All posts by nagaraj11081993

NCL Recruitment 2026: ಕೇಂದ್ರ ಸರ್ಕಾರಿ ಉದ್ಯೋಗಾವಕಾಶ; ನಾರ್ದರ್ನ್ ಕೋಲ್‌ಫೀಲ್ಡ್ಸ್ ನಲ್ಲಿ 577 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | NCL Recruitment 2026: 577 Posts for HEMM Operator, Paramedical and Overseer! Apply Now

ಕೇಂದ್ರ ಸರ್ಕಾರಿ ಉದ್ಯೋಗಾವಕಾಶImage Credit source: gemini ai

ಕೇಂದ್ರ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆಯಾದ ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL), 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್, ಓವರ್‌ಸೀರ್ ಮತ್ತು HEMM ಆಪರೇಟರ್ ಸೇರಿದಂತೆ ಒಟ್ಟು 577 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರಿ ವಲಯದಲ್ಲಿ ಸ್ಥಿರವಾದ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳ ವಿವರ ಮತ್ತು ಅರ್ಹತೆಗಳು:

ಈ ನೇಮಕಾತಿಯಲ್ಲಿ ಅತಿ ಹೆಚ್ಚು ಅಂದರೆ 472 ಹುದ್ದೆಗಳು HEMM ಆಪರೇಟರ್ (ಡಂಪರ್, ಡೋಜರ್, ಗ್ರೇಡರ್ ಮುಂತಾದವು) ವಿಭಾಗದಲ್ಲಿವೆ. ಈ ಹುದ್ದೆಗೆ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು ಮತ್ತು ಮಾನ್ಯತೆ ಪಡೆದ ಭಾರಿ ವಾಹನ ಚಾಲನಾ ಪರವಾನಗಿ (HMV) ಹೊಂದಿರಬೇಕು. ಇನ್ನುಳಿದಂತೆ 75 ಪ್ಯಾರಾಮೆಡಿಕಲ್ ಸಿಬ್ಬಂದಿ (ದಾದಿಯರು, ಔಷಧಿಕಾರರು) ಮತ್ತು 30 ಓವರ್‌ಸೀರ್ (ಸಿವಿಲ್) ಹುದ್ದೆಗಳಿದ್ದು, ಇವುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಡಿಪ್ಲೊಮಾ ಅಥವಾ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಸಿವಿಲ್ ಓವರ್‌ಸೀರ್ ಹುದ್ದೆಗೆ ಮೂರು ವರ್ಷಗಳ ಸಿವಿಲ್ ಎಂಜಿನಿಯರಿಂಗ್ ಡಿಪ್ಲೊಮಾ ಕಡ್ಡಾಯವಾಗಿದೆ.

ವಯೋಮಿತಿ ಮತ್ತು ಶುಲ್ಕದ ವಿವರ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷಗಳ ನಡುವೆ ಇರಬೇಕು. ನಿಯಮದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಶುಲ್ಕದ ವಿಷಯಕ್ಕೆ ಬಂದರೆ, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು 1,180 ರೂಪಾಯಿ ಪಾವತಿಸಬೇಕಾಗುತ್ತದೆ. ಆದರೆ ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳು ಮೇ 1 ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಯ್ಕೆ ಪ್ರಕ್ರಿಯೆ ಮತ್ತು ಆಕರ್ಷಕ ವೇತನ:

ಅಭ್ಯರ್ಥಿಗಳ ಅಂತಿಮ ಆಯ್ಕೆಯು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆಯನ್ನು ಆಧರಿಸಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯುತ್ತಮ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. HEMM ಆಪರೇಟರ್‌ಗಳಿಗೆ ದಿನಕ್ಕೆ 1,502 ರೂಪಾಯಿ ವೇತನ ಸಿಗಲಿದ್ದರೆ, ಪ್ಯಾರಾಮೆಡಿಕಲ್ ಮತ್ತು ಓವರ್‌ಸೀರ್ ಹುದ್ದೆಗಳಿಗೆ ತಿಂಗಳಿಗೆ ಸುಮಾರು 47,330 ರೂಪಾಯಿಗಳವರೆಗೆ ವೇತನ ದೊರೆಯಲಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ನಿಯಮದಂತೆ ಇತರ ಭತ್ಯೆಗಳು ಮತ್ತು ಸೌಲಭ್ಯಗಳು ಸಹ ಲಭ್ಯವಿರುತ್ತವೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ – Kannada News | VP C.P. Radhakrishnan Takes a Dig at Mallikarjun Kharge Over Remarks on PM Modi

