All posts by nagaraj11081993

ಎರಡು ತಿಂಗಳಿಂದ ಬೀದಿಗೆ ಬಿದ್ದಿರುವ ಕುಟುಂಬಗಳು; ಕೋಗಿಲು ಲೇಔಟ್‌ಗೆ ತಕ್ಷಣ ಪರಿಹಾರ, KG ಹಳ್ಳಿಗೆ ಅನ್ಯಾಯವೇ? – Kannada News | KG Halli Eviction: Bengaluru’s 80 Families Homeless, Awaiting Justice for 2 Months

ರೈಲ್ವೆ ಟ್ರ್ಯಾಕ್ ಪಕ್ಕದ ಶೆಡ್​ನಲ್ಲಿಯೇ ವಾಸಿಸುತ್ತಿರುವ ಕುಟುಂಬಗಳು

ಬೆಂಗಳೂರು,ಜನವರಿ 02: ಬೆಂಗಳೂರಿನ ಕಾಡುಗೊಂಡನಹಳ್ಳಿ (KG Halli) ರೈಲ್ವೆ ಟ್ರ್ಯಾಕ್ ಸಮೀಪದ ಚುನಾ ಲೈನ್ ಪ್ರದೇಶದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರ ದುಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಅಕ್ರಮವಾಗಿ ಕೋಗಿಲು ಲೇಔಟ್​ನಲ್ಲಿ ನೆಲೆಸಿದ್ದರೂ ಅಲ್ಲಿನ ನಿವಾಸಿಗಳಿಗೆ ಸರ್ಕಾರ ಕೊಟ್ಟ ಆಸರೆ ಕೆ ಜಿ ಹಳ್ಳಿ ನಿವಾಸಿಗಳಿಗೆ ಸಿಗದಂತಾಗಿದೆ.

ಶತಮಾನಗಳಿಂದ ನೆಲೆಸಿರುವವರಿಗಿಲ್ಲ ಆಶ್ರಯ

ಕಳೆದ ವರ್ಷದ ಅಕ್ಟೋಬರ್ 30ರಂದು ರೈಲ್ವೆ ಇಲಾಖೆ ನಡೆಸಿದ ತೆರವು ಕಾರ್ಯಾಚರಣೆಯಿಂದಾಗಿ ಸುಮಾರು 30 ಮನೆಗಳಲ್ಲಿ ವಾಸವಾಗಿದ್ದ 80ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಿದ್ದಿದ್ದು, ಎರಡು ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಇನ್ನೂ ಯಾವುದೇ ಪರಿಹಾರ ಅಥವಾ ಪರ್ಯಾಯ ವಸತಿ ಸಿಗದೆ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ವೇ ನಂಬರ್ 71ಕ್ಕೆ ಸೇರಿದ ಈ ಜಾಗದಲ್ಲಿ ಕಳೆದ 150 ವರ್ಷಗಳಿಂದ 88 ಕುಟುಂಬಗಳು ಬದುಕು ಕಟ್ಟಿಕೊಂಡಿದ್ದಾಗಿ ಸ್ಥಳೀಯರು ಹೇಳಿದ್ದಾರೆ. ಹಲವಾರು ದಶಕಗಳಿಂದ ಇಲ್ಲಿಯೇ ವಾಸವಿರುವ ಕುರಿತು ದಾಖಲೆಗಳನ್ನೂ ಅವರು ಹೊಂದಿದ್ದಾರೆ. 2016-17ರಲ್ಲಿ ಬಿಬಿಎಂಪಿಯೇ ಈ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಸಹಾಯ ನೀಡಿದ್ದೂ ಇದೆ ಎನ್ನಲಾಗಿದೆ.

ಇದನ್ನೂ ಓದಿ 150 ವರ್ಷಗಳಿಂದ ವಾಸವಿದ್ದ 29 ಕುಟುಂಬಗಳ ಮನೆ ನೆಲಸಮ: ಕೆಜಿ ಹಳ್ಳಿ, ಡಿಜೆ ಹಳ್ಳಿ‌ ನಿವಾಸಿಗಳಿಗೆ ಇನ್ನೂ ಇಲ್ಲ ಸೂರಿನ ಬಾಗ್ಯ

ರೈಲ್ವೆ ಟ್ರ್ಯಾಕ್ ಪಕ್ಕದ ಶೆಡ್​ನಲ್ಲಿಯೇ ವಾಸಿಸುತ್ತಿರುವ ಕುಟುಂಬಗಳು

ಸದ್ಯ ನಿರಾಶ್ರಿತರು ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ತಾತ್ಕಾಲಿಕ ಶೇಡ್‌ಗಳಲ್ಲಿ ವಾಸಿಸುತ್ತಿದ್ದು, ಮಳೆ, ಚಳಿಯಲ್ಲಿಯೇ ದಿನ ನೂಕುತ್ತಿದ್ದಾರೆ. ಮನೆಗಳನ್ನು ಒದಗಿಸುವುದಾಗಿ ಶಾಸಕ ಕೆ.ಜೆ. ಜಾರ್ಜ್ ಭರವಸೆ ನೀಡಿದ್ದರೂ ಅವರಿಂದ ಯಾವುದೇ ಸ್ಪಂದನೆ ಇಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ. ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ತ್ವರಿತ ಪರಿಹಾರ ದೊರೆತಿದ್ದರೆ, KG ಹಳ್ಳಿ ನಿರಾಶ್ರಿತರಿಗೆ ಮಾತ್ರ ತಿಂಗಳುಗಳಾದರೂ ನ್ಯಾಯ ಸಿಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣ ಕ್ರಮ ಕೈಗೊಂಡು ಮಾನವೀಯ ನೆಲೆಯಲ್ಲಿ ಪರಿಹಾರ ನೀಡಬೇಕೆಂಬುದು ಹಳ್ಳಿಗರು ಒತ್ತಾಯಿಸಿದ್ದಾರೆ.

ವರದಿ: ಅರುಣ್​ ಕುಮಾರ್ ಆರ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Vastu Tips: ಮನೆಯಲ್ಲಿ ಗಂಗಾಜಲವಿದ್ದರೆ ಈ ತಪ್ಪು ಮಾಡಲೇಬೇಡಿ; ಅಶಾಂತಿ, ಬಡತನಕ್ಕೆ ಕಾರಣವಾಗಬಹುದು – Kannada News | Ganga Jal at Home: Rules, Benefits and Vastu Tips for Positive Energy

ಹಿಂದೂ ಧರ್ಮದಲ್ಲಿ, ಗಂಗಾ ಜಲ ವಿಶೇಷ ಮಹತ್ವವಿದೆ. ಅದರಂತೆ ಯಾವ ಮನೆಯಲ್ಲಿ ಗಂಗಾ ಜಲ ಇದೆಯೋ ಆ ಮನೆಗೆ ನಕಾರಾತ್ಮಕ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಗಂಗಾ ಜಲ ಸಂಗ್ರಹಿಸುವಾಗ ಕೆಲವು ನಿಯಮಗಳನ್ನು ಪಾಲಿಸದಿದ್ದರೆ, ಅದು ಪ್ರತಿಕೂಲ ಪರಿಣಾಮಗಳನ್ನು ಬೀರಬಹುದು. ಆದ್ದರಿಂದ ಮನೆಯಲ್ಲಿ ಗಂಗಾ ಜಲ ಇಡಲು ಕೆಲವು ಪ್ರಮುಖ ನಿಯಮಗಳು ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಇಲ್ಲಿ

ಪ್ಲಾಸ್ಟಿಕ್ ಪಾತ್ರೆ ತಪ್ಪಿಸಿ:

ಜನರು ಸಾಮಾನ್ಯವಾಗಿ ಹರಿದ್ವಾರ ಅಥವಾ ಋಷಿಕೇಶದಿಂದ ಗಂಗಾ ಜಲವನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತಂದು ಹಾಗೆಯೇ ಸಂಗ್ರಹಿಸುತ್ತಾರೆ. ಧರ್ಮಗ್ರಂಥಗಳ ಪ್ರಕಾರ, ಗಂಗಾ ಜಲವನ್ನು ಎಂದಿಗೂ ಪ್ಲಾಸ್ಟಿಕ್ ಪಾತ್ರೆಗಳಲ್ಲಿ ಸಂಗ್ರಹಿಸಬಾರದು. ಪ್ಲಾಸ್ಟಿಕ್ ಅನ್ನು ಅಶುದ್ಧವೆಂದು ಪರಿಗಣಿಸಲಾಗುತ್ತದೆ. ಅದನ್ನು ಯಾವಾಗಲೂ ತಾಮ್ರ, ಹಿತ್ತಾಳೆ, ಬೆಳ್ಳಿ ಅಥವಾ ಗಾಜಿನ ಪಾತ್ರೆಗಳಲ್ಲಿ ಸಂಗ್ರಹಿಸಬೇಕು.

