All posts by nagaraj11081993

ಹಾರ್ಮುಜ್ ಜಲಸಂಧಿ, ಖಾರ್ಗ್​ ದ್ವೀಪದ ಮೇಲೆ ದಾಳಿ ಮಾಡುತ್ತಾ ಅಮೆರಿಕ, 3,500 ಸೈನಿಕರನ್ನು ನಿಯೋಜಿಸಿರುವುದೇಕೆ?

ಹಾರ್ಮುಜ್ ಜಲಸಂಧಿ, ಖಾರ್ಗ್​ ದ್ವೀಪದ ಮೇಲೆ ದಾಳಿ ಮಾಡುತ್ತಾ ಅಮೆರಿಕ, 3,500 ಸೈನಿಕರನ್ನು ನಿಯೋಜಿಸಿರುವುದೇಕೆ?

ವಾಷಿಂಗ್ಟನ್, ಮಾರ್ಚ್​ 29: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಇರಾನ್(Iran), ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧ ಬಲವಾದ ಪ್ರತಿದಾಳಿ ನಡೆಸುತ್ತಿದೆ. ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಘರ್ಜನೆಯ ನಡುವೆ, ಈ ಸಂಘರ್ಷವು ಈಗ 30 ನೇ ದಿನಕ್ಕೆ ಪ್ರವೇಶಿಸಿದೆ ಮತ್ತು ಪ್ರದೇಶದಾದ್ಯಂತ ಉದ್ವಿಗ್ನತೆ ಹೆಚ್ಚಾಗಿದೆ.

ಈ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ, ಅಮೆರಿಕ ಈಗ ತನ್ನ ಮಿಲಿಟರಿ ಕಾರ್ಯತಂತ್ರವನ್ನು ಹೆಚ್ಚು ಆಕ್ರಮಣಕಾರಿಯನ್ನಾಗಿ ಮಾಡಿದೆ. ಇದರ ಭಾಗವಾಗಿ, ಅಮೆರಿಕ ತನ್ನ ಬೃಹತ್ ಯುದ್ಧನೌಕೆ ಯುಎಸ್ಎಸ್ ಟ್ರಿಪೋಲಿಯನ್ನು ನಿಯೋಜಿಸಿದೆ, ಇದು ಸುಮಾರು 3,500 ನೌಕಾಪಡೆಗಳೊಂದಿಗೆ ಯುಎಸ್ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಪ್ರದೇಶಕ್ಕೆ ಆಗಮಿಸಿದೆ.

ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ವಿಮಾನಗಳನ್ನು ಹೊಂದಿರುವ ಈ ಹಡಗು ಅಮೆರಿಕದ ಯುದ್ಧ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಈ ಹಡಗು ಹೆಲಿಕಾಪ್ಟರ್‌ಗಳು, ಎಂವಿ -22 ಆಸ್ಪ್ರೇ ವಿಮಾನ ಮತ್ತು ಎಫ್ -35 ಬಿ ಜಂಟಿ ಸ್ಟ್ರೈಕ್ ಫೈಟರ್ ಜೆಟ್‌ಗಳನ್ನು ಸಾಗಿಸಬಲ್ಲದು.

ಇರಾನ್ ಹಾರ್ಮುಜ್ ಜಲಸಂಧಿಯನ್ನು ಅಮೆರಿಕ, ಇಸ್ರೇಲ್​ಗೆ ಮುಚ್ಚಿದ್ದು, ಭಾರತ ಸೇರಿ ಐದು ದೇಶಗಳಿಗೆ ಮಾತ್ರ ತೈಲ ಹಡಗುಗಳನ್ನು ಕೊಂಡೊಯ್ಯಲು ಅವಕಾಶ ಮಾಡಿಕೊಟ್ಟಿರುವುದು ದ್ವೇಷವನ್ನು ಮತ್ತಷ್ಟು ಹೆಚ್ಚಿಸಿದೆ.

ಮತ್ತಷ್ಟು ಓದಿ: ಅಮೆರಿಕದ ಎಫ್-18 ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಅಮೆರಿಕ ಈ ಪ್ರದೇಶಕ್ಕೆ 3,500 ಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಿದೆ ಮತ್ತು ಪರಿಸ್ಥಿತಿ ಹದಗೆಡುತ್ತಲೇ ಇದೆ. ಸುಮಾರು 2,500 ನೌಕಾಪಡೆಗಳನ್ನು ಹೊತ್ತ ಆಧುನಿಕ ಯುದ್ಧನೌಕೆ ಯುಎಸ್ಎಸ್ ಟ್ರಿಪೋಲಿ ಮಧ್ಯಪ್ರಾಚ್ಯಕ್ಕೆ ಆಗಮಿಸಿದೆ. ಇದೀಗ ಹಾರ್ಮುಜ್ ಜಲಸಂಧಿ, ಖಾರ್ಗ್​ ದ್ವೀಪದ ಮೇಲೆ ಅಮೆರಿಕ ದಾಳಿ ಮಾಡುವ ಭೀತಿ ಎದುರಾಗಿದೆ.

