All posts by nagaraj11081993

ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು – Kannada News | Karnataka Congress Power sharing issue: DK Shivakumar’s Strong Message Outside Mallikarjun Kharge’s Residence

ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು

ಬೆಂಗಳೂರು, ಡಿಸೆಂಬರ್ 26: ಕರ್ನಾಟಕ ರಾಜಕೀಯದಲ್ಲಿ, ವಿಶೇಷವಾಗಿ ಕಾಂಗ್ರೆಸ್ (Congress) ಪಕ್ಷದೊಳಗಿನ ನಾಯಕತ್ವ ಬದಲಾವಣೆ ವಿಚಾರ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಸ್ಥಳೀಯವಾಗಿ ಸೃಷ್ಟಿಯಾಗಿರುವ ಸಮಸ್ಯೆಯನ್ನು ಅಲ್ಲಿನವರೇ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಕೂತು ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬ ಸಂದೇಶವಾಗಿಯೇ ವ್ಯಾಖ್ಯಾನಿಸಲಾಗುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರವನ್ನು ರಾಹುಲ್ ಗಾಂಧಿಯವರೇ ಬಗೆಹರಿಸಬೇಕೆಂದು ಹೇಳಿರುವುದು, ಹೈಕಮಾಂಡ್ ಮೇಲೆಯೇ ನಿರ್ಧಾರದ ಹೊಣೆ ಹಾಕುವ ಪ್ರಯತ್ನವೆಂದು ಹೇಳಲಾಗುತ್ತಿದೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿ ಮಾಡಲು ಯತ್ನಿಸಿದ್ದರೂ, ಭೇಟಿ ಸಾಧ್ಯವಾಗದೆ ವಾಪಸ್ ಬಂದಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ತಮ್ಮ ಪಕ್ಷ ನಿಷ್ಠೆ ವಿಚಾರವನ್ನು ಮುಂಚೂಣಿಗೆ ತರುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದೆಯೇ ಮಾತನಾಡಿದ ಡಿಕೆ ಶಿವಕುಮಾರ್, ‘ನಾನು ಈ ಪಕ್ಷವನ್ನು ಕಟ್ಟಿದ್ದೇನೆ, ಬಾವುಟ ಕಟ್ಟಿದ್ದೇನೆ, ಕಸವೂ ಗುಡಿಸಿದ್ದೇನೆ. ಕೇವಲ ಬಂದು ಭಾಷಣ ಮಾಡಿ ಹೋಗಿಲ್ಲ’ ಎಂದು ಹೇಳುವ ಮೂಲಕ ತಮ್ಮ ಹೋರಾಟದ ಹಿನ್ನೆಲೆಯನ್ನು ನೆನಪಿಸಿದ್ದಾರೆ. ಒಂದು ದಿನ ಹಿಂದಷ್ಟೇ, ತಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದಿದ್ದ ಡಿಕೆ, ಮರುದಿನವೇ ಪಕ್ಷ ಕಟ್ಟಿದ ಮಾತುಗಳನ್ನಾಡಿದ್ದಾರೆ.

‘ನನ್ನಿಂದ ಪಕ್ಷ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದು’ ಎಂದು ಯಾರೂ ಹೇಳಬಾರದು ಎಂದು ಖರ್ಗೆ ಎರಡು ದಿನಗಳ ಹಿಂದಷ್ಟೇ ಹೇಳಿದ್ದರು. ಆದರೆ, ಇದೀಗ ಡಿಕೆಶಿ ಮತ್ತದೇ ಮಾತುಗಳನ್ನಾಡಿದ್ದಾರೆ. ಹೀಗಾಗಿ, ‘ಪಕ್ಷಕ್ಕೆ ನಾನು ಎಲ್ಲವನ್ನೂ ಕೊಟ್ಟಿದ್ದೇನೆ’ ಎಂಬ ಡಿಕೆ ಮಾತುಗಳು ಕಾಂಗ್ರೆಸ್ ಒಳಗಿನ ಅಸಮಾಧಾನವನ್ನು ಬಹಿರಂಗಪಡಿಸಿದಂತಿವೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ 2 ಬಾರಿ ಒಟ್ಟಾಗಿ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ನಡೆಸಿ ‘ನಾವು ಒಟ್ಟಿಗೆ’ ಎಂಬ ಸಂದೇಶ ನೀಡಲು ಪ್ರಯತ್ನಿಸಿದ್ದರೂ, ಇಬ್ಬರ ನಡೆ ಮತ್ತು ನುಡಿ ಒಂದೇ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂಬ ಚರ್ಚೆ ಗಟ್ಟಿಯಾಗುತ್ತಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಮೇಲೆಯೇ ಭಾರ ಹಾಕಿದ್ದು, ತಮ್ಮ ಸ್ಥಾನಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂಬ ವಿಶ್ವಾಸದಲ್ಲಿದ್ದಾರೆ ಎನ್ನಲಾಗುತ್ತಿದೆ.

ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್

ಈ ನಡುವೆ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಸಾಮಾಜಿಕ ಜಾಲತಾಣದಲ್ಲಿ ಮಾರ್ಮಿಕವಾಗಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ‘ಗುರಿಯನ್ನು ಬೇಗ ತಲುಪಬೇಕೆಂದವರು ದಾರಿಯಲ್ಲಿ ವಿಶ್ರಾಂತಿ ಪಡೆಯುತ್ತಾ ಕುಳಿತುಕೊಳ್ಳಬಾರದು’ ಎಂಬ ಪಾಟೀಲ್ ಪುಟ್ಟಪ್ಪನವರ ಉಕ್ತಿಯನ್ನು ಅವರು ಉಲ್ಲೇಖಿಸಿದ್ದು, ರಾಜಕೀಯದಲ್ಲಿ ಹಲವು ಅರ್ಥಗಳಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

ಕಾಂಗ್ರೆಸ್ ಕಾರ್ಯಕಾರಣಿ ಸಭೆಗೆ ಡಿಕೆ ಶಿವಕುಮಾರ್​ಗಿಲ್ಲ ಆಹ್ವಾನ!

ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕಾರಣಿ (CWC) ಸಭೆ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಡಿಕೆಗೆ ಆಹ್ವಾನ ನೀಡಲಾಗಿಲ್ಲ ಎನ್ನಲಾಗಿದೆ. ಅದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಬಂದಿದ್ದು, ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: ಮಾರ್ಮಿಕವಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಒಟ್ಟಿನಲ್ಲಿ, ಕಾಂಗ್ರೆಸ್ ಒಳಗಿನ ಪಟ್ಟದಾಟದಲ್ಲಿ ಅಡೆತಡೆಗಳಿದ್ದರೂ, ಡಿಕೆ ಶಿವಕುಮಾರ್ ಅವರ ಪ್ರಯತ್ನ ಮಾತ್ರ ನಿಲ್ಲುತ್ತಿಲ್ಲ. ‘ನಾನು ಪಕ್ಷಕ್ಕಾಗಿ ಬಾವುಟ ಕಟ್ಟಿದ್ದೇನೆ’ ಎಂಬ ಮಾತಿನ ಮೂಲಕ, ಅವರು ತಮ್ಮ ಎದುರಾಳಿಗಳಿಗೆ ಪರೋಕ್ಷವಾಗಿ ಖಡಕ್ ಸಂದೇಶ ರವಾನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ? – Kannada News | Daily Devotional: The Astrological Significance of the Index Finger and Its Impact on Destiny

ಬೆಂಗಳೂರು, ಡಿಸೆಂಬರ್ 26: ಶಾಸ್ತ್ರಗಳ ಪ್ರಕಾರ, ಮಾನವ ದೇಹದ ಅಂಗಾಂಗಗಳು, ಅದರಲ್ಲೂ ವಿಶೇಷವಾಗಿ ತೋರು ಬೆರಳಿನ ಆಕಾರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಹೋಲಿಸಲಾಗುತ್ತದೆ.

ತೋರು ಬೆರಳಿನ ಆಕಾರದಿಂದ ವ್ಯಕ್ತಿಯ ಗುಣಲಕ್ಷಣಗಳನ್ನು ಅರಿಯಲು ಸಾಧ್ಯವಿದೆ. ಉದಾಹರಣೆಗೆ, ಉದ್ದವಾದ ತೋರು ಬೆರಳು ನಾಯಕತ್ವದ ಗುಣಗಳನ್ನು ಸೂಚಿಸುತ್ತದೆ. ಚಪ್ಪಟೆಯಾದ ಮತ್ತು ಅಗಲವಾದ ಉಗುರಿನ ಭಾಗವಿರುವ ತೋರು ಬೆರಳು ಆತ್ಮವಿಶ್ವಾಸ, ತೀಕ್ಷ್ಣ ಬುದ್ಧಿ ಮತ್ತು ಕೆಲಸದಲ್ಲಿ ಯಶಸ್ಸನ್ನು ಪ್ರತಿಬಿಂಬಿಸುತ್ತದೆ. ಅದೇ ರೀತಿ, ದಪ್ಪನಾದ ತೋರು ಬೆರಳಿನ ತುದಿಯು ವಿಶಾಲ ಹೃದಯ ಮತ್ತು ದಾನ ಗುಣವನ್ನು ತೋರುತ್ತದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

Source link

ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿದ ‘ಮಾರ್ಕ್’ ಹಾಗೂ ‘45’ ಸಿನಿಮಾ – Kannada News | 45 and Mark Movie Box Office: Sudeep And Shivarajkumar Movie Collections Revealed

ಕ್ರಿಸ್​ಮಸ್ ಪ್ರಯುಕ್ತ ರಿಲೀಸ್ ಆದ ‘45’ ಹಾಗೂ ‘ಮಾರ್ಕ್​’ ಸಿನಿಮಾಗಳು (Mark Movie) ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿವೆ. ಇಂದು ವಾರದ ದಿನ ಆಗಿರುವುದರಿಂದ, ಯಾವುದೇ ರಜೆ ಇಲ್ಲದಿರುವುದರಿಂದ ಕಲೆಕ್ಷನ್ ಕೊಂಚ ತಗ್ಗಬಹುದು. ಆದರೆ, ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ.

