nagaraj11081993

ಸಲ್ಮಾನ್ ಖಾನ್ ಅನ್ನು ಟೀಕಿಸಿದ ನಿರ್ದೇಶಕನಿಗೆ ಎದುರಾಯ್ತು ಸಂಕಷ್ಟ

ಚಿತ್ರರಂಗದಲ್ಲಿ ಗೆಲ್ಲುತ್ತಿದ್ದವರಿಗೆ ಮಾತ್ರವೇ ಗೌರವ. ಕೆಳಗೆ ಬಿದ್ದರೆ ಸಾಕು ಆಳಿಗೊಂದು ಕಲ್ಲು ಒಗೆಯುತ್ತಾರೆ. ‘ಗಜಿನಿ’, ‘ತುಪಾಕಿ’, ‘ಕತ್ತಿ’, ‘ಸ್ಟಾಲಿನ್’ ಇನ್ನೂ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಖ್ಯಾತ ತಮಿಳು ನಿರ್ದೇಶಕ ಎಆರ್ ಮುರುಗದಾಸ್ ಅವರಿಗೆ ಇತ್ತೀಚೆಗೆ ಸಮಯ ಸರಿ ಇದ್ದಂತಿಲ್ಲ. ಹಿಂದಿಯಲ್ಲಿ ಸಲ್ಮಾನ್ ಖಾನ್ ಜೊತೆಗೆ ಮಾಡಿದ ಸಿನಿಮಾ ಇನ್ನಿಲ್ಲದಂತೆ ಸೋತಿತು. ಸಿನಿಮಾ ಸೋತಿದ್ದಕ್ಕೆ ಸಲ್ಮಾನ್ ಖಾನ್ ಬೇಜವಾಬ್ದಾರಿತನ ಕಾರಣ ಎಂದು ಮುರುಗದಾಸ್ ದೂರಿದ್ದರು. ಬಳಿಕ ಅವರು ತಮಿಳಿನಲ್ಲಿ ನಿರ್ದೇಶಿಸಿದ ‘ಮದರಾಸಿ’ ಸಿನಿಮಾ ಸಹ ತೋಪಾಯ್ತು….

Read More

ರಾಜ್ಯದಲ್ಲಿ ಗ್ಯಾಸ್​​ ಸಿಲಿಂಡರ್​​ ಬೆನ್ನಲ್ಲೇ ರಸಗೊಬ್ಬರ ಅಭಾವ ಆತಂಕ: ಸೂಕ್ತ ಕ್ರಮಕ್ಕೆ ಆಗ್ರಹ

ಹುಬ್ಬಳ್ಳಿ, ಮಾರ್ಚ್​ 29: ಇರಾನ್​​ ಇಸ್ರೇಲ್, ಅಮೆರಿಕಾ ನಡುವೆ ನಡೆಯುತ್ತಿರುವ ಯುದ್ದದಿಂದಾಗಿ (War) ನಮ್ಮ ದೇಶದ ಮೇಲೆ ಅನೇಕ ರೀತಿಯ ಪರಿಣಾಮಗಳಾಗುತ್ತಿವೆ. ಈಗಾಗಲೇ ಸಿಲಿಂಡರ್ ಅಭಾವ ಉಂಟಾಗಿದ್ದು, ಆಮದು, ರಫ್ತು ವ್ಯವಹಾರ ಕಡಿಮೆಯಾಗಿರೋದರಿಂದ ಅನೇಕ ವಸ್ತುಗಳ ಬೆಲೆ ಕೂಡ ಹೆಚ್ಚಾಗುತ್ತಿವೆ. ಇದರ ಜೊತೆಗೆ ಇದೀಗ ರಸಗೊಬ್ಬರಕ್ಕೂ ಅಭಾವ (Fertilizer Shortage) ಉಂಟಾಗುವ ಆತಂಕ ಎದುರಾಗಿದೆ. ಈ ಬಾರಿ ಮುಂಗಾರು ಬಿತ್ತನೆಗೆ ರಸಗೊಬ್ಬರ ಸಿಗುತ್ತೋ, ಇಲ್ವೋ ಅನ್ನೋ ಆತಂಕ ರೈತರನ್ನು ಕಾಡುತ್ತಿದೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ…

Read More

MI vs KKR Playing XI: ಟಾಸ್ ಗೆದ್ದ ಮುಂಬೈ; ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು

ಐಪಿಎಲ್ 19 ನೇ ಸೀಸನ್‌ನ (IPL 2026) ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (Mumbai Indians vs Kolkata Knight Riders) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದು, ಅಜಿಂಕ್ಯ ರಹಾನೆ ಕೆಕೆಆರ್ ತಂಡದ ನಾಯಕರಾಗಿದ್ದಾರೆ. ಈ ಪಂದ್ಯ ಮುಂಬೈನ ತವರು ಮೈದಾನದಲ್ಲಿ ನಡೆಯುತ್ತಿದೆ. ಆದ್ದರಿಂದ, ಮುಂಬೈ ಗೆಲುವಿನೊಂದಿಗೆ ಲೀಗ್ ಆರಂಭಿಸಲು…

Read More

ದೋಸೆ ಹುಡುಕುತ್ತಾ ಬೆಂಗಳೂರಿಗೆ ಬಂದ ಟಾಲಿವುಡ್ ಸ್ಟಾರ್ ವೆಂಕಿ

ಬೆಂಗಳೂರನ್ನು (Bengaluru) ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೆಲ್ಲ ಕರೆಯಲಾಗುತ್ತದೆ. ಇಲ್ಲಿನ ಉದ್ಯಾನಗಳು ಬಹಳ ಜನಪ್ರಿಯ. ಆದರೆ ಅದರಷ್ಟೆ ಜನಪ್ರಿಯ ಬೆಂಗಳೂರಿನ ದೋಸೆಗಳು. ಬೆಂಗಳೂರಿನ ತರ-ತರಹದ ದೋಸೆಗಳನ್ನು ಸವಿಯಲು ನಾನಾ ಕಡೆಗಳಿಂದ ಜನ ಬರುತ್ತಾರೆ. ವಿದೇಶಗಳಿಂದಲೂ ಸಹ ಫುಡ್ ವ್ಲಾಗರ್​​ಗಳು ಬೆಂಗಳೂರಿಗೆ ಬರುವುದು ಇಲ್ಲಿನ ದೋಸೆಗಳನ್ನು ಎಕ್ಸ್​​ಪ್ಲೋರ್ ಮಾಡಲೆಂದೇ. ಶತಮಾನಕ್ಕೂ ಹಳೆಯ ಕೆಲ ದೋಸೆ ಹೋಟೆಲ್​​ಗಳು ಬೆಂಗಳೂರಿನಲ್ಲಿವೆ. ಅರ್ಧ ಶತಮಾನ ದಾಟಿದ ಹಲವು ಹೋಟೆಲ್​​ಗಳಿವೆ. ಇದೀಗ ಟಾಲಿವುಡ್​​ನ ಸ್ಟಾರ್ ನಟರೊಬ್ಬರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ. ವಿಕ್ಟರಿ…

Read More

ಪರ್ಷಿಯನ್ ಶಾರ್ಕ್​ಗಳಿಗೆ ಆಹಾರವಾಗುತ್ತಾರೆ ಅಮೆರಿಕನ್ ಸೈನಿಕರು: ಇರಾನ್ ಎಚ್ಚರಿಕೆ

ಟೆಹರಾನ್, ಮಾರ್ಚ್ 29: ಇರಾನ್​ನ ಕೆಲ ಪ್ರದೇಶಗಳ ಮೇಲೆ ಭೂದಾಳಿ ಮಾಡಿ ಆಕ್ರಮಿಸಿಕೊಳ್ಳಲು (Ground Invasion) ಅಮೆರಿಕ ಹೊರಟಿದೆ ಎನ್ನುವ ಗುಸುಗುಸು ಸುದ್ದಿಗಳ ಬೆನ್ನಲ್ಲೇ ಇರಾನ್ ಕಟ್ಟರ್ ಎಚ್ಚರಿಕೆಯ ಸಂದೇಶ ರವಾನಿಸಿದೆ. ಇರಾನ್ ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ಅಮೆರಿಕ ಯತ್ನಿಸಿದ್ದೇ ಆದಲ್ಲಿ ಪರ್ಷಿಯನ್ ಗಲ್ಫ್​ನಲ್ಲಿರುವ ಶಾರ್ಕ್ ಮೀನುಗಳಿಗೆ ಆ ಸೈನಿಕರು ಒಳ್ಳೆಯ ಆಹಾರವಾಗಲಿದ್ದಾರೆ ಎಂದು ಇರಾನ್ ಸೇನೆ ಹೇಳಿದೆ. ಇರಾನ್ ಸೇನೆಯ ಮುಖ್ಯ ಕಚೇರಿಯ ವಕ್ತಾರ ಹಾಗೂ ಬ್ರಿಗೇಡಿಯರ್ ಜನರಲ್ ಇಬ್ರಾಹಿಂ ಝುಲ್​ಫಕಾರಿ ಅವರು ವಿಡಿಯೋ ಸಂದೇಶ ನೀಡುತ್ತಾ…