ಸರಿಯಾದ ದಿಕ್ಕು ಮತ್ತು ಸ್ಥಳ:

ಗಂಗಾ ಜಲವನ್ನು ಮನೆಯ ಯಾವುದೇ ಮೂಲೆಯಲ್ಲಿ ಇಡಬಾರದು. ವಾಸ್ತು ಶಾಸ್ತ್ರದ ಪ್ರಕಾರ , ಇದನ್ನು ದೇವರುಗಳ ದಿಕ್ಕು ಎಂದು ಪರಿಗಣಿಸಲಾಗಿರುವುದರಿಂದ, ಈಶಾನ್ಯ ದಿಕ್ಕಿನಲ್ಲಿ ಇಡುವುದು ಯಾವಾಗಲೂ ಅತ್ಯಂತ ಮಂಗಳಕರವಾಗಿದೆ. ನೀವು ಅದನ್ನು ನಿಮ್ಮ ಮನೆಯಲ್ಲಿರುವ ದೇವರ ಕೋಣೆಯಲ್ಲಿಯೂ ಇಡಬಹುದು.

ಕತ್ತಲೆ ಮತ್ತು ಕೊಳಕಿನಿಂದ ದೂರ:

ಗಂಗಾ ಜಲವನ್ನು ಎಂದಿಗೂ ಕತ್ತಲೆಯ ಕೋಣೆಯಲ್ಲಿ ಅಥವಾ ಬೆಳಕಿಗೆ ತಲುಪದ ಕಪಾಟಿನ ಮೂಲೆಯಲ್ಲಿ ಸಂಗ್ರಹಿಸಬೇಡಿ. ಅಲ್ಲದೆ, ಅದರ ಸುತ್ತಲಿನ ಸ್ವಚ್ಛತೆಗೆ ವಿಶೇಷ ಗಮನ ಕೊಡಿ. ಅದನ್ನು ಎಂದಿಗೂ ಅಡುಗೆಮನೆ ಅಥವಾ ಸ್ನಾನಗೃಹದ ಬಳಿ ಇಡಬಾರದು.

ಶುಚಿತ್ವವನ್ನು ಕಾಪಾಡಿಕೊಳ್ಳಿ:

ಗಂಗಾ ಜಲವನ್ನು ಎಂದಿಗೂ ತೊಳೆಯದ ಅಥವಾ ಕೊಳಕು ಕೈಗಳಿಂದ ಮುಟ್ಟಬಾರದು. ಮುಟ್ಟುವ ಮೊದಲು ಯಾವಾಗಲೂ ಸ್ನಾನ ಮಾಡಿ ಅಥವಾ ಕೈಕಾಲುಗಳನ್ನು ತೊಳೆಯಿರಿ. ಗಂಗಾ ಜಲವನ್ನು ಇಡುವ ಮನೆಗಳಲ್ಲಿ ಮಾಂಸ ಮತ್ತು ಮದ್ಯವನ್ನು ಎಂದಿಗೂ ಸೇವಿಸಬಾರದು, ಏಕೆಂದರೆ ಇದು ಅಶಾಂತಿ ಮತ್ತು ಬಡತನಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ

ಮನೆಯಾದ್ಯಂತ ಸಿಂಪಡಿಸಿ:

ಗಂಗಾ ಜಲವನ್ನು ಕೇವಲ ಸಂಗ್ರಹಿಸಿಟ್ಟರೆ ಸಾಲದು. ಶುಭ ಫಲಿತಾಂಶಗಳಿಗಾಗಿ, ನಿಯತಕಾಲಿಕವಾಗಿ ಮನೆಯಾದ್ಯಂತ (ವಿಶೇಷವಾಗಿ ಹುಣ್ಣಿಮೆಯ ದಿನಗಳು ಅಥವಾ ಹಬ್ಬಗಳಂದು) ಸಿಂಪಡಿಸಿ. ಇದು ಮನೆಗೆ ವಾಸ್ತು ಶಾಂತಿಯನ್ನು ತರುತ್ತದೆ ಮತ್ತು ನಕಾರಾತ್ಮಕ ಶಕ್ತಿಯನ್ನು ಹೊರಹಾಕುತ್ತದೆ.

ಶನಿ ದೋಷದಿಂದ ಮುಕ್ತಿ:

ಯಾರಾದರೂ ಶನಿಯ ಸಾಡೇ ಸಾತಿ ಅಥವಾ ಧೈಯದ ಪ್ರಭಾವಕ್ಕೆ ಒಳಗಾಗಿದ್ದರೆ, ಶನಿವಾರದಂದು, ಒಂದು ಪಾತ್ರೆಯಲ್ಲಿ ಶುದ್ಧ ನೀರಿನಿಂದ ತುಂಬಿಸಿ, ಕೆಲವು ಹನಿ ಗಂಗಾ ಜಲವನ್ನು ಸೇರಿಸಿ, ಅದನ್ನು ಅರಳಿ ಮರಕ್ಕೆ ಅರ್ಪಿಸಿ. ಇದು ಶನಿದೋಷವನ್ನು ಕಡಿಮೆ ಮಾಡುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:58 am, Fri, 2 January 26

Source link

ಕೋಗಿಲು ನಿರಾಶ್ರಿತರ ಮೇಲೆ ಬಹುದೊಡ್ಡ ಅನುಮಾನ: ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್ – Kannada News | Kogilu Eviction Row: Major Doubts Over Displaced Families, Police and District Administration Begin Verification Drive

ಬೆಂಗಳೂರು, ಜನವರಿ 2: ಕೋಗಿಲು ಲೇಔಟ್‌ನಲ್ಲಿನ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆಗೆ ಮುಂದಾಗಿವೆ. ಪುನರ್ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಸೀಮ್ ಲೇಔಟ್ ಹಾಗೂ ಫಕೀರ್ ಲೇಔಟ್‌ನ ಸಂತ್ರಸ್ತರ ಪೈಕಿ ಕೆಲವರು ಬಾಂಗ್ಲಾದೇಶ (Bangladesh) ಮೂಲದವರಾಗಿರಬಹುದೆಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಜಿಲ್ಲಾಡಳಿತವು ಪುನರ್ವಸತಿ ನೀಡುವ ಮುನ್ನ ಪೊಲೀಸ್ ವೇರಿಫಿಕೇಶನ್ ನಡೆಸಲು ತೀರ್ಮಾನಿಸಿದೆ.

