All posts by nagaraj11081993

ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳು ಪ್ರತಿದಿನ ನ್ಯೂಸ್ ಪೇಪರ್ ಓದುವುದು ಕಡ್ಡಾಯ – Kannada News | Uttar Pradesh government mandates newspaper reading in schools to boost learning and reduce screen time

ನವದೆಹಲಿ, ಡಿಸೆಂಬರ್ 26: ಉತ್ತರ ಪ್ರದೇಶ (Uttar Pradesh) ಸರ್ಕಾರವು ಸರ್ಕಾರಿ ಸ್ವಾಮ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿದೆ. ಮಕ್ಕಳಲ್ಲಿ ನಿಯಮಿತ ಓದುವ ಹವ್ಯಾಸವನ್ನು ಬೆಳೆಸಲು, ಅತಿಯಾದ ಮೊಬೈಲ್ ಸ್ಕ್ರೀನಿಂಗ್ ಸಮಯವನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳು ದೈನಂದಿನ ಶಾಲಾ ಚಟುವಟಿಕೆಗಳ ಅತ್ಯಗತ್ಯ ಭಾಗವಾಗಬೇಕು ಎಂದು ಆದೇಶಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಓದುವ ಸಂಸ್ಕೃತಿಯನ್ನು ಉತ್ತೇಜಿಸುವ ಮಾರ್ಗಗಳ ಮೇಲೆ ಕೇಂದ್ರೀಕರಿಸಿದ ನವೆಂಬರ್‌ನಲ್ಲಿ ಹೊರಡಿಸಲಾದ ಹಿಂದಿನ ಆದೇಶವನ್ನು ಈ ನಿರ್ದೇಶನವು ಅನುಸರಿಸುತ್ತದೆ.

ಸರ್ಕಾರದ ಆದೇಶದ ಪ್ರಕಾರ, ಶಾಲೆಗಳು ಬೆಳಗಿನ ಸಭೆಯಲ್ಲಿ ಪತ್ರಿಕೆ ಓದುವಿಕೆಗಾಗಿ 10 ನಿಮಿಷಗಳ ಸಮಯವನ್ನು ನಿಗದಿಪಡಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸಂಪಾದಕೀಯ ಲೇಖನಗಳು ಮತ್ತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮತ್ತು ಕ್ರೀಡಾಕೂಟಗಳಿಗೆ ಸಂಬಂಧಿಸಿದ ಪ್ರಮುಖ ಸಕಾರಾತ್ಮಕ ಸುದ್ದಿಗಳಿಂದ ಪ್ರಮುಖ ಅಂಶಗಳನ್ನು ಓದಬೇಕಾಗುತ್ತದೆ.

ಇದನ್ನೂ ಓದಿ: ಮೂರು ವರ್ಷಗಳಲ್ಲಿ ಮೂರು ಮದುವೆಯಾಗಿ ಜೈಲುಪಾಲಾದ ವ್ಯಕ್ತಿ

ವಿದ್ಯಾರ್ಥಿಗಳು ಡಿಜಿಟಲ್ ಸ್ವರೂಪಗಳ ಬದಲಿಗೆ ನಿಜವಾದ ನ್ಯೂಸ್ ಪೇಪರ್​​ಗಳನ್ನು ಬಳಸಬೇಕು. ಏಕೆಂದರೆ ಮುದ್ರಿತ ಪತ್ರಿಕೆಗಳನ್ನು ಓದುವುದು ಗಮನ ಮತ್ತು ಏಕಾಗ್ರತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂಬ ಉದ್ದೇಶ ಸರ್ಕಾರದ್ದು.

ನಿಯಮಿತ ಪತ್ರಿಕೆ ಓದುವಿಕೆಯು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಏಕೆಂದರೆ, ಇದು ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ತಿಳುವಳಿಕೆಯನ್ನು ಬಲಪಡಿಸುತ್ತದೆ, ಇದು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹ ಮುಖ್ಯವಾಗಿದೆ. ಇದಲ್ಲದೆ, ಶಬ್ದಕೋಶ, ಭಾಷಾ ಶೈಲಿ ಮತ್ತು ಬರವಣಿಗೆಯ ಕೌಶಲ್ಯಗಳನ್ನು ಸಹ ಸುಧಾರಿಸಲಾಗುತ್ತದೆ.

ಇದನ್ನೂ ಓದಿ: Train Fare Hike: ಇಂದಿನಿಂದ ರೈಲು ಪ್ರಯಾಣ ದುಬಾರಿ, ಹೊಸ ಟಿಕೆಟ್ ದರಗಳ ಕುರಿತು ಇಲ್ಲಿದೆ ಮಾಹಿತಿ

ಸುಡೊಕು, ಕ್ರಾಸ್‌ವರ್ಡ್‌ಗಳು ಮತ್ತು ನ್ಯೂಸ್​ ಪೇಪರ್​​ಗಳಲ್ಲಿನ ಪದ ಆಟಗಳು ತಾರ್ಕಿಕ ಚಿಂತನೆ ಮತ್ತು ಸಮಸ್ಯೆ ಪರಿಹಾರಕ್ಕಾಗಿ ಮೆದುಳಿಗೆ ತರಬೇತಿ ನೀಡುತ್ತವೆ ಎಂದು ಆದೇಶವು ತಿಳಿಸಿದೆ. 6ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ, ಪ್ರಮುಖ ಸುದ್ದಿ ತುಣುಕುಗಳೊಂದಿಗೆ ಸ್ಕ್ರ್ಯಾಪ್‌ಬುಕ್‌ಗಳನ್ನು ನಿರ್ವಹಿಸುವುದು, ಸಂಪಾದಕೀಯಗಳ ಕುರಿತು ಸಾಪ್ತಾಹಿಕ ಚರ್ಚೆಗಳಲ್ಲಿ ಭಾಗವಹಿಸುವುದು ಮತ್ತು ಸುದ್ದಿ ವರದಿಗಳನ್ನು ವಿಶ್ಲೇಷಿಸುವುದನ್ನು ಕಡ್ಡಾಯಗೊಳಿಸುವಂತೆ ಶಾಲೆಗಳಿಗೆ ನಿರ್ದೇಶಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ – Kannada News | Mysuru balloon gas cylinder Blast: Death roll rises to 2 as Woman succumbs to injuries

ಮೈಸೂರು, (ಡಿಸೆಂಬರ್ 26): ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ (Mysuru balloon gas cylinder Blast) ಗಾಯಗೊಂಡಿದ್ದ ಮಹಿಳೆ (Woman) ಸಾವನ್ನಪ್ಪಿದ್ದಾರೆ. ನಿನ್ನೆ(ಡಿಸೆಂಬರ್ 25) ಅರಮನೆ (Mysuru Palace) ಜಯಮಾರ್ತಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಸ್ಫೋಟದ ತೀವ್ರತೆಗೆ ಉತ್ತರ ಪ್ರದೇಶ ಮೂಲದ 40 ವರ್ಷದ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ ಗಂಭೀರಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು K.R.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿಸೆಂಬರ್ 26) ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೆ ಏರಿಯಾಗಿದೆ.

