All posts by nagaraj11081993

ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್ – Kannada News | Viral Video Shows School children Risking Lives In Overcrowded Vehicle In Kushinagar

ಖುಷಿನಗರ, ಜನವರಿ 3: ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪದ್ರೌನಾದಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿಯಾಗಿ ಶಾಲಾ ವ್ಯಾನ್​​ನಲ್ಲಿ ತುಂಬಿರುವ ವಿಡಿಯೋವೊಂದು ವೈರಲ್ (Viral Video) ಆಗಿದೆ. ಎಸ್​ಯುವಿಯಲ್ಲಿ ಕೆಲವರು ಹಿಂಭಾಗದಿಂದ ನಿಂತಿರುವುದನ್ನು ಅಥವಾ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಸುರಕ್ಷತೆ, ಶಾಲಾ ಸಾರಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಈ ವಿಡಿಯೋ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: 5 ಪಂದ್ಯಗಳಲ್ಲಿ 4 ಶತಕ ಸಿಡಿಸಿರುವ ಕನ್ನಡಿಗನಿಗೆ ಮತ್ತೆ ಅನ್ಯಾಯ – Kannada News | Devdutt Padikkal’s ODI Snub: Stellar Form Ignored by Team India?

ಕೆಎಲ್ ರಾಹುಲ್ (KL Rahul) ಬಳಿಕ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಸೂಚನೆ ನೀಡಿರುವ ಕರ್ನಾಟಕದ ಬ್ಯಾಟ್ಸ್‌ಮನ್ ಎಂದರೇ ಅದು ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ (Devdutt Padikkal). ಪಡಿಕ್ಕಲ್ ಇದುವರೆಗೆ ಟೀಂ ಇಂಡಿಯಾ ಪರ 2 ಟೆಸ್ಟ್ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಆದರೆ ಇತರೆ ಆಟಗಾರರಿಗೆ ಹೋಲಿಸಿಕೊಂಡರೆ ಪಡಿಕ್ಕಲ್​ಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶಗಳು ಸಿಕ್ಕಿಲ್ಲ. ರಾಹುಲ್​ರಂತೆ ಏಕದಿನ ಮಾದರಿಗೆ ಹೇಳಿ ಮಾಡಿಸಿದ ಕೌಶಲ್ಯ ಹೊಂದಿರುವ ಪಡಿಕ್ಕಲ್​ಗೆ ಭಾರತ ಏಕದಿನ ತಂಡದಲ್ಲಿ ಆಡುವ ಅವಕಾಶ ಇದುವರೆಗೂ ಸಿಕ್ಕಿಲ್ಲ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಪಡಿಕ್ಕಲ್ ಆಯ್ಕೆಯ ಬಗ್ಗೆ ಮಾಜಿ ಕ್ರಿಕೆಟಿಗರು ಕೂಡ ಭವಿಷ್ಯ ನುಡಿದಿದ್ದರು. ಆದರೆ ಕಿವೀಸ್ ವಿರುದ್ಧದ ಸರಣಿಗೂ ಅವರನ್ನು ಕಡೆಗಣಿಸಲಾಗಿದೆ.

ಲಿಸ್ಟ್​ ಎ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ

ಲಿಸ್ಟ್​ ಎ ಕ್ರಿಕೆಟ್​ನಲ್ಲಿ ಇದುವರೆಗೆ 38 ಪಂದ್ಯಗಳನ್ನಾಡಿರುವ ಪಡಿಕ್ಕಲ್ ಬರೋಬ್ಬರಿ 13 ಶತಕ ಹಾಗೂ 12 ಅರ್ಧಶತಕಗಳ ಸಹಿತ 2500 ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಇದರ ಜೊತೆಗೆ ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ರನ್​ಗಳ ಶಿಖರ ಕಟ್ಟಿರುವ ಪಡಿಕ್ಕಲ್ ಈ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿರುವ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

5 ಪಂದ್ಯಗಳಲ್ಲಿ 4 ಶತಕ

ಮಾತ್ರವಲ್ಲದೆ ಈ ಟೂರ್ನಿಯಲ್ಲಿ ಇದುವರೆಗೆ ನಡೆದಿರುವ ಐದು ಪಂದ್ಯಗಳಲ್ಲಿ ಪಡಿಕ್ಕಲ್ 4 ಶತಕಗಳನ್ನು ಬಾರಿಸಿ ಅತಿ ಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಜಾರ್ಖಂಡ್ ವಿರುದ್ಧದ ಟೂರ್ನಿಯ ಮೊದಲ ಪಂದ್ಯದಲ್ಲಿ 147 ರನ್​ಗಳ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್ ತಂಡದ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ಆ ಬಳಿಕ ನಡೆದ ಕೇರಳ ವಿರುದ್ಧದ ಪಂದ್ಯದಲ್ಲಿ 124 ರನ್ ಹಾಗೂ ಪಾಂಡಿಚೇರಿ ವಿರುದ್ಧದ ಪಂದ್ಯದಲ್ಲಿ 113 ರನ್ ಮತ್ತು ಈಗ ತ್ರಿಪುರ ವಿರುದ್ಧದ ಪಂದ್ಯದಲ್ಲಿ 108 ರನ್​ ಬಾರಿಸುವ ಮೂಲಕ ಪಡಿಕ್ಕಲ್ ತಂಡವನ್ನು ಅಜೇಯ ಓಟದತ್ತ ಮುನ್ನಡೆಸಿದ್ದಾರೆ. ಹೀಗಾಗಿ ಕಿವೀಸ್ ವಿರುದ್ಧದ ಸರಣಿಗೆ ಪಡಿಕ್ಕಲ್ ಅವರನ್ನು ಆಯ್ಕೆಗೆ ಪರಿಗಣಿಸಬೇಕೆಂಬ ಕೂಗು ಜೋರಾಗಿತ್ತು. ಆದರೆ ಬಿಸಿಸಿಐ ಮಾತ್ರ ಕನ್ನಡಿಗನ ಪ್ರದರ್ಶನಕ್ಕೆ ಯಾವುದೇ ಮನ್ನಣೆ ನೀಡಿಲ್ಲ.

ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ?

ದೇವದತ್ ಆಯ್ಕೆ ಸಾಧ್ಯವಿಲ್ಲ ಏಕೆ?

ಭವಿಷ್ಯದಲ್ಲಿ ದೇವದತ್ ಪಡಿಕ್ಕಲ್ ಭಾರತ ಏಕದಿನ ತಂಡದಲ್ಲಿ ಖಾಯಂ ಸ್ಥಾನ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಧ್ಯಕ್ಕೆ ಪಡಿಕ್ಕಲ್ ಏಕದಿನ ತಂಡದಲ್ಲಿ ಅವಕಾಶ ಸಿಗುವುದು ಅನುಮಾನವಾಗಿದೆ. ಏಕೆಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಹೀಗಾಗಿ ಈ ವಿಶ್ವಕಪ್​ಗೆ ವರ್ಷಗಳ ಹಿಂದೆಯೇ ಬಿಸಿಸಿಐ ತನ್ನ ತಯಾರಿಯನ್ನು ಆರಂಭಿಸಿದ್ದು, ಯಾವ ಆಟಗಾರನನ್ನು ಯಾವ ಸ್ಥಾನದಲ್ಲಿ ಆಡಿಸಬೇಕು ಎಂಬುದನ್ನು ಈಗಾಗಲೇ ನಿರ್ಧರಿಸಿದೆ. ಅಲ್ಲದೆ 2027 ರ ವಿಶ್ವಕಪ್‌ಗೆ ಯಾವ ತಂಡವನ್ನು ಕಣಕ್ಕಿಳಿಸಬೇಕು ಎಂಬುದನ್ನು ಬಿಸಿಸಿಐ ಸಿದ್ಧಪಡಿಸಿ ಆಗಿದೆ. ಹೀಗಾಗಿ ದೇಶಿ ಟೂರ್ನಿಯಲ್ಲಿ ಮಿಂಚುತ್ತಿರುವ ಪಡಿಕ್ಕಲ್​ಗೆ ಇನ್ನೊಂದು ವರ್ಷ ಏಕದಿನ ತಂಡದಲ್ಲಿ ಅವಕಾಶ ಸಿಗುವುದು ಕಷ್ಟ. ಆದರೆ ಏಕದಿನ ವಿಶ್ವಕಪ್ ಮುಗಿದ ಬಳಿಕ ಕೊಹ್ಲಿ, ರೋಹಿತ್ ಸೇರಿದಂತೆ ಕೆಲವು ಆಟಗಾರರು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಲಿದ್ದು, ಆ ಬಳಿಕವಷ್ಟೇ ಪಡಿಕ್ಕಲ್​ರಂತೆಯೇ ಇನ್ನು ಕೆಲವು ಆಟಗಾರರು ಏಕದಿನ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೋಗಿಲು ನಿವಾಸಿಗಳ ಪಟ್ಟಿ ಸಿದ್ಧ: ಲೇಔಟ್​ಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – Kannada News | Kogilu Layout Row: Kogilu residents List handover to GBA; BJP fact finding committee visits layout

ಬೆಂಗಳೂರು, ಜನವರಿ 03: ಕೋಗಿಲು (Kogilu Layout) ಅಕ್ರಮ ಒತ್ತುವರಿ ಜಟಾಪಟಿ ರಾಜಕಾರಣದಲ್ಲಿ ಮಾತಿನ ಸಮರವನ್ನೇ ಸೃಷ್ಟಿಸಿದೆ. ಮನೆ ಕೊಡ್ತೀವಿ ಎಂದಿರುವ ಸರ್ಕಾರದ ನಡೆಯನ್ನ ಪ್ರಶ್ನಿಸಿ ಬಿಜೆಪಿ (bjp) ಸಮರ ಸಾರಿದೆ. ರಾಜ್ಯ ಸರ್ಕಾರದ ನಿರ್ಧಾರವೇ ಅಕ್ರಮ ಅಂತ ಆರೋಪಿಸ್ತಿದೆ. ಕೋಗಿಲು ಲೇಔಟ್‌ ತೆರವು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದ್ದು, ಇದರ ನಡುವೆ ಕಂದಾಯ ಇಲಾಖೆ ಸಂತ್ರಸ್ತರ ಪಟ್ಟಿ ರೆಡಿ ಮಾಡಿದೆ.

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡ ಅರ್ಹ ಫಲಾನುಭವಿಗಳ ಸಂಪೂರ್ಣ ಮಾಹಿತಿ ಇವತ್ತು GBA ಕೈ ಸೇರಿದೆ. ಕಂದಾಯ ಇಲಾಖೆ ಹಾಗೂ ಉತ್ತರ ನಗರ ಪಾಲಿಕೆ ಅಧಿಕಾರಿಗಳು ನಡೆಸಿದ ಸರ್ವೆಯ ಅಂತಿಮ ವರದಿ ಈಗ ಅಧಿಕಾರಿಗಳ ಟೇಬಲ್ ಮೇಲಿದೆ.

