಪರ್ಯಾಯ ಮಾರುಕಟ್ಟೆ ವ್ಯವಸ್ಥೆಗಳ ಅಗತ್ಯವಿದೆ ಎಂಬುದು ರೈತರ ಮನವಿ.

ಚಿಯಾ ಬೆಳೆಯನ್ನ ಹೆಚ್ಚಾಗಿ ಬೆಳೆಯುದೇಕೆ?

ಬೀದರ್ ಜಿಲ್ಲೆಯೊಂದರಲ್ಲೇ ಸುಮಾರು 3 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಚಿಯಾ ಬೆಳೆಯನ್ನ ಬೆಳೆಯುತ್ತಿದ್ದಾರೆ. ಚಿಯಾ ಧಾನ್ಯದಲ್ಲಿ ಅಧಿಕ ಕ್ಯಾಲ್ಸಿಯಂ, ಮ್ಯಾಗ್ನಿಷಿಯಂ, ಫಾಸ್ಫರಸ್​​ ಎಂಬ ಔಷಧಿ ಗುಣಗಳು ಹಾಗೂ ಪೌಷ್ಟಿಕಾಂಶವಿದ್ದು, ಗಲ್ಫ್​ ರಾಷ್ಟ್ರಕ್ಕೆ ಹೆಚ್ಚಾಗಿ ರಫ್ತು ಆಗುತ್ತಿತ್ತು. ಈ ಬೆಳೆ ಜಾನುವಾರು ಅಥವಾ ಕಾಡುಪ್ರಾಣಿಗಳ ಹಾವಳಿ ಇಲ್ಲದೆ ನೆಮ್ಮದಿಯಿಂದ ರೈತ ಬೆಳೆಯಬಹುದಾಗಿದೆ. ಇನ್ನೂ ಚಿಯಾ ಬೆಳೆಗೆ ಅಂತಾರಾಷ್ಟ್ರಿಯ ಮಟ್ಟದಲ್ಲಿ ಬಹುಬೇಡಿಕೆಯಿರುವ ಸಿರಿಧಾನ್ಯವಾಗಿದ್ದು, ಒಣ ಹವಾಮಾನದಲ್ಲಿ, ವಾರಕ್ಕೊಂದು ಬಾರಿ ತುಂತುರು ನೀರಾವರಿ ನೀಡಿದರೆ ಸಾಕು. 90 ರಿಂದ 100 ದಿನದಲ್ಲಿ ಫಸಲು ಪಡೆಯಬಹುದು.

ಕಡಿಮೆ ಖರ್ಚು: ಹೆಚ್ಚು ಲಾಭ

ಒಂದು ಎಕರೆ ಪ್ರದೇಶಕ್ಕೆ 3 ರಿಂದ 4 ಸಾವಿರ ರೂ ವೆಚ್ಚ ಬರಲಿದ್ದು, ಪೈರು ಬೆಳೆಸಿ ನಾಟಿ ಅಥವಾ ಬಿತ್ತನೆ ಬೀಜ ನೇರವಾಗಿ ಸಾಲು ಬಿಟ್ಟು ಬೆಳೆಯಬಹುದು. ಒಮ್ಮೆ ಮಾತ್ರ ರಾಸಾಯನಿಕ ಗೊಬ್ಬರ ಹಾಕಿದರೆ ಸಾಕು. ಸ್ಥಳಿಯ ವಾತಾವರಣಕ್ಕೆ ಬೆಳೆಯಬಹುದಾದ ವಾಣಿಜ್ಯ ಬೆಳೆ ಚಿಯಾ ಎಕರೆಗೆ 4 ರಿಂದ 5 ಕ್ವಿಂಟಲ್ ಇಳುವರಿ ಸಿಗಲಿದೆ. ಮಾರುಕಟ್ಟೆಯಲ್ಲಿ ಕ್ವಿಂಟಲ್‌ಗೆ 14 ರಿಂದ 19 ಸಾವಿರ ರೂ.ವರೆಗೆ ದರವಿದ್ದು, ರೈತರು ಹೆಚ್ಚಿನ ಲಾಭ ಪಡೆಯಬಹುದಾಗಿದೆ. ಹೀಗಾಗಿ ಹೆಚ್ಚಿನ ರೈತರು ಚಿಯಾ ಬೆಳೆಯನ್ನ ಬೆಳೆಯುತ್ತಿದ್ದರು. ಆದರೆ ಯುದ್ದ ಹಿನ್ನಲೆ ದರದಲ್ಲಿ ಕುಸಿತವಾಗಿದ್ದು, ನಮಗೆ ದಿಕ್ಕೆ ತೋಚದಂತಾಗಿದ್ದು ಸರಕಾರ ಏನಾದರೂ ಸಹಾಯ ಮಾಡಿ ಎಂದು ರೈತ ಬಸವರಾಜ್​​ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ

ಬೀದರ್ ಜಿಲ್ಲೆಯ ಬಹುತೇಕ ರೈತರು ಚಿಯಾ ಕೃಷಿಯಲ್ಲಿ ತೊಡಗಿದ್ದಾರೆ. ಒಮ್ಮೆ ನಾಟಿ ಮಾಡಿದ ನಂತರ ಯಾವುದೇ ಖರ್ಚು ಇಲ್ಲದೇ ಶೂನ್ಯ ಬಂಡವಾಳದಲ್ಲಿ ಬೆಳೆಯಬಹುದಾದ ಬೆಳೆ ಇದಾಗಿದೆ. ಆದರೆ ಯುದ್ದದಿಂದಾಗಿ ದರ ಕುಸಿತವಾಗಿದ್ದು ರೈತರನ್ನ ಕಂಗಾಲು ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

MI vs KKR IPL 2026 Live Score: ವಾಂಖೆಡೆಯಲ್ಲಿ ಮುಂಬೈ- ಕೆಕೆಆರ್ ಮುಖಾಮುಖಿ – Kannada News | Mumbai Indians vs Kolkata Knight Riders IPL 2026 Live Cricket Score MI vs KKR Match on 29th March latest news in Kannada

ಐಪಿಎಲ್ 2026 ರ ಎರಡನೇ ಪಂದ್ಯ ಇಂದು ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣ ಆತಿಥ್ಯ ನೀಡಿದೆ. ಎರಡೂ ತಂಡಗಳು ತಮ್ಮ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಲು ಎದುರು ನೋಡುತ್ತಿವೆ. ಕೆಕೆಆರ್ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಿದರೆ, ಮುಂಬೈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ.

Source link

ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ: ದಾವಣಗೆರೆಯಲ್ಲಿ ಮ್ಯಾಜಿಕ್ ಆಗುತ್ತಾ?

ದಾವಣಗೆರೆ, (ಮಾರ್ಚ್ 29): ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election) ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್ ಬಹಿರಂಗವಾಗಿಯೇ ಬಿಎಸ್ ಯಡಿಯೂರಪ್ಪ ಬಣದ ವಿರುದ್ಧ ಆರೋಪಿಸಿದ್ದರು. ಅಲ್ಲದೇ ಬಿಎಸ್​ವೈ ಬಣದ ವಿರುದ್ಧವೇ ತಮ್ಮದೇಯಾದ ಟೀಮ್ ಕಟ್ಟಿ ಬಹಿರಂಗ ವಾಗ್ದಾಳಿ ನಡೆಸುತ್ತಲೇ ಬಂದಿದ್ದರು. ಖುದ್ದು ರಾಜ್ಯ ಬಿಜೆಪಿ ಉಸ್ತುವಾರಿ ಮನವೊಲಿಕೆಗೂ ಸಿದ್ದೇಶ್ವರ್ ಕ್ಯಾರೇ ಎಂದಿರಲಿಲ್ಲ, ಆದ್ರೆ, ಇದೀಗ ಏಕಾಏಕಿ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜತೆ ವೇದಿಕೆ ಹಂಚಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಒಂದೆಡೆ ಎಂಪಿ ರೇಣುಕಾಸ್ವಾಮಿ ಇನ್ನೊಂದೆಡೆ ಜಿಎಂ ಸಿದ್ದೇಶ್ವರ್ ಮಧ್ಯದಲ್ಲಿ ವಿಜಯೇಂದ್ರ ನಿಂತುಕೊಂಡು ಕೈ ಎತ್ತಿ ಒಗ್ಗಟ್ಟು ಪ್ರದರ್ಶನ ಮಾಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ

ಬಾಗಲಕೋಟೆ, ಮಾರ್ಚ್​ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್​​ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್​​ಗಾಗಿ ಮೇಟಿ ಕುಟುಂಬದ ಮಧ್ಯಯೇ ಫೈಟ್ ನಡೆದಿತ್ತು. ಬಳಿಕ ಹೆಚ್​​.ವೈ. ಮೇಟಿ ಅವರ ಎರಡನೇ ಮಗ ಉಮೆಶ್ ಮೇಟಿ​​ಯನ್ನು ಕಾಂಗ್ರೆಸ್​​ ತನ್ನ ಅಭ್ಯರ್ಥಿಯಾಗಿ ಘೋಷಿಸಿತ್ತು.