‘ಮಾರ್ಕ್​’ ಚಿತ್ರದ ಮೊದಲ ದಿನದ ಗಳಿಕೆ

‘ಮ್ಯಾಕ್ಸ್’ ಆದ ಬಳಿಕ ‘ಮಾರ್ಕ್’ ಸಿನಿಮಾ ರಿಲೀಸ್ ಆಯಿತು. ಕಳೆದ ವರ್ಷ ಡಿಸೆಂಬರ್ 25ರಂದು ‘ಮ್ಯಾಕ್ಸ್’ ಬಂದಿದ್ದರೆ ಈ ವರ್ಷ ಅದೇ ದಿನಾಂಕದಂದು ‘ಮಾರ್ಕ್’ ಬಂದಿದೆ. ಈ ಚಿತ್ರ ‘ಮ್ಯಾಕ್ಸ್’ ಸಿನಿಮಾ ಶೇಡ್​​ನಲ್ಲಿ ಇದೆ ಎಂಬ ಅಭಿಪ್ರಾಯವನ್ನು ಅನೇಕರು ಹೊರ ಹಾಕಿದ್ದಾರೆ. ಎರಡು ದಿನದಲ್ಲಿ ನಡೆಯೋ ಕಥೆ ಆಗಿರುವುದರಿಂದ ಸಿನಿಮಾ ವೇಗವಾಗಿ ಸಾಗುತ್ತದೆ. ಈ ಚಿತ್ರ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿದೆ.

‘ಮಾರ್ಕ್​’ ಸಿನಿಮಾ ಮೊದಲ ದಿನ 6.28 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು sacnilk ವರದಿ ಮಾಡಿದೆ. ಮೊದಲ ದಿನವೇ ಸಿನಿಮಾ ಅಬ್ಬರಿಸಿದಂತಾಗಿದೆ. ಈ ಚಿತ್ರಕ್ಕೆ ಈಗಾಗಲೇ ಎಲ್ಲ ಕಡೆಗಳಲ್ಲಿ ಪಾಸಿಟಿವ್ ವಿಮರ್ಶೆಗಳು ಸಿಕ್ಕಿದ್ದು ಸಿನಿಮಾಗೆ ಸಹಕಾರಿ ಆಗುತ್ತಿದೆ. ಈ ಚಿತ್ರಕ್ಕೆ ಸುದೀಪ್ ಹೀರೋ. ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯನ್ ನಿರ್ದೇಶನ ಸಿನಿಮಾಗೆ ಇದೆ.

‘45​’ ಚಿತ್ರದ ಮೊದಲ ದಿನದ ಗಳಿಕೆ

45 ಸಿನಿಮಾ ಕೂಡ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ಇದು ಮಲ್ಟಿ ಸ್ಟಾರರ್ ಚಿತ್ರ. ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​​ಕುಮಾರ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಕೂಡ ಮೊದಲ ದಿನ ಒಳ್ಳೆಯ ಓಪನಿಂಗ್ ಪಡೆದಿದೆ.

ಇದನ್ನೂ ಓದಿ: ‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’

ಈ ಸಿನಿಮಾದ ಮೊದಲ ದಿನದ ಗಳಿಕೆ ಬಗ್ಗೆ sacnilk ಲೆಕ್ಕ ಕೊಟ್ಟಿದೆ. ಈ ಚಿತ್ರದ ಮೊದಲ ದಿನದ ಕಲೆಕ್ಷನ್ 4.25 ಕೋಟಿ ರೂಪಾಯಿ ಎನ್ನಲಾಗಿದೆ. ಪ್ರೀಮೀಯರ್ ಶೋಗಳ ಲೆಕ್ಕವೂ ಸೇರಿದರೆ 5 ಕೋಟಿ ರೂಪಾಯಿ ದಾಟಲಿದೆ. ಈ ಸಿನಿಮಾ ಅಭಿಮಾನಿಗಳು ಕೈ ಹಿಡಿಯುವ ಲಕ್ಷಣ ಗೋಚರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today 26 December: ಈ ರಾಶಿಗೆ ಇಂದು ಹಳೆಯ ಸಂಗಾತಿಯ ನೆನಪು ಮತ್ತೆ ಕಾಡಲಿದೆ – Kannada News | Horoscope Today in Kannada on 26 December Friday; Dina Bhavishya Tithi Panchanga Details here

ಮೇಷ ರಾಶಿ:

ಹಣವ್ಯಯವು ದಾನವಾಗಿ ಬದಲಾಗುವುದು. ಸಂಬಂಧಗಳಲ್ಲಿ ಕರುಣೆ ಮತ್ತು ಸಹಾನುಭೂತಿ ಹೆಚ್ಚಾಗುತ್ತದೆ. ಓಡಾಟ ಮನಸ್ಸಿಗೆ ಶಾಂತಿ ನೀಡುತ್ತದೆ. ಉದ್ಯೋಗದಲ್ಲಿ ಸೃಜನಶೀಲತೆ ಬೆಳೆಯುತ್ತದೆ. ಮನಸ್ಸನ್ನು ಪ್ರಶಾಂತವಾಗಿ ಇಟ್ಟುಕೊಳ್ಳಲು ನಿಮಗೆ ಆಗದು. ಇಂದು ನೀವು ಹೇಗೇ ಸಮಜಾಯಿಷಿ ಕೊಟ್ಟರೂ ತಪ್ಪು ನಿಮ್ಮದೇ ಆಗಿರುತ್ತದೆ. ಒಂದಿಲ್ಲೊಂದು ಆಲೋಚನೆಗಳು ಬರುತ್ತಲೇ ಇರುತ್ತವೆ. ನಿಮ್ಮ ವಸ್ತುವು ಕಳ್ಳತನವಾಗಬಹುದು ಎಂಬ ಭೀತಿಯು ಉಂಟಾಗಬಹುದು. ಇಂದು ನೀವು ನೆಮ್ಮದಿಯಿಂದ ಇರಲು ಹಿತಶತ್ರುಗಳು ಬಿಡರು. ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಅನ್ಯ ಕಾರ್ಯದ ನಿಮಿತ್ತ ಕಡಿಮೆಯಾಗುವುದು. ಅಧಿಕಾರ ಸಂಬಂಧಿತ ಸಮಸ್ಯೆ ಪರಿಹಾರ. ವಿದೇಶ ಪ್ರಯಾಣ ಸೂಚನೆ. ನಿರುದ್ಯೋಗಿಗಳಿಗೆ ಭರವಸೆ ಸಿಗಲಿದೆ. ವೃತ್ತಿಪರರಾದ ನಿಮಗೆ ಕಛೇರಿಯಿಂದ ಶುಭ ಸುದ್ದಿಯನ್ನು ನಿರೀಕ್ಷಿಸುವುದು ಬೇಡ. ಹಳೆಯ ಸಂಗಾತಿಯ ನೆನಪು ಮತ್ತೆ ಕಾಡಬಹುದು.‌ ಮನೆಯಲ್ಲಿ ಧಾರ್ಮಿಕ ಕಾರ್ಯವನ್ನು ಮಾಡಲು ಯೋಚಿಸುವಿರಿ. ಬಂಧುಗಳ ಕಡೆಯಿಂದ ವಿವಾಹ ಸಂಬಂಧವು ಬರಬಹುದು.

ವೃಷಭ ರಾಶಿ:

ಉದ್ಯೋಗದಲ್ಲಿ ನವೀನ ಆಲೋಚನೆಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧಗಳಲ್ಲಿ ಸ್ನೇಹಭಾವ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ತಂತ್ರಜ್ಞಾನದ ಬಳಕೆಯಾಗಲಿದೆ. ಹಣವ್ಯಯವು ಮಧ್ಯಮದಲ್ಲಿರಲಿದೆ. ಮಕ್ಕಳ ಕಾರಣದಿಂದ ನೀವು ವಿದೇಶ ಪ್ರಯಾಣ ಮಾಡಬೇಕಾಗಬಹುದು. ಆತ್ಮಸಾಕ್ಷಿ ಒಪ್ಪಿದರೆ ಮತ್ತೆ ಬೇಸರಿಸಬೇಕಿಲ್ಲ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಏನಾದರೂ ಹೇಳಬಹುದು, ಕೇಳಿ ಸುಮ್ಮನಾಗಿ. ಉತ್ತರದಿಂದ ಮತ್ತೇನಾದರೂ ಆದೀತು. ಸುಲಭವಾಗಿ ಸಿಗುವ ಸಂಪತ್ತಿಗೆ ಆಸೆಪಡುವುದು ಬೇಡ. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಓಡಾಟ ಅನಿವಾರ್ಯವಾಗಿ ಹೆಚ್ಚಾಗುತ್ತದೆ. ವಾಹನ ಬದಲಾವಣೆಗೆ ಯೋಚನೆ. ಅಧಿಕಾರಿಗಳಿಗೆ ಹಲವರ ಬೆಂಬಲ. ನಿಮಗೆ ಕೊಟ್ಟ ಕಾರ್ಯವನ್ನು ಮರೆತು ಅನ್ಯರ ಕಾರ್ಯದಲ್ಲಿ ಮಗ್ನರಾಗುವಿರಿ. ಹಣವನ್ನೂ ಕೊಟ್ಟು ವಸ್ತುವನ್ನೂ ಕಳೆದುಕೊಳ್ಳಬೇಕಾಗಬಹುದು ಎಚ್ಚರ. ಕಛೇರಿಗೆ ವಿರಾಮವಿದ್ದರೂ ಅದರ ಕಾರ್ಯವನ್ನೇ ನೀವು ಮಾಡಬೇಕಾಗುವುದು. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ.

ಮಿಥುನ ರಾಶಿ:

ಕುಟುಂಬದ ಹೊಣೆಗಾರಿಕೆ ನಿಮ್ಮ ಸಮಯವನ್ನು ತೆಗೆದುಕೊಳ್ಳುತ್ತದೆ. ಜವಾಬ್ದಾರಿಯಿಂದ ಎಲ್ಲವನ್ನೂ ನಿರ್ವಹಿಸಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಿರತೆ ಮತ್ತು ನಂಬಿಕೆ ತರಿಸಿಕೊಳ್ಳಿ. ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳದೇ ಎಲ್ಲರಿಗೂ ಗೊಂದಲವನ್ನು ಉಂಟುಮಾಡುವಿರಿ. ಬಹಳ ಹುಡುಕಿದರೂ ನಿಮಗೆ ಬೇಕಾದ ಉದ್ಯೋಗವು ಸಿಗದೇ ಜೀವನವು ನಿರುತ್ಸಾಹದಂತೆ ಆಗುವುದು. ಸಾಮಾಜಿಕ ಕಾರ್ಯಗಳತ್ತ ಒಲವು ಮೂಡಬಹುದು. ಯಾವುದಕ್ಕೂ ಆರೋಗ್ಯವನ್ನು ಸುಧಾರಿಸಿಕೊಂಡು ಮುನ್ನಡೆಯುವುದು ಉತ್ತಮ.‌ ಗೊತ್ತಿರುವ ಕೆಲಸವನ್ನಷ್ಟೇ ಮಾಡಿ. ವ್ಯಾಪಾರ ನಿಧಾನವಾಗಿ ಬೆಳೆಯುತ್ತದೆ. ಅಧಿಕಾರಿಗಳಿಂದ ಮೆಚ್ಚುಗೆಗೆ ಗರ್ವ ಬೇಡ. ಸಂಬಂಧಗಳಲ್ಲಿ ಗಂಭೀರತೆ. ವಿದೇಶದ ಹೂಡಿಕೆಗೆ ಮಾರ್ಗದರ್ಶನ ಪಡೆಯುವಿರಿ. ದಾಂಪತ್ಯದಲ್ಲಿ ಮೌನವೇ ಸಂಭಾಷಣೆ ಆಗುವುದು. ಮನೋರಥವನ್ನು ಈಡೇರಿಸಿಕೊಳ್ಳುವುದು ನಿಮಗೆ ಕಷ್ಟವಾಗುವುದು. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ.

ಕರ್ಕಾಟಕ ರಾಶಿ:

ಉದ್ಯೋಗದಲ್ಲಿ ಹೊಸ ಅವಕಾಶ ಮನಸ್ಸಿಗೆ ಧೈರ್ಯ ನೀಡುತ್ತದೆ. ಸಂಬಂಧಗಳಲ್ಲಿ ಉತ್ಸಾಹ ಸಿಕ್ಕಿದ್ದು ಹಿಂಜರಿತ ಇರದು. ತಂದೆಯ ವಿಚಾರದಲ್ಲಿ ನಿಮಗೆ ಅಸಮಾಧನವು ಇರುವುದು. ಮಾನಸಿಕ ಕಿರಿಕಿರಿಯಿಂದ ಕುಳಿತಲ್ಲಿ ಕುಳಿತುಕೊಳ್ಳುವುದು ಕಷ್ಟವಾದೀತು. ಯಾರ ಮೇಲೂ ಸಿಟ್ಟಿನಿಂದ ಮಾತನಾಡುವುದು ಬೇಡ. ತಂದೆಯ ಅಸಮಾಧಾನವನ್ನು ಕುಳಿತು ಬಗೆಹರಿಸಿ. ಯಾರದೋ ಕೋಪವನ್ನು ಮತ್ಯಾರದೋ ಮೇಲೆ ತೋರಿಸಬೇಕಾಗುವುದು. ಗೆಲುವಿಗೆ ಬಹಳ ಪ್ರಯತ್ನಪಟ್ಟು ಯಶಸ್ವಿಯಾಗುವಿರಿ. ವ್ಯಕ್ತಿತ್ವವನ್ನು ಗಮನಿಸಿಕೊಂಡು ಯಾರ ಬಳಿಯಾದರೂ ಮಾತನಾಡಿ. ವ್ಯಾಪಾರ ವಿಸ್ತರಣೆಯನ್ನು ನಾನಾ ಪ್ರಕಾರಗಳಿಂದ ಸಾಧ್ಯವಾಗಿಸುವಿರಿ. ಕುಟುಂಬ ಬೆಂಬಲ ಗಟ್ಟಿಯಾಗುತ್ತದೆ. ಹಣವ್ಯಯ ಜಾಣ್ಮೆ ತೋರಿಸುವಿರಿ. ಅಧಿಕಾರಿಗಳಿಗೆ ತುರ್ತು ಪ್ರಯಾಣದ ಸೂಚನೆ ಬರಲಿದೆ. ಶುಭ ಅವಸರದಲ್ಲಿ ಸದುಪಯೋಗ ಮಾಡಿಕೊಳ್ಳಿ. ಹೆಚ್ವಿನ ಸಮಯವನ್ನು ಧಾರ್ಮಿಕ ಆಚರಣೆಗೆ ಮೀಸಲಿಡುವಿರಿ. ನಿಮ್ಮ ಮಾತುಗಳಿಂದ ನೋವಾಗಲಿದೆ.

ಸಿಂಹ ರಾಶಿ:

ಹಣವ್ಯಯವನ್ನು ತಡೆಹಿಡಿಯುವುದರಿಂದ ಬೇಸರ. ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಬಹುದು. ಕುಟುಂಬದಲ್ಲಿ ಗುಪ್ತ ವಿಚಾರಗಳು ಚರ್ಚೆಗೆ ಬರುತ್ತವೆ. ವ್ಯಾಪಾರದಲ್ಲಿ ಅಪಾಯದ ನಿರ್ಣಯವನ್ನು ಮಾಡಿಬಿಡುಬಿರಿ. ಸಹೋದ್ಯೋಗಿಗಳ ಸಹಕಾರ ನಿಮಗೆ ಸಿಗದೇ ಹೋಗಬಹುದು. ಛಲದಿಂದ ಒಂಟಿಯಾಗಿ ನಿಮ್ಮ ಕಾರ್ಯವನ್ನು ಸಾಧಿಸುವಿರಿ. ಕೃಷಿಯಲ್ಲಿ ಕೆಲವು ತೊಂದರೆಯಾಗಬಹುದು. ಅದನ್ನು ಲೆಕ್ಕಿಸದೇ ನಿಮ್ಮ ಪೂರ್ಣ ಶ್ರಮವನ್ನು ಹಾಕುವಿರಿ. ಕಾರ್ಯಕ್ಕೆ ಎಲ್ಲರಿಂದ ಪ್ರಶಂಸೆ ಸಿಕ್ಕರೂ ನಿಮ್ಮ ಕೆಲಸವು ಸಮಾಧಾನ ಕೊಡದು. ಇಂದು ಬಂದ ಹಣವು ಸಾಲಕ್ಕೆ ಸರಿಯಾಗುವುದು. ಅವ್ಯವಹಾರವನ್ನು ಮಾಡಲು ಸಹೋದ್ಯೋಗಿಗಳು ಪ್ರೇರಿಸಬಹುದು. ಸಂಬಂಧಗಳು ಆಳ ಇಂದು ಸ್ಪಷ್ಟವಾಗಲಿದೆ. ಅಧಿಕಾರಿಗಳೊಂದಿಗೆ ಎಚ್ಚರದಲ್ಲಿ ವ್ಯವಹಾರವಿರಲಿ. ನಿರುದ್ಯೋಗಿಗಳು ತಾಳ್ಮೆ ಕಳೆದುಕೊಳ್ಳಬಹುದು. ಮನೆಗೆ ಬೇಕಾದ ಬಂಧುಗಳು ಬಾರದೇ ಹೋಗಬಹುದು. ಸಜ್ಜನರನ್ನು ನೀವು ದೂರ ಮಾಡಿಕೊಳ್ಳುವಿರಿ. ಯಾರ ಮೇಲೂ ಪೂರ್ವಾಗ್ರಹ ಬೇಡ.

ಕನ್ಯಾ ರಾಶಿ:

ಸಂಬಂಧಗಳಲ್ಲಿ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸುತ್ತೀರಿ. ವ್ಯಾಪಾರದಲ್ಲಿ ಪಾಲುದಾರಿಕೆ ಲಾಭ ತರುತ್ತದೆ. ಕುಟುಂಬದಲ್ಲಿ ಒಪ್ಪಂದದ ವಾತಾವರಣವಿರಲಿದೆ. ವಾಹನಕ್ಕೆ ಖರ್ಚು ಅನಿವಾರ್ಯವಾಗಬಹುದು. ಆಸ್ತಿಯ ಮೇಲೆ ಸಾಲವನ್ನು ಪಡೆಯುವ ಸಂದರ್ಭವು ಬರಬಹುದು. ಅನಿವಾರ್ಯವಾದುದನ್ನು ಮಾತ್ರ ಸಾಲ ಮಾಡಿ. ಅತಿಯಾಗಿ ಬೇಡ. ಸಂಗಾತಿಯ ಮನೋಭಾವವು ಬದಲಾದಂತೆ ಅನ್ನಿಸುವುದು. ಚರ್ಮಕ್ಕೆ ಸಂಬಂಧಿಸಿದಂತೆ ಏನಾದರೂ ಆಗಬಹುದು. ಸಮಾಧಾನಚಿತ್ತದಿಂದ ನೀವು ಇಂದಿನ ಮಧುರ ಕ್ಷಣಗಳನ್ನು ಆನಂದಿಸುವಿರಿ. ವಿದೇಶ ಸಂಪರ್ಕದಿಂದ ಶುಭವಾಗಲಿದೆ. ಉದ್ಯೋಗದಲ್ಲಿ ತಂಡದ ಸಹಕಾರದಿಂದ ಗೆಲವು. ಅಧಿಕಾರದಲ್ಲಿ ಸ್ಪಷ್ಟ ನಿರ್ಣಯ ಅಗತ್ಯ. ನಿರುದ್ಯೋಗಿಗಳಿಗೆ ಕೆಲಸಕ್ಕೆ ಕರೆ. ಸ್ವಾಭಿಮಾನಕ್ಕೆ ಆಪ್ತರಿಂದ ತೊಂದರೆಯಾಗಬಹುದು. ಸಂಗಾತಿಯ ಮೌನವು ನಿಮಗೆ ಕಷ್ಟವಾಗಬಹುದು. ಅಧಿಕ ಪ್ರಯಾಣದಿಂದ ಆಯಾಸವಾಗಬಹುದು.