ವರದಿಯಲ್ಲಿ ಇರೋದೇನು?

ಹೊಸ ಫಕೀರ್ ಲೇಔಟ್ ಮತ್ತು ವಾಸೀಂ ಲೇಔಟ್ ನಿರಾಶ್ರಿತರ ಬಗ್ಗೆ ಮಾಹಿತಿಯನ್ನ ಕಲೆಹಾಕಲಾಗಿದೆ. ಕಂದಾಯ ಇಲಾಖೆ ಮತ್ತು ಉತ್ತರ ನಗರ ಪಾಲಿಕೆಯಿಂದ ವರದಿ ಸಿದ್ಧಪಡಿಸಲಾಗಿದೆ. ಒಟ್ಟು 167 ಮನೆಗಳನ್ನು ಗುರುತಿಸಿ ಜಿಬಿಎಗೆ ವರದಿ ಸಲ್ಲಿಕೆ ಮಾಡಲಾಗಿದೆ. ಈ ಮಾಹಿತಿ ಅನುಸಾರ, 167 ಮನೆಗಳ ತೆರವು ಹಿನ್ನೆಲೆ 188 ಕುಟುಂಬಗಳು ನಿರಾಶ್ರಿತವಾಗಿವೆ. 188 ಕುಟುಂಬಗಳ 1,007 ಸದಸ್ಯರು ಅಧಿಕೃತ ನಿರಾಶ್ರಿತರು ಅಂತಾ ಹೇಳಲಾಗಿದೆ. 188 ಕುಟುಂಬಗಳ ಮುಖ್ಯಸ್ಥರು, 425 ಜನ ವಯಸ್ಕರು, 304 ಮಕ್ಕಳು, 156 ಮುಸ್ಲಿಂ ಕುಟುಂಬಗಳು, 31 ಹಿಂದೂ, 1 ಕ್ರಿಶ್ಚಿಯನ್ ಕುಟುಂಬ ನಿರಾಶ್ರಿತವಾಗಿದೆ ಅಂತಾ ವರದಿಯಲ್ಲಿ ಹೇಳಲಾಗಿದೆಯಂತೆ.

ಆಯುಕ್ತ ಎಂ ಮಹೇಶ್ವರ ರಾವ್ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ GBA ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಮಾತನಾಡಿ, ಮತ್ತೊಂದು ಸುತ್ತಿನ ಪರಿಶೀಲನೆ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮದ ಕಚೇರಿಗೆ ಕಮಲಪಡೆ ಭೇಟಿ

ಈ ಮಧ್ಯೆ ಇವತ್ತು ವಿಪಕ್ಷ ನಾಯಕ ಆರ್​. ಅಶೋಕ್​ ರಾಜೀವ್ ಗಾಂಧಿ ವಸತಿ ‌ನಿಗಮದ ಕಚೇರಿಗೆ ಭೇಟಿ ನೀಡಿದರು. ಕೆ.ಜಿ.ರಸ್ತೆಯ ಕಾವೇರಿ ಭವನದ ಕಚೇರಿಗೆ ಬಂದು ಎಂ.ಡಿ ಪರಶುರಾಮ್ ಬಳಿ ಮಾಹಿತಿ ಪಡೆದರು. ಕೋಗಿಲು ಅಕ್ರಮ ವಾಸಿಗಳಿಗೆ ಯಾವ ಮಾನದಂಡ ಅನುಸರಿಸಲಾಗುತ್ತಿದೆ ಅಂತಾ ಪ್ರಶ್ನಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಕಾನೂನು ಗಾಳಿಗೆ ತೂರಿದರೆ ಹುಷಾರ್ ಅಂತಾ ಎಚ್ಚರಿಕೆ ನೀಡಿದ್ದಾರೆ. ಆ ಬಳಿಕ ಮಾತಾಡಿದ ರಾಜೀವ್ ಗಾಂಧಿ ವಸತಿ ನಿಗಮದ MD ಪರಶುರಾಮ್, ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಕಳುಹಿಸಿಕೊಡುವ ಜನರಿಗೆ ಮಾತ್ರ ನಾವು ಮನೆ ಕೊಡೋಕೆ ಸಾಧ್ಯ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ

ಮತ್ತೊಂದು ಕಡೆ ಕೋಗಿಲು ಲೇಔಟ್​ಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ಕೊಟ್ಟಿತ್ತು. ಈ ವೇಳೆ ಕೆಲವರ ಆಧಾರ್ ಕಾರ್ಡ್ ಅನ್ನು ಪರಿಶೀಲಿಸಿದರು, ಆಗ ಮಹಿಳೆಯೊಬ್ಬರು ಡಿ.ಜೆ‌. ಹಳ್ಳಿ ವಿಳಾಸದ ಆಧಾರ್ ಕಾರ್ಡ್ ತೋರಿಸಿದರು. ಬಿಜೆಪಿ ನಿಯೋಗ ಮರುಪ್ರಶ್ನೆ ಕೇಳಿದರೆ, ನಾವು ಇಲ್ಲಿ 5 ವರ್ಷದಿಂದ ಇದ್ದೀವಿ ಅಂತಾ ಇಲ್ಲಿನ ನಿವಾಸಿಗಳು ಹೇಳುತ್ತಿದ್ದಾರೆ.

