All posts by nagaraj11081993

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ? – Kannada News | Shidlaghatta City Municipality Commissioner Threat Case: Did Accused Rajeev Gowda Try for a Compromise?

ಚಿಕ್ಕಬಳ್ಳಾಪುರ, ಜನವರಿ 16: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ವಿಚಾರ ಸುದ್ದಿಯಾಗುತ್ತಿದ್ದಂತೆ ರಾಜೀ ಸಂಧಾನದ ಯತ್ನ ನಡೆದಿರುವ ವಿಷಯ ಬಹಿರಂಗವಾಗಿದೆ. ಪೌರಾಯುಕ್ತೆ ಅಮೃತಾ ಅವರ ತಂದೆಗೆ ರಾಜೀವ್​​ ಗೌಡ ಕಡೆಯಿಂದ ಕರೆ ಬಂದಿತ್ತು ಎನ್ನಲಾಗಿದ್ದು, ಈ ಬಗ್ಗೆ ಸ್ವತಃ ಅಮೃತಾ ಅವರೇ ಮಾಹಿತಿ ನೀಡಿದ್ದಾರೆ. ಆ ಬಗ್ಗೆ ನಾವು ನಿರ್ಧಾರ ಮಾಡಲು ಆಗಲ್ಲ. ಅದು ನಮ್ಮ ಮಗಳಿಗೆ ಸಂಬಂಧಿಸಿದ ವಿಷಯ ಎಂದು ಈ ವೇಳೆ ನಮ್ಮ ತಂದೆ ತಿಳಿಸಿದ್ದಾರೆ ಎಂದು ಟಿವಿ9ಗೆ ಪೌರಾಯುಕ್ತೆಯೇ ಮಾಹಿತಿ ನೀಡಿದ್ದಾರೆ.  ಇನ್ನು ಘಟನೆ ಬಳಿಕ ಪೌರಾಯುಕ್ತೆ ಅಮೃತಾ ಯಾವುದೇ ಆತಂಕಕ್ಕೆ ಒಳಗಾಗದೆ ತಮ್ಮ ಕರ್ತವ್ಯಗಳನ್ನು ಎಂದಿನಂತೆ ನಿರ್ವಹಿಸುತ್ತಿದ್ದಾರೆ. ಅಕ್ರಮವಾಗಿ ಅಳವಡಿಸಲಾದ ಫ್ಲೆಕ್ಸ್ ಬೋರ್ಡ್‌ಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಿಬ್ಬಂದಿಯೊಂದಿಗೆ ಮುಂದುವರಿಸಿದ್ದಾರೆ. ಸಿಬ್ಬಂದಿ, ಸಾರ್ವಜನಿಕರು ಹಾಗೂ ಉನ್ನತ ಅಧಿಕಾರಿಗಳಿಂದಲೂ ಅಮೃತಾರಿಗೆ ಬೆಂಬಲ ವ್ಯಕ್ತವಾಗಿರೋದು ಇಲ್ಲಿ ಗಮನಾರ್ಹ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

National Startup Day 2026: ನವೋದ್ಯಮಿಗಳ ಸ್ವಂತ ಬಿಸ್ನೆಸ್‌ ಕನಸನ್ನು ನನಸಾಗಿಸುತ್ತಿವೆ ಸ್ಟಾರ್ಟ್‌ಅಪ್‌ – Kannada News | National Startup Day 2026: What is the purpose of celebrating National Startup Day? Here is the information

ರಾಷ್ಟ್ರೀಯ ನವೋದ್ಯಮ ದಿನImage Credit source: Pinterest

ದೇಶದಲ್ಲಿಂದು ಸಾಕಷ್ಟು ಸ್ಟಾರ್ಟ್‌ಅಪ್‌ಗಳು (Startup) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ, ಭಾರತೀಯ ನವೋದ್ಯಮ ಸಂಸ್ಕೃತಿಯನ್ನು ಹೊಸ ಎತ್ತರಕ್ಕೆ ಏರಿಸಲು ಪ್ರಯತ್ನಗಳು ನಡೆಯುತ್ತಿವೆ. ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ಉದ್ಯೋಗ ಮತ್ತು ಅಭಿವೃದ್ಧಿಯ ಕನಸುಗಳನ್ನು ನನಸಾಗಿಸುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕವಾಗಿದ್ದು, ಭಾರತದಲ್ಲಿ ನವೋದ್ಯಮ ಪರಿಕಲ್ಪನೆಯನ್ನು ಪ್ರೋತ್ಸಾಹಿಸುವ, ಉದ್ಯಮಶೀಲತೆಯನ್ನು ಉತ್ತೇಜಿಸುವ ಹಾಗೂ ಭಾರತದ ಸ್ವಾವಲಂಬನೆಯ ಗುರಿಯನ್ನು ಸಾಧಿಸುವ ಉದ್ದೇಶದಿಂದ ಪ್ರತಿವರ್ಷ ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ರಾಷ್ಟ್ರೀಯ ನವೋದ್ಯಮ ದಿನದ ಇತಿಹಾಸವೇನು?

