All posts by nagaraj11081993

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಬುಲಂದ್​ಶಹರ್, ಮಾರ್ಚ್​ 29: ಮಗಳು ಚಾಕೊಲೇಟರ್ ಕದ್ದಿರಬಹುದು ಎನ್ನುವ ಸಂಶಯದಲ್ಲಿ ತಂದೆಯೊಬ್ಬ ಆಕೆಗೆ ದೊಣ್ಣೆಯಿಂದ ಹೊಡೆದು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​​ನಲ್ಲಿ ನಡೆದಿದೆ. ನರೋರಾದ ರತನ್‌ಪುರ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಪೂಜಾ ತನ್ನ ಹಣ ನೀಡದೆ ಚಾಕೊಲೇಟ್ ಪ್ಯಾಕೆಟ್ ತೆಗೆದುಕೊಂಡಿದ್ದಾಳೆ ಎಂದು ಅಂಗಡಿಯವ ಹೇಳಿದ ನಂತರ ಆಕೆಯ ಮೇಲೆ ತಂದೆ ಪುಷ್ಪೇಂದ್ರಗೆ ಕೋಪ ಬಂದಿತ್ತು.

ಆರೋಪದಿಂದ ಕೋಪಗೊಂಡ ಆರೋಪಿಗೆ ಮದ್ಯದ ಚಟ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಮನೆಗೆ ಹಿಂತಿರುಗಿದ ಬಳಿಕ ತನ್ನ ಮಗಳಿಗೆ ಮರದ ಕೋಲಿನಿಂದ ಹೊಡೆಯಲು ಶುರು ಮಾಡಿದ್ದ. ಹುಡುಗಿಯ ತಾಯಿ ಆರತಿ ನೀಡಿದ ದೂರಿನ ಪ್ರಕಾರ, ತಾನು ಪದೇ ಪದೇ ಮಧ್ಯಪ್ರವೇಶಿಸಲು ಪ್ರಯತ್ನಿಸಿದರೂ ಆಕೆಗೆ ಹೊಡೆಯುವುದನ್ನು ಬಿಡಲೇ ಇಲ್ಲ.

ತಂದೆ ಕ್ರೂರವಾಗಿ ಆಕೆಗೆ ಥಳಿಸಿದಾಗ ಪೂಜಾಳ ತಲೆಗೆ ಗಂಭೀರವಾದ ಗಾಯವಾಗಿದ್ದು, ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಸಹಾಯ ಮಾಡುವ ಬದಲು, ತಂದೆ ಆಕೆಯನ್ನು ಗಂಭೀರ ಸ್ಥಿತಿಯಲ್ಲಿ ಮನೆಯೊಳಗೆ ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದ, ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಕೂಗಾಟದ ನಂತರ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.

ಮತ್ತಷ್ಟು ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ದೇಹದ ಮೇಲೆ ತಲೆ ಮುರಿದಿರುವುದು ಸೇರಿದಂತೆ ಸುಮಾರು 10 ರಿಂದ 12 ಗಾಯಗಳ ಗುರುತುಗಳು ಕಂಡುಬಂದಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದು, ಪ್ರಸ್ತುತ ಆತ ಪರಾರಿಯಾಗಿದ್ದಾನೆ. ಕೆಲವು ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇಂಥದ್ದೇ ಘಟನೆ ನಡೆದಿತ್ತು.

ಕಳ್ಳತನದ ಅನುಮಾನದ ಮೇಲೆ ತಂದೆಯೊಬ್ಬರು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಹಿಂಸಿಸಿದ್ದರು , ಘಟನೆಯಲ್ಲಿ ಒಬ್ಬಳು ಮಗಳು ಪ್ರಾಣ ಕಳೆದುಕೊಂಡಿದ್ದಾರೆ.ದಾದು ಹೈಬತ್ ಯಮ್ಗರ್ ಎಂದು ಗುರುತಿಸಲಾದ ಆರೋಪಿ, 10 ವರ್ಷದ ಸಾನಿಕಾ ಮತ್ತು 11 ವರ್ಷದ ಅನುಜಾ ಅವರನ್ನು ಕಟ್ಟಿಹಾಕಿ ಅವರ ಮನೆಯೊಳಗೆ ತಲೆಕೆಳಗಾಗಿ ನೇತುಹಾಕಿದ್ದ ಎಂದು ತಿಳಿದುಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ನಟನಿಂದ ಮೋಸ: ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ

ನಟರಿಗಾಗಿ ಪ್ರಾಣ ಕೊಡಲು ತಯಾರು ಎನ್ನುವ ಅಭಿಮಾನಿಗಳು ಇರುತ್ತಾರೆ. ಇಲ್ಲೊಬ್ಬ ಯುವಕ, ನಟನಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ, ಪೂತಲಪಟ್ಟು ಎಂಬಂಲ್ಲಿ. ಪೂತಲಪಟ್ಟು ಬಳಿಯ ಶೇಷಾಪುರಂನ ಲೋಕೇಶ್ ಎಂಬ ಯುವಕ ಆತ್ಮಹತ್ಯೆಗೆ ಯತ್ನಿದ್ದು ‘ಜೆಟ್ಟಿ’ ಸಿನಿಮಾ ಖ್ಯಾತಿಯ ನಟ ಮಾನ್ಯಂ ಮುರಳಿ ಕೃಷ್ಣ ತನ್ನ ಈ ಸ್ಥಿತಿಗೆ ಕಾರಣ ಎಂದು ಲೋಕೇಶ್ ಬರೆದಿರುವ ಡೆತ್ ನೋಟ್ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ.

ಚಿತ್ತೂರು ಜಿಲ್ಲೆಯ ಶೇಷಾಪುರಂ ಗ್ರಾಮದ ಲೋಕೇಶ್ ಎಂಬ ಯುವಕ, ನಟ ಮಾನ್ಯಂ ಮುರಳಿ ಕೃಷ್ಣ ತನಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ರೈಲ್ವೇ ಕಾಂಟ್ರಾಕ್ಟ್ ಕೊಡಿಸುವುದಾಗಿ ನಂಬಿಸಿ ತನ್ನ ಸಂಬಂಧಿಕರು ಮತ್ತು ಸ್ನೇಹಿತರ ಮೂಲಕ ಸುಮಾರು 3.15 ಕೋಟಿ ರೂಪಾಯಿಗಳನ್ನು ನಟನಿಗೆ ಕೊಡಿಸಿದ್ದಾಗಿ ಲೋಕೇಶ್ ತಿಳಿಸಿದ್ದಾರೆ. ಈಗ ಆ ಹಣವನ್ನು ವಾಪಸ್ ಕೇಳಿದರೆ ನಟ ಕಿರುಕುಳ ನೀಡುತ್ತಿದ್ದಾರೆ ಎಂದು ಮನನೊಂದು ಲೋಕೇಶ್ ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ:ಟಾಲಿವುಡ್​​ಗೂ ಮಾದರಿ ಆಯ್ತು ವಿಜಯಲಕ್ಷ್ಮೀ, ರಮ್ಯಾ ನಿರ್ಧಾರ

ಅಪ್ರಜ್ಞಾವಸ್ಥೆಯಲ್ಲಿದ್ದ ಲೋಕೇಶ್ ಅವರನ್ನು ಚಿತ್ತೂರಿನ ಬಂಗಾರುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಲೋಕೇಶ್ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯ ಇಲ್ಲವೆಂದು ಹೇಳಲಾಗುತ್ತಿದೆ.

ಲೋಕೇಶ್ ಬರೆದಿರುವ ಆತ್ಮಹತ್ಯೆ ಪತ್ರ ಇದೀಗ ವೈರಲ್ ಆಗುತ್ತಿದೆ, ‘ನನಗೆ ಇಂತಹ ಪರಿಸ್ಥಿತಿ ಬರುತ್ತದೆ ಎಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ನನ್ನ ಪೋಷಕರು ಮತ್ತು ಹೆಂಡತಿ ಮಕ್ಕಳನ್ನು ಬೀದಿಗೆ ತಂದಿದ್ದೇನೆ. ಸಾಲಗಾರನಾಗಿ ತಲೆ ಎತ್ತಿ ಬದುಕಲು ಸಾಧ್ಯವಾಗುತ್ತಿಲ್ಲ. ನನ್ನ ಸಾವಿಗೆ ನಟ ಮಾನ್ಯಂ ಮುರಳಿ ಕೃಷ್ಣನೇ ಕಾರಣ. ರೈಲ್ವೇ ಕಾಂಟ್ರಾಕ್ಟ್ ಕೊಡಿಸುತ್ತೇನೆ ಎಂದು ಹೇಳಿ 3.15 ಕೋಟಿ ರೂಪಾಯಿ ಹಣ ಪಡೆದು ಮೋಸ ಮಾಡಿದ್ದಾನೆ. ಇದರಲ್ಲಿ ನನ್ನ ಅಣ್ಣ-ತಮ್ಮಂದಿರ ಮತ್ತು ಸಂಬಂಧಿಕರ ಹಣವೂ ಇದೆ. ಮುರಳಿ ಕೃಷ್ಣ ಮತ್ತು ಆತನ ತಮ್ಮ ಸೇರಿ ನಮ್ಮನ್ನು ವಂಚಿಸಿದ್ದಾರೆ. ಹಣ ಕೇಳಿದರೆ ಕೊಡುತ್ತಿಲ್ಲ. ಅಸಹಾಯಕನಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಿ’ ಎಂದು ಬರೆದಿದ್ದಾರೆ.

