All posts by nagaraj11081993

Gold Ring Astrology: ಈ ಬೆರಳಿಗೆ ಚಿನ್ನದ ಉಂಗುರ ಧರಿಸುವುದು ಶನಿದೋಷಕ್ಕೆ ಕಾರಣವಾಗಬಹುದು! – Kannada News | Gold Ring Astrology: Which Finger Brings Luck? Rules and Benefits

ಚಿನ್ನವು ಸೂರ್ಯ ಮತ್ತು ಗುರುವಿನ ಸಂಕೇತ. ಅದಕ್ಕಾಗಿಯೇ ಹಿರಿಯರು ಅದನ್ನು ಧರಿಸುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ಹೇಳುತ್ತಾರೆ. ತೋರು ಬೆರಳಿನಲ್ಲಿ ಧರಿಸುವುದರಿಂದ ಏಕಾಗ್ರತೆ ಹೆಚ್ಚಾಗುತ್ತದೆ, ಆದರೆ ಮಧ್ಯದ ಬೆರಳಿಗೆ ಧರಿಸುವುದು ಅಶುಭ ಎಂದು ಜ್ಯೋತಿಷಿಗಳು ಎಚ್ಚರಿಸುತ್ತಾರೆ. ನಿಮ್ಮ ರಾಶಿಚಕ್ರದ ಪ್ರಕಾರ ಯಾವ ಬೆರಳು ನಿಮಗೆ ಅದೃಷ್ಟವನ್ನು ತರುತ್ತದೆ? ಚಿನ್ನವನ್ನು ಧರಿಸಲು ಸರಿಯಾದ ಮಾರ್ಗ ಯಾವುದು ಎಂದು ಇಲ್ಲಿ ತಿಳಿದುಕೊಳ್ಳಿ.

ಜ್ಯೋತಿಷ್ಯದ ಪ್ರಕಾರ, ಚಿನ್ನವನ್ನು ಧರಿಸುವುದರಿಂದ ನಮ್ಮ ಮೇಲೆ ಸಕಾರಾತ್ಮಕ ಗ್ರಹಗಳ ಪ್ರಭಾವ ಉಂಟಾಗುತ್ತದೆ. ಪ್ರತಿ ಬೆರಳಿಗೆ ಚಿನ್ನವನ್ನು ಧರಿಸುವುದರಿಂದಾಗುವ ಫಲಿತಾಂಶಗಳನ್ನು ಇಲ್ಲಿ ತಿಳಿಯಿರಿ.

ತೋರುಬೆರಳು:

ಈ ಬೆರಳು ‘ಗುರು’ ಗ್ರಹದ ಚಿಹ್ನೆ. ನೀವು ಶಿಕ್ಷಣ, ವೃತ್ತಿ ಅಥವಾ ಆತ್ಮವಿಶ್ವಾಸದಲ್ಲಿ ಶ್ರೇಷ್ಠರಾಗಲು ಬಯಸಿದರೆ, ಈ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದು ಉತ್ತಮ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಉಂಗುರ ಬೆರಳು:

ಇದು ಸೂರ್ಯ ಮತ್ತು ಶುಕ್ರನ ಸ್ಥಾನ. ಈ ಬೆರಳಿಗೆ ಚಿನ್ನ ಧರಿಸುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ವಿವಾಹಿತ ಮಹಿಳೆಯರಿಗೆ, ಇದು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಮಧ್ಯದ ಬೆರಳು:

ಮಧ್ಯದ ಬೆರಳು ಶನಿ ಗ್ರಹಕ್ಕೆ ಸೇರಿದೆ. ಚಿನ್ನವು ಸೂರ್ಯನಿಗೆ ಸಂಬಂಧಿಸಿದ ಲೋಹವಾಗಿರುವುದರಿಂದ, ಈ ಬೆರಳಿನಲ್ಲಿ ಚಿನ್ನವನ್ನು ಧರಿಸುವುದರಿಂದ ಸೂರ್ಯ ಮತ್ತು ಶನಿಯ ನಡುವಿನ ದ್ವೇಷದಿಂದಾಗಿ ಜೀವನದಲ್ಲಿ ಅಡೆತಡೆಗಳು ಮತ್ತು ಸಂಘರ್ಷಗಳಿಗೆ ಕಾರಣವಾಗಬಹುದು. ಆದ್ದರಿಂದ ತಪ್ಪಿಯೂ ಈ ಬೆರಳಿಗೆ ಚಿನ್ನದ ಉಂಗುರು ಧರಿಸಬೇಡಿ.

ಯಾವಾಗ ಧರಿಸಬೇಕು?