ನಿನ್ನೆ(ಡಿಸೆಂಬರ್ 25) ಅರಮನೆ (Mysuru Palace) ಜಯಮಾರ್ತಂಡ ದ್ವಾರದ ಬಳಿ ಉತ್ತರ ಪ್ರದೇಶ ಮೂಲದ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಪರಿಣಾಮ 40 ವರ್ಷದ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರಿಗೆ ಗಾಯಗಳಾಗಿದ್ದವು. ಅದರಲ್ಲೂ ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ ಎನ್ನುವರಿಗೆ ಗಂಭೀರ ಗಾಯಗಳಾಗಿದ್ದವು.

ಇದನ್ನೂ ಓದಿ: ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಪ್ರಕರಣ ಸುತ್ತ ಅನುಮಾನದ ಹುತ್ತ

ಇನ್ನು ಈ ಪ್ರಕರಣದಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿವೆ.  ಯಾಕಂದ್ರೆ ಮೃತ ಸಲೀಂ ಕಳೆದ 15 ದಿನ ಹಿಂದಷ್ಟೇ ಮೈಸೂರಿಗೆ ಬಲೂನ್ ಮಾರಲು ಬಂದಿದ್ದ. ಆದ್ರೆ, ಆತ ಮೈಸೂರಿನ ಲಾಡ್ಜ್​​ವೊಂದರಲ್ಲಿ ತಂಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಓರ್ವ ಬಲೂನ್ ಮಾರುವವ ಕಳೆದ 15 ದಿನಗಳಿಂದ ಲಾಡ್ಜ್​​ ನಲ್ಲಿ ಇರುವಷ್ಟು ಆರ್ಥಿಕವಾಗಿ ಸಬಲನಾಗಿರುತ್ತಾನೆಯೇ ಎನ್ನುವ ಪ್ರಶ್ನೆ ಉದ್ಭವವಾಗುತ್ತೆ. ಬಲೂನ್​​ ಮಾರಾಟದಿಂದ ಹೊಟ್ಟೆ ತುಂಬಿದರೆ ಸಾಕು ಎನ್ನುತ್ತಾರೆ. ಇಂತದರಲ್ಲಿ ಈ ಸಲೀಂ ಲಾಡ್ಜ್​​ನಲ್ಲಿ ತಂಗಿ ಬಲೂನ್ ವ್ಯಾಪಾರ ಮಾಡುತ್ತಿದ್ದ ಎನ್ನುವುದರ   ಹಿಂದೆ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ಪೊಲೀಸರು ಮಾತ್ರವಲ್ಲದೇ ಎನ್​ಐಎ ಸಹ ಈ ಕೇಸಿನಲ್ಲಿ ಪ್ರವೇಶ ಮಾಡಿದ್ದು, ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:49 pm, Fri, 26 December 25

Source link

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ – Kannada News | Mithun Chakraborty says he is acting with Shah Rukh Khan Shiva Rajkumar Rajinikanth in Jailer 2

ಮಲ್ಟಿಸ್ಟಾರರ್ ಸಿನಿಮಾಗಳ ಬಗ್ಗೆ ಪ್ರೇಕ್ಷಕರು ಯಾವಾಗಲೂ ಒಲವು ತೋರಿಸುತ್ತಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಿದ ಬಳಿಕ ಈ ಟ್ರೆಂಡ್ ಜಾಸ್ತಿ ಆಗಿದೆ. ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ಒಟ್ಟಿಗೆ ನಟಿಸುತ್ತಿದ್ದಾರೆ. ಅಚ್ಚರಿ ಎಂದರೆ, ಈಗ ಒಂದು ಬ್ರೇಕಿಂಗ್ ನ್ಯೂಸ್ ಕೇಳಿಬಂದಿದೆ. ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ರಜನಿಕಾಂತ್, ಶಿವರಾಜ್​​ಕುಮಾರ್ ಮುಂತಾದವರು ನಟಿಸುತ್ತಿದ್ದಾರೆ. ಈ ಬಗ್ಗೆ ಬಾಲಿವುಡ್​ನ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರು ಬಾಯ್ಬಿಟ್ಟಿದ್ದಾರೆ. ಯಾವುದು ಆ ಸಿನಿಮಾ ‘ಜೈಲರ್ 2’! ಈ ಚಿತ್ರದಲ್ಲಿ ರಜನಿಕಾಂತ್, ಶಿವಣ್ಣ ನಟಿಸುತ್ತಿರುವುದು ಗೊತ್ತೇ ಇದೆ. ಆದರೆ ಶಾರುಖ್ ಖಾನ್ (Shah Rukh Khan) ಕೂಡ ಪಾತ್ರವರ್ಗದಲ್ಲಿ ಇದ್ದಾರೆ ಎಂಬ ಗುಟ್ಟನ್ನು ಮಿಥುನ್ ಚಕ್ರವರ್ತಿ ಈಗ ಬಿಟ್ಟುಕೊಟ್ಟಿದ್ದಾರೆ.

ಇತ್ತೀಚೆಗೆ ನಟ ಮಿಥುನ್ ಚಕ್ರವರ್ತಿ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅದರಲ್ಲಿ ಅವರು ‘ಜೈಲರ್ 2’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಮುಂದಿನ ಸಿನಿಮಾ ಜೈಲರ್ 2. ಅದರಲ್ಲಿ ಎಲ್ಲರೂ ನನ್ನ ಪಾತ್ರದ ವಿರುದ್ಧವಾಗಿ ಇರುತ್ತಾರೆ. ರಜನಿಕಾಂತ್, ಮೋಹನ್​ಲಾಲ್, ಶಾರುಖ್ ಖಾನ್, ರಮ್ಯಾ ಕೃಷ್ಣನ್, ಶಿವರಾಜ್​​ಕುಮಾರ್ ಸೇರಿದಂತೆ ಎಲ್ಲರೂ ನನ್ನ ವಿರುದ್ಧ ಇರುತ್ತಾರೆ’ ಎಂದು ಮಿಥುನ್ ಚಕ್ರವರ್ತಿ ಹೇಳಿದ್ದಾರೆ.

