All posts by nagaraj11081993

UPW vs GG Live Score, WPL 2026: 208 ರನ್ ಟಾರ್ಗೆಟ್ ನೀಡಿದ ಗುಜರಾತ್ – Kannada News | UPW vs GG Live Score today WPL 2026 match scorecard, Women’s Premier League UP Warriorz vs Gujarat Giants Match 02 In Kannada

  • 10 Jan 2026 04:35 PM (IST)

    UPW vs GG Live Score: 207 ರನ್ ಗುರಿ

    ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 207 ರನ್ ಗಳಿಸಿತು. ಜಾರ್ಜಿಯಾ ವೇರ್‌ಹ್ಯಾಮ್ 27 ರನ್ ಮತ್ತು ಭಾರ್ತಿ ಫುಲ್ಮಾಲಿ 14 ರನ್ ಗಳಿಸಿ ಅಜೇಯರಾಗಿ ಉಳಿದರು.

  • 10 Jan 2026 04:17 PM (IST)

    UPW vs GG Live Score: 17 ಓವರ್‌ ಪೂರ್ಣ

    ಗುಜರಾತ್ ಜೈಂಟ್ಸ್ ತಂಡ 17 ಓವರ್‌ಗಳಲ್ಲಿ 3 ವಿಕೆಟ್‌ಗೆ 167 ರನ್ ಗಳಿಸಿದೆ. ಆಶ್ಲೇ ಗಾರ್ಡ್ನರ್ (37 ಎಸೆತಗಳಲ್ಲಿ 60) ಮತ್ತು ಜಾರ್ಜಿಯಾ ವೇರ್‌ಹ್ಯಾಮ್ (6) ಕ್ರೀಸ್‌ನಲ್ಲಿದ್ದಾರೆ.

  • 10 Jan 2026 04:01 PM (IST)

    UPW vs GG Live Score: 10 ಓವರ್‌ ಪೂರ್ಣ

    ಗುಜರಾತ್ ಜೈಂಟ್ಸ್ 10 ಓವರ್‌ಗಳಲ್ಲಿ 2 ವಿಕೆಟ್‌ಗೆ 90 ರನ್ ಗಳಿಸಿದೆ. ಆಶ್ಲೇ ಗಾರ್ಡ್ನರ್ (12) ಮತ್ತು ಅನುಷ್ಕಾ ಶರ್ಮಾ (23) ಕ್ರೀಸ್‌ನಲ್ಲಿದ್ದಾರೆ.

  • 10 Jan 2026 03:14 PM (IST)

    UPW vs GG Live Score: ಸೋಫಿ ಸಿಕ್ಸರ್

    ಶಿಖಾ ಪಾಂಡೆ ಎಸೆದ ಮೊದಲ ಓವರ್‌ನಲ್ಲಿ 14 ರನ್‌ಗಳು ಬಂದವು. ಗುಜರಾತ್ ಜೈಂಟ್ಸ್ ತಂಡವು ತನ್ನ ಎರಡನೇ ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ 17 ರನ್ ಗಳಿಸಿದೆ.

  • 10 Jan 2026 03:04 PM (IST)

    UPW vs GG Live Score: ಯುಪಿ ತಂಡ

    ಡಿಯಾಂಡ್ರಾ ಡಾಟಿನ್, ಮೆಗ್ ಲ್ಯಾನಿಂಗ್ (ನಾಯಕಿ), ಫೋಬೆ ಲಿಚ್‌ಫೀಲ್ಡ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಕಿರಣ್ ನವಗಿರೆ, ಶ್ವೇತಾ ಸೆಹ್ರಾವತ್ (ವಿಕೆಟ್ ಕೀಪರ್), ಆಶಾ ಸೋಭಾನಾ, ಸೋಫಿ ಎಕ್ಲೆಸ್ಟೋನ್, ಶಿಖಾ ಪಾಂಡೆ, ಕ್ರಾಂತಿ ಗೌಡ್.

  • 10 Jan 2026 03:04 PM (IST)

    UPW vs GG Live Score: ಗುಜರಾತ್ ತಂಡ

    ಸೋಫಿ ಡಿವೈನ್, ಬೆತ್ ಮೂನಿ (ವಿಕೆಟ್ ಕೀಪರ್), ಆಶ್ಲೀಗ್ ಗಾರ್ಡ್ನರ್ (ನಾಯಕಿ), ಜಾರ್ಜಿಯಾ ವೇರ್ಹ್ಯಾಮ್, ಅನುಷ್ಕಾ ಶರ್ಮಾ, ಕನಿಕಾ ಅಹುಜಾ, ಭಾರತಿ ಫುಲ್ಮಾಲಿ, ಕಾಶ್ವಿ ಗೌತಮ್, ತನುಜಾ ಕನ್ವರ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್ ಠಾಕೂರ್.