ಯುಎಸ್ ಸೆಂಟ್ರಲ್ ಕಮಾಂಡ್ ಪ್ರಕಾರ, ಫೆಬ್ರವರಿ 28 ರಂದು ಪ್ರಾರಂಭವಾದ ಆಪರೇಷನ್ ಎಪಿಕ್ ಫ್ಯೂರಿ ಈಗಾಗಲೇ 11,000 ಕ್ಕೂ ಹೆಚ್ಚು ಗುರಿಗಳನ್ನು ಹೊಡೆದುರುಳಿಸಿದೆ.ಹೋರಾಟವು ದೊಡ್ಡ ಪ್ರಮಾಣದಲ್ಲಿ ಉಲ್ಬಣಗೊಳ್ಳುತ್ತಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ.

ಫೆಬ್ರವರಿ 28 ರಿಂದ ಯುಎಸ್ ಪಡೆಗಳು ಇರಾನಿನ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಿವೆ. 11,000 ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹಾರಿಸಲಾಯಿತು ಮತ್ತು 150 ಕ್ಕೂ ಹೆಚ್ಚು ಇರಾನಿನ ಹಡಗುಗಳು ಹಾನಿಗೊಳಗಾದವು. ಅಮೆರಿಕವು ಇರಾನ್‌ನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್, ಕ್ಷಿಪಣಿ ತಾಣಗಳು, ನೌಕಾ ಹಡಗುಗಳು ಮತ್ತು ಶಸ್ತ್ರಾಸ್ತ್ರ ಉತ್ಪಾದನಾ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿತು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್!

ಬೆಂಗಳೂರು, ಮಾರ್ಚ್​ 29: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ.

ಶಾರೀಕ್ ಅರ್ಜಿ ಅಂಗೀಕಾರ

ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ ಸ್ಫೋಟದಲ್ಲಿ ಆಟೋ ಚಾಲಕನೂ ಗಂಭೀರವಾಗಿ ಗಾಯಗೊಂಡಿದ್ದ. ನಂತರ ಶಂಕಿತ ಉಗ್ರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಎನ್‌ಐಎ (National Investigation Agency) ಅಧಿಕಾರಿಗಳು ಅವನನ್ನು ಬಂಧಿಸಿದ್ದರು.

2024ರ ಏಪ್ರಿಲ್ 20ರಂದು ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಕುರಿತು ನ್ಯಾಯಾಲಯ ಪ್ರಶ್ನಿಸಿದಾಗ ಶಾರೀಕ್ ತಾನು ನಿರಪರಾಧಿ ಎಂದು ಹೇಳಿದ್ದ. ಆದರೆ 2025ರ ಡಿಸೆಂಬರ್‌ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿ ತನ್ನ ನಿಲುವು ಬದಲಿಸಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಕಳೆದ ಮಾರ್ಚ್ 26ರಂದು ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿದೆ.

ಅರ್ಜಿಯಲ್ಲೇನಿದೆ?

ತನ್ನ ಅರ್ಜಿಯಲ್ಲಿ ಶಾರೀಕ್, ಕುಕ್ಕರ್‌ನಲ್ಲಿ ಐಇಡಿ ಇಟ್ಟು ಸ್ಫೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯಗೊಳಿಸಿದೆ.

ಇದನ್ನೂ ಓದಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ

ಎನ್​ಐಎ ತನಿಖೆಯಲ್ಲಿ ಬಯಲಾಗಿದ್ದೇನು?

ಎನ್‌ಐಎ ತನಿಖೆಯ ಪ್ರಕಾರ, ಶಾರೀಕ್ ಐಸಿಸ್ ಪ್ರೇರಿತ ಶಿವಮೊಗ್ಗ ಮಾಡ್ಯೂಲ್‌ನ ಸದಸ್ಯನಾಗಿದ್ದು, 2020ರಿಂದ ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. 2022ರ ಸೆಪ್ಟೆಂಬರ್‌ನಲ್ಲಿ ಶಿವಮೊಗ್ಗದಲ್ಲಿ ನಡೆದ ಐಇಡಿ ಪರೀಕ್ಷಾ ಪ್ರಕರಣದಲ್ಲೂ ಅವನ ಕೈವಾಡವಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರಿನಲ್ಲಿ ರಾಷ್ಟ್ರ ವಿರೋಧಿ ಗೋಡೆ ಬರಹ ಪ್ರಕರಣದಲ್ಲೂ ಬಂಧನಕ್ಕೊಳಗಾಗಿದ್ದನು.

