All posts by nagaraj11081993

ಹೊಸ ವರ್ಷದ ವೇಳೆಯೂ ಮದ್ಯಕ್ಕಿಲ್ಲ ಡಿಮ್ಯಾಂಡ್​​: ದಾಖಲೆ ಮಟ್ಟದಲ್ಲಿ ಬೇಡಿಕೆ ಕುಸಿತ – Kannada News | Chikkaballapur Records a Fifty Eight Percent Drop in Alcohol Sales During New Year Celebrations

ಚಿಕ್ಕಬಳ್ಳಾಪುರ, ಡಿಸೆಂಬರ್​​ 31: ಹೊಸ ವರ್ಷದ ಪಾರ್ಟಿ ಅಂದ್ರೆ ಅಲ್ಲಿ ಮದ್ಯ ಇರಲೇ ಬೇಕು. ಎಣ್ಣೆ ಇಲ್ಲದಿದ್ರೆ ಅದೆಂತಾ ಪಾರ್ಟಿ ಗುರೂ ಎಂದು ಮೂಗು ಮುರಿಯೋರ ನಡುವೆಯೂ ಮದ್ಯದ ಬೇಡಿಕೆ ಕುಸಿದಿದೆ ಎಂಬುದನ್ನು ನೀವು ನಂಬಬೇಕಿದೆ. ನ್ಯೂ ಇಯರ್​ ಸಂಭ್ರಮದ ನಡುವೆಯೂ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿಯೇ ಮದ್ಯದ ಬೇಡಿಕೆ ಶೇ.58ಕ್ಕಿಂತ ಹೆಚ್ಚು ಕುಸಿತ ಕಂಡಿದೆ. ಕಳೆದ ವರ್ಷದ ಅಂಕಿ ಅಂಶಗಳಿಗೆ ಹೋಲಿಸದರೆ ಇದು ಭಾರಿ ಪ್ರಮಾಣದ ಇಳಿಕೆಯಾಗಿದೆ.

ಹೌದು, 2024ರ ಡಿಸೆಂಬರ್​​ 31ಕ್ಕೆ ಹೋಲಿಸಿದರೆ ಈ ವರ್ಷ ಡಿಸೆಂಬರ್​​ 31ರ ಮದ್ಯ ಮಾರಾಟದಲ್ಲಿ ಗಣನೀಯ ವ್ಯತ್ಯಾಸ ಕಂಡುಬಂದಿದೆ. ಮದ್ಯ ಬೇಡಿಕೆಯಲ್ಲಿ ಶೇ. 58.8ರಷ್ಟು ಕಡಿಮೆಯಾಗಿದ್ದರೆ, ಬಿಯರ್ ಬೇಡಿಕೆ ಶೇ. 11.94ರಷ್ಟು ಇಳಿಕೆಯಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ ಬಲವಂತ ಮಾಡಿ ಬಾರ್​​ಗಳಿಗೆ ಮದ್ಯ ಸರಬರಾಜು ಮಾಡಬೇಕಾದ ಸ್ಥಿತಿ ಉದ್ಭವಿಸಿದ್ದು, ಟಾರ್ಗೆಟ್ ರೀಚ್ ಮಾಡಲು ಅಬಕಾರಿ ಇಲಾಖೆ ಪರದಾಟ ನಡೆಸುತ್ತಿದೆ.

ಇದನ್ನೂ ಓದಿ:  ಕರ್ನಾಟಕದಲ್ಲಿ ಮದ್ಯ ಮಾರಾಟ ಭಾರಿ ಕುಸಿತ; 7 ತಿಂಗಳಾದ್ರೂ ಕಿಕ್‌ ಕೊಡದ ಎಣ್ಣೆ, ಕಾರಣವೇನು?

ಬೇಡಿಕೆ ಇಳಿಕೆಯಾಗಿರೋದೆಷ್ಟು?

ಕಳೆದ ವರ್ಷ ಡಿಸೆಂಬರ್​​ 31ರಂದು 13,191 ಕೇಸ್​​/ಬಾಕ್ಸ್​​ ಮದ್ಯ ಮಾರಾಟವಾಗಿದ್ದರೆ ಈ ವರ್ಷ ಡಿಸೆಂಬರ್​​ 31ರಂದು 5,516 ಕೇಸ್​​/ಬಾಕ್ಸ್​​ ಮಾತ್ರ ಸೇಲ್​​ ಆಗಿದೆ. ಅಂದರೆ ಶೇ. 58.18ರಷ್ಟು ಕುಸಿತವಾಗಿದೆ. ಇದೇ ದಿನಾಂಕಗಳಲ್ಲಿ ಕಳೆದ ವರ್ಷ 5,384 ಕೇಸ್​​/ಬಾಕ್ಸ್​​ ಬಿಯರ್​​ ಮಾರಾಟವಾಗಿದ್ದರೆ, ಈ ಬಾರಿ 4,741 ಕೇಸ್​​/ಬಾಕ್ಸ್​​ ಮಾರಾಟವಾಗಿದೆ. ಆ ಮೂಲಕ ಬೇಡಿಕೆ ಶೇ. 11.94ರಷ್ಟು ಇಳಿಕೆಯಾಗಿದೆ.