ತುಲಾ ರಾಶಿ:

ವ್ಯಾಪಾರದಲ್ಲಿ ಲೆಕ್ಕಪತ್ರ ಜಾಗ್ರತೆ ಮುಖ್ಯ. ಸಂಬಂಧಗಳಲ್ಲಿ ಅತಿವಿಮರ್ಶೆ ಬೇಡ. ಸಣ್ಣ ಕಾರ್ಯಕ್ಕಾಗಿ ಅಧಿಕ ಓಡಾಟ. ಅಧಿಕಾರ ಸೂಚನೆಗಳನ್ನು ಕಷ್ಟವಾದರೂ ಪಾಲನೆ‌ಮಾಡಬೇಕು. ನಿರುದ್ಯೋಗಿಗಳಿಗೆ ಅಂತರಂಗ ಸಕಾರಾತ್ಮಕ ಸೂಚ‌ನೆ ಕೊಡಲಿದೆ. ವಿದೇಶ ಗಮನಕ್ಕೆ ಯತ್ನ ನಿಧಾನ. ಇಂದು ಉದ್ವೇಗವು ನಿಮ್ಮ ಕೆಲಸವನ್ನು ಅಸ್ತವ್ಯಸ್ತ ಮಾಡಲಿದೆ. ನಿಮಗೆ ಪ್ರೋತ್ಸಾಹದ ಕೊರತೆ ಅಧಿಕವಾಗಿ ಕಾಣಿಸುವುದು. ಪ್ರೀತಿಯಲ್ಲಿ ನಿಮಗೆ ನೋವಾಗುವ ಸಾಧ್ಯತೆ ಇದೆ. ಏನೂ ಬೇಡ ಎನಿಸಬಹುದು. ಸಣ್ಣ ಸಣ್ಣ ವಿಚಾರಗಳೂ ದೊಡ್ಡದಾಗಿ ಕಾಣಿಸುವುದು. ಅಧಿಕಾರಿಗಳಿಂದ ನಿಮಗೆ ಮಾನಸಿಕ ಹಿಂಸೆ ಆಗಬಹುದು. ಎಷ್ಟೋ ವರ್ಷಗಳಿಂದ ಆಗದೇ ಇರುವ ಕೆಲಸವನ್ನು ಸಾಮಾಜಿಕ‌ ಕೆಲಸದಿಂದ‌‌ ಸಾಧಿಸುವಿರಿ. ವಾಹನ ಸೇವೆ ಅಥವಾ ದುರಸ್ತಿ ಅಗತ್ಯ. ಉದ್ಯೋಗದಲ್ಲಿ ಪರಿಶ್ರಮ ಹೆಚ್ಚಿದರೂ ಫಲ ನಿಧಾನ. ಹಣವ್ಯಯ ಕಟ್ಟುನಿಟ್ಟಾಗಿ ನಿಯಂತ್ರಿಸಿ. ಕುಟುಂಬದ ಆರೋಗ್ಯದ ಕಡೆ ಗಮನ. ಮಕ್ಕಳ‌ ವಿವಾಹ ಚಿಂತೆಯನ್ನು ಬಿಡುವಿರಿ. ಯಾರ ಮಾತನ್ನೋ ಕೇಳಿ ಮಾಡುವ ಕೆಲಸಕ್ಕಿಂತ ನಿಮ್ಮ ಮನಸ್ಸಿಗೆ ಬಂದರೆ ಮಾತ್ರ ಮಾಡಿ.

ವೃಶ್ಚಿಕ ರಾಶಿ:

ಅಧಿಕಾರದಿಂದ ಗೌರವ ಹಾಗೂ ಗುರುತಿಸಿಕೊಳ್ಳುವಿಕೆಯಾಗಲಿದೆ. ವ್ಯಾಪಾರದಲ್ಲಿ ಧೈರ್ಯದ ನಿರ್ಣಯ ಲಾಭ ತರುತ್ತದೆ. ಕುಟುಂಬದಲ್ಲಿ ನಿಮ್ಮ ಮಾತಿಗೆ ಮೌಲ್ಯ. ಉದ್ಯೋಗದಲ್ಲಿ ಪದೋನ್ನತಿ ಚರ್ಚೆ. ಕೃಷಿಯಲ್ಲಿ ನೀವು ಬಹಳ‌ ಆಯ್ಕೆ ಸ್ವಭಾವವುಳ್ಳವರು. ಬಂಧುಗಳ‌ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ವಾಗ್ವಾದದಿಂದ ನಿಮ್ಮ ಹೆಸರನ್ನು ಕೆಡಿಸಿಕೊಳ್ಳುವಿರಿ. ಯಾವುದೋ ಆಲೋಚನೆಯಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮಾಡಲಾಗದು. ಸಂಬಂಧಗಳು ಅನ್ಯರ ಕಾರಣದಿಂದ ಗಟ್ಟಿಯಾಗುತ್ತವೆ. ವಿದೇಶ ಸಂಪರ್ಕ ಹೆಚ್ಚಾಗುತ್ತಿದ್ದು ಹೋಗುವ ಮಾರ್ಗದ ಪರೀಕ್ಷೆ ಮಾಡಿಕೊಳ್ಳಿ. ನಿರುದ್ಯೋಗಿಗಳಿಗೆ ಅವಕಾಶ ಸಿಕ್ಕೂ ನಿರಾಶೆಯಾಗಲಿದೆ. ಹಣವ್ಯಯ ಸಂತೋಷಕ್ಕಾಗಿ ಮಾಡುವಿರಿ. ಆರೋಗ್ಯವು ಸುಧಾರಿಸುತ್ತ ಬರಲಿದೆ. ನೀವು ಮಾತನಾಡುವ ವೇಗದಲ್ಲಿ ಏನನ್ನಾದರೂ ಹೇಳುವಿರಿ. ಅಧ್ಯಯನದಲ್ಲಿ ನಿಮಗೆ ಹೆಚ್ಚು ಆಸಕ್ತಿ ಇರುವುದು. ಆರ್ಥಿಕ ಹಿನ್ನಡೆಯನ್ನು ನೀವು ಲೆಕ್ಕಿಸುವುದಿಲ್ಲ.

ಧನು ರಾಶಿ:

ಅಧಿಕಾರದಿಂದ ಅನೇಕ ಉಪಯೋಗಗಳು ನಿಮಗಾಗಲಿದೆ. ವ್ಯಾಪಾರದಲ್ಲಿ ಹಳೆಯ ಸಂಪರ್ಕ ಲಾಭ. ಓಡಾಟ ಅಗತ್ಯವೂ ಬರಲಿದೆ. ನಿರುದ್ಯೋಗಿಗಳಿಗೆ ಮಾರ್ಗದರ್ಶನ. ನೀವು ಇಂದು ಮಾಡಿದ ತಪ್ಪನ್ನು ಮಾಡದೇ ಎಲ್ಲರಿಂದ ಸೈ ಎನಿಸಿಕೊಳ್ಳುವಿರಿ. ಒಂದು ಕೆಲಸವನ್ನು ಮೈ ಮೇಲೆ ಬಿದ್ದು ಮಾಡಿಸಿಕೊಳ್ಳಬೇಕಾಗುವುದು. ಕಲಾವಿದರು ಗೌರವವನ್ನೂ ಯಶಸ್ಸನ್ನೂ ಗಳಿಸುವರು. ನಿಮಗೆ ಆಗುವಷ್ಟೇ ಕೆಲಸವನ್ನು ಮಾಡಿ. ಮತ್ತೆ ಮತ್ತೆ ಬರುವ ಅಪರಿಚಿತ ಕರೆಗಳಿಂದ ಕುಗ್ಗುವಿರಿ. ಹೊಸ ಯೋಜನೆಗಳನ್ನು ಆರಂಭಿಸಲು ಧೈರ್ಯ ಮಾಡುವುದು ಬೇಡ. ಸಂಬಂಧಗಳಲ್ಲಿ ಭಾವನಾತ್ಮಕತೆ ಹೆಚ್ಚಾಗುತ್ತದೆ. ವಿದೇಶ ಪ್ರಯಾಣ ಅಥವಾ ಅಲ್ಲಿಂದ ಕರೆ ಸಾಧ್ಯ ಇದೆ. ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ. ಕುಟುಂಬದಲ್ಲಿ ಸಂತೋಷದ ವಾತಾವರಣ. ಹಣವ್ಯಯವು ಸಂಗಾತಿಯ ನಿಯಂತ್ರಣದಲ್ಲಿ ಇರುತ್ತದೆ. ಶತ್ರುಗಳ ವ್ಯವಹಾರವನ್ನು ಇನ್ನೊಬ್ಬರ ಮೂಲಕ ತಿಳಿದುಕೊಳ್ಳುವಿರಿ. ನಿಮ್ಮ ಮೇಲೆ ಯಾರದ್ದಾದರೂ ದೃಷ್ಟಿಯು ಬೀಳಬಹುದು. ದೃಷ್ಟಿಯನ್ನು ತೆಗೆದುಕೊಳ್ಳಿ. ಯಾರ ಬೆಂಬಲವನ್ನೂ ಅಪೇಕ್ಷಿಸದೇ ಕೆಲಸವನ್ನು ಮಾಡುವಿರಿ.