ಅಧಿಪತಿ ಗುರುವಾಗಿರುವುದರಿಂದ, ಗುರುವಾರದಂದು ಚಿನ್ನ ಧರಿಸುವುದು ಅತ್ಯಂತ ಶುಭ. ಧರಿಸುವ ಮೊದಲು, ಹಸಿ ಹಾಲು ಅಥವಾ ಗಂಗಾ ಜಲದಿಂದ ಶುದ್ಧೀಕರಿಸಿ ಮತ್ತು ತ್ವರಿತ ಶುಭ ಫಲಿತಾಂಶಗಳನ್ನು ಪಡೆಯಲು ‘ಓಂ ಬೃಹಸ್ಪತಯೇ ನಮಃ’ ಎಂಬ ಮಂತ್ರವನ್ನು ಪಠಿಸಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದೇ ಒಂದು ಎಸೆತದಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ ಲಾರೆನ್ ಬೆಲ್

Source link

ಟಿವಿ9 ಬಿಗ್ ಇಂಪ್ಯಾಕ್ಟ್: ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ಸಿಕ್ತು ಸೂರು ಭಾಗ್ಯ! – Kannada News | TV9 Impact: Government Grants House to Specially Abled Athlete Prasad After Five Year Wait

ಬೆಂಗಳೂರು, ಜನವರಿ 10: ಪ್ಯಾರಾಲಿಂಪಿಕ್ ಕ್ರೀಡಾಪಟು ಪ್ರಸಾದ್ ಕುಟುಂಬವು ಐದು ವರ್ಷಗಳಿಂದ ಮನೆಗಾಗಿ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಟಿವಿ9 ವಾಹಿನಿಯು ಪ್ರಸಾದ್ ಅವರ ಕಷ್ಟವನ್ನು ಬೆಳಕಿಗೆ ತಂದ ಕೇವಲ 12 ಗಂಟೆಗಳಲ್ಲಿಯೇ ರಾಜೀವ್ ಗಾಂಧಿ ವಸತಿ ನಿಗಮದಿಂದ ಅವರಿಗೆ ಫ್ಲಾಟ್ ಮಂಜೂರಾಗಿದೆ. ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದರೂ ಪ್ರಸಾದ್ ಫ್ಲೋರ್‌ಬಾಲ್, ಬಾಸ್ಕೆಟ್‌ಬಾಲ್, ಸೈಕ್ಲಿಂಗ್‌ ಸೇರಿ ಹಲವು ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ತಂದೆ ರಾಮು ಅವರೊಂದಿಗೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬ, ಮನೆ ಬಾಡಿಗೆ ಕಟ್ಟಲೂ ಪರದಾಡುತ್ತಿತ್ತು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಒಂದು ಲಕ್ಷ ರೂಪಾಯಿ ಪಾವತಿಸಿದ್ದರೂ, ಬಿದರಹಳ್ಳಿಯ ಬಿ-ಬ್ಲಾಕ್ ಕಾಮಗಾರಿ ವಿಳಂಬದಿಂದ ಮನೆ ಮಂಜೂರಾಗಿರಲಿಲ್ಲ. ಟಿವಿ9 ನಿನ್ನೆ ಬೆಳಗ್ಗೆ 9 ಗಂಟೆಗೆ ಈ ಕುರಿತು ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಎಂ.ಡಿ ಪರಶುರಾಮ್ ಅವರು ಪ್ರಸಾದ್ ಅವರ ತಂದೆ ರಾಮುಗೆ ಬಿದರಹಳ್ಳಿ ಎ-ಬ್ಲಾಕ್‌ನಲ್ಲಿ 601ನೇ ಸಂಖ್ಯೆಯ ಫ್ಲಾಟ್ ಹಂಚಿಕೆ ಪತ್ರ ನೀಡಿದ್ದಾರೆ. ಮಹದೇವಪುರ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರ ಕೋಟಾದಲ್ಲಿ ಈ ಮನೆ ಮಂಜೂರಾಗಿದೆ. ಪ್ರಸಾದ್ ತಂದೆ ರಾಮು ಟಿವಿ9ಗೆ ಧನ್ಯವಾದ ಅರ್ಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ.

ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು ಶ್ರೀಮಂತರು ಎಂಬುದನ್ನು ನೀವೇ ಲೆಕ್ಕ ಹಾಕಿ. ವಿಶ್ವ ಶ್ರೀಮಂತ ಹೀರೋಗಳ ಪಟ್ಟಿಯಲ್ಲೂ ಶಾರುಖ್ ಖಾನ್ ಅವರಿಗೆ ಸ್ಥಾನ ಇದೆ. ಅನೇಕ ಖ್ಯಾತ ನಾಮರನ್ನು ಅವರು ಹಿಂದಿಕ್ಕುತ್ತಾರೆ.