2016 ರಲ್ಲಿ ಪ್ರಾರಂಭವಾದ ಸ್ಟಾರ್ಟ್‌ಅಪ್‌ ಇಂಡಿಯಾ ಉಪಕ್ರಮದ ಸಂಸ್ಥಾಪನಾ ದಿನವನ್ನು ಗುರುತಿಸಲು ಜನವರಿ 16, 2022 ರಂದು ಮೊದಲ ಬಾರಿಗೆ ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಲಾಯಿತು. ಜನವರಿ 15, 2022 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನು ಅಳವಡಿಸಿಕೊಳ್ಳುವುದಾಗಿ ಘೋಷಿಸಿದರು. ಅದೇ ವರ್ಷ ಭಾರತ ತನ್ನ ಮೊದಲ ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಿತು. ಈ ದಿನವು ರಾಷ್ಟ್ರದ ಪ್ರಗತಿಗೆ ಸ್ಟಾರ್ಟ್‌ಅಪ್‌ ಸಮುದಾಯದ ಕೊಡುಗೆಗಳನ್ನು ಬೆಂಬಲಿಸುವ ಮತ್ತು ಗುರುತಿಸುವ  ಹಾಗೂ ನಾಗರಿಕರಲ್ಲಿ ಉದ್ಯಮಶೀಲತಾ ಮನೋಭಾವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಸ್ಟಾರ್ಟ್‌ಅಪ್‌ ಎಂದರೇನು?

ಸ್ಟಾರ್ಟ್‌ಅಪ್‌ ನವೋದ್ಯಮಿಗಳಿಗೆ ಸ್ವಂತ ಉದ್ದಿಮೆಯನ್ನು ಶುರು ಮಾಡಲು ಒಂದೊಳ್ಳೆ ವೇದಿಕೆಯಾಗಿದೆ. ಸ್ಟಾರ್ಟ್ಅಪ್ ಎಂದರೆ ಇದೀಗ ಕಾರ್ಯಾಚರಣೆ ಆರಂಭಿಸಿರುವ ಕಂಪನಿ. ಒಬ್ಬಂಟಿಯಾಗಿ ಅಥವಾ ಒಂದು ಟೀಮ್‌ನೊಂದಿಗೆ, ಇನ್ಕ್ಯುಬೇಶನ್ ಎಂಬ ಪ್ರಕ್ರಿಯೆಯ ಮೂಲಕ ಕಂಪನಿಗೆ ಅಡಿಪಾಯ ಹಾಕಲಾಗುತ್ತದೆ. ಇಲ್ಲಿ, ಜನರು ತಮ್ಮ ಕೌಶಲ್ಯ ಮತ್ತು ಪರಿಣತಿಯನ್ನು ತಂದು ಹೊಸ ವ್ಯವಹಾರ ಕಲ್ಪನೆಯ ಮೇಲೆ ಒಟ್ಟಾಗಿ ಕೆಲಸ ಮಾಡುತ್ತಾರೆ. ಈ ರೀತಿಯ ಕಂಪನಿಯು ಗ್ರಾಹಕರಿಗೆ ವಿಶಿಷ್ಟ ಉತ್ಪನ್ನ ಅಥವಾ ಸೇವೆಯನ್ನು ನೀಡುತ್ತದೆ.

ರಾಷ್ಟ್ರೀಯ ನವೋದ್ಯಮ ದಿನದ ಉದ್ದೇಶವೇನು?

  • ಮೊದಲನೆಯದಾಗಿ, ದೇಶದ ಯುವಕರನ್ನು ಉದ್ಯೋಗಾಕಾಂಕ್ಷಿಗಳಿಂದ ಉದ್ಯೋಗ ಸೃಷ್ಟಿಕರ್ತರನ್ನಾಗಿ ಪರಿವರ್ತಿಸುವುದು.
  • ಎರಡನೆಯದಾಗಿ, ತಳಮಟ್ಟದ ನಾವೀನ್ಯತೆಯನ್ನು ಉತ್ತೇಜಿಸುವುದು.
  • ವಿದೇಶಿ ತಂತ್ರಜ್ಞಾನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಮತ್ತು ರಕ್ಷಣೆ, ಕೃಷಿ, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದಂತಹ ಕ್ಷೇತ್ರಗಳಲ್ಲಿ ಸ್ಥಳೀಯ ಪರಿಹಾರಗಳನ್ನು ಅಭಿವೃದ್ಧಿಪಡಿಸುವುದು ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವುದು.

