All posts by nagaraj11081993

ಮಾರ್ಚ್ 2ರವರೆಗೂ ಎಲ್​ಐಸಿ ಸ್ಪೆಷನ್ ರಿವೈವಲ್ ಕೆಂಪೇನ್; ಲ್ಯಾಪ್ಸ್ ಆದ ಪಾಲಿಸಿಗಳನ್ನು ಸಕ್ರಿಯಗೊಳಿಸಲು ಭರ್ಜರಿ ಆಫರ್ – Kannada News | LIC special campaign till March 2nd to revive lapsed insurance policies

ನವದೆಹಲಿ, ಜನವರಿ 2: ಲ್ಯಾಪ್ಸ್ ಆಗಿರುವ ಅಥವಾ ಅವಧಿಮೀರಿದ ಇನ್ಷೂರೆನ್ಸ್ ಪಾಲಿಸಿಗಳನ್ನು (Lapsed insurance policies) ಸಕ್ರಿಯಗೊಳಿಸಲು ಎಲ್​ಐಸಿ ಆಕರ್ಷಕ ಆಫರ್​ವೊಂದನ್ನು ಮುಂದಿಟ್ಟಿದೆ. ಅದಕ್ಕಾಗಿ ಎರಡು ತಿಂಗಳ ವಿಶೇಷ ಅಭಿಯಾನ ನಡೆಸುತ್ತಿದೆ. ಜನವರಿ 1ರಂದು ಶುರುವಾದ ಈ ಸ್ಪೆಷಲ್ ರಿವೈವಲ್ ಕೆಂಪೇನ್ (Special Revival Campaign) 2026ರ ಮಾರ್ಚ್ 2ರವರೆಗೂ ಇರಲಿದೆ. ಇನ್ಷೂರೆನ್ಸ್ ಪಾಲಿಸಿಗಳನ್ನು ರಿವೈವಲ್ ಮಾಡಲು ಇರುವ ತಡಪಾವತಿ ಶುಲ್ಕದಲ್ಲಿ (Late Fee) 5,000 ರೂವರೆಗೂ ವಿನಾಯಿತಿ ನೀಡಲಾಗುತ್ತಿದೆ.

ಶೇ. 30ರಷ್ಟು ಲೇಟ್ ಫೀ ಡಿಸ್ಕೌಂಟ್

ಲ್ಯಾಪ್ಸ್ ಆದ ಎಲ್​ಐಸಿ ಪಾಲಿಸಿಗಳನ್ನು ರಿವೈವ್ ಮಾಡಬೇಕೆಂದರೆ ಲೇಟ್ ಫೀ ಕಟ್ಟಬೇಕು. ಈ ಶುಲ್ಕದಲ್ಲಿ ಮುಂದಿನ ಎರಡು ತಿಂಗಳು ಶೇ. 30ರಷ್ಟು ಡಿಸ್ಕೌಂಟ್ ಸಿಗಲಿದೆ. ತಡಪಾವತಿ ಶುಲ್ಕ 10,000 ರೂ ಇದ್ದಲ್ಲಿ 3,000 ರೂ ವಿನಾಯಿತಿ ಕೊಡಲಾಗುತ್ತದೆ. ಗರಿಷ್ಠ 5,000 ರೂವರೆಗೂ ಈ ರೀತಿ ವಿನಾಯಿತಿ ಇರುತ್ತದೆ.

ಇದನ್ನೂ ಓದಿ: ಎಲ್​ಐಸಿ ಎರಡು ಹೊಸ ಪ್ಲಾನ್​ಗಳು ಬಿಡುಗಡೆ; ಮಾರ್ಕೆಟ್ ಲಿಂಕ್ ಆದ ಪ್ರೊಟೆಕ್ಷನ್ ಪ್ಲಸ್ ಪ್ಲಾನ್ ಬಗ್ಗೆ ಮಾಹಿತಿ

ಪಾಲಿಸಿ ಪ್ರೀಮಿಯಮ್ 1,00,000 ರೂವರೆಗಿನ ಮೊತ್ತವಾದರೆ ಲೇಟ್ ಫೀಯಲ್ಲಿ ಶೇ. 30ರಷ್ಟು ವಿನಾಯಿತಿ ಇರುತ್ತದೆ. ಗರಿಷ್ಠ ವಿನಾಯಿತಿ 3,000 ರೂ ಇರುತ್ತದೆ.

1 ಲಕ್ಷ ರೂನಿಂದ 3 ಲಕ್ಷ ರೂವರೆಗಿನ ಮೊತ್ತದ ಪ್ರೀಮಿಯಮ್ ಆಗಿದ್ದರೆ ತಡಪಾವತಿ ಶುಲ್ಕದಲ್ಲಿ ಶೇ. 30 ಅಥವಾ 4,000 ರೂವರೆಗೆ ವಿನಾಯಿತಿ ಸಿಗುತ್ತದೆ.

3 ಲಕ್ಷ ರೂಗಿಂತ ಮೇಲ್ಪಟ್ಟ ಮೊತ್ತದ ಪ್ರೀಮಿಯಮ್ ಆದರೆ ಶುಲ್ಕದಲ್ಲಿ 5,000 ರೂವರೆಗೆ ಕನ್ಸಿಶನ್ ಇರುತ್ತದೆ.

ಮೈಕ್ರೋ ಇನ್ಷೂರೆನ್ಸ್ ಪ್ಲಾನ್ ಆದರೆ ತಡಪಾವತಿ ಶುಲ್ಕದಲ್ಲಿ ನೂರಕ್ಕೆ ನೂರು ವಿನಾಯಿತಿ ಇರುತ್ತದೆ.

ಎಷ್ಟು ವರ್ಷದಿಂದ ಲ್ಯಾಪ್ಸ್ ಆದ ಪಾಲಿಸಿಗಳನ್ನು ರಿವೈವ್ ಮಾಡಲು ಸಾಧ್ಯ?

ಸದ್ಯ ನಡೆಯುತ್ತಿರುವ ಸ್ಪೆಷಲ್ ಅಭಿಯಾನದಲ್ಲಿ 5 ವರ್ಷದಿಂದ ಲ್ಯಾಪ್ಸ್ ಆದ ಪಾಲಿಸಿಗಳನ್ನು ರಿವೈವ್ ಮಾಡಲು ಅವಕಾಶ ಇದೆ. ಪ್ರೀಮಿಯಮ್ ಪಾವತಿ ನಿಲ್ಲಿಸಿ 5 ವರ್ಷದವರೆಗೆ ಆಗಿದ್ದರೆ ಅಂಥ ಪಾಲಿಸಿಯನ್ನು ಈ ಕೆಂಪೇನ್ ವೇಳೆ ರಿವೈವ್ ಮಾಡಲು ಸಾಧ್ಯವಿದೆ.