ಬೀದರ್​, ಏಪ್ರಿಲ್​​ 22: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನಮ್ಮ ಮತ್ತು ಖರ್ಗೆ ಅವರ ದೃಷ್ಟಿಕೋನದಲ್ಲಿ ಸಣ್ಣ ಬದಲಾವಣೆ ಇದೆ ಅನಿಸುತ್ತೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಳಿ ಹಾಗೂ ಕಪ್ಪು ನಡುವಿನ ವ್ಯತ್ಯಾಸ ಇಲ್ಲ. ಅದೇ ರೀತಿ ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ವ್ಯತ್ಯಾಸವಿಲ್ಲದಂತೆ ಕಾಣುತ್ತೆ. ಅದನ್ನು ಬಿಟ್ಟರೆ ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ರಾಧಾಕೃಷ್ಣನ್ ಹೇಳಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದಲ್ಲಿ ನಡೆದ ಡಾ.ಬಸವಲಿಂಗ ಪಟ್ಟದೇವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪರಾಷ್ಟ್ರಿಪತಿಗಳು ಈ ರೀತಿ ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು – Kannada News | Lover Kills her Boy friend In Bengaluru: Kiran Father Reacts about Incident

ಬೆಂಗಳೂರು, (ಏಪ್ರಿಲ್ 22): ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿಯೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಸದ್ಯ ಪ್ರಕರಣ ಸಂಬಂಧ ಪ್ರೇಯಿಸಿ ಪ್ರೇಮಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೊಂದೆಡೆ ಇದ್ದ ಒಬ್ಬನೇ ಮಗ ಕಿರಣ್​​​ನನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಅವಳಿಗೂ ಕಠಿಣ ಶಿಕ್ಷೆಯಾಗಬೇಕೆಂದು ಕಣ್ಣೀರಿಟ್ಟಿದ್ದಾರೆ.

ಇದನ್ನೂ ನೋಡಿ: ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಕರೆದು ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

Source link

ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ – Kannada News | IRS officer’s 22 year old daughter murdered at Delhi home

ನವದೆಹಲಿ, ಏಪ್ರಿಲ್ 22: ದೆಹಲಿಯ ಆದಾಯ ತೆರಿಗೆ ಇಲಾಖೆಯ (ಐಆರ್​ಎಸ್​) ಹಿರಿಯ ಅಧಿಕಾರಿಯೊಬ್ಬರ 22 ವರ್ಷದ ಮಗಳನ್ನು ಅವರ ಮನೆಯಲ್ಲಿಯೇ ಬರ್ಬರವಾಗಿ ಕೊಲೆ (Girl Killed) ಮಾಡಲಾಗಿದೆ. ಇಂದು ಬೆಳಿಗ್ಗೆ ದೆಹಲಿಯ ಅಮರ್ ಕಾಲೋನಿ ಪ್ರದೇಶದ ತನ್ನ ಮನೆಯಲ್ಲಿ ಆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಈ ವೇಳೆ ಐಆರ್​ಎಸ್​ ಅಧಿಕಾರಿ ಇದು ಪೊಲೀಸ್ ತನಿಖೆಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆಗಳು ಪ್ರಕಾರ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಮೊಬೈಲ್ ಫೋನ್ ಚಾರ್ಜಿಂಗ್ ಕೇಬಲ್ ಬಳಸಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಘಟನೆ ನಡೆದಾಗ ಆ ಯುವತಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ಪೋಷಕರು ಜಿಮ್‌ಗೆ ಹೋಗಿದ್ದರು. ತನಿಖಾಧಿಕಾರಿಗಳು ಸುಮಾರು 6 ವಾರಗಳ ಹಿಂದೆ ಕೆಲಸದಿಂದ ತೆಗೆದುಹಾಕಲಾಗಿದ್ದ ಮಾಜಿ ಕೆಲಸಗಾರ ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ.

ಆಗ್ನೇಯ ದೆಹಲಿಯ ಐಷಾರಾಮಿ ಪ್ರದೇಶವಾದ ಅಮರ್ ಕಾಲೋನಿಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ರಾಜಧಾನಿ ದೆಹಲಿಯ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮೃತ ಯುವತಿ 1997ರ ಬ್ಯಾಚ್‌ನ ಹಿರಿಯ ಐಆಅರ್​ಎಸ್ ಅಧಿಕಾರಿಯ ಮಗಳು. ಎಂಜಿನಿಯರಿಂಗ್ ಓದಿದ್ದ ಆಕೆ ಅಪ್ಪನಂತೆ ಆಫೀಸರ್ ಆಗಬೇಕೆಂಬ ಆಸೆಯಿಂದ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ಐಆರ್​ಎಸ್​ ಅಧಿಕಾರಿಯಾಗಿದ್ದರಿಂದ ಅವರ ಮನೆಗೆ ಭದ್ರತೆಯಿತ್ತು. ಆದರೂ ಆಕೆಯ ಮನೆಯೊಳಗೇ ನಡೆದಿರುವ ಈ ಅತ್ಯಾಚಾರ ಮತ್ತು ಕೊಲೆ ದೆಹಲಿಯನ್ನು ಬೆಚ್ಚಿಬೀಳಿಸಿದೆ.