ಇದನ್ನೂ ಓದಿ: ಭಾರತೀಯ ಸೇನೆಯ ಅದಮ್ಯ ಧೈರ್ಯ, ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ದಿನವಿದು

ರಾಷ್ಟ್ರೀಯ ನವೋದ್ಯಮ ದಿನದ ಮಹತ್ವವೇನು?

  • ಭಾರತದಲ್ಲಿ ನವೋದ್ಯಮ ಪರಿಕಲ್ಪನೆಯನ್ನು ಪ್ರೋತ್ಸಾಹಿಸುವುದು ಮತ್ತು ದೇಶಾದ್ಯಂತ ಉದ್ಯಮಶೀಲತೆಯನ್ನು ಉತ್ತೇಜಿಸುವುದು ರಾಷ್ಟ್ರೀಯ ನವೋದ್ಯ, ದಿನದ ಉದ್ದೇಶವಾಗಿದೆ.
  • ಭಾರತದ ಆರ್ಥಿಕ ಬೆಳವಣಿಹೆ, ನಾವೀನ್ಯತೆ ಮತ್ತು ಉದ್ಯೋಗಸೃಷ್ಟಿಗೆ ನವೋದ್ಯಮಗಳ ಮಹತ್ವದ ಕೊಡುಗೆಗಳನ್ನು ಗೌರವಿಸಲು ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಲಾಗುತ್ತದೆ.
  • ಈ ದಿನವು ಯುವ ಪೀಳಿಗೆಗೆ ತಮ್ಮ ಆಲೋಚನೆಗಳನ್ನು ವಾಣಿಜ್ಯೀಕರಿಸಲು ಮತ್ತು ಜಾಗತಿಕವಾಗಿ ಪ್ರಸ್ತುತಪಡಿಸಲು ಸ್ಫೂರ್ತಿ ನೀಡುತ್ತದೆ.
  • ಈ ದಿನವು ದೇಶದ ಯುವಕರು ತಮ್ಮ ಕನಸುಗಳನ್ನು ನನಸಾಗಿಸಲು ಮತ್ತು ಅವರಿಗೆ ಹೊಸ ದಿಕ್ಕನ್ನು ನೀಡಲು ಪ್ರೇರೇಪಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಲಕ್ಕುಂಡಿಗೆ ವಾನರ ಸೈನ್ಯ ಎಂಟ್ರಿ – Kannada News | Monkey army enters Benalle Lakkundi, a gold treasure

ಗದಗ, ಜ.16: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಚಿನ್ನದ ನಿಧಿಯೊಂದು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ನಿಧಿ ಶೋಧದ ಉತ್ಖನನ ಕಾರ್ಯ ಆರಂಭವಾಗಿದೆ. ಈ ಉತ್ಖನನ ಕಾರ್ಯವು ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿ ಡಿ.ಎಂ. ಕೇಶವ ಮತ್ತು ರಾಜ್ಯ ಪುರಾತನ ಇಲಾಖೆಯ ಅಧಿಕಾರಿ ಆರ್. ತೇಜಪ್ಪ ಅವರ ಸಮರ್ಥ ನೇತೃತ್ವದಲ್ಲಿ ನಡೆಯುತ್ತಿದೆ. ಚಿನ್ನದ ನಿಧಿ ಪತ್ತೆಯಾದ ಸ್ಥಳದ ಸುತ್ತಮುತ್ತ, ಶ್ರೀ ಕೋಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈಗಾಗಲೇ ಆರಂಭವಾಗಿವೆ.ಅಚ್ಚರಿಯ ಸಂಗತಿಯೆಂದರೆ, ಉತ್ಖನನ ಕಾರ್ಯ ನಡೆಯುವ ಜಾಗದಲ್ಲಿ ವಾನರ ಸೈನ್ಯವೊಂದು ಪ್ರತ್ಯಕ್ಷವಾಗಿದ್ದು, ಇದು ಸ್ಥಳೀಯರಲ್ಲಿ ಮತ್ತು ವೀಕ್ಷಕರಲ್ಲಿ ವಿಶೇಷ ಕುತೂಹಲಕ್ಕೆ ಕಾರಣವಾಗಿದೆ. ಲಕ್ಕುಂಡಿಯ ಇತಿಹಾಸ ಮತ್ತು ಸಂಸ್ಕೃತಿಗೆ ಮತ್ತೊಂದು ಹೊಸ ಅಧ್ಯಾಯ ಬರೆಯುವ ಸಾಧ್ಯತೆಯಿರುವ ಈ ನಿಧಿ ಶೋಧದ ಕಾರ್ಯಕ್ಕೆ ಎಲ್ಲರ ಕಣ್ಣು ನೆಟ್ಟಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:16 am, Fri, 16 January 26