ಇದೇ ರೀತಿ 2024ರ ಮಾರ್ಚ್ 1ರಂದು ನಡೆದ ಬೆಂಗಳೂರಿನ ರಾಮೇಶ್ವರಂ ಕಫೆ ಬಾಂಬ್ ಸ್ಫೋಟ ಪ್ರಕರಣದಲ್ಲೂ ಈತ ಕೈಜೋಡಿಸಿರಬಹುದೆಂಬ ಶಂಕೆಯಿದೆ. ಸಧ್ಯಕ್ಕೆ ಈತ ಕುಕ್ಕರ್ ಸ್ಫೋಟದ ಪ್ರಕರಣದಲ್ಲಿ ಮಾತ್ರ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Ishan Kishan: ಆ ಒಂದು ವಿಕೆಟ್ ಸಿಕ್ಕಿದಿದ್ರೆ ಏನಾದ್ರು ಮಾಡಬಹುದಿತ್ತು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಸ್​ಆರ್​ಹೆಚ್ ಪಡೆ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್​ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದರು. ಆದರೆ ಈ ಗುರಿಯನ್ನು ಆರ್​ಸಿಬಿ ತಂಡ ಕೇವಲ 15.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸನ್​ರೈಸರ್ಸ್ ಹೈದರಾಬಾದ್ ತಂಡವು ಮೊದಲ ಪಂದ್ಯದಲ್ಲೇ ಹೀನಾಯವಾಗಿ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡದ ಹಂಗಾಮಿ ನಾಯಕ ಇಶಾನ್ ಕಿಶನ್, ನಾವು ಆರಂಭಿಕ ವಿಕೆಟ್​ಗಳನ್ನು ಬೇಗನೆ ಕಳೆದುಕೊಂಡಿದ್ದು ಪರಿಣಾಮ ಬೀರಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೊದಲ 3-4 ಓವರ್‌ಗಳವರೆಗೆ ಆರ್​ಸಿಬಿ ಬೌಲರ್​ಗಳು ಅತ್ಯುತ್ತಮ ದಾಳಿ ಸಂಘಟಿಸಿದ್ದರು.

ಈ ದಾಳಿ ನಡುವೆ ನಾವು ಆರಂಭಿಕ ವಿಕೆಟ್​ಗಳನ್ನು ಕಳೆದುಕೊಂಡಿದ್ದು ದುಬಾರಿಯಾಯಿತು. ಮುಂದಿನ ಬಾರಿ ನಾವು ಈ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದೆ. ನಾವು ಆರಂಭದಲ್ಲಿ ಎಚ್ಚರದಿಂದ ಆಡಿದ್ದರೆ ಉತ್ತಮ ಮೊತ್ತ ಪೇರಿಸಬಹುದಿತ್ತು. ಏಕೆಂದರೆ, ಎರಡನೇ ಇನ್ನಿಂಗ್ಸ್‌ ನೋಡಿದರೆ, ಬ್ಯಾಟಿಂಗ್ ಮಾಡುವುದು ತುಂಬಾ ಸುಲಭ ಮತ್ತು ಚೆಂಡು ಬ್ಯಾಟ್​ಗೆ ಚೆನ್ನಾಗಿ ಬರುತ್ತಿತ್ತು. ಆದ್ದರಿಂದ ನಮ್ಮ ಆಟಗಾರರು ಮುಂದಿನ ಬಾರಿ ಶಾಟ್ ಆಯ್ಕೆಯಲ್ಲಿ ನಾವು ಸ್ವಲ್ಪ ಬುದ್ಧಿವಂತರಾಗಿರಬೇಕು ಎಂದು ಇಶಾನ್ ಕಿಶನ್ ಹೇಳಿದ್ದಾರೆ.

ಇನ್ನು 202 ರನ್​ಗಳ ಗುರಿ ನೀಡಿರುವುದು ಪಾಸಿಟಿವ್ ವಿಷಯ ಎಂದಿರುವ ಇಶಾನ್ ಕಿಶನ್, ನಾವು ವಿರಾಟ್ ಕೊಹ್ಲಿಯ ವಿಕೆಟ್ ಬೇಗನೆ ಪಡೆದಿದ್ದರೆ ಪಂದ್ಯದ ಮೇಲೆ ಹಿಡಿತ ಸಾಧಿಸಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಭಾಯ್‌ ಚೇಸಿಂಗ್ ವೇಳೆ ಬ್ಯಾಟಿಂಗ್ ಮಾಡಿದ ರೀತಿ ಮೆಚ್ಚಲೇಬೇಕು. ಇಂತಹ ಮ್ಯಾಚ್​ಗಳಲ್ಲಿ ಬೇಗನೇ ಅವರ ವಿಕೆಟ್ ಪಡೆಯುವುದು ಬಹಳ ಮುಖ್ಯ. ಇಲ್ಲದಿದ್ದರೆ, ಅವರು ಇಡೀ ಪಂದ್ಯದ ಮೇಲೆ ನಿಯಂತ್ರಣ ಸಾಧಿಸಿಬಿಡುತ್ತಾರೆ. ಹೀಗಾಗಿ ಆರಂಭದಲ್ಲೇ ಕೊಹ್ಲಿಯನ್ನು ತಡೆಯಬೇಕಾಗುತ್ತದೆ.