  • 10 Jan 2026 02:35 PM (IST)

    UPW vs GG Live Score: ಟಾಸ್ ಗೆದ್ದ ಯುಪಿ

    ಟಾಸ್ ಗೆದ್ದ ಯುಪಿ ವಾರಿರರ್ಸ್​ ನಾಯಕಿ ಮೆಗ್ ಲ್ಯಾನಿಂಗ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

  • Source link

    ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ – Kannada News | Siddaramaiah Is a Lease Based Chief Minister: HD Kumaraswamy

    ಬೆಂಗಳೂರು, ಜನವರಿ 10: ಸಿದ್ದರಾಮಯ್ಯ ಒಬ್ಬ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ದೇವರಾಜ ಅರಸು ದಾಖಲೆ ಮುರಿದ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ದೇವರಾಜ ಅರಸು ದಾಖಲೆ ಮುರಿದೆ ಅಂತಾ ಹೇಳ್ತಿದ್ದಾರಲ್ಲಾ. ಹಿಂದೆ ಇಂದಿರಾಗಾಂಧಿ ವಿರುದ್ಧ ಅರಸು ಸೆಡ್ಡು ಹೊಡೆದು ನಿಂತಿದ್ದರು. ಈಗ ರಾಹುಲ್ ಗಾಂಧಿ ಯಾವಾಗ ಹೋಗು ಅಂತಾರೆ ಅಂತಾ ಕಾಯುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

    ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

    Source link

    ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ – Kannada News | Shiggavi Dowry Murder: Family Alleges Harassment in Sunita Doddamani’s Suspicious Death

    ಹಾವೇರಿ, ಜ.10: ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿ ಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳ ಆಗಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ ನೀಡಿದರು. ಪತಿ ಗಿರೇಶ ದೊಡ್ಡಮನಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಸುನೀತಾ ದೊಡ್ಡಮನಿ ಮನೆಯವರು ಆರೋಪಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆಯ ಮುಂದೆ ಆರೋಪಿಗಳ ಬಂಧನ ಮಾಡುವಂತೆ ಕುಟುಂಬದವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ವರದಿ: ಅಣ್ಣಪ್ಪ ಬಾರ್ಕಿ

    ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ಆಪರೇಷನ್ ಸಿಂಧೂರದಿಂದಾಗಿ ಪಾಕಿಸ್ತಾನ ಸಂವಿಧಾನವನ್ನೇ ಬದಲಾಯಿಸಿತು; ರಕ್ಷಣಾ ಮುಖ್ಯಸ್ಥ ಟೀಕೆ – Kannada News | Operation Sindoor exposed Pakistan failures forced it to change Constitution says Defence chief General Chauhan

    ನವದೆಹಲಿ, ಜನವರಿ 10: ಭಾರತದ ರಕ್ಷಣಾ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಪಾಕಿಸ್ತಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಇತ್ತೀಚಿನ ಸಾಂವಿಧಾನಿಕ ತಿದ್ದುಪಡಿಗಳು ಆಪರೇಷನ್ ಸಿಂಧೂರ್ (Operation Sindoor) ಸಮಯದಲ್ಲಿ ಅದರ ವೈಫಲ್ಯವನ್ನು ಪ್ರದರ್ಶಿಸುತ್ತವೆ ಎಂದು ಹೇಳಿಟೀಕಿಸಿದ್ದಾರೆ. ಪಾಕಿಸ್ತಾನ ತನ್ನ ನ್ಯೂನತೆಗಳನ್ನು ಮರೆಮಾಡಲು ಬದಲಾವಣೆಗಳನ್ನು ಆರಂಭಿಸಿತು. ಇವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ಬಹಿರಂಗಗೊಂಡವು ಎಂದು ಅವರು ಹೇಳಿದ್ದಾರೆ.

    ಪುಣೆ ಸಾರ್ವಜನಿಕ ನೀತಿ ಉತ್ಸವದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜನರಲ್ ಚೌಹಾಣ್, ಪಾಕಿಸ್ತಾನದಲ್ಲಿ ಮಾಡಲಾದ ಬದಲಾವಣೆಗಳು ಅನೇಕ ನ್ಯೂನತೆಗಳನ್ನು ಬಹಿರಂಗಪಡಿಸಿವೆ ಎಂದು ಹೇಳಿದ್ದಾರೆ. ಆತುರದಿಂದ ಮಾಡಿದ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಪಾಕಿಸ್ತಾನದಲ್ಲಿ ತರಲಾದ ಬದಲಾವಣೆಗಳು ವಾಸ್ತವವಾಗಿ ಈ ಕಾರ್ಯಾಚರಣೆಯಲ್ಲಿ ಅವರು ಅಂದುಕೊಂಡಿದ್ದು ಆಗಲಿಲ್ಲ ಎಂಬುದನ್ನು ಸಾರುತ್ತದೆ ಎಂದಿದ್ದಾರೆ.

    ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ

    ಪಾಕಿಸ್ತಾನದ ಸಂವಿಧಾನದ 243ನೇ ವಿಧಿಗೆ ತಿದ್ದುಪಡಿ ಮಾಡುವ ಮೂಲಕ ದೇಶದ ಉನ್ನತ ರಕ್ಷಣಾ ಸಂಸ್ಥೆಯಲ್ಲಿ ಭಾರೀ ಬದಲಾವಣೆಗಳಾಗಿವೆ. 3 ಸೇವೆಗಳ ನಡುವೆ ಜಂಟಿ ಮುಖ್ಯಸ್ಥರ (CDF) ಹುದ್ದೆಯನ್ನು ರದ್ದುಗೊಳಿಸಲಾಗಿದೆ ಎಂದು ಜನರಲ್ ಚೌಹಾಣ್ ವಿವರಿಸಿದ್ದಾರೆ.

    ಇತ್ತೀಚಿನ ಕಾರ್ಯಾಚರಣೆಗಳಿಂದ ಕಲಿತ ಪಾಠಗಳಿಂದ ಭಾರತದ ರಕ್ಷಣಾ ಯೋಜನೆ ಮತ್ತು ಉನ್ನತ ಕಮಾಂಡ್ ರಚನೆಗಳನ್ನು ಮಾರ್ಪಡಿಸಲಾಗಿದೆ. ಭಾರತವು ದೀರ್ಘಕಾಲೀನ ಮಿಲಿಟರಿ ಸಿದ್ಧತೆ ಮತ್ತು ಹೊಂದಾಣಿಕೆಯ ಕಾರ್ಯತಂತ್ರದ ಯೋಜನೆಯ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಜನರಲ್ ಚೌಹಾಣ್ ಹೇಳಿದ್ದಾರೆ.

    ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    U19 World Cup 2026: 7 ಸಿಕ್ಸರ್, 96 ರನ್..! ಅಭ್ಯಾಸ ಪಂದ್ಯದಲ್ಲೇ ಅಬ್ಬರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Shines with 96 for India U19 in World Cup Practice vs Scotland

    2026 ರ ಅಂಡರ್-19 ವಿಶ್ವಕಪ್ (U19 World Cup 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. 2026 ರ ಅಂಡರ್-19 ವಿಶ್ವಕಪ್ ಜನವರಿ 15 ರಂದು ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಆರಂಭವಾಗುತ್ತದೆ. ಅದಕ್ಕೂ ಮೊದಲು, ಎಲ್ಲಾ ತಂಡಗಳು ಇಂದು ಅಂದರೆ ಜನವರಿ 10 ರಿಂದ ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಆ ಪ್ರಕಾರ ಭಾರತ ಯುವ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ (Vaibhav Suryavanshi) ಅಬ್ಬರದ ಇನ್ನಿಂಗ್ಸ್ ಆಡಿದರು. ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ತಂಡಗಳ ವಿರುದ್ಧ ವೈಭವ್ ಹೇಗೆ ಮಿಂಚಿದ್ದರೋ ಅದೇ ರೀತಿ ಸ್ಕಾಟ್ಲೆಂಡ್ ವಿರುದ್ಧವೂ ಸಿಕ್ಸರ್‌ಗಳ ಮಳೆಗರೆದಿದ್ದಾರೆ.

    ಪ್ರಸ್ತುತ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಫಾರ್ಮ್​ನಲ್ಲಿದ್ದಾರೆ. ಮೊದಲ ಬಾರಿಗೆ ವಿಶ್ವಕಪ್​ನಲ್ಲಿ ಭಾಗವಹಿಸುತ್ತಿರುವ ವೈಭವ್ ಮೇಲೆ ಭಾರತ ತಂಡ ಹೆಚ್ಚಿನ ಭರವಸೆಯನ್ನು ಹೊಂದಿದೆ. ಆ ಪ್ರಕಾರ 14 ವರ್ಷದ ವೈಭವ್, ಸ್ಕಾಟ್ಲೆಂಡ್ ವಿರುದ್ಧ ಬೌಂಡರಿ ಮತ್ತು ಸಿಕ್ಸರ್​ಗಳ ಮಳೆಗರೆದರು. ಆದರೆ ಕೇವಲ 4 ರನ್​ಗಳ ಅಂತರದಿಂದ ಶತಕದಿಂದ ವಂಚಿತರಾದರು.

    ಶತಕ ತಪ್ಪಿಸಿಕೊಂಡ ವೈಭವ್

    ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಎರಡು ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿದ್ದ ವೈಭವ್, ಸ್ಕಾಟ್ಲೆಂಡ್ ವಿರುದ್ಧವೂ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್ ಬಹುತೇಕ ಪ್ರತಿ ಓವರ್‌ನಲ್ಲಿಯೂ ಬೌಂಡರಿ ಅಥವಾ ಸಿಕ್ಸರ್ ಬಾರಿಸಿದರು. ಇದರ ಪರಿಣಾಮವಾಗಿ ಶತಕದ ಸನಿಹಕ್ಕೂ ಬಂದರು. ಆದರೆ ಶತಕ ಪೂರೈಸಲು ಕೇವಲ ಒಂದು ಬೌಂಡರಿ ಮಾತ್ರ ಬೇಕಾಗಿದ್ದಾಗ ಎಡವಿದ ವೈಭವ್ ವಿಕೆಟ್ ಒಪ್ಪಿಸಿದರು.

    ಕೇವಲ 50 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಏಳು ಸಿಕ್ಸರ್‌ಗಳ ಸಹಿತ 96 ರನ್‌ ಬಾರಿಸಿದ ವೈಭವ್​ಗೆ ಇದು ಸತತ ಮೂರನೇ ಐವತ್ತು ಪ್ಲಸ್ ಸ್ಕೋರ್ ಆಗಿದೆ. ಇದಕ್ಕೂ ಮೊದಲು, ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ 68 ಮತ್ತು 127 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇನ್ನು ಅಂಡರ್ ವಿಶ್ವಕಪ್​ನಲ್ಲಿ ಜನವರಿ 15 ರಂದು ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಭಾರತ, ಅಲ್ಲಿ ಅಮೆರಿಕ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲೂ ವೈಭವ್ ಇದೇ ರೀತಿ ಅಬ್ಬರಿಸಿದರೆ ತಂಡಕ್ಕೆ ಗೆಲುವು ಖಚಿತ.

    ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ?