Source link

Video: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿ ದಾಳಿ – Kannada News | Stray Bull Attack Caught on Camera in Meerut

ಮೀರತ್, ಜನವರಿ 16: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ಮೀರತ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್‌ನ ಕಂಕರ್‌ಖೇರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಳಿಯೊಂದು ಹಲವು ವಾಹನಗಳಿಗೆ ಹಾನಿ ಮಾಡಿದ್ದಷ್ಟೇ ಅಲ್ಲದೆ, ಸ್ಥಳೀಯ ನಿವಾಸಿಗಳಲ್ಲೂ ಆತಂಕ ಹುಟ್ಟುಹಾಕಿದೆ. ಸಿಟಿ ಗರ್ಲ್ ರೆಸ್ಟೋರೆಂಟ್ ಕಡೆಗೆ ಹೋಗಿ ಆವರಣದ ಹೊರಗೆ ನಿಂತಿದ್ದ ರೆಸ್ಟೋರೆಂಟ್ ಮಾಲೀಕ ಧೀರಜ್ ರಥಿ ಮೇಲೆ ದಾಳಿ ಮಾಡಿದೆ. ಇದು ರೆಸ್ಟೋರೆಂಟ್ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅವರ ಪಕ್ಕೆಲುಬಿಗೆ ಗಾಯವಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ, ಮತ್ತು ಚಿಕಿತ್ಸೆಯ ನಂತರ ಅವರು ಮನೆಗೆ ಮರಳಿದ್ದಾರೆ.

 

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ! – Kannada News | Kaginele Shri Received Kidney Donation from His Pre Monastic Mother, Matter Revealed After His Death

ರಾಯಚೂರು, ಜನವರಿ 16: ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳು ಬ್ರಹ್ಮೈಕ್ಯರಾದ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಶ್ರೀಗಳಿಗೆ ಎರಡು ಕಿಡ್ನಿ ವಿಫಲವಾದಾಗ ಕಣ್ಣೀರಿಟ್ಟಿದ್ದ ತಾಯಿ ಜಯಮ್ಮ, ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ತಮ್ಮ ಕಿಡ್ನಿಯನ್ನೇ ದಾನ ಮಾಡಿದ್ದರು ಎಂಬ ವಿಷಯ ರಿವೀಲ್​​ ಆಗಿದೆ. ಈ ಬಗ್ಗೆ ಟಿವಿ9 ಜೊತೆ ಸ್ವತಃ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಜಯಮ್ಮ ಅವರ ಎಡಭಾಗದ ಕಿಡ್ನಿಯನ್ನು, ಶ್ರೀಗಳ ಬಲಭಾಗಕ್ಕೆ ಕಿಡ್ನಿ ಕಸಿ ಮಾಡಲಾಗಿತ್ತು. 7 ವರ್ಷದ ಹಿಂದೆ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು ಎಂಬ ವಿಷಯ ಪ್ರಸ್ತಾಪಿಸಿ ಜಯಮ್ಮ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನು ತಮ್ಮ ಪೂರ್ವಾಶ್ರಮದ ತಾಯಿ ಕಿಡ್ನಿ ಕೊಡುತ್ತೇನೆ ಎಂದಿದ್ದಕ್ಕೆ ಶ್ರೀಗಳು ಬೇಡ ಎಂದಿದ್ದರು. ಬಳಿಕ ಸಿದ್ದರಾಮಯ್ಯನವರಿಂದ ಮನವೊಲಿಕೆ ಬಳಿಕ ಶ್ರೀಗಳು ಒಪ್ಪಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! – Kannada News | Pet Dog Dispute Reaches Police Station in Hubballi, Not a Stray Dog Issue!

ಹುಬ್ಬಳ್ಳಿ, ಜನವರಿ 16: ಬೀದಿ ನಾಯಿ (Stray Dog) ವಿಚಾರ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲೂ ವಿಚಾರಣೆಗೆ ಬಂದಿರುವುದು ನಮಗೆಲ್ಲ ಗೊತ್ತೇ ಇದೆ. ಬೀದಿ ನಾಯಿ ಕಾಟದ ವಿಚಾರ ಸದಾ ಚರ್ಚೆಗೆ ಒಳಗಾಗುತ್ತಿದೆ. ಆದರೆ, ಅಚ್ಚರಿಯೆಂಬಂತೆ ಹುಬ್ಬಳ್ಳಿಯಲ್ಲಿ ಸಾಕು ನಾಯಿ (Pet Dog) ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹುಬ್ಬಳ್ಳಿ (Hubballi) ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಅಲ್ಲದೆ, ಸಾಕು ನಾಯಿ ಉಪಟಳ ವಿಚಾರ ಹುಬ್ಬಳ್ಳಿಯ ಗುರುದೇವ ನಗರ ನಿವಾಸಿಗಳಲ್ಲಿ ಆತಂಕ ಮೂಡಿದೆ.