‘ಮನೆಗೆ ಮಾರಿ, ಊರಿಗೆ ಉಪಕಾರಿ’: ಪ್ರಹ್ಲಾದ್ ಜೋಶಿ

ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮನೆಗೆ ಮಾರಿ, ಅತಿಕ್ರಮಣಕಾರರಿಗೆ ಉಪಕಾರಿ. ಬೆಂಗಳೂರಿನಲ್ಲಿ ಬಾಂಗ್ಲಾ ಅಕ್ರಮ ನುಸುಳುಕೋರರು ಇದ್ದಾರೆ. ಎಸ್​ಐಆರ್​ಗೂ ವಿರೋಧ ಮಾಡಲು ಇದೇ ಕಾರಣ. ನಕಲಿ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ. ನಾಳೆ ಕುಮಾರಕೃಪಾದಲ್ಲಿ ಟೆಂಟ್ ಹಾಕಿದ್ರೆ ಏನ್ ಮಾಡೋದು. ಹಿಂದೆ ದೆಹಲಿಯಿಂದ ಕಾಂಗ್ರೆಸ್​ ಹೈಕಮಾಂಡ್ ನಡೆಯುತ್ತಿತ್ತು. ಈಗ ಕಾಂಗ್ರೆಸ್​ ಹೈಕಮಾಂಡ್ ಕೇರಳದಿಂದ ನಡೆಯುತ್ತಿದೆ. ಅಲ್ಲಿ ಹಲವು ವರ್ಷಗಳಿಂದ ಇದ್ದರು ಎಂಬುದಕ್ಕೆ ದಾಖಲೆ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. ಮತ್ತೊಂದ್ಕಡೆ ಎಲ್ಲರಿಗೂ ಒಂದೇ ನ್ಯಾಯ ಕೊಡಿ ಎಂದು ಎಸ್.ಆರ್. ವಿಶ್ವನಾಥ್ ಕೂಡ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಎರಡು ತಿಂಗಳಿಂದ ಬೀದಿಗೆ ಬಿದ್ದಿರುವ ಕುಟುಂಬಗಳು; ಕೋಗಿಲು ಲೇಔಟ್‌ಗೆ ತಕ್ಷಣ ಪರಿಹಾರ, KG ಹಳ್ಳಿಗೆ ಅನ್ಯಾಯವೇ?

ಕೋಗಿಲು ನಿರಾಶ್ರಿತರಿಗೆ ಕೊಡಬೇಕು ಅಂತಿರೋ 1 BHK ಫ್ಲಾಟ್ ಮೌಲ್ಯ 13.2 ಲಕ್ಷ ರೂಪಾಯಿ ನಿಗದಿಯಾಗಿದೆ. ಆದರೆ ಸರ್ಕಾರ 11 ಲಕ್ಷಕ್ಕೆ ಫ್ಲಾಟ್ ಗಳನ್ನ ನೀಡುವ ಸಾಧ್ಯತೆಯಿದೆ ಅಂತಾ ಹೇಳಲಾಗುತ್ತಿದೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:25 pm, Sat, 3 January 26

Source link

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ದಿಬ್ಬದ ಮಣ್ಣು ಅಗೆದಾಗ ನಡೆಯಿತು ಅಚ್ಚರಿ! – Kannada News | Mystery Unfolds in Andhra Pradesh’s kadapa as Golds Idols found After following Boys Dream

ಕಡಪ, ಜನವರಿ 3: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಒಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಕೊನರಾಜುಪಲ್ಲಿಯಲ್ಲಿ ಒಬ್ಬ ಹುಡುಗನ ಕನಸಿನಲ್ಲಿ ದೇವರು ಕಾಣಿಸಿಕೊಂಡಿದ್ದಾರೆ. ದೇವರು ಆ ಹುಡುಗನಿಗೆ ತಾನು ಹಳ್ಳಿಯ ಹೊರವಲಯದಲ್ಲಿರುವ ಬೆಟ್ಟದ ಕೆಳಗೆ ಇರುವ ದಿಬ್ಬದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ. ಈ ವಿಷಯವನ್ನು ಮರುದಿನ ಆ ಹುಡುಗ ತನ್ನ ಗ್ರಾಮಸ್ಥರಿಗೆ ಹೇಳಿದ್ದಾನೆ. ಇದು ದೇವರ ಸಂದೇಶವೆಂದು ಆತನ ಮಾತು ನಂಬಿದ ಇಡೀ ಹಳ್ಳಿಯವರು ದಿಬ್ಬವನ್ನು ಅಗೆಯಲು ಹೋದರು. ಆಗ ಅಲ್ಲಿ 3 ಪಂಚಲೋಹದ ವಿಗ್ರಹಗಳು ಪತ್ತೆಯಾದವು. ನರಸಿಂಹ ಸ್ವಾಮಿ, ಹನುಮಾನ್ ಮತ್ತು ಲಕ್ಷ್ಮಿ ದೇವಿಯ ವಿಗ್ರಹಗಳು ಅಲ್ಲಿ ಕಂಡುಬಂದವು. ಅಲ್ಲಿ ಇನ್ನೂ ಎರಡು ವಿಗ್ರಹಗಳು ಇವೆ ಎಂದು ದೇವರು ಹೇಳಿದ್ದಾರೆ ಎಂದು ಆ ಹುಡುಗ ಹೇಳಿದ್ದಾನೆ. ಅದನ್ನು ಇನ್ನೂ ಪತ್ತೆಹಚ್ಚಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಿಮ್ಮ ತಮ್ಮ ಮಾತನಾಡಿದ್ದು ಸರಿಯಲ್ಲ, ನಿಮ್ಮನ್ನು ಹೊರಗೆ ಏಕೆ ಕಳಿಸಿಲ್ಲ?’; ಕಾವ್ಯಾಗೆ ಸುದೀಪ್ ಪ್ರಶ್ನೆ – Kannada News | Kavya Shaiva And Her Brother Karthik did Wrong Says Kichcha Sudeep

