nagaraj11081993

New Year’s Eve: 2025ಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸ್ವಾಗತಿಸುವ ವಿಶೇಷ ಡೂಡಲ್ ಹಂಚಿಕೊಂಡ ಗೂಗಲ್ – Kannada News | New Year’s Eve: Google shares doodle to celebrate last day of 2025

2025 ಕ್ಕೆ ವಿದಾಯ ಹೇಳುವ ದಿನ ಬಂದೇ ಬಿಟ್ಟಿತ್ತು. 2025 ಕ್ಕೆ ಗುಡ್ ಬೈ ಹೇಳಲು ಇನ್ನೇನು ಕೆಲವೇ ಕೆಲವು ಗಂಟೆಗಳಷ್ಟೇ ಬಾಕಿಯಿವೆ. ಈಗಾಗಲೇ ಹೊಸ ವರ್ಷವನ್ನು (New year) ಬರಮಾಡಿಕೊಳ್ಳಲು ಎಲ್ಲರೂ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.​ ಒಂದು ಕಡೆ ಹೊಸ ವರ್ಷ 2026ನ್ನು ಬರ ಮಾಡಿಕೊಳ್ಳುವ ಸಂತಸದ ಸಮಯವನ್ನು ಗೂಗಲ್‌ ಡೂಡಲ್‌ನ್ನು(Google doodle) ವಿಭಿನ್ನವಾಗಿ ರೂಪಿಸಿದೆ. ಇಂದಿನ ಗೂಗಲ್ ಡೂಡಲ್ ವಿಶೇಷತೆಯೇನು? ಡೂಡಲ್ ಹೊಸ ವರ್ಷವನ್ನು ಪ್ರಾರಂಭಿಸಲು ಹೊಸ ಹುರುಪನ್ನು ನೀಡುತ್ತಿದೆ. ಇಂದು, ತನ್ನ ಗೂಗಲ್ ಡೂಡಲ್…

Read More

ಹೊಸ ವರ್ಷಾಚರಣೆ: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಏನೆಲ್ಲ ಬಂದ್, ಯಾವುದೆಲ್ಲ ಓಪನ್? ಇಲ್ಲಿದೆ ಮಾಹಿತಿ – Kannada News | What is open and closed on New Year’s Eve and 1st January 2026 in Bangalore and other cities of Karnataka

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ (New Year 2026) ಪ್ರಯುಕ್ತ ಭದ್ರತೆ ಮತ್ತು ಸುರಕ್ಷತಾ ಕಾರಣಗಳಿಗಾಗಿ ಕರ್ನಾಟಕದ (Karnataka) ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ (Bengaluru) ಫ್ಲೈಓವರ್​ಗಳನ್ನು ಬಂದ್ ಮಾಡಲಾಗುತ್ತದೆ. ಮತ್ತೊಂದೆಡೆ ಬಿಎಂಟಿಸಿ ಬಸ್, ನಮ್ಮ ಮೆಟ್ರೋ ಸೇವೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಏನೇನು ಇರುತ್ತೆ? ಏನೇನು ಇರಲ್ಲ ಎಂಬ ಮಾಹಿತಿ ಇಲ್ಲಿದೆ. ಹೊಸ ವರ್ಷಾಚರಣೆ: ಏನೇನಿರಲ್ಲ? ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ…

Read More

ಗಂಭೀರ ಸ್ಥಿತಿ… ಕೋಮಾಕ್ಕೆ ಜಾರಿದ ಆಸ್ಟ್ರೇಲಿಯಾ ಕ್ರಿಕೆಟಿಗ – Kannada News | Australian cricketer Damien Martyn hospitalised

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮೆನಿಂಜೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಇದೀಗ ಕೋಮಾಕ್ಕೆ ಜಾರಿದ್ದಾರೆ ಆಸ್ಟ್ರೇಲಿಯನ್ ಅಸೋಸಿಯೇಟೆಡ್ ಪ್ರೆಸ್ (AAP) ಉಲ್ಲೇಖಿಸಿ cricket.com.au ವರದಿ ಮಾಡಿದೆ. ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಪ್ರಕಾರ, ಮಾರ್ಟಿನ್ ಮೆನಿಂಜೈಟಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ನೀಡಲಾದ ಔಷಧಿಗಳ ರಿಯಾಕ್ಷನ್​ನಿಂದಾಗಿ ಅವರು ಕೋಮಾಕ್ಕೆ ಜಾರಿದ್ದಾರೆ. ವೈದ್ಯರು ಮಾರ್ಟಿನ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ವ್ಯವಸ್ಥೆಗೆ ಮುಂದಾಗಿದ್ದಾರೆ. ಡೇಮಿಯನ್ ಮಾರ್ಟಿನ್​ ಅವರಿಗೆ…

