nagaraj11081993

ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ ವಂಚನೆ: ಹೆಚ್ಚಿನ‌‌ ಲಾಭದ ಆಸೆಗೆ ಮೋಸ ಹೋದ ವ್ಯಕ್ತಿ

ಚಿಕ್ಕಮಗಳೂರು, ಮಾರ್ಚ್​ 29: ಜಗತ್ತಿನಲ್ಲಿ ಮೋಸ ಹೋಗುವವರು ಇರುವವರೆಗೆ ಮೋಸ (Fraud)  ಮಾಡುವವರು  ಇರುತ್ತಾರೆ ಎಂಬ ಮಾತಿಗೆ ಈ ಸ್ಟೋರಿ ಒಂದು ಉದಾಹರಣೆ ಎನ್ನಬಹುದು. ಫೇಸ್​ಬುಕ್ ಜಾಹೀರಾತು ನಂಬಿ ಓರ್ವ ವ್ಯಕ್ತಿ ಬರೋಬ್ಬರಿ 1.28 ಕೋಟಿ ರೂ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಚಿಕ್ಕಮಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ…

Read More

ಬಿಡುಗಡೆಗೆ ಸಜ್ಜಾಗಿದೆ ರಾಯರ ಕುರಿತ ಹೊಸ ಕನ್ನಡ ಸಿನಿಮಾ ‘ಅಮಲಾಮೃತ’

ರಾಘವೇಂದ್ರ ಸ್ವಾಮಿಗಳ ಕುರಿತಾದ ಭಕ್ತಿ ಪ್ರಧಾನ ಕಥೆ ಹೊಂದಿರುವ ‘ಅಮಲಾಮೃತ’ (Amalamrutha) ಸಿನಿಮಾದ ಎಲ್ಲ ಕೆಲಸಗಳು ಮುಗಿದಿವೆ. ‘ಸಿರಿ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ಸಿದ್ಧವಾಗಿದೆ. ಮೈಸೂರು ಮೂಲದ ಗುರುರಾಜ ರಾವ್ ಎಂ.ಎಸ್. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೇ ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಯತಿಗಳು, ಸರ್ಕಾರಿ ಅಧಿಕಾರಿಗಳಿಗೆ ಈ ಸಿನಿಮಾ ವೀಕ್ಷಿಸಿದರು. ಸಿನಿಮಾ ನೋಡಿದ ಜನರ ಪ್ರತಿಕ್ರಿಯೆ ಕಂಡು ಚಿತ್ರತಂಡಕ್ಕೆ ಖುಷಿ ಆಗಿದೆ. ಕೆ.ಎಸ್. ಗೋವಿಂದರಾಮ…

Read More

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಬುಲಂದ್​ಶಹರ್, ಮಾರ್ಚ್​ 29: ಮಗಳು ಚಾಕೊಲೇಟರ್ ಕದ್ದಿರಬಹುದು ಎನ್ನುವ ಸಂಶಯದಲ್ಲಿ ತಂದೆಯೊಬ್ಬ ಆಕೆಗೆ ದೊಣ್ಣೆಯಿಂದ ಹೊಡೆದು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​​ನಲ್ಲಿ ನಡೆದಿದೆ. ನರೋರಾದ ರತನ್‌ಪುರ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಪೂಜಾ ತನ್ನ ಹಣ ನೀಡದೆ ಚಾಕೊಲೇಟ್ ಪ್ಯಾಕೆಟ್ ತೆಗೆದುಕೊಂಡಿದ್ದಾಳೆ ಎಂದು ಅಂಗಡಿಯವ ಹೇಳಿದ ನಂತರ ಆಕೆಯ ಮೇಲೆ ತಂದೆ ಪುಷ್ಪೇಂದ್ರಗೆ ಕೋಪ ಬಂದಿತ್ತು. ಆರೋಪದಿಂದ ಕೋಪಗೊಂಡ ಆರೋಪಿಗೆ ಮದ್ಯದ ಚಟ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಮನೆಗೆ…

Read More

ನಟನಿಂದ ಮೋಸ: ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ

ನಟರಿಗಾಗಿ ಪ್ರಾಣ ಕೊಡಲು ತಯಾರು ಎನ್ನುವ ಅಭಿಮಾನಿಗಳು ಇರುತ್ತಾರೆ. ಇಲ್ಲೊಬ್ಬ ಯುವಕ, ನಟನಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ, ಪೂತಲಪಟ್ಟು ಎಂಬಂಲ್ಲಿ. ಪೂತಲಪಟ್ಟು ಬಳಿಯ ಶೇಷಾಪುರಂನ ಲೋಕೇಶ್ ಎಂಬ ಯುವಕ ಆತ್ಮಹತ್ಯೆಗೆ ಯತ್ನಿದ್ದು ‘ಜೆಟ್ಟಿ’ ಸಿನಿಮಾ ಖ್ಯಾತಿಯ ನಟ ಮಾನ್ಯಂ ಮುರಳಿ ಕೃಷ್ಣ ತನ್ನ ಈ ಸ್ಥಿತಿಗೆ ಕಾರಣ ಎಂದು ಲೋಕೇಶ್ ಬರೆದಿರುವ ಡೆತ್ ನೋಟ್ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಚಿತ್ತೂರು…

Read More

ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ

ಮಂಡ್ಯ, (ಮಾರ್ಚ್​​ 29): ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು…

Read More

ಹೊಸ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಎಂಟ್ರಿ

ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ (R. Ashwin) ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಐಪಿಎಲ್​ನಿಂದ ನಿವೃತ್ತಿ ಘೋಷಿಸಿರುವ ಅವರು ಮುಂಬರುವ ಮೇಜರ್ ಲೀಗ್  ಕ್ರಿಕೆಟ್ (MLC) ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಅಮೆರಿಕ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ಈಗಾಗಲೇ ಮೂರು ಸೀಸನ್​ ಮುಗಿಸಿರುವ ಎಂಎಲ್​ಸಿಯ ನಾಲ್ಕನೇ ಆವೃತ್ತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯಲು ಅಶ್ವಿನ್ ಒಪ್ಪಂದ ಮಾಡಿಕೊಂಡಿದ್ದಾರೆ. ಇದರೊಂದಿಗೆ …

Read More

ಮಾರ್ಚ್ ತಿಂಗಳಲ್ಲಿ 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು; ಇದು ಹೊಸ ಮಾಸಿಕ ದಾಖಲೆ

ನವದೆಹಲಿ, ಮಾರ್ಚ್ 29: ಭಾರತದ ಈಕ್ವಿಟಿಗಳಿಂದ ಮಾರ್ಚ್ ತಿಂಗಳಲ್ಲಿ 12.3 ಬಿಲಿಯನ್ ಡಾಲರ್​ನಷ್ಟು ಎಫ್​ಪಿಐಗಳ ಹೂಡಿಕೆಗಳು ಹೊರಹೋಗಿವೆ. ಅಂದರೆ, ಮಾರ್ಚ್​ನಲ್ಲಿ ಈವರೆಗೂ (27, ಶುಕ್ರವಾರ) 1.14 ಲಕ್ಷ ಕೋಟಿ ರೂ ಈಕ್ವಿಟಿಗಳನ್ನು ವಿದೇಶೀ ಹೂಡಿಕೆದಾರರು ಮಾರಿದ್ದಾರೆ. ಇನ್ನೂ ಎರಡು ಟ್ರೇಡಿಂಗ್ ಸೆಷನ್​ಗಳು ಉಳಿದಿದ್ದು, ಮತ್ತಷ್ಟು ಸಾವಿರಾರು ಕೋಟಿ ರೂ ಎಫ್​ಪಿಐಗಳ (FPI- Foreign Portfolio Investors) ಹೊರಹರಿವು ಆಗುವ ನಿರೀಕ್ಷೆ ಇದೆ. ಯಾವುದೇ ಒಂದು ತಿಂಗಳಲ್ಲಿ ಇಷ್ಟು ಮೊತ್ತದ ವಿದೇಶೀ ಹೂಡಿಕೆಗಳ ಹೊರಹರಿವು ಕಂಡಿದ್ದು ಇದೇ ಮೊದಲು….

Read More

Job Opportunities: 10ನೇ ತರಗತಿ ಪಾಸಾದ ಯುವಕ/ಯುವತಿಯರಿಗೆ ಗುಡ್​ನ್ಯೂಸ್​; ಇಲ್ಲಿದೆ ಉದ್ಯೋಗವಕಾಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಒಂದು ಮಹತ್ವದ ಉದ್ಯೋಗಾವಕಾಶ ಲಭಿಸಿದೆ. ಖ್ಯಾತ ಸಂಸ್ಥೆಯಾದ “ಸ್ವಿಗ್ಗಿ ಇನ್‌ಸ್ಟಾ ಮಾರ್ಟ್” (Swiggy Insta Mart) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪಿಕರ್, ಪ್ಯಾಕರ್ ಮತ್ತು ಲೋಡಿಂಗ್ ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ…

Read More

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕ್ಲಾಸೆನ್ ಪಂದ್ಯದ 14ನೇ ಓವರ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು. ರೊಮೊರಿಯೊ ಶೆಫರ್ಡ್ ಎಸೆದ 14ನೇ ಓವರ್​ನ ಮೊದಲ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ…

Read More

ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ

ಬೆಂಗಳೂರು, ಮಾರ್ಚ್​ 29: ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು,…

Read More