ಒಂದು ವೇಳೆ ವಿರಾಟ್ ಕೊಹ್ಲಿಯ ವಿಕೆಟ್ ಬೇಗನೆ ಸಿಕ್ಕಿದ್ದರೆ ನಮಗೂ ಪಂದ್ಯದಲ್ಲಿ ಚಾನ್ಸ್ ಇರುತ್ತಿತ್ತು. ಆದರೆ ಒಂದು ಬಾರಿ ಅವರು ನೆಲೆಯೂರಿದರೆ ಆ ಬಳಿಕ ಅವರನ್ನು ತಡೆಯುವುದು ಕಷ್ಟ. ಇದಾಗ್ಯೂ ಇದು ಮೊದಲ ಪಂದ್ಯ ಮತ್ತು ಈ ತಪ್ಪುಗಳು ಈಗ ಸ್ವೀಕಾರಾರ್ಹ.

ಇನ್ನೂ ಓದಿ: ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳೀಪಟ

ನಾವು ಬೌಲಿಂಗ್‌ನಲ್ಲಿ ಇನ್ನೂ ಸ್ವಲ್ಪ ಹೆಚ್ಚು ಜಾಗರೂಕರಾಗಬೇಕಿದೆ. ಈ ಪಂದ್ಯದ ತಪ್ಪುಗಳನ್ನು ತಿದ್ದಿದ್ರೆ ಮುಂದಿನ ಪಂದ್ಯದಿಂದ ನಾವು ಬಲಶಾಲಿಯಾಗಬಹುದು. ಅಲ್ಲದೆ ಮುಂಬರುವ ಪಂದ್ಯಗಳನ್ನು ನಾವು ಗೆದ್ದರೆ, ಪಂದ್ಯಾವಳಿಯಲ್ಲಿ ಮುಂದುವರಿಯುವುದು ನಮಗೆ ತುಂಬಾ ಸುಲಭವಾಗುತ್ತದೆ. ಹೀಗಾಗಿ ಮುಂದಿನ ಮ್ಯಾಚ್​ ಮೂಲಕ ಸನ್​ರೈಸರ್ಸ್ ಹೈದರಾಬಾದ್ ತಂಡ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಇಶಾನ್ ಕಿಶನ್ ಹೇಳಿದ್ದಾರೆ.

 

Source link

ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿಗಲಿದೆ ಸರ್ಪ್ರೈಸ್? ಹೊಸ ಸಿನಿಮಾ ಟೈಟಲ್ ಮೇಲೆ ಕಣ್ಣು

ಟಾಲಿವುಡ್‌ನ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ (Allu Arjun) ಅವರ ಅಭಿಮಾನಿಗಳು ಸದ್ಯ ಏಪ್ರಿಲ್ 8ಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಅಂದು ಅಲ್ಲು ಅರ್ಜುನ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲು ನಿರ್ದೇಶಕ ಅಟ್ಲೀ (Atlee) ಸಜ್ಜಾಗುತ್ತಿದ್ದಾರೆ ಎಂಬ ವದಂತಿಗಳು ಜೋರಾಗಿ ಕೇಳಿಬರುತ್ತಿವೆ. ಅಲ್ಲು ಅರ್ಜುನ್ ಮತ್ತು ಅಟ್ಲೀ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಈ ಬಹುನಿರೀಕ್ಷಿತ ಚಿತ್ರಕ್ಕೆ ಏಪ್ರಿಲ್ 8ರಂದು ಅಧಿಕೃತವಾಗಿ ಶೀರ್ಷಿಕೆಯನ್ನು ಘೋಷಿಸುವ ಸಾಧ್ಯತೆ ದಟ್ಟವಾಗಿದೆ.