Read More

ಚಿಯಾ ಬೆಳೆಗಾರರಿಗೆ ತಟ್ಟಿದ ಯುದ್ಧದ ಬಿಸಿ: ಸರ್ರನೆ ಕುಸಿದ ದರ; ಬೀದರ್​​ ರೈತರು ಕಂಗಾಲು

ಬೀದರ್​, ಮಾರ್ಚ್​ 29: ಗಲ್ಫ್​​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಯಾ (Chia) ಬೆಳೆಗಾರರಿಗೆ ತಟ್ಟಿದೆ. ಚಿಯಾ ಬೀಜದ ದರ ಅರ್ಧದಷ್ಟು ಇಳಿಕೆಯಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧ ಮುಂದುವರೆದ ಹಿನ್ನಲೆ ರಫ್ತು ಮಾಡಲಾಗದೇ ಸಮಸ್ಯೆ ಉಂಟಾಗಿದ್ದು, ಚಿಯಾ ದರದಲ್ಲಿ (Rate) ಭಾರೀ ‌ಕುಸಿತವಾಗಿದೆ. ಸದ್ಯ ಇದು ರೈತರನ್ನ ಕಂಗಾಲು ಮಾಡಿದೆ. ಒಂದೇ ತಿಂಗಳಲ್ಲಿ 10 ಸಾವಿರ ರೂ. ಇಳಿಕೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಚಿಯಾ ಬೆಳೆಗಾರರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಚಿಯಾ ಬೆಳೆಗಾರರು ಗಂಭೀರ…

Read More

MI vs KKR IPL 2026 Live Score: ವಾಂಖೆಡೆಯಲ್ಲಿ ಮುಂಬೈ- ಕೆಕೆಆರ್ ಮುಖಾಮುಖಿ – Kannada News | Mumbai Indians vs Kolkata Knight Riders IPL 2026 Live Cricket Score MI vs KKR Match on 29th March latest news in Kannada

ಐಪಿಎಲ್ 2026 ರ ಎರಡನೇ ಪಂದ್ಯ ಇಂದು ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣ ಆತಿಥ್ಯ ನೀಡಿದೆ. ಎರಡೂ ತಂಡಗಳು ತಮ್ಮ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಲು ಎದುರು ನೋಡುತ್ತಿವೆ. ಕೆಕೆಆರ್ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಿದರೆ, ಮುಂಬೈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. Source link

Read More

ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ: ದಾವಣಗೆರೆಯಲ್ಲಿ ಮ್ಯಾಜಿಕ್ ಆಗುತ್ತಾ?

ದಾವಣಗೆರೆ, (ಮಾರ್ಚ್ 29): ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election) ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್ ಬಹಿರಂಗವಾಗಿಯೇ ಬಿಎಸ್ ಯಡಿಯೂರಪ್ಪ ಬಣದ ವಿರುದ್ಧ ಆರೋಪಿಸಿದ್ದರು. ಅಲ್ಲದೇ ಬಿಎಸ್​ವೈ ಬಣದ…

Read More

ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ

ಬಾಗಲಕೋಟೆ, ಮಾರ್ಚ್​ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್​​ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್​​ಗಾಗಿ ಮೇಟಿ ಕುಟುಂಬದ…

Read More

ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ

ನಯನತಾರಾ (Nayantara) ಅನ್ನು ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯುವುದು. ಎರಡು ದಶಕಕ್ಕೂ ಹೆಚ್ಚು ಸಮಯದಿಂದಲೂ ಸಹ ನಯನತಾರಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕಳೆದ ಎರಡು ದಶಕದಿಂದಲೂ ಸ್ಟಾರ್ ಪಟ್ಟವನ್ನು ಉಳಿಸಿಕೊಂಡು ಬರುತ್ತಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣದ ಎಲ್ಲ ಭಾಷೆಗಳಲ್ಲಿಯೂ ನಾಯಕಿಯಾಗಿ ನಟಿಸಿದ್ದಾರೆ ನಯನತಾರಾ. ಆದರೆ ಇತ್ತೀಚೆಗಷ್ಟೆ ಅಂದರೆ 2023 ರಲ್ಲಿ ಅವರು ಬಾಲಿವುಡ್​​ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ…

Read More