ಈ ಹೇಳಿಕೆ ನೀಡುವ ಮೂಲಕ ತಾವು ‘ಜೈಲರ್ 2’ ಸಿನಿಮಾದಲ್ಲಿ ವಿಲನ್ ಎಂಬುದನ್ನು ಮಿಥುನ್ ಚಕ್ರವರ್ತಿ ಬಹಿರಂಗಪಡಿಸಿದ್ದಾರೆ. ಅಲ್ಲದೇ, ಅತಿಥಿ ಪಾತ್ರದಲ್ಲಿ ಶಾರುಖ್ ಖಾನ್ ಕೂಡ ನಟಿಸುತ್ತಿದ್ದಾರೆ ಎಂಬ ರಹಸ್ಯವನ್ನು ಅವರು ಬಾಯಿಬಿಟ್ಟಿದ್ದಾರೆ. ಈವರೆಗೂ ಚಿತ್ರತಂಡದವರು ಶಾರುಖ್ ಖಾನ್ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಈಗ ವಿಷಯ ಲೀಕ್ ಆದಂತೆ ಆಗಿದೆ.

ಶಾರುಖ್ ಖಾನ್, ರಜನಿಕಾಂತ್, ಶಿವರಾಜ್​​ಕುಮಾರ್, ಮೋಹನ್​ಲಾಲ್ ಮುಂತಾದವರು ಒಟ್ಟಿಗೆ ನಟಿಸುತ್ತಿರುವುದರಿಂದ ‘ಜೈಲರ್ 2’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಇದ್ದ ನಿರೀಕ್ಷೆ ಜಾಸ್ತಿ ಆಗಿದೆ. ಶಾರುಖ್ ಖಾನ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ. ಅದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮಧ್ಯ ಬೆರಳು ತೋರಿಸಿದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್

‘ಸನ್ ಪಿಕ್ಚರ್ಸ್’ ಮೂಲಕ ‘ಜೈಲರ್ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. 2026ರ ಜೂನ್ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. 2023ರಲ್ಲಿ ತೆರೆಕಂಡ ‘ಜೈಲರ್’ ಸೂಪರ್ ಹಿಟ್ ಆಗಿತ್ತು. ಅದರ ಮುಂದುವರಿದ ಭಾಗವಾಗಿ ‘ಜೈಲರ್ 2’ ನಿರ್ಮಾಣ ಆಗುತ್ತಿದೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಮೇಲಿನ ಹೈಪ್ ಹೆಚ್ಚುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 4:49 pm, Fri, 26 December 25

Source link

VHT 2025-26: ಶತಕದ ಬಳಿಕ ಸೊನ್ನೆ; ಎರಡನೇ ಪಂದ್ಯದಲ್ಲಿ ಮುಗ್ಗರಿಸಿದ ರೋಹಿತ್ ಶರ್ಮಾ – Kannada News | Rohit Sharma’s Vijay Hazare Trophy: From Century Hero to Golden Duck

7 ವರ್ಷಗಳ ಬಳಿಕ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಕಣಕ್ಕಿಳಿದಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದ್ದರು. ಸಿಕ್ಕಿಂ ವಿರುದ್ಧದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ರೋಹಿತ್ 155 ರನ್ ಬಾರಿಸಿದ್ದರು. ಪರಿಣಾಮವಾಗಿ, ಎರಡನೇ ಪಂದ್ಯದಲ್ಲಿ ರೋಹಿತ್ ಅವರಿಂದ ಇದೇ ರೀತಿಯ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ನಿರಾಸೆ ಮೂಡಿಸಿದ ರೋಹಿತ್, ಉತ್ತರಾಖಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಔಟಾದರು. ಅಂದರೆ ಈ ಪಂದ್ಯದಲ್ಲಿ ರೋಹಿತ್​ ಖಾತೆ ತೆರೆಯದೆಯೇ ಮೊದಲ ಎಸೆತದಲ್ಲೇ ಔಟಾದರು.

ಡಿಸೆಂಬರ್ 24 ರಂದು ಜೈಪುರದಲ್ಲಿ ಪ್ರಾರಂಭವಾದ ಈ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸಿ, 94 ಎಸೆತಗಳಲ್ಲಿ 155 ರನ್ ಸಿಡಿಸಿದ್ದರು. ರೋಹಿತ್ ತಮ್ಮ ಇನ್ನಿಂಗ್ಸ್‌ನಲ್ಲಿ 18 ಬೌಂಡರಿ ಮತ್ತು ಒಂಬತ್ತು ಸಿಕ್ಸರ್‌ಗಳನ್ನು ಬಾರಿಸಿದ್ದರು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯವನ್ನು ಸುಮಾರು 20,000 ಪ್ರೇಕ್ಷಕರು ವೀಕ್ಷಿಸಿದ್ದರು.

ಸೊನ್ನೆ ಸುತ್ತಿದ ರೋಹಿತ್ ಶರ್ಮಾ

ಹೀಗಾಗಿ ಎರಡನೇ ಪಂದ್ಯದಲ್ಲಿಯೂ ರೋಹಿತ್ ಅಬ್ಬರಿಸುವುದನ್ನು ನೋಡಲು ಸಾವಿರಾರು ಅಭಿಮಾನಿಗಳು ಸವಾಯಿ ಮಾನ್ಸಿಂಗ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಅದರಂತೆ ಮುಂಬೈ ತಂಡ ಕೂಡ ಮೊದಲು ಬ್ಯಾಟಿಂಗ್ ಆರಂಭಿಸಿತು. ಆದರೆ ರೋಹಿತ್ ಬ್ಯಾಟಿಂಗ್‌ ನೋಡಲು ಕಾದು ಕುಳಿತಿದ್ದ ಅಭಿಮಾನಿಗಳ ಸಂತೋಷ ಕೇವಲ ಆರು ಎಸೆತಗಳಲ್ಲಿ ಮಾಯವಾಯಿತು. ಇನ್ನಿಂಗ್ಸ್‌ನ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಸ್ಟ್ರೈಕ್‌ಗೆ ಬಂದ ರೋಹಿತ್ ಶರ್ಮಾ, ತಮ್ಮ ಮೊದಲ ಎಸೆತದಲ್ಲೇ ಖಾತೆ ತೆರೆಯದೆಯೇ ವಿಕೆಟ್ ಒಪ್ಪಿಸಿದರು. ಉತ್ತರಾಖಂಡ ವೇಗಿ ದೇವೇಂದ್ರ ಬೋರಾ ಅವರ ಎಸೆತದಲ್ಲಿ ರೋಹಿತ್ ಕ್ಯಾಚಿತ್ತು ನಿರ್ಗಮಿಸಿದರು.