    ತಂಡ ಸೇರಿಕೊಂಡ ಆಯುಷ್ ಮತ್ತು ವಿಹಾನ್

    ಈ ಪಂದ್ಯದೊಂದಿಗೆ ತಂಡದ ನಾಯಕ ಆಯುಷ್ ಮ್ಹಾತ್ರೆ ಮತ್ತು ಉಪನಾಯಕ ವಿಹಾನ್ ಮಲ್ಹೋತ್ರಾ ಇಂಜುರಿಯಿಂದ ಚೇತರಿಸಿಕೊಂಡು ತಂಡ ಸೇರಿಕೊಂಡಿದ್ದಾರೆ. ಮಣಿಕಟ್ಟಿನ ಗಾಯಗಳಿಂದಾಗಿ ಇಬ್ಬರೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಹೀಗಾಗಿ ಆ ಸರಣಿಯಲ್ಲಿ ವೈಭವ್ ತಂಡವನ್ನು ಮುನ್ನಡೆಸಿದ್ದರು. ಈ ಪಂದ್ಯದಲ್ಲಿ ನಾಯಕ ಆಯುಷ್ 19 ಎಸೆತಗಳಲ್ಲಿ 22 ರನ್ ಬಾರಿಸಿದರೆ ವಿಹಾನ್ ಅರ್ಧಶತಕದ ಇನ್ನಿಂಗ್ಸ್ ಆಡಿದರು.

    Published On – 3:57 pm, Sat, 10 January 26

    Source link

    NHAI Recruitment 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | NHAI Deputy Manager Recruitment 2026: Apply Online for Civil Engg Jobs

    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಡಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 09ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    ಶೈಕ್ಷಣಿಕ ಅರ್ಹತೆ:

    NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ BE/ B.Tech ಪೂರ್ಣಗೊಳಿಸಿರಬೇಕು .

    ವಯಸ್ಸಿನ ಮಿತಿ:

    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 09-02-2026 ರಂತೆ 30 ವರ್ಷಗಳು.

    ವಯೋಮಿತಿ ಸಡಿಲಿಕೆ:

    • ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    • SC/ST ಅಭ್ಯರ್ಥಿಗಳು: 5 ವರ್ಷಗಳು
    • ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
    • ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
    • ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು

    ಅರ್ಜಿ ಸಲ್ಲಿಸುವುದು ಹೇಗೆ?

    • ಮೊದಲನೆಯದಾಗಿ NHAI ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
    • NHAI ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
    • NHAI ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.
    • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

    Source link

    SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ – Kannada News | TV9 Identifies Exam Centre Where SSLC Question Paper Was Leaked

    ಬೆಳಗಾವಿ, ಜನವರಿ 10: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ (SSLC Exam Paper Leak) ಆರೋಪ ಕೇಳಬಂದಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ವೈರಲ್ ಆಗಿದೆ. ಆದರೆ ಇದೀಗ ಪ್ರಶ್ನೆಪತ್ರಿಕೆ ಲೀಕ್​ ಆದ ಪರೀಕ್ಷಾ ಕೇಂದ್ರ ಪತ್ತೆ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್ ಪತ್ತೆ ಮಾಡಲಾಗಿದೆ. ಬೆಳಗಾವಿಯ ಪರೀಕ್ಷಾ ಕೇಂದ್ರವಾಗಿದ್ದು, ಲಕ್ಷ್ಮೀನಗರದಲ್ಲಿರುವ ಸೇಂಟ್ ಮೀರಾ ಶಾಲೆಯಿಂದ ಸೋರಿಕೆಯಾಗಿರುವ ಸಂಶಯ ವ್ಯಕ್ತವಾಗಿದೆ.

    ಪ್ರಶ್ನೆಪತ್ರಿಕೆ ಮೇಲಿರುವ ಕೋಡ್ ಸೇಂಟ್ ಮೂಲಕ ಸೆಂಟರ್ ಪತ್ತೆ

    ಪ್ರಶ್ನೆಪತ್ರಿಕೆ ಮೇಲಿರುವ ಕೋಡ್ ಸೇಂಟ್ ಮೀರಾ ಶಾಲೆಯದ್ದು ಆಗಿದೆ. ಟಿವಿ9 ವರದಿ ಬೆನ್ನಲ್ಲೇ ಶಾಲೆಗೆ ಡಿಡಿಪಿಐ ಲೀಲಾವತಿ ಭೇಟಿ ನೀಡಿದ್ದು, ಬೆಳಗ್ಗೆಯಿಂದ ಪರೀಕ್ಷೆ ಆರಂಭವಾಗುವವರೆಗಿನ ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ.

    ಟಿವಿ9 ವರದಿ ಗಮನಿಸಿ ಸೆಂಟರ್ ಪತ್ತೆ: ಡಿಡಿಪಿಐ ಲೀಲಾವತಿ

    ಇನ್ನು ಈ ಬಗ್ಗೆ ಟಿವಿ9ಗೆ ಬೆಳಗಾವಿ ಡಿಡಿಪಿಐ ಲೀಲಾವತಿ ಪ್ರತಿಕ್ರಿಯಿಸಿದ್ದು, ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್ ಪತ್ತೆ ಹಚ್ಚಲಾಗಿದೆ. ಬೆಳಗಾವಿ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯ ಕೋಡ್​ ಇದ್ದು, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ಲೀಕ್ ! ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಬೆಳಗಾವಿ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 17 ವಿದ್ಯಾರ್ಥಿಗಳು 10ನೇ ತರಗತಿ ಓದುತ್ತಿದ್ದಾರೆ. ವಿದ್ಯಾರ್ಥಿಗಳಿಂದಲೂ ಮಾಹಿತಿ ಪಡೆದಿದ್ದೇವೆ. ಹೆಚ್​ಎಂ ಸೇರಿ ಶಿಕ್ಷಕರಿಂದಲೂ ಈ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಲ್ಲಾ ಮಾಹಿತಿಯ ವರದಿ ಸಿದ್ಧಪಡಿಸಿ ಇಲಾಖೆಗೆ ಕಳುಹಿಸುತ್ತೇನೆ ಎಂದು ಬೆಳಗಾವಿ ಡಿಡಿಪಿಐ ಲೀಲಾವತಿ ಹೇಳಿದ್ದಾರೆ.

