Headlines

nagaraj11081993

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್​ ಆಗಿದೆ….

Read More

ಟ್ರಂಪ್ ಆಡಳಿತದ ಕಠಿಣ ನಿಲುವು: ರಷ್ಯಾ ಮತ್ತು ಇರಾನ್ ತೈಲ ವಿನಾಯಿತಿ ರದ್ದು, ಭಾರತದ ಮುಂದಿನ ನಡೆಯೇನು? – Kannada News | US Signals End to Waiver, Puts Spotlight on India’s Russian Oil Purchases

ವಾಷಿಂಗ್ಟನ್, ಏಪ್ರಿಲ್ 16: ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿ ಅಮೆರಿಕ, ರಷ್ಯಾ ಮತ್ತು ಇರಾನ್(Iran) ವಿರುದ್ಧ ತನ್ನ ‘ಆರ್ಥಿಕ ಅಸ್ತ್ರ’ವನ್ನು ಮತ್ತಷ್ಟು ಹರಿತಗೊಳಿಸಿದೆ. ಮಾರ್ಚ್ 11 ರ ಮೊದಲು ಸಮುದ್ರ ಮಾರ್ಗದಲ್ಲಿದ್ದ ತೈಲವನ್ನು ವಿಲೇವಾರಿ ಮಾಡಲು ನೀಡಲಾಗಿದ್ದ ವಿಶೇಷ ಪರವಾನಗಿಯನ್ನು ನವೀಕರಿಸದಿರಲು ಅಮೆರಿಕ ನಿರ್ಧರಿಸಿದೆ. ಇದರೊಂದಿಗೆ, ಇಂಧನಕ್ಕಾಗಿ ಈ ಎರಡು ದೇಶಗಳನ್ನು ಅವಲಂಬಿಸಿರುವ ರಾಷ್ಟ್ರಗಳಿಗೆ ಅಮೆರಿಕ ಕಠಿಣ ಎಚ್ಚರಿಕೆ ನೀಡಿದೆ. ಭಾರತವು ವಿಶ್ವದ ಅತಿದೊಡ್ಡ ಕಚ್ಚಾ ತೈಲ ಆಮದುದಾರರಲ್ಲಿ ಒಂದು. ಇತ್ತೀಚಿನ ಸಡಿಲಿಕೆಯ ಅವಧಿಯಲ್ಲಿ ಭಾರತವು ರಷ್ಯಾದಿಂದ…

Read More

‘ರಾಮಾಯಣ’ ಚಿತ್ರದ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿ ತಪ್ಪು ಮಾಡಿದ್ರಾ ಯಶ್? – Kannada News | Ramayana Movie: Yash Clarifies No Ram Ravan Meet in Part 1. Is it a Spoiler?

‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣನ ಪಾತ್ರ ಮಾಡುತ್ತಿದ್ದು, ರಣಬೀರ್ ಕಪೂರ್ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರದ್ದು ಸೀತೆಯ ಪಾತ್ರ. ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮೊದಲೇ ಯಶ್ ಅವರು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ರೀತಿ ಸಂದರ್ಶನ ನೀಡುವಾಗ ಅವರು ಒಂದು ಪ್ರಮುಖ ವಿಷಯ ರಿವೀಲ್ ಮಾಡಿದರೇ ಎನ್ನುವ ವಿಷಯ ಚರ್ಚೆಗೆ ಕಾರಣ ಆಗಿದೆ. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ. ಯಶ್ ಅವರು ‘ಸಿನಿಮಾಕಾನ್…

Read More

SSLC ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ನೀಡಲು ಹೊರಟಿದ್ದ ಸರ್ಕಾರಕ್ಕೆ ತೀವ್ರ ಮುಖಭಂಗ: ಅಂಕ ನೀಡಲು ಹೈಕೋರ್ಟ್ ಆದೇಶ – Kannada News | Karnataka High Court Orders Marks for SSLC Hindi and 3rd language: Major Setback for Congress Government Grading Policy

SSLC ಪರೀಕ್ಷೆಯಲ್ಲಿ ಗ್ರೆಡಿಂಗ್ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶImage Credit source: tv9 ಬೆಂಗಳೂರು, ಏಪ್ರಿಲ್ 16: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ತೃತೀಯ ಭಾಷೆಗಳಿಗೆ (ಮುಖ್ಯವಾಗಿ ಹಿಂದಿಯನ್ನು ಗಮನದಲ್ಲಿಟ್ಟುಕೊಂಡು) ಕೇವಲ ಗ್ರೇಡ್ (Grading System) ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಹಿಂದಿ (Hindi) ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಮಹತ್ವದ ನಿರ್ದೇಶನ ನೀಡಿದೆ….