ಎರಡನೇ ಸ್ಥಾನದಲ್ಲಿ ತೆಲುಗಿನ ಅಕ್ಕಿನೇನಿ ನಾಗಾರ್ಜುನ ಇದ್ದಾರೆ. ಇವರು ಮೊದಲಿನಿಂದಲೂ ಶ್ರೀಮಂತ ಕುಟುಂಬದ ಹಿನ್ನೆಲೆ ಹೊಂದಿರುವವರು. ಅವರ ಅಪ್ಪ ಮಾಡಿಟ್ಟು ಹೋದ ಆಸ್ತಿ ಇದೆ. ಅನೇಕ ಪ್ರಾಪರ್ಟಿ ಅವರ ಹೆಸರಲ್ಲಿ ಇದೆ. ಅವರ ಆಸ್ತಿ 5 ಸಾವಿರ ಕೋಟಿ ರೂಪಾಯಿ. ಮೂರನೇ ಸ್ಥಾನದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಇದ್ದಾರೆ. ಇವರ ಆಸ್ತಿ 3225 ಕೋಟಿ ರೂಪಾಯಿ ಆಸುಪಾಸಿನಲ್ಲಿದೆ.

ನಾಲ್ಕನೇ ಸ್ಥಾನದಲ್ಲಿ ಬಾಲಿವುಡ್ ನಟ ಹೃತಿಕ್ ರೋಷನ್ ಇದ್ದಾರೆ, ಅವರು ತಮ್ಮ ಸ್ಪೋರ್ಟ್ಸ್ ಬ್ರ್ಯಾಂಡ್ ಎಚ್​​ಆರ್​ಎಕ್ಸ್ ಮೂಲಕ ಸಾಕಷ್ಟು ದುಡಿಯುತ್ತಾರೆ. ಅವರ ಆಸ್ತಿ 3100 ಕೋಟಿ ರೂಪಾಯಿ. ಐದನೇ ಸ್ಥಾನದಲ್ಲಿ ಅಕ್ಷಯ್ ಕುಮಾರ್ ಇದ್ದಾರೆ. ಅವರ ಆಸ್ತಿ 2,250 ಕೋಟಿ ರೂಪಾಯಿ. ಆರನೇ ಸ್ಥಾನದಲ್ಲಿ ಆಮಿರ್ ಖಾನ್ ಇದ್ದಾರೆ. ಅವರು 1860 ಕೋಟಿ ರೂಪಾಯಿ ಒಡೆಯ.

ಇದನ್ನೂ ಓದಿ:  ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ

ಏಳನೇ ಸ್ಥಾನದಲ್ಲಿ ಚಿರಂಜೀವಿ ಇದ್ದಾರೆ. ಅವರ ಆಸ್ತಿ 1750 ಕೋಟಿ ರೂಪಾಯಿ, ಅಮಿತಾಭ್ ಅವರು 1680 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದ್ದು ಎಂಟನೇ ಸ್ಥಾನದಲ್ಲಿ ಇದ್ದಾರೆ. ವೆಂಕಟೇಶ್ (1650) ಹಾಗೂ ರಾಮ್ ಚರಣ್ (1630) ಅನುಕ್ರಮವಾಗಿ ಒಂಭತ್ತು ಹಾಗೂ ಹತ್ತನೇ ಸ್ಥಾನದಲ್ಲಿದ್ದಾರೆ. ಅನೇಕ ಸ್ಟಾರ್​​ಗಳ ಬಳಿ ಖಾಸಗಿ ವಿಮಾನ ಕೂಡ ಇದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ಮಾಡಿ.

Source link

World Hindi Day 2026: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | World Hindi Day 2026: Know the history and significance of World Hindi Day

ವಿವಿಧತೆಯಲ್ಲಿ ಏಕತೆಯ ನಾಡಾಗಿರುವ ಭಾರತದಲ್ಲಿ ಹಲವು ವಿಭಿನ್ನ ಸಂಸ್ಕೃತಿ, ಭಾಷೆ, ಲಿಪಿಗಳಿವೆ. ನಮ್ಮ ಕರ್ನಾಟಕದಲ್ಲಿ ಕನ್ನಡ ಭಾಷೆ ಮಾತನಾಡುವಂತೆ ದೇಶದ ಹೆಚ್ಚಿನ ಕಡೆ ಹಿಂದಿ (Hindi) ಭಾಷೆಯನ್ನೇ ಮಾತನಾಡುತ್ತಾರೆ. ಅಲ್ಲದೆ ಹಿಂದಿ ಪ್ರಪಂಚದಲ್ಲಿಯೇ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಹೌದು ಹಿಂದಿ ಭಾಷೆ ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಮಾರಿಷಸ್ ಮತ್ತು ಫಿಲಿಪೈನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಜನಪ್ರಿಯವಾಗಿದೆ. ಹಾಗಾಗಿ ಹಿಂದಿ ಭಾಷೆಯನ್ನು ವಿಶ್ವ ಭಾಷೆಯನ್ನಾಗಿ ಬೆಳೆಸುವ ಉದ್ದೇಶದಿಂದ ವಿಶ್ವ ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಯಾವಾಗ ಪ್ರಾರಂಭವಾಯಿತು ಎಂಬುದರ ಬಗ್ಗೆ ತಿಳಿಯಿರಿ.