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫ್ಯಾಮಿಲಿ ವೀಕ್​​ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಅದರಲ್ಲಿ ಕಾವ್ಯಾ ಕುಟುಂಬ ಹಾಗೂ ಅವರ ಸಹೋದರ ಕಾರ್ತಿಕ್ ಮಾಡಿದ ಎಡವಟ್ಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಕಾವ್ಯಾಗೆ ಹೊರಗಿನ ವಿಷಯಗಳನ್ನು ಹೇಳಿದ್ದರು ಅವರ ಸಹೋದರ. ಈ ಕಾರಣಕ್ಕೆ ಅವರ ಕುಟುಂಬದವರನ್ನು ಹೊರಕ್ಕೆ ಕಳುಹಿಸಲಾಯಿತು. ಅವರ ಕುಟುಂಬ ಮಾತನಾಡಿದ್ದು ಸರಿ ಅಲ್ಲ ಎಂದು ಬಿಗ್ ಬಾಸ್ ಅಭಿಪ್ರಾಯಪಟ್ಟರು. ಸುದೀಪ್ ಕೂಡ ಹೀಗೆಯೇ ಅಂದರು.

ಕಳೆದ ವಾರ ಸುದೀಪ್ ಅವರು ‘ಮಾರ್ಕ್​’ ಸಿನಿಮಾದ ರಿಲೀಸ್ ಕಾರಣಕ್ಕೆ ಬರಲೇ ಇಲ್ಲ. ಅವರು ಈ ವಾರ ಆ ವಿಷಯವನ್ನು ಚರ್ಚೆ ಮಾಡಿದರು. ಅವರು ಕಾವ್ಯಾಗೆ ಪ್ರಶ್ನೆ ಮಾಡಿದರು. ‘ನಿಮ್ಮನ್ನು ಹೊರಗೆ ಏಕೆ ಕಳುಹಿಸಿಲ್ಲ ಎಂಬುದೇ ನನ್ನ ಪ್ರಶ್ನೆ’ ಎಂದಿದ್ದಾರೆ ಸುದೀಪ್.

‘ಬಿಗ್ ಬಾಸ್ ಅನೇಕ ಬಾರಿ ವಾರ್ನ್ ಮಾಡುತ್ತಾ ಇದ್ದರು. ನಂತರ ಕಾಲ್ ತೆಗೆದುಕೊಂಡರು. ನೀವು ನಿಯಮ ಮೀರಿದ್ದಿರಿ. ಅದು ಸರಿ ಅಲ್ಲ. ನಿಮ್ಮ ತಮ್ಮ ಮಾತನಾಡಿದ್ದು ಸರಿ ಅಲ್ಲ. ನೀವು ಸೀಸನ್ ಇಡೀ ಬ್ಯಾಲೆನ್ಸ್ಡ್​ ಆಗಿ ಮಾತನಾಡುತ್ತಾ ಬಂದವರು.ಈಗ ಹೀಗೆ ಮಾಡಿದ್ದು ಎಷ್ಟು ಸರಿ’ ಎಂದು ಸುದೀಪ್ ಕೇಳಿದರು.

‘ಯಾರೂ ಮಾತನಾಡಕೂಡದು ಎಂದು ಕುಟುಂಬದವರಿಗೆ ಹೇಳಿ ಕಳಿಸಿದ್ದೆವು. ಎಲ್ಲ ಕುಟುಂಬದವರೂ ಹಿಂಟ್ ಕೊಡೋದಾಗಿದ್ರೆ ಈ ಸೀಸನ್ ಎಲ್ಲಿ ಹೋಗುತ್ತೆ? ನಿಮ್ಮನ್ನು ಹೊರಗೆ ಕರೆದಿಲ್ಲ. ಅದೇ ನನಗೆ ಆಶ್ಚರ್ಯ ಆಗಿದ್ದು. ಈ ಸೀಸನ್ ಬಿಗ್ ಬಾಸ್ ಅಷ್ಟು ಗಂಭೀರವಾಗಿ ಹೋಗಿಲ್ಲ. ಪ್ರೀತಿಯಿಂದ ಬೈಕೋತಾ ಇದೀರಾ, ಹೊಡ್ಕೋತಾ ಇದ್ರಿ. ಇದಕ್ಕೆ ಬಿಗ್ ಬಾಸ್ ಮಧ್ಯ ಪ್ರವೇಶಿಸಿಲ್ಲ’ ಎಂದರು ಸುದೀಪ್.

ಇದನ್ನೂ ಓದಿ: ಕ್ಯಾಪ್ಟನ್ಸಿ ನಂಗೇ ಕೊಡಿ ಎಂದು ಬಿಗ್ ಬಾಸ್ ಬಳಿ ಹಠ ಹಿಡಿದ ಅಶ್ವಿನಿ; ಇದೆಂಥಾ ಲಾಜಿಕ್?