ಗುರುದೇವ ನಗರ ನಿವಾಸಿ ಪರಶುರಾಮ ಎಂಬವರು ಸಾಕು ನಾಯಿ ವಿಚಾರವಾಗಿ ವಿಲ್ಸನ್ ಹಾಗೂ ವೈಷ್ಣವಿ ಎಂಬ ದಂಪತಿ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಅವರ ದೂರಿನ ಪ್ರಕಾರ, ವಿಲ್ಸನ್ ಹಾಗೂ ವೈಷ್ಣವಿ ದಂಪತಿ ಸಾಕಿರುವ ರಾಟ್‌ ವೀಲರ್ ನಾಯಿ ಮದನ ಎಂಬ ಬಾಲಕನಿಗೆ ಕಚ್ಚಿದೆ. ಈ ವೇಳೆ ಬಾಲಕನನ್ನು ರಕ್ಷಿಸಲು ಮಧ್ಯ ಪ್ರವೇಶಿಸಿದ ಪರಶುರಾಮ ಮೇಲೆಯೇ ಆರೋಪಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಮ್ಮ ನಾಯಿಗೆ ಹೊಡೆದಿದ್ದೀರಿ’ ಎಂದು ಆರೋಪಿಸಿ ಪರಶುರಾಮ ಮೇಲೆ ವಿಲ್ಸನ್ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ವಿಲ್ಸನ್ ಮನೆಗೆ ಬಂದು ಹಲ್ಲೆ ಮಾಡಿ ಹೋಗಿದ್ದಾರೆ ಎಂಬ ಆರೋಪವೂ ಮಾಡಲಾಗಿದೆ. ಈ ಘಟನೆ ಜನವರಿ 14ರಂದು ನಡೆದಿದ್ದು, ಅದೇ ದಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಕು ನಾಯಿಗಳ ಅಟ್ಟಹಾಸದಿಂದಾಗಿ ಗುರುದೇವ ನಗರ ನಿವಾಸಿಗಳು ಕಂಗಾಲಾಗಿದ್ದು, ಈ ಹಿಂದೆ ಕೂಡ ಸಾಕು ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಶುರಾಮ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ: ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಚಡಚಣದಲ್ಲಿ ಪತ್ತೆ, ಬಯಲಾಯ್ತು ರಹಸ್ಯ!

ದೂರು ಸ್ವೀಕರಿಸಿರುವ ಅಶೋಕ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ದಾಖಲೆಗಳು ಹಾಗೂ ವೈದ್ಯಕೀಯ ವರದಿಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ. ಸಾಕು ನಾಯಿಗಳ ನಿಯಂತ್ರಣ ಮತ್ತು ಸಾರ್ವಜನಿಕರ ಸುರಕ್ಷತೆ ಕುರಿತು ಹುಬ್ಬಳ್ಳಿಯಲ್ಲಿ ಮತ್ತೆ ಚರ್ಚೆ ಶುರುವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಮಹೇಶ್ ಬಾಬು ಅವರ ಎಎಂಬಿ ಸಿನಿಮಾಸ್ ಬೆಂಗಳೂರಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಾಂಭ ಆರಂಭಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್​​​ನಲ್ಲಿ ಈ ಮಲ್ಟಿಪ್ಲೆಕ್ಸ್  ಇದೆ. 9 ಪರದೆಗಳನ್ನು ಇದು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್​​ನ ಝಲಕ್ ಇಲ್ಲಿದೆ.

ಸ್ಕ್ರೀನ್ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ ನಮ್ಮನ್ನು ಕಾಪಾಡುತ್ತದೆ ಎಂಬುದನ್ನು ಸೂಚ್ಯವಾಗಿ ಹೇಳುವ ಪ್ರಯತ್ನವನ್ನು ತಂಡ ಮಾಡಿದೆ. ಎಲ್ಲಿಯೂ ಆಡಂಬರವಿಲ್ಲದೆ, ದೈವಾರಾಧನೆ ತೋರಿಸದೇ ಸಿನಿಮಾ ತಯಾರಾಗಿದೆ.  ತುಳುನಾಡಿನ ನಂಬಿಕೆಗಳ  ಬಗ್ಗೆಯೂ ಚಿತ್ರದಲ್ಲಿ ಹೇಳಲಾಗಿತ್ತಿದೆ. ಈ ಚಿತ್ರದಲ್ಲಿ ಪ್ರೇಮಕಥೆ, ಸಸ್ಪೆನ್ಸ್ ವಿಷಯಗಳು ಕೂಡ ಇವೆ. ಎಲ್ಲವನ್ನು ಹದವಾಗಿ ಬೆರೆಸಿ, ಸಿನಿಮಾ ಸಿದ್ಧಪಡಿಸಲಾಗಿದೆ ಎಂಬುದು ತಂಡದ ಮಾತು.