ಸದ್ಯ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ನಟ ಮಾನ್ಯ ಮುರಳಿ ಕೃಷ್ಣಗೂ ನೊಟೀಸ್ ನೀಡುವ ಸಾಧ್ಯತೆ ಇದೆ. ಮಾನ್ಯ ಮುರಳಿ ಕೃಷ್ಣ ‘ಜೆಟ್ಟಿ’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ, ಎಡಿಟರ್, ಸಹಾಯಕ ಎಡಿಟರ್ ಆಗಿ ಕೆಲಸ ಮಾಡಿದ್ದಾರೆ. ಇದೀಗ ವಂಚನೆ ಪ್ರಕರಣದಲ್ಲಿ ಆರೋಪಿ ಆಗಿದ್ದಾರೆ.

ಸಹಾಯವಾಣಿ

ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ನಿಮಗೆ ಅಥವಾ ನಿಮ್ಮ ಪರಿಚಯದವರಿಗೆ ಮಾನಸಿಕ ಒತ್ತಡ, ಖಿನ್ನತೆ ಅಥವಾ ಆತ್ಮಹತ್ಯೆಯ ಆಲೋಚನೆಗಳಿದ್ದರೆ, ದಯವಿಟ್ಟು ತಕ್ಷಣವೇ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ. ಪರಿಣಿತರು ನಿಮಗೆ ಉಚಿತವಾಗಿ ಮತ್ತು ಗೌಪ್ಯವಾಗಿ ಸಮಾಲೋಚನೆ ನೀಡುತ್ತಾರೆ.

Tele MANAS (ಸರ್ಕಾರಿ ಸಹಾಯವಾಣಿ): 14416 ಅಥವಾ 1800-891-4416 (24×7 ಲಭ್ಯ)

KIRAN (ಕೇಂದ್ರ ಸರ್ಕಾರ): 1800-599-0019

ಆಸ್ರಾ (AASRA): 9820466728

ಸಹಾಯ್ (SAHAI): 080-25497777

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ

ಮಂಡ್ಯ, (ಮಾರ್ಚ್​​ 29): ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ಇನ್ನು ಅತ್ಯಾಚಾರ ಪ್ರಕಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ತಂದೆ ಎಚ್​​ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣ ಹಾಗೂ ಪುತ್ರ ಸೂರಜ್ ವೈರಮುಡಿ ಬ್ರಹ್ಮೋತ್ಸವದಲ್ಲಿ ಪ್ರಜ್ವಲ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಈ ಮೂಲಕ ಆದಷ್ಟು ಬೇಗ ಜೈಲಿನಿಂದ ಆಚೆ ಬರಲಿ ಎಂದು ಬೇಡಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ.

Source link

ಹೊಸ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಎಂಟ್ರಿ

Source link

ಮಾರ್ಚ್ ತಿಂಗಳಲ್ಲಿ 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು; ಇದು ಹೊಸ ಮಾಸಿಕ ದಾಖಲೆ