ರೋಹಿತ್, ಕೊಹ್ಲಿಯ ಶತಕಗಳ ಅಬ್ಬರ; ಬಿಸಿಸಿಐ ವಿರುದ್ಧ ಸಿಡಿದೆದ್ದ ಅಭಿಮಾನಿಗಳು

331 ರನ್ ಕಲೆಹಾಕಿದ ಮುಂಬೈ

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಫಲರಾದರೂ, ತಂಡದ ಉಳಿದ ಆಟಗಾರರು ಉತ್ತಮ ಪ್ರದರ್ಶನ ನೀಡಿದರು. ಇದರ ಪರಿಣಾಮದಿಂದಾಗಿ ಮುಂಬೈ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 331 ರನ್ ಕಲೆಹಾಕಿತು. ತಂಡದ ಪರ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹಾರ್ದಿಕ್ ತಮೋರೆ 93 ರನ್​ಗಳ ಇನ್ನಿಂಗ್ಸ್ ಆಡಿದರೆ, ಸಹೋದರರಾದ ಸರ್ಫರಾಜ್ ಖಾನ್ ಹಾಗೂ ಮುಶೀರ್ ಖಾನ್ ತಲಾ 55 ರನ್​​ಗಳ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ಶಮ್ಸ್ ಮುಲಾನಿ ಕೂಡ 48 ರನ್​ಗಳ ಕಾಣಿಕೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:21 pm, Fri, 26 December 25

Source link

HSL Recruitment 2025: HSLನಲ್ಲಿ 11 ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ತಿಂಗಳಿಗೆ 50,000–2,60,000 ರೂ. ವೇತನ – Kannada News | HSL General Manager Recruitment 2025: Apply Online for 11 Govt Jobs

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 13ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಖಾಲಿ ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (Hindustan Shipyard)
  • ಹುದ್ದೆಗಳ ಸಂಖ್ಯೆ: 11
  • ಉದ್ಯೋಗ ಸ್ಥಳ: ವಿಶಾಖಪಟ್ಟಣಂ – ಆಂಧ್ರಪ್ರದೇಶ
  • ಹುದ್ದೆ ಹೆಸರು: ಜನರಲ್ ಮ್ಯಾನೇಜರ್
  • ಸಂಬಳ: ತಿಂಗಳಿಗೆ 50,000 – 2,60,000 ರೂ.

ಶೈಕ್ಷಣಿಕ ಅರ್ಹತೆ:

ಹಿಂದೂಸ್ತಾನ್ ಶಿಪ್‌ಯಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ICAI, ICWAI, ಡಿಪ್ಲೊಮಾ, BE/ B.Tech, ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ ಹಿಂದೂಸ್ತಾನ್ ಶಿಪ್‌ಯಾರ್ಡ್ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಹಿಂದೂಸ್ತಾನ್ ಶಿಪ್‌ಯಾರ್ಡ್ ಜನರಲ್ ಮ್ಯಾನೇಜರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:16 pm, Fri, 26 December 25

Source link

ಮೊಳಕೆಯೊಡೆದ ಈರುಳ್ಳಿಯನ್ನು ಎಸೆಯುತ್ತಿದ್ದೀರಾ? ಈ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Sprouted Onions: When to Discard & Health Tips

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಈರುಳ್ಳಿ (Onions) ಪ್ರಮುಖ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಸಸ್ಯಾಹಾರಿಗಳಿಂದ ಮಾಂಸಾಹಾರಿಗಳ ವರೆಗೆ ಎಲ್ಲರೂ ಸಹ ಈರುಳ್ಳಿಯನ್ನು ಸೇವನೆ ಮಾಡಿಯೇ ಮಾಡುತ್ತಾರೆ. ಏಕೆಂದರೆ ಈರುಳ್ಳಿ ಇಲ್ಲದೆ, ಭಕ್ಷ್ಯಗಳ ಪರಿಮಳ ಹೆಚ್ಚಾಗಲು ಸಾಧ್ಯವಿಲ್ಲ. ಅದಕ್ಕಾಗಿಯೇ ಮನೆಗಳಲ್ಲಿ ಅವುಗಳನ್ನು ಖಾಲಿಯಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ಅವು ಮೊಳಕೆಯೊಡೆದಾಗ ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಅನುಮಾನ ಮೂಡುತ್ತದೆ. ಕೆಲವರು ಈ ರೀತಿ ಮೊಳಕೆಯೊಡೆದ ಈರುಳ್ಳಿಯನ್ನು ಸೇವನೆ ಮಾಡಬಾರದು ಎಂದು ಹೇಳುತ್ತಾರೆ. ಆದರೆ ಇನ್ನು ಕೆಲವರು ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು ಇದನ್ನು ಸೇವನೆ ಮಾಡುವುದರಿಂದ ಯಾವುದೇ ರೀತಿಯ ತೊಂದರೆ ಇಲ್ಲ ಎನ್ನುತ್ತಾರೆ. ಹಾಗಾದರೆ ಇದು ಒಳ್ಳೆಯದೋ, ಅಲ್ಲವೋ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈರುಳ್ಳಿಗೆ ಬರುವ ಹಸಿರು ಮೊಳಕೆ ವಿಷಕಾರಿಯಲ್ಲ. ವಾಸ್ತವವದಲ್ಲಿ, ಈರುಳ್ಳಿ ಹಳೆಯದಾದಾಗ ಮತ್ತು ಸ್ವಲ್ಪ ತೇವಾಂಶ ಪಡೆದುಕೊಂಡಾಗ ಅದು ಮತ್ತೆ ಮೊಳಕೆಯೊಡೆಯಲು ಪ್ರಾರಂಭಿಸುತ್ತದೆ. ದಿನಗಳು ಕಳೆದಂತೆ, ಅದರಿಂದ ಹಸಿರು ಎಲೆ ಹೊರಹೊಮ್ಮುತ್ತದೆ. ಈ ಎಲೆಯ ಸೇವನೆ ಮಾಡುವುದು ಒಳ್ಳೆಯದು. ಭಯಪಡುವ ಯಾವುದೇ ಅವಶ್ಯಕತೆ ಇಲ್ಲ. ಆದರೆ ಈರುಳ್ಳಿ ತಿನ್ನಲು ಸುರಕ್ಷಿತವಾಗಿದ್ದರೂ, ಅವುಗಳ ಗುಣಲಕ್ಷಣಗಳಲ್ಲಿ ಕೆಲವು ಬದಲಾವಣೆಗಳು ಸಂಭವಿಸುತ್ತವೆ. ಈರುಳ್ಳಿ ಮೊಳಕೆಯೊಡೆದಾಗ, ಒಳಭಾಗವು ಸ್ವಲ್ಪ ಮೃದು ಅಥವಾ ಕೋಮಲವಾಗುತ್ತದೆ.