‘ಕಟ್ಟೆಮಾರ್’ ಚಿತ್ರವನ್ನು ರಕ್ಷಿತ್ ಗಾಣಿಗ ಹಾಗೂ ಸಚಿನ್ ಕಟ್ಲ ನಿರ್ದೇಶನ ಮಾಡಿದ್ದಾರೆ. ಜನವರಿ 23ರಂದು ಈ ಚಿತ್ರ ತುಳುವಿನಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಕನ್ನಡದಲ್ಲಿ ಡಬ್ ಆಗಿದ್ದು, ಮುಂದಿನ ದಿನಗಳಲ್ಲಿ ಬಿಡುಗಡೆ ಕಾಣಲಿದೆ. ಬಿಡುಗಡೆ ಕಂಡಿರುವ ಟ್ರೇಲರ್ ಗಮನ ಸೆಳೆದಿದೆ.

‘ಸು ಫ್ರಮ್ ಸೋ’ ಬಳಿಕ ಜೆಪಿ ತುಮಿನಾಡು ಜನಪ್ರಿಯತೆ ಹೆಚ್ಚಿದೆ. ಅವರು ಒಂದು ಕಥೆ ಒಪ್ಪಿಕೊಳ್ಳುತ್ತಾರೆ ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಈಗ ‘ಕಟ್ಟೆಮಾರ್’ ಸಿನಿಮಾ ಮೂಲಕ ಅವರು ಮತ್ತೆ ಪ್ರೇಕ್ಷಕರ ಎದುರು ಬರಲು ಸಿದ್ಧರಾಗಿದ್ದಾರೆ. ಆದಷ್ಟು ಬೇಗ ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗಲಿ ಎಂಬುದು ಅಭಿಮಾನಿಗಳ ಕೋರಿಕೆ.

ಇದನ್ನೂ ಓದಿ: ಜೆಪಿ ತುಮಿನಾಡುಗೆ ಮುಂದಿದೆ ದೊಡ್ಡ ಸವಾಲು 

ಸಂತೋಷ್ ಆಚಾರ್ಯ ಛಾಯಾಗ್ರಹಣ, ಗಣೇಶ್ ನಿರ್ಚಾಲ್ ಸಂಕಲನ ಚಿತ್ರಕ್ಕಿದೆ. ವಿಶ್ವಾಸ್ ಅಡ್ಯಾರ್, ಆರ್.ಕೆ.ಮುಲ್ಕಿ, ವಿನೋದ್ ಶೆಟ್ಟಿ ಕೃಷ್ಣಾಪುರ, ಸಂದೇಶ್ ಉಕ್ಕುಡ ನಿರ್ದೇಶನ ತಂಡದಲಿದ್ದಾರೆ. ಅಸ್ತ್ರ ಪ್ರೊಡಕ್ಷನ್ ಚಿತ್ರವನ್ನು ಪ್ರಸ್ತುತಪಡಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿಚ್ಛೇಧನದ ಬಳಿಕ ಸ್ಟಾರ್ ನಟಿಯ ವಿವಾಹವಾಗಲು ಮುಂದಾದ ನಟ ಧನುಶ್ – Kannada News | Mrunal Thakur and Dhanush may get married on February 14

ಧನುಶ್ (Dhanush) ದಕ್ಷಿಣ ಭಾರತದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹಿಂದಿಯಲ್ಲಿಯೂ ನಟಿಸಿ ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಧನುಶ್​​ಗೆ ದೊಡ್ಡ ಅಭಿಮಾನಿ ವರ್ಗವಿದೆ. ಕೇವಲ ಕಮರ್ಶಿಯಲ್, ಮಾಸ್ ಮಸಾಲ ಸಿನಿಮಾಗಳನ್ನು ಮಾಡದೆ ಕತೆ ಆಧರಿತ, ನಟನೆಗೆ ಅವಕಾಶ ಇರುವ ಸಿನಿಮಾಗಳಲ್ಲೇ ಹೆಚ್ಚು ನಟಿಸುತ್ತಾರೆ ಧನುಶ್. ನಟ ಧನುಶ್ ಅವರ ವೃತ್ತಿ ಜೀವನ ಅದ್ಭುತವಾಗಿ ಸಾಗುತ್ತಿದೆ ಆದರೆ ಅವರ ಖಾಸಗಿ ಜೀವನದಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಸ್ಟಾರ್ ನಟ ರಜನೀಕಾಂತ್ ಪುತ್ರಿಯ ವಿವಾಹವಾಗಿದ್ದ ಧನುಶ್, ಬರೋಬ್ಬರಿ 20 ವರ್ಷಗಳ ಬಳಿಕ ವಿಚ್ಛೇದನ ಪಡೆದರು. ಇದೀಗ ಸ್ಟಾರ್ ನಟಿಯೊಬ್ಬರ ಮದುವೆ ಆಗಲು ಧನುಶ್ ಮುಂದಾಗಿದ್ದಾರೆ.