ಈ ಸಂಬಂಧ ಪೊಲೀಸ್ ಇಲಾಖೆಗೆ ಅಧಿಕೃತ ಪತ್ರ ಬರೆಯಲು ಜಿಲ್ಲಾಧಿಕಾರಿ ಮುಂದಾಗಿದ್ದಾರೆ. ಅರ್ಜಿ ಸಲ್ಲಿಸಿರುವ ಸಂತ್ರಸ್ತರ ಮೂಲ ಎಲ್ಲಿ ಎಂಬುದನ್ನು ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುತ್ತದೆ ಎನ್ನಲಾಗಿದೆ.

ಜಿಲ್ಲಾಡಳಿತದಿಂದ ದಾಖಲೆಗಳ ಕೂಲಂಕಷ ಪರಿಶೀಲನೆ

ಇದರ ಜೊತೆಗೆ ಪೊಲೀಸ್ ವೇರಿಫಿಕೇಶನ್‌ಗೆ ಮುನ್ನವೇ ಜಿಲ್ಲಾಡಳಿತದಿಂದ ದಾಖಲೆಗಳ ಕಟ್ಟುನಿಟ್ಟಿನ ಪರಿಶೀಲನೆ ನಡೆಯುತ್ತಿದೆ. ಅರ್ಜಿದಾರರ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲಾ ಪ್ರಮುಖ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ನಕಲಿ ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಬಳಕೆ ಮಾಡಿಕೊಂಡಿರುವವರು ಇದ್ದಾರೆಯೇ ಎಂಬುದನ್ನೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕಾನೂನುಬದ್ಧವಾಗಿ ಅರ್ಹರಾದವರಿಗೆ ಮಾತ್ರ ಪುನರ್ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಈ ಪರಿಶೀಲನೆಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು

ಕೋಗಿಲು ಬಡಾವಣೆ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರತಿಪಕ್ಷ ಬಿಜೆಪಿ ನಿಯೋಗ ಕೂಡ, ಸ್ಥಳದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರ ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು. ಅಲ್ಲದೆ, ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಬಗ್ಗೆಯೂ ಸಂಶಯ ವ್ಯಕ್ತಪಡಿಸಿತ್ತು. ಮತ್ತೊಂದೆಡೆ, ರಾಜೀವ್ ಗಾಂಧಿ ವಸತಿ ಸ್ಕೀಂನ ಆಶ್ರಯ ಯೋಜನೆ ಅಡಿ ಮನೆಗಳನ್ನು ವಿತರಿಸುವುದಕ್ಕೆ ಅಧಿಕಾರಿಗಳಿಗೆ ನಿಯಮಗಳ ತೊಡಕು ಎದುರಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕೋಗಿಲು ಬಡಾವಣೆಯ ನಿವಾಸಿಗಳ ಮೂಲ ಪತ್ತೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇಶದ್ರೋಹ ಆರೋಪಿ ಉಮರ್ ಖಾಲೀದ್​ಗೆ ನ್ಯೂಯಾರ್ಕ್ ಮೇಯರ್ ಕಾಳಜಿ ಪತ್ರ; 8 ಅಮೆರಿಕನ್ ಜನಪ್ರತಿನಿಧಿಗಳಿಂದಲೂ ಬೆಂಬಲ – Kannada News | Delhi Riots accused Umar Khalid gets support from 8 US lawmakers and New York Mayor Zohran Mamdani

ನವದೆಹಲಿ, ಜನವರಿ 2: ಐದು ವರ್ಷದ ಹಿಂದೆ ದೆಹಲಿಯಲ್ಲಿ ಸಂಭವಿಸಿದ ದಂಗೆ, ಪ್ರತಿಭಟನೆಯಲ್ಲಿ ಪಿತೂರಿ ಮಾಡಿದ ಆರೋಪದಲ್ಲಿ ಜೈಲಿನಲ್ಲಿರುವ ಉಮರ್ ಖಾಲೀದ್​ಗೆ ಅಮೆರಿಕದಲ್ಲಿ ಈಗ ಒಂದು ಗುಂಪು ಬೆಂಬಲ ಕೊಡಲು ಯತ್ನಿಸುತ್ತಿದೆ. ಅಮೆರಿಕದ ಎಂಟು ಮಂದಿ ಜನಪ್ರತಿನಿಧಿಗಳು ಉಮರ್ ಖಾಲೀದ್ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಜಮ್ಮು ಕಾಶ್ಮೀರದ ವಿದ್ಯಾರ್ಥಿ ಮುಖಂಡರಾಗಿದ್ದ ಉಮರ್ ಖಾಲೀದ್ ಅವರು ಹಾಗೂ ಇತರ ಸಹ-ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಈ ಎಂಟು ಜನರು ಪತ್ರ ಬರೆದಿದ್ದಾರೆ.

ಡಿಸೆಂಬರ್ 30ರಂದು ಬರೆಯಲಾಗಿರುವ ಈ ಪತ್ರವನ್ನು ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ಮೋಹನ್ ಕ್ವಾತ್ರ ಅವರಿಗೆ ಕೊಡಲಾಗಿದೆ. ಉಮರ್ ಖಾಲೀದ್​ರನ್ನು ಅಂತಾರಾಷ್ಟ್ರೀಯ ಕಾನೂನು ಪ್ರಕಾರ ಜಾಮೀನು ನೀಡಿ, ನ್ಯಾಯಯುತವಾಗಿ ವಿಚಾರಣೆ ನಡೆಸಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ:

ನ್ಯೂಯಾರ್ಕ್ ಮೇಯರ್ ಜೋಹ್ರನ್ ಮಮ್ದಾನಿ ಅವರಿಂದಲೂ ಬೆಂಬಲ

ಖ್ಯಾತ ಚಿತ್ರ ತಯಾರಕಿ ಮೀರಾ ನಾಯರ್ ಅವರ ಮಗ, ಹಾಗೂ ನ್ಯೂಯಾರ್ಕ್ ಸಿಟಿಯ ಹೊಸ ಮೇಯರ್ ಜೋಹ್ರನ್ ಮಮ್ದಾನಿ ಅವರು ಉಮರ್ ಖಾಲೀದ್​ಗೆ ವೈಯಕ್ತಿಕವಾಗಿ ಪತ್ರ ಬರೆದಿದ್ದಾರೆ. ‘ನಿಮ್ಮ ಬಗ್ಗೆಯೇ ಚಿಂತಿಸುತ್ತಿದ್ದೇವೆ’ ಎಂದು ಹೇಳಿ ತಮ್ಮ ಕೈಯಿಂದಲೇ ಬರೆದ ಪತ್ರವನ್ನು ಡಿಸೆಂಬರ್ ತಿಂಗಳಲ್ಲಿ ಉಮರ್ ಖಾಲೀದ್ ಅವರ ಪೋಷಕರಿಗೆ ಕೊಟ್ಟಿದ್ದಾರೆ. ಉಮರ್ ಅವರ ಪೋಷಕರು ಅಮೆರಿಕಕ್ಕೆ ಹೋಗಿದ್ದಾಗ ಈ ಪತ್ರ ಕೊಡಲಾಗಿದೆ.

ಉಮರ್ ಖಾಲೀದ್ ಅವರ ಸಹಚರೆಯಾದ ಬನಜ್ಯೋತ್ಸ್ನಾ ಲಾಹಿರಿ ಅವರು ತಮ್ಮ ಎಕ್ಸ್​ನಲ್ಲಿ ಈ ವಿಚಾರವನ್ನು ಟ್ವೀಟ್ ಮಾಡಿದ್ದಾರೆ.