Read More

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು? – Kannada News | Jaggesh Shows His Angriness over Movie Piracy

ಟ ಸುದೀಪ್ ಅವರು ಪೈರಸಿ ಬಗ್ಗೆ ಧ್ವನಿ ಎತ್ತಿದ್ದು ಗೊತ್ತೇ ಇದೆ. ಸುದೀಪ್ ಬಳಿಕ ಜಗ್ಗೇಶ್ ಅವರು ಪೈರಸಿ ಬಗ್ಗೆ ಮಾತನಾಡಿದ್ದಾರೆ. ಅವರ ಸಹೋದರ ಕೋಮಲ್ ಕುಮಾರ್ ನಟನೆಯ ‘ಕೋಣ’ ಸಿನಿಮಾ ಪೈರಸಿ ಆಗಿತ್ತು. ಇದನ್ನು ಮಾಡಿದವರ ವಿರುದ್ಧ ಜಗ್ಗೇಶ್ ದೂರು ನೀಡಿದ್ದರು. ಈಗ ನಂದಿನಿ ಲೇಔಟ್ ಪೊಲೀಸರು ಪೈರಸಿ ಮಾಡುತ್ತಿದ್ದ ಓರ್ವನ ಬಂಧಿಸಿದ್ದಾರೆ. ಫೇಸ್​ಬುಕ್ ಲೈವ್ ಬಂದು ಪೈರಸಿ ವಿರುದ್ಧ ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ. ‘ಸಿನಿಮಾ ಪೈರಸಿ ಕೊಲೆಗೆ ಸಮಾನ, ನಿರ್ಮಾಪಕನನ್ನು ಕೊಂದಂತೆ. ಪೈರಸಿ…

Read More

Vaikuntha Dwadashi: ವೈಕುಂಠ ದ್ವಾದಶಿಯ ಮಹತ್ವ, ಆಚರಣೆ ಮತ್ತು ಫಲಗಳ ಮಾಹಿತಿ ಇಲ್ಲಿದೆ – Kannada News | Vaikuntha dwadashi the day of infinite blessings and divine culmination

ವೈಕುಂಠ ದ್ವಾದಶಿ ಅಥವಾ ಮುಕ್ಕೋಟಿ ದ್ವಾದಶಿಯ ಮಹತ್ವ, ಆಚರಣೆ ಮತ್ತು ಫಲಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ವೈಕುಂಠ ಏಕಾದಶಿಯನ್ನು ಆಚರಿಸಿದ ಮಾರನೇ ದಿನ ಬರುವ ಈ ದ್ವಾದಶಿ ಅತೀ ಮಹತ್ವಪೂರ್ಣವಾದ ದಿನವಾಗಿದೆ. ಪೌರಾಣಿಕ ನಂಬಿಕೆಗಳ ಪ್ರಕಾರ, 33 ಕೋಟಿ ದೇವತೆಗಳು ವೈಕುಂಠದಲ್ಲಿ ಉತ್ತರ ದ್ವಾರದ ಮುಖಾಂತರ ಶ್ರೀ ವಿಷ್ಣುವಿನ ದರ್ಶನ ಪಡೆದ ಸಂದರ್ಭ ಇದಾಗಿದೆ. ಹೀಗಾಗಿ, ಈ ದಿನವನ್ನು…

Read More

ವೇದಿಕೆ ಏರಿದ ಮಾಳು ವಿರುದ್ಧ ಸೇಡು ತೀರಿಸಿಕೊಂಡ ಗಿಲ್ಲಿ ಫ್ಯಾನ್ಸ್; ಭಾರೀ ಮುಜುಗರ – Kannada News | Bigg Boss Kannada 12: Malu Nipanal Trolled by Gilli Fans Over Controversial Statements

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಮೂರು ತಿಂಗಳು ಇದ್ದು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಸಾಕಷ್ಟು ಸೈಲೆಂಟ್ ಆಗಿದ್ದರು. ಬಿಗ್ ಬಾಸ್​ನಿಂದ ಹೊರ ಬರುತ್ತಿದ್ದಂತೆ ಅವರು ಮಾತು ಆರಂಭಿಸಿದ್ದಾರೆ. ಈ ಮಾತುಗಳು ಸಾಕಷ್ಟು ಚರ್ಚೆಗೆ ಕಾರಣ ಆಗಿವೆ. ಈಗ ಮಾಳು ವಿರುದ್ಧ ಗಿಲ್ಲಿ (Gilli) ಫ್ಯಾನ್ಸ್ ಸೇಡು ತೀರಿಸಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಗಿಲ್ಲಿಗೆ ಇರೋ ಫ್ಯಾನ್ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ….