ನವದೆಹಲಿ, ಮಾರ್ಚ್ 29: ಭಾರತದ ಈಕ್ವಿಟಿಗಳಿಂದ ಮಾರ್ಚ್ ತಿಂಗಳಲ್ಲಿ 12.3 ಬಿಲಿಯನ್ ಡಾಲರ್​ನಷ್ಟು ಎಫ್​ಪಿಐಗಳ ಹೂಡಿಕೆಗಳು ಹೊರಹೋಗಿವೆ. ಅಂದರೆ, ಮಾರ್ಚ್​ನಲ್ಲಿ ಈವರೆಗೂ (27, ಶುಕ್ರವಾರ) 1.14 ಲಕ್ಷ ಕೋಟಿ ರೂ ಈಕ್ವಿಟಿಗಳನ್ನು ವಿದೇಶೀ ಹೂಡಿಕೆದಾರರು ಮಾರಿದ್ದಾರೆ. ಇನ್ನೂ ಎರಡು ಟ್ರೇಡಿಂಗ್ ಸೆಷನ್​ಗಳು ಉಳಿದಿದ್ದು, ಮತ್ತಷ್ಟು ಸಾವಿರಾರು ಕೋಟಿ ರೂ ಎಫ್​ಪಿಐಗಳ (FPI- Foreign Portfolio Investors) ಹೊರಹರಿವು ಆಗುವ ನಿರೀಕ್ಷೆ ಇದೆ.

ಯಾವುದೇ ಒಂದು ತಿಂಗಳಲ್ಲಿ ಇಷ್ಟು ಮೊತ್ತದ ವಿದೇಶೀ ಹೂಡಿಕೆಗಳ ಹೊರಹರಿವು ಕಂಡಿದ್ದು ಇದೇ ಮೊದಲು. 2024ರ ಅಕ್ಟೋಬರ್ ತಿಂಗಳಲ್ಲಿ 94,017 ಕೋಟಿ ರೂ ಮೊತ್ತದಷ್ಟು ವಿದೇಶೀ ಹೂಡಿಕೆಗಳು ಹೊರಹೋಗಿದ್ದವು. ಅದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಮಾರ್ಚ್ ತಿಂಗಳಲ್ಲಿ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ ಹೊರಹರಿವಿನ ಮೈಲಿಗಲ್ಲು ಸೃಷ್ಟಿಯಾಗಿದೆ.

ಇದನ್ನೂ ಓದಿ: ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು

ಮಾರ್ಚ್ ತಿಂಗಳಲ್ಲಿ ಎಫ್​ಪಿಐಗಳು ಸತತವಾಗಿ ಹೂಡಿಕೆಗಳನ್ನು ಹಿಂಪಡೆಯುತ್ತಿದ್ದ ಟ್ರೆಂಡ್ ಇತ್ತು. ಈಕ್ವಿಟಿ ಕ್ಯಾಷ್ ಮಾರ್ಕೆಟ್​ನಲ್ಲಿ ಮಾರ್ಚ್ 27ರವರೆಗೆ ವಿದೇಶೀ ಪೋರ್ಟ್​ಫೋಲಿಯೋ ಹೂಡಿಕೆದಾರರು ಮಾರಿದ ಈಕ್ವಿಟಿಗಳ ಮೌಲ್ಯ 1,13,380 ಕೋಟಿ ರೂ ಎನ್ನಲಾಗಿದೆ.

2026ರಲ್ಲಿ, ಅಂದರೆ ಜನವರಿಯಿಂದ ಈಚೆಗೆ ಎಫ್​ಪಿಐಗಳಿಂದ ಆಗಿರುವ ಹೂಡಿಕೆ ನಿರ್ಗಮನ ಒಟ್ಟು 1.27 ಲಕ್ಷ ಕೋಟಿ ರೂ. ಇದರಲ್ಲಿ ಮಾರ್ಚ್ ತಿಂಗಳದ್ದೇ ಸಿಂಹಪಾಲು. ಫೆಬ್ರುವರಿ ತಿಂಗಳಲ್ಲಿ ವಿಭಿನ್ನ ಟ್ರೆಂಡ್ ಇತ್ತು. ಎಫ್​ಪಿಐಗಳು 22,615 ಕೋಟಿ ರೂನಷ್ಟು ಮೊತ್ತದ ಭಾರತೀಯ ಈಕ್ವಿಟಿಗಳನ್ನು ಖರೀದಿ ಮಾಡಿದ್ದವು. ಕಳೆದ 17 ತಿಂಗಳಲ್ಲೇ ಅತಿಹೆಚ್ಚು ಮಾಸಿಕ ಒಳಹರಿವು ಅದಾಗಿತ್ತು.

ಇದನ್ನೂ ಓದಿ: ರಷ್ಯನ್ ಎಲ್​ಎನ್​ಜಿಯನ್ನು ಖರೀದಿಸಲಿರುವ ಭಾರತ; ಎಲ್​ಪಿಜಿ, ಪಿಎನ್​ಜಿ, ಎಲ್​ಎನ್​ಜಿಗಿರುವ ವ್ಯತ್ಯಾಸಗಳೇನು?