ದುಡಿಮೆ ಇಲ್ಲದ ಕಾರಣ ಹಣ ಸಂಪಾದನೆ ಇಲ್ಲ. ಸರಿಯಾಗಿ ಮಳೆ ಆಗದಿರೋದ್ರಿಂದ ಬೆಳೆ ಇಲ್ಲದೆಯೂ ಜನರ ಆದಾಯಕ್ಕೆ ಖೋತಾ ಆಗಿದೆ. ಇದರ ನಡುವೆ ಮದ್ಯದ ಬೆಲೆಯೂ ಏರಿಕೆಯಾಗಿದೆ. ಲಿಕ್ಕರ್​​ಗಳ ಮೇಲೆ 10-15 ರೂಪಾಯಿ ಹೆಚ್ಚಾಗಿರುವ ಆಗಿರುವ ಕಾರಣ ಕುಡಿಯುವರಿಗೆ ಸಮಸ್ಯೆ ಆಗಿದೆ. ಕಳೆದ ವರ್ಷಕ್ಕೆ ಹೋಲಿಸದರೆ ಹೊಸ ವರ್ಷದ ವೇಳೆ ಮದ್ಯ ಖರೀದಿಸುವವರ ಸಂಖ್ಯೆ ಜಿಲ್ಲೆಯಲ್ಲಿ ಕಡಿಮೆಯಾಗಿದೆ ಎಂದು ಬಾರ್​​ ಮಾಲಕರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ – Kannada News | Koppal: the Last Sunset of 2025: A Mesmerising Sight Captured

ಕೊಪ್ಪಳ, ಡಿಸೆಂಬರ್​ 31: 2025ರ ವರ್ಷದ ಕೊನೆಯ ಸೂರ್ಯಾಸ್ತದ ವಿಹಂಗಮ ದೃಶ್ಯ ಟಿವಿ9 ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಕೊಪ್ಪಳ ತಾಲೂಕಿನ ಗಿಣಗೇರಾ ಗ್ರಾಮದ ಸಮೀಪ ಸೂರ್ಯಾಸ್ತದ ಈ ದೃಶ್ಯ ಕಂಡುಬಂದಿದ್ದು, ನೋಡುಗರ ಕಣ್ಮನ ಸೆಳೆಯಿತು. ಸೂರ್ಯಾಸ್ತದ ನಯನ ಮನೋಹರ ದೃಶ್ಯವನ್ನು ಕ್ಯಾಮರಾಮೆನ್ ಮಾರುತಿ ಕಟ್ಟಿಮನಿ ಅವರು ಸೆರೆ ಹಿಡಿದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

New Year 2026: ಹೊಸ ವರ್ಷದ ಆಚರಣೆ ಪ್ರಾರಂಭವಾದದ್ದು ಹೇಗೆ? ಇಲ್ಲಿದೆ ಆಸಕ್ತಿದಾಯಕ ಸಂಗತಿ – Kannada News | New Year 2026: How did the custom of celebrating the New Year on January 1st begin?

ಹಳೆಯ ವರ್ಷಕ್ಕೆ ವಿದಾಯ ಹೇಳಿ, ಹೊಸ ವರ್ಷವನ್ನು (New Year) ಸ್ವಾಗತಿಸುವುದಕ್ಕೆ ಈಗಾಗಲೇ ಕ್ಷಣಗಣನೆ ಆರಂಭವಾಗಿದೆ. ಪ್ರತಿವರ್ಷ ಡಿಸೆಂಬರ್‌ 31 ರ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗುತ್ತದೆ. ಜನರೆಲ್ಲರೂ ಕುಟುಂಬಸ್ಥರು, ಫ್ರೆಂಡ್ಸ್‌ ಜೊತೆ ಸೇರಿ ಮಸ್ತ್‌ ಪಾರ್ಟಿ ಮಾಡುವ ಮೂಲಕ ಉಜ್ವಲ ಮತ್ತು ಸಮೃದ್ಧ ನಾಳೆಯ ಭರವಸೆಯೊಂದಿಗೆ  ಹೊಸ ವರ್ಷವನ್ನು ಭರದಿಂದ ಸ್ವಾಗತಿಸುತ್ತಾರೆ. ಪ್ರತಿ ವರ್ಷ ಜನವರಿ 1 ರಂದು ಪ್ರಪಂಚದಾದ್ಯಂತ ಈ ಸಂಭ್ರಮಾಚರಣೆ ನಡೆದುಕೊಂಡು ಬರುತ್ತಿದೆ. ಜನವರಿ 1 ರಂದೇ ಏಕೆ ಹೊಸ ವರ್ಷವನ್ನು ಆಚರಿಸಲಾಗುತ್ತದೆ, ಈ ಪದ್ಧತಿ ಯಾವಾಗ ಜಾರಿಗೆ ಬಂದಿತು ಎಂಬುದರ ಇಂಟರೆಸ್ಟಿಂಗ್‌ ಸಂಗತಿಯನ್ನು ತಿಳಿಯಿರಿ.

ಹೊಸ ವರ್ಷದ ಆಚರಣೆಯ ಇತಿಹಾಸವೇನು?

ಹೊಸ ವರ್ಷದ ಆರಂಭವನ್ನು ಸಾಂಪ್ರದಾಯಿಕ ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಜನವರಿ 1 ನೇ ತಾರೀಖನ್ನು ಹೊಸ ವರ್ಷದ ದಿನವಾಗಿ ಆಚರಿಸುವುದು ಅಕ್ಟೋಬರ್ 15, 1582 ರಂದು ಪ್ರಾರಂಭವಾಯಿತು. ಇದರ ಮೊದಲು ಹೊಸ ವರ್ಷವನ್ನು ಕೆಲವೊಮ್ಮೆ ಮಾರ್ಚ್ 25 ರಂದು ಮತ್ತು ಕೆಲವೊಮ್ಮೆ ಡಿಸೆಂಬರ್ 25 ರಂದು ಆಚರಿಸಲಾಗುತ್ತಿತ್ತು.  ಈ ಮಾರ್ಚ್‌ ತಿಂಗಳನ್ನು  ರೋಮನ್ನರ ಯುದ್ಧ ದೇವರು ಎಂದು ಪರಿಗಣಿಸಲಾಗುತ್ತದೆ. ಆರಂಭಿಕ ಕ್ಯಾಲೆಂಡರ್‌ನಲ್ಲಿ ಕೇವಲ 10 ತಿಂಗಳುಗಳಿದ್ದವು. ಹೀಗಾಗಿ, ಒಂದು ವರ್ಷವು 310 ದಿನಗಳನ್ನು ಮತ್ತು ಒಂದು ವಾರವು 8 ದಿನಗಳನ್ನು ಹೊಂದಿತ್ತು. ಜನರು ಮಾರ್ಚ್‌ನಲ್ಲಿ ಅಕಿಟು ಎಂಬ ಹಬ್ಬವನ್ನು ಆಚರಿಸುತ್ತಿದ್ದರು, ಇದು ವಸಂತಕಾಲದ ಆರಂಭವನ್ನು ಸೂಚಿಸುತ್ತದೆ.