ಇದನ್ನೂ ಓದಿ: ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್

ಕೊಲೆಗಾರ ಆ ಯುವತಿಗೆ ಚೇತರಿಸಿಕೊಳ್ಳಲು ಅವಕಾಶವನ್ನೇ ನೀಡಲಿಲ್ಲ ಎಂಬ ಅಂಶದಿಂದಲೇ ಅಪರಾಧದ ಕ್ರೌರ್ಯ ಎಷ್ಟಿತ್ತು ಎಂಬುದನ್ನು ಊಹಿಸಬಹುದು. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ, ಕೊಲೆಯಾಗುವ ಮೊದಲು ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಸಾಧ್ಯತೆ ಹೆಚ್ಚಾಗಿದೆ. ನಂತರ ಕೊಲೆಗಾರ ಮೊಬೈಲ್ ಫೋನ್ ಚಾರ್ಜರ್ ವೈರ್​​ನಿಂದ ಆಕೆಯ ಕುತ್ತಿಗೆ ಹಿಸುಕಿ ಕೊಂದಿದ್ದಾನೆ.

ಪ್ರಾಥಮಿಕ ತನಿಖೆಯಲ್ಲಿ ರಾಜಸ್ಥಾನದ ನಿವಾಸಿ ರಾಹುಲ್ ಎಂಬ ಮಾಜಿ ಕೆಲಸದಾಳು ಮೇಲೆ ಶಂಕೆ ವ್ಯಕ್ತವಾಗಿದೆ. ಸುಮಾರು 2 ತಿಂಗಳ ಹಿಂದೆ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಪೊಲೀಸರು ತನಿಖೆ ಆರಂಭಿಸಿ ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಾಹುಲ್ ಬೆಳಿಗ್ಗೆ 6ರ ಸುಮಾರಿಗೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದ. ರಾಹುಲ್ 8 ತಿಂಗಳಿನಿಂದ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಸುಮಾರು 2 ತಿಂಗಳ ಹಿಂದೆ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು.

ಇದನ್ನೂ ಓದಿ: ಗಾಜಿಯಾಬಾದ್‌ನಲ್ಲಿ 4 ವರ್ಷದ ಮಗುವನ್ನು ಕೊಂದಿದ್ದ ಆರೋಪಿಯ ಎನ್​ಕೌಂಟರ್; ಶವ ಬೇಡವೆಂದ ಕುಟುಂಬಸ್ಥರು

ರಾಹುಲ್ ಗೃಹೋಪಯೋಗಿ ವಸ್ತುಗಳನ್ನು ಆರ್ಡರ್ ಮಾಡಲು ಬಳಸುವ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ ಕಾರಣಕ್ಕೆ ಆತನನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಪೊಲೀಸರ ಪ್ರಕಾರ, ಬೆಳಿಗ್ಗೆ 6.30ರಿಂದ 7.30ರ ನಡುವೆ ಈ ಕೊಲೆ ನಡೆದಿದೆ. ದಿನವೂ ಈ ಸಮಯದಲ್ಲಿ ಐಆರ್‌ಎಸ್ ಅಧಿಕಾರಿ ತನ್ನ ಹೆಂಡತಿಯೊಂದಿಗೆ ಜಿಮ್‌ಗೆ ಹೋಗುತ್ತಿದ್ದರು. ಆ ಸಮಯದಲ್ಲಿ ಅವರ ಮಗಳು ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಇದು ರಾಹುಲ್‌ಗೆ ತಿಳಿದಿತ್ತು. ಮನೆಗೆ ಕೆಲಸದವರು ಬರುವ ಸಮಯ ಕೂಡ ಆತನಿಗೆ ತಿಳಿದಿತ್ತು. ಹೀಗಾಗಿ, ಅವನು ಪ್ಲಾನ್ ಮಾಡಿಯೇ ಅದೇ ಸಮಯಕ್ಕೆ ಬಂದು ಕೊಲೆ ಮಾಡಿದ್ದಾನೆ ಎಂಬ ಅನುಮಾನ ಪೊಲೀಸರದ್ದು. ಆ ವ್ಯಕ್ತಿ ಮನೆಯಿಂದ ಏನನ್ನಾದರೂ ಕದ್ದು ಪರಾರಿಯಾಗಿದ್ದಾನೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಆತನಿಗಾಗಿ ಹುಡುಕಾಟ ಮುಂದುವರೆದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಆಗ್ನೇಯ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಆಗಮಿಸಿದವು. ಅತ್ಯಾಚಾರವನ್ನು ದೃಢೀಕರಿಸಲು ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮರ್ಮಾಂಗ ಚಿಕಿತ್ಸೆ ಮಾಡಿ ಅದನ್ನು ಸರಿಯಾಗಿ ಮುಚ್ಚಿಲ್ಲ: ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು? – Kannada News | Victoria Hospital Under Scrutiny: Superintendent Addresses Medical Negligence Allegations