ಇದನ್ನೂ ಓದಿ: ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ

ಇನ್ನು ಈ ಈರುಳ್ಳಿ ಸಾಮಾನ್ಯ ಈರುಳ್ಳಿಯಂತೆ ರುಚಿ ಕೊಡದಿರಬಹುದು. ಸ್ವಲ್ಪ ಕಹಿ ರುಚಿಯನ್ನು ಹೊಂದಿರಬಹುದು. ನೀವು ಅಡುಗೆ ಮಾಡುವಾಗ ಮೊಳಕೆಗಳನ್ನು ಕತ್ತರಿಸಿ ಸಲಾಡ್‌ ಅಥವಾ ಇನ್ನಿತರ ಆಹಾರಗಳಲ್ಲಿ ಬಳಸಬಹುದು. ಏಕೆಂದರೆ ಅವು ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವುದರಿಂದ ಇದರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಆದರೆ ಮೊಳಕೆಯೊಡೆದ ಈರುಳ್ಳಿಯನ್ನು ಒತ್ತಿದಾಗ ತುಂಬಾ ಮೃದುವಾಗಿದ್ದರೆ ಅಥವಾ ತುಂಬಾ ಒಣಗಿದ್ದರೆ ಅಥವಾ ಅದರ ಮೇಲೆ ಕಪ್ಪು ಕಲೆಗಳಿದ್ದರೆ, ಅದನ್ನು ಬಳಸಬೇಡಿ. ಅಂತಹ ಈರುಳ್ಳಿ ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾರ್ಕ್, 45, ಡೆವಿಲ್ ಬಂದರೂ ತಗ್ಗಿಲ್ಲ ‘ಧುರಂಧರ್’ ಹವಾ; 21ನೇ ದಿನವೂ 26 ಕೋಟಿ ರೂ. ಗಳಿಕೆ – Kannada News | Dhurandhar box office collection on December 25 amid new releases

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ (Dhurandhar) ಸಿನಿಮಾ ಬಿಡುಗಡೆ ಆಗಿ 22 ದಿನಗಳು ಕಳೆದಿವೆ. ಈ ಚಿತ್ರ ತೆರೆಕಂಡ ಬಳಿಕ ಸ್ಟಾರ್ ನಟರ ಹಲವು ಸಿನಿಮಾಗಳು ಬಿಡುಗಡೆ ಆದವು. ಹಾಗಿದ್ದರೂ ಕೂಡ ‘ಧುರಂಧರ್’ ಚಿತ್ರದ ಹವಾ ಕಡಿಮೆ ಆಗಿಲ್ಲ. ಇಂದಿಗೂ ಕೂಡ ಈ ಸಿನಿಮಾ ಪ್ರತಿ ದಿನ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಈಗಾಗಲೇ ಭಾರತದಲ್ಲಿ ಈ ಸಿನಿಮಾದ ಕಲೆಕ್ಷನ್ 633 ಕೋಟಿ ರೂಪಾಯಿ ಕೋಟಿ ಆಗಿದೆ. ಇನ್ನೂ ಹಲವು ದಿನಗಳ ಕಾಲ ಕಲೆಕ್ಷನ್ (Dhurandhar Box Office Collection) ಅಬ್ಬರ ಮುಂದುವರಿಯಲಿದೆ.

ಪ್ರತಿ ವೀಕೆಂಡ್​​ನಲ್ಲಿ ‘ಧುರಂಧರ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಾ ಬಂದಿದೆ. ಕ್ರಿಸ್ಮಸ್ ದಿನವೂ ಈ ಚಿತ್ರ ಅತ್ಯುತ್ತಮವಾಗಿ ಕಮಾಯಿ ಮಾಡಲಿದೆ ಎಂದು ನಿರೀಕ್ಷಿಸಲಾಗಿತ್ತು. ಅದು ನಿಜವಾಗಿದೆ. ಕ್ರಿಸ್ಮಸ್ ಹಬ್ಬದ ದಿನ, ಅಂದರೆ ಡಿಸೆಂಬರ್ 25ರಂದು ಸರ್ಕಾರಿ ರಜೆ ಇರುವ ಕಾರಣ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿದ್ದಾರೆ. ಅದು ‘ಧುರಂಧರ್’ ಸಿನಿಮಾಗೆ ಪ್ಲಸ್ ಆಗಿದೆ.

ಡಿಸೆಂಬರ್ 25ರಂದು ‘ಧುರಂಧರ್’ ಚಿತ್ರಕ್ಕೆ ಬರೋಬ್ಬರಿ 26 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಿಡುಗಡೆ ಆಗಿ 21ನೇ ದಿನಕ್ಕೆ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡುವುದು ಎಂದರೆ ತಮಾಷೆಯೇ ಅಲ್ಲ. ಇದೇ ದಿನ ಕನ್ನಡ ಮತ್ತು ತಮಿಳಿನಲ್ಲಿ ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಿದೆ. ‘45’ ಚಿತ್ರ ಕೂಡ ತೆರೆಕಂಡಿದೆ. ಆ ಸಿನಿಮಾಗಳ ಪೈಪೋಟಿ ನಡುವೆಯೂ ‘ಧುರಂಧರ್’ ಮೇಲುಗೈ ಸಾಧಿಸಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ಅಂದುಕೊಂಡ ಮಟ್ಟದಲ್ಲಿ ಕಲೆಕ್ಷನ್ ಮಾಡಿಲ್ಲ. ಕರ್ನಾಟಕದಲ್ಲಿ ‘ದಿ ಡೆವಿಲ್’, ‘ಮಾರ್ಕ್’, ‘45’ ಸಿನಿಮಾಗಳು ಪ್ರದರ್ಶನ ಕಾಣುತ್ತಿರುವಾಗಲೇ ‘ಧುರಂಧರ್’ ಕೂಡ ಪೈಪೋಟಿ ನೀಡುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರದ ನೂರಾರು ಶೋಗಳು ಹೌಸ್​ಫುಲ್ ಪ್ರದರ್ಶನ ಕಾಣುತ್ತಿವೆ ಎಂಬುದು ವಿಶೇಷ. ವಾರಾಂತ್ಯ ಮಾತ್ರವಲ್ಲದೇ ಬಾಕಿ ದಿನಗಳಲ್ಲಿ ಕೂಡ ‘ಧುರಂಧರ್’ ಸಿನಿಮಾವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ?

