nagaraj11081993

ಬೆತ್ತಲೆ ಓಡಾಟ, ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ: ಸೈಕೋ ಪತಿ ಕಾಟಕ್ಕೆ ಪತ್ನಿ ಕಂಗಾಲು – Kannada News | Wife lodges a complaint against husband alleging assault and unacceptable behavior in Bengaluru

ಬೆಂಗಳೂರು, ಡಿಸೆಂಬರ್​​ 30: ಅವರಿಬ್ಬರು ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳು. ಹೆಚ್​​ಆರ್​​ ಆಗಿದ್ದ ಇಬ್ಬರ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಪ್ರೀತಿಸಿದ್ದ ಆತ ಆಕೆಯ ಮನೆಯವರನ್ನೂ ಒಪ್ಪಿಸಿದ್ದ. ಬಳಿಕ ಸೆಪ್ಟೆಂಬರ್​​ 03, 2025ರಂದು ಚಿಂತಾಮಣಿಯಲ್ಲಿ ಕುಟುಂಬಸ್ಥರೇ ನಿಂತು ಇವರ ವಿವಾಹವನ್ನೂ ನಡೆಸಿದ್ದರು. ಆದರೀಗ ಸೈಕೋ ಪತಿ ಕಾಟಕ್ಕೆ ಪತ್ನಿ ಬೆಚ್ಚಿಬಿದ್ದಿದ್ದಾಳೆ. ತಾನು ಮದುವೆಯಾಗಿದ್ದು ಇಂತವನನ್ನಾ ಎಂದು ಗೋಗರೆಯುತ್ತಿದ್ದಾಳೆ. ಹೌದು, ಮದುವೆಯಾಗಿ ಕೆಲ ದಿನಗಳು ಚೆನ್ನಾಗಿಯೇ ಇದ್ದ ಪತಿ ಮಂಜುನಾಥ್ ಈಗ​ ಸೈಕೋ ರೀತಿ ವರ್ತಿಸುತ್ತಿರೋದನ್ನು ಕಂಡು…

Read More

Spiritual Tips: ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ! – Kannada News | 4 things women must avoid at night banish negative energy

ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು ವಾಸ್ತುಶಾಸ್ತ್ರದಲ್ಲಿ, ರಾತ್ರಿಯಲ್ಲಿ ಮೊಸರು ತಿನ್ನುವುದು, ಉಗುರು ಕತ್ತರಿಸುವುದು, ಕೂದಲು ಕತ್ತರಿಸುವುದು ಮತ್ತು ಬಟ್ಟೆ ಹೊಲಿಯುವುದು ಮುಂತಾದ ಅನೇಕ ವಿಷಯಗಳನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಈ ನಿಯಮಗಳು ಪುರುಷರು ಮತ್ತು ಮಹಿಳೆಯರಿಗೆ ಅನ್ವಯಿಸುತ್ತವೆ. ಆದರೆ ಕೆಲವು ನಿಯಮಗಳು ಮಹಿಳೆಯರಿಗೆಂದೇ ಮಾಡಲಾಗಿದೆ. ಮಹಿಳೆಯರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿದರೆ, ಅದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಅವು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕೂದಲು ಕಟ್ಟಿಕೊಂಡು ಮಲಗುವುದು:…

Read More

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನೆರವೇರಿದ ವೈಕುಂಠ ಏಕಾದಶಿ – Kannada News | Mantralaya Vaikuntha Ekadashi: Grand Celebrations at Venkateshwara swamy temple

ರಾಯಚೂರು, ಡಿಸೆಂಬರ್ 30: ಮಂತ್ರಾಲಯ ರಾಯರ ಮಠದಲ್ಲಿ ವೈಕುಂಠ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಮಂತ್ರಾಲಯದ ಓಲ್ಡ್ ಟೌನ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ವಿವಿಧ ಬಗೆಯ ಹೂವುಗಳಿಂದ ಶ್ರೀಮಠ ಹಾಗೂ ದೇವಸ್ಥಾನವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿದ ಈ ದೇವಾಲಯಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ತುಳಸಿ ಅರ್ಚನೆ, ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಮಂಗಳಾರತಿ ಸಲ್ಲಿಸಿದರು. ನಂತರ ಪವಿತ್ರ ವೈಕುಂಠ ದ್ವಾರವನ್ನು ಉದ್ಘಾಟಿಸಿ…

Read More

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ? – Kannada News | Vishnuvardhan Death Anniversary Special Pooje To Vishnuvardhan

