Headlines

nagaraj11081993

ಕಿವಿ ಕೇಳಲ್ಲ, ಮಾತೂ ಬರಲ್ಲ! ಆದ್ರೂ ಸ್ನೇಹಿತನ ಹೆಂಡತಿ ಮೇಲೆ ಕಣ್ಣು ಹಾಕಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಮೈಸೂರು, ಏಪ್ರಿಲ್ 10: ಸಮಾಜದಲ್ಲಿ ವಿಶೇಷ ಚೇತನರಿಗೆ (Specially Abled) ಸೌಲಭ್ಯಗಳ ಜೊತೆ ಗೌರವವನ್ನೂ ನೀಡಲಾಗುತ್ತದೆ. ಎಲ್ಲರಂತಲ್ಲದ ಅವರನ್ನು ಕರುಣೆಯಿಂದಲೇ ನೋಡಲಾಗುತ್ತದೆ. ಅಂಗವೈಕಲ್ಯ ಹೊಂದಿದವರು ಇನ್ನೇನು ಅಪರಾಧ ಮಾಡಲು ಸಾಧ್ಯ ಎಂದು ಯೋಚಿಸುವವರನ್ನು ಬೆಚ್ಚಿಬೀಳಿಸುವ ಘಟನೆ ಜಿಲ್ಲೆಯ ನಂಜನಗೂಡು (Nanjanagudu) ತಾಲೂಕಿನ ದೇವಿರಮ್ಮನಹಳ್ಳಿಯಲ್ಲಿ ನಡೆದಿದೆ. ಮಾನವನ ವಿಕೃತ ಮನೋಭಾವಕ್ಕೆ ಅಂಗವೈಕಲ್ಯ ಅಡ್ಡಿಯಾಗುವುದಿಲ್ಲ ಎಂಬುದು ಈ ಪ್ರಕರಣದಲ್ಲಿ ಸಾಭೀತಾಗಿದೆ. ಸ್ನೇಹಿತನ ಮಡದಿಯನ್ನೇ ಮದುವೆಯಾಗಲು ಬಯಸಿದ್ದ ಸ್ವಾಮಿ ಮತ್ತು ಆತನ ಪತ್ನಿ ಸವಿತಾ ಇಬ್ಬರೂ ವಿಶೇಷ ಚೇತನರು. ಕಿವಿ ಕೇಳುವುದಿಲ್ಲ,…

Read More

ಹೊಟ್ಟೆಗೆ ಕ್ಲಿಪ್ ಹಾಕಿಕೊಂಡು ನಟನೆ: ರಣ್ವೀರ್ ಸಿಂಗ್ ಡೆಡಿಕೇಷನ್ ಎಂಥಹದ್ದು ಗೊತ್ತೆ?

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ‘ಧುರಂಧರ್ 2’ ಸಿನಿಮಾ ದೊಡ್ಡ ಹಿಟ್ ಆಗಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್​​ಗೆ ‘ಧುರಂಧರ್’ ಸರಣಿ ದೊಡ್ಡ ಗೆಲುವು ನೀಡಿದೆ, ಮಾತ್ರವಲ್ಲದೆ ತಾವೊಬ್ಬ ಸ್ಟಾರ್ ನಟ ಎಂಬುದನ್ನು ರಣ್ವೀರ್ ಮತ್ತೆ ಬಾಲಿವುಡ್​​ಗೆ ಸಾರಿ ಹೇಳಿದ್ದಾರೆ. ಸಿನಿಮಾನಲ್ಲಿ ರಣ್ವೀರ್ ನಟನೆಯ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ‘ಧುರಂಧರ್ 2’ ಕ್ಲೈಮ್ಯಾಕ್ಸ್ ವೇಳೆ ಸಾಕಷ್ಟು ದೈಹಿಕ ನೋವು ಅನುಭವಿಸಿ ನಟಿಸಿದ ರೀತಿಯ ಬಗ್ಗೆ ಅತೀವ ಮೆಚ್ಚುಗೆ ವ್ಯಕ್ತವಾಗಿದೆ….