ಜನವರಿ 1 ರಂದು ಹೊಸ ವರ್ಷವನ್ನು ಆಚರಿಸುವ ಸಂಪ್ರದಾಯವು ಪ್ರಾಚೀನ ರೋಮ್‌ನಲ್ಲಿ ಪ್ರಾರಂಭವಾಯಿತು ಮತ್ತು ಕ್ರಿ.ಪೂ 46 ರಲ್ಲಿ, ರೋಮನ್ ಚಕ್ರವರ್ತಿ ಜೂಲಿಯಸ್ ಸೀಸರ್ ‘ಜೂಲಿಯನ್ ಕ್ಯಾಲೆಂಡರ್’ ಅನ್ನು ಜಾರಿಗೆ ತಂದರು. ಜೂಲಿಯನ್ ಕ್ಯಾಲೆಂಡರ್ ಒಂದು ವರ್ಷದಲ್ಲಿ 12 ತಿಂಗಳುಗಳನ್ನು ಒಳಗೊಂಡಿತ್ತು. ಖಗೋಳಶಾಸ್ತ್ರಜ್ಞರನ್ನು ಭೇಟಿಯಾದ ನಂತರ, ಜೂಲಿಯಸ್ ಸೀಸರ್ ಭೂಮಿಯು ಸೂರ್ಯನ ಸುತ್ತ 365 ದಿನಗಳು ಮತ್ತು ಆರು ಗಂಟೆಗಳಲ್ಲಿ ಸುತ್ತುತ್ತದೆ ಎಂದು ತಿಳಿದುಕೊಂಡರು. ಇದನ್ನು ಗಣನೆಗೆ ತೆಗೆದುಕೊಂಡು, ಜೂಲಿಯನ್ ಕ್ಯಾಲೆಂಡರ್ ವರ್ಷವನ್ನು 310 ರಿಂದ 365 ದಿನಗಳಿಗೆ ವಿಸ್ತರಿಸಲಾಯಿತು. ನಂತರ ಅಮೆರಿಕದ ನೇಪಲ್ಸ್‌ನ ವೈದ್ಯ ಅಲೋಶಿಯಸ್ ಲಿಲಿಯಸ್, ರೋಮನ್ ಕ್ಯಾಲೆಂಡರ್ ಅನ್ನು ಮಾರ್ಪಡು ಮಾಡಿ ಜಗತ್ತಿಗೆ ಹೊಸ ಕ್ಯಾಲೆಂಡರ್ ಪರಿಚಯಿಸಿದರು. ಅದುವೇ ಗ್ರೆಗೋರಿಯನ್ ಕ್ಯಾಲೆಂಡರ್, ಇದರಲ್ಲಿ ವರ್ಷದ ಮೊದಲ ದಿನವನ್ನು ಜನವರಿ 1 ರಂದು ಆಚರಿಸಲಾಯಿತು. ಅಂದಿನಿಂದ, ಜನವರಿ 1 ರಂದು ಹೊಸ ವರ್ಷವನ್ನು ಆಚರಿಸುವ ಸಂಪ್ರದಾಯವು ಪ್ರಪಂಚದಾದ್ಯಂತ ಪ್ರಚಲಿತವಾಗಿದೆ.

ಹೊಸ ವರ್ಷದ ಮಹತ್ವವೇನು?

  • ಹೊಸ ವರ್ಷ ಎಂದರೆ ಕೇವಲ ಕ್ಯಾಲೆಂಡರ್‌ ಬದಲಿಸುವ ದಿನವಲ್ಲ. ಅದು ನಮ್ಮನ್ನು ನಾವು ಸುಧಾರಿಸಿಕೊಳ್ಳಲು, ಹಿಂದಿನ ಕಹಿ, ನೋವುಗಳನ್ನು ಮರೆತು ಹೊಸ ಜೀವನವನ್ನು ಆರಂಭಿಸಲಿರುವ ಒಂದು ಅವಕಾಶವಾಗಿದೆ.
  • ಹೊಸ ವರ್ಷವು ನಮಗೆ ಹೊಸ ಶಕ್ತಿ ಮತ್ತು ಸಕಾರಾತ್ಮಕತೆಯನ್ನು ತುಂಬುವ ವಿಶೇಷ ದಿನವಾಗಿದ್ದು, ಹೊಸ ವರ್ಷದ ಆರಂಭವು ಪ್ರತಿ ದಿನವನ್ನು ಹೇಗೆ ಉತ್ತಮಗೊಳಿಸಬೇಕೆಂದು ನಮಗೆ ಕಲಿಸುತ್ತದೆ.

ಇದನ್ನೂ ಓದಿ: ಹೊಸ ವರ್ಷದ ದಿನ ನಿಮ್ಮ ಪ್ರೀತಿಪಾತ್ರರಿಗೆ ರೀತಿ ಶುಭಾಶಯಗಳನ್ನು ತಿಳಿಸಿ

ಭಾರತದಲ್ಲಿ ಹೊಸ ವರ್ಷ:

ನಮ್ಮ ದೇಶದಲ್ಲಿ, ಹೊಸ ವರ್ಷದ ಆಚರಣೆಗಳು ಪ್ರದೇಶ ಮತ್ತು ಧರ್ಮದಿಂದ ಬದಲಾಗುತ್ತವೆ. ಪಂಜಾಬ್‌ನ ಜನರು ಏಪ್ರಿಲ್ 13 ರಂದು ಬೈಸಾಖಿಯಂದು ತಮ್ಮ ಹೊಸ ವರ್ಷವನ್ನು ಆಚರಿಸುತ್ತಾರೆ. ನಾನಾಕ್ಷಾಹಿ ಕ್ಯಾಲೆಂಡರ್ ಪ್ರಕಾರ, ಸಿಖ್ಖರು ಮಾರ್ಚ್‌ನಲ್ಲಿ ಹೋಳಿಯ ಎರಡನೇ ದಿನದಂದು ತಮ್ಮ ಹೊಸ ವರ್ಷವನ್ನು ಆಚರಿಸುತ್ತಾರೆ. ಜೈನರು ದೀಪಾವಳಿಯ ಎರಡನೇ ದಿನದಂದು ಹೊಸ ವರ್ಷವನ್ನು ಆಚರಿಸುತ್ತಾರೆ. ಹಿಂದೂ ಧರ್ಮದಲ್ಲಿ ಯುಗಾದಿ ಹಬ್ಬದಂದು ಹೊಸ ವರ್ಷವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

New Year Celebration: ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ; ಸಿಲಿಕಾನ್​​ ಸಿಟಿ ಫುಲ್​​ ಝಗಮಗ – Kannada News | New Year’s Eve in Bengaluru: Crowds gather at pubs and restaurants

ಬೆಂಗಳೂರು, ಡಿಸೆಂಬರ್​​ 31: ನಗರವು ಹೊಸ ವರ್ಷದ ಆಚರಣೆಗೆ ಸಿದ್ಧವಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಹಾಗೂ ಯುವಜನತೆ ಈಗಾಗಲೇ ಪಬ್‌ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ 6,000ಕ್ಕೂ ಹೆಚ್ಚು ಸಿಬ್ಬಂದಿ ಕಣ್ಗಾವಲಿರಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ – Kannada News | DRDO successfully conducts salvo launch of 2 Pralay missiles in Odisha Watch video

ನವದೆಹಲಿ, ಡಿಸೆಂಬರ್ 31: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಇಂದು ಒಡಿಶಾದ ಕರಾವಳಿಯಲ್ಲಿ ಎರಡು ಪ್ರಲೇ ಕ್ಷಿಪಣಿಗಳ (missiles)  ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿತು. ಈ ಪರೀಕ್ಷೆಯು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR)ನಿಂದ ನಡೆಯಿತು. ಕ್ಷಿಪಣಿಗಳನ್ನು ಒಂದೇ ಲಾಂಚರ್‌ನಿಂದ ಉಡಾಯಿಸಲಾಯಿತು. ಇದು ಭಾರತದ ಕ್ಷಿಪಣಿ ಪರೀಕ್ಷಾ ಕಾರ್ಯಕ್ರಮದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ.

ಪ್ರಲೇ ಕ್ಷಿಪಣಿಯು ಭಾರತದಲ್ಲಿ ಅಭಿವೃದ್ಧಿಪಡಿಸಿದ, ಘನ ಇಂಧನ, ಅರೆ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದೆ. ಇದು ಹೆಚ್ಚಿನ ನಿಖರತೆ ಮತ್ತು ಸುಧಾರಿತ ಮಾರ್ಗದರ್ಶನ ವ್ಯವಸ್ಥೆಗಳಿಗೆ ಹೆಸರುವಾಸಿಯಾಗಿದೆ. ಪ್ರಲೇ ಕ್ಷಿಪಣಿಯನ್ನು ಭಾರತದ ಬೆಳೆಯುತ್ತಿರುವ ರಕ್ಷಣಾ ಬಲಕ್ಕೆ ಪ್ರಮುಖ ಸೇರ್ಪಡೆ ಎಂದು ಪರಿಗಣಿಸಲಾಗಿದೆ. ಸಂಶೋಧನಾ ಕೇಂದ್ರ ಇಮಾರತ್, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯ ಮತ್ತು ಅಡ್ವಾನ್ಸ್ಡ್ ಸಿಸ್ಟಮ್ಸ್ ಪ್ರಯೋಗಾಲಯ ಸೇರಿದಂತೆ ಹಲವಾರು ಡಿಆರ್‌ಡಿಒ ಪ್ರಯೋಗಾಲಯಗಳ ಜಂಟಿ ಪ್ರಯತ್ನಗಳ ಫಲಿತಾಂಶವೇ ಈ ಯಶಸ್ವಿ ಪರೀಕ್ಷೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ನಷ್ಟ ಆಗಿದ್ದು ಯಾಕೆ? – Kannada News | Dhurandhar distributor says this film suffered Rs 90 Cr loss due to this reason

ಅಕ್ಷಯ್ ಖನ್ನಾ, ರಣವೀರ್ ಸಿಂಗ್ (Ranveer Singh) ಮುಂತಾದವರು ನಟಿಸಿರುವ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾದ ಕಲೆಕ್ಷನ್ 1100 ಕೋಟಿ ರೂಪಾಯಿ ಮೀರಿದೆ. ನಿರ್ಮಾಪಕರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ. ಇಂದಿಗೂ ಬಾಕ್ಸ್ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಲೇ ಇದೆ. ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾ 800 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆ ಇದೆ. ಹಾಗಿದ್ದರೂ ಕೂಡ ‘ಧುರಂಧರ್’ (Dhurandhar) ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ ಮಿಸ್ ಆಗಿದೆ. ಅದು ಹೇಗೆ ಎಂಬುದನ್ನು ವಿತರಕರು ವಿವರಿಸಿದ್ದಾರೆ.

ಬಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ಮಾರುಕಟ್ಟೆ ಇದೆ. ಮಿಡಲ್ ಈಸ್ಟ್ ದೇಶಗಳಲ್ಲಿ ಹಿಂದಿ ಸಿನಿಮಾಗಳನ್ನು ಜನರು ಮುಗಿಬಿದ್ದು ನೋಡುತ್ತಾರೆ. ಆದರೆ ‘ಧುರಂಧರ್’ ಸಿನಿಮಾವನ್ನು ಮಿಡಲ್ ಈಸ್ಟ್ ರಾಷ್ಟ್ರಗಳಲ್ಲಿ ಬ್ಯಾನ್ ಮಾಡಲಾಗಿದೆ. ಅದರಿಂದಾಗಿ ಈ ಚಿತ್ರಕ್ಕೆ ಆಗಬೇಕಿದ್ದ ಹೆಚ್ಚುವರಿ 90 ಕೋಟಿ ರೂಪಾಯಿಗಳು ನಷ್ಟ ಆಗಿವೆ ಎಂಬುದು ವಿತರಕರ ಲೆಕ್ಕಾಚಾರ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ‘ಧುರಂಧರ್’ ಸಿನಿಮಾದಲ್ಲಿ ತೋರಿಸಲಾಗಿದೆ. ಪಾಕಿಸ್ತಾನ ನಡೆಸುವ ಭಯೋತ್ಪಾದಕ ಕೃತ್ಯಗಳನ್ನು ಎಳೆಎಳೆಯಾಗಿ ಈ ಸಿನಿಮಾದಲ್ಲಿ ಬಿಡಿಸಿ ಇಡಲಾಗಿದೆ. ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹೇಗೆ ನಡೆಯುತ್ತಿದೆ ಎಂಬುದನ್ನು ತೋರಿಸಲಾಗಿದೆ. ಧರ್ಮದ ಕುರಿತ ವಿಚಾರಗಳು ಪ್ರಸ್ತಾಪ ಆಗಿರುವುದರಿಂದ ಮಿಡಲ್ ಈಸ್ಟ್ ರಾಷ್ಟ್ರಗಳಲ್ಲಿ ಸಿನಿಮಾ ಬ್ಯಾನ್ ಆಗಿದೆ.

ಲೆಬೆನಾನ್, ಸಿರಿಯಾ, ಇಸ್ರೇಲ್, ಜೋರ್ಡನ್, ಸೌದಿ ಅರೇಬಿಯಾ, ಯೆಮನ್, ಓಮನ್, ಬರ್ಹೇನ್, ಖತಾರ್, ಯುನೈಟೆಡ್ ಅರಬ್ ಎಮಿರೈಟ್ಸ್, ಕುವೈತ್, ಇರಾಕ್, ಇರಾನ್ ದೇಶಗಳಲ್ಲಿ ‘ಧುರಂಧರ್​’ ಸಿನಿಮಾದ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ. ಪಾಕಿಸ್ತಾನದಲ್ಲಿ ಕೂಡ ಈ ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಪೈರಸಿ ಮೂಲಕ ಅಲ್ಲಿನ ಜನರು ಸಿನಿಮಾ ವೀಕ್ಷಿಸಿದ್ದಾರೆ.

ಇದನ್ನೂ ಓದಿ: ಅನಾಯಾಸವಾಗಿ ಭಾರತದಲ್ಲೇ 800 ಕೋಟಿ ರೂಪಾಯಿ ಗಳಿಸಲಿದೆ ‘ಧುರಂಧರ್’

ಅಕ್ಷಯ್ ಖನ್ನಾ ಅವರು ‘ಧುರಂಧರ್’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರೂ ಕೂಡ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದಿದ್ದಾರೆ. ಸಾರಾ ಅರ್ಜುನ್ ಅವರು ನಾಯಕಿಯಾಗಿ ಮಿಂಚಿದ್ದಾರೆ. ಭಾರತೀಯ ಗೂಢಚಾರಿ ಪಾತ್ರದಲ್ಲಿ ರಣವೀರ್ ಸಿಂಗ್ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಆದಿತ್ಯ ಧಾರ್ ಅವರ ನಿರ್ದೇಶನಕ್ಕೆ ಪ್ರೇಕ್ಷಕರು ಭೇಷ್ ಎಂದಿದ್ದಾರೆ. ಬಿಡುಗಡೆಯಾಗಿ 27 ದಿನಗಳು ಕಳೆದರೂ ಹೌಸ್​ಫುಲ್ ಪ್ರದರ್ಶನ ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಧಾರಾವಾಡ: ಸೂರ್ಯರಶ್ಮಿ ಜತೆಗೆ ಕೆರೆ ನೀರಿನ ಚೆಲ್ಲಾಟ: 2025ರ ಕೊನೆಯಲ್ಲಿ ಕಂಡ ಅದ್ಭುತ ದೃಶ್ಯ – Kannada News | Discover Dharwad’s Kelageri Lake: Stunning Sunsets in Karnataka’s Belavalanaadu

ಧಾರವಾಡ, ಡಿ.31: ಧಾರಾವಾಡವನ್ನು ಅರೆಮಲೆನಾಡು ಜಿಲ್ಲೆ ಎಂದು ಅನೇಕರು ಕರೆಯುತ್ತಾರೆ. ಇನ್ನು ಕೆಲವರು ಬೆಳವಲನಾಡು ( Kelageri Lake sunset) ಎನ್ನುತ್ತಾರೆ. ಇಲ್ಲಿ ಯಾವುದೇ ಬೀಜ ಎಸೆದರೂ ಮೊಳಕೆಯೊಡೆದು ಹೆಮ್ಮರವಾಗಿ ಬಿಡುತ್ತೆ ಎಂಬ ಮಾತಿದೆ. ಇದೇ ಕಾರಣಕ್ಕೆ ಈ ಊರನ್ನು ಬೆಳವಲನಾಡು ಎಂದು ಕರೆಯುತ್ತಾರೆ. ಈ ಎಲ್ಲ ಸಮೃದ್ಧಿಗೆ ಇಲ್ಲಿನ ಕೆರೆಗಳು ಕಾರಣ. ಜಿಲ್ಲೆಯ ಬಹುತೇಕ ಪ್ರದೇಶಗಳು ಕೆರೆಗಳಿಂದ ತುಂಬಿದೆ. ಅದರಲ್ಲೂ ಕೆಲಗೇರಿ ಕೆರೆ ಈ ಜಿಲ್ಲೆಯ ಜನರ ಜೀವನಾಡಿ. ಇಂತಹ ಸುಂದರವಾದ ಕೆರೆಯಲ್ಲಿ ಸುಂದರವಾದ ನೀರು-ಸೂರ್ಯನ ಆಟ ದೃಶ್ಯ ನೋಡುವುದೇ ಅದ್ಭುತ. ಹೊಸ ಆಚರಣೆಗೆ ಇಂದೊಂದು ಅದ್ಭುತ ದೃಶ್ಯ.