‘ಪ್ರಿಯ ಉಮರ್, ಜೀವನದ ಕಹಿ ಹಾಗೂ ಅದು ಸ್ವನಾಶಕ್ಕೆ ಆಸ್ಪದ ಕೊಡದೇ ತಡೆಯುವುದು ಎಷ್ಟು ಮುಖ್ಯ ಎಂದು ನೀವು ಹೇಳಿದ ಮಾತುಗಳನ್ನು ಆಗಾಗ ನೆನಪಿಸಿಕೊಳ್ಳುತ್ತಿರುತ್ತೇನೆ. ನಿಮ್ಮ ಪೋಷಕರನ್ನು ಭೇಟಿ ಮಾಡಿದ್ದು ಸಂತಸ ತಂದಿತು. ನಾವೆಲ್ಲರೂ ನಿಮ್ಮದೇ ಯೋಚನೆಯಲ್ಲಿದ್ದೇವೆ’ ಎಂದು ಜೋಹ್ರಾನ್ ಮಮ್ದಾನಿ ಆ ಪತ್ರದಲ್ಲಿ ಬರೆದಿದ್ದಾರೆ.

ದಿಲ್ಲಿ ದಂಗೆ ಪ್ರಕರಣದಲ್ಲಿ ಉಮರ್ ಖಾಲೀದ್ ಆರೋಪಿ

ದೆಹಲಿಯ ಜೆಎನ್​ಯು ಯೂನಿವರ್ಸಿಟಿಯ ವಿದ್ಯಾರ್ಥಿ ಮುಖಂಡರಾಗಿದ್ದ ಉಮರ್ ಖಾಲೀದ್ ಅವರನ್ನು 2020ರ ದೆಹಲಿ ಹಿಂಸಾಚಾರ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಈ ದಂಗೆಗೆ ಪಿತೂರಿ ನಡೆಸಿದ ಆರೋಪ ಉಮರ್ ಖಾಲೀದ್ ಹಾಗೂ ಇತರ ಕೆಲವರ ಮೇಲೆ ಇದೆ. ಐದು ವರ್ಷದಿಂದಲೂ ಅವರನ್ನು ಬಂಧನದಲ್ಲಿಡಲಾಗಿದೆ. ಡಿಸೆಂಬರ್ 16-29ರವರೆಗೆ ಅವರ ಸಹೋದರಿಯ ಮದುವೆ ನಿಮಿತ್ತ ಜಾಮೀನು ಕೊಡಲಾಗಿತ್ತು. ಡಿಸೆಂಬರ್ 29ರಿಂದಲೂ ಮತ್ತೆ ಅವರು ಬಂಧನದಲ್ಲೇ ಮುಂದುವರಿದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್​’ಗೆ ದೊಡ್ಡ ಹೊಡೆತ ಕೊಟ್ಟ ನೆಪೋ ಕಿಡ್ ಚಿತ್ರ – Kannada News | Dhurandhar Shows Cut: Agastya Nanda’s Ikkis Takes Over Screens and Box Office

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ ಬಿಡುಗಡೆಯಾದಾಗಿನಿಂದ ಸಾಕಷ್ಟು ಮೆಚ್ಚುಗೆ ಪಡೆದಿದೆ. ಗಳಿಕೆ ಕೂಡ ಚೆನ್ನಾಗಿಯೇ ಆಗುತ್ತಿದೆ. ಈ ಚಿತ್ರದ ಮುಂದೆ, ‘ಕಿಸ್ ಕಿಸ್ಕೋ ಪ್ಯಾರ್ ಕರೂ 2’, ‘ಅವತಾರ್: ಫೈರ್ ಅಂಡ್ ಆ್ಯಶ್’ ಮತ್ತು ‘ತು ಮೇರಿ ಮೇ ತೇರಾ ಮೇ ತೇರಾ ತು ಮೇರಿ’ ಕೂಡ ಬಾಕ್ಸ್ ಆಫೀಸ್‌ನಲ್ಲಿ ಉಳಿಯಲು ವಿಫಲವಾಯಿತು. ಚಿತ್ರಮಂದಿರಗಳಲ್ಲಿ ಪರದೆ ಹಂಚಿಕೆ ಮತ್ತು ವಿತರಣೆಯ ವಿಷಯದಲ್ಲಿ ‘ಧುರಂಧರ್’ ಚಿತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ ಈಗ ‘ಧುರಂಧರ್’ ಹೊಸ ವರ್ಷದಲ್ಲಿ ದೊಡ್ಡ ಹೊಡೆತ ಬಿದ್ದಿದೆ.

‘ಧುರಂಧರ್’ ಚಿತ್ರಕ್ಕೆ ನೀಡಿದ್ದ ಶೇ. 50 ರಷ್ಟು ಪ್ರದರ್ಶನಗಳನ್ನು ತೆಗೆದು ಹಾಕಲಾಗಿದೆಯಂತೆ, ಅದು ಕೂಡ ಹೊಸ ಸ್ಟಾರ್ ಕಿಡ್‌ನ ಚಿತ್ರದ ಕಾರಣದಿಂದಾಗಿ. ಈ ಸ್ಟಾರ್ ಕಿಡ್‌ನ ಚೊಚ್ಚಲ ಚಿತ್ರ ಜನವರಿ 1, 2026 ರಂದು ಬಿಡುಗಡೆಯಾಯಿತು. ಅದರ ನಂತರ, ‘ಧುರಂಧರ್’ ಚಿತ್ರದ ಪ್ರದರ್ಶನಗಳನ್ನು ಕಡಿಮೆ ಮಾಡಲಾಯಿತು ಎನ್ನಲಾಗಿದೆ.

ಈ ಸ್ಟಾರ್ ಮಗ ಬೇರೆ ಯಾರೂ ಅಲ್ಲ, ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದ. ಅಗಸ್ತ್ಯ ಅವರ ‘ಇಕ್ಕಿಸ್’ ಚಿತ್ರ ಹೊಸ ವರ್ಷದ ಮೊದಲ ದಿನದಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಇದು ದಿವಂಗತ ನಟ ಧರ್ಮೇಂದ್ರ ಅವರ ಕೊನೆಯ ಚಿತ್ರ.

‘ಇಕ್ಕಿಸ್’ ಮತ್ತು ‘ಧುರಂಧರ್’ ಚಿತ್ರಗಳ ವಿತರಕರು ಮತ್ತು ನಿರ್ಮಾಪಕರು ಒಂದೇ. ಆದ್ದರಿಂದ, ರಣವೀರ್ ಸಿಂಗ್ ನಟಿಸಿದ ‘ಧುರಂಧರ್’ ಚಿತ್ರದ ಪ್ರದರ್ಶನಗಳನ್ನು ಕಡಿಮೆ ಮಾಡಿದರೂ ಅವರಿಗೆ ಯಾವುದೇ ಅಭ್ಯಂತರವಿರಲಿಲ್ಲ.ಈ ಚಿತ್ರವು ಈಗಾಗಲೇ ಉತ್ತಮ ಹಣ ಗಳಿಸಿದೆ. ‘ಇಕ್ಕಿಸ್’ ಚಿತ್ರಕ್ಕೆ ಆ ಅವಕಾಶ ನೀಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ‘ಧುರಂಧರ್’ ಬಿಡುಗಡೆಯಾದ ಐದು ವಾರಗಳನ್ನು ಪೂರ್ಣಗೊಳಿಸಿರುವುದರಿಂದ, ಆ ಚಿತ್ರದ ಪ್ರದರ್ಶನ ಏರಿಸಲಾಗಿದೆ.