ಡಿಸೆಂಬರ್ 27ರ ಶನಿವಾರ ಹಾಗೂ ಡಿ.28ರ ಭಾನುವಾರ ‘ಧುರಂಧರ್’ ಸಿನಿಮಾ ಸಿಕ್ಕಾಪಟ್ಟೆ ಕಲೆಕ್ಷನ್ ಮಾಡುವ ಸಾಧ್ಯತೆ ದಟ್ಟವಾಗಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಅನಾಯಾಸವಾಗಿ 750 ಕೋಟಿ ರೂಪಾಯಿ ಗಳಿಸಲಿದೆ. ವಿದೇಶದ ಕಲೆಕ್ಷನ್ ಕೂಡ ಸೇರಿದರೆ ಈಗಾಗಲೇ 1000 ಕೋಟಿ ರೂಪಾಯಿ ದಾಟಿದೆ. ಆದಿತ್ಯ ಧಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆ: ಜಾನ್ಹವಿ ಆಕ್ರೋಶ – Kannada News | Janhvi Kapoor angry post on killing Hindu in Bangladesh

ನೆರೆಯ ಬಾಂಗ್ಲಾದೇಶದಲ್ಲಿ ಹಿಂದು ಯುವಕ ದೀಪು ದಾಸ್ (Deepu Das) ಹತ್ಯೆ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕೆಲವು ಸಿನಿಮಾ ನಟಿಯರು ಸಹ ದೀಪಿ ದಾಸ್ ಹತ್ಯೆ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ವಿಶೇಷವಾಗಿ ನಟಿ ಜಾನ್ಹವಿ ಕಪೂರ್, ದೀಪು ದಾಸ್ ಹತ್ಯೆಯ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಮೌನ ವಹಿಸಿರುವುದನ್ನು ‘ಹಿಪಾಕ್ರಸಿ’ (ಬೂಟಾಟಿಕೆ) ಎಂದು ಕರೆದಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ಬರೆದುಕೊಂಡಿರುವ ನಟಿ ಜಾನ್ಹವಿ ಕಪೂರ್, ‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಅನಾಗರಿಕ. ಇದು ನರಮೇಧ. ಎಲ್ಲ ಘಟನೆಗಳಲ್ಲಿ ಒಂದು ಎಂಬಂತೇನಲ್ಲ. ಈ ಅಮಾನವೀಯ ಸಾರ್ವಜನಿಕ ಗುಂಪು ಹತ್ಯೆಯ ಬಗ್ಗೆ ನಿಮಗೆ ತಿಳಿದಿಲ್ಲದೇ ಇದ್ದರೆ, ಅದರ ಬಗ್ಗೆ ಓದಿ, ವೀಡಿಯೊಗಳನ್ನು ನೋಡಿ, ಪ್ರಶ್ನೆಗಳನ್ನು ಕೇಳಿ. ಇದೆಲ್ಲದರ ಹೊರತಾಗಿಯೂ ನಿಮಗೆ ಕೋಪ ಬರದಿದ್ದರೆ, ನಮಗೆ ತಿಳಿಯುವ ಮೊದಲೇ ನಮ್ಮನ್ನು ನಾಶಮಾಡುವ ಪ್ರಕ್ರಿಯೆಯ ದಾಳವಾಗಿದ್ದೀರಿ ಎಂದರ್ಥ. ನಮ್ಮ ಸ್ವಂತ ಸಹೋದರ ಸಹೋದರಿಯರು ಸುಟ್ಟು ಸಾಯುತ್ತಿರುವಾಗ ನಾವು ಪ್ರಪಂಚದಾದ್ಯಂತ ನಡೆಯುತ್ತಿರುವ ಬೇರೆ ವಿಷಯಗಳ ಬಗ್ಗೆ ಅಳುತ್ತಲೇ ಇರುತ್ತೇವೆ. ನಾವು ಸಂತ್ರಸ್ತರಾಗಲಿ ಅಥವಾ ಅಪರಾಧಿಗಳಾಗಲಿ, ಕೋಮು ಹಿಂಸಾಚಾರ ಮತ್ತು ತೀವ್ರಗಾಮಿತನವನ್ನು ಮೊದಲು ಖಂಡಿಸಬೇಕು. ನಾವು ಅದೃಶ್ಯ ರೇಖೆಯ ಎರಡೂ ಬದಿಗಳಲ್ಲಿ ವಾಸಿಸುತ್ತಿದ್ದೇವೆ ಎಂದು ನಂಬುವ ಪ್ಯಾದೆಗಳು. ಇದನ್ನು ಗುರುತಿಸಿ. ಮತ್ತು ಈ ಕೋಮು ಘರ್ಷಣೆಯಲ್ಲಿ ನಿರಂತರವಾಗಿ ಕಳೆದುಹೋಗುವ ಮತ್ತು ಭಯಭೀತರಾಗುವ ಮುಗ್ಧ ಜೀವಗಳ ಪರವಾಗಿ ನಿಲ್ಲಲು ಜ್ಞಾನದಿಂದ ನಿಮ್ಮನ್ನು ಸಜ್ಜುಗೊಳಿಸಿ’ ಎಂದಿದ್ದಾರೆ ಜಾನ್ಹವಿ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಸಿನಿಮಾವ ಕೊಂಡಾಡಿದ ಬಾಲಿವುಡ್ ನಟಿ ಜಾನ್ಹವಿ ಕಪೂರ್

