ಇವಿಎಂನಲ್ಲಿ ಭದ್ರವಾಯ್ತು ಮಿನಿ ಕದನದ ಅಭ್ಯರ್ಥಿಗಳ ಭವಿಷ್ಯ! ದಾವಣಗೆರೆ ದಕ್ಷಿಣದಲ್ಲಿ ಗೆಲ್ಲೋದ್ಯಾರು? ಬಾಗಲ‘ಕೋಟೆ’ ಯಾರಿಗೆ?
ಬೆಂಗಳೂರು, ಏಪ್ರಿಲ್ 10: ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka Bypolls 2026) ಮತದಾನ ಗುರುವಾರ ಮುಕ್ತಾಯಗೊಂಡಿದೆ. ಕಳೆದ 15 ದಿನಗಳಿಂದ ನಡೆದ ಅಬ್ಬರದ ಪ್ರಚಾರಕ್ಕೆ ತೆರೆಬಿದ್ದಿದ್ದು, ಮತದಾನವೂ ಮುಗಿದಿದೆ. ಮತದಾರ ಪ್ರಭು ತನ್ನ ನಿರ್ಧಾರವನ್ನು ಮತಯಂತ್ರದಲ್ಲಿ ದಾಖಲಿಸಿದ್ದಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಹುತೇಕ ಸಮಾನ ಪ್ರಮಾಣದ ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮತದಾನದ ಶೇಕಡಾವಾರು ವಿವರ ದಾವಣಗೆರೆ ದಕ್ಷಿಣ: ಶೇ 68.55 ರಷ್ಟು ಮತದಾನ ದಾಖಲಾಗಿದೆ. ಬಾಗಲಕೋಟೆ:…