All posts by nagaraj11081993

ಹುಣಸೆಹಣ್ಣನ್ನು ಚಪ್ಪರಿಸಿ ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ – Kannada News | Unlock Tamarind’s Power: A Superfood You Need

ಹುಣಸೆಹಣ್ಣು (Tamarind’s) ಎಂಬ ಹೆಸರು ಕೇಳಿದಾಕ್ಷಣ ಯಾರಿಗಾದರೂ ಬಾಯಲ್ಲಿ ನೀರು ಬರುವುದು ಸಹಜ. ಹುಳಿ ಮತ್ತು ಸಿಹಿಯ ಮಿಶ್ರಣವಾದ ಹುಣಸೆಹಣ್ಣು ತಿನ್ನುವುದಕ್ಕೆ ರುಚಿಕರ ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳಿಂದಲೂ ಸಮೃದ್ಧವಾಗಿದೆ. ಸಾಮಾನ್ಯವಾಗಿ ಹುಣಸೆಹಣ್ಣನ್ನು ಅದರ ಸುವಾಸನೆ ಮತ್ತು ಅದರಲ್ಲಿರುವ ರುಚಿಗೆ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಇದಿಲ್ಲದೆ ಕೆಲವು ಆಹಾರಗಳು ಅಪೂರ್ಣ ಎನಿಸಿಕೊಳ್ಳುತ್ತವೆ. ಹಾಗಾದರೆ ಹುಣಸೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಹುಣಸೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ಫೈಟೊಕೆಮಿಕಲ್‌ಗಳು, ವಿಟಮಿನ್ ಎ, ಸಿ, ಇ, ಕೆ, ಬಿ6, ಮೆಗ್ನೀಸಿಯಮ್, ರಂಜಕ, ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳಿವೆ. ಇವು ದೇಹವನ್ನು ವಿವಿಧ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹುಣಸೆಹಣ್ಣು ತಿನ್ನುವುದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಗೆ, ತೂಕವನ್ನು ಕಡಿಮೆ ಮಾಡಿಕೊಳ್ಳುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ

ಹುಣಸೆಹಣ್ಣು ವಿಟಮಿನ್ ಸಿ ಯಿಂದ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬಲವಾದ ರೋಗನಿರೋಧಕ ಶಕ್ತಿ ದೇಹವನ್ನು ಅನೇಕ ರೀತಿಯ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಆದರೆ ಇದರ ಸೇವನೆ ಮಿತವಾಗಿರಲಿ. ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನುಭವಿಸುವ ಅಸ್ವಸ್ಥತೆಗೆ ಹುಣಸೆಹಣ್ಣು ಒಳ್ಳೆಯದು. ಇದು ಮುಟ್ಟಿನ ಸೆಳೆತವನ್ನು ನಿವಾರಿಸಲು, ದೇಹದಲ್ಲಿ ಎಲ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಎಚ್ಡಿಎಲ್ ಕೊಲೆಸ್ಟ್ರಾಲ್ ಹೆಚ್ಚಿಸಲು ಸಹಕಾರಿಯಾಗಿದೆ ಅಷ್ಟು ಮಾತ್ರವಲ್ಲ, ಇದು ರಕ್ತದೊತ್ತಡ ಮತ್ತು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದೇಹದ ದ್ರವಗಳನ್ನು ಸಮತೋಲನಗೊಳಿಸಲು ಉಪಯುಕ್ತವಾಗಿದೆ.

ಇದನ್ನೂ ಓದಿ: ಚರ್ಮರೋಗ ಇದ್ಯಾ? ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಸಮಸ್ಯೆ ಉಲ್ಬಣವಾಗುವುದು ಗ್ಯಾರೆಂಟಿ

ಚರ್ಮದ ಮೇಲಿನ ಸುಕ್ಕುಗಳಿಂದ ಮುಕ್ತಿ ನೀಡುತ್ತದೆ:

ಹುಣಸೆ ನೀರು ಮೊಡವೆಗಳಿಗೆ ರಾಮಬಾಣವಾಗಿದೆ. ಇದು ಚರ್ಮದ ಮೇಲಿನ ಸುಕ್ಕುಗಳು ಮತ್ತು ಕಲೆಗಳನ್ನು ತೆಗೆದುಹಾಕುತ್ತದೆ. ಸಣ್ಣ ಗಾಯಗಳು ಮತ್ತು ಸುಟ್ಟ ಗಾಯಗಳಿಂದ ಉಂಟಾಗುವ ಗುರುತುಗಳನ್ನು ತೆಗೆಯಲು ಸಹಾಯ ಮಾಡುತ್ತದೆ. ಜೊತೆಗೆ ಕೂದಲನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಇದನ್ನು ಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:46 pm, Thu, 1 January 26

Source link

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು – Kannada News | Kogilu Layout Housing Row: No Housing for Non Kannadigas in Kogilu Layout; Zameer Khan

ಬೆಂಗಳೂರು, ಜನವರಿ 01: ಕರ್ನಾಟಕದವರಲ್ಲದೆ ಹೊರಗಿನವರಿಗೆ ಹೇಗೆ ಮನೆ ಕೊಡಲು ಸಾಧ್ಯ? ಬಾಂಗ್ಲಾದೇಶದವರು ಹೇಗೆ ಬೆಂಗಳೂರಿನಲ್ಲಿ ಇರಲು ಸಾಧ್ಯ? ಹಾಗೇನಾದ್ರೂ ಅವರು ಬಾಂಗ್ಲಾದೇಶದವರಾಗಿದ್ದರೆ ಸಾಬೀತುಪಡಿಸಲಿ. ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ಗೆ ವಸತಿ ಸಚಿವ ಜಮೀರ್​​ ತಿರುಗೇಟು ನೀಡಿದ್ದಾರೆ. ಕರ್ನಾಟಕದವರನ್ನು ಬಿಟ್ಟು ಹೊರಗಿನವರಿಗೆ ಮನೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Source link