ಇದನ್ನೂ ಓದಿ: ಕ್ಲೇಮ್ ಆಗದೇ ಉಳಿದಿದೆ ಲಕ್ಷ ಕೋಟಿ ರೂ; ಜನರಿಗೆ ಹಣ ಮರಳಿಸಲು ಸರ್ಕಾರ ಹರಸಾಹಸ

ಜನರು ಬೇರೆ ಬೇರೆ ಕಾರಣಗಳಿಂದ ಎಲ್​ಐಸಿ ಪಾಲಿಸಿಯ ಪ್ರೀಮಿಯಮ್ ಕಟ್ಟದೇ ನಿಲ್ಲಿಸಿರಬಹುದು. ಇನ್ಷೂರೆನ್ಸ್ ಎಂಬುದು ಬಹಳ ಅಗತ್ಯವಾಗಿರುವ ಹಣಕಾಸು ರಕ್ಷಣಾ ವ್ಯವಸ್ಥೆಯಾಗಿರುವುದರಿಂದ ಅದು ವ್ಯರ್ಥವಾಗಲು ಬಿಡಬಾರದು. ಹೀಗಾಗಿ, ಇನ್ಷೂರೆನ್ಸ್ ಪಾಲಿಸಿ ಹೊಂದುವುದು ಬಹಳ ಮುಖ್ಯ. ಪಾಲಿಸಿ ಲ್ಯಾಪ್ಸ್ ಆಗಿದ್ದರೆ ಅದನ್ನು ತಪ್ಪದೇ ರಿವೈವ್ ಮಾಡುವುದು ಇನ್ನೂ ಮುಖ್ಯ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ; ವಿಡಿಯೋ ವೈರಲ್ – Kannada News | Massive fire erupts inside Indian Army camp store in Uttarakhand Joshimath

ಜೋಶಿಮಠ, ಜನವರಿ 2: ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಳಗೆ ಇಂದು ಭಾರಿ ಬೆಂಕಿ (Fire Accident) ಕಾಣಿಸಿಕೊಂಡಿದೆ. ಆರಂಭಿಕ ಮಾಹಿತಿಯ ಪ್ರಕಾರ, ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದರು.

ಇದೇ ರೀತಿ ಕಳೆದ ವರ್ಷ ಮೇ ತಿಂಗಳಲ್ಲಿ ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿ ಕಟ್ಟಡದಾದ್ಯಂತ ವೇಗವಾಗಿ ಹರಡಿತು. ಸ್ಥಳೀಯ ಪೊಲೀಸರು, ಸೇನಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ನಡುವಿನ ತ್ವರಿತ ಸಮನ್ವಯದಿಂದಾಗಿ ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತೆಲುಗು ರಾಜ್ಯಗಳ ನಡುವಿನ ಕೃಷ್ಣಾ ಜಲ ವಿವಾದ ಬಗೆಹರಿಸಲು ಕೇಂದ್ರ ಸಮಿತಿ ರಚನೆ; ಸಚಿವ ಕಿಶನ್ ರೆಡ್ಡಿ ಮಾಹಿತಿ – Kannada News | Central Government form Committee to resolve Krishna water dispute between Telangana and Andhra Pradesh Kishan Reddy Says

ನವದೆಹಲಿ, ಜನವರಿ 2: ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ನಡುವಿನ ನದಿ ನೀರಿನ ಬಳಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಈ ಸಮಸ್ಯೆಗಳನ್ನು ತಾಂತ್ರಿಕವಾಗಿ ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಜಲಶಕ್ತಿ ಸಚಿವಾಲಯವು ವಿಶೇಷ ಸಮಿತಿಗೆ ಸೂಚಿಸಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ (Kishan Reddy) ಮಾಹಿತಿ ನೀಡಿದ್ದಾರೆ. ಸಹಕಾರಿ ಒಕ್ಕೂಟದ ಮನೋಭಾವದಲ್ಲಿ ಕಳೆದ 11 ವರ್ಷಗಳಿಂದ ತೆಲುಗು ರಾಜ್ಯಗಳ ನಡುವಿನ ನೀರಿನ ವಿವಾದಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.

ಕೃಷ್ಣಾ ನದಿ ನೀರಿನ ವಿವಾದವನ್ನು ಪರಿಹರಿಸಲು ಕೇಂದ್ರ ಸರ್ಕಾರವು ಅಕ್ಟೋಬರ್ 6, 2023ರಂದು ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ -2 (KWDT-II)ಗಾಗಿ ಹೆಚ್ಚುವರಿ ಅವಧಿಗಳನ್ನು ಸೂಚಿಸಿತ್ತು. 2 ವರ್ಷಗಳ ಅವಧಿ ಆಗಸ್ಟ್ 1, 2025ರಂದು ಕೊನೆಗೊಂಡಿದ್ದರೂ ಕೃಷ್ಣಾ ನೀರಿನ ಬಳಕೆಯ ಕುರಿತು ನಡೆಯುತ್ತಿರುವ ಚರ್ಚೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಮಂಡಳಿಯ ಅವಧಿಯನ್ನು ಜುಲೈ 31, 2026ರವರೆಗೆ ಮತ್ತೊಂದು ವರ್ಷ ವಿಸ್ತರಿಸಲಾಗಿದೆ. ಹೀಗಾಗಿ, ನೀರಿನ ವಿವಾದಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಎಲ್ಲ ರೀತಿಯಲ್ಲೂ ಸಹಕರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಸಗೊಬ್ಬರಗಳ ಪೋಷಕಾಂಶ ಆಧಾರಿತ ಸಬ್ಸಿಡಿಗೆ ಸಂಪುಟ ಅನುಮೋದನೆ; ಸಚಿವ ಕಿಶನ್ ರೆಡ್ಡಿ ಹೇಳಿದ್ದೇನು?

ಕೇಂದ್ರ ಜಲಶಕ್ತಿ ಸಚಿವರು, ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಈ ಮಂಡಳಿಯ ಸದಸ್ಯರಾಗಿರುತ್ತಾರೆ. ಜುಲೈ 16, 2025ರಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿ ಜಲ ವಿವಾದಗಳ ಕುರಿತು ಚರ್ಚಿಸಿದ್ದರು ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ. ಆ ಸಭೆಯಲ್ಲಿ, ಕೇಂದ್ರ ಮತ್ತು ಎರಡೂ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲು ನಿರ್ಧರಿಸಲಾಯಿತು. ಜಲ ವಿವಾದಗಳನ್ನು ತಾಂತ್ರಿಕ ದೃಷ್ಟಿಕೋನದಿಂದ ಅಧ್ಯಯನ ಮಾಡಲು ನಿರ್ಧರಿಸಲಾಯಿತು.

ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಎರಡೂವರೆ ಲಕ್ಷ ಕಲ್ಲಿದ್ದಲು ಕಾರ್ಮಿಕರಿಗೆ 1 ಲಕ್ಷ ರೂ. ಉಡುಗೊರೆ; ಸಚಿವ ಕಿಶನ್ ರೆಡ್ಡಿ ಘೋಷಣೆ

ಕೇಂದ್ರ ಜಲ ಆಯೋಗದ (CWC) ಅಧ್ಯಕ್ಷರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ತೆಲಂಗಾಣದಿಂದ ಜಲಸಂಪನ್ಮೂಲ ಇಲಾಖೆಯ ಸಲಹೆಗಾರ, ನೀರಾವರಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವಿಶೇಷ ಕಾರ್ಯದರ್ಶಿ ಮತ್ತು ಮುಖ್ಯ ಎಂಜಿನಿಯರ್ ಸದಸ್ಯರಾಗಿರುತ್ತಾರೆ. ಆಂಧ್ರಪ್ರದೇಶದಿಂದ ಜಲಸಂಪನ್ಮೂಲ ಇಲಾಖೆಯ ವಿಶೇಷ ಕಾರ್ಯದರ್ಶಿ, ನೀರಾವರಿ ಇಲಾಖೆಯ ಸಲಹೆಗಾರ, ಮುಖ್ಯ ಎಂಜಿನಿಯರ್ ಮತ್ತು ಮುಖ್ಯ ಎಂಜಿನಿಯರ್ ಪ್ರತಿನಿಧಿಗಳಾಗಿರುತ್ತಾರೆ. ಕೇಂದ್ರ ಸಂಸ್ಥೆಗಳಿಂದ ಕೃಷ್ಣಾ ನದಿ ನಿರ್ವಹಣಾ ಮಂಡಳಿಯ (KRMB) ಅಧ್ಯಕ್ಷರು, ಗೋದಾವರಿ ನದಿ ನಿರ್ವಹಣಾ ಮಂಡಳಿಯ (GRMB) ಅಧ್ಯಕ್ಷರು, ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ (NWDA) ಮುಖ್ಯ ಎಂಜಿನಿಯರ್ ಮತ್ತು ಕೇಂದ್ರ ಜಲ ಆಯೋಗದ (CWC) ಮುಖ್ಯ ಎಂಜಿನಿಯರ್ ಸದಸ್ಯರಾಗಿರುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:08 pm, Fri, 2 January 26

Source link

ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ? – Kannada News | Kalki 2898 AD movie sequel shooting starting in February

ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ (Pan Inda) ನಟ. ಅವರೆಷ್ಟು ಬ್ಯುಸಿ ಎಂದರೆ ಮುಂದಿನ ಮೂರು ನಾಲ್ಕು ವರ್ಷಗಳಿಗೆ ಈಗಲೇ ಡೇಟ್ಸ್ ಕೊಟ್ಟು ಕೂತಿದ್ದಾರೆ. ಒಟ್ಟಿಗೆ ಎರಡೆರಡು ಸಿನಿಮಾಗಳಲ್ಲಿ ನಟಿಸಿದರೂ ಈಗಿರುವ ಕಮಿಟ್​​ಮೆಂಟ್ ಮುಗಿಸಲು ಎರಡು ವರ್ಷವಾದರೂ ಬೇಕು. ಪ್ರಭಾಸ್ ಎಷ್ಟು ಬ್ಯುಸಿ ಎಂದರೆ ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿರುವ ಸಿನಿಮಾಗಳ ಸೀಕ್ವೆಲ್​​ಗಳ ಭವಿಷ್ಯವೂ ಅತಂತ್ರದಲ್ಲಿದೆ. ಪ್ರಭಾಸ್ ಕೈಯಲ್ಲಿ ಪ್ರಸ್ತುತ ಎರಡು ಸೀಕ್ವೆಲ್ ಸಿನಿಮಾಗಳಿವೆ. ಒಂದು ‘ಕಲ್ಕಿ 2898 ಎಡಿ’ ಮತ್ತು ‘ಸಲಾರ್’ ಈ ಎರಡರಲ್ಲಿ ಮೊದಲಿಗೆ ‘ಕಲ್ಕಿ 2898 ಎಡಿ’ ಸಿನಿಮಾವನ್ನು ಪ್ರಭಾಸ್ ಪ್ರಾರಂಭಿಸುತ್ತಿದ್ದಾರೆ. ಆದರೆ ‘ಸಲಾರ್’ ಸೀಕ್ವೆಲ್ ಭವಿಷ್ಯ ಈಗಲೂ ಅತಂತ್ರದಲ್ಲಿಯೇ ಇದೆ.

ಪ್ರಶಾಂತ್ ನೀಲ್ ನಿರ್ದೇಶಿಸಿ, ಪ್ರಭಾಸ್ ನಟಿಸಿದ್ದ ‘ಸಲಾರ್’ ಸಿನಿಮಾ 2023 ರಲ್ಲಿ ಬಿಡುಗಡೆ ಆಗಿತ್ತು. ‘ಸಾಹೋ’, ‘ರಾಧೆ-ಶ್ಯಾಮ್’, ‘ಆದಿಪುರುಷ್’ ಸಿನಿಮಾಗಳ ಸತತ ಸೋಲಿನಿಂದ ಕಂಗೆಟ್ಟಿದ್ದ ಪ್ರಭಾಸ್ ಅವರನ್ನು ಸೋಲಿನ ಸುಳಿಯಿಂದ ಹೊರತಂಡ ಸಿನಿಮಾ ಅದಾಗಿತ್ತು. ಆದರೆ ‘ಸಲಾರ್’ ಬಿಡುಗಡೆ ಆಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ ಆದರೆ ಸಿನಿಮಾದ ಸೀಕ್ವೆಲ್ ಬಗ್ಗೆ ಯಾವುದೇ ಸುದ್ದಿ ಇಲ್ಲ. ಆದರೆ ‘ಸಲಾರ್’ ಬಿಡುಗಡೆ ಆಗಿ ಆರು ತಿಂಗಳ ಬಳಿಕ ಬಿಡುಗಡೆ ಆದ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​​ನ ಚಿತ್ರೀಕರಣಕ್ಕೆ ಓಕೆ ಹೇಳಿದ್ದಾರೆ ಪ್ರಭಾಸ್.

ಇದನ್ನೂ ಓದಿ:ಪ್ರಭಾಸ್ ಸಿನಿಮಾ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ?

‘ಕಲ್ಕಿ 2898 ಎಡಿ’ ಸಿನಿಮಾ 2024ರ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಕಲೆಕ್ಷನ್ ಮಾಡಿತು. ಇದೀಗ ಈ ಸಿನಿಮಾದ ಸೀಕ್ವೆಲ್ ಚಿತ್ರೀಕರಣಕ್ಕೆ ಒಪ್ಪಿಗೆ ಸೂಚಿಸಿರುವ ಪ್ರಭಾಸ್, ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ. ಆದರೆ ಅದಕ್ಕೂ ಮುಂಚೆ ಬಿಡುಗಡೆ ಆಗಿದ್ದ ‘ಸಲಾರ್’ ಸಿನಿಮಾದ ಬಗ್ಗೆ ಯಾವುದೇ ಸದ್ದಿಲ್ಲ.

‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಜೊತೆಗೆ ದೀಪಿಕಾ ಪಡುಕೋಣೆ ಸಹ ಮಹತ್ವದ ಪಾತ್ರದಲ್ಲಿ ನಟಿಸಿದ್ದರು. ಆದರೆ ಸೀಕ್ವೆಲ್​​ನಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಬೇರೆ ನಟಿಯೊಬ್ಬರು ಅವರ ಪಾತ್ರದಲ್ಲಿ ನಟಿಸಲಿದ್ದಾರೆ. ದೀಪಿಕಾ ಪಡುಕೋಣೆ ಜೊತೆಗೆ ಭಿನ್ನಾಭಿಪ್ರಾಯ ಮೂಡಿದ ಕಾರಣ ಅವರನ್ನು ಸಿನಿಮಾದಿಂದ ಹೊರಗಿಡಲಾಗಿದೆ. ಫೆಬ್ರವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಿ ಬಹುಷಃ 2027ರ ಆರಂಭದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್ ಬಿಡುಗಡೆ ಆಗಲಿದೆ. ಸೀಕ್ವೆಲ್​​ನಲ್ಲಿ ಕಮಲ್ ಹಾಸನ್ ಅವರು ಪ್ರಭಾಸ್ ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್​ಕುಮಾರ್ – Kannada News | Shivarajkumar talk about Dhurandhar Movie in Mumbai during 45 movie press meet

ನಟ ಶಿವರಾಜ್​ಕುಮಾರ್ ಅವರು ಮುಂಬೈಗೆ ತೆರಳಿದ್ದಾರೆ. ಕನ್ನಡದ ‘45’ ಸಿನಿಮಾ (45 Movie) ಹಿಂದಿಯಲ್ಲಿ ಕೂಡ ಬಿಡುಗಡೆ ಆಗಲಿದ್ದು, ಆ ಚಿತ್ರದ ಪ್ರಚಾರವನ್ನು ಅವರು ಮುಂಬೈನಲ್ಲಿ ಮಾಡುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಅವರಿಗೆ ‘ಧುರಂಧರ್’ (Dhurandhar) ಸಿನಿಮಾ ಬಗ್ಗೆ ಹೇಳಲಾಯಿತು. ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮುಂತಾದವರು ನಟಿಸಿದ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆ ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಶಿವರಾಜ್​​ಕುಮಾರ್ (Shivarajkumar) ಅವರು ವಿವರಿಸಿದ್ದಾರೆ.

‘ಧುರಂಧರ್ ಸಿನಿಮಾ ಬಹಳ ಚೆನ್ನಾಗಿದೆ. ಸಿನಿಮಾದ ಮೇಕಿಂಗ್ ಮತ್ತು ಎಮೋಷನ್ ಚೆನ್ನಾಗಿದೆ. ಎಲ್ಲರ ನಟನೆ ಅತ್ಯುತ್ತಮವಾಗಿದೆ. ಅಕ್ಷಯ್ ಖನ್ನಾ ನಟನೆ ನನಗೆ ಇಷ್ಟ ಆಯಿತು. ಹಾಗೆಯೇ ರಣವೀರ್ ಸಿಂಗ್ ಕೂಡ ಅಮೇಜಿಂಗ್. ಪಾತ್ರಕ್ಕೆ ಬೇಕಾದ ಸೂಕ್ಷ್ಮವಾದ ಅಭಿನಯವನ್ನು ಅವರು ನೀಡಿದ್ದಾರೆ. ಏನು ಬೇಕಾದರೂ ಮಾಡುವ ಅವಕಾಶ ಅಕ್ಷಯ್ ಖನ್ನಾ ಅವರ ಪಾತ್ರಕ್ಕೆ ಇದೆ. ಆದರೆ ರಣವೀರ್ ಸಿಂಗ್ ಮಾಡಿದ ಪಾತ್ರ ಅಷ್ಟು ಸುಲಭವಲ್ಲ’ ಎಂದು ಶಿವರಾಜ್​​ಕುಮಾರ್ ಅವರು ಹೇಳಿದ್ದಾರೆ.

ಈ ಮೊದಲೇ ಶಿವರಾಜ್​​ಕುಮಾರ್ ಅವರಿಗೆ ಹಿಂದಿ ಸಿನಿಮಾದಲ್ಲಿ ನಟಿಸುವ ಅವಕಾಶ ಬಂದಿತ್ತು. ಆದರೆ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ನಟಿಸಿರಲಿಲ್ಲ. ‘ಈಗ ಒಂದು ವೇಳೆ ಬಾಲಿವುಡ್ ಸಿನಿಮಾ ಮಾಡುವುದಾದರೆ ಅದು ಹಾಡು, ಡ್ಯಾನ್ಸ್ ಇರುವ ಕಮರ್ಷಿಯಲ್ ಸಿನಿಮಾ ಆಗಿರಬೇಕು. ಆ ಮೂಲಕ ಜನರ ಹೃದಯವನ್ನು ತಲುಪಬೇಕು. ಜನರು ನನ್ನನ್ನು ಪಾತ್ರವಾಗಿ ನೋಡಬೇಕು. ಭಾರತೀಯ ಸಂಸ್ಕೃತಿಯ ಭಾಗ ಆಗಿರಬೇಕು’ ಎಂದಿದ್ದಾರೆ ಶಿವಣ್ಣ.

ಕನ್ನಡ ಚಿತ್ರರಂಗವನ್ನು ಬಾಲಿವುಡ್ ಮಂದಿ ‘ಕೆಜಿಎಫ್: ಚಾಪ್ಟರ್ 2’, ‘ಕಾಂತಾರ: ಚಾಪ್ಟರ್ 1’ ಮುಂತಾದ ಸಿನಿಮಾಗಳ ಮೂಲಕ ಗುರುತಿಸುತ್ತಾರೆ. ಆ ಸಿನಿಮಾಗಳಿಂದಾಗಿ ಕನ್ನಡ ಚಿತ್ರರಂಗದ ಬಗ್ಗೆ ಹಿಂದಿ ಪ್ರೇಕ್ಷಕರು ಕೂಡ ಮಾತನಾಡುವಂತಾಗಿದೆ. ‘ನಮಗೆ ಆ ಸಿನಿಮಾಗಳ ಯಶಸ್ಸಿನಿಂದ ಹೆಮ್ಮೆ ಆಗಿದೆ. ಅವರು ಪ್ರಯತ್ನ ಮಾಡದೇ ಇದ್ದಿದ್ದರೆ ಈ ಸಿನಿಮಾಗಳು ಇಲ್ಲಿಗೆ ಬರುತ್ತಿರಲಿಲ್ಲ. ಅವರು ಧೈರ್ಯ ತೋರಿಸಿದರು. ಈಗ ನಾವು 45 ಸಿನಿಮಾ ತಂಡದವರು ಬಂದಿದ್ದೇವೆ. ಏನಾಗುತ್ತದೋ ನೋಡೋಣ’ ಎಂದು ಶಿವರಾಜ್​ಕುಮಾರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ನಷ್ಟ ಆಗಿದ್ದು ಯಾಕೆ?

ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರು ‘45’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ. ಉಪೇಂದ್ರ, ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ಅವರು ಒಟ್ಟಾಗಿ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡದಲ್ಲಿ ತೆರೆಕಂಡ ಬಳಿಕ ಬೇರೆ ಭಾಷೆಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಅದಕ್ಕಾಗಿ ಪ್ರಚಾರ ಕಾರ್ಯದಲ್ಲಿ ಶಿವಣ್ಣ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ! – Kannada News | Bengaluru city university bcom 5th semester question paper leaked Before Exam

ಬೆಂಗಳೂರು, (ಜನವರಿ 02): ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದ್ರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ.

ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಲೀಕ್!

ಇಂದು ಜರುಗಿದ ಬಿಕಾಂ ಐದನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ಲೀಕ್ ಆಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನಿನ್ನೆ ಸಂಜೆಯಿಂದಲೇ ಪ್ರಶ್ನೆಪತ್ರಿಕೆಯ ಪ್ರತಿಗಳು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದ್ದು, ಇಂದು ಪರೀಕ್ಷಾ ಕೇಂದ್ರದಲ್ಲಿ ನೀಡಲಾದ ಪ್ರಶ್ನೆಪತ್ರಿಕೆಗೂ ಲೀಕ್ ಆದ ಪೇಪರ್‌ಗೂ ಸಂಪೂರ್ಣ ಸಾಮ್ಯತೆ ಇರುವುದು ದೃಢಪಟ್ಟಿದೆ. ಇನ್ನು ಈ ವ್ಯವಸ್ಥಿತ ನಕಲು ದಂಧೆಯ ಹಿಂದೆ ಕೆಲವು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ತಮ್ಮ ಕಾಲೇಜಿನ ಫಲಿತಾಂಶ ಉತ್ತಮವಾಗಿ ಬರಲಿ ಎಂಬ ಉದ್ದೇಶದಿಂದ ಪರೀಕ್ಷಾ ವಿಭಾಗದ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಪ್ರಶ್ನೆಪತ್ರಿಕೆಯನ್ನು ಮೊದಲೇ ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ

ವಿದ್ಯಾರ್ಥಿ ಸಂಘಟನೆ NSUI ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಸಮರ ಸಾರಿದೆ. ಇಂದಿನ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ನಮಗೆ ಲಭ್ಯವಾಗಿತ್ತು. ಇದನ್ನು ದುರುಪಯೋಗಪಡಿಸಿಕೊಂಡು ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಾಮಾಣಿಕವಾಗಿ ಓದಿದ ವಿದ್ಯಾರ್ಥಿಗಳಿಗೆ ಇದು ಮಾಡಿದ ದ್ರೋಹ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾಹಿತಿ ಇದ್ದರೂ ಸಹ ಬೆಂಗಳೂರು ನಗರ ವಿವಿಯ ಪರೀಕ್ಷಾ ವಿಭಾಗ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಗರಣದ ಬಗ್ಗೆ ವಿಶ್ವವಿದ್ಯಾಲಯವು ಮೌನಕ್ಕೆ ಶರಣಾಗಿರುವುದು ವಿದ್ಯಾರ್ಥಿಗಳ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:43 pm, Fri, 2 January 26

Source link

ಮನೆ ಹೆಸರಲ್ಲಿ ಮಸೀದಿ ನಿರ್ಮಾಣ: ರೊಚ್ಚಿಗೆದ್ದ ಹಿಂದೂ ಸಂಘಟನೆಗಳು – Kannada News | Hubballi Protest: Alleged Illegal Mosque in Nekara Nagar Triggers Public Protest

ಅಕ್ರಮವಾಗಿ ನಿರ್ಮಿಸಿರುವ ಮಸೀದಿ, ಹಿಂದೂಗಳಿಂದ ಪ್ರತಿಭಟನೆ

ಹುಬ್ಬಳ್ಳಿ, ಜನವರಿ 02: ನಗರದ ನೇಕಾರ ನಗರದ ಶಿವನಾಗರ ಬಡಾವಣೆಯಲ್ಲಿ ಕುಟುಂಬವೊಂದು ಮನೆ ನಿರ್ಮಾಣಕ್ಕೆ ಪಾಲಿಕೆಯಿಂದ ಪರವಾನಗಿ ಪಡೆದು ಮನೆ ನಿರ್ಮಾಣ ಮಾಡಿತ್ತು. ಆದರೆ ಹಿಂದೂ ಧರ್ಮದವರು ಹೆಚ್ಚಿರುವ ಸ್ಥಳದಲ್ಲಿ ಮುಸ್ಲಿಂ ಸಮುದಾಯ ಮನೆ ಕಟ್ಟಿದ್ದಕ್ಕೆ ಯಾರು ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಆದರೆ ಮನೆ ಕಟ್ಟಿದವರು ವಾಸಿಸುವ ಬದಲು, ಅದನ್ನು ಮಸೀದಿಯಾಗಿ (Mosque)  ಬದಲಾವಣೆ ಮಾಡಲಾಗಿದೆ. ಮನೆ ಮುಂದೆಯೇ ಮಸೀದಿ ನಿರ್ಮಾಣ ಮಾಡಿ, ಪ್ರತಿನಿತ್ಯ ನೂರಾರು ಜನರು ನಮಾಜ್ ಮಾಡಲು ಆರಂಭಿಸಿದ್ದರು. ಇದು ಬಹುಸಂಖ್ಯಾತ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ರಮವಾಗಿ ಕಟ್ಟಿರುವ ಮಸೀದಿ ತೆರವುಗೊಳಿಸಬೇಕು ಅಂತ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆ (Protest) ಮಾಡಿದ್ದಾರೆ.

ಹುಬ್ಬಳ್ಳಿ  ನಗರದ ನೇಕಾರನಗರ, ಶಿವನಾಗರ ಬಡಾವಣೆ, ಛಬ್ಬಿ ಪ್ಲಾಟ್ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಯಲ್ಲಿ ಶೇಕಡಾ 95ಕ್ಕೂ ಹೆಚ್ಚು ಹಿಂದೂಗಳೇ ವಾಸವಾಗಿದ್ದಾರೆ. ಆದರೆ ಇದೇ ಛಬ್ಬಿ ಪ್ಲಾಟ್ ಮತ್ತು ಶಿವನಾಗರ ಬಡಾವಣೆಗೆ ಹೊಂದಿಕೊಂಡು ಮುಸ್ಲಿಂ ಸಮುದಾಯದವರೊಬ್ಬರು ಮನೆ ಕಟ್ಟಿಕೊಂಡಿದ್ದಾರೆ. ಇಲ್ಲಿನ ಜನರು ಅನ್ಯ ಧರ್ಮೀಯರು ಮನೆ ಕಟ್ಟಿಕೊಂಡಿದ್ದಕ್ಕೆ, ಅವರು ಅಲ್ಲೇ ವಾಸವಾಗಿದ್ದಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಆದರೆ ಮನೆ ನಿರ್ಮಾಣ ಮಾಡಿದ್ದ ಜಹೀರ್ ಸಾರವಾಡ್, ಜಾಕೀರ್ ಸಾರವಾಡ್ ಅನ್ನೋ ಸಹೋದರರು, ಅಲ್ಲಿ ವಾಸವಾಗದೇ ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು

ಪಾಲಿಕೆಯಿಂದ ಪರವಾನಗಿ ಪಡೆದಿದ್ದು ಮನೆಗಾಗಿ, ಆದರೆ ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದರಂತೆ. ಜೊತೆಗೆ ಅಲ್ಲಿ ಪ್ರತಿನಿತ್ಯ ಐವತ್ತರಿಂದ ನೂರು ಜನರು ಆಗಮಿಸಿ ನಮಾಜ್ ಮಾಡೋದು ಮಾಡುತ್ತಿದ್ದರಂತೆ. ಇದು ಸ್ಥಳೀಯ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈಗಾಗಲೇ ಸುತ್ತಮುತ್ತ ಮೂರು ಮಸೀದಿಗಳಿವೆ. ಇದೀಗ ಮತ್ತೆ ಮನೆಯೊಂದರಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣ ಮಾಡಿದ್ದಾರೆ ಅಂತ ಆರೋಪಿಸಿ, ಅದನ್ನು ತೆರವುಗೊಳಿಸಬೇಕು ಅಂತ ಆಗ್ರಹಿಸಿದ್ದರು.

ಕಳೆದ ಐದಾರು ತಿಂಗಳಿಂದ ಸ್ಥಳೀಯರು ಮತ್ತು ಮಸೀದಿ ನಿರ್ಮಾಣ ಮಾಡಿದ್ದ ಸಾರವಾಡ್ ಕುಟುಂಬದವರ ನಡುವೆ ವಾಗ್ವಾದಗಳು ಮೇಲಿಂದ ಮೇಲೆ ನಡೆಯುತ್ತಲೇ ಇದ್ದವು. ಈ ಪ್ರಕರಣ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಮಟ್ಟಿಲೇರಿತ್ತು. ಪೊಲೀಸರು ಕೂಡ ಎರಡು ಕಡೆಯವರನ್ನು ಕರೆಸಿ, ಶಾಂತಿ ಸುವ್ಯವಸ್ಥೆ ಹಾಳು ಮಾಡದಂತೆ ಎಚ್ಚರಿಕೆ ನೀಡಿದ್ದರು. ಆದರೆ ಅನ್ಯ ಧರ್ಮೀಯರು, ನಮಾಜ್ ಮಾಡುವುದು ಮುಂದುವರಿಸಿದ್ದರಿಂದ ಹಿಂದೂ ಧರ್ಮೀಯರು ಹೋರಾಟಕ್ಕೆ ಕರೆ ಕೊಟ್ಟಿದ್ದರು. ಇಂದು ಹುಬ್ಬಳ್ಳಿ ನಗರದ ನೇಕಾರ ನಗರದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಸೇರಿದ್ದ ನೂರಾರು ಜನರು ಪ್ರತಿಭಟನೆ ಮಾಡಿದರು.

ಮಸೀದಿ ತೆರವುಗೊಳಿಸದಿದ್ದರೆ ಮತ್ತೆ ಹೋರಾಟ ಎಂದ ಪ್ರಮೋದ್ ಮುತಾಲಿಕ್

ಪ್ರತಿಭಟನೆ ಹಿನ್ನೆಲೆಯಲ್ಲಿ ನೇಕಾರ ನಗರ ಸೇರಿದಂತೆ ಮಸೀದಿ ನಿರ್ಮಾಣ ಮಾಡಿದ್ದ ಸ್ಥಳದ ಸುತ್ತಮುತ್ತ ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆಮ ಮಾಡಲಾಗಿತ್ತು. ಬ್ಯಾರಿಕೇಡ್​ಗಳನ್ನು ಹಾಕಿ ಮಸೀದಿ ನಿರ್ಮಾಣ ಮಾಡಿದ್ದ ಸ್ಥಳಕ್ಕೆ ಬೇರೆಯವರು ಹೋಗದಂತೆ ನಿಷೇಧ ಹೇರಲಾಗಿತ್ತು. ಇನ್ನು ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭಾಗಿಯಾಗಿದ್ದರು. ಮನೆ ನಿರ್ಮಾಣ ಅಂತ ಹೇಳಿ ಅಕ್ರಮವಾಗಿ ಮಸೀದಿ ನಿರ್ಮಾಣ ಮಾಡಲಾಗಿದೆ. ಅಲ್ಲಿ ಪ್ರತಿನಿತ್ಯ ನೂರಾರು ಜನರು ಬಂದು ನಮಾಜ್ ಮಾಡ್ತಿದ್ದಾರೆ. ಸುತ್ತಮುತ್ತ ಮೂರು ಮಸೀದಿಗಳಿದ್ದರು ಕೂಡ, ಮತ್ತೊಂದು ಮಸೀದಿಯನ್ನು ಅಕ್ರಮವಾಗಿ ನಿರ್ಮಾಣ ಮಾಡಿದ್ದಾರೆ. ನಾವು ಎಲ್ಲಿಯಾದರೂ ಪ್ರಾರ್ಥನೆ ಮಾಡಿದರೆ, ದೇವಸ್ಥಾನ ಕಟ್ಟಿದ್ದರೆ ನಮ್ಮ ಮೇಲೆ ಕೇಸ್ ಹಾಕುತ್ತಾರೆ. ಅವುಗಳನ್ನು ತೆರವು ಮಾಡುತ್ತಾರೆ. ಆದರೆ ಇಲ್ಲಿ ಪರವಾನಗಿ ಪಡೆಯದೇ ಮಸೀದಿ ನಿರ್ಮಾಣ ಮಾಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು. ಒಂದು ವಾರದೊಳಗೆ ನಿರ್ಮಾಣ ಮಾಡಿರುವ ಮಸೀದಿಯನ್ನು ತೆರವುಗೊಳಿಸದೇ ಇದ್ದರೆ ಮತ್ತೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ನಮ್ಮ ಮೇಲೆ ಕೃಪೆ ತೋರಿ’: ಮಂತ್ರಾಲಯದ ರಾಯರಿಗೆ ವಿಚಿತ್ರ ಪತ್ರ ಬರೆದ ಉದ್ಯೋಗಾಕಾಂಕ್ಷಿಗಳು

ಘಟನಾ ಸ್ಥಳಕ್ಕೆ ಗುರುವಾರ ಪಾಲಿಕೆ ಮೇಯರ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಕ್ರಮವಾಗಿ ನಿರ್ಮಾಣ ಮಾಡಿರುವ ಮಸೀದಿ ತೆರವಿಗೆ ಗಡುವು ನೀಡಿದ್ದಾರೆ. ಇನ್ನು ಹಿಂದೂಗಳೇ ಹೆಚ್ಚಾಗಿರುವ ಪ್ರದೇಶದಲ್ಲಿ ಮಸೀದಿ ನಿರ್ಮಾಣಕ್ಕೆ ಹಿಂದೂಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮುಂದೆ ಇದು ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಅನ್ನೋದಕ್ಕೆ ಕಾಲವೇ ಉತ್ತರ ಹೇಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ.