    ಇದನ್ನೂ ಓದಿ: SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ

    ಡೆಲ್ಟಾ ಎಸ್‌ಎಸ್‌ಎಲ್‌ಸಿ ಎಂಬ ಇನ್​​ಸ್ಟಾಗ್ರಾಂ ಖಾತೆಯಿಂದ ವೈರಲ್ ಮಾಡಲಾಗಿದೆ. ಪ್ರತಿವರ್ಷವೂ ಈ ಖಾತೆ ಪರೀಕ್ಷೆ ಸಮಯದಲ್ಲಿ ಸಕ್ರಿಯವಾಗುತ್ತೆ. ಕಳೆದ ವರ್ಷವೂ ಇದೇ ಖಾತೆಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು, ಆದರೆ ಪರೀಕ್ಷಾ ಮಂಡಳಿ ಅಧಿಕಾರಿಗಳಿಂದ ದಿವ್ಯ ನಿರ್ಲಕ್ಷ್ಯವಹಿಸಲಾಗುತ್ತಿದೆ.

    ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

    Source link

    ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ – Kannada News | Yash mother visited Hasan police station regarding compound demolition case

    ಯಶ್ (Yash) ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ ಮಾತುಕತೆ ನಡೆಸಿದ್ದಾರೆ.

    ಹಾಸನ ನಗರದ ವಿದ್ಯಾನಗರದಲ್ಲಿರುವ ಪುಷ್ಪ ಅವರ ಮನೆಯ ಕೌಂಪೌಂಡ್‌ ಅನ್ನು ವ್ಯಕ್ತಿಯೊಬ್ಬರು ವಾರದ ಹಿಂದೆ ಜೆಸಿಬಿ ಬಳಸಿ ನೆಲಸಮಗೊಳಿಸಿದ್ದರು. ಕೋರ್ಟ್ ಅನುಮತಿಯ ಮೇರೆಗೆ ತಾವು ಕಾಂಪೌಂಡ್ ಅನ್ನು ತೆರವುಗೊಳಿಸಿರುವುದಾಗಿ ಅವರು ಹೇಳಿದ್ದರು. ಆದರೆ ಪುಷ್ಪ ಅವರ ಪರ ವಕೀಲರು, ವಿವಾದಿತ ಸ್ಥಳ ಪುಷ್ಪ ಅವರಿಗೇ ಸೇರಿದ್ದು, ಯಾವುದೇ ಕೋರ್ಟ್ ಅನುಮತಿ ಇಲ್ಲದೆ ಕಾಂಪೌಂಡ್ ಅನ್ನು ನೆಲಸಮ ಮಾಡಿದ್ದಾರೆ. ಇದರ ವಿರುದ್ಧ ದಾವೆ ಹೂಡಲಿದ್ದೇವೆ ಎಂದಿದ್ದರು.

    ಇದೀಗ ಪೊಲೀಸ್ ಠಾಣೆಗೆ ಭೇಟಿ ನೀಡಿರುವ ಪುಷ್ಪ, ಅವರು ತಮ್ಮ ಸಂಬಂಧಿ ತಮ್ಮ ಪರವಾಗಿ ನೀಡಿದ್ದ ದೂರಿನ ಕುರಿತಾಗಿ ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾರೆ. ತಾವು ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡು ಅಕ್ರಮವಾಗಿ ನಮ್ಮ ಸ್ಥಳದಲ್ಲಿ ಜೆಸಿಬಿ ನುಗ್ಗಿಸಿ ನಮ್ಮ ಕಾಂಪೌಂಡ್ ಅನ್ನು ನೆಲಸಮಗೊಳಿಸಿದ್ದಾರೆ. ಈ ಬಗ್ಗೆ ದೂರು ಸಹ ನೀಡಲಾಗಿದ್ದು, ದೂರಿಗೆ ತೆಗೆದುಕೊಂಡಿರುವ ಪ್ರಕ್ರಿಯೆ ಏನು ಎಂದು ಪುಷ್ಪ ಅವರು ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ:ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ: ಲಾಯರ್ ಮೊದಲ ಪ್ರತಿಕ್ರಿಯೆ

    1500 ಅಡಿಗಳ ಜಾಗಕ್ಕೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಕೆಡವಿದ್ದಾರೆ. ದೇವರಾಜ್ ಹೇಳಿರುವಂತೆ ಸದರಿ ಸ್ಥಳ ಲಕ್ಷ್ಮಮ್ಮ ಎಂಬುವರಿಗೆ ಸೇರಿದ್ದಾಗಿದ್ದು, ಪ್ರಸ್ತುತ ಅವರು (ದೇವರಾಜ್) ಆ ಸ್ಥಳದ ಜಿಪಿಎ ಮಾಲೀಕರು ಎಂದು ಹೇಳಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ತಾವು ಕಾಂಪೌಂಡ್ ಕೆಡವಿದ್ದಾಗಿ ಹೇಳಿಕೊಂಡಿದ್ದಾರೆ.

    ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

    Published On – 2:52 pm, Sat, 10 January 26

    Source link

    ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಸೇರಿಸಿ – Kannada News | To prevent mosquitoes from entering the house Add these two things to mop water

    ಸೊಳ್ಳೆ (mosquitoes), ಕೀಟಗಳ ಕಾಟ ಪ್ರತಿ ಮನೆಯಲ್ಲೂ ಇದ್ದಿದ್ದೆ. ಇವುಗಳ ಕಚ್ಚಿ ಕಿರಿಕಿರಿಯನ್ನು ಉಂಟು ಮಾಡುವುದರ ಜೊತೆಗೆ ರಾತ್ರಿ ನಿದ್ರೆಗೂ ಭಂಗ ತರುತ್ತವೆ. ಹಾಗಾಗಿ ಇವುಗಳ ಕಾಟದಿಂದ ಮುಕ್ತಿ ಪಡೆಯಲು ರಾಸಾಯನಿಕಯುಕ್ತ ಸ್ಪ್ರೇ, ಸೊಳ್ಳೆ ಕಾಯಿಲ್‌ಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಇವುಗಳ ಬಳಕೆಯಿಂದ ಶಾಶ್ವತವಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಜೊತೆಗೆ ನಮ್ಮ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟು ಸೂಕ್ತವಲ್ಲ.  ಹೀಗಿರುವಾಗ ಸೊಳ್ಳೆ, ಕೀಟಗಳ ಹಾವಳಿಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಆಲಂ ಕಲ್ಲು (ಪಟಿಕ) ಮತ್ತು ನಿಂಬೆರಸವನ್ನು ನೆಲ ಒರೆಸುವ ನೀರಿಗೆ ಸೇರಿಸಿ. ಈ ಎರಡು ವಸ್ತುಗಳನ್ನು ನೆಲ ಒರೆಸುವ ನೀರಿಗೆ ಸೇರಿಸಿ ಮನೆಯನ್ನು ಕ್ಲೀನ್‌ ಮಾಡುವುದರಿಂದ ಸೊಳ್ಳೆ, ಕೀಟಗಳು ಎಂದಿಗೂ ಮನೆಯನ್ನು ಪ್ರವೇಶಿಸುವುದಿಲ್ಲ.

    ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸುಲಭ ಮನೆಮದ್ದು:

    ನಿಂಬೆ ರಸ ಮತ್ತು ಪಟಿಕ ಎರಡೂ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದ್ದು, ಇವು  ಬ್ಯಾಕ್ಟೀರಿಯಾ, ಸೂಕ್ಷ್ಮಜೀವಿಗಳು, ಸೊಳ್ಳೆಗಳು ಮತ್ತು ನೊಣಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ನಿಂಬೆಯ ರಿಫ್ರೆಶ್ ಆಮ್ಲೀಯ ಗುಣಗಳು ಸೊಳ್ಳೆಗಳು ಮತ್ತು ನೋಣಗಳನ್ನು ಮನೆಯಿಂದ ದೂರವಿಡುವಲ್ಲಿ ಪರಿಣಾಮಕಾರಿಯಾಗಿದೆ.  ಆದರೆ ಪಟಿಕದ ಕೀಟನಾಶಕ ಗುಣಗಳು ಅವುಗಳನ್ನು ಮನೆಯಿಂದ ಹೊರಗಿಡಲು ಸಹಾಯ ಮಾಡುತ್ತದೆ. ಈ ಎರಡೂ ವಸ್ತುಗಳನ್ನು ನೆಲ ಒರೆಸುವ ನೀರಿಗೆ ಸೇರಿಸಿ ಮನೆ ಕ್ಲೀನ್‌ ಮಾಡುವುದರಿಂದ ಸೊಳ್ಳೆ, ಕೀಟಗಳ ಕಾಟದಿಂದ ಮುಕ್ತಿ ಪಡೆಯಬಹುದು.

    ಸೊಳ್ಳೆ ನಿವಾರಕ ದ್ರಾವಣವನ್ನು ತಯಾರಿಸುವುದು ಹೇಗೆ?

    • ಒಂದು ಬಕೆಟ್ ಉಗುರು ಬೆಚ್ಚಗಿನ ನೀರನ್ನು ತೆಗೆದುಕೊಳ್ಳಿ.
    • ಅದಕ್ಕೆ 2 ನಿಂಬೆಹಣ್ಣಿನ ರಸವನ್ನು ಹಿಂಡಿ ಮತ್ತು ಅರ್ಧ ಟೀ ಚಮಚ ಪಟಿಕ ಪುಡಿಯನ್ನು ಸೇರಿಸಿ.
    • ಈಗ ಅದನ್ನು ಚೆನ್ನಾಗಿ ಮಿಶ್ರಣ ಮಾಡಿ.
    • ಈ ನೀರಿನಿಂದ ವಾರಕ್ಕೆ 2-3 ಬಾರಿ ಮನೆಯನ್ನು ಒರೆಸಿ.
    • ಬಯಸಿದರೆ, ನೀವು ಈ ದ್ರಾವಣವನ್ನು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಮನೆಯ ಮೂಲೆಗಳಲ್ಲಿ, ಕಿಟಕಿಗಳು, ಬಾಗಿಲುಗಳ ಬಳಿ ಮತ್ತು ಸೊಳ್ಳೆ, ಕೀಟಗಳು ಹೆಚ್ಚು ಓಡಾಡುವ ಸ್ಥಳಗಳಲ್ಲಿ ಸಿಂಪಡಿಸಬಹುದು.