ಕೇವಲ ಒಂದು ಪೋಸ್ಟರ್ ಮೂಲಕ ಹೆಸರು ಪ್ರಕಟಿಸುತ್ತಾರೋ ಅಥವಾ ಒಂದು ಭರ್ಜರಿ ವೀಡಿಯೊ ಝಲಕ್ ತೋರಿಸುತ್ತಾರೋ ಎಂಬುದು ಸದ್ಯದ ಸಸ್ಪೆನ್ಸ್. ಅಭಿಮಾನಿಗಳ ನಿರೀಕ್ಷೆಯಂತೆ ಏನಾದರೂ ಕಂಟೆಂಟ್ ನೀಡಲೇಬೇಕು ಎಂದು ಅಟ್ಲೀ ಶ್ರಮಿಸುತ್ತಿದ್ದಾರೆ. ಆದರೆ, ಮೂಲಗಳ ಪ್ರಕಾರ ಈ ವಿಶೇಷ ವೀಡಿಯೊ ಅಥವಾ ಟೈಟಲ್ ಟೀಸರ್ ಸಿದ್ಧಪಡಿಸಲು ಬೇಕಾದ ಕೆಲಸಗಳು ಇನ್ನೂ ಪ್ರಗತಿಯಲ್ಲಿವೆ.

ಹುಟ್ಟುಹಬ್ಬದ ವೇಳೆಗೆ ಕಂಟೆಂಟ್ ಸಂಪೂರ್ಣವಾಗಿ ರೆಡಿಯಾಗುತ್ತದೆಯೇ ಎಂಬ ಬಗ್ಗೆ ಅಟ್ಲೀ ಅವರಿಗೆ ಇನ್ನೂ ಪೂರ್ಣ ಪ್ರಮಾಣದ ಖಾತ್ರಿ ಇಲ್ಲ ಎನ್ನಲಾಗಿದೆ. ಒಂದು ವೇಳೆ ತಾಂತ್ರಿಕ ಕೆಲಸಗಳು ವಿಳಂಬವಾದರೆ ಕೇವಲ ಅಧಿಕೃತ ಘೋಷಣೆಯಷ್ಟೇ ಹೊರಬೀಳಬಹುದು. ಭಾರಿ ಬಜೆಟ್​​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ‘ಪುಷ್ಪ 2’ ಬಳಿಕ ಬರುತ್ತಿರುವ ಸಿನಿಮಾ ಆದ್ದರಿಂದ ನಿರೀಕ್ಷೆ ಹೆಚ್ಚಿದೆ.

ಈ ಚಿತ್ರವನ್ನು ಸುಮಾರು 800 ಕೋಟಿ ರೂ.ಗಳ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ವರದಿಯಾಗಿದೆ. ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ ಮತ್ತು ಜಾನ್ವಿ ಕಪೂರ್ ಅವರಂತಹ ಸ್ಟಾರ್ ನಟಿಯರು ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಯಿದೆ. ಅಟ್ಲೀ ಅವರು ಈ ಚಿತ್ರಕ್ಕಾಗಿ ಪ್ಯಾರಲಲ್ ಯೂನಿವರ್ಸ್ ಎಂಬ ವಿಭಿನ್ನ ಕಾನ್ಸೆಪ್ಟ್ ಆಯ್ದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್​ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ

ಅಲ್ಲು ಅರ್ಜುನ್ ಅವರು ಚಿತ್ರರಂಗದಲ್ಲಿ 23 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಇದು ಅವರ ವೃತ್ತಿಜೀವನದ ಮಹತ್ವದ ಮೈಲಿಗಲ್ಲಾಗಿದೆ. ಭಾರತ ಮಾತ್ರವಲ್ಲದೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೂಡ ಅಭಿಮಾನಿ ಬಳಗವನ್ನು ಅವರು ಹೊಂದಿದ್ದಾರೆ. 23 ವರ್ಷ ಪೂರೈಸಿದ ಈ ವಿಶೇಷ ಸಂದರ್ಭದಲ್ಲಿ, ಅವರ ತಂಡವು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಾಚರಣೆಯ ಪೋಸ್ಟ್ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಿಂತಿದ್ದ ಕಂಟೈನರ್​ಗೆ ಕಾರು ಡಿಕ್ಕಿ: ಬಾಲಕಿ ಸೇರಿ ಇಬ್ಬರು ಸಾವು; ಮೂವರ ಸ್ಥಿತಿ ಗಂಭೀರ

ಉಡುಪಿ, ಮಾರ್ಚ್​​ 29: ನಿಂತಿದ್ದ ಕಂಟೈನರ್​ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದd ಬಳಿ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಮತಾ(36) ಹಾಗೂ ಮಗಳು ಧೃತಿಕಾ(14) ಪ್ರಾಣ ಬಿಟ್ಟಿದ್ದು, ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್​​ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ ನಿವಾಸಿಗಳು ಎಂಬುದು ತಿಳಿದುಬಂದಿದೆ.

ಬೆಂಗಳೂರನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ಬಳಿಕ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣ ನಡೆಸುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಗಾಯಾಳು ತಂದೆ ಮತ್ತು ಇಬ್ಬರು ಮಕ್ಕಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದ್ದರೆ, ಕಾರು ಚಾಲಕ ಕಿರಣ್​​ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಟ್ರಕ್​​​ಗೆ ಗುದ್ದಿ ಹೊತ್ತಿ ಉರಿದ ಕಾರು; ಚಾಲಕ ಬದುಕಿದ್ದೇ ಪವಾಡ!

ಬಸ್​​ ಡಿಕ್ಕಿಯಾಗಿ ಮಹಿಳೆ ಸಾವು

ರಸ್ತೆ ದಾಟುತ್ತಿದ್ದ ಪಾದಾಚಾರಿ ಮಹಿಳೆಗೆ ಬಸ್​​ ಡಿಕ್ಕಿಯಾದ ಪರಿಣಾಮ ಆಕೆ ದಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಕುಂಚಿಗನಾಳ್ ಬಳಿ ನಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ. ಸಂಚಾರಿ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬ್ಯಾಂಕ್ ತಪ್ಪಿನಿಂದ ಮಹಿಳೆಯೊಬ್ಬರ ಅಕೌಂಟ್​ಗೆ 10 ಕೋಟಿ ರೂ. ಜಮಾ, ಆಕೆ ಮಾಡಿದ್ದೇನು?

ಮೈನ್​ಪುರಿ, ಮಾರ್ಚ್​ 29: ಹಣ ಕಂಡ್ರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಕಾಲದಲ್ಲಿ, ತಮ್ಮ ಬ್ಯಾಂಕ್(Bank) ಖಾತೆಗೆ ಏನಾದ್ರೂ ಕೋಟಿ ಕೋಟಿ ಹಣ ಬಂದ್ರೆ ಯಾರಾದ್ರೂ ಸುಮ್ನಿರ್ತಾರಾ, ಮೊದಲು ವಿತ್​ ಡ್ರಾ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ಮಹಿಳೆಯ ಖಾತೆಗೆ 10 ಕೋಟಿ ರೂ. ಹಣ ಬಂದಿದೆ. ಆಕೆ ಮಾಡಿದ್ದೇನು ಇಲ್ಲಿದೆ ಮಾಹಿತಿ.

ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ.ಕೃಷಿಯ ಮೂಲಕ ಜೀವನೋಪಾಯವನ್ನು ಗಳಿಸುತ್ತಿದ್ದಾರೆ.
ನವರಾತ್ರಿಯ ಸಮಯದಲ್ಲಿ ಅಷ್ಟಮಿಯ ಸಂದರ್ಭದಲ್ಲಿ, ಅವರು ತಮ್ಮ ಸ್ಥಳೀಯ ಬ್ಯಾಂಕ್‌ಗೆ ಹಣ ಬೇಕಿತ್ತೆಂದು ಭೇಟಿ ನೀಡಿದ್ದರು. ಆದರೆ ಶಾಖೆ ಮುಚ್ಚಿದ್ದರಿಂದ ಹಣ ಸಿಗಲಿಲ್ಲ.

ನಂತರ ಅವರು ಹತ್ತಿರದ ಎಟಿಎಂಗೆ ಹೋಗಿ ತಮ್ಮ ಬ್ಯಾಲೆನ್ಸ್ ಪರಿಶೀಲಿಸಿದರು, ಆದರೆ ಅವರು ಕಂಡದ್ದನ್ನು ನೋಡಿ ದಿಗ್ಭ್ರಮೆಗೊಂಡರು. ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಅವರ ಖಾತೆಯಲ್ಲಿ 9,99,49,588 ರೂ. ಅಂದರೆ ಸುಮಾರು ಹತ್ತು ಕೋಟಿ ರೂಪಾಯಿಗಳ ಬ್ಯಾಲೆನ್ಸ್ ಇತ್ತು.

ಮತ್ತಷ್ಟು ಓದಿ: ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ತನ್ನ ಕಣ್ಣುಗಳನ್ನು ನಂಬಲು ಸಾಧ್ಯವಾಗದೆ, ಅವರು ಮತ್ತೊಂದು ಎಟಿಎಂನಲ್ಲಿ ಎರಡನೇ ಬಾರಿಗೆ ಬ್ಯಾಲೆನ್ಸ್ ಪರಿಶೀಲಿಸಿದರು. ವೀಡಿಯೊವನ್ನು ರೆಕಾರ್ಡ್ ಮಾಡಿದರು, ಅದು ಅಂದಿನಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ತನ್ನ ಖಾತೆಯಲ್ಲಿ ಅಪಾರ ಮೊತ್ತ ತೋರಿಸುತ್ತಿದ್ದರೂ, ರೀಟಾ ಹಣವನ್ನು ವಿತ್​ ಡ್ರಾ ಮಾಡಲು ಮುಂದಾಗಲಿಲ್ಲ.ರಿಸ್ಥಿತಿಯನ್ನು ಸರಿಯಾಗಿ ವಿವರಿಸುವವರೆಗೆ ಹಣವನ್ನು ಮುಟ್ಟಬೇಡಿ ಎಂದು ಅವಳು ತನ್ನ ಕುಟುಂಬ ಸದಸ್ಯರಿಗೆ ದೃಢವಾಗಿ ಹೇಳಿದ್ದರು. ಎಲ್ಲರೂ ಅವರ ಪ್ರಾಮಾಣೀಕತೆಯನ್ನು ಕೊಂಡಾಡಿದ್ದಾರೆ.