Read More

“ಬೆಂಗಳೂರಿನ ಹೋಟೆಲ್ ಉದ್ಯಮಿಗಳಿಗೆ ಗುಡ್ ನ್ಯೂಸ್!”: ಮತ್ತೆ ಆರಂಭವಾಗಲಿವೆ ಮುಚ್ಚಿದ್ದ ಹೋಟೆಲ್‌ಗಳು

ಬೆಂಗಳೂರು, ಏ.10: ಬೆಂಗಳೂರಿನಲ್ಲಿ ದಿನನಿತ್ಯ ಎಲ್​​ಪಿಜಿ ಗ್ಯಾಸ್​​ ಬಗ್ಗೆ ಒಂದೊಂದು ಗೊಂದಲವಾಗಿತ್ತು. ಹೊಟೇಲ್​​​, ಹಲವಾರು ರೆಸ್ಟೋರೆಂಟ್‌ಗಳು ತುಂಬಾ ಸಂಕಷ್ಟಕ್ಕೆ ಒಳಗಾಗಿತ್ತು. ಜನರಿಗೆ ರುಚಿರುಚಿಯಾದ ತಿಂಡಿ, ಊಟಗಳನ್ನು ಮಾಡಲಾಗುತ್ತಿಲ್ಲ ಎಂಬ ಕೊರಗು ಕೂಡ ಅವರನ್ನು ಕಾಡುತ್ತಿತ್ತು. ಇದೀಗ ಕೇಂದ್ರ ಬೆಂಗಳೂರು ಹೊಟೇಲ್​​​, ರೆಸ್ಟೋರೆಂಟ್‌ಗಳಿಗೆ ಬಿಗ್​​ ಗುಡ್​​​​ ನ್ಯೂಸ್​​​​ವೊಂದನ್ನು ನೀಡಿದೆ. ಕೇಂದ್ರ ಸರ್ಕಾರವು ತಮ್ಮ ಎಲ್‌ಪಿಜಿ ಅವಶ್ಯಕತೆಗಳಲ್ಲಿ 70% ವರೆಗೆ ಪುನಃಸ್ಥಾಪಿಸುವುದಾಗಿ ಘೋಷಿಸಿದೆ ಇದರಿಂದ ಹೊಟೇಲ್ ಉದ್ಯಮಕ್ಕೆ ಬೂಸ್ಟ್​​​ ನೀಡಿದಂತಾಗಿದೆ. ನಗರದಲ್ಲಿ ಹಲವಾರು ರೆಸ್ಟೋರೆಂಟ್‌ಗಳು ಮತ್ತು ತಿನಿಸುಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ…

Read More

ಪಾರ್ಕಿಂಗ್ ವಿಚಾರಕ್ಕೆ ಜಗಳ, ಡ್ರೈವರ್ ತಲೆ ಕತ್ತರಿಸಿದ ವ್ಯಕ್ತಿ, ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ

ಪಾಟ್ನಾ, ಏಪ್ರಿಲ್ 10: ಕಾನೂನು ಕೈಗೆತ್ತಿಕೊಂಡರೆ ಆಗುವ ಅನಾಹುತಕ್ಕೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬ್ಸ್‌ಗಂಜ್ ಸಾಕ್ಷಿಯಾಗಿದೆ. ಗುರುವಾರ ಇಲ್ಲಿ ನಡೆದ ಅವಳಿ ಕೊಲೆ(Murder)ಗಳು ಕೇವಲ ಕ್ರೌರ್ಯದ ಪರಾಕಾಷ್ಠೆಯಲ್ಲ, ಬದಲಿಗೆ ಕಾನೂನು ಸುವ್ಯವಸ್ಥೆಯ ವೈಫಲ್ಯದ ಪ್ರತಿಬಿಂಬದಂತಿದೆ. ಘಟನೆಯ ಆರಂಭವಾಗಿದ್ದು ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ. ರಸ್ತೆಬದಿಯ ವ್ಯಾಪಾರಿ ರವಿ ಚೌಹಾಣ್ ಹಾಗೂ ಪಿಕಪ್ ಚಾಲಕ ಅಲಿ ಹುಸೇನ್ ನಡುವೆ ವಾಹನ ನಿಲ್ಲಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ‘ಈ ಸಣ್ಣ ಜಗಳ ವಿಕೋಪಕ್ಕೆ ತಿರುಗಿದಾಗ, ರವಿ ಚೌಹಾಣ್ ಅತ್ಯಂತ…

Read More

ಬೆಂಗಳೂರು: ಬೈಕ್‌ನಲ್ಲೇ ಕೀ ಬಿಟ್ಟು ಹೋದ ಮಾಲೀಕ, ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!