ಬೆಂಗಳೂರು, ಏ.22: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಶಾ ನವಾಜ್ ಅವರ ಸಾವಿನ ಕುರಿತು ಕುಟುಂಬದವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ಮರ್ಮಾಂಗದಲ್ಲಿ ಕಾಣಿಸಿಕೊಂಡಿದ್ದ ಫೋರ್ನಿಯರ್ಸ್ ಗ್ಯಾಂಗ್ರೀನ್ ಸೋಂಕಿನಿಂದ ಬಳಲುತ್ತಿದ್ದ ಶಾ ನವಾಜ್ ಅವರನ್ನು ಸಮರ್ಪಕವಾಗಿ ಚಿಕಿತ್ಸೆ ನೀಡದೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್, ಶಾ ನವಾಜ್ ಫೆಬ್ರವರಿ 19 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಫೋರ್ನಿಯರ್ಸ್ ಗ್ಯಾಂಗ್ರೀನ್ ಗಾಯಗಳು ಪ್ಲಾಸ್ಟಿಕ್ ಸರ್ಜರಿಗೆ ಮೊದಲು ಸಂಪೂರ್ಣವಾಗಿ ಸೋಂಕು ಮುಕ್ತವಾಗಬೇಕು. ಇದರಿಂದ ಕೆಲವೊಮ್ಮೆ ರೋಗಿಗಳಿಗೆ ಮನೆಯಲ್ಲಿ ಡ್ರೆಸ್ಸಿಂಗ್ ಮಾಡಿಕೊಂಡು ನಿಯಮಿತ ತಪಾಸಣೆಗೆ ಬರುವಂತೆ ಸೂಚಿಸಲಾಗುತ್ತದೆ ಎಂದರು. ಕುಟುಂಬದವರು ಏಪ್ರಿಲ್ 15 ರಂದು ದೂರು ನೀಡಿದ ನಂತರ, ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ವೈದ್ಯಕೀಯ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ವರದಿ ಬಂದ ನಂತರವೇ ವೈದ್ಯಕೀಯ ನಿರ್ಲಕ್ಷ್ಯವಾಗಿದೆಯೇ ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ ಎಂದು ಡಾ. ದೀಪಕ್ ತಿಳಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vasthu Tips: ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ? ಲಕ್ಷ್ಮಿಯ ಕೃಪೆಗಾಗಿ ಈ ಸರಳ ವಾಸ್ತು ನಿಯಮ ಅನುಸರಿಸಿ – Kannada News | Vastu Tips for Wallet: Attract Wealth and Stop Money Loss with These Simple Purse Changes

ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ?Image Credit source: Pinterest

ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ, ಅನಗತ್ಯ ಖರ್ಚುಗಳು ಹೆಚ್ಚಾಗುತ್ತಿವೆ ಎಂಬುದು ಇಂದಿನ ಕಾಲದ ಅನೇಕರ ದೊಡ್ಡ ಸಮಸ್ಯೆ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಹಣ ಇಡುವ ಪರ್ಸ್ ಅಥವಾ ಕೈಚೀಲದಲ್ಲಿರುವ ‘ನಕಾರಾತ್ಮಕ ಶಕ್ತಿ’ ಇದಕ್ಕೆ ಮುಖ್ಯ ಕಾರಣವಾಗಿರಬಹುದು. ನಿಮ್ಮ ಪರ್ಸ್ ಅನ್ನು ಅದೃಷ್ಟದ ಕೇಂದ್ರವನ್ನಾಗಿ ಮಾಡಲು ಈ ಕೆಳಗಿನ ಸರಳ ಬದಲಾವಣೆಗಳನ್ನು ಮಾಡಿಕೊಳ್ಳಿ:

ಸಂಪತ್ತು ಹೆಚ್ಚಿಸಲು ಪರ್ಸ್‌ನಲ್ಲಿ ಇರಬೇಕಾದ ವಸ್ತುಗಳು:

ಅರಿಶಿನ ಮಿಶ್ರಿತ ಅಕ್ಕಿ:

ವಾಸ್ತು ಪ್ರಕಾರ ಅಕ್ಕಿ ಧಾನ್ಯಗಳು ಸಮೃದ್ಧಿಯನ್ನು ಪ್ರತಿನಿಧಿಸುತ್ತವೆ. ಕೆಲವು ಅಕ್ಕಿ ಕಾಳುಗಳಿಗೆ ಸ್ವಲ್ಪ ಅರಿಶಿನ ಹಚ್ಚಿ, ಅದನ್ನು ಒಂದು ಚಿಕ್ಕ ಕಾಗದದಲ್ಲಿ ಕಟ್ಟಿ ಪರ್ಸ್‌ನಲ್ಲಿ ಇರಿಸಿ. ಇದು ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ಆರ್ಥಿಕ ಸ್ಥಿರತೆಯನ್ನು ತರುತ್ತದೆ. (ಗಮನಿಸಿ: ಅಕ್ಕಿ ಕಾಳುಗಳು ಪುಡಿಯಾಗಿದ್ದರೆ ತಕ್ಷಣ ಬದಲಿಸಿ).

