ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್ – Kannada News | Actor Diganth Manchale talks about Kannada and Telugu film industry during Rudra Kala press meet
ನಟ ದಿಗಂತ್ ಅವರು ‘ರುದ್ರ ಕಾಲ’ (Rudra Kala) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ (Kannada Film Industry) ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು. ದಿಗಂತ್ ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಗೂ ನಟಿಸುತ್ತಿದ್ದಾರೆ. ‘ಕನ್ನಡ ಸಿನಿಮಾ ಗೆಲ್ಲಲಿ. ಈಗ ನಾನು ಒಂದು ತೆಲುಗು ಸಿನಿಮಾದ ಶೂಟಿಂಗ್ ಮುಗಿಸಿ ಬಂದೆ. ಅಲ್ಲಿನವರಿಗೆ ಒಟಿಟಿಯಿಂದ ಎಫೆಕ್ಟ್…