ಆಪ್ತನ ಮಗನ ಗೆಲ್ಲಿಸಲು 5 ದಿನ ಪ್ರಚಾರ

ಸದ್ಯ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರದ ವರ್ಚಸ್ಸಿನ ಜೊತೆ ಸಮುದಾಯ ಗೌರವ ಕಾಪಾಡಬೇಕಿದೆ. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಒಮ್ಮೆ ಮಾತ್ರ ಪ್ರಚಾರ ನಡೆಸಿದ್ದರು. ಆದರೆ ಇದೀಗ ಆಪ್ತನ ಮಗನ ಗೆಲ್ಲಿಸಲು 5 ದಿನ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ನಾಳೆ ಅಂದರೆ ಮಾರ್ಚ್​ 30ರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿ ಜಿಲ್ಲೆಯ ಜಿಂದಾಲ್ ಏರ್​ಸ್ಟ್ರಿಪ್​ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್​ನಲ್ಲಿ ಆಲಮಟ್ಟಿ ಡ್ಯಾಮ್​ನತ್ತ ಪ್ರಯಾಣ ಬೆಳಸಲಿದ್ದಾರೆ. ಆಲಮಟ್ಟಿ ಡ್ಯಾಮ್ ಹೆಲಿಪ್ಯಾಡ್​ನಿಂದ ಕಾರಿನಲ್ಲಿ ಸುತಗುಂಡಾರ ಗ್ರಾಮಕ್ಕೆ ಆಗಮಿಸುವ ಸಿಎಂ, ಮಧ್ಯಾಹ್ನ 1 ಗಂಟೆಗೆ ಸುತಗುಂಡಾರ ಗ್ರಾಮದಲ್ಲಿ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ನಂತರ ನಾಯನೇಗಲಿ, ರಾಂಪುರ, ಬೇವೂರು ಗ್ರಾಮಗಳಲ್ಲಿ ಮತಯಾಚನೆ ಬಳಿಕ ಅಂದು ರಾತ್ರಿ ಆಲಮಟ್ಟಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಮಾರ್ಚ್ 31ರಂದು ಬೆಳಗ್ಗೆ 11ಕ್ಕೆ ಮುಗಳೊಳ್ಳಿ, ಮಧ್ಯಾಹ್ನ 1ಗಂಟೆಗೆ ನೀಲಾನಗರ, 4ಗಂಟೆಗೆ ಐಹೊಳೆ ಮತ್ತು 6ಗಂಟೆಗೆ ಅಮೀನಗಢದಲ್ಲಿ ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡಲಿದ್ದಾರೆ. ಏಪ್ರಿಲ್ 3, 4 ಮತ್ತು 6ರಂದು 2ನೇ ಹಂತದಲ್ಲಿ ಮತ್ತೆ ಪ್ರಚಾರ ಮಾಡಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ

ನಯನತಾರಾ (Nayantara) ಅನ್ನು ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯುವುದು. ಎರಡು ದಶಕಕ್ಕೂ ಹೆಚ್ಚು ಸಮಯದಿಂದಲೂ ಸಹ ನಯನತಾರಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕಳೆದ ಎರಡು ದಶಕದಿಂದಲೂ ಸ್ಟಾರ್ ಪಟ್ಟವನ್ನು ಉಳಿಸಿಕೊಂಡು ಬರುತ್ತಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣದ ಎಲ್ಲ ಭಾಷೆಗಳಲ್ಲಿಯೂ ನಾಯಕಿಯಾಗಿ ನಟಿಸಿದ್ದಾರೆ ನಯನತಾರಾ. ಆದರೆ ಇತ್ತೀಚೆಗಷ್ಟೆ ಅಂದರೆ 2023 ರಲ್ಲಿ ಅವರು ಬಾಲಿವುಡ್​​ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ ಬಾರಿ ಮತ್ತೊಬ್ಬ ಸ್ಟಾರ್ ಖಾನ್ ಜೊತೆಗೆ.