Read More

ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ – Kannada News | Sleeper Bus Crash on Bengaluru–Chennai Highway Near Anekal Leaves Four Seriously Injured

ಆನೇಕಲ್, ಡಿಸೆಂಬರ್ 31: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ ಡಿಕ್ಕಿ ಹೊಡೆದಿವೆ. ಮುಂಬದಿ ಸಾಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಎರಡೂ…

Read More

ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್ – Kannada News | Andries Gous slams the highest individual score in ILT20

ಅಬುಧಾಬಿಯಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಂಡ್ರೀಸ್ ಗೌಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶೇಖ್ ಝಾಯೆದ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಡೆಸರ್ಟ್ ವೈಪರ್ಸ್ ಪರ ಇನಿಂಗ್ಸ್ ಆರಂಭಿಸಿದ ಆಂಡ್ರೀಸ್ ಗೌಸ್ 58 ಎಸೆತಗಳಲ್ಲಿ 9 ಭರ್ಜರಿ…

Read More

ಹೊಸ ವರ್ಷಕ್ಕೆ ಜಮ್ಮು-ಕಾಶ್ಮೀರದಲ್ಲಿ ಕಟ್ಟೆಚ್ಚರ, 100ಕ್ಕೂ ಹೆಚ್ಚು ಉಗ್ರರು ಒಳನುಸುಳಲು ಸಂಚು – Kannada News | High Alert in Jammu and Kashmir Ahead of New Year Celebrations

ಶ್ರೀನಗರ, ಡಿಸೆಂಬರ್ 31: ಹೊಸ ವರ್ಷ(New Year)ವನ್ನು ಬರಮಾಡಿಕೊಳ್ಳಲು ಕೆಲವೇ ಕೆಲವು ಗಂಟೆಗಳು ಬಾಕಿ ಉಳಿದಿವೆ. ಜಮ್ಮು ಮತ್ತು ಕಾಶ್ಮೀರದ 740 ಕಿಲೋಮೀಟರ್ ಉದ್ದದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಎಚ್ಚರಿಕೆ ನೀಡಲಾಗಿದೆ. ಗಡಿಯುದ್ದಕ್ಕೂ 60 ಲಾಂಚ್‌ಪ್ಯಾಡ್‌ಗಳಿಂದ ಕಾರ್ಯನಿರ್ವಹಿಸುತ್ತಿರುವ 100 ಕ್ಕೂ ಹೆಚ್ಚು ಭಯೋತ್ಪಾದಕರು ಹೊಸ ವರ್ಷದ ದಿನದಂದು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಗುಪ್ತಚರ ಮಾಹಿತಿಯ ನಂತರ, ಭಾರತೀಯ ಸೇನೆಯನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ಸರಿಸುಮಾರು 13,000 ಅಡಿಗಳಷ್ಟು ದೂರದಲ್ಲಿ…

Read More

New Year 2026: ಹೊಸ ವರ್ಷಕ್ಕೆ ನೈಟ್ ಪ್ಲಾನ್ ಇದೆಯಾ? ಬಿಎಂಟಿಸಿ ನೀಡುತ್ತಿದೆ ತಡರಾತ್ರಿಯವರೆಗೂ ಬಸ್ ಸೇವೆ – Kannada News | Bangalore New Year Transport: BMTC Midnight Buses and Metro Extended Services

ಹೊಸ ವರ್ಷಕ್ಕೆ ನೈಟ್ ಪ್ಲಾನ್ ಇದೆಯಾ? ಬಿಎಂಟಿಸಿ ನೀಡುತ್ತಿದೆ ತಡರಾತ್ರಿಯವರೆಗೂ ಬಸ್ ಸೇವೆ ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಸಾರ್ವಜನಿಕರಿಗೆ ಕೊಡುಗೆ ನೀಡಿದ್ದು, ಇಂದು (ಡಿಸೆಂಬರ್ 31) ತಡರಾತ್ರಿಯವರೆಗೂ ನಗರದ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಮಧ್ಯರಾತ್ರಿ ಬಸ್ ಸೇವೆಗಳನ್ನು ಘೋಷಿಸಿದೆ. ನ್ಯೂ ಇಯರ್ ಪ್ರಯುಕ್ತ ಇಂದು ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಗಿನ…

Read More