ವಿಶ್ವ ಹಿಂದಿ ದಿನದ ಇತಿಹಾಸವೇನು?

ವಿಶ್ವ ಹಿಂದಿ ದಿನದ ಇತಿಹಾಸವು ತುಂಬಾ ಹಳೆಯದು. ಜನವರಿ 10, 1975 ರಂದು, ಮಹಾರಾಷ್ಟ್ರದ ನಾಗ್ಪುರದಲ್ಲಿ ಮೊದಲ ವಿಶ್ವ ಹಿಂದಿ ಸಮ್ಮೇಳನ ನಡೆಯಿತು. ಭಾರತ ಸೇರಿದಂತೆ ಹಲವು ದೇಶಗಳ ಹಿಂದಿ ವಿದ್ವಾಂಸರು, ಬರಹಗಾರರು ಮತ್ತು ಭಾಷಾ ಪ್ರೇಮಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮ್ಮೇಳನವು ಜಾಗತಿಕವಾಗಿ ಹಿಂದಿಗೆ ಸಂಘಟಿತ ವೇದಿಕೆಯನ್ನು ಒದಗಿಸಿತು. ವಿದೇಶಗಳಲ್ಲಿ ವಾಸಿಸುವ ಹಿಂದಿ ಭಾಷಿಕರನ್ನು ಒಗ್ಗೂಡಿಸುವುದು ಮತ್ತು ಹಿಂದಿಯ ಪ್ರಚಾರಕ್ಕಾಗಿ ಜಂಟಿ ಪ್ರಯತ್ನಗಳನ್ನು ಮಾಡುವುದು ಇದರ ಉದ್ದೇಶವಾಗಿತ್ತು. ಆನಂತರ 2006 ರಲ್ಲಿ, ಆಗಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಪ್ರತಿ ವರ್ಷ ಜನವರಿ 10 ಅನ್ನು “ವಿಶ್ವ ಹಿಂದಿ ದಿನ” ಎಂದು ಆಚರಿಸುವುದಾಗಿ ಘೋಷಿಸಿದರು. ಮತ್ತು  ವಿಶ್ವ ಹಿಂದಿ ದಿನವನ್ನು ಮೊದಲು ಭಾರತ ಸರ್ಕಾರವು 2006 ರಲ್ಲಿ ಅಧಿಕೃತವಾಗಿ ಆಚರಿಸಿತು. ಅಂದಿನಿಂದ ಪ್ರತಿವರ್ಷ ಜನವರಿ 10 ರಂದು ವಿಶ್ವ ಹಿಂದಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಪಕ್ಷಿಗಳಿಗೆ ಜೀವಿಸಲು ಸ್ವಚ್ಛಂದ ಪರಿಸರ ನಿರ್ಮಿಸೋಣ

ವಿಶ್ವ ಹಿಂದಿ ದಿನವನ್ನು ಆಚರಿಸುವ ಉದ್ದೇಶವೇನು?

  • ವಿಶ್ವಾದ್ಯಂತ ಹಿಂದಿ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅದನ್ನು ಅಂತರರಾಷ್ಟ್ರೀಯ ಭಾಷೆಯಾಗಿ ಸ್ಥಾಪಿಸುವುದು ಇದರ ಉದ್ದೇಶವಾಗಿದೆ.
  • ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಹಿಂದಿ ಬಳಕೆಯನ್ನು ಉತ್ತೇಜಿಸುವುದು.
  • ಶಿಕ್ಷಣ, ತಂತ್ರಜ್ಞಾನ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ಹಿಂದಿ ಭಾಷೆಯನ್ನು ಬಲಪಡಿಸುವುದು.
  • ಬಾಲಿವುಡ್, ಸಾಹಿತ್ಯ ಮತ್ತು ಮಾಧ್ಯಮಗಳ ಮೂಲಕ ಜಾಗತಿಕ ಹಿಂದಿ ಚಿತ್ರಣವನ್ನು ಉತ್ತೇಜಿಸುವುದು.
  • ಹಿಂದಿಯೇತರ ಭಾಷಿಕರಿಗೆ ಹಿಂದಿ ಕಲಿಯಲು ಪ್ರೋತ್ಸಾಹ ನೀಡುವುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: 2026 ಈ ಅಕ್ಷರದಿಂದ ಪ್ರಾರಂಭವಾಗುವವರಿಗೆ ಅಪಾರ ಅದೃಷ್ಟ, ಶ್ರೀಮಂತರಾಗುವ ಯೋಗ! – Kannada News | Horoscope 2026 : Unprecedented Fortune for Names Starting with S