‘ಹಿಂಟ್ ಕೊಟ್ಟು ಹೋದಮೇಲೆ ಅದನ್ನು ಮರಳಿ ಪಡೆಯೋಕೆ ಆಗಲ್ಲ. ನಿಮ್ಮ ಮನಸ್ಸಿನ ಒಳಗೆ ಹೋಗಿ ಅಳಿಸೋಕೆ ಆಗಲ್ಲ. ಡ್ಯಾಮೇಜ್ ಮಾಡಿಯಾಗಿದೆ’ ಎಂದು ಸುದೀಪ್ ಬೇಸರ ಹೊರಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs NZ: ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೂವರಿಗೆ ಅನ್ಯಾಯ, ಒಬ್ಬರ ವೃತ್ತಿಜೀವನ ಅಂತ್ಯ – Kannada News | India Squad for NZ ODIs: Gaikwad Dropped, Iyer Returns Amidst Controversial Selections

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡಿದ್ದ ತಂಡದಲ್ಲಿದ್ದ ಆಟಗಾರರಿಗೆ ಈ ಸರಣಿಯಲ್ಲಿ ಆಡಲು ಅವಕಾಶ ನೀಡಲಾಗಿದೆ. ಆದಾಗ್ಯೂ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಕೆಲವರಿಗೆ ಅವಕಾಶ ನೀಡುವ ಸಲುವಾಗಿ ಕೆಲವರಿಗೆ ತಂಡದಿಂದ ಗೇಟ್​ಪಾಸ್ ನೀಡಲಾಗಿದೆ.

Source link

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ – Kannada News | Karnataka BJP Leader N Ravikumar expressed angry on Bellary Banner Riots

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆಯ (Bellary Riots) ವಿರುದ್ಧ ಬಿಜೆಪಿ ನಾಯಕ ಎನ್​. ರವಿಕುಮಾರ್ (N Ravikumar) ಆಕ್ರೋಶ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೂಂಡಾ ರಾಜ್ಯ ಆಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಬೇಕು. ನಾವು ಸಿಬಿಐ ತನಿಖೆಗೆ ಆಗ್ರಹಿಸುತ್ತೇವೆ. ಸಿಬಿಐಗೆ ಕೊಡಲು ಆಗದಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದ ತನಿಖೆ ನಡೆಸಲಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಕೋಗಿಲು ಲೇಔಟ್​ ಧ್ವಂಸ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕೊಡುತ್ತೇವೆ ಎಂದು ಹೇಳುತ್ತಾರೆ. ಈಗಾಗಲೇ ಅರ್ಜಿ ಹಾಕಿರುವವರಿಗೆ ಮನೆಯೇ ಕೊಟ್ಟಿಲ್ಲ. ತುಂಬಾ ಅನುಭವಿ ಸಿಎಂ ನೀವು. ದೇವರಾಜ ಅರಸು ಅವರ ದಾಖಲೆ ಮುರಿಯಲು ಹೊರಟಿದ್ದೀರಿ ಎಂದು ಎನ್. ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಇವಿಎಂ ಕುರಿತ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ 5 ಸಾವಿರಕ್ಕೂ ಹೆಚ್ಚು ಜನರನ್ನು ಮಾತಾಡಿಸಿ ಸಮೀಕ್ಷೆ ಮಾಡಲಾಗಿತ್ತು. ಶೇ. 84ರಷ್ಟು ಜನ ಇವಿಎಂ ಪರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಈ ವರದಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗ ಉಂಟುಮಾಡಿದೆ. ಹೀಗಾಗಿ, ಈಗ ಸಮೀಕ್ಷೆಯನ್ನೇ ಸರ್ಕಾರ ಡಿಲೀಟ್ ಮಾಡಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ – Kannada News | Here is the detail about legendary actor Vajramuni

ವಜ್ರಮುನಿ (Vajramuni) ಅವರು ಕನ್ನಡ ಚಿತ್ರರಂಗದ ಲಿಜೆಂಡರಿ ನಟ. ನೂರಾರು ಸಿನಿಮಾಗಳಲ್ಲಿ ಖಳನಟನಾಗಿ ಅಬ್ಬರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವಾರು ಅದ್ಭುತ ಸಿನಿಮಾಗಳನ್ನು, ಪಾತ್ರಗಳನ್ನು ನೀಡಿದ್ದಾರೆ. ವಜ್ರಮುನಿ ಅವರು ನಿಧನರಾಗಿ 20 ವರ್ಷಗಳಾಗಿವೆ. ಹಲವು ಸಿನಿಮಾಗಳಲ್ಲಿ ಅಬ್ಬರಿಸಿರುವ ವಜ್ರಮುನಿ ಅವರು ಕೊನೆಯ ದಿನಗಳು ಬಹಳ ಕಷ್ಟಕರವಾಗಿತ್ತು, ಕರುಣಾಜನಕವಾಗಿತ್ತು. ವಜ್ರಮುನಿ ಅವರ ವೈಯಕ್ತಿಕ ಜೀವನ ಹೇಗಿತ್ತು? ಅವರ ಜೀವನದ ಕೊನೆಯ ದಿನಗಳು ಹೇಗಿದ್ದವು? ಮಾಹಿತಿ ಇಲ್ಲಿ ತಿಳಿಯಿರಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Wolf Moon: ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್ – Kannada News | Wolf Moon 2026 First supermoon of the year witnessed in Guwahati

ಗುವಾಹಟಿ, ಜನವರಿ 3: ವುಲ್ಫ್ ಮೂನ್ (Wolf Moon) ಎಂದು ಕರೆಯಲ್ಪಡುವ 2026ರ ಮೊದಲ ಸೂಪರ್ ಮೂನ್ ಇಂದು ಭಾರತದ ಕೋಲ್ಕತ್ತಾ ಮತ್ತು ಲಕ್ನೋ, ಗುವಾಹಟಿ ಸೇರಿದಂತೆ ಹಲವಾರು ನಗರಗಳಲ್ಲಿ ಕಂಡುಬಂದಿತು. ಗುವಾಹಟಿಯ (Guwahati) ಆಕಾಶದಲ್ಲಿ ಕಂಡುಬಂದ ಸೂಪರ್ ಮೂನ್ ವಿಡಿಯೋ ಇಲ್ಲಿದೆ. ಈ ವೇಳೆ ಚಂದ್ರನು ಸರಾಸರಿ ಹುಣ್ಣಿಮೆಗಿಂತ ಶೇ. 30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸಿಕೊಂಡಿದ್ದನು. ಸೂರ್ಯಾಸ್ತದ ನಂತರ ಸ್ವಲ್ಪ ಸಮಯದ ನಂತರ ಈ ದೃಶ್ಯವು ಗೋಚರಿಸಿದೆ.