ರೀಟಾ ಮತ್ತು ಅವರ ಕುಟುಂಬ ಈ ವಿಷಯವನ್ನು ವರದಿ ಮಾಡಲು ಬ್ಯಾಂಕಿಗೆ ಹೋದಾಗ, ಸಾರ್ವಜನಿಕ ರಜೆಗಾಗಿ ಶಾಖೆ ಮುಚ್ಚಿತ್ತು. ಬ್ಯಾಂಕ್ ಆಫ್ ಇಂಡಿಯಾದ ಕರೀಮ್‌ಗಂಜ್ ಶಾಖೆಯ ವ್ಯವಸ್ಥಾಪಕ ರಿಷಿಕಾಂತ್ ಪಾಂಡೆ, ಘಟನೆಯು ತಾಂತ್ರಿಕ ದೋಷ ಅಥವಾ ವಹಿವಾಟಿನ ದೋಷದಿಂದ ಉಂಟಾಗಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಈ ಘಟನೆಯು ಪ್ರದೇಶದಾದ್ಯಂತ ಚರ್ಚೆಯ ವಿಷಯವಾಗಿದೆ, ರೀಟಾ ಅವರ ಕುಟುಂಬಕ್ಕೆ ಹಣವನ್ನು ದುರುಪಯೋಗಪಡಿಸಿಕೊಳ್ಳಲು ಎಲ್ಲಾ ಅವಕಾಶಗಳು ಇದ್ದರು ಪ್ರಾಮಾಣೀಕತೆ ತೋರಿದ್ದಕ್ಕಾಗಿ ಎಲ್ಲರೂ ಆಕೆಯನ್ನು ಶ್ಲಾಘಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳೀಪಟ

Source link

Bengaluru Air Quality: ಬೆಂಗಳೂರಿನ ವಾಯುಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 29: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಬೆಂಗಳೂರಿನ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. 150ಕ್ಕಿಂತ ಜಾಸ್ತಿಯಿದ್ದ AQI ಕಡುಮೆಯಾಗಿದ್ದರೂ, ಇನ್ನೂ ಗುಣಮಟ್ಟ ಅನಾರೋಗ್ಯಕರವಾಗಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 129ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –129
  • ಮಂಗಳೂರು-137
  • ಮೈಸೂರು –130
  • ಬೆಳಗಾವಿ – 136
  • ಕಲಬುರ್ಗಿ-126
  • ಶಿವಮೊಗ್ಗ – 101
  • ಬಳ್ಳಾರಿ – 124
  • ಹುಬ್ಬಳ್ಳಿ- 132
  • ಉಡುಪಿ –136
  • ವಿಜಯಪುರ –121

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವ್ಯಕ್ತಿಯ ಶಿರಚ್ಛೇದ ಮಾಡಿ, ರುಂಡವನ್ನು ಮನೆಯಲ್ಲಿ ಎಸೆದು, ತನ್ನಷ್ಟಕ್ಕೆ ಅಡುಗೆ ಮಾಡಿದ ಆರೋಪಿ

ಬಾರಾಬಂಕಿ, ಮಾರ್ಚ್​ 29: ಐಸ್​ಕ್ರೀಂ ಮಾರಾಟಗಾರನ ಶಿರಚ್ಛೇದ(Behead) ಮಾಡಿ, ರುಂಡವನ್ನು ಮನೆಗೆ ಕೊಂಡೊಯ್ದು ಅಡುಗೆ ಮನೆಯಲ್ಲಿ ಎಸೆದು, ತನ್ನಷ್ಟಕ್ಕೆ ಅಡುಗೆ ಮುಂದುವರೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಈ ಘಟನೆ ಬಾರಾಬಂಕಿ ಜಿಲ್ಲೆಯ ಪರ್ಸಾವಲ್ ಗ್ರಾಮದಲ್ಲಿ ನಡೆದಿದೆ, ಮೃತ ವ್ಯಕ್ತಿ ಹೆಸರು ಬಬ್ಲು. ಬೇರೆ ದಿನಗಳಂತೆ ಪರ್ಸಾವಲ್ ಗ್ರಾಮಕ್ಕೆ ಐಸ್ ಕ್ರೀಮ್ ಮಾರಾಟ ಮಾಡಲು ಹೋಗಿದ್ದರು. ತನ್ನ ಕೆಲಸ ನಿರ್ವಹಿಸುತ್ತಿದ್ದಾಗ, ಸ್ಥಳೀಯ ನಿವಾಸಿ ಶಂಕರ್ ಯಾದವ್ ಜೊತೆ ಮಾತಿನ ಚಕಮಕಿ ನಡೆದಿತ್ತು.

