Headlines

nagaraj11081993

5 ವಿವಾಹ, 12 ಪ್ರೇಮ ಸಂಬಂಧ; ಸಾಯುವಾಗ ಒಂಟಿಯಾದ ಬಾಲಿವುಡ್ ಖಳ ನಾಯಕ

ಬಾಲಿವುಡ್‌ನಲ್ಲಿ ಖಳನಾಯಕ ಪಾತ್ರಗಳಿಂದ ಸುದ್ದಿಯಲ್ಲಿರುವ ಅನೇಕ ನಟರಿದ್ದಾರೆ. ಅವರು ದೊಡ್ಡ ಪರದೆಯ ಮೇಲೆ ಪ್ರಬಲ ಪಾತ್ರ ಮಾಡಿ ಗಮನ ಸೆಳೆದದ್ದಾರೆ. ಅವರಲ್ಲಿ ಮಹೇಶ್ ಆನಂದ್ ಕೂಡ ಒಬ್ಬರು. ಐದು ಬಾರಿ ವಿವಾಹವಾದರು ಮತ್ತು 12 ಮಹಿಳೆಯರೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ, ಯಾರೂ ಅವರೊಂದಿಗೆ ಇರಲಿಲ್ಲ. ಮಹೇಶ್ ಮೊದಲು ರೀನಾ ರಾಯ್ ಅವರನ್ನು ವಿವಾಹವಾದರು. ಆದರೆ ಅವರ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಅವರು ಎರಡನೇ ಬಾರಿಗೆ ಬರ್ಖಾ ರಾಯ್ ಅವರನ್ನು ವಿವಾಹವಾದರು. ಅದರ…

Read More

ಪಾಕಿಸ್ತಾನದ ಕೋರ್ಟ್, ಕಚೇರಿಗಳಿಗೇ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮೈಸೂರಿನ ‘ಹುಸಿ ಬಾಂಬ್’ ಕಿಂಗ್‌ಪಿನ್!

ಮೈಸೂರು, ಏಪ್ರಿಲ್ 7: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ (Hoax Bomb Threat) ಇಮೇಲ್ ಕಳುಹಿಸಿ ಆತಂಕ ಸೃಷ್ಟಿಸಿದ್ದ ಮೈಸೂರಿನ (Mysuru) ಶ್ರೀನಿವಾಸ್ ಲೂಯಿಸ್ (SrinivasLouis) (47), ಅಂತರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕಿಡಿಗೇಡಿತನ ಮಾಡಿರುವುದು ದೆಹಲಿ ಪೊಲೀಸರ ವಿಚಾರಣೆ ವೇಳೆ ಬಹಿರಂಗವಾಗಿದೆ. ಈತ ಪಾಕಿಸ್ತಾನದ ನ್ಯಾಯಾಲಯಗಳು, ಶಾಲಾ-ಕಾಲೇಜುಗಳು ಮತ್ತು ಅಲ್ಲಿನ ಸರ್ಕಾರಿ ಕಚೇರಿಗಳಿಗೂ ಹುಸಿ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದ ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಡಾರ್ಕ್ ವೆಬ್ ಮೂಲಕ…

Read More

ಇದು ಪಾಕ್ ಲೀಗ್​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?

ಪಾಕಿಸ್ತಾನ ಪ್ರೀಮಿಯರ್ ಲೀಗ್ ಅಲ್ಲಿ ಪ್ರೊಫೆಷನಲಿಸಂ ಇಲ್ಲ ಎಂದು ಅನೇಕರು ದೂರುತ್ತಾರೆ. ಈಗ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆರಂಭದಿಂದ ಕೊನೆಯವರೆಗೂ ಬ್ಯಾಟ್ಸಮನ್​​ಗಳು ಓಡುತ್ತಲೇ ಇರುತ್ತಾರೆ. ಇದು ಪಾಕಿಸ್ತಾನ ಸೂಪರ್ ಲೀಗ್​​ನ ವಿಡಿಯೋ ಎಂದು ವೈರಲ್ ಮಾಡಲಾಗಿದೆ. ಆದರೆ, ಅಸಲಿಗೆ ಇದು ಪಾಕ್ ಲೀಗ್ ಅಲ್ಲ. ಭಾರತದ ರಾಜ್ಯ ಮಟ್ಟದ ಲೀಗ್​ ನಲ್ಲಿ ನಡೆದ ಘಟನೆ ಇದಾಗಿದ್ದು, ಇದನ್ನು ಪಾಕಿಸ್ತಾನ ಲೀಗ್ ಎಂದು ವೈರಲ್ ಮಾಡಲಾಗಿದೆ. ಇನ್ನಷ್ಟು  ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ರಾಮನಗರದಲ್ಲಿ ಮಳೆಯಾಗುವ ಮುನ್ಸೂಚನೆ; ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಏಪ್ರಿಲ್ 07: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ ಆರ್ಭಟ  (Weather Forecast) ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ, ಒಣ ಹವೆ? ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ….

Read More

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ, ಇಬ್ಬರು ಮಕ್ಕಳು ಸಾವು

ಇಂಫಾಲ, ಏಪ್ರಿಲ್ 07: ಕಳೆದ ನಾಲ್ಕು ವರ್ಷಗಳಿಂದ ಮಣಿಪುರ(Manipur)ದಲ್ಲಿ ಒಂದಲ್ಲಾ ಒಂದು ಅಹಿತಕರ ಘಟನೆಗಳು ನಡೆಯುತ್ತಿವೆ. ಇದೀಗ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. 2023ರಲ್ಲಿ ಕುಕಿ ಹಾಗೂ ಮೈಥಿ ಸಮುದಾಯದ ನಡುವೆ ಹುಟ್ಟಿಕೊಂಡ ದ್ವೇಷದ ಜ್ವಾಲೆಯು ಇಡೀ ಮಣಿಪುರವನ್ನೇ ಸುಟ್ಟಿತ್ತು. ಸಾಕಷ್ಟು ಬಾರಿ ಘರ್ಷಣೆಗಳು ನಡೆದು ನೂರಾರು ಮಂದಿ ಸಾವನ್ನಪ್ಪಿದ್ದರು. ಈಗಲೂ ಬೂದಿ ಮುಚ್ಚಿದ ಕೆಂಡದಂತೆಯೇ ಪರಿಸ್ಥಿತಿ ಇದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ದೊಡ್ಡ ದುರಂತವೊಂದು ಸಂಭವಿಸಿದೆ….