ಇದು ವುಲ್ಫ್ ಮೂನ್. 2026ರ ವರ್ಷದ ಮೊದಲ ಹುಣ್ಣಿಮೆ. ಖಗೋಳಶಾಸ್ತ್ರಜ್ಞರು ಇದನ್ನು ಸೂಪರ್‌ ಮೂನ್ ಎಂದು ಕರೆಯುತ್ತಾರೆ. ಏಕೆಂದರೆ ಚಂದ್ರನು ಸಾಮಾನ್ಯಕ್ಕಿಂತ ಭೂಮಿಗೆ ಹತ್ತಿರದಲ್ಲಿರುತ್ತಾನೆ. ಇದು ಸಂಭವಿಸಿದಾಗ ಚಂದ್ರನು ಸಾಮಾನ್ಯ ಹುಣ್ಣಿಮೆಗಿಂತ ಶೇ. 30ರಷ್ಟು ಪ್ರಕಾಶಮಾನವಾಗಿ ಕಾಣಿಸಿಕೊಳ್ಳುತ್ತಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಬಾಲಕಿಗೆ ಕಿರುಕುಳ – Kannada News | Hubballi: Three Minor Boys Assault Minor Girl; Minor girl molested by minor boys

ಹುಬ್ಬಳ್ಳಿ, ಜನವರಿ 03: ನಗರದಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ (Assaulted) ಮತ್ತು ಕೊಲೆ ಘಟನೆ ನಂತರ ನಡೆದ ಎನಕೌಂಟರ್ ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಇದೇ ಹುಬ್ಬಳ್ಳಿಯಲ್ಲಿ (hubballi) ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಇನ್ನೊಂದೆಡೆ ಶಾಲಾ ಬಾಲಕಿಗೆ ಅಪ್ರಾಪ್ತರು ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಕೂಡ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳ ಆರೋಪಿಗಳೆಲ್ಲಾ ಅಪ್ರಾಪ್ತರೇ ಆಗಿದ್ದು, ಹುಬ್ಬಳ್ಳಿ ಜನರನ್ನು ಬೆಚ್ಚಿಬೀಳಿಸಿದೆ.

ನಡೆದದ್ದೇನು?

ಹೌದು ಕಳೆದ ವರ್ಷವಷ್ಟೇ ಹುಬ್ಬಳ್ಳಿಯಲ್ಲಿ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಬಿಹಾರ್ ಮೂಲದ ವ್ಯಕ್ತಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ. ನಂತರ ಆರೋಪಿಯನ್ನು ಎನಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಿಂದ ಹುಬ್ಬಳ್ಳಿ ಮಾತ್ರವಲ್ಲ, ಇಡೀ ರಾಜ್ಯದ ಜನರು ಬೆಚ್ಚಿಬಿದ್ದಿದ್ದರು. ಆದರೆ ಇದೀಗ ಮತ್ತೆ ಹುಬ್ಬಳ್ಳಿಯ ಜನರು ಬೆಚ್ಚಿಬಿದ್ದಿದ್ದಾರೆ. ಯಾಕಂದ್ರೆ ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಹುಬ್ಬಳ್ಳಿ ನಗರದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದೊಂದು ಘಟನೆ ನಡೆದಿದೆ. ಒಂದೇ ಏರಿಯಾದಲ್ಲಿ ವಾಸವಾಗಿರುವ ಬಾಲಕಿ ಮತ್ತು ಮೂವರು ಅಪ್ರಾಪ್ತ ಬಾಲಕರು ಪರಿಚಿತರೇ. ಓರ್ವ ಬಾಲಕನ ಮನೆಯಲ್ಲಿ ಯಾರು ಇಲ್ಲದೇ ಇದ್ದಾಗ, ಬಾಲಕಿಯನ್ನು ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ. ನಂತರ ಅದನ್ನ ವಿಡಿಯೋ ಮಾಡಿಟ್ಟುಕೊಂಡಿದ್ದ. ಆತ ತನ್ನ ಇನ್ನೊಬ್ಬ ಸ್ನೇಹಿತನಿಗೆ ಹೇಳಿದ್ದ. ಆತ ಮಾರನೇ ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಜೊತೆಗೆ ತನ್ನ ಮತ್ತೊಬ್ಬ ಸ್ನೇಹಿತನಿಗೆ ಹೇಳಿದ್ದಾನೆ. ಆತ ಕೂಡ ಬಾಲಕಿಗೆ ಬೆದರಿಕೆ ಹಾಕಿ ಮತ್ತೊಂದು ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಅಚ್ಯಾಚಾರ ಮಾಡಿದ್ದಾನೆ.