ಇರಾನ್ ಯುದ್ಧದ ಪರಿಣಾಮವು ಮಾರ್ಚ್ ತಿಂಗಳಲ್ಲಿ ಈಕ್ವಿಟಿ ಮಾರುಕಟ್ಟೆ ಮೇಲೆ ತೀವ್ರವಾಗಿ ಬಿದ್ದಿದೆ. ಹಾಗೆಯೇ, ಕಳೆದ 18 ತಿಂಗಳಲ್ಲಿ ಭಾರತದ ಈಕ್ವಿಟಿ ಮಾರುಕಟ್ಟೆಯ ಸಾಧನೆಯು ಇತರ ದೇಶಗಳ ಮಾರುಕಟ್ಟೆಗೆ ಹೋಲಿಸಿದರೆ ದುರ್ಬಲ ಸಾಧನೆ ತೋರಿದೆ. ಹೀಗಾಗಿ, ಎಫ್​ಪಿಐಗಳು ಭಾರತದ ಈಕ್ವಿಟಿಗಳಲ್ಲಿ ಹೂಡಿಕೆ ಕಡಿಮೆ ಮಾಡಿರಬಹುದು. ಇದರ ಜೊತೆಗೆ, ಅಮೆರಿಕದ ಬಾಂಡ್ ಯೀಲ್ಡ್ ಹೆಚ್ಚಿರುವುದು ಮತ್ತು ಜಾಗತಿಕವಾಗಿ ಹಣಕಾಸು ಸ್ಥಿತಿ ಸಂಕುಚಿತಗೊಂಡಿರುವುದು ಕೂಡ ಎಫ್​ಪಿಐಗಳ ಹೊರಹರಿವಿಗೆ ಕಾರಣವಾಗಿರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Job Opportunities: 10ನೇ ತರಗತಿ ಪಾಸಾದ ಯುವಕ/ಯುವತಿಯರಿಗೆ ಗುಡ್​ನ್ಯೂಸ್​; ಇಲ್ಲಿದೆ ಉದ್ಯೋಗವಕಾಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಒಂದು ಮಹತ್ವದ ಉದ್ಯೋಗಾವಕಾಶ ಲಭಿಸಿದೆ. ಖ್ಯಾತ ಸಂಸ್ಥೆಯಾದ “ಸ್ವಿಗ್ಗಿ ಇನ್‌ಸ್ಟಾ ಮಾರ್ಟ್” (Swiggy Insta Mart) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ.

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪಿಕರ್, ಪ್ಯಾಕರ್ ಮತ್ತು ಲೋಡಿಂಗ್ ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷದೊಳಗಿರಬೇಕು. ವಿಶೇಷವೆಂದರೆ, ಅಭ್ಯರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪಾರ್ಟ್ ಟೈಮ್ ಅಥವಾ ಫುಲ್ ಟೈಮ್ ಕೆಲಸದ ಆಯ್ಕೆಯನ್ನು ಮಾಡಿಕೊಳ್ಳಬಹುದು.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನೇರ ಸಂದರ್ಶನ ನಡೆಯುವ ಸ್ಥಳ:

ನೇರ ಸಂದರ್ಶನವು ಏಪ್ರಿಲ್ 02 ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ. ಆಸಕ್ತರು ಮಂಗಳೂರಿನ ಪಾಂಡೇಶ್ವರದಲ್ಲಿರುವ ಪಿಜ್ಜಾ ಮಾಲ್ ಎದುರಿನ, ಅಲ್ಬುಕರ್ಕ್ ಹೌಸ್‌ನ ಆದಾಯ ತೆರಿಗೆ ಕಚೇರಿ ಕಟ್ಟಡದಲ್ಲಿರುವ “ಸ್ವಿಗ್ಗಿ ಇನ್‌ಸ್ಟಾ ಮಾರ್ಟ್” ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಈ ಸಂದರ್ಶನ ಪ್ರಕ್ರಿಯೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ 83107 71171 ಸಂಖ್ಯೆಯನ್ನು ಸಂಪರ್ಕಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕ್ಲಾಸೆನ್ ಪಂದ್ಯದ 14ನೇ ಓವರ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು.