ಧನುಶ್ ಅವರು ರಜನೀಕಾಂತ್ ಪುತ್ರಿ ಐಶ್ವರ್ಯ ಜೊತೆಗೆ 2004 ರಲ್ಲಿ ವಿವಾಹವಾದರು. ಇಬ್ಬರಿಗೂ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ತಾವು ಬೇರೆ ಆಗುತ್ತಿರುವುದಾಗಿ 2022 ರಲ್ಲಿ ಧನುಶ್ ಹಾಗೂ ಐಶ್ವರ್ಯಾ ಘೋಷಿಸಿದರು. 2024ರಲ್ಲಿ ಇವರಿಗೆ ನ್ಯಾಯಾಲಯವು ವಿಚ್ಛೇದನ ನೀಡಿತು. ಇದೀಗ ಧನುಶ್, ಸ್ಟಾರ್ ನಟಿಯೊಬ್ಬರನ್ನು ವಿವಾಹ ಆಗುವ ಯೋಜನೆ ಹಾಕಿಕೊಂಡಿದ್ದಾರಂತೆ.

ಧನುಶ್ ಹಾಗೂ ನಟಿ ಮೃಣಾಲ್ ಠಾಕೂರ್ ಅವರುಗಳು ಪರಸ್ಪರ ಪ್ರೀತಿಯಲ್ಲಿದ್ದು, ಇಬ್ಬರೂ ಸಹ ಶೀಘ್ರವೇ ಮದುವೆ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೃಣಾಲ್ ಠಾಕೂರ್ ಮತ್ತು ಧನುಶ್ ಕಳೆದ ಎರಡು ವರ್ಷಗಳಿಂದ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಮೃಣಾಲ್ ನಟಿಸಿದ್ದ ‘ಸನ್ ಆಫ್ ಸರ್ದಾರ್ 2’ ಪ್ರೀಮಿಯರ್ ಶೋನಲ್ಲಿ ಧನುಶ್ ಭಾಗವಹಿಸಿದ್ದರು. ಧನುಶ್ ನಟಿಸಿದ್ದ ಹಿಂದಿ ಸಿನಿಮಾ ‘ತೇರೆ ಇಷ್ಕ್ ಮೇ’ ರ್ಯಾಪ್ ಅಪ್ ಪಾರ್ಟಿಯಲ್ಲಿ ಮೃಣಾಲ್ ಭಾಗವಹಿಸಿದ್ದರು. ಆಗಲೇ ಈ ಇಬ್ಬರ ಪ್ರೀತಿಯ ಬಗ್ಗೆ ಪುಕಾರುಗಳು ಹರಿದಾಡಿದ್ದವು.

ಇದನ್ನೂ ಓದಿ:ಅಶ್ವಿನಿಯ ಫಿನಾಲೆಗೆ ಕರೆದೊಯ್ಯುವ ಜವಾಬ್ದಾರಿ ಧನುಶ್​​​ಗೆ ವಹಿಸಿದ ಗಿಲ್ಲಿ

ಇದೀಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ಮೃಣಾಲ್ ಠಾಕೂರ್ ಮತ್ತು ಧನುಶ್ ಮದುವೆ ಆಗಲಿದ್ದಾರಂತೆ. ಈ ಇಬ್ಬರ ವಿವಾಹ ಫೆಬ್ರವರಿ 14 ರಂದು ನಡೆಯಲಿದೆ. ಈ ಮದುವೆ ಸಮಾರಂಭದಲ್ಲಿ ಎರಡೂ ಕುಟುಂಬದ ಅತ್ಯಾಪ್ತರು ಮಾತ್ರ ಭಾಗಿ ಆಗಲಿದ್ದಾರೆ. ಧನುಶ್ ಅವರಿಗೆ ಇದು ಎರಡನೇ ಮದುವೆ ಆದರೆ ಮೃಣಾಲ್ ಅವರಿಗೆ ಇದು ಮೊದಲ ಮದುವೆ ಆಗಲಿದೆ. ಮೃಣಾಲ್ ಠಾಕೂರ್ ಅವರಿಗೆ ಈಗ 33 ವರ್ಷ ವಯಸ್ಸು, ಧನುಶ್ ಅವರಿಗೆ 42 ವರ್ಷ. ಇಬ್ಬರೂ ಸಹ ಯಶಸ್ವಿ ನಟ ಮತ್ತು ನಟಿಯರು. ಈ ಇಬ್ಬರ ದಾಂಪತ್ಯ ಜೀವನ ಹೇಗೆ ಸಾಗುತ್ತದೆ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು-ಮುಂಬೈ ದುರಂತೋ ಎಕ್ಸ್‌ಪ್ರೆಸ್‌: ಪ್ರಯಾಣಾವಧಿ 18 ಗಂಟೆಗೆ ಇಳಿಕೆಯಾಗುತ್ತಾ?