ಬೆಂಗಳೂರು, ಏಪ್ರಿಲ್ 10: ಮನೆ ಮುಂಭಾಗ ನಿಲ್ಲಿಸಿದ್ದ ಬೈಕನ್ನು ಕಳ್ಳನೊಬ್ಬ ಹಾಡಹಗಲೇ ಹೊತ್ತೊಯ್ದಿರುವ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದೆ. ಮಾಲೀಕರು ಮಾಡಿದ ಒಂದು ಸಣ್ಣ ನಿರ್ಲಕ್ಷ್ಯ ಕಳ್ಳನಿಗೆ ವರದಾನವಾಗಿ ಪರಿಣಮಿಸಿದ್ದು, ಬೈಕ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಕ್ಕಸಂದ್ರದ 16ನೇ ಕ್ರಾಸ್ ಬಳಿ ಏಪ್ರಿಲ್ 9 ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಿವಾಸಿಯೊಬ್ಬರು ಸುಜುಕಿ ಆಕ್ಸೆಸ್ 125 ಬೈಕ್ ಅನ್ನು ಮನೆ ಮುಂದೆ ನಿಲ್ಲಿಸಿದ್ದರು. ಆದರೆ, ಮರೆತು ಬೈಕ್‌ನಲ್ಲಿಯೇ ಕೀ ಬಿಟ್ಟು…

Read More

ನಟನೆಯಲ್ಲಿ ಸೂಪರ್ ಓದಿನಲ್ಲಿ ಬಂಪರ್, ನಟಿ ಅಂಕಿತಾ ಪಿಯುಸಿ ಅಂಕವೆಷ್ಟು?

ಸಿನಿಮಾ (Cinema) ಅಥವಾ ಧಾರಾವಾಹಿ ನಟನೆಯಲ್ಲಿ ಬ್ಯುಸಿಯಾದವರು ಓದಿಗೆ ತಿಲಾಂಜಲಿ ಇಡುವವರೇ ಹೆಚ್ಚು. ಮೊದಲೆಲ್ಲ ನಟಿಯರು ಸಿನಿಮಾ ಅವಕಾಶ ಸಿಕ್ಕರೆ ಓದನ್ನೇ ನಿಲ್ಲಿಸಿಬಿಡುತ್ತಿದ್ದರು, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಸಿನಿಮಾ ರಂಗದಲ್ಲಿ ಉತ್ತಮ ಶಿಕ್ಷಿತರು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ಶಿಕ್ಷಿತ ನಟಿಯರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಏಪ್ರಿಲ್ 09) ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಜನಪ್ರಿಯವಾಗಿರುವ ನಟಿ ಅಂಕಿತಾ ಜಯರಾಮ್, ತಮ್ಮ ದ್ವಿತೀಯ ಪಿಯುಸಿ ಅಂಕಗಳ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಯುವರಾಜ’,…

Read More

ಕರ್ನಾಟಕ ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!

ಹುಬ್ಬಳ್ಳಿ, ಏಪ್ರಿಲ್ 10: ಹಜರತ್ ನಿಜಾಮುದ್ದೀನ್‌ ಹಾಗೂ ಯಶವಂತಪುರ ಮಧ್ಯೆ ಸಂಚರಿಸುವ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12650) ರೈಲಿನಲ್ಲಿ ಯುವಕರಿಬ್ಬರು ಬಹಿರಂಗವಾಗಿ ಗಾಂಜಾ ಸೇವನೆ ಮಾಡಿದ್ದಾರೆ. ರಾತ್ರಿ ಪ್ರಯಾಣದ ವೇಳೆ ಸಿಗರೇಟ್‌ನಲ್ಲಿ ಗಾಂಜಾ ಸೇರಿಸಿ ಸೇದುತ್ತಾ ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ್ದಾರೆ. ಸಾರ್ವಜನಿಕರ ಭಯವಿಲ್ಲದೆ ಅಟ್ಟಹಾಸ ಮೆರೆದ ಈ ಯುವಕರ ಕೃತ್ಯವನ್ನು ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ವೈರಲ್ ಆಗಿದೆ. ರೈಲ್ವೆ ಪೊಲೀಸರು ಇವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ….