ವರ್ಷದ ಮೊದಲ ದಿನದಂದೇ ಸ್ಫೋಟಕ ಶತಕ ಸಿಡಿಸಿದ ಮಿಚೆಲ್ ಮಾರ್ಷ್ – Kannada News | Mitchell Marsh’s BBL Century: Perth Scorchers Captain Smashes 102 After T20 WC Squad

ಆಸ್ಟ್ರೇಲಿಯಾದ ಟಿ20 ನಾಯಕ ಮಿಚೆಲ್ ಮಾರ್ಷ್ 2025-26ರ ಬಿಗ್ ಬ್ಯಾಷ್ ಲೀಗ್​ನ 19 ನೇ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಜನವರಿ 1, 2026 ರಂದು ಹೋಬಾರ್ಟ್‌ನ ಬೆಲ್ಲೆರಿವ್ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾರ್ಚರ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 229 ರನ್ ಗಳಿಸಿತು. 2026 ರ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ ಮಿಚೆಲ್ ಮಾರ್ಷ್ ಈ ಇನ್ನಿಂಗ್ಸ್ ಆಡಿದರು.

ಈ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ ಮಿಚೆಲ್ ಮಾರ್ಷ್ ಕೇವಲ 58 ಎಸೆತಗಳಲ್ಲಿ 102 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅವರ ಇನ್ನಿಂಗ್ಸ್ 11 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಕೇವಲ 55 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರೈಸಿದ ಮಾರ್ಷ್​ಗೆ ಇದು ಬಿಬಿಎಲ್ ವೃತ್ತಿಜೀವನದ ಎರಡನೇ ಶತಕವಾಗಿದೆ.

ಈ ಪಂದ್ಯದಲ್ಲಿ, ಮಿಚೆಲ್ ಮಾರ್ಷ್ ಹೊರತುಪಡಿಸಿ, ಆರನ್ ಹಾರ್ಡಿ ಕೂಡ ಪರ್ತ್ ಸ್ಕಾರ್ಚರ್ಸ್ ಪರ ಅದ್ಭುತ ಇನ್ನಿಂಗ್ಸ್ ಆಡಿದರು. ಆರನ್ ಹಾರ್ಡಿ 43 ಎಸೆತಗಳಲ್ಲಿ 94 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನ್ನಿಂಗ್ಸ್ ಒಂಬತ್ತು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಈ ಗುರಿ ಬೆನ್ನಟ್ಟಿದ ಹೋಬಾರ್ಟ್ ಹರಿಕೇನ್ಸ್ 189 ರನ್ ಕಲೆಹಾಕಲಷ್ಟೇ ಶಕ್ತವಾಗಿ 40 ರನ್​ಗಳಿಂದ ಸೊಲೊಪ್ಪಿಕೊಂಡಿತು.

Source link

ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು? – Kannada News | People in Bengaluru walked 26 km to advocate for better footpaths and pedestrian rights

ಬೆಂಗಳೂರು, ಜನವರಿ 01: ಪಾದಚಾರಿ ಮಾರ್ಗದ ಅಗತ್ಯ ಮತ್ತು ಪಾದಚಾರಿಗಳ ಹಕ್ಕು ಸಾರುವ ನಿಟ್ಟಿನಲ್ಲಿ 26 ಕಿ.ಮೀ. ನಡಿಗೆ ಬೆಂಗಳೂರಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರಿನ ಆರ್‌ವಿ ರೋಡ್ ಮೆಟ್ರೋ ನಿಲ್ದಾಣದಿಂದ ಉತ್ತರ ಬೆಂಗಳೂರಿನ ಓರಾಯನ್ ಮಾಲ್ ಸಮೀಪದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದವರೆಗೆ ಪಾದಚಾರಿಗಳು ಹೆಜ್ಜೆ ಹಾಕಿದ್ದಾರೆ. ಲಾಲ್‌ಬಾಗ್, ಜಯನಗರ, ಕಬ್ಬನ್ ಪಾರ್ಕ್, ಉಲ್ಸೂರು ಕೆರೆ, ಶಿವಾಜಿನಗರ ಮತ್ತು ಮೇಖ್ರಿ ಸರ್ಕಲ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳ ಮೂಲಕ ಪಾದಚಾರಿಗಳು ಸಾಗಿದ್ದಾರೆ. ವಾಕಲೂರು ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಂಯುಕ್ತವಾಗಿ ಕಾರ್ಯಕ್ರಮ ಆಯೋಜಿಸಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಿಸರ್ಚ್ ಅನಾಲಿಸ್ಟ್ ಲೈಸೆನ್ಸ್ ಪಡೆದು, ಯಾರಿಗೋ ಪಾಸ್ವರ್ಡ್ ಕೊಟ್ಟು, ದಿನಸಿ ಅಂಗಡಿ ನಡೆಸುತ್ತಿದ್ದ ವ್ಯಕ್ತಿ – Kannada News | Sebi cancels licence of research analyst after finding he was running a grocery shop