ಮೂವರು ದುರುಳರು ವಿಡಿಯೋ ಇಟ್ಟುಕೊಂಡು ಬಾಲಕಿಗೆ ಹೆದರಿಸಿದ್ದಾರೆ. ಹೀಗಾಗಿ ಬಾಲಕಿ, ತನ್ನ ಮೇಲೆ ಅತ್ಯಾಚಾರ ನಡೆದ್ರು ಮನೆಯವರಿಗೆ ಈ ಬಗ್ಗೆ ಹೇಳಿರಲಿಲ್ಲ. ಆದರೆ ನಿನ್ನೆ ಬಾಲಕಿಗೆ ಹೊಟ್ಟೆ ನೋವು ಸೇರಿದಂತೆ ಕೆಲ ಭಾಗಗಳಲ್ಲಿ ನೋವು ಕಾಣಿಸಿಕೊಂಡಾಗ, ತಾಯಿ ವಿಚಾರಿಸಿದಾಗ ಬಾಲಕಿ ತನ್ನ ಮೇಲೆ ನಡೆದಿರೋ ಅತ್ಯಾಚಾರ ಬಗ್ಗೆ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಇಂದು ಬಾಲಕಿ ಮತ್ತು ಬಾಲಕಿಯ ತಾಯಿ ಶಹರ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಇನ್ನು ಮೂವರು ಆರೋಪಿಗಳು ಕೂಡ ಹದಿನಾಲ್ಕರಿಂದ ಹದಿನೈದು ವರ್ಷದವರಾಗಿದ್ದು, ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಾರಂತೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಶಹರ ಠಾಣೆಯ ಪೊಲೀಸರು ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಬಾಲಕಿ ಗುಣಮುಖಳಾಗಿದ್ದಾಳೆ.

ಅಪ್ರಾಪ್ತ ಬಾಲಕಿ ಚುಡಾಯಿಸಿದ ವಿದ್ಯಾರ್ಥಿಗಳು 

ಒಂದಡೇ ಮೂವರು ಅಪ್ರಾಪ್ತ ಬಾಲಕರು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಇಂದು ಶಹರ ಠಾಣೆಯಲ್ಲಿ ದಾಖಲಾಗಿದ್ದರೆ, ಇಂದು ಹುಬ್ಬಳ್ಳಿ ನಗರದ ಅಶೋಕ ನಗರ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ನಗರದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ನಿನ್ನೆ ಶಾಲಾ ವಾರ್ಷಿಕೋತ್ಸವ ಮುಗಿಸಿಕೊಂಡು ಮನೆಗೆ ಹೋಗುವಾಗ, ಅದೇ ಶಾಲೆಯ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚುಡಾಯಿಸಿದ್ದಾರೆ. ಈ ಬಗ್ಗೆ ಕೇಳಿದ್ದಕ್ಕೆ ಬಾಲಕಿಗೆ ಕಪಾಳಕ್ಕೆ ಹೊಡೆದಿದ್ದರಂತೆ. ಹೀಗಾಗಿ ಬಾಲಕಿ ತನ್ನ ಹೆತ್ತವರನ್ನು ಕರೆಸಿದ್ದಾಳೆ.

ಬಾಲಕಿ ಹೆತ್ತವರು ಹಲ್ಲೆ ಮಾಡಿದ ಬಾಲಕರಿಗೆ ಬುದ್ದಿ ಹೇಳಿದ್ದರಂತೆ. ಇದರಿಂದ ಕುಪಿತಗೊಂಡ ಇಬ್ಬರು ಬಾಲಕರು, ತಮ್ಮ ಏರಿಯಾದಲ್ಲಿರುವ ಇಬ್ಬರು ಪುಡಿ ರೌಡಿಗಳನ್ನು ಕರೆದುಕೊಂಡು ಬಂದು ಬಾಲಕಿ ಮತ್ತು ಬಾಲಕಿಯ ತಂದೆ ಮೇಲೆ ಹಲ್ಲೆ ಮಾಡಿಸಿದ್ದಾರಂತೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸೇರಿ ನಾಲ್ವರ ವಿರುದ್ದ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ವರನ್ನು ಕೂಡ ವಶಕ್ಕೆ ಪಡೆದಿದ್ದಾರೆ.

ಪೊಲೀಸ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಿಷ್ಟು

ಈ ಎರಡು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರೋ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ ಆಯುಕ್ತ ಎನ್ ಶಶಿಕುಮಾರ್, ಪಾಲಕರು ಮಕ್ಕಳ‌ ಬಗ್ಗೆ ಜಾಗೃತಿ ವಹಿಸಬೇಕು. ತಾವು ಮನೆಯಲ್ಲಿ ಇಲ್ಲದೇ ಇದ್ದಾಗ ಮಕ್ಕಳು ಏನು ಮಾಡ್ತಾರೆ ಅನ್ನೋ ಬಗ್ಗೆ ಹೆಚ್ಚು ಗಮನಹರಿಸಬೇಕು ಅಂತ ಹೇಳಿದ್ದಾರೆ.

ಇದನ್ನೂ ಓದಿ: ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ

ಅಪ್ರಾಪ್ತರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು ನಂತರ ವಿಡಿಯೋ ಮಾಡಿಟ್ಟುಕೊಂಡಿದ್ದ ಪ್ರಕರಣ, ಮತ್ತೊಂದೆಡೆ ಅಪ್ರಾಪ್ತ ಬಾಲಕಿಗೆ ಅಪ್ರಾಪ್ತ ಬಾಲಕರೇ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಘಟನೆಯಿಂದ ಹುಬ್ಬಳ್ಳಿ ಜನರು ಶಾಕ್ ಆಗಿದ್ದಾರೆ. ಈ ನಿಟ್ಟಿನಲ್ಲಿ ಹೆತ್ತವರು ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ಗಮನಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link