ಈ ಕೆರೆಯ ಸುತ್ತಮುತ್ತಲಿನ ಪರಿಸರದಲ್ಲಿ ಹೊಸ ಹೊಸ ದೃಶ್ಯಗಳು ಕಂಡು ಬಂದಿದೆ. ಸೂರ್ಯನ ಬೆಳಕಿನೊಂದಿಗೆ ನೀರಿನ ಆಟವೂ ಅಲ್ಲಿನ ಜನರ ಖುಷಿಯ ಕ್ಷಣಕ್ಕೆ ಕಾರಣವಾಗಿತ್ತು.  ಸಂಜೆಯಾಗುತ್ತಿದ್ದಂತೆ ಸೂರ್ಯ ರಶ್ಮಿ ಜತೆಗೆ ಕೆರೆ ನೀರಿನ ಚೆಲ್ಲಾಟವನ್ನು ನೋಡಲು ಎರಡು ಕಣ್ಣು ಸಾಲದು, ಅಂತಹ ಅದ್ಭುತ ದೃಶ್ಯ ಕಂಡು ಬಂದಿದೆ. ಧಾರವಾಡದಿಂದ ಗೋವಾಕ್ಕೆ ಹೋಗುವ ದಾರಿಯಲ್ಲಿ ಸಿಗುವ ಕೆಲಗೇರಿ ಕೆರೆ. ಈ ಕೆರೆಯನ್ನು ಸರ್ ಎಂ. ವಿಶ್ವೇಶ್ವರಯ್ಯ ನಿರ್ಮಿಸಿದ್ದು, ಸೂರ್ಯನ ಸಂಜೆಯ ಬೆಳಕು ಬಣ್ಣ ಬಣ್ಣದ ಕಲ್ಲುಗಳಿಗೆ ನೀರಿನ ಅಲೆಗಳು ಮುತ್ತಿಡುವ ಕ್ಷಣ ನೋಡಲು ಎರಡು ಕಣ್ಣುಗಳು ಸಾಲದು, ಸೂರ್ಯನ ಬಿಂಬಕ್ಕೆ ವಿವಿಧ ಬಗೆಯ ಬಣ್ಣಗಳನ್ನು ಪಡೆದುಕೊಳ್ಳುತ್ತದೆ. ಒಂದು ಬಾರಿ ಬಂಗಾರದ ಬಣ್ಣ, ಮತ್ತೊಮ್ಮೆ ವಜ್ರ, ಹರಳುಗಳಂತೆ ಕಾಣುತ್ತದೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ

ಸಂಜೆ ಹೊತ್ತಿಗೆ ಬೆಟ್ಟ-ಗುಡ್ಡಗಳ ಮರೆಯಲ್ಲಿ ನಿಧಾನವಾಗಿ ಇಳಿಯುವ ಸೂರ್ಯ, ತನ್ನೆಲ್ಲಾ ಹಳೆಯ ನೆನಪುಗಳನ್ನ ಅಳಿಸಿ ಹಾಕಿ, ಹೊಸ ವರ್ಷಕ್ಕೆ ಹೊಸ ಬದುಕು ಹಾಗೂ ಭರವಸೆಯತ್ತ ಸಾಗುತ್ತಿರುವಂತೆ ಭಾಸವಾಗುತ್ತೆ. ನಿಧಾನವಾಗಿ ನೀರಿನಲ್ಲಿ ಇಳಿಯುವಂತೆ ಕಾಣುವ ಸೂರ್ಯ, ರಕ್ತದಲ್ಲಿ ಮಿಂದೆದ್ದವನಂತೆ ಕಾಣುತ್ತಾನೆ. ತನ್ನ ಸುತ್ತಮುತ್ತಲಿನ ಪರಿಸರಕ್ಕೂ ಅದನ್ನೇ ಹೊದಿಸುತ್ತಾನೆ. ಕ್ಷಣ ಉರುಳಿದಂತೆ ಚಿನ್ನದ ಬಣ್ಣಕ್ಕೆ ತಿರುಗುತ್ತಾ, ಕೆರೆಯ ಒಡಲನ್ನು ಚಿನ್ನದ ನೀರಿನಿಂದ ತುಂಬುತ್ತಾನೆ. ಅರೆಮಲೆನಾಡು ಜಿಲ್ಲೆಗಳಲ್ಲಿ ಜೂನ್ ಆರಂಭದಿಂದ ಡಿಸೆಂಬರ್ ಕೊನೆಯವರೆಗೆ ಸೂರ್ಯನ ಪ್ರಖರತೆ ಕಡಿಮೆ. ಮಳೆಗಾಲದಲ್ಲಿ ಸೂರ್ಯ ಮೋಡದ ಮರೆಯಲ್ಲಿ ಅವಿತುಕೊಂಡರೆ, ಚಳಿಗಾಲದಲ್ಲಿ ಮಂಜಿನಿಂದ ಹೊರ ಬಾರದೇ ಮರೆಯಾಗಿರುತ್ತಾನೆ. ಆದರೆ ಡಿಸೆಂಬರ್ ಮುಗಿಯುತ್ತಾ ಬರುತ್ತೋ ಆಗ ಮೋಡ-ಮಂಜಿನಿಂದ ಪ್ರಕೃತಿಯಷ್ಟೇ ಅಲ್ಲ, ಸೂರ್ಯನೂ ಮುಕ್ತಿ ಪಡೆದು, ತನ್ನ ಅಸ್ತಿತ್ವವನ್ನ ತೋರಿಸುತ್ತಾನೆ. ಈ ವೇಳೆಯಲ್ಲಿ ಕೆರೆಯ ನೀರಿನೊಂದಿಗೆ ಈತನ ಚೆಲ್ಲಾಟವನ್ನ ನೋಡಲಿಕ್ಕೆ ಎರಡು ಕಣ್ಣು ಸಾಲದು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:09 pm, Wed, 31 December 25

