nagaraj11081993

ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ; ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು – Kannada News | Hassan Accident: 3 Dead as Pickup Overturns on NH 69 Near Areseekere

ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಅಪಘಾತ ಹಾಸನ, ಜನವರಿ 01: ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದ್ದೇನು? ಅಡಿಕೆ ಕಟಾವು…

Read More

ರೀಲ್ಸ್ ಮಾಡಿ ನಗದು ಬಹುಮಾನ ಗೆಲ್ಲಿ; ‘ಕೊರಗಜ್ಜ’ ಚಿತ್ರತಂಡದಿಂದ ಆಫರ್ – Kannada News | Koragajja movie giving cash prize how to participate

ಸಿನಿಮಾ (Cinema) ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಏನೇನೋ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು ಆಟೋ ಓಡಿಸುವುದು ಇನ್ನೂ ಏನೇನೋ, ಇವುಗಳಲ್ಲಿ ಬಹುಮಾನ ಘೋಷಣೆಯೂ ಒಂದು. ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್​​ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ ಇಂಥಹುದೇ ಒಂದು ಆಫರ್ ನೀಡಿದೆ. ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ…

Read More

VHT 2025-26: ದೇಶಿ ಟೂರ್ನಿಯಲ್ಲಿ ಎಡಗೈ ದಾಂಡಿಗರದ್ದೇ ಪಾರುಪತ್ಯ; ಅಗ್ರಸ್ಥಾನದಲ್ಲಿ ಕನ್ನಡಿಗ – Kannada News | Vijay Hazare 2025 26: Padikkal Leads Top Run Scorers; Left Handers Dominate

ಭಾರತದ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಏಕದಿನ ಪಂದ್ಯಾವಳಿಯಾದ ವಿಜಯ್ ಹಜಾರೆ ಟ್ರೋಫಿಯ 2025-26 ಸೀಸನ್ ಇಲ್ಲಿಯವರೆಗೆ 4 ಸುತ್ತುಗಳನ್ನು ಮುಗಿಸಿದೆ. ಈ ಪಂದ್ಯಾವಳಿಯಲ್ಲಿ ಬ್ಯಾಟ್ಸ್‌ಮನ್‌ಗಳು ಸ್ಪಷ್ಟವಾಗಿ ಪ್ರಾಬಲ್ಯ ಸಾಧಿಸುತ್ತಿದ್ದು ರನ್​ಗಳ ಮಳೆಯೇ ಹರಿಯುತ್ತಿದೆ. ಅನೇಕ ಆಟಗಾರರು ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಅದರಲ್ಲೂ ಗಮನಾರ್ಹವಾಗಿ, ಎಡಗೈ ಬ್ಯಾಟ್ಸ್‌ಮನ್‌ಗಳು ಅತಿ ಹೆಚ್ಚು ರನ್ ಗಳಿಸಿದ್ದು, ಅತ್ಯಧಿಕ ರನ್ ಕಲೆಹಾಕಿದ ಅಗ್ರ ಐವರಲ್ಲಿ ಮೂವರು ಎಡಗೈ ಬ್ಯಾಟ್ಸ್‌ಮನ್‌ಗಳೇ ಸೇರಿದ್ದಾರೆ. Source link

Read More

ಬಂಡೆ ಬ್ಲಾಸ್ಟ್​​ನಿಂದ 4 ಚಿರತೆಗಳು ಸಾವು: ಹೋರಾಟದ ಎಚ್ಚರಿಕೆ ಕೊಟ್ಟ ST ಸೋಮಶೇಖರ್, ಖಂಡ್ರೆ ಹೇಳಿದ್ದಿಷ್ಟು – Kannada News | Bengaluru: Four Leopards Killed in Rock Blasting Incident; MLA ST Somashekhar Warns of Protest

ಬೆಂಗಳೂರು, ಜನವರಿ 01: ನಾಲ್ಕು ಚಿರತೆಗಳ (Leopard) ಮೃತದೇಹ ಛಿದ್ರ ಛಿದ್ರವಾಗಿದೆ. ಕ್ವಾರಿಯಿಂದ  ಸಿಡಿದ (Quarry Blast) ಕಲ್ಲು ನಾಲ್ಕು ಚಿರತೆಗಳ ಪ್ರಾಣ ತೆಗೆದಿದೆ. ಗರ್ಭಿಣಿ ಚಿರತೆ ಮತ್ತು ಚಿರತೆಯ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಹುಟ್ಟುವ ಮೊದಲೇ ಸತ್ತು ಹೋಗಿವೆ. ಚಿರತೆ ಕೊಂದವರ ವಿರುದ್ಧ ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ ಸೋಮಶೇಖರ್ ಕಿಡಿಕಾರಿದ್ದಾರೆ. ಏನಿದು ಪ್ರಕರಣ? ಯಶವಂತಪುರ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿ ವಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಕಲ್ಲು…