ಶಂಕರ್ ಯಾದವ್ ಬಬ್ಲು ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ಅವನ ಗಂಟಲು ಸೀಳಿ, ಸಾರ್ವಜನಿಕರ ಮುಂದೆ ಅವನ ತಲೆಯನ್ನು ಕತ್ತರಿಸಿದ್ದಾನೆ. ಸ್ಥಳದಿಂದ ಹೊರಹೋಗುವ ಬದಲು, ಶಂಕರ್ ಯಾದವ್ ಕತ್ತರಿಸಿದ ತಲೆಯನ್ನು ಎತ್ತಿಕೊಂಡು ಅದೇ ಹಳ್ಳಿಯಲ್ಲಿರುವ ತನ್ನ ಮನೆಗೆ ತೆಗೆದುಕೊಂಡು ಹೋದನು. ಒಳಗೆ ಹೋದ ನಂತರ, ಅಲ್ಲೇ ಅಡುಗೆ ಮನೆಯಲ್ಲಿ ರುಂಡವನ್ನು ಎಸೆದು ಏನೂ ಆಗಿಲ್ಲವೆಂಬಂತೆ ಅಡುಗೆ ಮಾಡಲು ಶುರು ಮಾಡಿದ್ದ.

ಹತ್ಯೆಯ ಬಗ್ಗೆ ಮಾಹಿತಿ ಪೊಲೀಸರಿಗೆ ತಲುಪಿತು, ಅವರು ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗಿಯ ಅವರ ನಿರ್ದೇಶನದ ಮೇರೆಗೆ ಗ್ರಾಮಕ್ಕೆ ದೊಡ್ಡ ಪಡೆಯನ್ನು ನಿಯೋಜಿಸಿದರು. ಅಧಿಕಾರಿಗಳು ಆ ಪ್ರದೇಶವನ್ನು ಸುತ್ತುವರೆದು ಶಂಕರ್ ಯಾದವ್ ಅವರ ಮನೆಗೆ ಹೋದರು. ತಂಡವು ಒಳಗೆ ಹೋದಾಗ, ಆರೋಪಿ ಒಳಗೆ ಅಡುಗೆ ಮಾಡುವುದನ್ನು ಮುಂದುವರೆಸಿದ್ದ, ಬಬ್ಲುವಿನ ಕತ್ತರಿಸಿದ ತಲೆ ಹತ್ತಿರದಲ್ಲಿ ಬಿದ್ದಿತ್ತು.

ಮತ್ತಷ್ಟು ಓದಿ: Tenkasi: ಪತ್ನಿ ಎದುರೇ ಪತಿಯ ಶಿರಚ್ಛೇದ, ದೇವಸ್ಥಾನದ ಬಳಿ ರುಂಡ ಪತ್ತೆ

ಪೊಲೀಸರು ತಕ್ಷಣ ಆತನನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಂಡರು ಮತ್ತು ಮನೆಯಿಂದ ಕತ್ತರಿಸಿದ ತಲೆಯನ್ನು ವಶಪಡಿಸಿಕೊಂಡರು. ಬಬ್ಲು ಮೂವರು ಸಹೋದರರಲ್ಲಿ ಹಿರಿಯವನು. ಅವರು ಕೂಲಿ ಕೆಲಸ ಮತ್ತು ಐಸ್ ಕ್ರೀಮ್ ಮಾರಾಟ ಮಾಡುವ ಮೂಲಕ ತನ್ನ ಕುಟುಂಬವನ್ನು ಪೋಷಿಸುತ್ತಿದ್ದರು.

ಆರೋಪಿ ಮತ್ತು ಮೃತ ವ್ಯಕ್ತಿ ನಡುವಿನ ಮಾತಿನ ಚಕಮಕಿಯ ಹಿನ್ನೆಲೆಯ ಬಗ್ಗೆ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ಬಲಿಪಶುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ಹಾಸನ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 29: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ  (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಕಲಬುರ್ಗಿ, ವಿಜಯಪುರ, ಗದಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link