Source link

ವೋಟ್​​ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ! – Kannada News | Voter List Scam in Hungund: BJP Blames Congress for Illegal Additions

ಬಾಗಲಕೋಟೆ, ಡಿಸೆಂಬರ್​ 31: ಬಿಜೆಪಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್​​ ವೋಟ್​​ ಚೋರಿ ಅಭಿಯಾನ ನಡೆಸಿತ್ತು. ಕರ್ನಾಟಕದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ನಡುವೆ ಹುನಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್​​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ನಡೆದಿದೆ ಎಂದು ಬಿಜೆಪಿ ದೂರಿದೆ. ದಾಖಲೆ ಸಮೇತ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರನ್ನೂ ನೀಡಿದೆ.

ಹುನಗುಂದ ಮತಕ್ಷೇತ್ರದಲ್ಲಿ ಪ್ರತಿ ಬೂತ್​​ನಿಂದ ಅಕ್ರಮವಾಗಿ 18 ವಯೋಮಿತಿ ಒಳಗಿನ 50 ಜನರನ್ನ ಮತದಾರ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂದು ಭಾರತೀಯ ಜನತಾ ಪಕ್ಷ ಆಗ್ರಹಿಸಿದೆ. ನವನಗರದ ಬಸ್ ನಿಲ್ದಾಣ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಮಾಜಿ ಶಾಸಕರಾದ ವೀರಣ್ಣ ಚರಂತಿಮಠ ಮತ್ತು ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಲಾಗಿದೆ. ಹುನಗುಂದ ಕಾಂಗ್ರೆಸ್​​ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲೂ ಮತದಾರರ ಪಟ್ಟಿ ಅಕ್ರಮದ ಸದ್ದು; ವೋಟರ್​​ ಲಿಸ್ಟ್​​ನಲ್ಲಿದೆ ಅಪ್ರಾಪ್ತರು, ಬೇರೆ ಊರಿನವರ ಹೆಸರು!

ಬಿಜೆಪಿ ಆರೋಪಗಳೇನು?

  • 18 ವರ್ಷ ವಯಸ್ಸಿನ ಕಡಿಮೆ ಇರುವ ವಿಧ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ
  • ಬೇರೆ ಜಿಲ್ಲೆಯ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ
  • ಹುನಗುಂದ ಮತಕ್ಷೇತ್ರದಲ್ಲಿ ಹಲವಾರು ಗ್ರಾಮ ಹಾಗೂ ನಗರಗಳಲ್ಲಿ ಅವರು ವಾಸಿಸುವ ವಾರ್ಡನ್ನು ಬಿಟ್ಟು ಪಕ್ಕದ ವಾರ್ಡಿಗೆ ಕೂಡಾ ಸೇರಿಸುವ ಬಗ್ಗೆ ಸಾರ್ವಜನಿಕ ಚರ್ಚೆ ಆಗುತ್ತಿದೆ
  • ಒಂದೇ ಮತದಾರರ ಹೆಸರು ಎರಡು ವಾರ್ಡ್​​ಗಳಲ್ಲಿ ಕಂಡುಬಂದಿದೆ

ಮತದಾರರ ಪಟ್ಟಿ ಅಕ್ರಮ ಸಂಬಂಧ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಆಗಬೇಕು. ತಪ್ಪಿತಸ್ಥರನ್ನು ಅಮಾನತು ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡಬೇಕು. ಒಂದು ವೇಳೆ ನ್ಯಾಯಯುತ ತನಿಖೆ ಆಗದಿದ್ದಲ್ಲಿ ಉಗ್ರಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕರು ಎಚ್ಚರಿಸಿದ್ದಾರೆ. ಮುರಡಿ ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಅಕ್ರಮದ ಬಗ್ಗೆ ಈ ಮೊದಲು ಹುನಗುಂದ ತಾಲೂಕು ಪಂಚಾಯತ್​ ಮಾಜಿ ಸದಸ್ಯರು ಹಾಗೂ ಸ್ಥಳೀಯರು ಕೂಡ ಆರೋಪಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ – Kannada News | Bengaluru: Kogilu Housing Project Handover on January 2, Victims to Receive New Homes

ಬೆಂಗಳೂರು, ಡಿಸೆಂಬರ್​ 31: ಕೋಗಿಲು (Kogilu) ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ (home) ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ.

ನಿರಾಶ್ರಿತರಿಗೆ ವಸತಿ ಭಾಗ್ಯ

ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಕೋಗಿಲಿನಲ್ಲಿ ಸರ್ವೆ ಮುಗಿಸಿದ್ದಾರೆ.

ಇದನ್ನೂ ಓದಿ: ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್

ನಿರಾಶ್ರಿತರ ಬಗ್ಗೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹೀಗಾಗಿ ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಕಾರ್ಯ ನಡೆದಿದ್ದು, 2026 ಜನವರಿ 2ರಂದು ಮನೆಗಳ ಹಸ್ತಾಂತರಕ್ಕೆ ನಿರ್ಧರಿಸಲಾಗಿದೆ.

ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​ನಲ್ಲಿ ಸುಮಾರು 1ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್​ಗಳಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ. ಇದೇ ಅಪಾರ್ಟ್​​ಮೆಂಟ್​ನಲ್ಲಿ ನಿರಾಶ್ರಿತರಿಗೆ ಮನೆ ಕೊಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೋಗಿಲು ಲೇಔಟ್​​ ನಿರಾಶ್ರಿತರ ಬಗ್ಗೆ ಅಶೋಕ್​​ ಸ್ಫೋಟಕ ಮಾಹಿತಿ: ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ

ಹೀಗೆ ಸರ್ಕಾರ ಕೋಗಿಲಿನ ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದೆ. ಆದರೆ ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯ ಅನೇಕ ಕಡೆಯ ಜನರ ನೆರವಿಗೆ ಸರ್ಕಾರಗಳು ಹೋಗಿಲ್ಲ. ಲಿಂಗನಮಕ್ಕಿ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡವರು ಕಳೆದ 65 ವರ್ಷದಿಂದ ಹಕ್ಕುಪತ್ರಕ್ಕಾಗಿ ಹೋರಾಡುತ್ತಿದ್ದಾರೆ. ಆದರೆ ಸರ್ಕಾರಗಳು ಇವರನ್ನ ಕಣ್ಣೆತ್ತಿಯೂ ನೋಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

FSSAI Recruitment 2025: FSSAIನಲ್ಲಿ ಆಹಾರ ವಿಶ್ಲೇಷಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | FSSAI Food Analyst Recruitment 2025: Apply Online for Government Jobs

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗಾಗಿ, ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಆಹಾರ ವಿಶ್ಲೇಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಜನವರಿ 22 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆಹಾರ ಸುರಕ್ಷತೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸರ್ಕಾರಿ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ವಿಶೇಷ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕಗಳಲ್ಲಿ ಅಧಿಕೃತ ವೆಬ್‌ಸೈಟ್ fssai.gov.in ನಲ್ಲಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆಹಾರ ವಿಶ್ಲೇಷಣೆ, ರಸಾಯನಶಾಸ್ತ್ರ ಅಥವಾ ಸಂಬಂಧಿತ ವೈಜ್ಞಾನಿಕ ಕ್ಷೇತ್ರಗಳಲ್ಲಿ ಅರ್ಹತೆ ಮತ್ತು ಅಗತ್ಯ ಅನುಭವ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು:

ಆಹಾರ ವಿಶ್ಲೇಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ರಸಾಯನಶಾಸ್ತ್ರ, ಡೈರಿ ರಸಾಯನಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ, ಆಹಾರ ತಂತ್ರಜ್ಞಾನ, ಆಹಾರ ಸುರಕ್ಷತೆ, ಕೃಷಿ ವಿಜ್ಞಾನ, ಜೀವರಸಾಯನಶಾಸ್ತ್ರ ಸೇರಿದಂತೆ 14 ಮಾನ್ಯತೆ ಪಡೆದ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ/ಪಿಜಿ/ಪಿಎಚ್‌ಡಿ ಪದವಿಯನ್ನು ಹೊಂದಿರಬೇಕು. ಇದಲ್ಲದೆ, ಇನ್‌ಸ್ಟಿಟ್ಯೂಟ್ ಆಫ್ ಕೆಮಿಸ್ಟ್ಸ್ ಇಂಡಿಯಾದಿಂದ ಆಹಾರ ವಿಶ್ಲೇಷಕ ವಿಭಾಗ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಇದಲ್ಲದೆ, ಅಭ್ಯರ್ಥಿಯು ಆಹಾರ ವಿಶ್ಲೇಷಣೆಯಲ್ಲಿ ಕನಿಷ್ಠ 3 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾಯೋಗಿಕ ಪರೀಕ್ಷೆಗೆ ರೂ. 2500 ಮತ್ತು ರೂ. 5000 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು. ಅರ್ಜಿಯನ್ನು ಸಲ್ಲಿಸಿದ ನಂತರ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆ:

FSSAI ಆಹಾರ ವಿಶ್ಲೇಷಕರ ನೇಮಕಾತಿ ಆಯ್ಕೆಯನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. ಮೊದಲ ಹಂತವು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, ಇದರಲ್ಲಿ ಆಹಾರ ರಸಾಯನಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ, ಆಹಾರ ಸುರಕ್ಷತೆ ಮತ್ತು ಸಂಬಂಧಿತ ವಿಷಯಗಳಿಂದ ಪ್ರಶ್ನೆಗಳನ್ನು ಕೇಳಲಾಗುತ್ತದೆ. CBT ಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಎರಡನೇ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಎರಡನೇ ಹಂತವು ಪ್ರಾಯೋಗಿಕ ಪರೀಕ್ಷೆಯಾಗಿದ್ದು, ಇದರಲ್ಲಿ ಪ್ರಯೋಗಾಲಯದ ಕೆಲಸ ಮತ್ತು ಆಹಾರ ವಿಶ್ಲೇಷಣೆಗೆ ಸಂಬಂಧಿಸಿದ ಕೌಶಲ್ಯಗಳನ್ನು ಪರೀಕ್ಷಿಸಲಾಗುತ್ತದೆ. ಎರಡು ಹಂತಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲು FSSAI ಅಧಿಕೃತ ವೆಬ್‌ಸೈಟ್ fssai.gov.in ಗೆ ಭೇಟಿ ನೀಡಿ.
  • ಅಭ್ಯರ್ಥಿಗಳು ಮುಖಪುಟದಲ್ಲಿರುವ ಆಹಾರ ವಿಶ್ಲೇಷಕರ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅದರ ನಂತರ, ಅಭ್ಯರ್ಥಿಗಳು ಮೊದಲು ನೋಂದಾಯಿಸಿಕೊಳ್ಳಬೇಕು ಮತ್ತು ಲಾಗಿನ್ ಐಡಿಯನ್ನು ರಚಿಸಬೇಕು.
  • ಈಗ ಅರ್ಜಿ ನಮೂನೆಯಲ್ಲಿ ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ನಂತರ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಈಗ ಫಾರ್ಮ್ ಅನ್ನು ಸಲ್ಲಿಸಿ ಮತ್ತು ಅದರ ಪ್ರಿಂಟ್​ ಕಾಪಿ ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:58 pm, Wed, 31 December 25

Source link