Read More

Karnataka Weather: ಉತ್ತರ ಒಳನಾಡಿನಲ್ಲಿ ಕೆಂಡದಂಥಾ ಬಿಸಿಲು, ದಕ್ಷಿಣದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 10: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ (Heat Wave) ಮುಂದುವರಿಯಲಿದೆ. ವಿಜಯನಗರ, ಕಲಬುರಗಿ, ಯಾದಗಿರಿ ಮತ್ತು ಹಾವೇರಿಯಲ್ಲಿಯೂ ಬಿಸಿಲಿನ ಝಳ ಹೆಚ್ಚಾಗಲಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಇಳಿಕೆ ಕಂಡುಬರುವುದಿಲ್ಲ. ಬದಲಿಗೆ ಹಂತ ಹಂತವಾಗಿ 2 ಡಿಗ್ರಿ ಸೆಲ್ಶಿಯಸ್​ನಿಂದ 3 ಡಿಗ್ರಿ ಸೆಲ್ಶಿಯಸ್ ವರೆಗೆ…

Read More

ಮಗ ದುಲ್ಕರ್ ನನಗೆ ಮೋಸ ಮಾಡಿದ್ದಾನೆ: ಸೂಪರ್ ಸ್ಟಾರ್ ಮಮ್ಮುಟಿ ಅಸಮಾಧಾನ

ಭಾರತ ಚಿತ್ರರಂಗದಲ್ಲಿ (Indian Cinema) ಹಲವಾರು ಸೂಪರ್ ಸ್ಟಾರ್ ನಟರುಗಳಿದ್ದಾರೆ ಆದರೆ ಎಲ್ಲರಿಗಿಂತಲೂ ಭಿನ್ನ ಮತ್ತು ವರ್ಸಟೈಲ್ ಸೂಪರ್ ಸ್ಟಾರ್ ಮಲಯಾಳಂನ ಮಮ್ಮುಟಿ. 74 ವರ್ಷ ವಯಸ್ಸಿನಲ್ಲಿ ಅವರು ವರ್ಷಕ್ಕೆ ಮೂರು-ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದೂ ಒಂದಕ್ಕಿಂತಲೂ ಒಂದು ಭಿನ್ನ ರೀತಿಯ ಪಾತ್ರಗಳು, ಪ್ರಯೋಗಾತ್ಮಕ ಸಿನಿಮಾಗಳು. ಸೀರಿಯಲ್ ಕಿಲ್ಲರ್, ಸಲಿಂಗಿ, ರಾಕ್ಷಸ, ಮಗಳಿಗಾಗಿ ಪುರುಷ ಲೈಂಗಿಕ ಸಂಗಾತಿ ಹುಡುಕುವ ತಂದೆ ಹೀಗೆ ಒಂದಕ್ಕಿಂತಲೂ ಒಂದು ಭಿನ್ನ ಮತ್ತು ಇತರೆ ಸ್ಟಾರ್ ನಟರು ಕತೆ ಕೇಳಲು ಸಹ ಒಪ್ಪದಂಥಹಾ…

Read More

‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಡಕಾಯತ್’ ಸಿನಿಮಾದಲ್ಲಿ ಟಾಲಿವುಡ್‌ನ ಯುವ ಮತ್ತು ಪ್ರತಿಭಾನ್ವಿತ ನಾಯಕ ಅಡಿವಿ ಶೇಷ್ ನಟಿಸಿದ್ದಾರೆ. ಶನಿಲ್ ಡಿಯೋ ನಿರ್ದೇಶನದ ಈ ಲವ್ ಮತ್ತು ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಮೃಣಾಲ್ ಠಾಕೂರ್ ನಾಯಕಿ. ಬಾಲಿವುಡ್ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೂಡ ಈ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಶಕ್ತಿಶಾಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಇಂದು (ಏಪ್ರಿಲ್ 10) ರಿಲೀಸ್ ಆಗಿದೆ. ಈ ಸಿನಿಮಾದ ಆಫರ್ ಹೋಗಿದ್ದು ಮೊದಲು ಯುವ ಹೀರೋಗೆ….

Read More