2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ ಪುರುಷನಿಗೆ ಫೋನ್​​ ಕೊಟ್ಟಿದ್ದಾಳೆ. ಮುಂಬಯಿನಲ್ಲಿ ಇತ್ತಿಚೆಗೆ ಉಗ್ರವಾದಿಯ ಬಂಧನ ಆಗಿದ್ದು, ಆತನ ಬಳಿ 250ಕ್ಕೂ ಹೆಚ್ಚು ಎಟಿಎಂ ಕಾರ್ಡ್​​ಗಳು ಸಿಕ್ಕಿವೆ. ಅದರಲ್ಲಿ ನಿಮ್ಮ ಹೆಸರಿನ ಕಾರ್ಡ್ ಕೂಡ ಇದೆ. ನಿಮ್ಮ ಬ್ಯಾಂಕ್ ಖಾತೆಯ ಮೂಲಕ ಕೊಟ್ಯಾಂತರ ರೂಪಾಯಿ ಮನಿ ಲಾಂಡ್ರಿಂಗ್ ನಡೆದಿದೆ ಎಂದು ಬೆದರಿಸಿದ್ದಾರೆ. ಮುಖಕ್ಕೆ ಬಟ್ಟೆ ಧರಿಸಿದ್ದವರು ಹೇಳಿದ ಮಾತುಗಳಿಂದ ಭಯಗೊಂಡ ಪಲ್ಡೆನ್, ನನ್ನದೇನೂ ತಪ್ಪಿಲ್ಲ. ಈಗ ನಾನೇನು ಮಾಡಬೇಕು ಹೇಳಿ ಎಂದಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕರು ನಿವೃತ್ತ ಶಿಕ್ಷಕನ ಬಳಿ ಹಣ ಪೀಕಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಅರೆಸ್ಟ್ ವಂಚನೆಗೆ ಹೆದರಿ ಫ್ಲಾಟ್, ಸೈಟ್ ಮಾರಿದ್ದಲ್ಲದೆ ಸಾಲ ಮಾಡಿ 2 ಕೋಟಿ ರೂ. ಕಳೆದುಕೊಂಡ ಮಹಿಳಾ ಟೆಕ್ಕಿ

ತನಿಖೆಗಾಗಿ ನಿಮ್ಮ ಖಾತೆಯಲ್ಲಿರುವ ಹಣವನ್ನ ಹಂತಹಂತವಾಗಿ ನಮ್ಮ ಖಾತೆಗೆ ಹಾಕಿ. ನಿಮ್ಮ ಹಣವನ್ನ ನ್ಯಾಷನಲ್ ಫಂಡ್​​ಗೆ ಜಮೆ ಮಾಡಬೇಕು. ಬಳಿಕ ಹಣವನ್ನು ರಿಟರ್ನ್ ಕೊಡಲಾಗುವುದೆಂದು ನಂಬಿಸಿದ್ದಾರೆ. ವಿಷಯವನ್ನ ಯಾರೊಂದಿಗೂ ಶೇರ್ ಮಾಡದಂತೆ ಷರತ್ತು ಕೂಡ ವಿಧಿಸಿದ್ದಾರೆ.  ಡಿ. 3ರಿಂದ  11ರ ವರೆಗೆ ಬೇರೆ ಬೇರೆ ಖಾತೆಗೆ ಒಟ್ಟು 1,61,00,047 ರೂಪಾಯಿ ಹಾಕಿಸಿಕೊಂಡಿದ್ದ ವಂಚಕರು, ಮತ್ತೆ ಕರೆ ಮಾಡಿ ನಿಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂದಿದ್ದಾರೆ. ಅದು ಬೇಡವೆಂದರೆ ಮತ್ತೆ 40 ಲಕ್ಷ ಕೊಡಿ ಎಂದು ಡಿಮ್ಯಾಂಡ್​​ ಮಾಡಿದ್ದಾರೆ.

ಇದ್ದ ಹಣವನ್ನೆಲ್ಲ ಇವರಿಗೆ ಅದಾಗಲೇ ಕೊಟ್ಟಿದ್ದ ಪಲ್ಡೆನ್, ಸ್ನೇಹಿತನಿಗೆ ಕರೆ ಮಾಡಿ 40 ಲಕ್ಷ ಕೇಳಿದ್ದಾರೆ. ಆಗ ಇಷ್ಟೊಂದು ಹಣ ಯಾಕೆಂದು ಆತ ವಿಚಾರಿಸಿದ ವೇಳೆ ನಡೆದ ಘಟನೆಯನ್ನು ವಿವರಿಸಿದ್ದಾರೆ. ಆಗ ವಂಚನೆ ಬಗ್ಗೆ ಗೊತ್ತಾಗಿ, ಕೂಡಲೇ ಪಲ್ಡೆನ್ ಅವರು ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಕಾರವಾರ ಸೈಬರ್ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಟ್ಟೆ ಬಿಚ್ಚೊವರೆಗೂ ಬಿಡಲ್ಲ: ಪತಿ ಮತ್ತು ಮಾವನಿಂದ ಚಿತ್ರಹಿಂಸೆ