ಮಕರ ರಾಶಿ:

ವ್ಯಾಪಾರದಲ್ಲಿ ಜಾಹೀರಾತು ಮತ್ತು ಸಂಪರ್ಕಗಳಿಂದ ಲಾಭ ಸಿಗುತ್ತದೆ. ಸಂಬಂಧಗಳಲ್ಲಿ ಸ್ಪಷ್ಟತೆ ಇಲ್ಲದಿದ್ದರೆ ಗೊಂದಲ. ಅಧಿಕಾರಿಗಳ ಮಾತು ಜಾಗ್ರತೆಯಿಂದ ಕೇಳಿ. ಓಡಾಟ ಹೆಚ್ಚಾಗಿ ಮನಸ್ಸು ಅಶಾಂತವಾಗಲಿದೆ. ಸರ್ಕಾರದಿಂದ ಆಗಬೇಕಾದ ಕೆಲಸಕ್ಕೆ ಹೆಚ್ಚು ಖರ್ಚನ್ನು ಮಾಡಬೇಕಾಗುದು. ತಂದೆಯ ಆರೋಗ್ಯದ ಬಗ್ಗೆ ಗಮನ ಅಧಿಕವಾಗಿರಲಿ. ವಿದ್ಯಾಭ್ಯಾಸದ ಹಿನ್ನಡೆಗೆ ಕಾರಣವನ್ನು ಕಂಡುಕೊಳ್ಳುವಿರಿ. ಆಭರಣಪ್ರಿಯರಿಗೆ ಖರೀದಿಯ ಉತ್ಸಾಹ ಬರುವರು. ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮಲ್ಲಿ ಆದ ಬದಲಾವಣೆಯನ್ನು ಸಹೋದ್ಯೋಗಿಗಳು ಗಮನಿಸಬಹುದು. ವಿದ್ಯಾರ್ಥಿಗಳು ಮನೆಯ ಜವಾಬ್ದಾರಿಯನ್ನೂ‌ ನಡೆಸುವ ಸಂದರ್ಭವು ಬರಬಹುದು.‌ ವಾಹನ ಸಂಬಂಧಿತ ಖರ್ಚಿನಿಂದ ಆತಂಕ. ಉದ್ಯೋಗ ಬದಲಾವಣೆ ಜೊತೆಗಾರರಿಂದ ಒತ್ತಡ. ಕುಟುಂಬ ಸಲಹೆ ಉಪಯುಕ್ತ. ವಿದೇಶ ಸಂಪರ್ಕ ಬೆಳೆಯುತ್ತದೆ. ನಿರುದ್ಯೋಗಿಗಳಿಗೆ ತರಬೇತಿಯಿಂದ ಆತ್ಮವಿಶ್ವಾಸ ಹೆಚ್ಚುವುದು. ಆರ್ಥಿಕಸ್ಥಿತಿಯು ಯಥಾಸ್ಥಿತಿಯಲ್ಲಿ ಇರಲಿದೆ‌. ಪ್ರಾಮಾಣಿಕ ಪ್ರಯತ್ನವು ನಿಮ್ಮ ಸಾಧನೆಯ ಗುಟ್ಟು.

ಕುಂಭ ರಾಶಿ:

ಇಂದು ವಿದೇಶ ಪ್ರಯತ್ನ ಫಲ ಕೊಡುತ್ತದೆ. ಹಣವ್ಯಯ ಯೋಜನೆಯಿಂದ ಲಾಭ. ಅಧಿಕಾರ ವಿಳಂಬ ಉಂಟುಮಾಡಬಹುದು. ವ್ಯಾಪಾರ ಒಪ್ಪಂದ ಸಾಧ್ಯ. ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ನಿಮ್ಮ ಊಹೆಯು ಸತ್ಯವಾಗಬಹುದು. ಬಂಧುಗಳು ನಿಮ್ಮ ಬಗ್ಗೆ ಮಾತನಾಡಿಕೊಳ್ಳುವರು. ಹಿರಿಯರ ಜೊತೆ ವಾಗ್ವಾದ ಆಗಬಹುದು. ಆಸ್ತಿ ಹಂಚಿಕೆ ವಿಚಾರಕ್ಕೆ ಸೊಪ್ಪು ಹಾಕದೇ ಇದ್ದರೆ ಅದು ಅಲ್ಲಿಯೇ ಶಾಂತವಾಗುವುದು. ರಾಜಕಾರಣವು ಬೇಸರ ತರಿಸಿ, ನಿಮಗೆ ಇಷ್ಟವಾಗದು. ಅಪರಿಚಿತರು ನಿಮ್ಮನ್ನು ವಶ ಮಾಡಿಕೊಳ್ಳಲು ಉಪಾಯವನ್ನು ಮಾಡಬಹುದು. ಕುಟುಂಬದ ಹೊಣೆಗಾರಿಕೆ ನಿಮ್ಮ ಮೇಲೆ ಹೆಚ್ಚಾಗುತ್ತದೆ. ಸಂಬಂಧಗಳಲ್ಲಿ ನಂಬಿಕೆ ಗಟ್ಟಿಯಾಗುತ್ತದೆ. ಓಡಾಟ ದೈಹಿಕ ಆಯಾಸ ತರಬಹುದು. ಉದ್ಯೋಗದಲ್ಲಿ ಸ್ಥಿರತೆ ಇದ್ದರೂ ಪ್ರಗತಿ ನಿಧಾನ. ನಿರುದ್ಯೋಗಿಗಳಿಗೆ ಶುಭಸುದ್ದಿ. ವಾಹನ ದುರಸ್ತಿ ಅಗತ್ಯ. ನಿಮ್ಮದಲ್ಲದ ವಸ್ತುಗಳನ್ನು ಇತರರಿಗೆ ಕೊಟ್ಟುಬಿಡುವಿರಿ.

ಮೀನ ರಾಶಿ:

ಇಂದು ಹಣವ್ಯಯ ಅನಿವಾರ್ಯವಾದರೂ ಉಪಯುಕ್ತವಾಗಿರುತ್ತದೆ. ಸಂಬಂಧಗಳಲ್ಲಿ ನೇರ ಮಾತು ಅಗತ್ಯ. ವಾಹನ ಚಾಲನೆಯಲ್ಲಿ ಅಲಕ್ಷ್ಯ ಬೇಡ. ಕುಟುಂಬ ಬೆಂಬಲ ಶಕ್ತಿ ನೀಡುತ್ತದೆ. ವ್ಯಾಪಾರ ನಿಧಾನವಾಗಿ ಲಾಭ ತರುತ್ತದೆ. ಸಂಗಾತಿಯ ಮೇಲಿನ‌ ಪ್ರೀತಿ ಕಡಿಮೆ ಆಗಬಹುದು. ನಿಮಗೆ ಒತ್ತಡವು ಅಧಿಕವಾಗಿ ಇರಲಿದ್ದು, ಯಾವುದೋ ಭಯವು ಕಾಡಬಹುದು. ಅನಿವಾರ್ಯವಾಗಿ ನೀವು ಹಣವನ್ನು ಕೊಡಬೇಕಾಗಬಹುದು. ನಿಮ್ಮ‌ ಸ್ವಾಭಿಮಾನಕ್ಕೆ ತೊಂದರೆಯಾಗುವ ಮಾತುಗಳು ಬರಬಹುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ನಿಮ್ಮ ಆತ್ಮವಿಶ್ವಾಸವನ್ನು ಪರೀಕ್ಷಿಸುತ್ತದೆ. ಅಧಿಕಾರಿಗಳ ಗಮನ ಬೀಳುತ್ತದೆ. ನಿರುದ್ಯೋಗಿಗಳಿಗೆ ಸಂದರ್ಶನ. ವಿದೇಶ ಸಂಪರ್ಕ ವಿಸ್ತಾರ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವು ಕಾಡುವುದು. ಕಳೆದ ಸುಖದ ಕಾಲವನ್ನು ನೆನಪಿಸಿಕೊಳ್ಳುವಿರಿ. ಅರ್ಥಿಕ ವಿಷಯಕ್ಕೆ ಸಹೋದರರ ನಡುವೆ ಮಾತು ಬರಬಹುದು. ಮೋಸಗೊಳಿಸಲು ಹೋಗಿ ನಗೆಗೀಡಾಗುವಿರಿ.

25 ಡಿಸೆಂಬರ್​​ 2025ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧಿ, ಕರಣ : ತೈತಿಲ, ಸೂರ್ಯೋದಯ – 06 – 47 am, ಸೂರ್ಯಾಸ್ತ – 06 – 02 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 11:01 – 12:25, ಯಮಗಂಡ ಕಾಲ 15:14 – 16:38, ಗುಳಿಕ ಕಾಲ 08:12 – 09:36