Read More

ಆಟೋ ಗ್ಯಾಸ್ ಎಮರ್ಜೆನ್ಸಿ: ಎಲ್‌ಪಿಜಿ ಬಂಕ್‌ಗಳ ಎದುರು ಮುಂದುವರಿದ ಸರದಿ ಸಾಲು, ಕರ್ನಾಟಕ ಬಂದ್ ಎಚ್ಚರಿಕೆ

ಬೆಂಗಳೂರು, ಏಪ್ರಿಲ್ 7: ಕರ್ನಾಟಕದಲ್ಲಿ (Karnataka) ಆಟೋ ಗ್ಯಾಸ್ (LPG) ಅಭಾವ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಗ್ಯಾಸ್‌ಗಾಗಿ ಎಲ್‌ಪಿಜಿ ಬಂಕ್‌ಗಳ ಮುಂದೆ ಆಟೋ ಸಾರಥಿಗಳು ಕಿಲೋಮೀಟರ್‌ಗಟ್ಟಲೆ ಕ್ಯೂ ನಿಲ್ಲುವಂತಾಗಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ‘ಕರ್ನಾಟಕ ಬಂದ್’ ಮಾಡುವುದಾಗಿ ಆಟೋ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಬೆಂಗಳೂರಿನ ಗಿರಿನಗರ, ಹೆಬ್ಬಾಳ, ಸಾರಕ್ಕಿ, ಸಜ್ಜನ್ ರಾವ್ ಸರ್ಕಲ್ ಸೇರಿದಂತೆ ರಾಜ್ಯದ ಹಲವೆಡೆ ಆಟೋ ಚಾಲಕರು ಇಡೀ ದಿನ ದುಡಿಮೆ ಬಿಟ್ಟು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ….

Read More

Bengaluru Air Quality: ಅಂತೂ ಇಂತೂ ಸುಧಾರಿಸಿತು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಏಪ್ರಿಲ್ 07: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಾಕುಂಭದ ವೇಳೆ ಫೇಮಸ್ ಆಗಿದ್ದ ಐಐಟಿ ಬಾಬಾ

ಜಜ್ಜರ್​​ಸಿಂಗ್, ಏಪ್ರಿಲ್ 07: ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ  ಜಜ್ಜರ್‌ಗೆ ಬಂದಿದ್ದರು.ಈ ಸಮಯದಲ್ಲಿ, ಅವರು ತಹಸಿಲ್ ಸಂಕೀರ್ಣದಲ್ಲಿರುವ ತಮ್ಮ ವಕೀಲ ಕರಣ್…

Read More

‘ಅಮೃತಧಾರೆ’ ಮಲ್ಲಿಗೆ ಸಾಗರ ಎಂದರೆ ಬಲು ಇಷ್ಟ; ಏಕೆ?

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಟಿಆರ್ಪಿಯಲ್ಲೂ ಧಾರಾವಾಹಿ ಟಾಪ್ ಐದರಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಈ ಧಾರಾವಾಹಿಯಲ್ಲಿ ಗೌತಮ್ ಹಾಗು ಭೂಮಿಕಾ ಪಾತ್ರ ಮಾಡಿರುವ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಎಷ್ಟು ಗಮನ ಸೆಳೆದಿದ್ದಾರೋ, ಮಲ್ಲಿ ಪಾತ್ರ ಮಾಡಿರುವ ಅನ್ವಿತಾ ಕೂಡ ಮೆಚ್ಚುಗೆ ಪಡೆದಿದ್ದಾರೆ. ಅವರ ಪಾತ್ರ ಗಮನ ಸೆಳೆದಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಮಲ್ಲಿ ಪಾತ್ರದಲ್ಲಿ ಮೊದಲು ರಾಧಾ…

Read More

‘ಪ್ರೀತಿನೇ ಎಲ್ಲಾ ಅಲ್ಲ, ಆದರೆ, ಪ್ರೀತಿ ಇಲ್ದೆ ಏನೂ ಇಲ್ಲ’; ತ್ರಿಷಾ ಮಾರ್ಮಿಕ ಪೋಸ್ಟ್

ನಟಿ ತ್ರಿಷಾ ಕೃಷ್ಣನ್ (Trisha) ಅವರು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ವಿಜಯ್ ಜೊತೆಗಿನ ಗೆಳೆತನ. ವಿಜಯ್ ಹಾಗೂ ತ್ರಿಷಾ ಮಧ್ಯೆ ಅಫೇರ್ ಇದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಆದರೆ, ಇದನ್ನು ಯಾರೂ ಒಪ್ಪಿಕೊಂಡಿಲ್ಲ. ಹೀಗಿರುವಾಗಲೇ ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ತ್ರಿಷಾ ಹಂಚಿಕೊಂಡ ಸಾಲುಗಳು ಗಮನ ಸೆಳೆದಿವೆ. ತ್ರಿಷಾ ಅವರು ತಮಿಳಿನ ಖ್ಯಾತ ನಟಿ. ಅವರಿಗೆ…

Read More