ರೊಮೊರಿಯೊ ಶೆಫರ್ಡ್ ಎಸೆದ 14ನೇ ಓವರ್​ನ ಮೊದಲ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ ಹೊಡೆತ ಬಾರಿಸಿದ್ದರು. ಚೆಂಡು ಇನ್ನೇನು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ಫಿಲ್ ಸಾಲ್ಟ್ ಅದ್ಭುತವಾಗಿ ಚೆಂಡನ್ನು ಹಿಡಿದರು.  ಆದರೆ, ಚೆಂಡನ್ನು ಹಿಡಿಯುವಾಗ ಸಾಲ್ಟ್​ನ ಕಾಲು ಅಥವಾ ಶರೀರ ಬೌಂಡರಿ ಕುಶನ್ (Rope) ಗೆ ತಗುಲಿರಬಹುದು ಎಂಬ ಸಂಶಯವಿತ್ತು.

ಮೂರನೇ ಅಂಪೈರ್ ತೀರ್ಪು:

ಕ್ಯಾಚ್ ಮೇಲೆ ಡೌಟ್ ಇದ್ದ ಕಾರಣ ಆನ್-ಫೀಲ್ಡ್ ಅಂಪೈರ್ ಈ ನಿರ್ಧಾರವನ್ನು ಮೂರನೇ ಅಂಪೈರ್ ರೋಹನ್ ಪಂಡಿತ್ ಅವರಿಗೆ ವಹಿಸಿದರು. ಮರುಪರಿಶೀಲನೆಯ ನಂತರ ಟಿವಿ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು. ಇತ್ತ ಕ್ಯಾಚ್ ಮೇಲೆ ಸಂಶಯಗಳಿದ್ದರೂ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಲು ಇದುವೇ ಮುಖ್ಯ ಕಾರಣ. ಆ ಕಾರಣಗಳೆಂದರೆ…

  • ಸ್ಪಷ್ಟ ಪುರಾವೆಯ ಕೊರತೆ: ಫಿಲ್ ಸಾಲ್ಟ್ ಬೌಂಡರಿ ಲೈನ್ ಮುಟ್ಟುತ್ತಿರುವುದು ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಕಂಡುಬರಲಿಲ್ಲ.
  • ಕುಶನ್ ಚಲನೆ: ಕುಶನ್ ಸ್ವಲ್ಪ ಅಲುಗಾಡಿದಂತೆ ಕಂಡರೂ, ಅದು ಸಾಲ್ಟ್ ಅವರ ಸಂಪರ್ಕದಿಂದಲೇ ಆಯಿತು ಎಂದು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ.
  • ಲಭ್ಯವಿದ್ದ ಆ್ಯಂಗಲ್​ಗಳು: ಆ ಸಮಯದಲ್ಲಿ ಕೇವಲ ಎರಡು ಕ್ಯಾಮೆರಾ ಆಂಗಲ್‌ಗಳು ಲಭ್ಯವಿದ್ದವು. ಅದರಲ್ಲಿ ಸಾಲ್ಟ್ ಅವರ ಶೂ ಬೌಂಡರಿ ಲೈನ್‌ಗೆ ತಗುಲಿರುವುದು ಖಚಿತವಾಗಿರಲಿಲ್ಲ. ಇಂತಹ ಸಂದರ್ಭಗಳಲ್ಲಿ ಮೂರನೇ ಅಂಪೈರ್​ನ ತೀರ್ಪು ನಿರ್ಣಾಯಕವಾಗಿರುತ್ತದೆ.
  • ನಿರ್ಣಾಯಕ ಪುರಾವೆ: ಮೂರನೇ ಅಂಪೈರ್ ತೀರ್ಪು ನೀಡುವಾಗ, ಫೀಲ್ಡರ್ ಬೌಂಡರಿ ಗೆರೆಯನ್ನು ಮುಟ್ಟಿದ್ದಾರೆ ಎಂಬುದು ರಿಪ್ಲೇನಲ್ಲಿ ನೂರಕ್ಕೆ ನೂರರಷ್ಟು ಸ್ಪಷ್ಟವಾಗಿ ಕಾಣಿಸಬೇಕು. ಒಂದು ವೇಳೆ ಕ್ಯಾಮೆರಾ ಆ್ಯಂಗಲ್‌ಗಳಲ್ಲಿ ಗೊಂದಲವಿದ್ದರೆ ಅಥವಾ ಸ್ಪಷ್ಟವಾಗಿ ಕಾಣಿಸದಿದ್ದರೆ, ಸಾಫ್ಟ್ ಸಿಗ್ನಲ್ ಅಥವಾ ಲಭ್ಯವಿರುವ ದೃಶ್ಯದ ಆಧಾರದ ಮೇಲೆ ಔಟ್ ನೀಡಲಾಗುತ್ತದೆ. ಅದರಂತೆ ಮೂರನೇ ಅಂಪೈರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಔಟ್ ಎಂದು ತೀರ್ಪು ನೀಡಿದ್ದಾರೆ.