ಇದನ್ನೂ ಓದಿ: ಕನ್ನಡತಿ ಭೂಮಿ ಶೆಟ್ಟಿ ಸಿನಿಮಾನಲ್ಲಿ ‘ಧುರಂಧರ್’ ಸ್ಟಾರ್ ಅಕ್ಷಯ್ ಖನ್ನಾ

‘ಧುರಂಧರ್’ ಪ್ರದರ್ಶನ ಕಾಣತ್ತಿದ್ದ ಸಿಂಗಲ್ ಸ್ಕ್ರೀನ್‌ಗಳಲ್ಲಿ ಈಗ’ಇಕ್ಕಿಸ್’ ಪ್ರದರ್ಶನ ಕಾಣಲಿದೆ. ಆದ್ದರಿಂದ, ಅಗಸ್ತ್ಯ ಅವರ ಚಿತ್ರಕ್ಕೆ ದೊಡ್ಡ ಅನುಕೂಲ ಸಿಗಲಿದೆ. ಮುಂಬೈನಲ್ಲಿ ಕಾರ್ತಿಕ್ ಆರ್ಯನ್ ಮತ್ತು ಅನನ್ಯ ಪಾಂಡೆ ಅವರ ‘ತು ಮೇರಿ ಮೈ ತೇರಾ ಮೈ ತೇರಾ ತು ಮೇರಿ’ಗಿಂತ ‘ಇಕ್ಕಿಸ್’ ಚಿತ್ರಕ್ಕೆ ಹೆಚ್ಚಿನ ಶೋ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕನ್ನಡತಿ ಭೂಮಿ ಶೆಟ್ಟಿ ಸಿನಿಮಾನಲ್ಲಿ ‘ಧುರಂಧರ್’ ಸ್ಟಾರ್ ಅಕ್ಷಯ್ ಖನ್ನಾ – Kannada News | Akshay Khanna acting in Bhoomi Shetty’s movie Mahakali

ಅಕ್ಷಯ್ ಖನ್ನಾ (Akshay Khanna), ದಶಕಗಳಿಂದ ಚಿತ್ರರಂಗದಲ್ಲಿದ್ದರೂ ಸಹ ಆರಕ್ಕೇರಿರಲಿಲ್ಲ, ಮೂರಕ್ಕಿಳಿದಿರಲಿಲ್ಲ. ಆದರೆ ಈಗ ‘ಧುರಂಧರ್’ ಸಿನಿಮಾ ಮೂಲಕ ಏಕಾಏಕಿ ಸ್ಟಾರ್ ಆಗಿದ್ದಾರೆ. ಅದ್ಭುತ ನಟ ಅಕ್ಷಯ್ ಖನ್ನಾ ಅವರ ನಟನಾ ಪ್ರತಿಭೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹಠಾತ್ತನೇ ಅಕ್ಷಯ್ ಖನ್ನಾ ಬೇಡಿಕೆ ಏರಿಕೆ ಆಗಿದೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆಯೂ ಸಹ ದುಪ್ಪಟ್ಟಾಗಿದೆ. ಹಠಾತ್ತನೇ ಬಂದ ಬೇಡಿಕೆ, ಜನಪ್ರಿಯತೆಯ ಪರಿಣಾಮ ಬಾಲಿವುಡ್​​ನ ಸ್ಟಾರ್ ನಟರ ಸಿನಿಮಾಗಳನ್ನೇ ಕೈಬಿಡುತ್ತಿದ್ದಾರೆ ಅಕ್ಷಯ್ ಖನ್ನಾ, ಆದರೆ ಇದೀಗ ಅವರು ಕನ್ನಡತಿ, ನಟಿ ಭೂಮಿ ಶೆಟ್ಟಿ ನಟಿಸುತ್ತಿರುವ ಹೊಸ ಸಿನಿಮಾನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

ಕುಂದಾಪುರದ ಭೂಮಿ ಶೆಟ್ಟಿ, ಕನ್ನಡದ ‘ಇಕ್ಕಟ್’ ಸಿನಿಮಾ ಮೂಲಕ ನಟನೆ ಆರಂಭಿಸಿದರು. ಬಳಿಕ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇದೀಗ ಭೂಮಿ ಶೆಟ್ಟಿ ನಟಿಸುತ್ತಿರುವ ತೆಲುಗು ಸಿನಿಮಾ ‘ಮಹಾಕಾಳಿ’ ಚಿತ್ರೀಕರಣ ಚಾಲ್ತಿಯಲ್ಲಿದ್ದು ಈ ಸಿನಿಮಾನಲ್ಲಿ ಅಕ್ಷಯ್ ಖನ್ನಾ ಸಹ ನಟಿಸಿದ್ದಾರೆ. ಅಕ್ಷಯ್ ಖನ್ನಾ ಈಗಾಗಲೇ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಸಿನಿಮಾ ನಿರ್ದೇಶನ ಮಾಡುತ್ತಿರುವ ಪೂಜಾ ಕೊಲ್ಲೂರು ಅವರು ಅಕ್ಷಯ್ ಖನ್ನಾ ಜೊತೆಗಿನ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಅಕ್ಷಯ್ ಖನ್ನಾ ಬದಲಿಗೆ ‘ಪಾತಾಳ್ ಲೋಕ್’ ನಟನಿಗೆ ‘ದೃಶ್ಯಂ 3’ ಅವಕಾಶ

ಹೆಸರೇ ಸೂಚಿಸುತ್ತಿರುವಂತೆ ‘ಮಹಾಕಾಳಿ’ ಸಿನಿಮಾ ಫಿಕ್ಷನಲ್ ಸಿನಿಮಾ ಆಗಿದ್ದು, ಅಕ್ಷಯ್ ಖನ್ನಾ ಅವರು ವಿಶ್ವಾಮಿತ್ರನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶ್ವಾಮಿತ್ರನ ಪಾತ್ರ ಸಿನಿಮಾದ ಬಹು ಮುಖ್ಯ ಪಾತ್ರಗಳಲ್ಲಿ ಒಂದಾಗಿದ್ದು, ಈ ಬಗ್ಗೆ ಮಾತನಾಡಿರುವ ನಿರ್ದೇಶಕಿ ಪೂಜಾ ಕೊಲ್ಲೂರು, ‘ಶುಕ್ರಾಚಾರ್ಯ ಪಾತ್ರ ವಿಲನ್ ಅಥವಾ ಹೀರೋ ಎಂದಲ್ಲ. ಎರಡಕ್ಕಿಂತಲೂ ಭಿನ್ನವಾದ ವ್ಯಕ್ತಿತ್ವ ಆ ಪಾತ್ರದ್ದು. ಹಾಗಾಗಿ ನಾವು ಅಕ್ಷಯ್ ಖನ್ನಾ ಅಂಥಹಾ ಅದ್ಭುತ ನಟರನ್ನು ಆ ಪಾತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇವೆ’ ಎಂದಿದ್ದಾರೆ. ಅಕ್ಷಯ್ ಖನ್ನಾ ಅವರ ದೃಶ್ಯಗಳನ್ನು ಮುಂಬೈನಲ್ಲಿಯೇ ಚಿತ್ರೀಕರಣ ಮಾಡಿದೆ ಚಿತ್ರತಂಡ.