ಜಾನ್ಹವಿ ಕಪೂರ್ ಅವರು ಮಾತ್ರವಲ್ಲದೆ ನಟಿ ಕಾಜಲ್ ಅಗರ್ವಾಲ್ ಸಹ ಈ ವಿಷಯದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬನ ಮರಕ್ಕೆ ಕಟ್ಟಿ ಸುಡುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ನಟಿ ಕಾಜೊಲ್, ‘ಆಲ್ ಐಸ್ ಆನ್ ಬಾಂಗ್ಲಾದೇಶಿ ಹಿಂದೂ’ ಎಂದಿದ್ದಾರೆ. ‘ದಯವಿಟ್ಟು ಎದ್ದೇಳಿ ಹಿಂದೂಗಳೆ, ಮೌನ ನಿಮ್ಮನ್ನು ಕಾಪಾಡಲಾರದು’ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಜಾರಿಯಲ್ಲಿದೆ. ಈ ಹಿಂದೆ ಕೆಲವು ಬಾಲಿವುಡ್ ನಟಿಯರು ಗಾಜಾ, ಇಸ್ರೇಲ್ ಇನ್ನಿತರೆ ದೇಶಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪೋಸ್ಟ್​​ಗಳನ್ನು ಹಂಚಿಕೊಂಡಿದ್ದರು, ಆದರೆ ಈಗ ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಪೋಸ್ಟ್ ಹಂಚಿಕೊಂಡಿಲ್ಲ, ಇದು ಅವರ ಕಪಟತನವನ್ನು ತೋರುತ್ತದೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಜಾನ್ಹವಿ ಹಾಗೂ ಕಾಜಲ್ ಅವರನ್ನು ಅಭಿನಂದಿಸಿದ್ದಾರೆ ಸಹ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:35 pm, Fri, 26 December 25

Source link

ಎಫ್ ಅಂಡ್ ಒ ಕರ್ಮಕಾಂಡ; ಭಾರತದಿಂದ ಅಮೆರಿಕಕ್ಕೆ ಹರಿದುಹೋಗುತ್ತಿದೆಯಾ ವರ್ಷಕ್ಕೆ ಲಕ್ಷ ಕೋಟಿ ರೂ? – Kannada News | Saurabh Mukherjea says middle class Indians’ 12 billion USD outflow through F&O trading loss

ನವದೆಹಲಿ, ಡಿಸೆಂಬರ್ 26: ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಟ್ರೇಡಿಂಗ್ (F & O- Futures and Options) ಎನ್ನುವ ಮಾಯಾಜಿಂಕೆಯನ್ನು ಹಿಡಿಯಲು ಹೋಗುವ ಭಾರತೀಯರಲ್ಲಿ ಹೆಚ್ಚಿನವರಿಗೆ ಅದು ಸಿಕ್ಕೋದೇ ಇಲ್ಲ. ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಶೇ. 90ರಷ್ಟು ರೀಟೇಲ್ ಹೂಡಿಕೆದಾರರು ಹಣ ಕಳೆದುಕೊಳ್ಳುತ್ತಾರಂತೆ. ಈ ರೀಟೇಲ್ ಹೂಡಿಕೆದಾರರಲ್ಲಿ ಬಹಳ ಸಂಖ್ಯೆಯಲ್ಲಿ ಜನರು ಸಣ್ಣ ಪಟ್ಟಣಗಳಿಂದ ಬಂದ ಯುವಜನರೇ ಅಧಿಕವಂತೆ.

ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಮಾರುಕಟ್ಟೆಯನ್ನು ಬುಗುರಿಯಂತೆ ಆಡಿಸುವವರು ದೊಡ್ಡ ಸಾಂಸ್ಥಿಕ ಹೂಡಿಕೆದಾರರು. ಇವರ ಬಳಿ ಎಐ ಶಕ್ತ ಅಲ್ಗಾರಿದಂ ಇತ್ಯಾದಿ ಆಧುನಿಕ ಪರಿಕರಗಳಿರುತ್ತವೆ. ರೀಟೇಲ್ ಹೂಡಿಕೆದಾರರ ಬಳಿ ಕೇವಲ ಆಸೆ, ಭರವಸೆ, ಅದೃಷ್ಟ ನಿರೀಕ್ಷೆ, ಹಾಗೂ ಸ್ವಲ್ಪ ಮಟ್ಟಿಗೆ ಮಾರುಕಟ್ಟೆ ಜ್ಞಾನ ಇರುತ್ತದೆ. ಆದರೆ, ದೊಡ್ಡ ದೊಡ್ಡ ಪರಿಣಿತರ ಪಡೆಗಳನ್ನೇ ಹೊಂದಿರುವ ಸಾಂಸ್ಥಿಕ ಹೂಡಿಕೆದಾರರ ಮುಂದೆ ರೀಟೇಲ್ ಹೂಡಿಕೆದಾರರ ಆಟ ನಡೆಯುವುದು ಬಹಳ ಕಡಿಮೆ. ಹೀಗಾಗಿ, ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಇನ್ಸ್​ಟಿಟ್ಯೂಶನಲ್ ಇನ್ವೆಸ್ಟರ್​ಗಳು ಹಣ ಬಾಚಿಕೊಳ್ಳುತ್ತಾರೆ.

ಇದನ್ನೂ ಓದಿ: 2025ರಲ್ಲಿ ಭಾರತದ ಬಿಲಿಯನೇರ್​ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು?

ಮಾರುಕಟ್ಟೆ ತಜ್ಞ ಸೌರಭ್ ಮುಖರ್ಜಿಯಾ ಪ್ರಕಾರ, ಭಾರತದಲ್ಲಿ ಟ್ರೇಡಿಂಗ್ ಮಾಡುವ ಹೆಚ್ಚಿನ ಸಾಂಸ್ಥಿಕ ಹೂಡಿಕೆದಾರರು ಅಮೆರಿಕದವರೇ ಆಗಿದ್ದಾರೆ. ರೀಟೇಲ್ ಹೂಡಿಕೆದಾರರಲ್ಲಿ ಹೆಚ್ಚಿನವರು ಸಣ್ಣ ಪಟ್ಟಣದಿಂದ ಬಂದ 30-40ರ ವಯಸ್ಸಿನ ಮಧ್ಯಮ ವರ್ಗದ ಜನರೇ ಆಗಿರುತ್ತಾರೆ. ಇವರು ಒಂದು ವರ್ಷದಲ್ಲಿ ಎಫ್ ಅಂಡ್ ಒ ಟ್ರೇಡಿಂಗ್ ಮೂಲಕ ಮಾಡಿಕೊಳ್ಳುವ ನಷ್ಟ 12 ಬಿಲಿಯನ್ ಡಾಲರ್. ಅಂದರೆ ಸುಮಾರು ಒಂದು ಲಕ್ಷ ಕೋಟಿ ರೂ.