ನವದೆಹಲಿ, ಜನವರಿ 1: ರಿಸರ್ಚ್ ಅನಾಲಿಸ್ಟ್ ಆಗಿ ಸೆಬಿಯಿಂದ ಲೈಸೆನ್ಸ್ (SEBI licence) ಪಡೆದ ವ್ಯಕ್ತಿಯೊಬ್ಬ ತನ್ನ ಇಮೇಲ್, ಪಾಸ್ವರ್ಡ್ ಅನ್ನು ಪರಿಚಿತನೊಬ್ಬನಿಗೆ ಕೊಟ್ಟು ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಈತನ ರಿಜಿಸ್ಟ್ರೇಶನ್ ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಇದರಿಂದ ಬಹಳ ಜನರಿಗೆ ಕೋಟ್ಯಂತರ ರೂ ನಷ್ಟವಾಗಿದೆ. ಸೆಬಿ ಈತನಿಗೆ ನೀಡಿದ್ದ ರಿಸರ್ಚ್ ಅನಾಲಿಸ್ಟ್ ಲೈಸೆನ್ಸ್ ಅನ್ನು ರದ್ದು ಮಾಡಿದೆ. ಕುತೂಹಲ ಎಂದರೆ, ತನ್ನ ರಿಜಿಸ್ಟ್ರೇಶನ್ ನಂಬರ್ ದುರ್ಬಳಕೆಯಾಗಿದ್ದರೂ ಅದರ ಅರಿವೇ ಇಲ್ಲದೆ ಪುರೂಸ್​ಖಾನ್ (Purooskhan) ಯಾವುದೋ ಸಣ್ಣ ದಿನಸಿ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದಾನೆ.

ಹಲವು ಹೂಡಿಕೆದಾರರಿಂದ ದೂರು

ಪುರೂಸ್​ಖಾನ್ ಎಂಬುವವರ ರಿಜಿಸ್ಟ್ರೇಶನ್ ನಂಬರ್ ಅನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಹಲವು ದೂರುಗಳು ಸೆಬಿಗೆ ಬಂದಿತ್ತು. 2022ರ ಜೂನ್ ತಿಂಗಳಲ್ಲಿ ಮೊದಲಿಗೆ ಬಂದ ದೂರಿನಲ್ಲಿ ಆಪ್ಷನ್ಸ್ ರಿಸರ್ಚ್ ಎನ್ನುವ ವೆಬ್​ಸೈಟ್​ನಿಂದ ಸುಳ್ಳು ಭರವಸೆಗಳು ಬರುತ್ತಿವೆ ಎಂದು ಆರೋಪಿಸಲಾಗಿತ್ತು. ಸೆಬಿ ಸರ್ಟಿಫೈಡ್ ಎಂದು ಹೇಳಿಕೊಂಡು ಪುರೂಸ್​ಖಾನ್​ರ ರಿಜಿಸ್ಟ್ರೇಶನ್ ನಂಬರ್ ಹಾಕಿದ್ದ ಆ ವೆಬ್​ಸೈಟ್, ತಾನು ಹಣ ಡಬಲ್ ಮಾಡುವ ಸ್ಕೀಮ್, ಟ್ರೇಡಿಂಗ್ ಸ್ಟ್ರಾಟಿಜಿ ಮಾಡುವುದಾಗಿ ಭರವಸೆ ಕೊಟ್ಟಿತ್ತು. ತಮ್ಮಿಂದ 50,000 ರೂ ಶುಲ್ಕ ಪಡೆಯಲಾಯಿತು, ಹಾಗೂ ನಂತರದ ಟ್ರೇಡಿಂಗ್​ನಲ್ಲಿ 4 ಲಕ್ಷ ರೂನಷ್ಟು ನಷ್ಟ ಆಯಿತು ಎಂದು ಆ ಮೊದಲ ದೂರುದಾರರು ಆರೋಪಿಸಿದ್ದರು.

ಇದನ್ನೂ ಓದಿ: ಗೆಜೆಟ್ ಮೂಲಕ ಹೆಸರು ಬದಲಾಯಿಸುವುದು ಹೇಗೆ?; ಇಲ್ಲಿದೆ 3 ಹಂತಗಳ ನಾಮ ಬದಲಾವಣೆ ಪ್ರಕ್ರಿಯೆ

ಸೆಬಿ ತನಿಖೆ ನಡೆಸಿದಾಗ ಒಂದು ಸಂಗತಿ ಗಮನಕ್ಕೆ ಬಂತು. ರಿಜಿಸ್ಟ್ರೇಶನ್ ನಂಬರ್ ಪುರೂಸ್​ಖಾನ್ ಅವರದ್ದಾದರೂ, ಗ್ರಾಹಕರಿಂದ ಪಡೆದ ಶುಲ್ಕದ ಹಣವನ್ನು ಆಪ್ಷನ್ಸ್ ರಿಸರ್ಚ್ ಕನ್ಸಲ್ಟೆನ್ಸಿ ಎನ್ನುವ ಕಂಪನಿಗೆ ಹೋಗುತ್ತಿತ್ತು. ಆ ಒಆರ್​ಸಿ ಯಾವುದೇ ರೀತಿಯಲ್ಲೂ ಸೆಬಿಯಲ್ಲಿ ನೊಂದಾಯಿತವಾಗಿರಲಿಲ್ಲ. ಇದು ಮೊದಲ ದೂರು ಬಂದಾಗ ನಡೆಸಿದ ತನಿಖೆಯಲ್ಲಿ ಗೊತ್ತಾದ ಸಂಗತಿ.