Read More

RCB vs LSG: ಪಂತ್ ‘ಫಂಕಿ’ ಎಂಟ್ರಿ: ವಿಡಿಯೋ ವೈರಲ್

IPL 2026: ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿಯಲ್ಲಿ ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರ ಎಂಟ್ರಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯಿತು. ಸಾಮಾನ್ಯವಾಗಿ ಆಟಗಾರರು ಮೈದಾನದ ಪ್ರವೇಶ ದ್ವಾರದ ಮೂಲಕ ಕ್ರೀಡಾಂಗಣಕ್ಕೆ ಬರುತ್ತಾರೆ. ಆದರೆ, ರಿಷಭ್ ಪಂತ್ ಅವರು ಪಂದ್ಯದ ಆರಂಭದಲ್ಲಿ ಅನಿರೀಕ್ಷಿತವಾಗಿ ಮೈದಾನದ ಬದಿಯಲ್ಲಿದ್ದ ಜಾಹೀರಾತು ಬೋರ್ಡ್‌ಗಳನ್ನು ಜಂಪ್​ ಮಾಡಿಕೊಂಡು ಮೈದಾನದೊಳಗೆ ನುಗ್ಗಿದರು. ಪಂತ್ ಅವರ ಈ ‘ಫಂಕಿ’ ಶೈಲಿಯ ಎಂಟ್ರಿ…

Read More

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಬಳ್ಳಾಪುರದ 8 ಮಂದಿ ಭಕ್ತರು ಸಾವು – Kannada News | Tragic Road Accident Near Mantralaya: 8 Devotees from Chikkaballapur Killed in Bolero Tanker Collision

ರಾಯಚೂರು, ಏಪ್ರಿಲ್ 16: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ವಿವರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ…

Read More

ಮಹಿಳಾ ನೌಕರರಿಗೆ ಗುಡ್ ನ್ಯೂಸ್: ತಿಂಗಳಿಗೆ ಒಂದು ದಿನ ‘ಋತುಸ್ರಾವ ರಜೆ’ ಕಡ್ಡಾಯ; ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ – Kannada News | Menstrual Leave in Karnataka: HC Orders Mandatory Implementation for All Women

ಬೆಂಗಳೂರು, ಏ.16: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ (Menstrual Leave) ನೀತಿಯನ್ನು ರಾಜ್ಯ ಸರ್ಕಾರವು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ…

Read More

ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್ – Kannada News | Yash’s ‘Toxic’ Movie Global Ambition: Star Shines at CinemaCon 2026

ರಾಕಿಂಗ್ ಸ್ಟಾರ್ ಯಶ್ ಅವರ (Yash) ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್​​ನಲ್ಲೂ ಶೂಟ್​ ಆಗಿದೆ. ಈ ಸಿನಿಮಾ ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಇದರ ಜೊತೆಗೆ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲೂ ಯಶ್ ನಟಿಸಿದ್ದಾರೆ. ಈಗ ಯಶ್ ಅವರು ಅಮೆರಿಕದ ಲಾಸ್ ಎಂಜಲೀಸ್​​ಗೆ ತೆರಳಿದ್ದಾರೆ. ಅಲ್ಲಿ ನಡೆದ ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಇಂಗ್ಲಿಷ್ ರಿಪೋರ್ಟರ್ ಒಬ್ಬರು ಯಶ್ ಬಳಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಟಾಕ್ಸಿಕ್’…

Read More

ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತೀ ಹೆಚ್ಚು ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 49 ರನ್​ ಬಾರಿಸಿದ್ದರು. ಈ 49 ರನ್​ಗಳೊಂದಿಗೆ ಕಿಂಗ್…

Read More

ನಾರಿ ಶಕ್ತಿ ಕಾರ್ಯಕ್ರಮದಲ್ಲೇ ವಿದ್ಯಾರ್ಥಿನಿಗೆ ಅಪಮಾನ, ತೋಳಿಲ್ಲದ ಉಡುಪು ಧರಸಿದ್ದಕ್ಕೆ ಸಚಿವರಿದ್ದ ವೇದಿಕೆಗೆ ಬರದಂತೆ ತಡೆದ ಅಧಿಕಾರಿಗಳು – Kannada News | Nari Shakti Event Hypocrisy: DU Student Barred For Sleeveless Attire, Sparks Dress Code Debate

ನವದೆಹಲಿ, ಏಪ್ರಿಲ್ 16: ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ವೇದಿಕೆಯಲ್ಲೇ ವಿದ್ಯಾರ್ಥಿನಿಯೊಬ್ಬಳ ಉಡುಪಿನ ಕಾರಣಕ್ಕೆ ಆಕೆಗೆ ಅವಮಾನ ಮಾಡಿರುವ ಘಟನೆಯೊಂದು ದೆಹಲಿ ವಿಶ್ವವಿದ್ಯಾಲಯದಲ್ಲಿ (DU) ನಡೆದಿದೆ. ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ (SRCC) ಆಯೋಜಿಸಲಾಗಿದ್ದ ನಾರಿ ಶಕ್ತಿ(Nari Shakti) ಆಧಾರಿತ ಅಣಕು ಸಂಸತ್ತಿನ ಅಧಿವೇಶನದಲ್ಲಿ ಈ ಕಹಿ ಘಟನೆ ನಡೆದಿದೆ. ನಡೆದಿದ್ದೇನು? ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿನಿ ಸಾರಾ ಶರ್ಮಾ, ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸನ್ಮಾನಿಸಲು ಆಹ್ವಾನಿಸಲಾಗಿತ್ತು. ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು…

Read More