ಈ ಹಿಂದೆ ‘ಹನುಮ್ಯಾನ್’ ಸಿನಿಮಾ ಮೂಲಕ ಭಾರಿ ದೊಡ್ಡ ಹಿಟ್ ನೀಡಿರುವ ಇದೀಗ ರಿಷಬ್ ಶೆಟ್ಟಿ ಜೊತೆಗೆ ‘ಜೈ ಹನುಮಾನ್’ ಸಿನಿಮಾ ನಿರ್ದೇಶನ ಮಾಡುತ್ತಿರುವ ಪ್ರಶಾಂತ್ ವರ್ಮಾ, ‘ಮಹಾಕಾಳಿ’ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಪೂಜಾ ಕೊಲ್ಲೂರು ಸಹ ಕನ್ನಡದವರೇ ಆಗಿದ್ದು, ಈ ಹಿಂದೆ ತೆಲುಗಿನ ‘ಮಾರ್ಟಿನ್ ಲೂಥರ್ ಕಿಂಗ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಆ ಸಿನಿಮಾನಲ್ಲಿ ಸಂಪೂರ್ಣೇಶ್ ಬಾಬು ನಾಯಕನಾಗಿ ನಟಿಸಿದ್ದರು. ತೆಲುಗಿನ ‘ಮಂಡೇಲ’ ಸಿನಿಮಾದ ರೀಮೇಕ್ ಅದಾಗಿತ್ತು. ಇದೀಗ ‘ಮಹಾಕಾಳಿ’ ಪೂಜಾ ಅವರ ಸ್ವಂತ ಸಿನಿಮಾ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ – Kannada News | Sonal Monteiro Tharun Sudhir New Home video And Photos Sharan Wish him Best of Luck

ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ (Sonal) ಅವರು ವಿವಾಹ ಆಗಿ ವರ್ಷದ ಬಳಿಕ ಹೊಸ ಮನೆ ಪ್ರವೇಶಿಸಿದ್ದಾರೆ. ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದು, ಅದಕ್ಕೆ ಗೃಹಪ್ರವೇಶ ನಡೆದಿದೆ. ಆ ಸಂದರ್ಭದ ವಿಡಿಯೋನ ಸೋನಲ್ ಹಂಚಿಕೊಂಡಿದ್ದಾರೆ. ಮನೆಯಲ್ಲಿ ಸುಧೀರ್ ಫೋಟೋ ಇಟ್ಟು ಪೂಜೆ ಮಾಡಲಾಗಿದೆ. ಮನೆಗೆ ತರುಣ್ ಗೆಳೆಯ ಶರಣ್, ಶ್ರುತಿ ಮೊದಲಾದವರು ಆಗಮಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೊಸ ವರ್ಷಕ್ಕೆ ಹೊಸ ರೂಲ್ಸ್​: ಫ್ರಿಡ್ಜ್, ಟಿವಿ ಖರೀದಿಸುವ ಮುನ್ನ ಸ್ಟಾರ್ ಲೇಬಲ್ ಕಡ್ಡಾಯವಾಗಿ​​ ಗಮನಿಸಲೇಬೇಕು – Kannada News | New Energy Star Rules: Appliances Must Have Labeling for Electricity Conservation

ಹೊಸ ವರ್ಷಕ್ಕೆ ಹೊಸ ಹೊಸ ರೂಲ್ಸ್​​​ಗಳನ್ನು ತರಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರು ಪಾಲಿಸಲೇಬೇಕಾದ ಕೆಲವೊಂದು ನಿಯಮಗಳನ್ನು ತರಲು ಮುಂದಾಗಿದೆ. ಇದೀಗ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ಸರ್ಕಾರದ ಪ್ರಯತ್ನದ ಭಾಗವಾಗಿ, ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು, ಎಲ್‌ಪಿಜಿ ಗ್ಯಾಸ್ ಸ್ಟೌವ್‌ಗಳು, ಕೂಲಿಂಗ್ ಟವರ್‌ಗಳು ಸೇರಿದಂತೆ ಹೆಚ್ಚು ವಿದ್ಯುತ್​​ ಉಪಯೋಗವಾಗುವ ಉಪಕರಣಗಳಿಗೆ ಜನವರಿ 1 ರಿಂದ ಅಂದರೆ ನೆನ್ನೆಯಿಂದ ಇಂಧನ ದಕ್ಷತೆಯ ಸ್ಟಾರ್-ಲೇಬಲಿಂಗ್ (energy star labeling) ಕಡ್ಡಾಯವಾಗಲಿದೆ.

ಪಿಟಿಐ ವರದಿ ಪ್ರಕಾರ, ಇಂಧನ ದಕ್ಷತೆ ಬ್ಯೂರೋ (ಬಿಇಇ) ಹೊರಡಿಸಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ಕಡ್ಡಾಯವಾಗಿ ಎಲ್ಲ ಎಲೆಕ್ಟ್ರಾನಿಕ್ ಕಂಪನಿಗಳು ತಮ್ಮ ಎಲೆಕ್ಟ್ರಾನಿಕ್ ವಸ್ತುಗಳಿಗೆ ಈ ವರ್ಷದಿಂದ ಇಂಧನ ದಕ್ಷತೆಯ ಸ್ಟಾರ್-ಲೇಬಲಿಂಗ್​​ಗಳನ್ನು ಅಳವಡಿಸಲೇಬೇಕು. ಡೀಪ್ ಫ್ರೀಜರ್‌ಗಳು, ವಿತರಣಾ ಟ್ರಾನ್ಸ್‌ಫಾರ್ಮರ್‌ಗಳ ಮೇಲೆ ಈ ಸ್ಟಾರ್-ಲೇಬಲಿಂಗ್ ಇರಲೇಬೇಕು. ಇನ್ನು ಇದಕ್ಕೂ ಮೊದಲು, ಫ್ರಾಸ್ಟ್-ಫ್ರೀ ರೆಫ್ರಿಜರೇಟರ್‌ಗಳು, ಡೈರೆಕ್ಟ್ ಕೂಲ್ ರೆಫ್ರಿಜರೇಟರ್‌ಗಳು, ಡೀಪ್ ಫ್ರೀಜರ್‌ಗಳು, ಆರ್‌ಎಸಿ(ಕ್ಯಾಸೆಟ್, ಫ್ಲೋರ್ ಸ್ಟ್ಯಾಂಡಿಂಗ್ ಟವರ್, ಸೀಲಿಂಗ್, ಕಾರ್ನರ್ ಎಸಿ), ಕಲರ್ ಟೆಲಿವಿಷನ್‌ಗಳು ಮತ್ತು ಅಲ್ಟ್ರಾ-ಹೈ ಡೆಫಿನಿಷನ್ ಟೆಲಿವಿಷನ್‌ಗಳಂತಹ ವಸ್ತುಗಳ ಮೇಲೆ ಸ್ಟಾರ್ ರೇಟಿಂಗ್ ಸ್ವಯಂಪ್ರೇರಿತವಾಗಿತ್ತು. ಇದೀಗ ಅದನ್ನು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ

ಇನ್ನು ಈ ಬಗ್ಗೆ ಅಧಿಕಾರಿಯೊಬ್ಬರು ಹೇಳಿರುವ ಪ್ರಕಾರ, ಈಗಾಗಲೇ ಸ್ಟಾರ್ ಲೇಬಲಿಂಗ್ ಹಾಕಿರುವ ಉಪಕರಣಗಳ ಪಟ್ಟಿಯನ್ನು ಪರಿಶೀಲಿಸಲಾಗುತ್ತದೆ ಮತ್ತು ಅದನ್ನು ಮುಂದಿನ ದಿನಗಳಲ್ಲಿ ನವೀಕರಣ ಮಾಡಲಾಗುತ್ತದೆ. ಇನ್ನು ಹೊಸ ಉಪಕರಣಗಳಿಗೆ ಈಗಾಗಲೇ ಕರಡು ನಿಯಮಗಳನ್ನು ಜುಲೈ 2025ರಲ್ಲಿ ಸಾರ್ವಜನಿಕ ಸಮಾಲೋಚನೆಗಾಗಿ ಬಿಡುಗಡೆ ಮಾಡಲಾಗಿತ್ತು. ಇದೀಗ ಇದಕ್ಕೆ ಅಧಿಕೃತ ಅಧಿಸೂಚನೆ ನೀಡಿದೆ ಎಂದು ಹೇಳಿದ್ದಾರೆ. ಕೊಠಡಿ ಹವಾನಿಯಂತ್ರಣಗಳು (ಸ್ಥಿರ ಮತ್ತು ವೇರಿಯಬಲ್ ವೇಗ), ವಿದ್ಯುತ್ ಸೀಲಿಂಗ್-ಮಾದರಿಯ ಫ್ಯಾನ್‌ಗಳು, ಸ್ಟೇಷನರಿ ಸ್ಟೋರೇಜ್ ಎಲೆಕ್ಟ್ರಿಕ್ ವಾಟರ್ ಹೀಟರ್‌ಗಳು, ವಾಷಿಂಗ್ ಮೆಷಿನ್‌ಗಳು, ಟ್ಯೂಬ್ಯುಲರ್ ಫ್ಲೋರೊಸೆಂಟ್ ದೀಪಗಳು ಮತ್ತು ಸ್ವಯಂ-ಬ್ಯಾಲಸ್ಟೆಡ್ ಎಲ್‌ಇಡಿ ದೀಪಗಳು ಮುಂತಾದ ಉಪಕರಣಗಳಿಗೆ ಸ್ಟಾರ್ ಲೇಬಲಿಂಗ್ ಅನ್ನು ಈಗಾಗಲೇ ಕಡ್ಡಾಯಗೊಳಿಸಲಾಗಿತ್ತು.ಈ ವರ್ಗಗಳಿಗೆ ಸ್ಟಾರ್ ಲೇಬಲಿಂಗ್ ಈಗಾಗಲೇ ಕಡ್ಡಾಯವಾಗಿದ್ದರೂ, ಇಂಧನ-ಕಾರ್ಯಕ್ಷಮತೆಯ ಮಾನದಂಡಗಳನ್ನು ಮತ್ತಷ್ಟು ಬಿಗಿಗೊಳಿಸಲು ದಕ್ಷತೆಯ ಮಾನದಂಡಗಳನ್ನು ನವೀಕರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ayyappa Swami: ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಫೋಟೋ ಇಡುವ ಮುನ್ನ ಈ ವಿಷ್ಯ ತಿಳಿದಿರಲಿ – Kannada News | Keeping Ayyappa Swamis Photo at Home: Guidelines and Benefits

“ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಹರಿಹರ ಸುತನಾದ ಅಯ್ಯಪ್ಪ ಸ್ವಾಮಿ, ಶಬರಿಮಲೆಯಲ್ಲಿ ಪೂಜಿಸಲ್ಪಡುವ ಪವಿತ್ರ ಹಿಂದೂ ದೇವರು. ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ತೆರಳುವಾಗ ಕಪ್ಪು ವಸ್ತ್ರ ಧರಿಸಿ, ಚಪ್ಪಲಿ ಹಾಕದೆ, ಸಾತ್ವಿಕ ಆಹಾರ ಸೇವಿಸಿ, ನಿರಂತರ ಭಜನೆ ಮತ್ತು ಪ್ರಾರ್ಥನೆಯಲ್ಲಿ ತೊಡಗಿಕೊಂಡು ಕಠಿಣ ವ್ರತಗಳನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯಂದು ಜ್ಯೋತಿ ದರ್ಶನದೊಂದಿಗೆ ವ್ರತ ಮುಕ್ತಾಯವಾಗುತ್ತದೆ.

ಆದರೆ, ಮಾಲೆ ಹಾಕದ ಸಾಮಾನ್ಯ ಭಕ್ತರೂ ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿಟ್ಟು ಪೂಜಿಸಬಹುದೇ? ಖಂಡಿತವಾಗಿಯೂ, ಶ್ರದ್ಧಾ ಭಕ್ತಿ ಇರುವ ಯಾರಾದರೂ ಅಯ್ಯಪ್ಪ ಸ್ವಾಮಿಯ ಫೋಟೋವನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಬಹುದು. ಇದು ದೊಡ್ಡ ಗಾತ್ರದ ಫೋಟೋ ಇರಲಿ ಅಥವಾ ಚಿಕ್ಕ ಗಾತ್ರದ ಫೋಟೋ ಇರಲಿ, ಗಾತ್ರ ಮುಖ್ಯವಲ್ಲ. ಚಿನ್ಮುದ್ರೆಯಲ್ಲಿ, 18 ಮೆಟ್ಟಿಲುಗಳೊಂದಿಗೆ ಕುಳಿತಿರುವ ಭಂಗಿಯಲ್ಲಿರುವ ಅಯ್ಯಪ್ಪ ಸ್ವಾಮಿಯ ಫೋಟೋ ಇಡುವುದು ಶುಭ.

ಅಯ್ಯಪ್ಪ ಸ್ವಾಮಿಯ ಫೋಟೋ ಇಡುವ ಸ್ಥಳ ಮತ್ತು ವಿಧಾನದ ಬಗ್ಗೆ ಕೆಲವು ಮಾರ್ಗಸೂಚಿಗಳನ್ನು ಗುರೂಜಿ ತಿಳಿಸಿದ್ದಾರೆ. ಪ್ರಥಮವಾಗಿ, ಮನೆಯ ಸಿಂಹದ್ವಾರದ ಮೇಲೆ ಹೊರಗಿನಿಂದ ಅಯ್ಯಪ್ಪ ಸ್ವಾಮಿಯ ಫೋಟೋ ಇಡುವುದು ಸರಿಯಲ್ಲ. ಹಾಗೆಯೇ, ವಾಹನಗಳಲ್ಲಿ ವರ್ಷಪೂರ್ತಿ ಫೋಟೋ ಕಟ್ಟಿ ಇಡುವುದು ಅಷ್ಟು ಶುಭವಲ್ಲ. ಶಬರಿಮಲೆ ಯಾತ್ರೆಗೆ ತೆರಳುವಾಗ, ರಕ್ಷಣೆಗಾಗಿ ವಾಹನದಲ್ಲಿ ತಾತ್ಕಾಲಿಕವಾಗಿ ಇಡಬಹುದು. ಮನೆಯೊಳಗಡೆ, ದೇವರ ಮನೆ ಅಯ್ಯಪ್ಪ ಸ್ವಾಮಿಯ ಫೋಟೋ ಇಡಲು ಅತ್ಯಂತ ಸೂಕ್ತವಾದ ಸ್ಥಳ. ಹಾಲ್‌ನಲ್ಲಿ ಇಡಲು ಬಯಸಿದರೆ, ಆ ಫೋಟೋಗೆ ತ್ರಿಕಾಲವೂ ಆರತಿ ಮಾಡಬೇಕು, ಏಕೆಂದರೆ ಅಯ್ಯಪ್ಪ ಸ್ವಾಮಿ ಆರತಿ ಪ್ರಿಯ. ಮಲಗುವ ಕೋಣೆಯಲ್ಲಿ ಫೋಟೋ ಇಡಬಾರದು. ಯಾವುದೇ ಅಪವಿತ್ರತೆ ಇರುವ ಸ್ಥಳಗಳಲ್ಲಿ ಅಯ್ಯಪ್ಪ ಸ್ವಾಮಿಯ ಫೋಟೋ ಇಡುವುದು ಶುಭವಲ್ಲ. ಪವಿತ್ರ ಮತ್ತು ಶುದ್ಧವಾದ ಸ್ಥಳಗಳಲ್ಲಿ ಮಾತ್ರ ಫೋಟೋವನ್ನು ಇರಿಸಬೇಕು.

