ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ಜೆಡಿಎಸ್ ದೂರು: ಆರೋಪವೇನು? – Kannada News | JDS Approaches Governor Against Karnataka Government Over Hate Speech Bill
ಬೆಂಗಳೂರು, ಡಿಸೆಂಬರ್ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ. ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ…