nagaraj11081993

ಫಿಲ್ ಸಾಲ್ಟ್ ‘ಕ್ಯಾಚ್’ ಬಗ್ಗೆ ಸುನಿಲ್ ಗವಾಸ್ಕರ್ ಅಪಸ್ವರ

ಇಂಡಿಯನ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಫಿಲ್ ಸಾಲ್ಟ್ ಹಿಡಿದ ಕ್ಯಾಚ್ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಸಾಲ್ಟ್ ಬೌಂಡರಿ ಲೈನ್​ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್ ತೀರ್ಪಿನ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ. ಈ ಪಂದ್ಯದಲ್ಲಿ ಎಸ್‌ಆರ್‌ಎಚ್ ತಂಡದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ನೀಡಿದ ಕ್ಯಾಚ್ ಅನ್ನು ಬೌಂಡರಿ ಲೈನ್ ಬಳಿ ಫಿಲ್…

Read More

ಹಾರ್ಮುಜ್ ಜಲಸಂಧಿ, ಖಾರ್ಗ್​ ದ್ವೀಪದ ಮೇಲೆ ದಾಳಿ ಮಾಡುತ್ತಾ ಅಮೆರಿಕ, 3,500 ಸೈನಿಕರನ್ನು ನಿಯೋಜಿಸಿರುವುದೇಕೆ?

ವಾಷಿಂಗ್ಟನ್, ಮಾರ್ಚ್​ 29: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಇರಾನ್(Iran), ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧ ಬಲವಾದ ಪ್ರತಿದಾಳಿ ನಡೆಸುತ್ತಿದೆ. ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಘರ್ಜನೆಯ ನಡುವೆ, ಈ ಸಂಘರ್ಷವು ಈಗ 30 ನೇ ದಿನಕ್ಕೆ ಪ್ರವೇಶಿಸಿದೆ ಮತ್ತು ಪ್ರದೇಶದಾದ್ಯಂತ ಉದ್ವಿಗ್ನತೆ ಹೆಚ್ಚಾಗಿದೆ. ಈ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ, ಅಮೆರಿಕ ಈಗ ತನ್ನ ಮಿಲಿಟರಿ ಕಾರ್ಯತಂತ್ರವನ್ನು ಹೆಚ್ಚು ಆಕ್ರಮಣಕಾರಿಯನ್ನಾಗಿ ಮಾಡಿದೆ. ಇದರ ಭಾಗವಾಗಿ, ಅಮೆರಿಕ ತನ್ನ…

Read More

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್!

ಬೆಂಗಳೂರು, ಮಾರ್ಚ್​ 29: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಶಾರೀಕ್ ಅರ್ಜಿ ಅಂಗೀಕಾರ ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ…

Read More

Ishan Kishan: ಆ ಒಂದು ವಿಕೆಟ್ ಸಿಕ್ಕಿದಿದ್ರೆ ಏನಾದ್ರು ಮಾಡಬಹುದಿತ್ತು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಸ್​ಆರ್​ಹೆಚ್ ಪಡೆ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು…

Read More

ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿಗಲಿದೆ ಸರ್ಪ್ರೈಸ್? ಹೊಸ ಸಿನಿಮಾ ಟೈಟಲ್ ಮೇಲೆ ಕಣ್ಣು

ಟಾಲಿವುಡ್‌ನ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ (Allu Arjun) ಅವರ ಅಭಿಮಾನಿಗಳು ಸದ್ಯ ಏಪ್ರಿಲ್ 8ಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಅಂದು ಅಲ್ಲು ಅರ್ಜುನ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲು ನಿರ್ದೇಶಕ ಅಟ್ಲೀ (Atlee) ಸಜ್ಜಾಗುತ್ತಿದ್ದಾರೆ ಎಂಬ ವದಂತಿಗಳು ಜೋರಾಗಿ ಕೇಳಿಬರುತ್ತಿವೆ. ಅಲ್ಲು ಅರ್ಜುನ್ ಮತ್ತು ಅಟ್ಲೀ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಈ ಬಹುನಿರೀಕ್ಷಿತ ಚಿತ್ರಕ್ಕೆ ಏಪ್ರಿಲ್ 8ರಂದು ಅಧಿಕೃತವಾಗಿ ಶೀರ್ಷಿಕೆಯನ್ನು ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಕೇವಲ ಒಂದು ಪೋಸ್ಟರ್ ಮೂಲಕ ಹೆಸರು ಪ್ರಕಟಿಸುತ್ತಾರೋ…