ಜ್ಯೋತಿಷ್ಯದ ಪ್ರಕಾರ, 2026ರ ವರ್ಷವು ‘S’ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಅಪಾರ ಅದೃಷ್ಟವನ್ನು ಹೊತ್ತು ತರಲಿದೆ. ಈ ವರ್ಷವು ಸಾಕಷ್ಟು ಶುಭ ಫಲಗಳನ್ನು, ಸಕಾರಾತ್ಮಕ ತಿರುವುಗಳನ್ನು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಬಹಳ ಹೆಚ್ಚಿವೆ. ‘S’ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು, ಮತ್ತು ಈ ಅಕ್ಷರದಿಂದ ಪ್ರಾರಂಭವಾಗುವ ಯಾವುದೇ ಕಂಪೆನಿಗಳಿಗೂ ಕೂಡ ವರ್ಷಪೂರ್ತಿ ಅದೃಷ್ಟ ಇರಲಿದೆ. ಇದು ಯಾವುದೇ ನಿರ್ದಿಷ್ಟ ಮಾಸಕ್ಕೆ ಸೀಮಿತವಾಗಿಲ್ಲದೆ, ವರ್ಷದ ಉದ್ದಕ್ಕೂ ವ್ಯಾಪಿಸಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ಗುರೂಜಿಯವರು ಹೇಳುವಂತೆ, ಈ ಅದೃಷ್ಟದ ಹಿಂದಿನ ಪ್ರಮುಖ ಕಾರಣವೆಂದರೆ ಗುರು, ಶನಿ ಮತ್ತು ಕೇತು ಗ್ರಹಗಳ ಅನುಗ್ರಹ. ಧರ್ಮ, ಕರ್ಮ ಮತ್ತು ಮೋಕ್ಷಕ್ಕೆ ಕಾರಕರಾದ ಈ ಗ್ರಹಗಳ ಶುಭ ಫಲಗಳು ಎಸ್ ಅಕ್ಷರದವರಿಗೆ ದೊರೆಯಲಿವೆ. ಇದರ ಪರಿಣಾಮವಾಗಿ, ವರ್ಷದ ಸುಮಾರು 80 ಪ್ರತಿಶತ ಭಾಗವು ಶುಭಕರವಾಗಿರುತ್ತದೆ. ಮನಸ್ಸನ್ನು ಶುದ್ಧವಾಗಿಟ್ಟುಕೊಂಡು, ನಿರ್ಮಲ ಆಲೋಚನೆಗಳೊಂದಿಗೆ ಕಾರ್ಯಗಳನ್ನು ನಿರ್ವಹಿಸಿದರೆ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಭಗವದ್ಗೀತೆಯಲ್ಲಿ ಹೇಳಿದಂತೆ, ಕೆಲಸವನ್ನು ನಿಷ್ಠೆಯಿಂದ ಮಾಡಿ, ಫಲಿತಾಂಶದ ಬಗ್ಗೆ ಚಿಂತಿಸಬೇಡಿ ಎಂಬ ತತ್ವ ಇಲ್ಲಿ ಅನ್ವಯಿಸುತ್ತದೆ.

2026 ರಲ್ಲಿ, ಎಸ್ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳಿರುವವರಿಗೆ ಹಲವು ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆಗಳು ಕಂಡುಬರಲಿವೆ. ವೈವಾಹಿಕ ಜೀವನದಲ್ಲಿ ಉತ್ತಮ ಹೊಂದಾಣಿಕೆ ಮತ್ತು ಸಕಾರಾತ್ಮಕ ಬದಲಾವಣೆಗಳು ನಿರೀಕ್ಷಿತವಾಗಿವೆ. ಆರ್ಥಿಕ ಸ್ಥಿತಿಯಲ್ಲಿ ಗಣನೀಯ ಪ್ರಗತಿಯಾಗಲಿದ್ದು, ಹೂಡಿಕೆಗಳಿಂದ ಉತ್ತಮ ಲಾಭ ಸಿಗುವ ಸಾಧ್ಯತೆಯಿದೆ. ಹಳೆಯ ಬಾಕಿಗಳು ವಸೂಲಿಯಾಗಲಿದ್ದು, ಹಿಂದಿನ ಸಾಲಗಳು ಕೂಡ ತೀರುತ್ತವೆ. ವೃತ್ತಿ ಜೀವನವು ಅತ್ಯುತ್ತಮವಾಗಿರಲಿದ್ದು, ಕಾರ್ಮಿಕರಿಗೆ ಉದ್ಯೋಗದಲ್ಲಿ ಬಡ್ತಿ, ಉದ್ಯಮಿಗಳಿಗೆ ಹೊಸ ಉದ್ಯಮಗಳನ್ನು ಪ್ರಾರಂಭಿಸುವ ಅಥವಾ ವಿಸ್ತರಿಸುವ ಅವಕಾಶಗಳು ದೊರೆಯಲಿವೆ. ರಾಜಕೀಯ ವ್ಯಕ್ತಿಗಳಿಗೆ ಸ್ಥಾನಮಾನ, ಮಂತ್ರಿ ಪದವಿ, ಚೇರ್ಮನ್ ಅಥವಾ ಕಾರ್ಪೊರೇಟರ್ ಆಗುವಂತಹ ಯೋಗಗಳು ಇರಬಹುದು.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಆರೋಗ್ಯದ ವಿಷಯದಲ್ಲಿಯೂ ಶುಭ ಫಲಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಅನಾರೋಗ್ಯಗಳು ಸುಧಾರಣೆಯಾಗಲಿವೆ. ಶನಿ ಗ್ರಹದ ಪ್ರಭಾವದಿಂದ ಆರೋಗ್ಯವು ಮತ್ತಷ್ಟು ಉತ್ತಮಗೊಳ್ಳಲಿದೆ. ಹೊಸ ಆಲೋಚನೆಗಳು, ಧೈರ್ಯದ ಹೆಚ್ಚಳ ಮತ್ತು ದೃಢ ನಿರ್ಧಾರಗಳನ್ನು ಕೈಗೊಳ್ಳುವ ಯೋಗವು ಈ ವರ್ಷದ ಪ್ರಮುಖ ಲಕ್ಷಣವಾಗಿದೆ. “ಧೈರ್ಯಂ ಸರ್ವತ್ರ ಸಾಧನಂ” ಎಂಬಂತೆ, ಧೈರ್ಯದಿಂದ ಮುನ್ನುಗ್ಗಿದವರಿಗೆ ಗೌರವ ಮತ್ತು ಫಲಿತಾಂಶಗಳು ಸಿಗುತ್ತವೆ.

ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶಗಳು ದೊರೆಯಲಿವೆ. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಜೂನ್ 2ರ ವರೆಗೆ ಒಂದು ರೀತಿಯ ಬಲವಿದ್ದರೆ, ಜೂನ್ 2ರ ನಂತರ ಮತ್ತಷ್ಟು ಬಲ ಸಿಗಲಿದೆ. ಮನೆ, ಸೈಟ್, ಫ್ಲಾಟ್ ಖರೀದಿಸುವ ಯೋಗವಿರಲಿದೆ. ಪ್ರೇಮ ವ್ಯವಹಾರಗಳಲ್ಲಿ ಬಾಂಧವ್ಯಗಳು ಗಟ್ಟಿಯಾಗಲಿವೆ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಅವಕಾಶಗಳು ಹೆಚ್ಚಾಗುತ್ತವೆ. ವಿದೇಶ ಪ್ರವಾಸ, ವಿದೇಶಗಳಲ್ಲಿ ಉದ್ಯೋಗ ದೊರೆಯುವ ಸಾಧ್ಯತೆಗಳು ಇವೆ. ಪಾಲುದಾರಿಕೆಯಿಂದ ಒಳಿತಾಗಲಿದ್ದು, ಗುರಿ ಸಾಧನೆಗೆ ತಾಳ್ಮೆ ಮತ್ತು ಸಹನೆ ವೃದ್ಧಿಯಾಗುತ್ತದೆ. ಒಟ್ಟಾರೆ, 2026ರ ವರ್ಷವು ‘S’ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳಿರುವ ಪ್ರತಿಯೊಬ್ಬರಿಗೂ ಅದೃಷ್ಟವೋ ಅದೃಷ್ಟ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್!  – Kannada News | Bengaluru Pay and Park: GBA Expands to 23 CBD Roads for Smoother Parking

ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್!

ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಈಗಾಗಲೇ ಸಿಬಿಡಿ ವ್ಯಾಪ್ತಿಯ 23 ರಸ್ತೆಗಳನ್ನು ಈ ಯೋಜನೆಯಡಿ ತಂದಿರುವ ಬೆಂಗಳೂರು ಕೇಂದ್ರ ನಗರ ನಿಗಮವು, ಈ ರಸ್ತೆಗಳಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಖಾಸಗಿ ನಿರ್ವಾಹಕರನ್ನು ನೇಮಿಸುವ ಸಲುವಾಗಿ ಟೆಂಡರ್ ಆಹ್ವಾನಿಸಿದೆ.

ಯಾವ ಯಾವ ರಸ್ತೆಗಳಲ್ಲಿರಲಿದೆ ಈ ಯೋಜನೆ?