2023ರ ಫೆಬ್ರುವರಿಯಲ್ಲಿ ಎರಡನೇ ದೂರು ದಾಖಲಾಯಿತು. ಅಲ್ಲಿಯೂ ಕೂಡ ಓಆರ್​ಸಿ ವಿರುದ್ಧದ ದೂರೇ. ಈಗ ಸೆಬಿ ಹೆಚ್ಚು ಆಳವಾಗಿ ತನಿಖೆ ನಡೆಸಿತು. ಓಆರ್​ಸಿ ಹಾಗೂ ಅದರ ಪಾರ್ಟ್ನರ್ ಸಂಸ್ಥೆಗಳು ಸೆಬಿ ಲೈಸೆನ್ಸ್ ಹೊಂದಿಲ್ಲದಿರುವುದು ಹಾಗೂ ಬೇರೆ ಸೆಬಿ ನೊಂದಣಿ ಸಂಖ್ಯೆಯೊಂದನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಚಿತವಾಗಿತ್ತು. 30 ಕೋಟಿ ರೂ ಹಣವನ್ನು ಹೂಡಿಕೆದಾರರಿಗೆ ಮರಳಿಸಬೇಕೆಂದು ಆದೇಶಿಸಿ, ಒಆರ್​ಸಿಯನ್ನು ಎರಡು ವರ್ಷ ನಿಷೇಧಿಸಿತು.

ಇದನ್ನೂ ಓದಿ: ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್​ನ ಬಡ್ಡಿದರಗಳ ಪಟ್ಟಿ

ಪುರೂಸ್​ಖಾನ್ ಕಥೆ ಇದು…

ಸೆಬಿ ಇದೇ ವೇಳೆ ಪುರೂಸ್​ಖಾನ್ ಮೇಲೆ ತನಿಖೆ ನಡೆಸಿತು. ಈತ 2018ರಲ್ಲಿ ರಿಸರ್ಚ್ ಅನಾಲಿಸ್ಟ್ ಆಗಿ ಸೆಬಿಯಲ್ಲಿ ನೊಂದಾಯಿಸಿದರೂ, ಆ ಕಾಯಕ ಬಿಟ್ಟು ಸಣ್ಣ ದಿನಸಿ ಅಂಗಡಿ ಇಟ್ಟುಕೊಂಡಿರುವುದಾಗಿ ಹೇಳಿದ್ದಾನೆ. ಅಲ್ಲದೇ ಒಆರ್​ಸಿ ಜೊತೆ ಸಂಪರ್ಕ ಇರುವ ವ್ಯಕ್ತಿಯೊಬ್ಬನಿಗೆ ತಾನು ಸೆಬಿ ನೊಂದಾಯಿತ ಇಮೇಲ್ ಐಡಿಯ ಪಾಸ್ವರ್ಡ್ ಕೊಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ. ಸೆಬಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈತನ ಲೈಸೆನ್ಸ್ ಅನ್ನು ರದ್ದು ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಲು ಸುಲಭವಾಗಿ ಬೆಳ್ಳುಳ್ಳಿ ಸಿಪ್ಪೆ ಸುಳಿಯಲು ಈ ಸಿಂಪಲ್‌ ಟ್ರಿಕ್ಸ್‌ ಅನುಸರಿಸಿ – Kannada News | Just use these tricks to peel garlic skin very easily

ಅಡುಗೆಯ ರುಚಿ ಮತ್ತು ಘಮ ಹೆಚ್ಚಿಸುವಲ್ಲಿ ಬೆಳ್ಳುಳ್ಳಿಯು (garlic) ಪ್ರಮುಖ ಪಾತ್ರ ವಹಿಸುತ್ತದೆ. ರುಚಿ ಹೆಚ್ಚಿಸುವುದಷ್ಟೇ ಅಲ್ಲ ಬೆಳ್ಳುಳ್ಳಿ ಹಲವಾರು ಆರೋಗ್ಯ ಪ್ರಯೋಜನಗಳನ್ನೂ ಹೊಂದಿದೆ. ಹಾಗಾಗಿ ಹೆಚ್ಚಿನ ಅಡುಗೆಗಳಲ್ಲಿ ಬೆಳ್ಳುಳ್ಳಿಯನ್ನು ಬಳಸಲಾಗುತ್ತದೆ. ಅದರಲ್ಲೂ ಮಾಂಸಹಾರ ಭಕ್ಷ್ಯಗಳಿಗೆ ಬೆಳ್ಳುಳ್ಳಿ ಬೇಕೇ ಬೇಕು.  ಆದ್ರೆ ಬೆಳ್ಳುಳ್ಳಿ ಸಿಪ್ಪೆಯನ್ನು ತೆಗೆಯುವುದು ಮಾತ್ರ ಹಲವರಿಗೆ ಸವಾಲಿನ ಕೆಲಸ. ಬೆಳ್ಳುಳ್ಳಿ ಎಸಳುಗಳು ತೀರಾ ಚಿಕ್ಕದಾಗಿರುವ ಹಾಗೂ ತೆಳುವಾಗಿರುವ ಕಾರಣ ಸಿಪ್ಪೆಯನ್ನು ತೆಗೆಯುವುದು ಸ್ವಲ್ಪ ಕಷ್ಟ. ನೀವು ಸಹ ಬೆಳ್ಳುಳ್ಳಿ ಸಿಪ್ಪೆ ತೆಗೆಯಲು ಸಿಕ್ಕಾಪಟ್ಟೆ ಪರದಾಟ ನಡೆಸುತ್ತೀರಾ? ಹಾಗಿದ್ರೆ ಈ ಟ್ರಿಕ್ಸ್‌ ಪಾಲಿಸಿ ನೋಡಿ, ಬಲು ಸುಲಭವಾಗಿ ಬೆಳ್ಳುಳ್ಳಿ ಸಿಪ್ಪೆ ಸುಳಿಯಬಹುದು.