ಲಕ್ಷ್ಮಿ ದೇವಿಯ ಚಿತ್ರ:

ಹಣದ ದೇವತೆಯಾದ ಲಕ್ಷ್ಮಿ ದೇವಿಯ ಸಣ್ಣ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದು ಅತ್ಯಂತ ಶುಭ. ಇದು ಆದಾಯದ ಹೊಸ ಮೂಲಗಳನ್ನು ತೆರೆಯಲು ಸಹಾಯ ಮಾಡುತ್ತದೆ. ಆದರೆ, ಫೋಟೋ ಹಳೆಯದಾಗಿ ಅಥವಾ ಹರಿದು ಹೋಗಿದ್ದರೆ ಅದನ್ನು ತಕ್ಷಣವೇ ಗೌರವಯುತವಾಗಿ ಬದಲಾಯಿಸಿ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಹಸಿರು ಏಲಕ್ಕಿ:

ಏಲಕ್ಕಿಗಳು ಕೇವಲ ಸುವಾಸನೆಗೆ ಮಾತ್ರವಲ್ಲ, ಅವು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುವ ಶಕ್ತಿ ಹೊಂದಿವೆ. ಒಂದು ಅಥವಾ ಎರಡು ಹಸಿರು ಏಲಕ್ಕಿಗಳನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಬಾಕಿ ಇರುವ ಕೆಲಸಗಳು ಪೂರ್ಣಗೊಂಡು ಅದೃಷ್ಟ ಒಲಿಯುತ್ತದೆ.

ಇವುಗಳನ್ನು ನಿಮ್ಮ ಪರ್ಸ್‌ನಿಂದ ತಕ್ಷಣ ಹೊರಹಾಕಿ:

ಪರ್ಸ್ ಅನ್ನು ಎಂದಿಗೂ ಕಸದ ರಾಶಿಯಂತೆ ಬಳಸಬಾರದು. ಈ ವಸ್ತುಗಳು ಲಕ್ಷ್ಮಿ ದೇವಿಯ ಕೆಂಗಣ್ಣಿಗೆ ಕಾರಣವಾಗಬಹುದು. ಹೋಟೆಲ್ ಬಿಲ್‌ಗಳು ಅಥವಾ ಹಳೆಯ ಗ್ಯಾಸ್ ರಶೀದಿಗಳನ್ನು ಪರ್ಸ್‌ನಲ್ಲಿ ಇಡುವುದರಿಂದ ‘ರಾಹು ದೋಷ’ ಉಂಟಾಗಿ ಹಣದ ಹರಿವು ನಿಲ್ಲಬಹುದು. ಇದಲ್ಲದೇ ಹಳೆಯ ಮತ್ತು ಹರಿದ ನೋಟುಗಳನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದು ಬಡತನವನ್ನು ಆಹ್ವಾನಿಸಿದಂತೆ. ನೋಟುಗಳನ್ನು ಕಂಡ ಕಂಡಂತೆ ಮಡಚಿ ಇಡಬೇಡಿ. ಬದಲಾಗಿ, ಅವುಗಳನ್ನು ಕ್ರಮಬದ್ಧವಾಗಿ ಜೋಡಿಸಿ ಇಡುವುದು ಹಣದ ಮೇಲಿರುವ ನಿಮ್ಮ ಗೌರವವನ್ನು ತೋರಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:23 pm, Wed, 22 April 26

Source link

ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ: ಕೈಕಟ್ಟಿ ನಿಂತ ಅಧಿಕಾರಿಗಳು – Kannada News | Kanakagiri Protocol Violation: Minister Shivaraj Tangadagi Son Sits While Senior Officials Stand

ಕನಕಗಿರಿ ಉತ್ಸವದ ಪೂರ್ವಭಾವಿ ಸಭೆImage Credit source: tv9 kannada

ಕೊಪ್ಪಳ, ಏಪ್ರಿಲ್​​ 22: ಜಿಲ್ಲೆಯ ಕನಕಗಿರಿಯಲ್ಲಿ ಸರ್ಕಾರಿ ಶಿಷ್ಟಾಚಾರಕ್ಕೆ ಎಳ್ಳುನೀರು ಬಿಟ್ಟ ಘಟನೆಯೊಂದು ನಡೆದಿದೆ. ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿ (Shivaraj Tangadagi) ಪುತ್ರ ಶಶಾಂಕ್ ನಡೆಸಿದ ದರ್ಬಾರ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತದ ಈ ನಡೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಿನ್ನೆ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಸಚಿವ ಶಿವರಾಜ ತಂಗಡಗಿ ಅವರ ಪುತ್ರ ಶಶಾಂಕ್ ವೇದಿಕೆಯ ಮೇಲೆ ಕುಳಿತ್ತಿದ್ದರು, ಆದರೆ ಅದೇ ಸಭೆಯಲ್ಲಿ ಕ್ಷೇತ್ರದ ಜವಾಬ್ದಾರಿ ಹೊತ್ತಿರುವ ತಹಶೀಲ್ದಾರ್ ವಿಶ್ವನಾಥ್ ಮುರಡಿ ಮತ್ತು ತಾಲ್ಲೂಕು ಪಂಚಾಯತ್ ಇಓ ರಾಜಶೇಖರ್​ಗೆ ಕುಳಿತುಕೊಳ್ಳಲು ಕುರ್ಚಿಯೇ ಇರಲಿಲ್ಲ.