ಬೆಂಗಳೂರು, ಜನವರಿ 16: ಬೆಂಗಳೂರು–ಮುಂಬೈ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಎರಡು ಮಹಾನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸುವ ಉದ್ದೇಶದಿಂದ ದುರಂತೋ ಎಕ್ಸ್‌ಪ್ರೆಸ್ ರೈಲು ಆರಂಭಿಸುವ ಕುರಿತು ರೈಲ್ವೆ ಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ರೈಲು ಸೇವೆ ಆರಂಭವಾದರೆ, ಬೆಂಗಳೂರು–ಮುಂಬೈ ಪ್ರಯಾಣದ ಸಮಯ ಸುಮಾರು 18 ಗಂಟೆಗಳವರೆಗೆ ಇಳಿಯುವ ಸಾಧ್ಯತೆ ಇದೆ.

ಏನೆಲ್ಲಾ ಸೌಲಭ್ಯ ನೀಡಲಿದೆ ದುರಂತೋ ಎಕ್ಸ್‌ಪ್ರೆಸ್‌?

ಇತ್ತೀಚೆಗೆ ಬೆಂಗಳೂರು ಎಸ್‌ಎಂವಿಟಿ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ (LTT) ನಡುವೆ ವಾರಕ್ಕೆ ಎರಡು ಬಾರಿ ಸಂಚರಿಸುವ ಹೊಸ ಸೂಪರ್‌ಫಾಸ್ಟ್ ರೈಲು ಸೇವೆಗೆ ಅನುಮೋದನೆ ದೊರೆತಿತ್ತು. 1,209 ಕಿಲೋಮೀಟರ್ ದೂರವನ್ನು ಈ ರೈಲು ಕ್ರಮಿಸಿದರೂ, ಸುಮಾರು 24 ಗಂಟೆಗಳ ಪ್ರಯಾಣ ಸಮಯ ಹೊಂದಿರುವುದರಿಂದ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಡಿಸೆಂಬರ್ 9 ರಂದು ಆರಂಭವಾದ ಈ ರೈಲು ಹುಬ್ಬಳ್ಳಿ, ಪುಣೆ ಸೇರಿದಂತೆ 14 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಈ ಹಿನ್ನೆಲೆ, ಕೆಎಸ್‌ಆರ್ ಬೆಂಗಳೂರು ಮತ್ತು ಸಿಎಸ್ಎಂಟಿ ಮುಂಬೈ ನಡುವೆ ದುರಂತೋ ಎಕ್ಸ್‌ಪ್ರೆಸ್ ಆರಂಭಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಮೀರಜ್ ಹಾಗೂ ಪುಣೆ ಮಾರ್ಗವಾಗಿ ಈ ರೈಲು ಸಂಚರಿಸುವ ಸಾಧ್ಯತೆ ಇದೆ. ನಿಲ್ದಾಣದ ಸಂಖ್ಯೆ ಕಡಿಮೆಯಿದ್ದು, ವೇಗದ ಸಂಚಾರ ಹಾಗೂ ಟಿಕೆಟ್‌ ಜೊತೆ ಊಟದ ಸೌಲಭ್ಯವೂ ಇರುವ ದುರಂತೋ ರೈಲುಗಳು ದೂರ ಪ್ರಯಾಣಕ್ಕೆ ಹೇಳಿ ಮಾಡಿಸಿದ್ದಾಗಿದೆ.

ತಾತ್ಕಾಲಿಕ ವೇಳಾಪಟ್ಟಿ

ರೈಲು ಸಂಜೆ 4.30ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10.30ಕ್ಕೆ ಮುಂಬೈ ತಲುಪಬಹುದು. 3ಎಸಿ ಟಿಕೆಟ್ ದರ ಸುಮಾರು 2,500 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ಬಗ್ಗೆ ರೈಲ್ವೆ ಅಧಿಕಾರಿಗಳು ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link