ಬೆಳ್ಳುಳ್ಳಿ ಸಿಪ್ಪೆ ತೆಗೆಯುವ ಸುಲಭ ಮತ್ತು ಸರಿಯಾದ ಮಾರ್ಗ:

ಚಾಕುವಿನಿಂದ ಲಘುವಾಗಿ ಒತ್ತುವುದು: ಬೆಳ್ಳುಳ್ಳಿ ಎಸಳನ್ನು ಕಟ್ಟಿಂಗ್‌ ಟ್ರೇ ಮೇಲೆ ಇರಿಸಿ. ಚಾಕುವಿನಿಂದ ನಿಧಾನವಾಗಿ ಒತ್ತಿರಿ. ಎಸಳು ಬಿರುಕು ಬಿಟ್ಟಂತೆ,  ಸುಲಭವಾಗಿ ಸಿಪ್ಪೆ ಸುಲಿಯುತ್ತದೆ. ಕಡಿಮೆ ಸಮಯದಲ್ಲಿ ಹೆಚ್ಚಿನ ಪ್ರಮಾಣದ ಬೆಳ್ಳುಳ್ಳಿಯನ್ನು ಸಿಪ್ಪೆ ತೆಗೆಯಲು ಈ ವಿಧಾನವು ಉತ್ತಮವಾಗಿದೆ.

ಡಬ್ಬದಲ್ಲಿ ಅಲ್ಲಾಡಿಸುವುದು: ಬೆಳ್ಳುಳ್ಳಿ ಎಸಳುಗಳನ್ನು ಒಂದು ಡಬ್ಬದಲ್ಲಿ ಹಾಕಿ ಅದನ್ನು 20–30 ಸೆಕೆಂಡುಗಳ ಅಲ್ಲಾಡಿಸಿ. ಹೀಗೆ ಮಾಡುವುದರಿಂದ ಸಿಪ್ಪೆಗಳು ಸುಲಭವಾಗಿ ಬೇರ್ಪಡುತ್ತವೆ. ಈ ಮೂಲಕ ನೀವು ಯಾವುದೇ ಶ್ರಮವಿಲ್ಲದೆ ಸುಲಭವಾಗಿ ಬೆಳ್ಳುಳ್ಳಿ ಸಿಪ್ಪೆ ತೆಗೆಯಬಹುದು.

ಬಿಸಿನೀರಿನ ಬಳಕೆ: ಬೆಳ್ಳುಳ್ಳಿ ಎಸಳುಗಳನ್ನು ಬೆಚ್ಚಗಿನ ನೀರಿನಲ್ಲಿ 5–10 ನಿಮಿಷಗಳ ಕಾಲ ನೆನೆಸಿಡಿ. ಮತ್ತು ತಣ್ಣಗಾದ ನಂತರ ಯಾವುದೇ ಶ್ರಮವಿಲ್ಲದೆ ಬೆಳ್ಳುಳ್ಳಿಯ ಸಿಪ್ಪೆ ತೆಗೆಯಬಹುದು. ಈ ವಿಧಾನವು ಹೆಚ್ಚಿನ ಪ್ರಮಾಣದ ಬೆಳ್ಳುಳ್ಳಿಯ ಸಿಪ್ಪೆ ತೆಗೆಯಲು ವಿಶೇಷವಾಗಿ ಉಪಯುಕ್ತವಾಗಿದೆ.

ಮೈಕ್ರೋವೇವ್ ಟ್ರಿಕ್: ಬೆಳ್ಳುಳ್ಳಿ ಎಸಳುಗಳನ್ನು ಮೈಕ್ರೋವೇವ್‌ನಲ್ಲಿ 10–15 ಸೆಕೆಂಡುಗಳ ಕಾಲ ಬಿಸಿ ಮಾಡಿ. ಶಾಖವು ಸಿಪ್ಪೆಯನ್ನು ಸಡಿಲಗೊಳಿಸುತ್ತದೆ ಮತ್ತು ಅದು ಬೇಗನೆ  ಸುಲಿಯಲು ಅನುವು ಮಾಡಿಕೊಡುತ್ತದೆ. ಈ ಟ್ರಿಕ್ಸ್‌ ಹೆಚ್ಚಿನ ಪ್ರಮಾಣದ ಬೆಳ್ಳುಳ್ಳಿಯ ಸಿಪ್ಪೆ ತೆಗೆಯಲು ವಿಶೇಷವಾಗಿ ಉಪಯುಕ್ತವಾಗಿದೆ.

ಇದನ್ನೂ ಓದಿ: ಬರೀ ನೀರು ಮಾತ್ರವಲ್ಲ, ಕೋಳಿ ಮಾಂಸವನ್ನು ತೊಳೆಯಲು ಕ್ರಮವನ್ನು ಅನುಸರಿಸಲೇಬೇಕು

ಕೈಗಳಿಂದ ಬೆಳ್ಳುಳ್ಳಿಯ ವಾಸನೆಯನ್ನು ಹೋಗಲಾಡಿಸುವುದು ಹೇಗೆ?