-ಲೋಹಿತ ಹೆಬ್ಬಾರ್ – 8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಈ ದಿನವು ಸಾಮಾಜಿಕವಾಗಿ ಬಿಡುವಿಲ್ಲದಷ್ಟು ಕೆಲಸಗಳು ಇರುತ್ತವೆ. ಸಮಾಜದ ಮುಖಂಡರಿಗೆ, ರಾಜಕಾರಣಿಗಳಿಗೆ ಮತ್ತು ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಅಧಿಕಾರಿಗಳಿಗೆ ಶುಭವಾದ ದಿನ ಇದಾಗಿರಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳು ಮೆಚ್ಚುಗೆಗೆ ಪಾತ್ರವಾಗಲಿವೆ. ಉದ್ಯಮಿಗಳು ಹೊಸ ಮಾರುಕಟ್ಟೆ ತಂತ್ರಗಳನ್ನು ಜಾರಿಗೆ ತರಲು ಅತ್ಯುತ್ತಮ ಸಮಯ. ಕೃಷಿಕರಿಗೆ ಸುಧಾರಿತ ತಂತ್ರಜ್ಞಾನದ ಬಳಕೆಯಿಂದ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆತ್ಮವಿಶ್ವಾಸ ಬೆಳೆಸಿಕೊಳ್ಳುವಿರಿ. ಆರ್ಥಿಕವಾಗಿ ಹಳೆಯ ಹೂಡಿಕೆಗಳು ಲಾಭ ತರಲಿದ್ದು, ಹೊಸ ಆಸ್ತಿ ಖರೀದಿಯ ಯೋಜನೆ ಸಫಲವಾಗಲಿದೆ. ಮಹಿಳೆಯರು ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದೀರಿ. ಇನ್ನು ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಮತ್ತು ರಕ್ತದೊತ್ತಡದ ಬಗ್ಗೆ ಜಾಗರೂಕರಾಗಿರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಕಲಾವಿದರು, ಬರಹಗಾರರು ಮತ್ತು ಮನೋವಿಜ್ಞಾನಿಗಳಿಗೆ ಅತ್ಯಂತ ಕ್ರಿಯೇಟಿವ್ ಆ ದಿನ. ಸ್ವಂತದ್ದೊಂದು ಕ್ಲಿನಿಕ್ ಆರಂಭಿಸುವ ಸಾಧ‌್ಯತೆ ವೈದ್ಯರಿಗೆ ಇದೆ. ಇನ್ನು ಸ್ನೇಹಿತರ ಮಧ್ಯೆ ಇರುವಂಥ ಅಭಿಪ್ರಾಯ ಭೇದವನ್ನು ದೂರ ಮಾಡಿ, ಭಾವನಾತ್ಮಕ ಬಂಧಗಳನ್ನು ಬೆಸೆಯುವಲ್ಲಿ ನೀವು ಪ್ರಮುಖ ಪಾತ್ರ ವಹಿಸುವಿರಿ. ಗೃಹಿಣಿಯರಿಗೆ ಕುಟುಂಬದ ಸದಸ್ಯರ ನಡುವೆ ಸಾಮರಸ್ಯ ಮೂಡಿಸಲು ಉತ್ತಮ ಅವಕಾಶ ಸಿಗಲಿದೆ. ಸಣ್ಣ ಉದ್ಯಮಿಗಳಿಗೆ ಪಾಲುದಾರಿಕೆಯಲ್ಲಿ ನಂಬಿಕೆ ಹೆಚ್ಚಾಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವ ವೃದ್ಧಿಯಾಗುವ ದಿನವಿದು. ಯುವಜನತೆ ವೈಯಕ್ತಿಕ ಸಂಬಂಧಗಳಲ್ಲಿ ಹೊಸ ತಿರುವು ಕಾಣಲಿದ್ದಾರೆ. ಮಾನಸಿಕ ಶಾಂತಿಗಾಗಿ ಸಂಗೀತ ಅಥವಾ ಪ್ರಕೃತಿಯ ಒಡನಾಟದಲ್ಲಿ ಸಮಯ ಕಳೆಯುವುದು ಉತ್ತಮ. ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡವರಿಗೆ ಎಲ್ಲ ಕಡೆಯಿಂದ ಉತ್ತಮ ಮನ್ನಣೆ ದೊರೆಯಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಬೌದ್ಧಿಕ ವಿಚಾರಗಳನ್ನೇ ಚಿಂತಿಸುವವರು, ಜ್ಞಾನಾರ್ಜನೆಯಲ್ಲಿ ತೊಡಗಿರುವವರಿಗೆ ಪ್ರಗತಿಯ ದಿನ ಇದಾಗಿರಲಿದೆ. ವಕೀಲರು, ಬ್ಯಾಂಕಿಂಗ್ ಅಧಿಕಾರಿಗಳು ಮತ್ತು ಧಾರ್ಮಿಕ ಮುಖಂಡರಿಗೆ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಹಿರಿಯ ನಾಗರಿಕರಿಗೆ ಕುಟುಂಬದಲ್ಲಿ ವಿಶೇಷ ಗೌರವ ಮತ್ತು ಸಲಹೆಗಳಿಗೆ ಮೌಲ್ಯ ದೊರೆಯಲಿದೆ. ಆರ್ಥಿಕವಾಗಿ ಹೂಡಿಕೆ ಮಾಡಲು ಇದು ಪ್ರಶಸ್ತ ಸಮಯವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ತೊಡಗಿರುವವರಿಗೆ ಲಾಭದಾಯಕ ದಿನ. ವಿದ್ಯಾರ್ಥಿಗಳು ಸಂಶೋಧನಾ ಕಾರ್ಯಗಳಲ್ಲಿ ಯಶಸ್ಸು ಕಾಣುವರು. ಮನೆಯಲ್ಲಿ ನಡೆಯುವ ಶುಭ ಕಾರ್ಯಗಳ ನಿರ್ವಹಣೆಯಲ್ಲಿ ನಿಮ್ಮ ಪಾತ್ರ ದೊಡ್ಡದಾಗಿರಲಿದೆ. ಬಡವರ ಮತ್ತು ಅಸಹಾಯಕರ ಸೇವೆಗೆ ನಿಮ್ಮ ಒಲವು ಹೆಚ್ಚಿರಲಿದ್ದು, ಸಮಾಜಮುಖಿ ಕೆಲಸಗಳಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ, ವಿಶೇಷವಾಗಿ ಪಿತ್ತಕೋಶದ ಸಮಸ್ಯೆಗಳ ಬಗ್ಗೆ ಗಮನವಿರಲಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ತಾಂತ್ರಿಕ ಪರಿಣತರು, ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮತ್ತು ಸರ್ಕಾರಿ ಕೆಲಸಗಳನ್ನು ಗುತ್ತಿಗೆ ಪಡೆದು ಮಾಡಿಸುವಂಥ ಗುತ್ತಿಗೆದಾರರಿಗೆ ಹೊಸದಾಗಿ ಪ್ರಗತಿ ಕಂಡುಬರಲಿದೆ. ನೀವು ಪ್ರತಿನಿಧಿಸುವ ಸಮಾಜದ ಅಭಿವೃದ್ಧಿಗಾಗಿ ಆಧುನಿಕ ಯೋಜನೆಗಳನ್ನು ರೂಪಿಸುವಿರಿ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ವ್ಯಾಪಾರದಲ್ಲಿ ಚೇತರಿಕೆ ಕಂಡುಬರಲಿದೆ. ಮಧ್ಯಮ ವರ್ಗದವರು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕತೆ ವಹಿಸುವುದು ಅಗತ್ಯ, ಅನಗತ್ಯ ಖರ್ಚುಗಳು ಎದುರಾಗಬಹುದು. ಕಾರ್ಮಿಕರು ಮತ್ತು ಶ್ರಮಿಕ ವರ್ಗದವರು ತಮ್ಮ ಕೆಲಸದ ಸ್ಥಳದಲ್ಲಿ ಶಿಸ್ತು ಮತ್ತು ಗೌರವ ಪಡೆಯುವರು. ಅನಿರೀಕ್ಷಿತ ತಿರುವುಗಳು ಜೀವನದಲ್ಲಿ ಹೊಸ ದಾರಿಯನ್ನು ತೋರಿಸಲಿವೆ. ಪ್ರಯಾಣದ ವೇಳೆ ಅಪರಿಚಿತ ವ್ಯಕ್ತಿಗಳ ಮೇಲೆ ಅತಿಯಾದ ನಂಬಿಕೆ ಬೇಡ. ನಿಮ್ಮ ವಿಭಿನ್ನ ಆಲೋಚನಾ ಶೈಲಿಯಿಂದಾಗಿ ಕಠಿಣ ಸಮಸ್ಯೆಗಳಿಗೆ ಸುಲಭ ಪರಿಹಾರ ದೊರೆಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಮಾಧ್ಯಮ ಪ್ರತಿನಿಧಿಗಳು, ಮಾರ್ಕೆಟಿಂಗ್ ವೃತ್ತಿಪರರು ಮತ್ತು ಸಂವಹನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಅತ್ಯಂತ ಲಾಭದಾಯಕ ದಿನ ಇದಾಗಿರಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಹೊಸ ಗ್ರಾಹಕರ ಸಂಪರ್ಕ ಮತ್ತು ವಹಿವಾಟು ವೃದ್ಧಿಯಾಗುವ ಎಲ್ಲ ಲಕ್ಷಣಗಳಿವೆ. ಯುವಕರು ತಾಂತ್ರಿಕ ಕೌಶಲಗಳನ್ನು ಕಲಿಯಲು ಹಣವನ್ನು ಖರ್ಚು ಮಾಡುವಿರಿ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸೂಚನೆ ಸಿಗಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದ್ದು, ದೀರ್ಘಕಾಲದ ಸಾಲಗಳಿಂದ ಮುಕ್ತಿ ಪಡೆಯುವ ಹಾದಿ ಸುಗಮವಾಗಲಿದೆ. ಮಾತಿನ ಚತುರತೆಯಿಂದ ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಿಸಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಹೇಳುವುದಾದರೆ, ನರಗಳ ದೌರ್ಬಲ್ಯ ಅಥವಾ ನಿದ್ರಾಹೀನತೆಯ ಸಮಸ್ಯೆ ಕಾಡಬಹುದು. ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವ ಬಗ್ಗೆ ನಿರ್ಲಕ್ಷ್ಯ ಬೇಡ. ಹೊಸ ಸ್ನೇಹ ಸಂಬಂಧಗಳು ವೃತ್ತಿ ಜೀವನಕ್ಕೆ ಸಹಕಾರಿಯಾಗಲಿವೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸಿನಿಮಾ, ಫ್ಯಾಷನ್, ಹೋಟೆಲ್ ಉದ್ಯಮ ಮತ್ತು ಸೌಂದರ್ಯವರ್ಧಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ವೈಭವದ ದಿನ ಇದಾಗಿರಲಿದೆ. ಮಹಿಳೆಯರು ಸ್ವಾವಲಂಬಿಗಳಾಗಲು ಹೊಸ ಉದ್ಯೋಗ ಅಥವಾ ಉದ್ಯಮದ ಅವಕಾಶಗಳನ್ನು ಪಡೆಯುವರು. ಸಮಾಜದ ಗಣ್ಯ ವ್ಯಕ್ತಿಗಳೊಂದಿಗೆ ಒಡನಾಟ ಹೆಚ್ಚಾಗಲಿದ್ದು, ಇದು ನಿಮ್ಮ ವೃತ್ತಿ ಜೀವನಕ್ಕೆ ಪೂರಕವಾಗಲಿದೆ. ಪ್ರೇಮಿಗಳಿಗೆ ತಮ್ಮ ಸಂಬಂಧವನ್ನು ವಿವಾಹದ ಹಂತಕ್ಕೆ ಕೊಂಡೊಯ್ಯಲು ಮನೆಯವರ ಬೆಂಬಲ ಸಿಗಲಿದೆ. ಆರ್ಥಿಕವಾಗಿ ಸಮೃದ್ಧಿಯ ದಿನವಾಗಿದ್ದು, ಐಷಾರಾಮಿ ವಸ್ತುಗಳ ಮೇಲೆ ಹೂಡಿಕೆ ಮಾಡುವಿರಿ. ನಿಮ್ಮ ಆಕರ್ಷಕ ವ್ಯಕ್ತಿತ್ವವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಕೇಂದ್ರಬಿಂದು ಆಗಲಿದೆ. ಮನೆಯಲ್ಲಿ ಸೃಜನಾತ್ಮಕ ಮತ್ತು ಕಲಾತ್ಮಕ ಪರಿಸರವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಲಿದ್ದು, ಅದರಲ್ಲಿ ನೀವು ಯಶಸ್ವಿಯಾಗುವಿರಿ. ಹಾರ್ಮೋನ್ ಸಮಸ್ಯೆಗಳಿದ್ದರೆ ತಪಾಸಣೆ ಮಾಡಿಸಿಕೊಳ್ಳಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಸಂಶೋಧಕರು, ವೈದ್ಯಕೀಯ ಕ್ಷೇತ್ರದ ಪರಿಣತರು ಮತ್ತು ವಿಜ್ಞಾನಿಗಳಿಗೆ ಮಹತ್ವದ ಸಾಧನೆಯ ದಿನ ಆಗಿರಲಿದೆ. ಸಮಾಜದ ಒಳಿತಿಗಾಗಿ ಹೊಸ ಸಂಶೋಧನೆಗಳಲ್ಲಿ ತೊಡಗಿರುವವರಿಗೆ ಮನ್ನಣೆ ಸಿಗಲಿದೆ. ಆಧ್ಯಾತ್ಮಿಕ ಚಿಂತಕರಿಗೆ ಮತ್ತು ಯೋಗ ಗುರುಗಳಿಗೆ ನಿಮ್ಮನ್ನು ಅನುಸರಿಸುವಂಥ ಜನರು ಹೆಚ್ಚೆಚ್ಚು ಸೇರ್ಪಡೆ ಆಗಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಮಧ್ಯಮ ವರ್ಗದವರು ಸಣ್ಣಪುಟ್ಟ ಸಂಕಷ್ಟ ಎದುರಿಸಿದರೂ ಸ್ನೇಹಿತರು- ಸಂಬಂಧಿಗಳ ಸಮಯೋಚಿತ ಸಹಾಯದಿಂದ ಅದರಿಂದ ಹೊರಗೆ ಬರುವಿರಿ. ಒಬ್ಬರೇ ತಮ್ಮ ಗುರಿಯ ಕಡೆಗೆ ಕೆಲಸ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ಸತ್ಯದ ಪರವಾಗಿ ಮಾತನಾಡುವ ನಿಮ್ಮ ಗುಣವು ಮಾಧ್ಯಮ- ರಾಜಕೀಯ ಕ್ಷೇತ್ರದಲ್ಲಿ ಇರುವಂಥವರಿಗೆ ಪ್ರತಿಷ್ಠೆ ತರಲಿದೆ. ಹಳೆಯ ವೈಮನಸ್ಸು ಮರೆತು ಸಂಬಂಧಗಳನ್ನು ಸುಧಾರಿಸಿಕೊಳ್ಳಲು ಇದು ಸಕಾಲ. ಮಾನಸಿಕ ಶಾಂತಿಗಾಗಿ ಧ್ಯಾನ ಮತ್ತು ಓದಿನಲ್ಲಿ ಸಮಯ ಕಳೆಯಿರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಕಾರ್ಖಾನೆ ಮಾಲೀಕರು, ಶ್ರಮಿಕ ವರ್ಗ ಮತ್ತು ನ್ಯಾಯಾಂಗ ಇಲಾಖೆಯಲ್ಲಿ ಇರುವವರಿಗೆ ಬೆಳವಣಿಗೆಗೆ ಅನುಕೂಲವಾದ ದಿನ ಇದಾಗಿರುತ್ತದೆ. ನೀವು ಕಾರ್ಯ ನಿರ್ವಹಿಸುವ ವ್ಯವಸ್ಥೆಯ ಒಳಗೆ ಶಿಸ್ತು ಮತ್ತು ಕೆಲವು ನೀತಿ ಸಂಹಿತೆ ಜಾರಿಗೆ ತರಲು ಶ್ರಮಿಸುವಿರಿ. ಆರ್ಥಿಕ ಲಾಭವು ನಿಧಾನವಾಗಿ ಬರಬಹುದು, ಆದರೆ ಅದು ಬಹಳ ಸ್ಥಿರವಾಗಿರುತ್ತದೆ. ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ಹೊಸ ಭೂಮಿ ಅಥವಾ ಉಪಕರಣಗಳ ಖರೀದಿಯಲ್ಲಿ ಲಾಭ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮತ್ತು ಅವರ ಮಾರ್ಗದರ್ಶನ ಪಡೆಯುವುದು ಅವಶ್ಯಕ. ನ್ಯಾಯಾಲಯದ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಇಂದು ಶುಭ ಸುದ್ದಿ ಕೇಳಿಬರಲಿದೆ. ಎನ್ ಜಿಒಗಳಲ್ಲಿ ಕಾರ್ಯ ನಿರ್ವಹಿಸುವವರು ಸಮಾಜದ ಕೆಳವರ್ಗದ ಜನರ ಅಭ್ಯುದಯಕ್ಕಾಗಿ ಪ್ರಮುಖ ಯೋಜನೆಗಳನ್ನು ರೂಪಿಸುವಿರಿ. ನಿಮ್ಮ ತಾಳ್ಮೆ ಮತ್ತು ಕಠಿಣ ಪರಿಶ್ರಮಕ್ಕೆ ಗೌರವ- ಸನ್ಮಾನದ ಮೂಲಕವಾಗಿ ಪ್ರತಿಫಲ ದೊರೆಯಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸೈನ್ಯ, ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ, ಕ್ರೀಡಾಳುಗಳಿಗೆ ಮತ್ತು ಶಸ್ತ್ರಚಿಕಿತ್ಸಕರಿಗೆ ಅತ್ಯಂತ ಶುಭವಾದ ದಿನ ಇದಾಗಿರುತ್ತದೆ. ಕುಟುಂಬ ಸದಸ್ಯರ ಸಂಕಷ್ಟಗಳಿಗೆ ಸಹಾಯ ಮಾಡುವಲ್ಲಿ ನೀವು ಮುಂಚೂಣಿಯಲ್ಲಿರುವಿರಿ. ಯುವಕರು ಸಾಹಸಮಯ ಕೆಲಸಗಳಲ್ಲಿ ಅಥವಾ ಸ್ಪರ್ಧೆಗಳಲ್ಲಿ ಯಶಸ್ಸು ಕಾಣುವರು. ಭೂಮಿಗೆ ಸಂಬಂಧಿಸಿದ ವ್ಯವಹಾರಸ್ಥರಿಗೆ ಅಥವಾ ಸಿವಿಲ್ ಇಂಜಿನಿಯರ್‌ಗಳಿಗೆ ದೊಡ್ಡ ಲಾಭ ನಿರೀಕ್ಷಿಸಬಹುದು. ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ಅಥವಾ ರಕ್ತದಾನದಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕೋಪವನ್ನು ಹತೋಟಿಯಲ್ಲಿಡುವುದು ನಿಮ್ಮ ಕುಟುಂಬದ ನೆಮ್ಮದಿಗೆ ಅತಿ ಮುಖ್ಯ. ಸಹೋದರರೊಂದಿಗೆ ಇದ್ದ ಆಸ್ತಿ ವಿವಾದಗಳು ಇತ್ಯರ್ಥವಾಗುವ ಹಂತಕ್ಕೆ ಬರಲಿವೆ. ಆರ್ಥಿಕವಾಗಿ ನೀವು ಬಹಳ ಸಬಲರಾಗುವ ದಿನವಿದು. ಶಸ್ತ್ರಚಿಕಿತ್ಸೆಯಂತಹ ವೈದ್ಯಕೀಯ ಕ್ಷೇತ್ರಗಳಲ್ಲಿ ಇರುವವರಿಗೆ ಉತ್ತಮ ಯಶಸ್ಸು ಸಿಗಲಿದೆ.