ಇದನ್ನೂ ಓದಿ: ವೈಕುಂಠ ಏಕಾದಶಿಯನ್ನು ಮುಕ್ಕೋಟಿ ಏಕಾದಶಿ ಎಂದು ಕರೆಯುವುದೇಕೆ? ಮಾಹಿತಿ ಇಲ್ಲಿದೆ

ಅಯ್ಯಪ್ಪ ಸ್ವಾಮಿಗೆ ಮಾಡುವ ಪೂಜೆಯಲ್ಲಿ ಶ್ರದ್ಧೆ ಮತ್ತು ಭಕ್ತಿ ಪ್ರಮುಖ. ನಿತ್ಯವೂ ಕರ್ಪೂರದ ಆರತಿಯನ್ನು ಮಾಡುವುದು, ಪ್ರಾರ್ಥನೆ ಸಲ್ಲಿಸುವುದು ಮತ್ತು ವಾರಕ್ಕೊಮ್ಮೆಯಾದರೂ ಬೆಲ್ಲದಿಂದ ಮಾಡಿದ ಸಿಹಿ ನೈವೇದ್ಯವನ್ನು ಅರ್ಪಿಸುವುದು ಶ್ರೇಷ್ಠ. “ಹರಿಹರ ಸುತನೇ ಸ್ವಾಮಿಯೇ ಶರಣಂ ಅಯ್ಯಪ್ಪ” ಅಥವಾ “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂಬ ಘೋಷಗಳನ್ನು ಪ್ರತಿದಿನ ಕೂಗಿ ಅಥವಾ ಪ್ರಾರ್ಥಿಸುವುದರಿಂದ ಫೋಟೋಗೂ ಸಾರ್ಥಕತೆ ದೊರೆತು, ಮನೆಯಲ್ಲೂ ಶುಭವಾಗುತ್ತದೆ.

ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಪೂಜಿಸುವುದರಿಂದ ಹಲವು ಶುಭ ಫಲಗಳು ದೊರೆಯುತ್ತವೆ ಎಂದು ಹೇಳಲಾಗುತ್ತದೆ. ಸಾಡೇಸಾತಿ, ಅಷ್ಟಮ ಶನಿ, ಪಂಚಮ ಶನಿಯಂತಹ ಶನಿಕಾಟಗಳ ತೀವ್ರತೆ ಕಡಿಮೆಯಾಗುತ್ತದೆ. ನವಗ್ರಹ ದೋಷಗಳು ನಿವಾರಣೆಯಾಗುತ್ತವೆ. ಮಾಟ-ಮಂತ್ರದಂತಹ ಯಾವುದೇ ದುಷ್ಟ ದೃಷ್ಟಿ ಮನೆಯನ್ನು ಪ್ರವೇಶಿಸುವುದಿಲ್ಲ. ಮನೆಯಲ್ಲಿನ ಕಲಹಗಳು ಇತ್ಯರ್ಥವಾಗುತ್ತವೆ. ಅಂತಿಮವಾಗಿ, ಮಾನಸಿಕ ತೃಪ್ತಿ ಮತ್ತು ಸಂತೃಪ್ತಿ ಪ್ರಾಪ್ತವಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ – Kannada News | 2nd PUC Practical Exams Live Web Streamed by KSEAB for Transparency and Monitoring

ಬೆಂಗಳೂರು, ಜ.2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ದ್ವಿತೀಯ ಪಿಯು ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್-ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮವನ್ನು ಕೆಎಸ್‌ಇಎಬಿ ತಂದಿದೆ. ಈ ಹೊಸ ವ್ಯವಸ್ಥೆಯನ್ನು ತರುವ ಮೂಲಕ ವಿದ್ಯಾರ್ಥಿಗಳಿಗೆ ಅಂಕದಲ್ಲಿ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ. ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಎಲ್ಲಾ ಚಟುವಟಿಕೆಯನ್ನು ರಿಯಲ್​​​ ಟೈಮ್​​ನಲ್ಲಿ ಲೈವ್​​ ಸ್ಟ್ರೀಮ್​​​​ ಮಾಡಲಾಗುತ್ತದೆ. ಕಳೆದ ವರ್ಷ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ್ದರೂ, ಥಿಯರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿ ಉತ್ತೀರ್ಣರಾಗಲು ವಿಫಲರಾಗಿರುವುದರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ವೆಬ್‌ಕಾಸ್ಟ್ ಮಾಡಲು ಮಂಡಳಿಯು ಎಲ್ಲಾ ಕೇಂದ್ರಗಳಿಗೆ ಸೂಚನೆ ನೀಡಿದೆ. ಮಂಡಳಿಯು ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ಮೇಲ್ವಿಚಾರಣೆ ಮಾಡುತ್ತದೆ. ಸಂಪೂರ್ಣ ಪ್ರಕ್ರಿಯೆಗಾಗಿ ಕೃತಕ ಬುದ್ಧಿಮತ್ತೆಯನ್ನು ಸಕ್ರಿಯಗೊಳಿಸಲಾಗುತ್ತದೆ ಎಂದು ಹೇಳಿದೆ.

ಜನವರಿ 27 ರಿಂದ ಫೆಬ್ರವರಿ 14 ರವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಮಂಡಳಿಯು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ. ಈ ವರ್ಷ ಪ್ರಾಯೋಗಿಕ ಪರೀಕ್ಷೆಗಳು 30 ಅಂಕಗಳಿಗೆ ನಡೆಯಲಿದ್ದು, ಥಿಯರಿ 70 ಅಂಕಗಳಿಗೆ ನಡೆಯಲಿದೆ. ಒಬ್ಬ ವಿದ್ಯಾರ್ಥಿಯು ಥಿಯರಿಯಲ್ಲಿ ಕನಿಷ್ಠ 21 ಅಂಕಗಳನ್ನು ಪಡೆದರೆ ಆ ವಿದ್ಯಾರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ. ಆದರೆ ಪ್ರಾಯೋಗಿಕ ಪರೀಕ್ಷೆಯಲ್ಲಿ ಈ ಮಿತಿ ಇಲ್ಲದಿರುವ ಕಾರಣ, ಹೆಚ್ಚಿನ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯಲ್ಲಿ ಪೂರ್ಣ ಅಂಕವನ್ನು ನೀಡಲಾಗುತ್ತದೆ.

ಇದನ್ನೂ ಓದಿ: SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ

ಆದರೆ ಈ ಹಿಂದಿನ ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯಲ್ಲಿ 30 ಅಂಕಗಳನ್ನು ಪಡೆದಿದ್ದರು, ಆದರೆ ಥಿಯರಿ ಪರೀಕ್ಷೆಯಲ್ಲಿ 10 ಅಂಕ ಪಡೆದು ಫೇಲ್​​ ಆಗಿರುವ ಸುಮಾರು ನಿದರ್ಶನಗಳು ಇದೆ. ಅದಕ್ಕಾಗಿ ಪ್ರಾಯೋಗಿಕ ಪರೀಕ್ಷೆಗಳನ್ನು ಮೇಲ್ವಿಚಾರಣೆ ಮಾಡಲು ಒತ್ತಾಯಗಳು ಬಂದಿದೆ ಎಂದು ಕೆಎಸ್‌ಇಎಬಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಾಯೋಗಿಕ ಪರೀಕ್ಷೆಗಳಲ್ಲಿಯೂ ಸಹ, 10 ಅಂಕಗಳು ಹಾಜರಾತಿ ಆಧಾರಿತವಾಗಿರುತ್ತವೆ ಮತ್ತು ಉಳಿದ 20 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ವರ್ಷದಿಂದ, ಮಂಡಳಿಯು ಕನಿಷ್ಠ ಉತ್ತೀರ್ಣ ಅಂಕಗಳನ್ನು 33% ಕ್ಕೆ ಇಳಿಸಿದೆ. ಥಿಯರಿ ಮತ್ತು ಪ್ರಾಕ್ಟಿಕಲ್ ಎರಡರ ಅಂಕವನ್ನು ಸೇರಿಸಿ 30 ಅಂಕಗಳನ್ನು ಪಡೆದರೆ ಅಂತಹ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ. ಅದಕ್ಕಾಗಿ ಈ ವರ್ಷದಿಂದ ಪ್ರಾಯೋಗಿಕ ಪರೀಕ್ಷೆಗಳು ನಡೆಯುವ ಕೇಂದ್ರಗಳಲ್ಲಿ ವೆಬ್-ಸ್ಟ್ರೀಮಿಂಗ್ ಕಡ್ಡಾಯಗೊಳಿಸಲಾಗಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link