nagaraj11081993

VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ – Kannada News | Dhruv Shorey’s Record: 5 Consecutive Centuries in Vijay Hazare Trophy!

ವಿಜಯ್ ಹಜಾರೆ ಟ್ರೋಫಿಯ (Vijay Hazare Trophy) ಎರಡನೇ ಪಂದ್ಯ ಇಂದು ನಡೆಯಿತು. ಮೊದಲ ಪಂದ್ಯದಂದು ಮೊದಲ ದಿನವೇ ಬರೋಬ್ಬರಿ 21 ಶತಕಗಳು ದಾಖಲಾಗಿದ್ದವು. ಇದೀಗ ಎರಡನೇ ದಿನದಲ್ಲೂ ಹಲವು ಆಟಗಾರರು ಶತಕದ ಸಾಧನೆ ಮಾಡಿದರು. ಅವರಲ್ಲಿ ಒಬ್ಬರು ಧ್ರುವ್ ಶೋರೆ. ಈ ಟೂರ್ನಿಯಲ್ಲಿ ವಿದರ್ಭ ತಂಡದ ಪರ ಆಡುತ್ತಿರುವ ಧ್ರುವ್ ಶೋರೆ (Dhruv Shorey) ರಾಜ್‌ಕೋಟ್‌ನಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು….

Read More

ಬಿರಿಯಾನಿಯೊಂದಿಗೆ ತಿರುಪರನಕುಂದ್ರಂ ಬೆಟ್ಟ ಹತ್ತಲು ಯತ್ನಿಸಿದ ಮುಸ್ಲಿಮರು; ಪೊಲೀಸರಿಂದ ತಡೆ – Kannada News | Police Stopped 60 Kerala Muslims for Attempting to Visit Thiruparankundram Hill With Biryani

ತಿರುಪರನಕುಂದ್ರಂ, ಡಿಸೆಂಬರ್ 26: ಬಿರಿಯಾನಿಯೊಂದಿಗೆ ದರ್ಗಾಕ್ಕೆ ಭೇಟಿ ನೀಡಲು ತಿರುಪರನಕುಂದ್ರಂ ಬೆಟ್ಟವನ್ನು ಹತ್ತಲು ಪ್ರಯತ್ನಿಸುತ್ತಿದ್ದ ಕೇರಳದ (Kerala) 60ಕ್ಕೂ ಹೆಚ್ಚು ಮುಸ್ಲಿಮರನ್ನು ಪೊಲೀಸರು ತಡೆದಿದ್ದಾರೆ. ಬೆಟ್ಟದ ಮೇಲೆ ಮಾಂಸಾಹಾರಿ ಆಹಾರವನ್ನು ಸೇವಿಸುವುದನ್ನು ನಿಷೇಧಿಸಲಾಗಿದೆ ಎಂಬ ಕಾರಣಕ್ಕೆ ಮುಸ್ಲಿಮರನ್ನು ತಡೆಯಲಾಗಿದೆ. ಇದು ಆ ಪ್ರದೇಶದಲ್ಲಿ ಸಾಕಷ್ಟು ಗದ್ದಲಕ್ಕೆ ಕಾರಣವಾಯಿತು. ತಿರುಪರನಕುಂದ್ರಂ ಬೆಟ್ಟದ ಸಿಕಂದರ್ ದರ್ಗಾದಲ್ಲಿ ಜನವರಿ 6, 2026ರಂದು ಚಂದನಕುಡು ಕಂದೂರಿ ಉತ್ಸವ ನಡೆಯಲಿದೆ. ಇದರ ನಂತರ, ಡಿಸೆಂಬರ್ 21, 2025ರಂದು ಧ್ವಜಾರೋಹಣದೊಂದಿಗೆ ಚಂದನಕುಡು ಉತ್ಸವ ಪ್ರಾರಂಭವಾಯಿತು. ಈ…

Read More

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ.. – Kannada News | 45 Kannada Movie producer Ramesh Reddy talks about Box Office Collection and Piracy

ರಾಜ್​ ಬಿ. ಶೆಟ್ಟಿ, ಉಪೇಂದ್ರ, ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ (45 Kannada Movie) ರಿಲೀಸ್ ಆಗಿದೆ. ಈ ಚಿತ್ರದ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಸಿನಿಮಾದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ (Ramesh Reddy) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಕಲೆಕ್ಷನ್ ಸೂಪರ್ ಆಗಿದೆ. ಅದರ ಬಗ್ಗೆ ನನಗೆ ಖುಷಿ ಇದೆ. ನಾನು ಖಂಡಿತಾ ಸೇಫ್ ಆಗುತ್ತೇನೆ. ನಿನ್ನೆ ಒಂದು ಶೋ…

Read More

ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ – Kannada News | Devanahalli: Missing Student Found Dead, Family Suspects Murder Linked to Love Affair

ದೇವನಹಳ್ಳಿ, ಡಿಸೆಂಬರ್​ 26: ಆತನದು ಹದಿಹರಿಯದ ವಯಸ್ಸು. ಈಗಷ್ಟೇ ಕಾಲೇಜು ಮೆಟ್ಟಿಲೇರಿದ್ದ. ಪ್ರಥಮ ಪಿಯುಸಿ ಓದುತ್ತಾ, ಜಾಲಿಯಾಗೆ ಊರ ತುಂಬಾ ಓಡಾಡುತ್ತಿದ್ದ. ಡಿಸೆಂಬರ್​ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದವನು 10 ದಿನಗಳ ಬಳಿಕ ರಸ್ತೆ ಮೋರಿಯಲ್ಲಿ ಶವವಾಗಿ (Deadbody) ಪತ್ತೆಯಾಗಿದ್ದಾನೆ. ಪ್ರೀತಿ (Love) ವಿಚಾರಕ್ಕೆ ಯುವತಿ ಕಡೆಯವರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ. ನಡೆದದ್ದೇನು? ಅಂದಹಾಗೆ ರಸ್ತೆ ಬದಿಯ ಮೋರಿಯಲ್ಲಿ ಬಿದ್ದು ದುರಂತ ಅಂತ್ಯ…