ಲೇಖನ- ಎನ್‌.ಕೆ.ಸ್ವಾತಿ

Source link

ಚಿತ್ರದುರ್ಗ ಬಸ್ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ, ನಾಲ್ವರು ಸಾವು – Kannada News | Four Youths Killed In Bike And Tipper Accident In ajjavara at Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 25): ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ (Chikkaballapur) ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು.  ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು. ಇನ್ನು ಈ ಪೈಕಿ ನರಸಿಂಹಮೂರ್ತಿ ಹಾಗೂ ನಂದೀಶ್ ಅಣ್ಣತಮ್ಮಂದಿರು.  ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆದರೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಬೈಕ್‌ಗೆ ಗುದ್ದಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ

ಇನ್ನು ನರಸಿಂಹ ಕೇವಲ ಆರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಸೇರಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:18 pm, Thu, 25 December 25

Source link

ಕಾವ್ಯಾ ಜತೆ ಮದುವೆ ಬಗ್ಗೆ ಮನಸಾರೆ ಮಾತಾಡಿದ ಗಿಲ್ಲಿ: ಆ ಕಡೆಯಿಂದ ಬಂದ ಉತ್ತರ ಏನು? – Kannada News | Gilli Nata wants to talk marriage plans with Kavya Shaiva parents in BBK 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರ ಜೋಡಿ ತುಂಬಾ ಹೈಲೈಟ್ ಆಗಿದೆ. ಆರಂಭದಿಂದಲೂ ಅವರಿಬ್ಬರೂ ಕ್ಲೋಸ್ ಆಗಿದ್ದಾರೆ. ಕಾವ್ಯಾ (Kavya Shaiva) ಅವರನ್ನು ಪ್ರತಿ ಬಾರಿಯೂ ಗಿಲ್ಲಿ ನಟ ರೇಗಿಸುತ್ತಾರೆ. ಅವರಿಬ್ಬರಿಗೆ ಪ್ರತ್ಯೇಕ ಫ್ಯಾನ್ ಬೇಸ್ ಇದೆ. ಇಲ್ಲಿಯವರೆಗೆ ಅನೇಕ ಬಾರಿ ಅವರಿಬ್ಬರು ಮುನಿಸು ತೋರಿಸಿದ್ದರೂ ಕೂಡ ಮಾತು ಬಿಟ್ಟಿಲ್ಲ. ಒಬ್ಬರನ್ನೊಬ್ಬರು ಬಿಟ್ಟುಕೊಟ್ಟಿಲ್ಲ. ಆ ಬಾಂಧವ್ಯದ ಪರಿಣಾಮವಾಗಿ ಗಿಲ್ಲಿ (Gilli Nata) ಮನಸ್ಸಿನಲ್ಲಿ ಮದುವೆ ಬಗ್ಗೆ ಆಸೆ ಚಿಗುರಿದಂತಿದೆ. ನೇರವಾಗಿ ಅವರು ಮದುವೆ ಬಗ್ಗೆ ಎಲ್ಲರ ಎದುರು ಮಾತನಾಡಿದ್ದಾರೆ.

ಬಿಗ್ ಬಾಸ್ ಶೋನಲ್ಲಿ ಈಗ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ದೊಡ್ಮನೆಗೆ ಬಂದು ಕಾಲ ಕಳೆಯುತ್ತಿದ್ದಾರೆ. ಕಾವ್ಯಾ ಶೈವ ಅವರ ಪೋಷಕರು ಬಂದಾಗ ಬೇರೆಯವರೆಲ್ಲ ಏನು ಮಾತನಾಡಬೇಕು ಎಂಬುದನ್ನು ಗಿಲ್ಲಿ ಮೊದಲೇ ಪ್ಲ್ಯಾನ್ ಮಾಡಿದ್ದಾರೆ. ಮದುವೆ ವಿಷಯವೇ ಪ್ರಸ್ತಾಪ ಆಗಬೇಕು ಎಂದು ಅವರು ಸೂಚನೆ ಕೊಟ್ಟಿದ್ದಾರೆ.

‘ಗಿಲ್ಲಿ ಯಾವ ಥರದ ಹುಡುಗ ಅಂತ ಕೇಳಿ. ಕಾವ್ಯಾಗೆ ಮದುವೆ ಮಾಡಬೇಕು ಅಂತ ಇದ್ದೀರಂತೆ ಹೌದಾ ಎಂಬಿತ್ಯಾದಿ ಪ್ರಶ್ನೆಗಳನ್ನು ಕಾವ್ಯಾ ಅವರ ಪೋಷಕರಿಗೆ ಬೇರೆಯವರೆಲ್ಲ ಕೇಳಬೇಕು’ ಎಂದು ಗಿಲ್ಲಿ ಹೇಳಿದ್ದಾರೆ. ‘ನಾಳೆ ನಿಶ್ಚಿತಾರ್ಥಕ್ಕೆ ಯಾರು ಬರುತ್ತಾರೋ ಏನೋ.. ಮದುವೆ ಮಾತುಕಥೆಗೆ ಯಾರು ಬರುತ್ತಾರೋ’ ಎಂದು ಗಿಲ್ಲಿ ಕಾವ್ಯನ ರೇಗಿಸಿದರು. ‘ರಾಖಿ ತೆಗೆದುಕೊಂಡು ಬರಬಹುದು. ರಕ್ಷಾ ಬಂಧನ ಆಗಬಹುದು’ ಎಂದು ಕಾವ್ಯಾ ಅವರು ತಿರುಗೇಟು ನೀಡಿದರು. ಅವರಿಬ್ಬರ ನಡುವಿನ ಸಂಭಾಷಣೆ ಫನ್ನಿ ಆಗಿತ್ತು.

ಗಿಲ್ಲಿ ನಟ ಅವರು ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಕಾವ್ಯಾ ತಾಯಿ ಕೂಡ ಗಿಲ್ಲಿ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಮಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ‘ಗಿಲ್ಲಿಯನ್ನು ಎಂದಿಗೂ ಬಿಟ್ಟುಕೊಡಬೇಡ, ಅವನು ನಿನ್ನನ್ನು ಯಾವಾಗಲೂ ಬಿಟ್ಟುಕೊಟ್ಟಿಲ್ಲ. ಅವನು ಹಣ್ಣು, ಮೊಟ್ಟೆ ಕೇಳಿದರೆ ಕೊಡು’ ಎಂದು ಕಾವ್ಯಾ ತಾಯಿ ಸಾವಿತ್ರಿ ಅವರು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ

ಈ ವಾರ ಬಿಗ್ ಬಾಸ್ ಮನೆಗೆ ಬರುವ ಕುಟುಂಬದವರು ಮಾಡುವ ಆಯ್ಕೆಯ ಆಧಾರದ ಮೇಲೆ ಕ್ಯಾಪ್ಟನ್ ಯಾರು ಎಂಬುದು ನಿರ್ಧಾರ ಆಗುತ್ತದೆ. ಈಗಾಗಲೇ ಗಿಲ್ಲಿಗೆ ನಾಲ್ಕು ವೋಟ್ ಸಿಕ್ಕಿದೆ. ಅವರೇ ಕ್ಯಾಪ್ಟನ್ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕು. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಧ್ರುವಂತ್ ಮನೆಯವರಿಗೆ ಗಿಲ್ಲಿ ಆಟ ಬಹಳ ಇಷ್ಟ ಆಗಿದೆ. ಪ್ರೇಕ್ಷಕರಿಗೂ ಗಿಲ್ಲಿ ಕಂಡರೆ ಸಖತ್ ಇಷ್ಟ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ – Kannada News | One Dies Several injured after nitrogen gas blast in front of mysuru palace

ಮೈಸೂರು, (ಡಿಸೆಂಬರ್ 25): ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು (Nitrogen Gas Blast) ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ (Mysuru Palace) ಮುಂಭಾಗದಲ್ಲಿ ನಡೆದಿದೆ. ಇಂದು (ಡಿಸೆಂಬರ್ 25) ರಾತ್ರಿ ಪ್ಯಾಲೆಸ್ ಮುಂಭಾಗ ಬಲೂನ್​ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆ ಎಷ್ಟಿತ್ತು ಎಂದರೆ ಸಿಲಿಂಡರ್​ ಛಿದ್ರ ಛೀದ್ರವಾಗಿದೆ. ಸ್ಥಳಕ್ಕೆ ಕೆ ಆರ್​ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು,ಈ ಸ್ಫೋಟಕ ಸಾಂಸ್ಕೃತಿಕ ನಗರಿ ಜನ ಬೆಚ್ಚಿಬಿದ್ದಿದ್ದಾರೆ.

ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ಓರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

Source link

ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ – Kannada News | Street dog Sleeps On PDO chair In Examba Gram Panchayat Office video Goes viral

ಬೀದರ್, ಡಿಸೆಂಬರ್ 25): ಜಿಲ್ಲೆಯ ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು (Street dog) ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್​​ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಡಿಸಿ, ತಹಶೀಲ್ದಾರ್ ಡೋಂಟ್ ಕೇರ್: ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು – Kannada News | Villegers theft Chicken And Egg From Farm over smell at Gadag

ರಮೇಶ್ ಬಿ. ಜವಳಗೇರಾ |

Updated on:Dec 25, 2025 | 9:29 PM

Share

ಕೋಳಿಫಾರಂ ದುವಾರ್ಸನೆಯಿಂದ ಬೇಸತ್ತು ಕೋಳಿ, ಮೊಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ.
ಕೋಳಿಫಾರಂ​​ನಿಂದ ಬರುತ್ತಿದ್ದ ದುವಾರ್ಸನೆಯಿಂದ ಉಣಚಗೇರಿ ಗ್ರಾಮಸ್ಥರು ರೋಸಿ ಹೋಗಿದ್ದರು. ಹೀಗಾಗಿ ಗ್ರಾಮದಿಂದ ಕೋಳಿಫಾರಂ ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್​ಗೆ ಮನವಿ ಮಾಡಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜನರು ತಾಳ್ಮೆಯ ಕಟ್ಟೆ ಹೊಡೆದಿದ್ದು, ಗ್ರಾಮಸ್ಥರೇ ಕೋಳಿಫಾರಂಗೆ ನುಗ್ಗಿ ಕೋಳಿ, ಮೊಟ್ಟೆ ಕದ್ದುಕೊಂಡು ಹೋಗಿದ್ದಾರೆ. ಇದರಿಂದ ಮಾಲೀಕ ಕಂಗಾಲಾಗಿದ್ದಾನೆ.

Published on: Dec 25, 2025 09:27 PM

Source link