ಇಂದು (ಡಿಸೆಂಬರ್ 30) ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 16ನೇ ವರ್ಷದ ಪುಣ್ಯ ಸ್ಮರಣೆ. ಈ ವೇಳೆ ವಿಷ್ಣುವರ್ಧನ್ ರಸ್ತೆಯಲ್ಲಿರುವ ಜೆಎಸ್​ಎಸ್ ಕಾಲೇಜು ಮುಂಭಾಗದಲ್ಲಿ ಪುಣ್ಯಸ್ಮರಣೆ ಆಚರಣೆ ಮಾಡಲಾಗಿದೆ. ಈ ಜಾಗ ಅಭಿಮಾನ್ ಸ್ಟುಡಿಯೋದಿಂದ ಕೇವಲ 200 ಮೀಟರ್ ದೂರದಲ್ಲಿ ಇದೆ. ತಾತ್ಕಾಲಿಕ ಮಂಟಪ ನಿರ್ಮಿಸಿ ವಿಷ್ಣು ಅವರ ಭಾವಚಿತ್ರವಿಟ್ಟು ಪೂಜೆ ಮಾಡಲಾಗಿದೆ. ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ಅನ್ನದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಕಿರುಕುಳ ಆರೋಪ: ಮಾಗಡಿಯಲ್ಲಿ ಪತಿ ಶಾಲೆ ಮುಂದೆಯೇ ಪತ್ನಿ ಪ್ರೊಟೆಸ್ಟ್​​ – Kannada News | Family dispute: Wife protests outside husband’s school in Magadi, Ramanagara

ರಾಮನಗರ, ಡಿಸೆಂಬರ್​​ 30: ಕಿರುಕುಳ ನೀಡಿದ್ದಲ್ಲದೆ ಮನೆಗೆ ಸೇರಿಸದ ಆರೋಪದ ಹಿನ್ನೆಲೆ ಪತಿ ಒಡೆತನದ ಶಿಕ್ಷಣ ಸಂಸ್ಥೆಯ ಎದುರೇ ಕುಳಿತು ಪತ್ನಿ ಪ್ರತಿಭಟನೆ ನಡೆಸಿರುವ ಘಟನೆ ಮಾಗಡಿಯಲ್ಲಿ ನಡೆದಿದೆ. ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಮಾಲಕ ರೂಪೇಶ್ ಜೊತೆ ಕಳೆದ ಒಂದು ವರ್ಷದ ಹಿಂದೆ ಪ್ರೀತಿ ವಿವಾಹವಾಗಿತ್ತು. ಆದರೆ ಪತಿ ಕಿರುಕುಳ ನೀಡುತ್ತಿದ್ದು, ಕೆಲ ದಿನಗಳಿಂದ ಮನೆಗೂ ತನ್ನನ್ನು ಸೇರಿಸುತ್ತಿಲ್ಲ ಎಂದು ಪ್ರೀತಿ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೂ ದೂರು ನೀಡಿರುವ ಇವರು, ನ್ಯಾಯಕ್ಕಾಗಿ ಪತಿಗೆ…

Read More

ಅಶ್ವಿನಿ ಗೌಡಗೆ ಓಪನ್ ಚಾಲೆಂಜ್ ಹಾಕಿದ ಗಿಲ್ಲಿ​; ಎರಡು ವಾರದಲ್ಲಿ ಇದು ಸಾಧ್ಯಾನಾ? – Kannada News | Bigg Boss Kannada 12: Ashwini Gowda vs Gilli Nata Captaincy Challenge

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಇರೋದು ಹಾವು ಮುಂಗುಸಿ ರೀತಿಯ ಸಂಬಂಧ. ಯಾವಾಗಲೂ ಕಿತ್ತಾಡಿಕೊಳ್ಳುತ್ತಲೇ ಇರುವ ಇವರು ಒಂದಾಗಿದ್ದು ತುಂಬಾನೇ ಕಡಿಮೆ. ಇತ್ತೀಚೆಗೆ ಇಬ್ಬರ ಮಧ್ಯೆ ಸಾಮರಸ್ಯ ಬೆಳೆದಿತ್ತು. ಆದರೆ, ಇವರ ಮಧ್ಯೆ ಮತ್ತೆ ಕಿರಿಕ್ ಉಂಟಾಗಿದೆ. ಅಶ್ವಿನಿ ಗೌಡ ಅವರಿಗೆ ಗಿಲ್ಲಿ ನಟ ಓಪನ್ ಚಾಲೆಂಜ್ ಹಾಕಿದ್ದಾರೆ. ಇದನ್ನು ಸಾಧಿಸೋಕೆ ಅಶ್ವಿನಿ ಬಳಿ ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ. ಗಿಲ್ಲಿ ನಟ ಅವರು…