ಬೆಳ್ಳುಳ್ಳಿ ಸಿಪ್ಪೆ ತೆಗೆದ ನಂತರ ಕೈಗಳಲ್ಲಿ ಅದರ ಕಟುವಾದ ವಾಸನೆ ಹಾಗೆಯೇ ಉಳಿದುಕೊಂಡು ಬಿಡುತ್ತದೆ. ಈ ವಾಸನೆಯನ್ನು ಹೋಗಲಾಡಿಸಲು ನಿಮ್ಮ ಕೈಗಳನ್ನು ಉಕ್ಕಿನ ಚಮಚದಿಂದ ಉಜ್ಜಿಕೊಳ್ಳಿ. ಇದಲ್ಲದೆ ನಿಂಬೆ ಅಥವಾ ಉಪ್ಪಿನಿಂದ ಕೈ ತೊಳೆಯುವುದರಿಂದಲೂ ಸಹ ವಾಸನೆಯನ್ನು ಹೋಗಲಾಡಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:09 pm, Thu, 1 January 26

Source link

ಹೊಸ ವರ್ಷಕ್ಕೆ ಭರ್ಜರಿ ಕಿಕ್​​ ಕೊಟ್ಟ ಮದ್ಯ: ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಆದಾಯ – Kannada News | Karnataka New Year Liquor Sales Soar: 587 Cr Excise Revenue Boost

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಹೊಸ ವರ್ಷಾಚರಣೆ (New Year 2026) ಸಂಭ್ರಮ ಜೋರಾಗಿತ್ತು. ಪಬ್‌, ಬಾರ್‌, ರೆಸ್ಟೋರೆಂಟ್​​ಗಳು ಝಗಮಗಿಸಿದ್ದವು. ಕುಡಿದು ಟೈಟಾದ ಯುವಕ, ಯುವತಿಯರು ಡಿಜೆ ಸದ್ದಿಗೆ ಹುಚ್ಚೆದ್ದು ಕುಣಿದರು. ಇನ್ನು ಮದ್ಯ (Liquor) ಮಾರಾಟದ ಅವಧಿಯನ್ನು ವಿಸ್ತರಿಸಲಾಗಿತ್ತು. ಹೀಗಾಗಿ ಹೊಸ ವರ್ಷದಂದು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಭರ್ಜರಿ ಆದಾಯವಾಗಿದೆ. ಈ ವರ್ಷ ಅಬಕಾರಿ ಇಲಾಖೆ ಒಟ್ಟು 587.51 ಕೋಟಿ ರೂ. ಆದಾಯ ಗಳಿಸಿದೆ.

ಈ ವರ್ಷ ಹೆಚ್ಚಿನ ಮದ್ಯ ಮಾರಾಟ: 587.51 ಕೋಟಿ ರೂ ಆದಾಯ

ಹೊಸ ವರ್ಷಾಚರಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ನಿಗದಿತ ಸಮಯವನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿತ್ತು. ಆ ಮೂಲಕ ಮದ್ಯ ಪ್ರಿಯರಿಗೆ ಗುಡ್​ ನ್ಯೂಸ್​​ ಸಿಕ್ಕಿತ್ತು. ಸೂರ್ಯೋದಕ್ಕೂ ಮುನ್ನವೇ ಬಾರ್​​​​​ಗಳು ಓಪನ್ ಆಗಿದ್ದವು. ಹಾಗಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಮದ್ಯ ಮಾರಾಟ ಆಗಿದೆ.

ಇದನ್ನೂ ಓದಿ: ಹೊಸ ವರ್ಷದಂದು ಬಿಎಂಟಿಸಿಗೆ ಭರ್ಜರಿ ಆದಾಯ: ನಿನ್ನೆ ಒಂದೇ ದಿನ ಗಳಿಸಿದ್ದೆಷ್ಟು ಗೊತ್ತಾ?

ಐಎಂಎಲ್, ಬಿಯರ್ ಮಾರಾಟದಿಂದ 587.51 ಕೋಟಿ ಆದಾಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚುವರಿಯಾಗಿ 166.74 ಕೋಟಿ ರೂ ಈ ವರ್ಷ ಅಬಕಾರಿ ಇಲಾಖೆ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದುಬಂದಿದೆ.

ಇದನ್ನೂ ಓದಿ: ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಆದ ಕಲೆಕ್ಷನ್​ ಎಷ್ಟು?

2024ರ ಡಿ.29, 30, 31ರಂದು 8.25 ಲಕ್ಷ ಬಾಕ್ಸ್ IML ಮತ್ತು 5.03 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗುವ ಮೂಲಕ 2024ರಲ್ಲಿ 420.77 ಕೋಟಿ ರೂ ಆದಾಯ ಗಳಿಸಲಾಗಿತ್ತು. 2025ರ ಡಿ.29, 30, 31ರಂದು 9.84 ಲಕ್ಷ ಬಾಕ್ಸ್ IML, ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ 1.59 ಲಕ್ಷ ಬಾಕ್ಸ್ ಹೆಚ್ಚುವರಿ ಮಾರಾಟವಾಗಿದೆ. ಮತ್ತು ಇದೇ ದಿನದಂದು 6.64 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 1.61 ಲಕ್ಷ ಬಾಕ್ಸ್ ಹೆಚ್ಚುವರಿ ಮಾರಾಟವಾಗಿದೆ. ಐಎಂಎಲ್, ಬಿಯರ್ ಮಾರಾಟದಿಂದ ಈ ವರ್ಷ ಅಬಕಾರಿ 587.51 ಕೋಟಿ ಆದಾಯವಾಗಿದೆ. ಇದನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚುವರಿಯಾಗಿ 166.74 ಕೋಟಿ ರೂ ಆದಾಯ ಹರದಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RRB Recruitment: ರೈಲ್ವೆ ನೇಮಕಾತಿ; 312 ಪ್ರತ್ಯೇಕ ವರ್ಗದ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | RRB Recruitment 2025: 312 Specialist Posts – Apply Online!

ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ ಪ್ರತ್ಯೇಕ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಮುಖ್ಯ ಕಾನೂನು ಸಹಾಯಕ, ಸಾರ್ವಜನಿಕ ಅಭಿಯೋಜಕ, ಜೂನಿಯರ್ ಅನುವಾದಕ, ಹಿರಿಯ ಪ್ರಚಾರ ನಿರೀಕ್ಷಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ವೈಜ್ಞಾನಿಕ ಸಹಾಯಕ ತರಬೇತಿ ಇತ್ಯಾದಿ ಒಟ್ಟು 312 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಬೆಂಗಳೂರು, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಗೋರಖ್‌ಪುರ, ಕೋಲ್ಕತ್ತಾ, ಮುಂಬೈ, ಪಾಟ್ನಾ, ಪ್ರಯಾಗ್‌ರಾಜ್.. RRB ಪ್ರದೇಶಗಳಲ್ಲಿ ಭರ್ತಿ ಮಾಡಲಾಗುತ್ತದೆ.

ಪೋಸ್ಟ್ ವಿವರಗಳು:

  • ಮುಖ್ಯ ಕಾನೂನು ಸಹಾಯಕ ಹುದ್ದೆಗಳ ಸಂಖ್ಯೆ: 22
  • ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳ ಸಂಖ್ಯೆ: 07
  • ಜೂನಿಯರ್ ಟ್ರಾನ್ಸ್‌ಲೇಟರ್ ಹುದ್ದೆಗಳ ಸಂಖ್ಯೆ: 202
  • ಹಿರಿಯ ಪ್ರಚಾರ ನಿರೀಕ್ಷಕರ ಹುದ್ದೆಗಳ ಸಂಖ್ಯೆ: 15
  • ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕರ ಹುದ್ದೆಗಳ ಸಂಖ್ಯೆ: 24
  • ವೈಜ್ಞಾನಿಕ ಸಹಾಯಕ/ತರಬೇತಿ ಹುದ್ದೆಗಳ ಸಂಖ್ಯೆ: 02
  • ಪ್ರಯೋಗಾಲಯ ಸಹಾಯಕ ಗ್ರೇಡ್-3 ಹುದ್ದೆಗಳ ಸಂಖ್ಯೆ: 39
  • ವೈಜ್ಞಾನಿಕ ಮೇಲ್ವಿಚಾರಕ/ದಕ್ಷತಾಶಾಸ್ತ್ರ ಮತ್ತು ತರಬೇತಿ ಹುದ್ದೆಗಳ ಸಂಖ್ಯೆ: 01

ಆರ್‌ಆರ್‌ಬಿ ಪ್ರತ್ಯೇಕಿತ ವರ್ಗದ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಟರ್ಮೀಡಿಯೇಟ್, ಕಾನೂನು ಪದವಿ, ಸಂಬಂಧಿತ ವಿಭಾಗಗಳಲ್ಲಿ ಡಿಪ್ಲೊಮಾ, ಪಿಜಿ ಡಿಪ್ಲೊಮಾ, ಎಂಬಿಎ, ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸಿನ ಮಿತಿ ಜನವರಿ 1, 2026 ಕ್ಕೆ 18 ವರ್ಷಗಳು. ಈ ಅರ್ಹತೆಗಳನ್ನು ಹೊಂದಿರುವವರು ಜನವರಿ 29, 2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕದ ಭಾಗವಾಗಿ, ಸಾಮಾನ್ಯ ಅಭ್ಯರ್ಥಿಗಳು ರೂ. 500, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕರು, ಇಬಿಸಿ, ಅಲ್ಪಸಂಖ್ಯಾತ ಅಭ್ಯರ್ಥಿಗಳು ತಲಾ ರೂ. 250 ಪಾವತಿಸಬೇಕಾಗುತ್ತದೆ. ಅಂತಿಮ ಆಯ್ಕೆಯು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಅನುವಾದ ಪರೀಕ್ಷೆಯನ್ನು ಆಧರಿಸಿರುತ್ತದೆ. ಆಯ್ಕೆಯಾದವರಿಗೆ ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳಿಗೆ ರೂ. 19,000, ಜೂನಿಯರ್ ಟ್ರಾನ್ಸ್‌ಲೇಟರ್, ಇನ್ಸ್‌ಪೆಕ್ಟರ್‌ಗಳು ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ರೂ. 35,400 ಮತ್ತು ಇತರ ಹುದ್ದೆಗಳಿಗೆ ರೂ. 44,900 ಮಾಸಿಕ ವೇತನವನ್ನು ನೀಡಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