ಸಚಿವನ ಪುತ್ರನಿಗೆ ‘ರಾಜ ಮರ್ಯಾದೆ’: ನನ್ನ ಗಮನಕ್ಕೆ ಬಂದಿಲ್ಲ ಎಂದ ಡಿಸಿ

ಸರಕಾರಿ ಶಿಷ್ಟಾಚಾರದ ಪ್ರಕಾರ ಸರಕಾರಿ ಸಭೆಗಳಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಆದ್ಯತೆ ಇರಬೇಕು. ಆದರೆ ಇಲ್ಲಿ ಸಚಿವರ ಪುತ್ರನಿಗೆ ‘ರಾಜ ಮರ್ಯಾದೆ’ ನೀಡಿದ ಜಿಲ್ಲಾಡಳಿತ, ಹಿರಿಯ ಅಧಿಕಾರಿಗಳು ವೇದಿಕೆ ಮೇಲೆ ನಿಲ್ಲುವಂತೆ ಮಾಡಿದೆ. ಇನ್ನು ಸಚಿವ ಶಿವರಾಜ್ ತಂಗಡಗಿ ಪುತ್ರ ಕುತಿರುವುದು ನನ್ನ ಗಮನಕ್ಕೆ ಇಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ಸಚಿವರ ಮಗ ಎಂಬ ಒಂದೇ ಕಾರಣಕ್ಕೆ ಅಧಿಕಾರಿಗಳನ್ನು ಗೌರವವಿಲ್ಲದೆ ನಿಲ್ಲಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಚಿವರಿಗಿಂತ ಅವರ ಮಗನೇ ಪವರ್‌ಫುಲ್ ಆಗಿದ್ದಾರಾ ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವರ ಪುತ್ರನಿಗೆ ಏನು ಕೆಲಸ ಅನ್ನೋದು ಇದೀಗ ಹಲವು ಪ್ರಶ್ನೆಗಳನ್ನ ಹುಟ್ಟುಹಾಕಿದೆ. ಸರ್ಕಾರಿ ಅಧಿಕಾರಿಗಳೇ ತಾವು ನಿಂತ ಫೋಟೋಗಳನ್ನ ಸ್ಟೇಟಸ್ ಹಾಕೊಂಡಿದ್ದರು, ಅವರ ಪಕ್ಕದಲ್ಲಿಯೇ ಮಂತ್ರಿ ಮಗ ಕುರ್ಚಿಯಲ್ಲಿ ಕುಳಿತಿದ್ದಾನೆ, ಆದರೆ ಮೂವರು ಅಧಿಕಾರಿಗಳು ಮಾತ್ರ ಎದ್ದುನಿಂತಿದ್ದು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ.

ಮಗ ಮಾಡಿದ್ದು ತಪ್ಪು ಎಂದ ಸಚಿವ ಶಿವರಾಜ್​ ತಂಗಡಗಿ

ಇನ್ನು ಈ ವಿಚಾರವಾಗಿ ಖುದ್ದು ಸಚಿವ ಶಿವರಾಜ್​ ತಂಗಡಗಿ ಮಾತಾನಾಡಿದ್ದು, ಮಗ ಮಾಡಿದ್ದು ತಪ್ಪು. ಸರ್ಕಾರಿ ಕಾರ್ಯಕ್ರಮದ ಮೂಲೆಯಲ್ಲಿ ಕೂರಲು ಮಗನಿಗೆ ಅವಕಾಶವಿಲ್ಲ, ಅವನು ಅಲ್ಲಿ ಕೂತಿದ್ದೇ ತಪ್ಪು.  ಮಗ ಜನ ಪ್ರತಿನಿಧಿ ಅಲ್ಲ, ನಾನು ಜನ ಪ್ರತಿನಿಧಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: 50 ಎಕರೆ ಸವಾಲು ಹಾಕಿದ ಬಿಜೆಪಿ ಮಾಜಿ ಶಾಸಕರಿಗೆ ವಿಡಿಯೋ ಬಿಡ್ಲಾ ಎಂದ ಸಚಿವ ತಂಗಡಗಿ

ಒಟ್ಟಿನಲ್ಲಿ ಕನಕಗಿರಿಯಲ್ಲಿ ನಡೆದ ಈ ಘಟನೆ ಜಿಲ್ಲಾಡಳಿತದ ವೈಫಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಸಚಿವರ ಓಲೈಕೆಗೆ ಬಿದ್ದ ಅಧಿಕಾರಿಗಳು ತಮ್ಮ ಹುದ್ದೆಯ ಮರ್ಯಾದೆಯನ್ನು ಗಾಳಿಗೆ ತೂರಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಮಗನ ರಾಜಕೀಯ ಭವಿಷ್ಯ ರೂಪಿಸಲು ಸಚಿವರೇ ಮಗನನ್ನ ಕಾರ್ಯಕ್ರಮಕ್ಕೆ ಕರೆದುಕೊಂಡು ಬಂದರಾ ಎನ್ನುವ ಅನುಮಾನಗಳು ಶುರುವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RCB ವಿರುದ್ಧ ಹೀರೋ SRH ವಿರುದ್ಧ ಝೀರೋ! – Kannada News | David miller Bowled By Eshan Malinga

RCB ವಿರುದ್ಧ ಹೀರೋ SRH ವಿರುದ್ಧ ಝೀರೋ… ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಹೀರೋ ಎನಿಸಿಕೊಂಡಿದ್ದ ಡೇವಿಡ್ ಮಿಲ್ಲರ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಝೀರೋಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ.

ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಡೇವಿಡ್ ಮಿಲ್ಲರ್ (0) ಈಶಾನ್ ಮಲಿಂಗಾ ಎಸೆದ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು.

ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಇದೇ ಮಿಲ್ಲರ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರೋಚಕ ಜಯ ತಂದು ಕೊಟ್ಟಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 176 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ತಂಡಕ್ಕೆ ಕೊನೆಯ ಓವರ್‌ನಲ್ಲಿ 15 ರನ್ಗಳ ಅವಶ್ಯಕತೆಯಿತ್ತು.

ವೆಸ್ಟ್ ಇಂಡೀಸ್‌ನ ವೇಗಿ ರೊಮಾರಿಯೋ ಶೆಫರ್ಡ್ ಎಸೆದ ಕೊನೆಯ ಓವರ್‌ನ ಮೊದಲ ಎರಡು ಎಸೆತಗಳಲ್ಲಿ ಕೇವಲ 2 ರನ್ ಬಂದವು. ಆದರೆ ಬಳಿಕ ಡೇವಿಡ್ ಮಿಲ್ಲರ್  ಸತತವಾಗಿ 6, 6, 4 ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಥ್ರಿಲ್ಲರ್ ಗೆಲುವು ತಂದುಕೊಟ್ಟಿದ್ದರು.

ಇದೇ ಕಾರಣದಿಂದಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ ಅವರನ್ನು 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲಾಗಿತ್ತು. ಆದರೆ ಈ ಬಾರಿ ಗೋಲ್ಡನ್ ಡಕ್​ಗೆ ಔಟಾಗುವ ಮೂಲಕ ಮಿಲ್ಲರ್ ನಿರಾಸೆ ಮೂಡಿಸಿದ್ದಾರೆ.

 

Source link

ನನ್ನ ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ ಸರ್: ಕಣ್ಣೀರಿಟ್ಟ ಪತಿ – Kannada News | Gym trainer Nithish Reacts about Wife Escaped With Friend at Bengaluru

ಬೆಂಗಳೂರು, (ಏಪ್ರಿಲ್ 22): ಜಿಮ್ ಟ್ರೈನರ್‌ನನ್ನು  ಪ್ರೀತಿಸಿ ಮದುವೆಯಾಗಿ ಈಗ ಗಂಡನ ಸ್ನೇಹಿತನ ಜೊತೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಜಿಮ್ ಟ್ರೈನರ್ ನಿತೇಶ್ ಮತ್ತು ನವೀನ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಸ್ನೇಹಿತರಾಗಿದ್ದರು. ನಿತೇಶ್ ಯುವತಿಯೊಬ್ಬರನ್ನು ಪ್ರೀತಿಸಿ ಮದುವೆಯಾದ ಬಳಿಕ, ಸ್ನೇಹಿತ ನವೀನ್ ಅವರ ಮನೆಯಲ್ಲೇ ಬಾಡಿಗೆಗೆ ವಾಸವಿದ್ದರು. ಈ ವೇಳೆ ನವೀನ್ ತನ್ನ ಪತ್ನಿ ಮೇಲೆ ಕಣ್ಣು ಹಾಕಿರುವುದು ನಿತೇಶ್ ಗಮನಕ್ಕೆ ಬಂದಿತ್ತು. ನವೀನ್‌ನ ನಂಬರ್ ಅನ್ನು ಹುಡುಗಿಯ ಹೆಸರಿನಲ್ಲಿ ಸೇವ್ ಮಾಡಿಕೊಂಡು ಪತ್ನಿ ಚಾಟಿಂಗ್ ಮಾಡುತ್ತಿದ್ದಳು. ಈ ಬಗ್ಗೆ ಹಲವು ಬಾರಿ ಬುದ್ಧಿ ಮಾತು ಹೇಳಿದ್ದ ನಿತೇಶ್, ನಂತರ ಬನಶಂಕರಿಯ ಬೇರೊಂದು ಮನೆಗೆ ಶಿಫ್ಟ್ ಆಗಿದ್ದರು. ಆದ್ರೆ, ಇದೀಗ ನಿತೇಶ್ ಹೆಂಡತಿ ಸ್ನೇಹಿತ ನವೀನ್ ಜೊತೆ ಓಡಿ ಹೋಗಿದ್ದಾಳೆ. ಇದರಿಂದ ಪತಿ ನಿತೇಶ್ ಕಂಗಾಲಾಗಿದ್ದು, ಇತ್ತ ಅಣ್ಣನ ತರ ಅಂದಿದ್ಲು, ಈಗ ಅಣ್ಣನ ಜೊತೆಯೇ ಓಡಿ ಹೋಗಿದ್ದಾಳೆಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು

Source link

ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್ – Kannada News | Dhurandhar singer Jasmine Sandlas Ahmedabad concert water stunt and Lip Sync controversy

ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ (Jasmine Sandlas) ಸದ್ಯ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾದ ಹಾಡುಗಳ ಮೂಲಕ ಜಾಸ್ಮಿನ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಆದರೆ ಈ ಗಾಯಕಿಯ ಇತ್ತೀಚಿನ ಲೈವ್ ಕಾನ್ಸರ್ಟ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವೇದಿಕೆ ಮೇಲೆ ಲಿಪ್ ಸಿಂಕ್ (Lip Sync) ಮಾಡಿದ್ದು ಹಾಗೂ ಮೈ ಮೇಲೆ ನೀರು ಸುರಿದುಕೊಂಡಿದ್ದು ಟೀಕೆಗೆ ಕಾರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ.