ಇತ್ತ ಮೂರನೇ ಅಂಪೈರ್​ನ ಈ ತೀರ್ಪಿನಿಂದ ಕ್ಲಾಸೆನ್ ತುಂಬಾ ಅಸಮಾಧಾನಗೊಂಡರು. ಅಲ್ಲದೆ ಮೈದಾನದಿಂದ ಹೊರಹೋಗುವಾಗ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದರು.

ಇದನ್ನೂ ಓದಿ: Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ

ಆದರೆ ಇಂತಹ ಸಂಶಯಾಸ್ಪದ ಕ್ಯಾಚ್​ಗಳ ವೇಳೆ ಮೂರನೇ ಅಂಪೈರ್ ತೀರ್ಮಾಣವೇ ಅಂತಿಮ ನಿರ್ಮಾಣವಾಗಿರುತ್ತದೆ. ಅಂದರೆ ಬೌಂಡರಿ ಲೈನ್​ಗೆ ಫೀಲ್ಡರ್​ನ ದೇಹದ ಭಾಗದ ತಾಗಿದೆ ಎಂದು ಸಾಬೀತುಪಡಿಸಲು ಸಾಧ್ಯವಾಗದೇ ಇದ್ದರೆ, ಅದನ್ನು ಕ್ಯಾಚ್ ಔಟ್ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿಯೇ ಹೆನ್ರಿಕ್ ಕ್ಲಾಸೆನ್ ಔಟ್ ಎಂದು ಮೂರನೇ ಅಂಪೈರ್ ತೀರ್ಪು ನೀಡಿದ್ದಾರೆ.

 

Source link

ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ

ಬೆಂಗಳೂರು, ಮಾರ್ಚ್​ 29: ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು, ಕೊಲೆ ಪ್ರಕರಣವೂ ಸೇರಿದೆ. ಆರೋಪಿಗಳು ವೀಡಿಯೋ ಹಳೆಯದು ಎಂದು ಹೇಳಿದರೂ, ಪೊಲೀಸರು ಗಂಭೀರವಾಗಿ ಪರಿಗಣಿಸಿ ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ‘ಸ್ವಚ್ಛತೆಗಾಗಿ ನಾನೂ ಸಹಭಾಗಿ’ ಎಂಬ ಅಭಿಯಾನವನ್ನು ಕಳೆದ ಐದು ವರ್ಷಗಳಿಂದ ಮಾಡುತ್ತಿದ್ದಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಸಮಸ್ಯೆ ಪರಿಹಾರ ಆಗಬೇಕು ಎಂಬ ಉದ್ದೇಶದಿಂದ ಜನರಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಳ್ಳುತ್ತಾರೆ. ಸಿನಿಮಾ, ಸೀರಿಯಲ್ ಕೆಲಸಗಳ ನಡುವೆಯೂ ಅವರು ಈ ಸ್ವಚ್ಛತೆಯ ಅಭಿಯಾನ ನಿಲ್ಲಿಸಿಲ್ಲ. ಈಗ ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದ ಕಸದ ರಾಶಿಯ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು ಎಂಬ ಎಚ್ಚರಿಕೆ ಫಲದ ಎದುರಲ್ಲೇ ಜನರು ಕಸ ಸುರಿದಿರುವುದನ್ನು ಅನಿರುದ್ಧ್ ಅವರು ಟೀಕಿಸಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ಸಂಬಂಧಪಟ್ಟವರು ಕ್ರಮ ತೆಗೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IDBI Bank Recruitment 2026: ಆಕರ್ಷಕ ವೇತನದ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ

ಐಡಿಬಿಐ ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ತಜ್ಞ ಅಧಿಕಾರಿ (Specialist Officer) ಹುದ್ದೆಗಳ ಭರ್ತಿಗೆ ಬ್ಯಾಂಕ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಒಟ್ಟು 33 ತಜ್ಞ ಅಧಿಕಾರಿ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯುತ್ತಿದ್ದು, ಇದರಲ್ಲಿ ಐಟಿ & ಎಂಐಎಸ್ ವಿಭಾಗಕ್ಕೆ 19 ಹುದ್ದೆಗಳು, ಭದ್ರತಾ ಅಧಿಕಾರಿ (ಗ್ರೇಡ್-ಡಿ) ವಿಭಾಗಕ್ಕೆ 8 ಹುದ್ದೆಗಳು, ಅಪಾಯ ನಿರ್ವಹಣೆ – ಮಾಹಿತಿ ವ್ಯವಸ್ಥೆ ವಿಭಾಗಕ್ಕೆ 4 ಹುದ್ದೆಗಳು ಹಾಗೂ ಆಡಿಟ್ – ಮಾಹಿತಿ ವ್ಯವಸ್ಥೆಗಳ (ಗ್ರೇಡ್-ಸಿ) ವಿಭಾಗಕ್ಕೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 25 ರಿಂದಲೇ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ಏಪ್ರಿಲ್ 8, 2026ರ ಒಳಗೆ ಐಡಿಬಿಐ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ idbibank.in ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕಿದೆ.

ಅರ್ಹತಾ ಮಾನದಂಡಗಳ ಕುರಿತು ನೋಡುವುದಾದರೆ, ಐಟಿ ಮತ್ತು ಎಂಐಎಸ್ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್, ಐಟಿ ಅಥವಾ ಎಲೆಕ್ಟ್ರಾನಿಕ್ಸ್‌ನಲ್ಲಿ ಪದವಿ ಪಡೆದಿರುವುದು ಕಡ್ಡಾಯವಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅನುಭವದ ವಿಚಾರದಲ್ಲಿ, ಗ್ರೇಡ್ ಡಿ ಹುದ್ದೆಗೆ 10 ವರ್ಷ, ಗ್ರೇಡ್ ಸಿ ಗೆ 7 ವರ್ಷ ಮತ್ತು ಗ್ರೇಡ್ ಬಿ ಗೆ 4 ವರ್ಷಗಳ ವೃತ್ತಿ ಅನುಭವ ಅಗತ್ಯವಿರುತ್ತದೆ. ಇನ್ನು ಸೆಕ್ಯುರಿಟಿ ಆಫೀಸರ್ ಹುದ್ದೆಗೆ 12ನೇ ತರಗತಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯೊಂದಿಗೆ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಕನಿಷ್ಠ 15 ವರ್ಷಗಳ ಕಾಲ ಜೆಸಿಒ ಆಗಿ ಸೇವೆ ಸಲ್ಲಿಸಿ ನಿವೃತ್ತರಾದವರು ಅರ್ಹರಾಗಿರುತ್ತಾರೆ. ಅಪಾಯ ನಿರ್ವಹಣೆ ಮತ್ತು ಆಡಿಟ್ ವಿಭಾಗದ ಹುದ್ದೆಗಳಿಗೆ ಸಂಬಂಧಿತ ತಾಂತ್ರಿಕ ಪದವಿ ಹಾಗೂ ನಿಗದಿಪಡಿಸಿದ ವರ್ಷಗಳ ವೃತ್ತಿ ಅನುಭವವನ್ನು ಕೇಳಲಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25 ರಿಂದ 45 ವರ್ಷದೊಳಗಿರಬೇಕು. ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕದ ವಿಚಾರವಾಗಿ, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದವರಿಗೆ 1050 ರೂಪಾಯಿ ನಿಗದಿಪಡಿಸಲಾಗಿದ್ದು, ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಕೇವಲ 250 ರೂಪಾಯಿ ಶುಲ್ಕವಿರುತ್ತದೆ. ಆಯ್ಕೆ ಪ್ರಕ್ರಿಯೆಯು ಮೊದಲು ಅಭ್ಯರ್ಥಿಗಳ ಕಿರುಪಟ್ಟಿ (Shortlisting) ತಯಾರಿಸುವುದರೊಂದಿಗೆ ಆರಂಭವಾಗುತ್ತದೆ. ನಂತರ ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಅಂತಿಮ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,24,000 ರೂಪಾಯಿಯಿಂದ ಹಿಡಿದು 1,97,000 ರೂಪಾಯಿಯವರೆಗೆ ಆಕರ್ಷಕ ವೇತನ ದೊರೆಯಲಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link