Read More

ಚಳಿಗಾಲದಲ್ಲಿ ಐಸ್ ಕ್ರೀಮ್ ತಿಂದ್ರೆ ನಿಜವಾಗಿಯೂ ನೆಗಡಿ, ಕೆಮ್ಮು ಬರುತ್ತಾ? ಇಲ್ಲಿದೆ ತಜ್ಞರು ನೀಡಿದ ಅಚ್ಚರಿ ಮಾಹಿತಿ – Kannada News | Eating Ice Cream in Cold Weather: What Experts Say

ಹೊರಗೆ ಎಷ್ಟೇ ಚಳಿ (Winter) ಇರಲಿ ಐಸ್ ಕ್ರೀಮ್ ಪಾರ್ಲರ್ ಗಳಲ್ಲಿ ಜನ ಕಡಿಮೆಯಾಗುವುದಿಲ್ಲ. ಕೆಲವರಿಗೆ ಐಸ್ ಕ್ರೀಮ್ ತಿನ್ನುವುದಕ್ಕೆ ಸಮಯವಿರುವುದಿಲ್ಲ. ಯಾವಾಗ ಕೊಟ್ಟರು ಖುಷಿಯಿಂದ ತಿನ್ನುತ್ತಾರೆ. ಆದರೆ, ಮನೆಯಲ್ಲಿ ಹಿರಿಯರು ಮಾತ್ರ ಚಳಿಗಾಲದಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನೆಗಡಿ ಮತ್ತು ಕೆಮ್ಮು ಬರುತ್ತೆ ತಿನ್ನಬೇಡಿ ಎಂದು ಎಚ್ಚರಿಸುತ್ತಲೇ ಇರುತ್ತಾರೆ. ಹಾಗಾದರೆ, ಇದು ಎಷ್ಟು ನಿಜ! ಚಳಿಗಾಲದಲ್ಲಿ ತಣ್ಣನೆಯ ಆಹಾರ ಸೇವನೆ ಮಾಡುವುದರಿಂದ ನಿಜವಾಗಿಯೂ ಆರೋಗ್ಯ ಹಾಳಾಗುತ್ತದೆಯೇ… ಈ ಕುರಿತಂತೆ ತಜ್ಞರು ನೀಡಿದ ಮಾಹಿತಿ ಇಲ್ಲಿದೆ. ಐಸ್…

Read More

ಪತ್ನಿ ಮೇಲೆ ಪತ್ನಿಯಿಂದಲೇ ಡೆಡ್ಲಿ ಅಟ್ಯಾಕ್​: ಕೊಡಲಿ ಏಟಿಗೆ ಪ್ರಾಣಬಿಟ್ಟ ಮಹಿಳೆ – Kannada News | Husband Murders Wife by Attacking Her With Axe in Hospete, Vijayanagara

ವಿಜಯನಗರ, ಜನವರಿ 01: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಪತಿಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ 76 ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಝಾನ್ಸಿ (32) ಮೃತ ಮಹಿಳೆಯಾಗಿದ್ದು, ಘಟನೆ ಬಳಿಕ ಎಸ್ಕೇಪ್​​ ಆಗಿದ್ದ ಆಕೆಯ ಪತಿ ಸೆಲ್ವಕುಮಾರ್​​ನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿಗೆ ಮಕ್ಕಳಿಲ್ಲದೆ ಇರುವುದು ಮತ್ತು ಪತ್ನಿ ಮೇಲೆ ಪತಿಗೆ ಅನುಮಾನವೇ ಕೌಟುಂಬಿಕ ಕಲಹಕ್ಕೆ ಕಾರಣ ಎನ್ನಲಾಗಿದೆ. ಹದಿಮೂರು ವರ್ಷಗಳ ಹಿಂದೆ ಕುಟುಂಬಸ್ಥರ ಒಪ್ಪಿಗೆಯಂತೆ ಸೆಲ್ವಕುಮಾರ ಮತ್ತು ಝಾನ್ಸಿ ಮದುವೆ…

Read More

ಜನವರಿ ತಿಂಗಳಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ; ಇಲ್ಲಿದೆ ವೇಳಾಪಟ್ಟಿ – Kannada News | Team India Jan 2026 Schedule: NZ Series & World Cup Challenges Ahead