    ಇದನ್ನೂ ಓದಿ: ಮನೆಯಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿ ನಿಮಿಷಗಳಲ್ಲಿ ಗ್ಯಾಸ್‌ ಸ್ಟೌವ್ ಕ್ಲೀನ್‌ ಮಾಡಬಹುದು

    ಈ ಮನೆಮದ್ದು ಸೊಳ್ಳೆಗಳ ಕಾಟದಿಂದ ಮುಕ್ತಿ ನೀಡುವುದು ಮಾತ್ರವಲ್ಲ, ನೊಣಗಳು ಮತ್ತು ಸಣ್ಣ ಕೀಟಗಳನ್ನು ಸಹ ಕಡಿಮೆ ಮಾಡುತ್ತದೆ. ಮನೆಗೆ ತಾಜಾ ಮತ್ತು ಸ್ವಚ್ಛವಾದ ಸುವಾಸನೆಯನ್ನು ನೀಡುತ್ತದೆ. ಸೊಳ್ಳೆ ನಿವಾರಕ ಸ್ಪ್ರೇಗಳನ್ನು ಪದೇ ಪದೇ ಬಳಸಿ, ಯಾವುದೇ ರಿಸಲ್ಟ್‌ ಸಿಕ್ಕಿಲ್ಲ ಎಂದಾದ್ರೆ, ಸೊಳ್ಳೆಗಳನ್ನು ಓಡಿಸಲು ಒಮ್ಮೆ ಈ ಮನೆಮದ್ದನ್ನು ಟ್ರೈ ಮಾಡಿ.

    ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ರೈಲು ಪ್ರಯಾಣಿಕರಿಗೆ ಮಕರ ಸಂಕ್ರಾಂತಿಗೆ ಸಿಹಿಸುದ್ದಿ: ಬೆಂಗಳೂರಿನಿಂದ ಊರಿಗೆ ಹೋಗಲು ವಿಶೇಷ ರೈಲು – Kannada News | SWR Sankranti Special Trains: Bengaluru Bidar, Yeshwantpur Talaguppa Extended

    ಬೆಂಗಳೂರು , ಜ.10: ಹೊಸ ವರ್ಷ ಆರಂಭ ಆಗುತ್ತಿದ್ದಂತೆ, ಸಾಲು ಸಾಲು ಹಬ್ಬಗಳು ಬರುತ್ತಿದೆ. ಈ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ, ಈ ಹಬ್ಬ ತುಂಬಾ ವಿಶೇಷವಾಗಿದೆ. ಮಕರ ಸಂಕ್ರಾಂತಿ ದಕ್ಷಿಣ ಭಾರತಕ್ಕೆ ಮಾತ್ರವಲ್ಲದೆ. ಉತ್ತರ ಭಾರತಕ್ಕೂ ತುಂಬಾ ವಿಶೇಷವಾಗಿದೆ. ಶಬರಿಮಲೆ ಹೋಗುವ ಭಕ್ತರಿಗೂ ಈ ಹಬ್ಬ ಇನ್ನೂ ವಿಶೇಷವಾಗಿರುತ್ತದೆ. ಇನ್ನು ಮಕರ ಸಂಕ್ರಾಂತಿಗೆ ಊರಿಗೆ ಹೋಗಲು ಪ್ಲಾನ್​​​ ಹಾಕಿಕೊಂಡವರಿಗೆ ಬಿಗ್​​​ ಗುಡ್​​​​​ನ್ಯೂಸ್​​​ ಇದೆ. ಮಕರ ಸಂಕ್ರಾಂತಿ ಹಬ್ಬದ (Makar Sankranti special trains) ಪ್ರಯುಕ್ತ ವಿಶೇಷ ರೈಲುಗಳನ್ನು ಇಲಾಖೆ ಘೋಷಣೆ ಮಾಡಿದೆ. ಹಬ್ಬದಂದು ಆಗುವ ಜನದಟ್ಟಣೆಯನ್ನು ನಿರ್ವಹಿಸಲು ಮತ್ತು ಸಾವಿರಾರು ಪ್ರಯಾಣಿಕರ ಪ್ರಯಾಣವನ್ನು ಸುಗಮಗೊಳಿಸಲು, ನೈಋತ್ಯ ರೈಲ್ವೆ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ಸೇವೆಗಳನ್ನು ಘೋಷಿಸಿದೆ ಮತ್ತು ಬೆಂಗಳೂರು-ಬೀದರ್ ವಿಶೇಷ ರೈಲಿನ ವಿಸ್ತರಣೆಯನ್ನು ಘೋಷಿಸಿದೆ. ಶಿವಮೊಗ್ಗ, ಸಾಗರ, ತುಮಕೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ಕೂಡ ಈ ರೈಲು ಭಾಗ್ಯ ಸಿಗಲಿದೆ.

    ಸಂಕ್ರಾಂತಿ ರಜಾದಿನಗಳಲ್ಲಿ ಪ್ರಯಾಣಿಕರ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ನೈಋತ್ಯ ರೈಲ್ವೆ ಜನವರಿಯಲ್ಲಿ ಆಯ್ದ ದಿನಗಳಲ್ಲಿ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ಸೇವೆಗಳು ಸಾಮಾನ್ಯ ರೈಲುಗಳಲ್ಲಿನ ಜನದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಪ್ರಯಾಣದ ದಿನಗಳಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಮಾಡಲಾಗಿದೆ. ಯಶವಂತಪುರ ಮತ್ತು ತಾಳಗುಪ್ಪ ನಡುವಿನ ವಿಶೇಷ ರೈಲುಗಳು ಜನವರಿ 13, 14, 23 ಮತ್ತು 24 ರಂದು ತನ್ನ ಸೇವೆಯನ್ನು ನೀಡಲಿದೆ ಎಂದು ಇಲಾಖೆ ಹೇಳಿದೆ. ಈ ದಿನಾಂಕಗಳು ಹಬ್ಬದ ಅವಧಿ ಹಾಗೂ ಮತ್ತೆ ಊರಿನಿಂದ ಬರುವವರಿಗೆ ಅನುಕೂಲವಾಗಲಿದೆ.