ನಯನತಾರಾ ಅವರು ಸಲ್ಮಾನ್ ಖಾನ್ ಜೊತೆಗೆ ನಟಿಸಲು ರೆಡಿಯಾಗಿದ್ದಾರೆ. ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾನಲ್ಲಿ ನಯನತಾರಾ ನಾಯಕಿಯಾಗಿ ನಟಿಸಲಿದ್ದಾರೆ. ವಿಶೇಷವೆಂದರೆ ಈ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕ ಇಬ್ಬರೂ ಸಹ ದಕ್ಷಿಣದವರೇ ಆಗಿದ್ದಾರೆ. ಇದೇ ಕಾರಣಕ್ಕೆ ದಕ್ಷಿಣ ಭಾರತದ ಸ್ಟಾರ್ ನಟಿಯನ್ನು ಬಾಲಿವುಡ್​​ ಸ್ಟಾರ್​ ನಟನ ಎದುರು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ.

ದಕ್ಷಿಣದ ಖ್ಯಾತ ಸಿನಿಮಾ ನಿರ್ಮಾಪಕ ಮತ್ತು ವಿತರಕ ದಿಲ್ ರಾಜು ಅವರು ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾದ ನಿರ್ಮಾಣ ಮಾಡಲಿದ್ದಾರೆ. ಈ ಸಿನಿಮಾವನ್ನು ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಪಲ್ಲಿ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದ ನಾಯಕಿಯಾಗಿ ನಯನತಾರಾ ನಟಿಸಲಿದ್ದಾರೆ. ಪ್ರಸ್ತುತ ಸಲ್ಮಾನ್ ಖಾನ್ ‘ಮಾತೃಭೂಮಿ’ (ಈ ಮುಂಚೆ ಬ್ಯಾಟಲ್ ಆಫ್ ಗಲ್ವಾನ್) ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ಕ್ಲೈಮ್ಯಾಕ್ಸ್ ಹಂತದಲ್ಲಿದೆ.

ಇದನ್ನೂ ಓದಿ:‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ನಯನತಾರಾ

ವಂಶಿ ಪೈಡಪಲ್ಲಿ ತುಸು ಭಿನ್ನ ರೀತಿಯ ಸಿನಿಮಾ ನಿರ್ದೇಶಕ. ಸಾಮಾಜಿಕ ಸಂದೇಶವುಳ್ಳ ಕಮರ್ಶಿಯಲ್ ಸಿನಿಮಾಗಳನ್ನು ಮಾಡುತ್ತಾ ಯಶಸ್ಸು ಕಾಣುತ್ತಾ ಬಂದಿದ್ದಾರೆ. ಪ್ರಭಾಸ್ ನಟನೆಯ ‘ಮುನ್ನಾ’ ವಂಶಿ ಅವರ ಮೊದಲ ಸಿನಿಮಾ. ಜೂ ಎನ್​​ಟಿಆರ್ ನಟನೆಯ ಕೌಟುಂಬಿಕ ಸಿನಿಮಾ ‘ಬೃಂದಾವನಂ’ ಭಾರಿ ದೊಡ್ಡ ಹಿಟ್. ರಾಮ್ ಚರಣ್ ನಟನೆಯ ‘ಯೆವಡು’ ಸಹ ಹಿಟ್ ಆಯ್ತು. ಫೀಲ್ ಗುಡ್ ಸಿನಿಮಾ ‘ಊಪಿರಿ’, ಸಾಮಾಜಿಕ ಸಂದೇಶ ಹೊಂದಿದ್ದ ಮತ್ತು ರಾಷ್ಟ್ರಪ್ರಶಸ್ತಿಗೂ ಭಾಜನವಾದ ‘ಮಹರ್ಷಿ’ ಸಿನಿಮಾ ಸಹ ವಂಶಿ ಅವರದ್ದೇ ನಿರ್ದೇಶನ. 2023 ರಲ್ಲಿ ಬಿಡುಗಡೆ ಆದ ದಳಪತಿ ವಿಜಯ್ ನಟನೆಯ ‘ವಾರಿಸು’ ನಿರ್ದೇಶಿಸಿದ್ದು ಸಹ ವಂಶಿ ಪೈಡಪಲ್ಲಿ. ಇದೀಗ ಅವರು ಸಲ್ಮಾನ್ ಖಾನ್​​ಗಾಗಿ ಸಿನಿಮಾ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link