2025 ರ ವರ್ಷವನ್ನು ಸಿಹಿ-ಕಹಿಯೊಂದಿಗೆ ಮುಗಿಸಿರುವ ಟೀಂ ಇಂಡಿಯಾಗೆ (Team India) 2026 ರಲ್ಲಿ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಅದರಲ್ಲಿ ಪ್ರಮುಖವಾಗಿ ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ (T20 World Cup 2026). ಟಿ20 ಮಾದರಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ತನ್ನ ಪಟ್ಟವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಇದು ಮಾತ್ರವಲ್ಲದೆ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಡ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಏಕೆಂದರೆ 2023 ರಲ್ಲಿ ನಡೆದಿದ್ದ ವಿಶ್ವಕಪ್​ ಫೈನಲ್​ನಲ್ಲಿ…

Read More

PAN-Aadhaar Link: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು? – Kannada News | December 31 Deadline Over: What happens if PAN not linked with Aadhaar

ನವದೆಹಲಿ, ಜನವರಿ 1: ಆಧಾರ್ ನಂಬರ್ ಜೊತೆ ಪ್ಯಾನ್ ಲಿಂಕ್ ಆಗಿರಬೇಕೆಂದು ಆದಾಯ ತೆರಿಗೆ ಇಲಾಖೆ (Income Tax) ಫರ್ಮಾನು ಹೊರಡಿಸಿ ವರ್ಷಗಳೇ ಆಯಿತು. ಹಲವು ಬಾರಿ ವಾಯಿದೆಗಳು ವಿಸ್ತರಣೆಯಾಗುತ್ತಾ ಬಂದು ಡಿಸೆಂಬರ್ 31ರ ಕೊನೆಯ ಗಡುವು ಕೂಡ ಮುಕ್ತಾಯವಾಗಿದೆ. ಈ ಡೆಡ್​ಲೈನ್ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆ ಇಲ್ಲ. ಅಂಥ ಯಾವ ನೋಟಿಫಿಕೇಶನ್ ಸದ್ಯಕ್ಕೆ ಇಲಾಖೆಯಿಂದ ಬಂದಿಲ್ಲ. ಈಗ ಆಧಾರ್​ಗೆ ಲಿಂಕ್ ಆಗದೇ ಇರುವ ಪ್ಯಾನ್ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಸಮಸ್ಯೆಯಾಗಬಹುದು? ಇಲ್ಲಿದೆ…

Read More

ಟಿ20 ಯಲ್ಲಿ ಟೆಸ್ಟ್ ಆಡಿ ಅರ್ಧಶತಕ ಬಾರಿಸಿದ ಬಾಬರ್ ಆಝಂ – Kannada News | Babar Azam’s BBL Brilliance: Unbeaten Half Century Seals Sydney Sixers Victory

ಕಳೆದ ವರ್ಷವನ್ನು ಫಾರ್ಮ್​ ಕಂಡುಕೊಳ್ಳುವುದರಲ್ಲೇ ಕಳೆದ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಈ ಹೊಸ ವರ್ಷವನ್ನು ಭರ್ಜರಿಯಾಗಿ ಆರಂಭಿಸಿದ್ದಾರೆ. ಪ್ರಸ್ತುತ ಬಿಗ್ ಬ್ಯಾಷ್ ಲೀಗ್​ನಲ್ಲಿ ಆಡುತ್ತಿರುವ ಬಾಬರ್ ಆಝಂ ಅಜೇಯ ಅರ್ಧಶತಕ ಸಿಡಿಸುವುದರೊಂದಿಗೆ ತಂಡಕ್ಕೆ ಗೆಲುವು ಕೂಡ ತಂದುಕೊಟ್ಟಿದ್ದಾರೆ. ಈ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್‌ ತಂಡದ ಪರ ಆಡುತ್ತಿರುವ ಬಾಬರ್ ಮೆಲ್ಬೋರ್ನ್ ರೆನೆಗೇಡ್ಸ್ ತಂಡದ ವಿರುದ್ಧ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮೆಲ್ಬೋರ್ನ್ ರೆನೆಗೇಡ್ಸ್ ತಂಡವು 20 ಓವರ್‌ಗಳಲ್ಲಿ 165…

Read More

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ – Kannada News | Congress leader Nana Patole compares Rahul Gandhi with Lord Sri Ram

ನವದೆಹಲಿ, ಜನವರಿ 1: ಕಾಂಗ್ರೆಸ್ ನಾಯಕ ನಾನಾ ಪಟೋಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ್ದಾರೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ (Ram Temple) ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. “ರಾಹುಲ್ ಗಾಂಧಿ ರಾಮ ಮಾಡಿದ್ದ ಕೆಲಸವನ್ನು ಮಾಡುತ್ತಿದ್ದಾರೆ. ರಾಮನು ತುಳಿತಕ್ಕೊಳಗಾದ ಜನರ ಮತ್ತು ವಂಚಿತರ ನ್ಯಾಯದ ಪರವಾಗಿ ನಿಂತಿದ್ದ. ಈಗ ರಾಹುಲ್ ಗಾಂಧಿ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ”…

Read More