ಪೇ-ಅಂಡ್-ಪಾರ್ಕ್ ಯೋಜನೆಗೆ ಆಯ್ಕೆಗೊಂಡಿರುವ ರಸ್ತೆಗಳಲ್ಲಿ ಕಮರ್ಷಿಯಲ್ ಸ್ಟ್ರೀಟ್, ಕೇಂಬ್ರಿಡ್ಜ್ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ಮಗ್ರತ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ಕ್ರೆಸೆಂಟ್ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಸಂಪಿಗೆ ರಸ್ತೆ ಸೇರಿದಂತೆ ಒಟ್ಟು 23 ರಸ್ತೆಗಳು ಸೇರಿವೆ.

ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು, ಕೇಂದ್ರ ನಗರ ನಿಗಮ ಆರಂಭಿಸಿರುವ ಈ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಇತರ ನಿಗಮಗಳೂ ಅನುಸರಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಕೇಂದ್ರ ನಗರ ನಿಗಮ ಆಹ್ವಾನಿಸಿದ ಟೆಂಡರ್‌ಗಳ ಬಿಡ್‌ಗಳು ಶೀಘ್ರದಲ್ಲೇ ತೆರೆಯಲಿದ್ದು, ಪ್ರತಿಕ್ರಿಯೆಯ ಆಧಾರದಲ್ಲಿ ಇತರ ನಿಗಮಗಳಲ್ಲೂ ಇದೇ ಮಾದರಿಯ ವ್ಯವಸ್ಥೆ ಜಾರಿಗೆ ತರಲಾಗುತ್ತದೆ ಎಂದರು.

ಆನ್‌ಲೈನ್‌ನಲ್ಲಿ ಪಾರ್ಕಿಂಗ್ ಸ್ಲಾಟ್‌ ಬುಕಿಂಗ್

ಈ ಯೋಜನೆಯಿಂದ ರಸ್ತೆಬದಿ ಪಾರ್ಕಿಂಗ್ ಅಸ್ತವ್ಯಸ್ತತೆ ಕಡಿಮೆಯಾಗುವ ಜೊತೆಗೆ ನಗರ ನಿಗಮಗಳಿಗೆ ಹೆಚ್ಚುವರಿ ಆದಾಯವೂ ಲಭ್ಯವಾಗಲಿದೆ. ಅಲ್ಲದೆ, ಪಾರ್ಕಿಂಗ್ ಸ್ಥಳಗಳನ್ನು ವರ್ಚುವಲ್ ರೀತಿಯಲ್ಲಿ ಗುರುತಿಸುವ ಯೋಜನೆಯಿದ್ದು, ನಾಗರಿಕರು ವೆಬ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಪಾರ್ಕಿಂಗ್ ಸ್ಲಾಟ್‌ಗಳನ್ನು ಕಾಯ್ದಿರಿಸಬಹುದಾಗಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಜಿಬಿಎ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

WPL 2026: ಗೆಲುವಿನ ಬೆನ್ನಲ್ಲೇ RCB ತಂಡಕ್ಕೆ ಬಿಗ್ ಶಾಕ್

Source link

RCB ಅಂದ್ರೆನೇ ಥ್ರಿಲ್ಲರ್… ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು? – Kannada News | RCB are known to play thrillers: Smriti Mandhana

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ನ ಮೊದಲ ಪಂದ್ಯವೇ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ರೋಚಕ ಹೋರಾಟದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು. 155 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ನಾಟ್ ಸ್ಕೀವರ್ ಬ್ರಂಟ್ ಎಸೆದ ಅಂತಿಮ ಓವರ್​ನಲ್ಲಿ 6,4,6,4 ಬಾರಿಸುವ ಮೂಲಕ ನಡಿನ್ ಡಿ ಕ್ಲರ್ಕ್​ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 3 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು.

ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ, ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯವೇ ರೋಮಾಂಚಕರಿಯಾಗಿತ್ತು. ಈ ರೋಚಕ ಪಂದ್ಯದಲ್ಲಿ ಗೆದ್ದಿರುವುದು ಖುಷಿ ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂದ್ರೆನೇ ಥ್ರಿಲ್ಲರ್. ಆರ್​ಸಿಬಿ ತಂಡ ರೋಚಕ ಪಂದ್ಯಗಳಿಗೆ ಹೆಸರುವಾಸಿ. ಇದೀಗ ರೋಚಕವಾಗಿ ಪಂದ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದಕ್ಕೆ ತುಂಬಾ ಸಂತೋಷವಾಯಿತು.