VHT 2025-26: ವರ್ಷದ ಕೊನೆಯ ದಿನ ಸಿಡಿದವು ಬರೋಬ್ಬರಿ 13 ಶತಕಗಳು

Source link

ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಕೊಲೆ: ಮರ್ಡರ್​​ ರಹಸ್ಯ ಬಿಚ್ಚಿಟ್ಟಿದ್ದು ಹೆತ್ತಮ್ಮ! – Kannada News | Property Dispute Between Brothers: Mother Reveals Son’s Murder in Chikkodi

ಚಿಕ್ಕೋಡಿ, ಜನವರಿ 01: ಆಸ್ತಿ ವಿಚಾರಕ್ಕೆ ಒಡ ಹುಟ್ಟಿದವನನ್ನೇ ಕೊಂದಿದ್ದಲ್ಲದೆ ಆತ ಮೃತಪಟ್ಟಿರೋದು ಆಕಸ್ಮಿಕ ಸಾವಿನಿಂದ ಎಂದು ಬಿಂಬಿಸಿದ್ದ ಖತರ್ನಾಕ್​​ ವ್ಯಕ್ತಿಯನ್ನು ಸಿನಿಮೀಯ ಮಾದರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಸಲಿಂಗ ರಾಮಾಪುರೆ (38) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಸಿದ್ದಪ್ಪ ರಾಮಾಪುರೆಯೇ ಆರೋಪಿ ಎಂಬುದು ತನಿಖೆ ವೇಳೆ ಪೊಲೀಸರು ಬಯಲು ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಡಿ.18ರಂದು ಬಸಲಿಂಗ ರಾಮಾಪುರೆ ಮೃತಪಟ್ಟಿದ್ದ. ಹಂಚು ಹಾಕುವಾಗ ಬಿದ್ದು ಆತ ಮೃತಪಟ್ಟಿರೋದಾಗಿ ಕುಟುಂಬಸ್ಥರು ತಿಳಿಸಿದ್ದರು. ಆದರೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದ ಪೊಲೀಸರಿಗೆ ಈ ಬಗ್ಗೆ ಅನುಮಾನ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೂ ಕೂಡ ತಲೆಗೆ ಬಲವಾಗಿ ಪೆಟ್ಟುಬಿದ್ದ ಕಾರಣ ವ್ಯಕ್ತಿ ಮೃತಪಟ್ಟಿರೋದಾಗಿ ತಿಳಿಸಿದ್ದರು. ಹೀಗಾಗಿ ಬಸಲಿಂಗ ಕುಟುಂಬಸ್ಥರನ್ನು ಪೊಲೀಸರು ಮತ್ತೊಮ್ಮೆ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ತಾಯಿ ರತ್ನವ್ವ ಬಳಿ ಸಿಬ್ಬಂದಿ ಭಾವನಾತ್ಮಕವಾಗಿ ಮಾತಾಡಿದಾಗ ಆಕೆ ಕೊಲೆಯ ರಹಸ್ಯ ಬಿಚ್ಚಿಟ್ಟಿದ್ದಾಳೆ.

ಇದನ್ನೂ ಓದಿ: ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ

ನಾಲ್ಕು ಎಕರೆ ಜಮೀನಿಗಾಗಿ ಬಸಲಿಂಗ ಮತ್ತು ಸಿದ್ದಪ್ಪ ನಡುವೆ ಗಲಾಟೆ ನಡೆದಿತ್ತು. ಆಸ್ತಿ ಬಗ್ಗೆ ತಮ್ಮ ಬಸಲಿಂಗ ಅಣ್ಣನ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ. ಹೀಗಾಗಿ ದನದ ಕೊಟ್ಟಿಗೆಯಲ್ಲಿ ಆತನ ಮೇಲೆ ಸಿದ್ದಪ್ಪ ಹಲ್ಲೆ ನಡೆಸಿದ್ದ. ಕಟ್ಟಿಗೆ ಮತ್ತು ಕಲ್ಲಿನಿಂದ ದಾಳಿ ನಡೆಸಿದ ಪರಿಣಾಮ ಬಸಲಿಂಗ ಮೃತಪಟ್ಟಿದ್ದ. ತಾಯಿ ರತ್ನವ್ವ ಮತ್ತು ಬಸಲಿಂಗನ ಪತ್ನಿ ವೀಣಾ ಎದುರೇ ಈ ಘಟನೆ ನಡೆದಿತ್ತು. ಬಳಿಕ ವೀಣಾಗೆ ಜೀವ ಬೆದರಿಕೆ ಹಾಕುವ ಮೂಲಕ ಸಿದ್ದಪ್ಪ ಪ್ರಕರಣ ಮುಚ್ಚಿಹಾಕಿದ್ದ. ಆದರೆ ಆತನ ತಾಯಿಯೇ ಈಗ ಮಗನ ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ತನಿಖೆ ವೇಳೆ ರತ್ನವ್ವ ನೀಡಿರುವ ಮಾಹಿತಿ ಹಿನ್ನೆಲೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಸಿದ್ದಪ್ಪನನ್ನು ಪೊಲೀಸರು ಬಂಧಿಸಿದ್ದು, ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ತಮ್ಮನ ಕೊಂದು ಬಚಾವ್​ ಆಗಲು ಆರೋಪಿ ನಡೆಸಿದ್ದ ಸರ್ವ ಪ್ರಯತ್ನಗಳೂ ವಿಫಲವಾಗಿದ್ದು, ಕಂಬಿ ಹಿಂದೆ ನಿಲ್ಲಲೇ ಬೇಕಾದ ಸ್ಥಿತಿ ಸಿದ್ದಪ್ಪಗೆ ಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link