ಮಧ್ಯಮ ಮತ್ತು ಕೆಳ ಮಧ್ಯಮ ಭಾರತೀಯರಿಂದ ವರ್ಷಕ್ಕೆ ಒಂದು ಲಕ್ಷ ಕೋಟಿ ರೂ ಹಣವು ಅಮೆರಿಕಕ್ಕೆ ಹೋಗುತ್ತದೆ ಎನ್ನುತ್ತಾರೆ ಸೌರಭ್ ಮುಖರ್ಜಿ. ಹೀಗೆನ್ನುತ್ತಾ ಅವರು ಷೇರು ಮಾರುಕಟ್ಟೆಯ ಕಹಿ ಚಿತ್ರ ಬಿಚ್ಚಿಟ್ಟಿದ್ದಾರೆ.

ಎಕ್ಸ್​ನಲ್ಲಿ ಬಂದ ಇವರ ಒಂದು ವಿಡಿಯೋ

ಇದನ್ನೂ ಓದಿ: ಇನ್ಫೋಸಿಸ್​ನಲ್ಲಿ ಭರ್ಜರಿ ಸಂಬಳ; ಎಂಟ್ರಿ ಲೆವೆಲ್​ನಲ್ಲೇ 21 ಲಕ್ಷ ರೂ ಸ್ಯಾಲರಿ ಆಫರ್

ಅವರು ಸಂದರ್ಶನವೊಂದರಲ್ಲಿ ಈ ವಿಚಾರವಾಗಿ ಮಾತನಾಡಿರುವ ವಿಡಿಯೋ ತುಣಕನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಲಾಗಿದೆ. ಅದಕ್ಕೆ ಪ್ರತಿಕ್ರಿಯಿಸಿದವರಲ್ಲಿ ಕೆಲವರು ಸೌರಭ್ ಮುಖರ್ಜಿ ಅವರ ವಾದವನ್ನು ಒಪ್ಪಿಲ್ಲ. ಎಫ್ ಅಂಡ್ ಒ ಮಾರುಕಟ್ಟೆಯು ಒಟ್ಟಾರೆ ಷೇರು ಮಾರುಕಟ್ಟೆಗೆ ವಿಮೆ ರೀತಿ ಇರುತ್ತದೆ. ಇಡೀ ವ್ಯವಸ್ಥೆಯ ಪ್ರಮಾಣಕ್ಕೆ ಹೋಲಿಸಿದರೆ ಇದರಲ್ಲಿನ ನಷ್ಟ ದೊಡ್ಡದೆನಿಸುವುದಿಲ್ಲ ಎಂದು ಕೆಲವರು ವಾದಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು

ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ ಬರುತ್ತಿದ್ದಂತೆ ಭೂಗಳ್ಳರು ಪರಾರಿ ಆಗಿರುವಂತಹ ಘಟನೆ ಮೈಸೂರಿನ ಪಶ್ಚಿಮ ಉಪ ನೋಂದಣಿ ಕಚೇರಿಯಲ್ಲಿ ನಡೆದಿದೆ.

ನಡೆದದ್ದೇನು?

ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೇರ್ಗಳ್ಳಿ ಗ್ರಾಮ ಮತ್ತು ಚಾಮುಂಡಿ ಸೂರು ನಗರ ಬಡಾವಣೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ ವಿವಿಧ ಸರ್ವೆ ನಂಬರ್​ಗಳಲ್ಲಿ 22 ನಿವೇಶನಗಳಿವೆ.

ಇದನ್ನೂ ಓದಿ: ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಖದೀಮರು ಸಿದ್ಧರಾಜು ಅವರ ನಕಲಿ ಫೋಟೋ ಒಳಗೊಂಡ ಆಧಾರ್​ ಕಾರ್ಡ್​​​, ಪಾನ್ ಕಾರ್ಡ್, ಮನೆ ವಿಳಾಸ ಬದಲಿಸಿ ಮೋಸ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಬೋಗಾದಿ ಪಟ್ಟಣ ಪಂಚಾಯ್ತಿಯಲ್ಲಿ ಇ ಖಾತಾ ಪಡೆಯಲಾಗಿತ್ತು. ಅದೇ ಪ್ರತಿ ಸಲ್ಲಿಸಿ 22 ನಿವೇಶನಗಳನ್ನು ಜಿಪಿಎ ನೊಂದಣಿ ಮಾಡಿಸಲು ಭೂಗಳ್ಳರು ಮುಂದಾಗಿದ್ದರು.

ಡಿ.23 ರಂದು ಪಶ್ಚಿಮ ಉಪನೋಂದಣಾಧಿಕಾರಿ ಕಚೇರಿಗೆ ನಿವೇಶನ ನೋಂದಣಿಗೆ ಅರ್ಜಿ ಸಲ್ಲಿಸಲಾಗಿತ್ತು. ಉಪನೋಂದಣಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ಮಾಜಿ ಎಂಎಲ್​​ಸಿ ಸಿದ್ದರಾಜು ದಾಖಲೆಗಳನ್ನ ಗಮನಿಸಿ ಅವರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೇಕ್ ಇನ್ ಇಂಡಿಯಾ ಬಲಪಡಿಸಲು ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದ ಯೂನಿಟಿ ಮಾಲ್​​​ಗೆ ವಿಘ್ನ

ಇತ್ತ ಉಪನೋಂದಣಾಧಿಕಾರಿ ಕಚೇರಿಗೆ ಸಿದ್ಧರಾಜು ಬೆಂಬಲಿಗರೊಂದಿಗೆ ಆಗಮಿಸುತ್ತಿದ್ದಂತೆ ಭೂಗಳ್ಳರು ಪರಾರಿ ಆಗಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಾಟ ಮಾಡಲು ಬಂದಿದ್ದ ಭೂಗಳ್ಳರನ್ನ ಸಿಸಿಟಿವಿ ದೃಶ್ಯಾವಳಿ ಹಾಗೂ ದಾಖಲೆಗಳ ಪ್ರತಿ ನೀಡುವಂತೆ ಸಿದ್ದರಾಜು ಮನವಿ ಮಾಡಿದ್ದಾರೆ. ಪ್ರಕರಣ ಸಂಬಂಧ ಕಂದಾಯ ಸಚಿವರಿಗೆ ದೂರು ನೀಡಿದ್ದು, ತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link