    ಇದನ್ನೂ ಓದಿ: ಬೆಂಗಳೂರು ರೈಲು ಪ್ರಯಾಣಿಕರು ಗಮನಿಸಿ: KSR ಟರ್ಮಿನಲ್ ಬದಲಾವಣೆ, ಹೊಸ ನಿಲ್ದಾಣಗಳು ಇಲ್ಲಿವೆ

    ವಿಶೇಷ ರೈಲುಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ:

    ಈ ರೈಲು ರಾತ್ರಿ ಹಾಗೂ ಹಗಲಿನಲ್ಲಿ ಸಂಚಾರಿಸಲು ಅನುಕೂಲ ಆಗುವಂತೆ ಸಂಯೋಜಿಸಲಾಗಿದೆ. ಪ್ರಯಾಣಿಕರು ರಾತ್ರಿ ಪ್ರಯಾಣಿಸಲು ಬಯಸಿದ್ರೆ ಕೂಡ ರೈಲು ಸೇವೆ ಇದೆ. ಇನ್ನು ಹಗಲು ಹೊತ್ತು ಪ್ರಕೃತಿಯನ್ನು ವೀಕ್ಷಣೆ ಮಾಡಿಕೊಂಡು ಸಂಚಾರಿಸಬೇಕು ಎಂದು ಬಯಸಿದ್ರೆ ಆ ಅವಕಾಶ ಕೂಡ ಇದೆ. ಈ ವಿಶೇಷ ರೈಲುಗಳು ವಿವಿಧ ನಿಲ್ದಾಣಗಳಲ್ಲಿಯೂ ನಿಲುಗಡೆ ಆಗಲಿದೆ. ಇದರಿಂದ ಕರಾವಳಿ ಪ್ರಯಾಣಿಕರಿಗೂ ಕೂಡ ಅನುಕೂಲ ಆಗಲಿದೆ. ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಪಟ್ಟಣ, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೆ ಅವಕಾಶ ಇದೆ.

    ಪಟ್ಟಣಗಳ ನಿವಾಸಿಗಳಿಗೆ, ಹಬ್ಬದ ಪ್ರಯಾಣವು ಸಾಮಾನ್ಯವಾಗಿ ಸೀಮಿತ ರೈಲು ಆಯ್ಕೆಗಳು ಅಥವಾ ಕಿಕ್ಕಿರಿದ ಬಸ್‌ಗಳು ಇರುವ ಕಾರಣ. ಈ ಹೆಚ್ಚುವರಿ ನಿಲ್ದಾಣಗಳು ವಿಶೇಷ ಸೇವೆಯನ್ನು ನೀಡಲಿದೆ. ತಾಳಗುಪ್ಪ ವಿಶೇಷ ರೈಲುಗಳ ಜೊತೆಗೆ, ನೈಋತ್ಯ ರೈಲ್ವೆಯು SMVT ಬೆಂಗಳೂರು ಮತ್ತು ಬೀದರ್ ನಡುವಿನ ವಿಶೇಷ ಎಕ್ಸ್‌ಪ್ರೆಸ್ ಸೇವೆಯನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಹಬ್ಬದ ಜನದಟ್ಟಣೆಯನ್ನು ನಿಭಾಯಿಸಲು, ಈ ಎರಡು ವಾರಗಳ ಸೇವೆಯು ಈಗ ದೀರ್ಘಕಾಲದವರೆಗೆ ಕಾರ್ಯನಿರ್ವಹಿಸಲಿದೆ. ಬೆಂಗಳೂರಿನಿಂದ ಬೀದರ್‌ಗೆ ರೈಲು ಜನವರಿ 2 ರಿಂದ ಫೆಬ್ರವರಿ 27 ರವರೆಗೆ ಪ್ರತಿ ಶುಕ್ರವಾರ ಮತ್ತು ಭಾನುವಾರ ಕಾರ್ಯನಿರ್ವಹಿಸುತ್ತದೆ. ಬೀದರ್‌ನಿಂದ ಬೆಂಗಳೂರಿಗೆ ಹಿಂದಿರುಗುವ ಸೇವೆ ಜನವರಿ 3 ರಿಂದ ಫೆಬ್ರವರಿ 28 ರವರೆಗೆ ಪ್ರತಿ ಶನಿವಾರ ಮತ್ತು ಸೋಮವಾರ ಕಾರ್ಯನಿರ್ವಹಿಸುತ್ತದೆ ಎಂದು ಇಲಾಖೆ ಹೇಳಿದೆ.

    ಒಟ್ಟಾರೆಯಾಗಿ, ಈ ವಿಸ್ತರಣೆಯು 17 ಟ್ರಿಪ್‌ಗಳನ್ನು ಒಳಗೊಂಡಿದ್ದು, ಹಬ್ಬ ಮತ್ತು ಹಬ್ಬದ ನಂತರದ ಅವಧಿಯಲ್ಲಿ ಪ್ರಯಾಣಿಕರಿಗೆ ಒಳ್ಳೆಯ ಆಯ್ಕೆಯನ್ನು ನೀಡಲಿದೆ. ಸಮಯ, ನಿಲುಗಡೆಗಳು ಅಥವಾ ಕೋಚ್ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಇನ್ನು ಪ್ರಯಾಣಿಕರು ಈ ವಿಚಾರವನ್ನು ಗಮನಿಸಲೇಬೇಕು. ಜ.16ರಿಂದ ಮಾ.11ರವರೆಗೆ ಕೆಲವು ರೈಲುಗಳ ಟರ್ಮಿನಲ್ ನಿಲ್ದಾಣಗಳಲ್ಲಿ ಬದಲಾವಣೆ ಮಾಡಲಾಗಿದೆ.

    ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Published On – 3:34 pm, Sat, 10 January 26

    Source link