ಭಕ್ತಿ, ಜನಸಂಖ್ಯೆ, ದಾಸೋಹದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ
ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿತು. ಅಜ್ಜನ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಲಕ್ಷಾಂತರ ಭಕ್ತರ ಹರ್ಷೋದ್ಗಾರ, ಮೈಸೂರು ಪಾಕ್-ಪ್ರಸಾದದ ಘಮಲು 2026ರ ಮಹಾರಥೋತ್ಸವದ ಈ ಸಂಭ್ರಮಕ್ಕೆ ಈ ಬಾರಿ ವಿಶೇಷ ಮೆರುಗು ತಂದಿದೆ. ಜಾತ್ರೆ ಎಂದರೆ ಅದು ಗವಿಸಿದ್ದಪ್ಪನ ಜಾತ್ರೆ ಎಂಬ ಮಾತನ್ನು ಈ ಬಾರಿಯೂ ಭಕ್ತರು ಸಾಬೀತುಪಡಿಸಿದ್ದಾರೆ. 2026ರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಉತ್ತರ ಪ್ರದೇಶದ ಕುಂಭಮೇಳದಂತೆ ಜನಸಾಗರವೇ ಹರಿದು…