Read More

ನಿಂತಿದ್ದ ಕಂಟೈನರ್​ಗೆ ಕಾರು ಡಿಕ್ಕಿ: ಬಾಲಕಿ ಸೇರಿ ಇಬ್ಬರು ಸಾವು; ಮೂವರ ಸ್ಥಿತಿ ಗಂಭೀರ

ಉಡುಪಿ, ಮಾರ್ಚ್​​ 29: ನಿಂತಿದ್ದ ಕಂಟೈನರ್​ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದd ಬಳಿ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಮತಾ(36) ಹಾಗೂ ಮಗಳು ಧೃತಿಕಾ(14) ಪ್ರಾಣ ಬಿಟ್ಟಿದ್ದು, ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್​​ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ…

Read More

ಬ್ಯಾಂಕ್ ತಪ್ಪಿನಿಂದ ಮಹಿಳೆಯೊಬ್ಬರ ಅಕೌಂಟ್​ಗೆ 10 ಕೋಟಿ ರೂ. ಜಮಾ, ಆಕೆ ಮಾಡಿದ್ದೇನು?

ಮೈನ್​ಪುರಿ, ಮಾರ್ಚ್​ 29: ಹಣ ಕಂಡ್ರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಕಾಲದಲ್ಲಿ, ತಮ್ಮ ಬ್ಯಾಂಕ್(Bank) ಖಾತೆಗೆ ಏನಾದ್ರೂ ಕೋಟಿ ಕೋಟಿ ಹಣ ಬಂದ್ರೆ ಯಾರಾದ್ರೂ ಸುಮ್ನಿರ್ತಾರಾ, ಮೊದಲು ವಿತ್​ ಡ್ರಾ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ಮಹಿಳೆಯ ಖಾತೆಗೆ 10 ಕೋಟಿ ರೂ. ಹಣ ಬಂದಿದೆ. ಆಕೆ ಮಾಡಿದ್ದೇನು ಇಲ್ಲಿದೆ ಮಾಹಿತಿ. ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ.ಕೃಷಿಯ ಮೂಲಕ ಜೀವನೋಪಾಯವನ್ನು ಗಳಿಸುತ್ತಿದ್ದಾರೆ. ನವರಾತ್ರಿಯ ಸಮಯದಲ್ಲಿ…

Read More

ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳೀಪಟ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಟಿ20 ರನ್​ ಸರದಾರರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಲಿಸ್ಟ್​ನಲ್ಲಿ ಕಿಂಗ್ ಕೊಹ್ಲಿ ಒಂದು ಸ್ಥಾನ ಮೇಲೇರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ…

Read More

Bengaluru Air Quality: ಬೆಂಗಳೂರಿನ ವಾಯುಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 29: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಬೆಂಗಳೂರಿನ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. 150ಕ್ಕಿಂತ ಜಾಸ್ತಿಯಿದ್ದ AQI ಕಡುಮೆಯಾಗಿದ್ದರೂ, ಇನ್ನೂ ಗುಣಮಟ್ಟ ಅನಾರೋಗ್ಯಕರವಾಗಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ವ್ಯಕ್ತಿಯ ಶಿರಚ್ಛೇದ ಮಾಡಿ, ರುಂಡವನ್ನು ಮನೆಯಲ್ಲಿ ಎಸೆದು, ತನ್ನಷ್ಟಕ್ಕೆ ಅಡುಗೆ ಮಾಡಿದ ಆರೋಪಿ

ಬಾರಾಬಂಕಿ, ಮಾರ್ಚ್​ 29: ಐಸ್​ಕ್ರೀಂ ಮಾರಾಟಗಾರನ ಶಿರಚ್ಛೇದ(Behead) ಮಾಡಿ, ರುಂಡವನ್ನು ಮನೆಗೆ ಕೊಂಡೊಯ್ದು ಅಡುಗೆ ಮನೆಯಲ್ಲಿ ಎಸೆದು, ತನ್ನಷ್ಟಕ್ಕೆ ಅಡುಗೆ ಮುಂದುವರೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಈ ಘಟನೆ ಬಾರಾಬಂಕಿ ಜಿಲ್ಲೆಯ ಪರ್ಸಾವಲ್ ಗ್ರಾಮದಲ್ಲಿ ನಡೆದಿದೆ, ಮೃತ ವ್ಯಕ್ತಿ ಹೆಸರು ಬಬ್ಲು. ಬೇರೆ ದಿನಗಳಂತೆ ಪರ್ಸಾವಲ್ ಗ್ರಾಮಕ್ಕೆ ಐಸ್ ಕ್ರೀಮ್ ಮಾರಾಟ ಮಾಡಲು ಹೋಗಿದ್ದರು. ತನ್ನ ಕೆಲಸ ನಿರ್ವಹಿಸುತ್ತಿದ್ದಾಗ, ಸ್ಥಳೀಯ ನಿವಾಸಿ ಶಂಕರ್ ಯಾದವ್ ಜೊತೆ ಮಾತಿನ ಚಕಮಕಿ ನಡೆದಿತ್ತು….

Read More