ಈ ಪಂದ್ಯದ ಗೆಲುವಿನ ಶ್ರೇಯಸ್ಸು ನಡಿನ್ ಡಿ ಕ್ಲರ್ಕ್​ಗೆ ಸಲ್ಲಬೇಕು. ಏಕೆಂದರೆ ಅವರು ಅದ್ಭುತವಾಗಿ ಆಡಿದರು. ಹಾಗೆಯೇ ಉಳಿದ ಆಟಗಾರ್ತಿಯರೂ ಕೂಡ ಈ ಪಂದ್ಯದಲ್ಲಿ ಸಾಕಷ್ಟು ಸಕಾರಾತ್ಮಕವಾಗಿದ್ದರು. ಈ ಪಾಸಿಟಿವ್ ಗೆಲುವು – ಸೋಲುಗಳ ಮೇಲೆ ಪರಿಣಾಮ ಬೀರುವುದಿಲ್ಲ.

ಈ ಸಕರಾತ್ಮಕತೆಯ ನಡುವೆ ನಡಿನ್ ಡಿ ಕ್ಲರ್ಕ್ ಪ್ರದರ್ಶನ ಅದ್ಭುತ. ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ನಮಗಾಗಿ ಎಲ್ಲಾ ಜವಾಬ್ದಾರಿ ನಿಭಾಯಿಸಿದರು. ಇದಕ್ಕೂ ಮುನ್ನ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಅವರು ಟೀಮ್ ಇಂಡಿಯಾ ವಿರುದ್ಧ ಆಡಿದ ಇನಿಂಗ್ಸ್ ನಾವು ನೋಡಿದ್ದೇವೆ.  ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೂಡ ಅಂತಹದ್ದೇ ಇನಿಂಗ್ಸ್ ಆಡಿದ್ದಾರೆ.

ಇದನ್ನೂ ಓದಿ: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ನಡಿನ್ ಡಿ ಕ್ಲರ್ಕ್​

ಒಟ್ಟಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಪಂದ್ಯದಲ್ಲೇ ಜಯ ಸಾಧಿಸಿರುವುದು ಖುಷಿ ನೀಡಿದೆ. ಈ ಪಾಸಿಟಿವ್ ವೈಬ್ ಮುಂದಿನ ಪಂದ್ಯಗಳಲ್ಲೂ ಮುಂದುವರೆಯುವ ನಿರೀಕ್ಷೆಯಿದೆ ಎಂದು ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದಾರೆ.

Source link

ನಂಜನಗೂಡು: ಯುವಕನ ಬಳಿ ‘ನನ್ನ ಕರ್ಕೊಂಡೋಗಿ ಮದುವೆಯಾಗು’ ಎನ್ನುತ್ತಿದ್ದ ಅಪ್ರಾಪ್ತೆ ನಿಗೂಢ ಸಾವು – Kannada News | Mysuru Minors Tragic Death: Boyfriend or Parents Under Scrutiny in Nanjangud Case

ಮೈಸೂರು, ಜನವರಿ 10: ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತೆ ದಿವ್ಯಾ ಎಂಬಾಕೆ ನಂಜನಗೂಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದ್ದು, ಬಾಲಕಿಯ ಸಾವು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆಕೆಯ ಸಾವಿಗೆ ಪ್ರಿಯಕರ ಆದಿತ್ಯನೋ ಅಥವಾ ಪೋಷಕರೋ ಕಾರಣ ಎಂಬ ಗೊಂದಲ ಸೃಷ್ಟಿಯಾಗಿದೆ. ದಿವ್ಯಾ, ಆದಿತ್ಯ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರು ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಸುತ್ತಾಡಿದ್ದು, ಅವರ ಸೆಲ್ಫಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ದಿವ್ಯಾ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಯುವಕನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಒಂದು ಕಡೆ ಆರೋಪ ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ಆಕೆಯ ಪೋಷಕರೇ ಸಾವಿಗೆ ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ.

ದಿವ್ಯಾ ಮತ್ತು ಆದಿತ್ಯ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್‌ ಸಹ ಬಹಿರಂಗವಾಗಿದ್ದು, ಅದರಲ್ಲಿ ದಿವ್ಯಾ ತನ್ನ ಭಯವನ್ನು ವ್ಯಕ್ತಪಡಿಸಿದ್ದು, ಆದಿತ್ಯನನ್ನು ಮದುವೆಯಾಗುವಂತೆ ಕೇಳಿದ್ದಾಳೆ. ದಿವ್ಯಾ ತಂದೆ ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆದಿತ್ಯ ಹೇಳಿದ್ದು, ತಾನು ಯಾವುದೇ ಕಿರುಕುಳ ನೀಡಿಲ್ಲ ಎಂಬುದಕ್ಕೆ ಸಾಕ್ಷಿ ಒದಗಿಸಿದ್ದೇನೆ ಎಂದು ತಿಳಿಸಿದ್ದಾನೆ. ಪೊಲೀಸರ ತನಿಖೆಯಿಂದ ಈ ಸಾವಿನ ಅಸಲಿಯತ್ತು ಹೊರಬರಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link