ಏಪ್ರಿಲ್ 19ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಜಾಸ್ಮಿನ್ ಸ್ಯಾಂಡ್ಲಸ್ ಹಾಡು ಹೇಳುತ್ತಿದ್ದರು. ಲೆಹೆಂಗಾ ಧರಿಸಿ ಮಿಂಚುತ್ತಿದ್ದ ಅವರು, ತಮ್ಮ ಹಿಟ್ ಹಾಡು ‘ಶರಾರತ್’ ಹಾಡುತ್ತಿದ್ದಾಗ ಹಠಾತ್ತನೆ ಮೈಮೇಲೆ ನೀರು ಸುರಿದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ವೇದಿಕೆಯ ಮೇಲೆ ಹಾಡಿನ ಹುಕ್ ಸ್ಟೆಪ್ ಹಾಕುತ್ತಾ ಪ್ರೇಕ್ಷಕರನ್ನು ರಂಜಿಸಲು ಯತ್ನಿಸಿದರು. ಆದರೆ, ಅವರ ಈ ಓವರ್ ಆ್ಯಕ್ಟಿಂಗ್ ನೋಡಿ ಜನರಿಗೆ ಕಿರಿಕಿರಿ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಗಮನಿಸಿದರೆ ಒಂದು ಹಂತದಲ್ಲಿ ಜಾಸ್ಮಿನ್ ಸ್ಯಾಂಡ್ಲಸ್ ಅವರು ಮೈಕ್ ಕೆಳಗೆ ಇಳಿಸಿದರೂ ಹಿನ್ನೆಲೆಯಲ್ಲಿ ಹಾಡು ಪ್ಲೇ ಆಗುತ್ತಿರುವುದು ಕಂಡುಬಂದಿದೆ. ಇದು ಲಿಪ್ ಸಿಂಕ್ ಎಂಬುದು ಸ್ಪಷ್ಟವಾಗಿ ಗೊತ್ತಾಗಿದೆ. ಆದ್ದರಿಂದ ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ‘ಲೈವ್ ಕಾನ್ಸರ್ಟ್‌ನಲ್ಲೂ ಇವರು ಲೈವ್ ಆಗಿ ಹಾಡುವುದಿಲ್ಲ’ ಎಂದು ಟೀಕಿಸಲಾಗಿದೆ.

ಜಾಸ್ಮಿನ್ ಸ್ಯಾಂಡ್ಲಸ್ ವೈರಲ್ ವಿಡಿಯೋ:

‘ಇವರನ್ನು ಹಾಡಲು ಕರೆಸಿದ್ದಾರೋ ಅಥವಾ ನಟನೆ ಮಾಡಲು ಕರೆಸಿದ್ದಾರೋ’ ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ. ‘ಕೇವಲ ಎರಡು ಹಾಡುಗಳು ಹಿಟ್ ಆದ ಕೂಡಲೇ ಇವರ ಅತಿರೇಕದ ವರ್ತನೆ ಜಾಸ್ತಿಯಾಗಿದೆ’ ಎಂಬ ಟೀಕೆ ಕೂಡ ಬಂದಿದೆ. ಇಷ್ಟೆಲ್ಲ ಟೀಕೆಗಳ ನಡುವೆಯೂ ಜಾಸ್ಮಿನ್ ಸ್ಯಾಂಡ್ಲಸ್ ಅವರ ಅಪ್ಪಟ ಅಭಿಮಾನಿಗಳು ಅವರ ಪರವಾಗಿಯೇ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ತಯಾರಾಗಿದ್ದು ಹೇಗೆ ಗೊತ್ತಾ? ಚಿತ್ರಮಂದಿರದಲ್ಲೇ ನೋಡಿ ಮೇಕಿಂಗ್ ವಿಡಿಯೋ

ಸೂಪರ್ ಹಿಟ್ ಆಗಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾದ ಒಟ್ಟು ಐದು ಹಾಡುಗಳಿಗೆ ಜಾಸ್​ಮಿನ್ ಸ್ಯಾಂಡ್ಲಸ್ ಧ್ವನಿಯಾಗಿದ್ದಾರೆ. ‘ಶರಾರತ್’, ‘ಮೈ ಔರ್ ತೂ’, ‘ಆರಿ ಆರಿ’ ಮತ್ತು ‘ಜೈಯೇ ಸಜನಾ’ ಹಾಡುಗಳು ಈಗಾಗಲೇ ಭಾರಿ ಫೇಮಸ್ ಆಗಿವೆ. ಈ ಹಾಡುಗಳ ಮೂಲಕ ಜಾಸ್ಮಿನ್ ಸ್ಯಾಂಡ್ಲಸ್ ಅವರಿಗೆ ಸಖತ್ ಜನಪ್ರಿಯತೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link