Read More

Video: ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ಪಂಜಾಬ್, ಡಿಸೆಂಬರ್ 30: ಪಂಜಾಬ್​ನ ಅಮೃತಸರದಲ್ಲಿರುವ ಆಭರಣದಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಕದಿಯಲೆಂದು ಹೋದ ಕಳ್ಳರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಸಂಧು ಕಾಲೋನಿಯಲ್ಲಿರುವ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ, ಆವರಣದೊಳಗೆ ಎರಡು ಬಾರಿ ಗುಂಡು ಹಾರಿಸಿದರು. ಅದೃಷ್ಟವಶಾತ್, ಯಾವುದೇ ಗುಂಡುಗಳು ಆಭರಣ ವ್ಯಾಪಾರಿಗೆ ತಾಗಲಿಲ್ಲ. ಬುದ್ಧಿವಂತಿಕೆಯನ್ನು ಪ್ರದರ್ಶಿಸಿ, ಆಭರಣ ವ್ಯಾಪಾರಿ ದಾಳಿಕೋರರಲ್ಲಿ ಒಬ್ಬನನ್ನು ಸೋಲಿಸುವಲ್ಲಿ ಯಶಸ್ವಿಯಾದರು. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗಳು ಮೋಟಾರ್ ಸೈಕಲ್‌ನಲ್ಲಿ ಬಂದಿದ್ದರು. ಪರಾರಿಯಾಗುವ ವೇಳೆ ಒಬ್ಬ…

Read More

ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ – Kannada News | Kogilu Layout Rehabilitation: Prahlad Joshi Slams Karnataka Govt on this action

ಬೆಂಗಳೂರು, ಡಿಸೆಂಬರ್ 30: ಇತ್ತೀಚೆಗೆ ಕೋಗಿಲು ಬಡಾವಣೆಯಲ್ಲಿ (Kogilu Layout) ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವು ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಕೋಗಿಲು ಲೇಔಟ್ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ತೀರ್ಮಾನಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕರ್ನಾಟಕದ ಜನ ವಿಪತ್ತಿಗೊಳಗಾಗಿ ಪರಿಹಾರಕ್ಕಾಗಿ ಕಾಯುತ್ತಿದ್ದರೂ ಕೇವಲ ಎರಡೇ ದಿನಗಳಲ್ಲಿ ಒಂದು ಸಮುದಾಯಕ್ಕೆ ಪರಿಹಾರ ಒದಗಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ. 11 ಲಕ್ಷ ರೂ….

Read More

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಚಳ್ಳಕೆರೆ ಗೇಟ್ ಬಳಿ ಗೂಡಂಗಡಿಗಳು ನೆಲಸಮ

ಚಿತ್ರದುರ್ಗ, ಡಿಸೆಂಬರ್ 30: ಬೆಂಗಳೂರಿನಲ್ಲಿ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್​​ ತೆರವು ವಿಚಾರ ದೇಶದಾದ್ಯಂತ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ, ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ಅಕ್ರಮವಾಗಿ ಇಡಲಾಗಿದ್ದ ಗೂಡಂಗಡಿಗಳ ತೆರವು ಮಾಡಲಾಗಿದೆ. ನಗರಸಭೆ‌ ಆಯುಕ್ತೆ ಲಕ್ಷ್ಮೀ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ಜೆಸಿಬಿ ಬಳಸಿ ಹಣ್ಣು, ತರಕಾರಿ, ಟೀಸ್ಟಾಲ್, ಗುಜರಿ ಅಂಗಡಿಗಳ ತೆರವು ಮಾಡಲಾಗಿದೆ. ನಗರಸಭೆ ಅಧಿಕಾರಿಗಳ ವಿರುದ್ಧ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಕೋರ್ಟ್ ಆದೇಶದಂತೆ ನಾವು ಗೂಡಂಗಡಿ ತೆರವು ಮಾಡುತ್ತಿದ್ದೇವೆ ಎಂದು…

Read More

Karnataka Electricity Tariff Hike: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್! ಪ್ರತಿ ಯೂನಿಟ್‌ಗೆ 10 ಪೈಸೆವರೆಗೆ ಹೆಚ್ಚಳ ಸಾಧ್ಯತೆ – Kannada News | Karnataka Electricity Tariff Hike: KERC Announces “Top Up” Amidst Gruha Jyothi yojna

ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್! ಬೆಂಗಳೂರು, ಡಿಸೆಂಬರ್ 30: ಹೊಸ ವರ್ಷದ ಸಂಭ್ರಮಾಚರಣೆಯ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಗ್ರಾಹಕರಿಗೆ ಶಾಕ್ ನೀಡಿದೆ. ಮುಂದಿನ ಹಣಕಾಸು ವರ್ಷದಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರು ಬಳಸುವ ವಿದ್ಯುತ್‌ಗೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ ಎಂದಿರುವ ಆಯೋಗ, ಇದನ್ನು ವಿದ್ಯುತ್ ದರ ಪರಿಷ್ಕರಣೆ ಎಂದು ಕರೆಯದೆ, “ಟಾಪ್-ಅಪ್” ಅಥವಾ “ಟ್ರೂ-ಅಪ್” ಎಂದು ಸ್ಪಷ್ಟಪಡಿಸಿದೆ. ಮೂರು ವರ್ಷಕ್ಕೊಮ್ಮೆ ಮಾತ್ರ ದರ ಪರಿಷ್ಕರಣೆ ಮಾರ್ಚ್ 2025 ರಲ್ಲಿ KERC ವಿದ್ಯುತ್ ದರ…

Read More