Read More

VHT 2025-26: ಕೇವಲ ಬೌಂಡರಿಗಳಿಂದಲೇ ಅರ್ಧಶತಕ ಚಚ್ಚಿದ ವಿರಾಟ್ ಕೊಹ್ಲಿ

ಸುಮಾರು 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ಟೀಂ ಇಂಡಿಯಾದ ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಅತ್ಯುತ್ತಮ ಫಾರ್ಮ್​ ಅನ್ನು ಮುಂದುವರೆಸಿದ್ದಾರೆ. ದೆಹಲಿ ತಂಡದ ಪರ ಆಡುತ್ತಿರುವ ವಿರಾಟ್ ತಮ್ಮ ಮೊದಲ ಪಂದ್ಯದಲ್ಲೇ ಅದ್ಭುತ ಶತಕ ಬಾರಿಸಿದರೆ, ಪಂದ್ಯಾವಳಿಯ ತಮ್ಮ ಎರಡನೇ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಎರಡನೇ ಪಂದ್ಯದಲ್ಲಿ ದೆಹಲಿ ತಂಡವು ಡಿಸೆಂಬರ್ 26 ರ…

Read More

Vaibhav Suryavanshi: ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ – Kannada News | Bal Puraskar for Vaibhav Suryavanshi: 14 Year Old Cricket Star’s Record Journey

ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್‌ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿ ತಮ್ಮ ವೃತ್ತಿಜೀವನದ ಆರಂಭದ ಹಂತದಲ್ಲೇ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಕಿರಿಯನೆಂಬ ದಾಖಲೆಯಿಂದ ಹಿಡಿದು, ಇಂಗ್ಲೆಂಡ್‌, ಆಸ್ಟ್ರೇಲಿಯಾದಲ್ಲೂ ವೈಭವ್ ಆರ್ಭಟ ಜೋರಿತ್ತು. ಸಿಕ್ಕ ಅವಕಾಶಗಳನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ವೈಭವ್​ಗೆ ಇದೀಗ ಭಾರತ ಸರ್ಕಾರದಿಂದಲೂ ಮನ್ನಣೆ ಸಿಕ್ಕಿದೆ. ವೈಭವ್ ಸೂರ್ಯವಂಶಿ ಅವರಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು, ರಾಷ್ಟ್ರಪತಿ ದ್ರೌಪದಿ…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು – Kannada News | Karnataka High Court Grants interim bail to BJP MLA Byrathi Basavaraj In Rowdy Sheeter Biklu Shiva Murder Case

ಬೆಂಗಳೂರು, (ಡಿಸೆಂಬರ್ 26): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrathi Basavaraj) ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು (ಡಿಸೆಂಬರ್ 26) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್​​ ಪೀಠ, ಬೈರತಿ ಬಸವರಾಜ್​​ಗೆ ಮಧ್ಯಂತ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಿರೀಕ್ಷಣಾ ಜಾಮೀನು…

Read More

ಅಶ್ವಿನಿ ಪುನೀತ್ ರಾಜ್​​ಕುಮಾರ್ ಮೆಚ್ಚಿದ ‘ಪ್ರಣಯ ಪಯಣ’ ಗೀತೆ; ಡಿ.27ಕ್ಕೆ ಬಿಡುಗಡೆ – Kannada News | Pranaya Payana new Kannada Music Video to be released on PRK Audio

ಹೊಸ ಪ್ರತಿಭೆಗಳಿಗೆ ಪುನೀತ್ ರಾಜ್​​ಕುಮಾರ್ ಅವರು ಯಾವಾಗಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​​ಕುಮಾರ್ (Ashwini Puneeth Rajkumar) ಅವರು ಮಾಡುತ್ತಿದ್ದಾರೆ. ‘ಪಿಆರ್​ಕೆ ಪ್ರೊಡಕ್ಷನ್ಸ್’ ಮತ್ತು ‘ಪಿಆರ್​ಕೆ ಆಡಿಯೋ’ ಕಂಪನಿ ಮೂಲಕ ಹೊಸಬರ ಬೆನ್ನುತಟ್ಟುತ್ತಿದ್ದಾರೆ. ಅದಕ್ಕೆ ಹೊಸ ಉದಾಹರಣೆ ಇಲ್ಲಿದೆ. ಅರ್ಜುನ್ ಕಿಶೋರ್ ಚಂದ್ರ ಅವರು ಸಿದ್ಧಪಡಿಸಿದ ಹೊಸ ವಿಡಿಯೋ ಸಾಂಗ್​ ಅನ್ನು ‘ಪಿಆರ್​ಕೆ ಆಡಿಯೋ’ (PRK Audio) ಮೂಲಕ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ. ಅರ್ಜುನ್ ಕಿಶೋರ್…

Read More

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ – Kannada News | 8 people killed more than 20 injured as massive blast hits mosque during Friday prayers in Syria

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು…

Read More

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ….

Read More