ಚಿಕ್ಕಮಗಳೂರು, ಜ.2: ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಹೊಸಹಳ್ಳಿಯಲ್ಲಿ ಪತಿ ತನ್ನ ಪತ್ನಿಗೆ ಗಂಡು ಮಗು ಬೇಕೆಂದು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ. ಈ ಪ್ರಕರಣದಲ್ಲಿ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪ ಅವರನ್ನು ಬಂಧಿಸಲಾಗಿದೆ. ತಾರಾ ಎಂಬ ಮಹಿಳೆ ಡಿ.29ರಂದು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾರಾ ಅವರು ತಮ್ಮ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಟಿವಿ9 ಜತೆಗೆ ಹಂಚಿಕೊಂಡಿದ್ದಾರೆ, ಊಟ ಮಾಡುತ್ತಿದ್ದಾಗ ತನ್ನ ತಟ್ಟೆಯನ್ನು ಕಿತ್ತು ನೆಲಕ್ಕೆಸೆದು, ನಂತರ ಬಟ್ಟೆ ಬಿಚ್ಚಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾಗಿ ವಿವರಿಸಿದ್ದಾರೆ. ತಾರಾ ಅವರ ಹೇಳಿಕೆಯ ಪ್ರಕಾರ, ಈ ಘಟನೆಯು ಸಂಜೆ ನಡೆದಿದೆ. ಅವರು ತಮ್ಮ ಕೆಲಸ ಮುಗಿಸಿ ಊಟಕ್ಕೆ ಕುಳಿತಿದ್ದಾಗ, ಪತಿ ತಿಮ್ಮಪ್ಪ “ನನಗೆ ಊಟ ಹಾಕಲ್ಲ, ನೀನು ಮಾತ್ರ ಊಟ ಮಾಡುತ್ತೀಯಾ” ಎಂದು ಹೇಳಿದ್ದಾನೆ. ನಂತರ ಆಕೆಯನ್ನು ವಿವಸ್ತ್ರಗೊಳಿಸಿ, ದೊಣ್ಣೆಯಿಂದ ಹೊಡೆದಿದ್ದಾನೆ. ತಾರಾ ಹಿಂಬಾಗಿಲಿನಿಂದ ಓಡಿಹೋಗಿ ಟವಲ್ ಸುತ್ತಿಕೊಂಡು ನೆರೆಮನೆಯವರ ಸಹಾಯದಿಂದ ಆಸ್ಪತ್ರೆಗೆ ಹೋಗಿದ್ದಾರೆ. ಲಿಂಗದಹಳ್ಳಿ ಪೊಲೀಸರ ಸಹಕಾರದಿಂದ ತಾವು ಜೀವಂತ ಉಳಿದಿರುವುದಾಗಿ ತಾರಾ ತಿಳಿಸಿದ್ದು, ತಮಗೆ ನ್ಯಾಯ ಸಿಗಬೇಕು ಎಂದು ಬೇಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಕುಟುಂಬ ಸದಸ್ಯರಿಂದ ಬೆದರಿಕೆ ಕರೆಗಳೂ ಬರುತ್ತಿವೆ ಎಂದು ಅವರು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನರ್ಸ್​​ಗೆ ಸೈಬರ್​ ವಂಚಕರಿಂದ ಮಕ್ಮಲ್​​ ಟೋಪಿ: ಕಳೆದುಕೊಂಡಿದ್ದು ಬರೋಬ್ಬರಿ 12 ಲಕ್ಷ – Kannada News | Chikkaballapur Nurse Loses 12 Lakh Rupees to Cyber Fraud

ಚಿಕ್ಕಬಳ್ಳಾಪುರ, ಜನವರಿ 02: ಪಾರ್ಟ್​​ ಟೈಂ ಕೆಲಸಕ್ಕಾಗಿ ಅಂತರ್ಜಾಲದಲ್ಲಿ ಹುಡುಕಾಟ ನಡೆಸುತ್ತಿದ್ದ ನರ್ಸ್​​ ಒಬ್ಬರು ಆನ್​​ಲೈನ್​​ ವಂಚನೆಗೆ ಒಳಗಾಗಿ ಬರೋಬ್ಬರಿ 12 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾನು ಮೋಸ ಹೋಗಿದ್ದು ಅರಿವಾದ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಆಕೆ ದೂರು ದಾಖಲಿಸಿದ್ದಾಳೆ.

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡ್ತಿದ್ದ ಭಾರತಿ ಎನ್ನುವ ಮಹಿಳೆ ಮನೆಯಲ್ಲಿ ಆರ್ಥಿಕವಾಗಿ ಸಮಸ್ಯೆ ಇದ್ದ ಹಿನ್ನೆಲೆ ಪಾರ್ಟ್​​ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಇನ್ಸ್ಟಾಗ್ರಾಮ್​​ ಲಿಂಕೊಂದು ಅವರ ಕಣ್ಣಿಗೆ ಬಿದ್ದಿದ್ದು, ಅದರ ಮೇಲೆ ಕ್ಲಿಕ್​​ ಮಾಡಿದ್ದರು. ಆ ಬಳಿಕ ಅವರಿಗೆ ಕಾಲ್​​ ಬಂದಿದ್ದು, ಟೆಲಿಗ್ರಾಮ್​​ ಗ್ರೂಪ್​​ ಒಂದಕ್ಕೆ ಭಾರತಿ ಅವರನ್ನು ಸೇರಿಸಿದ್ದರು. ಬಳಿಕ ಹಣದಾಸೆ ತೋರಿಸಿ ಇನ್ವೆಸ್ಟ್​​ ಮಾಡುವಂತೆ ಆರೋಪಿಗಳು ತಿಳಿಸಿದ್ದರು. ಅವರನ್ನು ನಂಬಿ ಹೇಳಿದಂತೆಲ್ಲ ಭಾರತಿ ಮಾಡಿದ್ದರು. ಅಂತಿಮವಾಗಿ ನಿಮ್ಮ ಖಾತೆಯಲ್ಲಿ 15 ಲಕ್ಷ ಹಣವಿದೆ ಎಂದಿದ್ದ ಆರೋಪಿಗಳು, ಅದನ್ನು ವಿತ್​​ ಡ್ರಾ ಮಾಡಲು ಅಂತ ನಾನಾ ಕಾರಣ ಹೇಳಿ ಬರೋಬ್ಬರಿ 12 ಲಕ್ಷ ರೂಪಾಯಿಯನ್ನು ತಮ್ಮ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶೃಂಗೇರಿ ವ್ಯಕ್ತಿಗೆ ಕೋಟ್ಯಂತರ ರೂ ವಂಚನೆ;  ಷೇರು ಮಾರ್ಕೆಟ್ ಬಗ್ಗೆ ಇರಲಿ ಎಚ್ಚರಿಕೆ

ಇನ್ನು ಹಣ ಸಿಗುವ ನಂಬಿಕೆಯಿಂದ ನರ್ಸ್​​ ಭಾರತಿ ತನ್ನ ಮೈಮೇಲೆ ಇದ್ದ ಚಿನ್ನಾಭರಣಗಳನ್ನು ಸಹ ಬ್ಯಾಂಕ್​​ನಲ್ಲಿ ಅಡ ಇಟ್ಟು ಹಣ ಕಟ್ಟಿದ್ದಾರೆ. ಆದ್ರೂ ವಂಚಕರು ಹೇಳಿದ್ದ ಆ 15 ಲಕ್ಷ ರೂ. ಮಾತ್ರ ಕೈ ಸೇರಿಲ್ಲ. ಅಂತಿಮವಾಗಿ ತಾನು ಮೋಸ ಹೋದ ಬಗ್ಗೆ ಭಾರತಿಗೆ ಅರಿವಾಗಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್​​ ವಂಚನೆಗಳ ಬಗ್ಗೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದರೂ ವಿದ್ಯಾವಂತರೇ ಇಂತಹ ಜಾಲಕ್ಕೆ ಸಿಕ್ಕಿ ಹಣ ಕಳೆದುಕೊಳ್ಳುತ್ತಿರೋದು ನಿಜಕ್ಕೂ ದುರ್ದೈವ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link